ಮನೆ ಕೆಲಸಗಳನ್ನು ನಿರ್ವಹಿಸುವ ನಿಯಮಗಳನ್ನು ಧರ್ಮಗ್ರಂಥಗಳಲ್ಲಿ ವಿವರಿಸಲಾಗಿದೆ. ಈ ನಿಯಮಗಳಲ್ಲಿ ಒಂದು ರಾತ್ರಿಯಲ್ಲಿ ಅಡುಗೆ ಮನೆಯಲ್ಲಿ ಎಂಜಲು ಪಾತ್ರಗಳನ್ನು ಬಿಡುವುದನ್ನು ನಿಷೇಧಿಸಲಾಗಿದೆ. ಧರ್ಮಗ್ರಂಥಗಳ ಪ್ರಕಾರ, ರಾತ್ರಿಯಲ್ಲಿ ಎಂಜಲು ಪಾತ್ರೆಗಳನ್ನು ಬಿಡುವುದರಿಂದ, ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಯು ಕೋಪಗೊಳ್ಳುತ್ತಾಳೆ. ಯಾವ ಮನೆ ಸ್ವಚ್ಚವಾಗಿರುತ್ತೋ, ಆ ಮನೆಯಲ್ಲಿ ಲಕ್ಷ್ಮಿ ದೇವಿಯು ವಾಸಿಸುತ್ತಾಳೆ. https://ainkannada.com/increase-amul-milk-rate-enforcement-from-today/ ರಾತ್ರಿಯಲ್ಲಿ ಕೊಳಕು ಪಾತ್ರೆಗಳನ್ನು ಇಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಡುತ್ತದೆ. ಇದು ಆರ್ಥಿಕ ತೊಂದರೆಗಳು, ಬಡತನ ಮತ್ತು ಕೌಟುಂಬಿಕ ವಿವಾದಗಳಿಗೆ ಕಾರಣವಾಗಬಹುದು. ಇಷ್ಟು ಮಾತ್ರವಲ್ಲದೆ ಕೊಳಕು ಪಾತ್ರೆಗಳಲ್ಲಿ ಬ್ಯಾಕ್ಟೀರಿಯಾಗಳು ಉತ್ಪತ್ತಿಯಾಗುತ್ತವೆ. ಇದು ಅಡುಗೆ ಮನೆ ಮತ್ತು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಮಥುರಾದ ಪಂಡಿತ್ ಮದನ್ ಮೋಹನ್ ಅವರ ಪ್ರಕಾರ, ರಾತ್ರಿಯಲ್ಲಿ ಕೊಳಕು ಪಾತ್ರೆಗಳನ್ನು ಇಡುವುದರಿಂದ ಅನ್ನಪೂರ್ಣ ದೇವಿ ಕೋಗೊಳ್ಳುತ್ತಾಳೆ. ಇದು ಮನೆಯ ಯೋಗಕ್ಷೇಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ. ರಾತ್ರಿಯಿಡೀ ಕೊಳಕು ಪಾತ್ರೆಗಳನ್ನು ಸಿಂಕ್ನಲ್ಲಿ ಇಡುವುದರಿಂದ ಆಹಾರ ಕಣಗಳು ಮತ್ತು ತೇವಾಂಶದಿಂದಾಗಿ ಬ್ಯಾಕ್ಟೀರಿಯಾಗಳು ವೇಗವಾಗಿ ಬೆಳೆಯಲು…
Author: AIN Author
ಬೆಂಗಳೂರು/ನವದೆಹಲಿ:- ಹಣದುಬ್ಬರದಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಬೆಲೆ ಏರಿಕೆ ಹೊಡೆತ ಬಿದ್ದಿದೆ. ಕರ್ನಾಟಕದ ಕೆಎಂಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ ಹಾಗೂ ಮದರ್ ಡೈರಿ ಹಾಲಿನ ದರವನ್ನು 2 ರೂಪಾಯಿ ಹೆಚ್ಚಳ ಮಾಡಿದ ಬೆನ್ನಲ್ಲೇ ಇದೀಗ ಜನಪ್ರಿಯ ಡೈರಿ ಬ್ರಾಂಡ್ ಅಮುಲ್ ಹಾಲಿನ ದರ ಕೂಡ ಎರಡು ರೂಪಾಯಿ ಹೆಚ್ಚಳವಾಗಿದೆ. https://ainkannada.com/big-shock-for-bengaluru-auto-travel-rate-is-sure-to-rise-when-is-the-enforcement/ ದರ ಏರಿಕೆಯು ಅಮುಲ್ ಸ್ಟ್ಯಾಂಡರ್ಡ್, ಅಮುಲ್ ಬಫೆಲೋ, ಅಮುಲ್ ಗೋಲ್ಡ್, ಅಮುಲ್ ಸ್ಲಿಮ್ ಎನ್ಟ್ರಿಮ್, ಅಮುಲ್ ಚಾಯ್ಮಜಾ, ಅಮುಲ್ ತಾಜಾ ಮತ್ತು ಅಮುಲ್ ಕೌ ಮಿಲ್ಕ್ಗಳಿಗೆ ಅನ್ವವಾಗುತ್ತದೆ. ಅಮುಲ್ ಹಾಲು ದರ ಏರಿಕೆ: ಯಾವ ಪ್ಯಾಕೆಟ್ಗೆ ಎಷ್ಟು? ಅಮುಲ್ ಸ್ಟ್ಯಾಂಡರ್ಡ್ ಹಾಲು (500 ಮಿ.ಲೀ) ಹಳೆಯ ಬೆಲೆ: 30 ರೂ. ಹೊಸ ಬೆಲೆ: 31 ರೂ. ಅಮುಲ್ ಬಫೆಲೋ (ಎಮ್ಮೆ ಹಾಲು) 500 ಮಿ.ಲೀ ಹಳೆಯ ಬೆಲೆ: 36 ರೂ. ಹೊಸ ಬೆಲೆ: 37 ರೂ. ಅಮುಲ್ ಗೋಲ್ಡ್ ಮಿಲ್ಕ್ (500 ಮಿ.ಲೀ) ಹಳೆಯ ಬೆಲೆ: 33…
ಬೆಂಗಳೂರು:- ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಬೆಂಗಳೂರು ಮಂದಿಗೆ ಇದೀಗ ಮತ್ತೊಂದು ಬರೆ ಬೀಳುವ ಸಾಧ್ಯತೆ ಇದೆ. ನಗರದಲ್ಲಿ ಆಟೋ ಮೀಟರ್ ದರ ಏರಿಕೆ ಮಾಡುವಂತೆ ಕಳೆದ ಮೂರು ವರ್ಷಗಳಿಂದ ಆಟೋ ಚಾಲಕ ಹಾಗೂ ಮಾಲೀಕರ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬಂದಿತ್ತು. ಇದೀಗ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಆಟೋ ಚಾಲಕರ ಮನವಿಯನ್ನು ಪುರಸ್ಕರಿಸಿ, ಈಗಾಗಲೇ ಅನೇಕ ಅಗತ್ಯ ವಸ್ತುಗಳ ದರ ಏರಿಕೆ ಆಗಿದೆ. ಹೀಗಾಗಿ ಆಟೋ ಮೀಟರ್ ದರ ಏರಿಕೆ ಮಾಡಲು ಜಿಲ್ಲಾಧಿಕಾರಿ ಕೂಡಲೇ ಗ್ರೀನ್ ಸಿಗ್ನಲ್ ನೀಡಬೇಕು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ. https://ainkannada.com/land-in-pakistan-people-who-are-scared/ ಬೆಂಗಳೂರಿನಲ್ಲಿ ಕನಿಷ್ಠ ದರ 30 ರೂಪಾಯಿ ಹಾಗೂ ನಂತರ ಪ್ರತಿ ಕಿಲೋ ಮೀಟರ್ ಗೆ 15 ರೂಪಾಯಿ ದರ ಇದೆ. ಇದೀಗ ಪರಿಷ್ಕೃತ ದರ ಪಟ್ಟಿ ಪ್ರಕಾರ ಕನಿಷ್ಠ ದರ 30 ರಿಂದ 35 ರೂಪಾಯಿಗೆ, ಅಂದರೆ ಐದು ರೂಪಾಯಿ ಏರಿಕೆಯಾಗುವ ಸಾಧ್ಯತೆಯಿದೆ. ನಂತರದ ಪ್ರತಿ ಕಿಲೋ ಮೀಟರ್ ದರ 15…
ಇಸ್ಲಾಮಾಬಾದ್:- ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಒಂದೆಡೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಸೆ ಬುಧವಾರ ರಾತ್ರಿ ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿದೆ. https://ainkannada.com/dhoni-team-who-lost-the-league-journey-against-punjab/ ರಾತ್ರಿ 9 ಗಂಟೆ 58 ನಿಮಿಷಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ Scale) 4.4 ತೀವ್ರತೆ ದಾಖಲಾಗಿದೆ. ಕಂಪನದ ಅನುಭವ ಆಗುತ್ತಿದ್ದಂತೆ ಜನ ಭಯಗೊಂಡು ಹೊರಗಡೆ ಓಡಿ ಬಂದಿದ್ದಾರೆ.
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯ ಅಬ್ಬರ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/ramalinga-reddy-who-has-ordered-an-investigation-against-ksrtc-driver/ ವಾಯುವ್ಯ ರಾಜಸ್ಥಾನದ ಮೇಲಿರುವ ಮೇಲ್ಮೈ ಸುಳಿಗಾಳಿಯಿಂದ ಉತ್ತರ ಕೇರಳದವರೆಗೆ ಒಂದು ರೇಖೆ ಇದೆ. ಇದು ಆಗ್ನೇಯ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ, ಒಳ ಕರ್ನಾಟಕದ ಮೂಲಕ ಹಾದುಹೋಗುತ್ತದೆ. ಅಲ್ಲದೆ ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನ ಮೇಲೆ 0.9 ಕಿ.ಮೀ ಎತ್ತರದಲ್ಲಿ ಮೇಲ್ಮೈ ಸುಳಿಗಾಳಿ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ , ಹಾವೇರಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ರಾಯಚೂರು ಮತ್ತು ಕೊಪ್ಪಳ ,ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗಲಿದೆ.,
ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲು ಅನುಭವಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ಕೆ 190 ರನ್ ಕಲೆಹಾಕಿತು. ಇದಕ್ಕೆ ಪ್ರತಿಯಾಗಿ ಪಂಜಾಬ್ ಕಿಂಗ್ಸ್ ಕೊನೆಯ ಓವರ್ನಲ್ಲಿ ಪಂದ್ಯವನ್ನು ಗೆದ್ದುಕೊಂಡಿತು. ಪಂಜಾಬ್ ಪರ ಪ್ರಭ್ಸಿಮ್ರನ್ ಸಿಂಗ್ ಮತ್ತು ಶ್ರೇಯಸ್ ಅಯ್ಯರ್ ಅರ್ಧಶತಕ ಇನ್ನಿಂಗ್ಸ್ ಆಡಿದರೆ, ಬೌಲಿಂಗ್ನಲ್ಲಿ ಮಿಂಚಿದ ಚಾಹಲ್ ಒಂದೇ ಓವರ್ನಲ್ಲಿ 4 ವಿಕೆಟ್ ಉರುಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. https://ainkannada.com/ramalinga-reddy-who-has-ordered-an-investigation-against-ksrtc-driver/ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ಕೆ ಉತ್ತಮ ಆರಂಭ ಪಡೆಯಲು ಸಾಧ್ಯವಾಗಲಿಲ್ಲ. ಶೇಖ್ ರಶೀದ್ 12 ಎಸೆತಗಳಲ್ಲಿ 11 ರನ್ ಗಳಿಸಿ ಔಟಾದರೆ, 3.1 ಓವರ್ಗಳಲ್ಲಿ, ಆಯುಷ್ ಮ್ಹಾತ್ರೆ ರೂಪದಲ್ಲಿ ಸಿಎಸ್ಕೆ ಎರಡನೇ ವಿಕೆಟ್ ಕಳೆದುಕೊಂಡತು. ಆದಾಗ್ಯೂ, ಮೂರನೇ ಕ್ರಮಾಂಕದಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ ಸ್ಯಾಮ್ ಕರನ್ 47 ಎಸೆತಗಳಲ್ಲಿ 88 ರನ್ ಕಲೆಹಾಕಿದರು. ಅವರ ಇನ್ನಿಂಗ್ಸ್ನಲ್ಲಿ 9 ಬೌಂಡರಿ ಮತ್ತು 4 ಸಿಕ್ಸರ್ಗಳು ಸೇರಿದ್ದವು.…
ಬೆಂಗಳೂರು:- ಸರ್ಕಾರಿ ಕೆಲಸದಲ್ಲಿ ಸಾಕಷ್ಟು ನಿಯಮಗಳು ಇರುತ್ತದೆ. ಆದ್ರೆ ಚಾಲಕನೋರ್ವ ತನ್ನ ಕರ್ತವ್ಯದ ಅವಧಿಯಲ್ಲೇ ನಮಾಜ್ ಮಾಡಿರೋದು ಚರ್ಚೆಗೆ ಗ್ರಾಸವಾಗಿದೆ. ಎಸ್, ರಸ್ತೆಯಲ್ಲೇ ಬಸ್ ನಿಲ್ಲಿಸಿ ಪ್ರಯಾಣಿಕರ ಸೀಟಿನ ಮೇಲೆ ಕಂಡಕ್ಟರ್ ಕಂ ಡ್ರೈವರ್ ನಮಾಜ್ ಮಾಡಿದ್ದ ಪ್ರಕರಣವನ್ನು ಸಚಿವ ರಾಮಲಿಂಗಾರೆಡ್ಡಿ ಗಂಭೀರವಾಗಿ ಪರಿಗಣಿಸಿದ್ದಾರೆ. ಹಾಗೂ ಚಾಲಕನ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಅವರು ತನಿಖೆಗೆ ಆದೇಶಿಸಿದ್ದಾರೆ. https://ainkannada.com/the-idea-of-this-pile-of-lovers-is-correct-thursdays-fate-is-01-may-2025/ ರಸ್ತೆಯಲ್ಲಿ ಡ್ರೈವರ್ ಕಂ ಕಂಡಕ್ಟರ್ ನಮಾಜ್ ಮಾಡಿದ ವೀಡಿಯೋ ವೈರಲ್ ಆದ ಬೆನ್ನಲ್ಲೇ ಸಚಿವರು ಈ ಕ್ರಮ ಕೈಗೊಂಡಿದ್ದಾರೆ. ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರಿಗೆ ಪತ್ರ ಬರೆದ ರಾಮಲಿಂಗಾ ರೆಡ್ಡಿ, ಸೂಕ್ತ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆಯಾಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಚಾಲಕ ಕಂ ನಿರ್ವಾಹಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ. ಸರ್ಕಾರಿ ಸೇವೆಯಲ್ಲಿ ಕರ್ತವ್ಯ…
ಸೂರ್ಯೋದಯ – 5:53 ಬೆ. ಸೂರ್ಯಾಸ್ತ – 6:32 ಸಂಜೆ. ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ಚೌತಿ ನಕ್ಷತ್ರ – ಮೃಗಶಿರ ಯೋಗ – ಅತಿಗಂಡ ಕರಣ – ವಿಷ್ಟಿ *ಮಳೆ ನಕ್ಷತ್ರ: ಭರಣಿ* ರಾಹು ಕಾಲ – 01:30 ದಿಂದ 03:00 ವರೆಗೆ ಯಮಗಂಡ – 06:00 ದಿಂದ 07:30 ವರೆಗೆ ಗುಳಿಕ ಕಾಲ – 09:00 ದಿಂದ 10:30 ವರೆಗೆ ಬ್ರಹ್ಮ ಮುಹೂರ್ತ – 4:17 ಬೆ. ದಿಂದ 5:05 ಬೆ. ವರೆಗೆ ಅಮೃತ ಕಾಲ – 6:25 ಬೆ. ದಿಂದ 7:53 ಬೆ.ವರೆಗೆ ಅಭಿಜಿತ್ ಮುಹುರ್ತ – 11:48 ಬೆ.ದಿಂದ 12:38 ಮ. ವರೆಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.…
ಬೆಂಗಳೂರು:- ಜನಗಣತಿಯೊಂದಿಗೆ ಜಾತಿ ಗಣತಿಗೆ ತೀರ್ಮಾನಿಸಿರುವ ಕೇಂದ್ರದ ನಿರ್ಧಾರವನ್ನು ಸಚಿವ HD ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇದು ಮೋದಿ ಅವರ ದಿಟ್ಟ ಹೆಜ್ಜೆ ಎಂದಿದ್ದಾರೆ. https://ainkannada.com/tractor-overturns-in-the-middle-of-the-road-one-worker-dies-8-injured/ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ ಎಂದಿದ್ದಾರೆ. ಈ ಮಹತ್ವದ ಹೆಜ್ಜೆ ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಹೇಳಿದರು
ಬಳ್ಳಾರಿ:: ನಡುರಸ್ತೆಯಲ್ಲೇ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, 8 ಮಂದಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ನಾಗಲಾಪುರ ಗ್ರಾಮದ ಬಳಿ ಜರುಗಿದೆ. https://ainkannada.com/if-the-caste-census-of-the-people-is-ugly-it-should-not-be-a-census-of-the-officials-rahul-gandhi/ ಜ್ಯೋತಿಲಾಲ್ ತುಡು (35) ಸಾವನ್ನಪ್ಪಿರುವ ಕಾರ್ಮಿಕ. ವಿಂಡ್ ಫ್ಯಾನ್ ಕೆಲಸಕ್ಕೆಂದು ಬಂದಿದ್ದ ಬಿಹಾರ ಹಾಗೂ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ಟ್ರಾಕ್ಟರ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಕೈ, ಕಾಲು ಮುರಿದಿದ್ದು, ಗಂಭೀರ ಗಾಯಗಳಾಗಿವೆ. ಉಳಿದಂತೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೂಡ್ಲಿಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗ್ತಿದೆ.