ಚಾಮರಾಜನಗರ:- ಕಾಡಾನೆ ಆನೆ ದಾಳಿ ನಡೆಸಿದ ಪರಿಣಾಮ ರೈತ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಕೊರಮನಕತ್ತರಿ ನಂಜಪ್ಪ (60) ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರವನ್ಯಧಾಮ ವ್ಯಾಪ್ತಿಯ ಪಿಜಿಪಾಳ್ಯ ಬೀಟ್ ಸಮೀಪದ ತೋಟದಮನೆಯಲ್ಲಿ ವಾಸ ಇರುವ ಈತ ಒಕ್ಕಣೆ ಮಾಡಲಾಗಿದ್ದ ಅರಿಶಿಣವನ್ನು ರಾತ್ರಿ ವೇಳೆ ಕಾವಲು ಕಾಯುತ್ತಿದ್ದತಹ ಸಂದರ್ಭದಲ್ಲಿ ಆನೆ ದಾಳಿ ಮಾಡಿದ್ದು ಇದರ ಪರಿಣಾಮ ಸ್ಥಳದಲ್ಲೇ ಆತ ಮೃತಪಟ್ಟಿದ್ದಾರೆ. https://ainkannada.com/fire-accident-14-people-die-in-kolkata-hotel/ ಮಾಹಿತಿ ಅರಿತುಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ,ಪೊಲೀಸರು ಮುಂದಿನ ಕ್ರಮಕ್ಕೆ ಕೈಗೊಂಡಿದ್ದಾರೆ.
Author: AIN Author
ಇಸ್ಲಾಮಾಬಾದ್:- ಪಹಲ್ಗಾಮ್ ಮೇಲೆ ಉಗ್ರರು ನಡೆಸಿದ ದಾಳಿ ಬೆನ್ನಲ್ಲೇ ಪಾಕಿಸ್ತಾನ್ ಹಾಗೂ ಭಾರತದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಅಲ್ಲದೇ ಭಾರತ ಸರ್ಕಾರವು, ಪಾಕ್ ಮೇಲೆ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. https://ainkannada.com/fire-accident-14-people-die-in-kolkata-hotel/ ದಾಳಿ ಬಳಿಕ, ಪ್ರಧಾನಿ ಮೋದಿ ಅವರ ಸರಣಿ ಸಭೆ ನಡೆಸಿದ್ದು, ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಮೋದಿ ಬ್ಯಾಕ್ ಟು ಬ್ಯಾಕ್ ಸಭೆಗೆ ಪಾಕಿಸ್ತಾನ ಅಕ್ಷರಶಃ ಬೆಚ್ಚಿಬಿದ್ದಿದೆ. ಇದರ ಬೆನ್ನಲ್ಲೇ ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿ ಪಾಕಿಸ್ತಾನ ಮಾತನಾಡಿದೆ. 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂಬ ಭಾರತದ ಆರೋಪ ಆಧಾರರಹಿತವಾದದ್ದು. ಕಪೋಲಕಲ್ಪಿತ ಆರೋಪಗಳ ಆಧಾರದ ಮೇಲೆ ಭಾರತೀಯ ಪಡೆಗಳು ದಾಳಿ ನಡೆಸಲು ಸಿದ್ಧತೆ ನಡೆಸುತ್ತಿವೆ ಎಂದು ಪಾಕ್ ಸಚಿವ ಅತಾವುಲ್ಲಾ ತರಾರ್ ಹೇಳಿದ್ದಾರೆ. ಭಾರತ ಸ್ವತಃ ತಾನೇ ತೀರ್ಪುಗಾರನಂತೆ ವರ್ತಿಸುತ್ತಿದೆ. ಜವಾಬ್ದಾರಿಯುತ ರಾಷ್ಟ್ರವಾಗಿ ಸತ್ಯವನ್ನು ಖಚಿತಪಡಿಸಿಕೊಳ್ಳಲು ತಜ್ಞರ ಆಯೋಗಕ್ಕೆ ವಿಶ್ವಾಸಾರ್ಹ, ಪಾರದರ್ಶಕ ಹಾಗೂ ಸ್ವತಂತ್ರ ತನಿಖೆ ನಡೆಸಲು ಪಾಕಿಸ್ತಾನ ಮುಕ್ತ…
ಕೋಲ್ಕತ್ತಾ:- ಬೆಂಕಿ ಅವಘಡದಲ್ಲಿ 1r ಮಂದಿ ಸಾವನ್ನಪ್ಪಿರುವ ಘಟನೆ ಕೇಂದ್ರ ಕೋಲ್ಕತ್ತಾದ ರಿತುರಾಜ್ ಹೋಟೆಲ್ನಲ್ಲಿ ಜರುಗಿದೆ. https://ainkannada.com/kea-to-monitor-seat-blocking-qr-code-surveillance-for-college-admission/ ಈಗಾಗಲೇ ಬೆಂಕಿ ನಂದಿಸಲಾಗಿದ್ದು, 14 ಶವಗಳನ್ನು ಹೊರತೆಗೆಯಲಾಗಿದೆ. ಹಲವಾರು ಜನರನ್ನು ರಕ್ಷಿಸಲಾಗಿದೆ. ತನಿಖೆಗಾಗಿ ವಿಶೇಷ ತಂಡವನ್ನು ಸಹ ರಚಿಸಲಾಗಿದೆ. ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ. ಭವಿಷ್ಯದಲ್ಲಿ ಇಂತಹ ದುರಂತ ಘಟನೆಗಳನ್ನು ತಡೆಗಟ್ಟಲು ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಬೇಕೆಂದು ತಿಳಿಸಿದ್ದಾರೆ.
ಬೆಂಗಳೂರು:- ಪ್ರಮುಖ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ನಡೆಯುವ ಸೀಟ್ ಬ್ಲಾಕಿಂಗ್ ಎಂಬ ಕರಾಳ ದಂಧೆಗೆ ಬ್ರೇಕ್ ಹಾಕಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದಾಗಿದ್ದು, ಈ ಬಾರಿ ಹೊಸ ತಂತ್ರ ಪ್ರಯೋಗ ಮಾಡಿದೆ. ಇಂಜಿನಿಯರಿಂಗ್ ಮಾಡಬೇಕು ಅಂತ ಕನಸು ಹೊತ್ತ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದು ಸೀಟು ಗಿಟ್ಟಿಸಿಕೊಳ್ಳುತ್ತಾರೆ. ಆದರೆ, ಕೊನೆ ಗಳಿಗೆಯಲ್ಲಿ ತಮ್ಮ ನಿರ್ಧಾರ ಬದಲಿಸಿ ಬಿಡುತ್ತಾರೆ. ಇದೇ ಕಾರಣಕ್ಕೆ ಸೀಟ್ ಬ್ಲಾಕಿಂಗ್ ದಂಧೆ ನಡೆಯುತ್ತಿದೆ ಎಂಬ ಮಾತು ಕೇಳಿಬರುತ್ತಿತ್ತು. ಹೀಗಾಗಿ ಕೆಇಎ ಹೊಸ ರೂಲ್ಸ್ ತಂದಿದೆ. https://ainkannada.com/be-careful-people-are-you-trusting-brokers-and-going-for-a-house-lease-be-careful-dont-miss-this-news/ ಕಾಲೇಜು ಅಡ್ಮಿಷನ್ ಪ್ರಕ್ರಿಯೆಯಲ್ಲಿ ಕ್ಯೂಆರ್ ಕೋಡ್ ಬಳಸಲು KEA ಮುಂದಾಗಿದೆ. ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಕ್ಯೂಆರ್ ಕೋಡ್ ಕಣ್ಗಾವಲಿನ ಮೂಲಕ ಕೆಇಎ ಹದ್ದಿನ ಕಣ್ಣು ಇಟ್ಟಿತ್ತು. ಇದೀಗ ಅದನ್ನೇ ಮುಂದುವರಿಸಿಕೊಂಡು ಹೋಗಲಿದೆ. ಮೊದಲ ಬಾರಿಗೆ ಡಿಜಿಟಲ್ ರೂಪದಲ್ಲಿ ಅಡ್ಮಿಷನ್ ಪ್ರಕ್ರಿಯೆ ನಡೆಸಲು ಮುಂದಾಗಿದೆ. ಸೀಟ್ ಬ್ಲಾಕ್ ದಂಧೆ ತಡೆಯೋದಕ್ಕೆ ಕೆಇಎ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುತ್ತಿದೆ. ಇದಕ್ಕೂ ಮುನ್ನ ಏ.15,16 ಹಾಗೂ 17ರಂದು…
ಬೆಂಗಳೂರು:- ಅತಿ ಹೆಚ್ಚು ಜನದಟ್ಟಣೆ ಇರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಾಡಿಗೆ ಕಟ್ಟಿ ಜೀವನ ಮಾಡೋದು ಕಷ್ಟ ಮರ್ರೆ. ಬರುವ ಸಂಬಳದಲ್ಲಿ ಅರ್ಧ ಬಾಡಿಗೆಗೆ ಹೋದ್ರೆ ಜೀವನ ಮಾಡೋದು ಹೇಗೆ ಎಂದು ಸಾಕಷ್ಟು ಮಂದಿ ಲೀಸ್ ಗೆ ಹೋಗ್ತಾರೆ. https://ainkannada.com/bike-collides-with-milk-truck-rider-dies-on-the-spot/ ಆದರೆ ಲೀಸ್ ಗೆ ನೀವ್ ಬ್ರೋಕರ್ ಗಳನ್ನು ನಂಬಿ ಹೋಗ್ತಿದ್ದೀರಾ!? ಹಾಗಿದ್ರೆ ಎಚ್ಚರ ವಹಿಸಿ ಜನರೇ. ಎಸ್, ಯಾರದ್ದೋ ಮನೆ ತೋರಿಸಿ ನಾನೇ ಓನರ್ ಎಂದು ಈ ಬ್ರೋಕರ್ ಗಳು ಯಾಮಾರಿಸ್ತಾರೆ. ಇದೀಗ ಅಂತದ್ದೇ ಪ್ರಕರಣ ಒಂದು ನಗರದಲ್ಲಿ ಬೆಳಕಿಗೆ ಬಂದಿದೆ. ಲಕ್ಷ ಲಕ್ಷ ಹಣ ಕೊಟ್ಟು ಲೀಸ್ ಗೆ ಹೋದ ಜನರಿಗೆ ಹಣವೂ ಇಲ್ಲದೆ ,ಮನೆಯು ಇಲ್ಲದೆ ಬೀದಿಗೆ ಬಂದಿದ್ದಾರೆ. ಮನೆ ಮೇಲೆ ಸಾಲ ಪಡೆದು ಇಎಂಐ ಕಟ್ಟದೆ ಕಳ್ಳಾಟ ಮಾಡಿದ್ದು, ಹಲವು ಬ್ಯಾಂಕ್ ಗಳಿಂದ ಲೋನ್ ಪಡೆದು ಹಣ ಕಟ್ಟದೆ ವಂಚನೆ ಎಸಗಿದ್ದಾರೆ. ಇನ್ನೂ ಲೀಸ್ ಗೆ ಇದ್ದವರಿಗೆ ಬ್ಯಾಂಕ್ ನೋಟಿಸ್ ನೀಡಿದ್ದು, ತಕ್ಷಣ ಮನೆ ಖಾಲಿ…
ಬೆಂಗಳೂರು:- ಹಾಲಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಸದಾಶಿವ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. https://ainkannada.com/there-are-still-pakistanis-in-karnataka-why-havent-they-left-even-though-the-deadline-has-passed/ ಟಾಟಾ ಇನ್ಸುಟ್ ಮುಂಭಾಗದಲ್ಲಿ ಓವರ್ ಟೇಕ್ ಮಾಡುವಾಗ ಆಯತಪ್ಪಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಗಾಡಿ ಚಾಲನೆ ಮಾಡುತ್ತಿದ್ದ ಬೈಕ್ ಸವಾರ ಪಾರಾಗಿದ್ದು, ಹಿಂಬಾದಿ ಸವಾರ ಸಾವನ್ನಪ್ಪಿದ್ದಾರೆ. ಸ್ಟಾರ್ ಸಿಟಿ ಟೂ ವೀಲರ್ KA 53 X 5082 ಗಾಡಿ ನಂಬರ್ ಇದಾಗಿದ್ದು, ಲಾರಿ ಚಾಲಕ ನಾಗೇಶ್ ಕುಡಿದು ಲಾರಿ ಓಡಿಸುತ್ತಿದ್ದ ಎನ್ನಲಾಗಿದೆ. ಲಾರಿಯು, ಬೆಂಗಳೂರು ಡೈರಿಯಿಂದ ನೆಲಮಂಗಲ ಕ್ಕೆ ಹೊರಿಟ್ಟಿದ್ದ ವೇಳೆ ಈ ದುರಂತ ಸಂಭವಿಸಿದೆ. ಸದಾಶಿವ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಇತ್ತೀಚೆಗೆ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆರಳಿರುವ ಕೇಂದ್ರ ಸರ್ಕಾರವು, ಪಾಕ್ ಮೇಲೆ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅಲ್ಲದೆ ಪಾಕ್ ಪ್ರಜೆಗಳು ಭಾರತ ಬಿಟ್ಟು ತೊಲಗುವಂತೆ ಖಡಕ್ ಸೂಚನೆ ಕೊಟ್ಟಿದೆ. https://ainkannada.com/rain-news-heavy-rain-likely-in-karnataka-for-5-days-from-today-meteorological-department/ ಅದರಂತೆ, ಪಾಕ್ ಪ್ರಜೆಗಳು ಭಾರತ ಬಿಟ್ಟು ತೊಲಗಲು ನಿಗದಿ ಮಾಡಿದ್ದ ಗಡುವು ಕೊನೆಗೊಂಡಿದೆ. ಕರ್ನಾಟಕದಲ್ಲಿದ್ದ ಅನೇಕ ಪಾಕಿಸ್ತಾನೀಯರು ಮಂಗಳವಾರ ತವರಿಗೆ ತೆರಳಿದ್ದಾರೆ. 17 ವೀಸಾಗಳಡಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನಿಯರಿಗೆ ಏಪ್ರಿಲ್ 27ರೊಳಗೆ ತೊರೆಯುವಂತೆ ಸೂಚಿಸಲಾಗಿತ್ತು. ವೈದ್ಯಕೀಯ ಚಿಕಿತ್ಸೆಗಾಗಿ ಬಂದಿದ್ದವರಿಗೆ ಏಪ್ರಿಲ್ 29 ರೊಳಗೆ ಭಾರತದಿಂದ ವಾಪಸ್ ಹೋಗುವಂತೆ ಆದೇಶಿಸಲಾಗಿತ್ತು. ಹೀಗಾಗಿ, ಪಾಕಿಸ್ತಾನೀಯರು ಭಾರತ ತೊರೆದಿದ್ದಾರೆ. ಕರ್ನಾಟಕದಲ್ಲಿದ್ದ ಹಲವು ಪಾಕ್ ಪ್ರಜೆಗಳು ಮಂಗಳವಾರವೇ ತೆರಳಿದ್ದಾರೆ. ಆದರೆ ಇನ್ನೂ ಕೆಲವು ಮಂದಿ ಇಲ್ಲೇ ಉಳಿದುಕೊಂಡಿದ್ದಾರೆ. ಕರ್ನಾಟಕದಿಂದ ಹೋದವರೆಷ್ಟು? ಉಳಿದವರೆಷ್ಟು? ಮೈಸೂರಿನಲ್ಲಿದ್ದ 8 ಮಂದಿ ಪಾಕ್ ಪ್ರಜೆಗಳ ಪೈಕಿ ಮೂವರು ವಾಪಸಾಗಿದ್ದಾರೆ. ಬೆಂಗಳೂರಿನಲ್ಲಿದ್ದ ನಾಲ್ವರು ಪಾಕ್ ಪ್ರಜೆಗಳು ತವರಿಗೆ ತೆರಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 15 ಜನ…
ಬೆಂಗಳೂರು:-ಕರ್ನಾಟಕದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/good-news-from-the-center-for-people-of-north-karnataka-vande-bharat-train-service-from-bengaluru-to-belgaum-will-start-soon/ ಕರ್ನಾಟಕದಲ್ಲಿ ಮೇ 4ರ ವರೆಗೆ ಮಳೆ ಮುಂದುವರಿಯಲಿದೆ. ಗರಿಷ್ಠ ತಾಪಮಾನದಲ್ಲಿ ಮಹತ್ವದ ಬದಲಾವಣೆಗಳು ಇಲ್ಲ ಎಂದು ಹೇಳಲಾಗಿದೆ. ಆದರೆ ಕರಾವಳಿ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ 2 ದಿನದ ಅವಧಿಯಲ್ಲಿ ಗರಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಇನ್ನು ಗರಿಷ್ಠ ತಾಪಮಾನದಲ್ಲಿ ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ವರೆಗೆ ಮಹತ್ವದ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗದಲ್ಲಿ ಇಂದು ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ. ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ಉತ್ತರ ಕರ್ನಾಟಕದ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ ಬರೋಬ್ಬರಿ 50-60 ಕಿ.ಮೀ ವೇಗದಲ್ಲಿ ಇರಲಿದೆ. ಬೆಳಗಾವಿ, ಧಾರವಾಡ, ಹಾವೇರಿ,…
ಬೆಂಗಳೂರು:- ಉತ್ತರ ಕರ್ನಾಟಕ ಮಂದಿಗೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ಕೊಟ್ಟಿದ್ದು, ಶೀಘ್ರವೇ ಬೆಂಗಳೂರು-ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ ಆಗಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. https://ainkannada.com/ipl-2025-another-defeat-for-delhi-at-home-kolkata-wins-a-crucial-match/ ಈ ಸಂಬಂಧ X ಮಾಡಿರುವ ಅವರು, ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಬೇಕೆಂದು ಮಾನ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಉತ್ತರ ಕರ್ನಾಟ ಭಾಗದ ಜನದಟ್ಟಣೆಯನ್ನು ಅರಿತು ಅಶ್ವಿನಿ ವೈಷ್ಣವ್ ಅವರು ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ಈ ರೈಲು ಸಂಚಾರದ ಅಧಿಕೃತ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ತಿಳಿಸಲಾಗುವುದು” ಎಂದಿದ್ದಾರೆ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿರುವ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಹಾಗೂ ಅಶ್ವಿನಿ ವೈಷ್ಣವ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ನವದೆಹಲಿ:- ತವರು ಮೈದಾನದಲ್ಲಿಯೇ ಡೆಲ್ಲಿಗೆ ಮತ್ತೊಂದು ಆಘಾತ ಎದುರಾಗಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಹೀನಾಯವಾಗಿ ಸೋತಿದೆ. ಏಪ್ರಿಲ್ ಮೇ 27 ರಂದು ತವರಲ್ಲಿ RCB ವಿರುದ್ಧ ಸೋತಿತ್ತು. ಆ ಬಳಿಕ ಅಂದ್ರೆ ಮಂಗಳವಾರ ಕೋಲ್ಕತ್ತಾ ವಿರುದ್ಧ ಸೋಲು ಕಂಡಿದೆ. https://ainkannada.com/this-pile-is-a-court-office-wandering-from-a-job-problem-wednesdays-fate-of-wednesday-30-april-2025/ ಡೆಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಭರ್ಜರಿ ಗೆಲುವು ಕಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್ನಲ್ಲಿ 9 ವಿಕೆಟ್ ನಷ್ಟಕ್ಕೆ 204 ರನ್ ಕಲೆಹಾಕಿತ್ತು. ನಂತರ ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ನಲ್ಲಿ 190ರನ್ ಗಳಿಸಿ ಕೆಕೆಆರ್ ತಂಡಕ್ಕೆ ಶರಣಾಯಿತು. 205 ರನ್ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಫಾಫ್ ಡು ಪ್ಲೆಸಿಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. 45 ಬಾಲ್ಗೆ 62 ರನ್ (7 ಬೌಂಡರಿ, 2 ಸಿಕ್ಸ್) ಸಿಡಿಸುವ…