ಮಂಡ್ಯ: ವಾರದ ಹಿಂದೆ ನಾಪತ್ತೆಯಾಗಿದ್ದ ಮೂವರು ಶವ ನಾಲೆಯಲ್ಲಿ ಪತ್ತೆಯಾಗಿದೆ. ಮಂಡ್ಯ ಜಿಲ್ಲೆಯ ವಿಸಿ ನಾಲೆಯಲ್ಲಿ ಕಳೆದ ಏ.16ರಂದು ನಾಪತ್ತೆಯಾಗಿದ್ದ ತಂದೆ ಮತ್ತು ಮಕ್ಕಳಿಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಮೈಸೂರು ಜಿಲ್ಲೆಯ ಕೆ.ಆರ್ .ನಗರ ತಾಲೂಕಿನ ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), ಮಕ್ಕಳಾದ ಅಧ್ವೈತ್ (8) ಹಾಗೂ ಅಕ್ಷತಾ (3) ಎಂದು ಗುರುತಿಸಲಾಗಿದೆ. ಕಳೆದ ಏ.16 ರಂದು ಮಕ್ಕಳ ಜೊತೆ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ನಗರಕ್ಕೆ ಹೊರಟಿದ್ದರು. ಆದರೆ ಆ ಬಳಿಕ ಅವರ ಯಾವುದೇ ಸುಳಿವು ಇರಲಿಲ್ಲ. ಈ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಏ.19ರಂದು ನಾಪತ್ತೆ ಪ್ರಕರಣ ದಾಖಲಾಗಿತ್ತು. https://ainkannada.com/m-b-patil-slams-cms-statement-that-there-should-be-no-war-against-pakistan/ ಇದೀಗ ವಿ.ಸಿ.ನಾಲೆಯಲ್ಲಿ ಕಾರೊಂದು ಪತ್ತೆಯಾಗಿದ್ದು, ಅದರಲ್ಲಿ ತಂದೆ ಹಾಗೂ ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದರು. ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: AIN Author
ವಿಜಯಪುರ: ಪಾಕಿಸ್ತಾನದ (Pakistan) ವಿರುದ್ಧ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಸಚಿವ ಎಂ.ಬಿ.ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾವಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳೂ ಇವೆ. ಪಾಕಿಸ್ತಾನದ ವಿರುದ್ಧ ಇಂದಿರಾ ಗಾಂಧಿ ಅವರು ಕ್ರಮ ಕೈಗೊಂಡ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದರು. . ಮುಖ್ಯಮಂತ್ರಿಗಳು ಯುದ್ಧ ಬೇಡವೇ ಬೇಡ ಎಂದು ಹೇಳಿಲ್ಲ. ಆದ್ರೆ ಯುದ್ಧವೇ ಪರಿಹಾರವಲ್ಲ ಅನ್ನುವ ಅರ್ಥದಲ್ಲಿ ಹೇಳಿದ್ದಾರೆ. ಅವರ ಬಳಿಯೂ ನ್ಯೂಕ್ಲಿಯರ್ ಇದೆ .ಅಣುಬಾಂಬ್ ದಾಳಿಯ ಬೆದರಿಕೆ ಹಾಕ್ತಿದ್ದಾರೆ. ಹಾಗಾಗಿ ಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಯುದ್ಧ ಮಾಡಲಿ ಅಂತ ಸಿಎಂ ಹೇಳಿದ್ದಾರೆ ಅಷ್ಟೆ ಎಂದರು. https://ainkannada.com/cm-siddaramaiah-angry-police-officer-at-congress-program/ ಶತ್ರು ರಾಷ್ಟ್ರದ ವಿರುದ್ಧ ಯುದ್ಧ ಆಗಲೇಬೇಕು, ಪಾಕ್ಗೆ ತಕ್ಕ ಶಾಸ್ತಿ ಮಾಡಬೇಕು. ಹಾಗಾಗಿ ಇಂದಿರಾ ಗಾಂಧಿ ಅವರು ಕ್ರಮ ಕೈಗೊಂಡ ರೀತಿಯಲ್ಲಿ ಕ್ರಮ ಆಗಬೇಕು. ಮೋದಿ ಜೊತೆಗೆ ಎಲ್ಲ ರಾಜಕೀಯ ಪಕ್ಷಗಳೂ ಇವೆ ಎಂದು ಭರವಸೆ ನೀಡಿದರು. ಇನ್ನೂ…
ನವದೆಹಲಿ: ಕರ್ನಾಟಕ ತೊಗಲು ಗೊಂಬೆ ಕಲಾವಿದೆ ಭೀಮವ್ವ ಶಿಳ್ಳೆಕ್ಯಾತರ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಸಿದರು. ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ಪ್ರಮುಖ ಗಣ್ಯರ ಸಮ್ಮುಖದಲ್ಲಿ ತೊಗಲು ಗೊಂಬೆ ಕಲಾವಿದೆ ಭೀಮವ್ವ ಶಿಳ್ಳೆಕ್ಯಾತರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೊಪ್ಪಳ (Koppal) ತಾಲೂಕಿನ ಮೋರನಾಳ ಗ್ರಾಮದ ಭೀಮವ ಶಿಳ್ಳೆಕ್ಯಾತರ್ ತಮ್ಮ ಬಾಲ್ಯದಲ್ಲಿ ಅಪ್ಪನಿಂದ ಕಲಿತ ಕಲಿತ ತೊಗಲು ಗೊಂಬೆಯಾಟವನ್ನು 103 ವರ್ಷವಾದರೂ ತನ್ನ ಜೀವನಕ್ಕೆ ಆಧಾರವಾಗಿಸಿಕೊಂಡು ಬಂದಿದ್ದಾರೆ. ಶತಾಯುಸಿಯಾಗಿರುವ ಭೀಮ್ಮವ್ವ ಅವರು ಸರಾಗವಾಗಿ ಹಾಡುತ್ತಾ, ತೊಗಲು ಗೊಂಬೆಯಾಟದ ಕಲೆಯನ್ನು ನಶಿಸಿ ಹೋಗದಂತೆ ಕಾಪಾಡಿಕೊಂಡು ಬಂದಿದ್ದಾರೆ. https://ainkannada.com/padma-shri-awardee-bhimavva-shillykyatara-puppeteer-artiste-of-koppal/ ಕಳೆದ 82 ವರ್ಷಗಳಿಂದ ತೊಗಲು ಗೊಂಬೆಯಾಟದಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಕೇಂದ್ರ ಸರ್ಕಾರದ ಮೂರನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವುದು ಕೊಪ್ಪಳ ಜಿಲ್ಲೆಗೆ ಕೀರ್ತಿ ತಂದಿದೆ. ದೇಶದಲ್ಲಿ…
ಬೆಂಗಳೂರು ಗ್ರಾಮಾಂತರ : ಹೊಸಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಮೂರು ವರ್ಷಗಳ ಹಿಂದೆ ಬ್ಯಾಂಕ್ ಗೆ ಕನ್ನ ಹಾಕಿದ್ದ ಖದೀಮರ ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ನಾಲ್ವರು ಆರೋಪಿಗಳ ಬಂಧಿಸಿದ್ದು, ಸರ್ತಾಜ್, ಕಾಳಿ ಚರಣ್, ಗುಡ್ಡು ಅಲಿಯಾಸ್ ಕಳಿಯಾ, ಮತ್ತು ಅಸ್ಲಾಂ ಟನ್ ಟನ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಕಳೆದ 2022 ರಲ್ಲಿ ಬ್ಯಾಂಕ್ ಶೆಟರ್ ಮುರಿದು, ಕೋಟಿ ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕದ್ದು ಪರಾರಿಯಾಗಿದ್ದಾರೆ. ಟ್ರಕ್ ನಲ್ಲಿ ಬೆಂಗಳೂರಿಗೆ ಬಾಡಿಗೆಗೆ ಬಂದಿದ್ದು ವಾಪಸ್ ಹೋಗುವ ವೇಳೆ ಬ್ಯಾಂಕ್ನಲ್ಲಿ ಕಳ್ಳತನ ಮಾಡಿದ್ದರು. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಟ್ರಕ್ ವಶಕ್ಕೆ ಪಡೆಯಲಾಗಿದೆ. https://ainkannada.com/doctor-fired-for-posting-anti-hindu-and-anti-national-posts/ ಇನ್ನೂ ರಾಜ್ಯ ಸೇರಿದಂತೆ ದಕ್ಷಿಣ ಭಾರತದ ಹಲವು ಕಡೆ ಇದೇ ರೀತಿ ಕೃತ್ಯಗಳನ್ನ ಮಾಡಿದ್ದು, ಸದ್ಯ ಪೊಲೀಸರು ಬಂಧಿತ ಆರೋಪಿಗಳ ಜೊತೆ ಚಿನ್ನಾಭರಣ ರಿಕವರಿಗೆ ಉತ್ತರಪ್ರದೇಶಕ್ಕೆ ತೆರಳಿದ್ದಾರೆ.
ಮಂಗಳೂರು: ದೇಶ ವಿರೋಧಿ ಪೋಸ್ಟ್ ಹಾಕಿದ್ದ ವೈದ್ಯೆಯನ್ನು ಕೊನೆಗೂ ಕೆಲಸದಿಂದ ವಜಮಾಡಲಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯ ಡಯೆಟಿಷಿಯನ್ ಆಗಿದ್ದ ಅಫೀಫ ಫಾರೀಮಾ, ಹಿಂದೂಗಳು ಹಾಗೂ ದೇಶ ವಿರೋಧಿ ಪೋಸ್ಟ್ ಹಾಕಿ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಪೋಸ್ಟ್ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ಆಕೆಯ ವಜಾಗೊಳಿಸಲಾಗಿದೆ. ವೈದ್ಯೆ ಅಫೀಫ ಫಾರೀಮಾ ‘help stinky hindus are behind me’.. am i indian? yes. do i hate india? Yes ಎಂದು ಸಾಮಾಜಿಕ ಮಾಧ್ಯಮದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದರು. ಈ ಫೋಸ್ಟ್ ಬಳಿಕ ಆಕ್ರೋಶ ಭುಗಿಲೆದ್ದಿತ್ತು. ಜೊತೆಗೆ ಆಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಇದೀಗ ಆಸ್ಪತ್ರೆಯ ಆಡಳಿತ ಮಂಡಳಿ, ಅಫೀಫಳನ್ನು ಕೆಲಸದಿಂದ ವಜಾ ಮಾಡಿದೆ. https://ainkannada.com/i-am-indian-but-i-hate-india-doctors-post-angers-hindus/ ಇನ್ನೂ ಈ ಸಂಬಂಧ ಆಸ್ಪತ್ರೆಯ ಹೆಚ್ಆರ್ ಅಧಿಕಾರಿ ಮಹಮ್ಮದ್ ಅಸ್ಲಾಂ ಅಫೀಫ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ…
ವಿಜಯಪುರ : ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಯತ್ನಾಳ್ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಹಿನ್ನಲೆಯಲ್ಲಿ ಯತ್ನಾಳ ವಿರುದ್ದ ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಅಲ್ಪಸಂಖ್ಯಾತ ಮುಖಂಡರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಶಾಸಕ ಯತ್ನಾಳ್, ಬಾಳಾಠಾಕ್ರೆ ಮನೆಯಲ್ಲಿ ಪೈಗಂಬರ್ ಹುಟ್ಟಿದ್ದಾರೆ ಎಂದಿದ್ದರು. ಬಳಿಕ ಈ ವಿಚಾರವಾಗಿ ಶಾಸಕ ಯತ್ನಾಳ ಸ್ಪಷ್ಟನೆ ಕೂಡ ನೀಡಿದ್ದರು. ಇದರ ಮಧ್ಯೆ ಶಾಸಕ ಯತ್ನಾಳ ವಿರುದ್ದ ಹೋರಾಟ ಆರಂಭವಾದವು. ಇನ್ನೂ ಶಾಸಕ ಯತ್ನಾಳ ಮೇಲೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಅಲ್ಪಸಂಖ್ಯಾತ ಮುಖಂಡರು ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಹೋರಾಟ ನಡೆಸಿದರು. ಈ ಸಂದರ್ಭದಲ್ಲಿ ಸಚಿವ ಶಿವಾನಂದ ಪಾಟೀಲ ಮಾತನಾಡಿ ಶಾಸಕ ಯತ್ನಾಳ ವಿರುದ್ದ ವಾಗ್ದಾಳಿ ನಡೆಸಿದರು. ಕೆಲ ದಿನಗಳ ಹಿಂದೆ ಅಣ್ಣ ಬಸವಣ್ಣನವರ ಕುರಿತು ಅಪಮಾನಕರ ರೀತಿ ಮಾತನಾಡಿದ್ದ ಹುಚ್ಚು ಮನಸ್ಥಿತಿಯ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಇದೀಗ ಇಸ್ಲಾಂ ಧರ್ಮೀಯರ…
ಹುಬ್ಬಳ್ಳಿ: ದೇಶ ವಿದೇಶಗಳಲ್ಲಿ ಶ್ರೀ ಬಸವೇಶ್ವರ ಜಯಂತಿಯನ್ನ ಭಾರೀ ಅದ್ದೂರಿಯಾಗಿ ಆಚರಣೆ ಮಾಡಲಾಗುತಿದ್ದು, ನಮ್ಮ ರಾಜ್ಯದಲ್ಲಿ ಬಸವ ಜಯಂತಿ ಆಚರಣೆಗೆ ಸಾರ್ವಜನಿಕರು ಹಾಗೂ ಭಕ್ತರು ಬರಲು ಹಿಂದೇಟು ಮಾಡುತಿದ್ದಾರೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಳವಳ ವ್ಯಕ್ತಪಡಿಸಿದರು. ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ರೋತ್ಸವದ ಅಂಗವಾಗಿ ನಗರದ ಮೂರುಸಾವಿರ ಮಠದ ಆವರಣದಲ್ಲಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅವರು ಮಾತನಾಡಿದರು. ಇನ್ನೂ ಜಗದ್ಗುರು ಡಾ.ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳ ಮಾತನಾಡಿ, ನಾಡಿನ ಮಠಗಳಲ್ಲಿ ಒಂದಾದ ಮೂರು ಸಾವಿರ ಮಠದಲ್ಲಿ ಬಸವೇಶ್ವರ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ ಬಸವೇಶ್ವರರ ಅನುಯಾಯಿಗಳು ಭಾಗವಹಿಸಬೇಕು ಎಂದರು ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷೆ ಗಿರಿಜಾ ಎಸ್. ಹೂಗಾರ ಮಾತನಾಡಿ, ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದು ಇಂತಹ ಕಾರ್ಯಕ್ರಮಗಳು ನಾಡಿನ ಜನತೆಗೆ ಶ್ರೀ ಬಸವೇಶ್ವರರ ಕಾಲಾವಧಿ ಶರಣರ ತತ್ವ ವಚನಗಳು ಇನ್ನಷ್ಟು ತಿಳಿಯವಂತಹ ಆಗಬೇಕು ಎಂದರು. https://ainkannada.com/trial-in-neha-hiremath-murder-case-begins-today/ ಮಹಿಳೆಯರಿಂದ…
ಹುಬ್ಬಳ್ಳಿ : ನೇಹಾ ಹಿರೇಮಠ ಹತ್ಯೆ ಪ್ರಕರಣದ ಟ್ರಯಲ್ ಇಂದಿನಿಂದ ಆರಂಭವಾಗಲಿದೆ. ಹತ್ಯೆ ನಡೆದು ಒಂದು ವರ್ಷ ಹತ್ತು ದಿನಗಳ ಬಳಿಕ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡಿದೆ. ಇಂದಿನಿಂದ ಒಂದು ತಿಂಗಳೊಳಗೆ ಅಂತಿಮ ತೀರ್ಪು ಘೋಷಣೆಯಾಗುವ ಸಾಧ್ಯತೆ ಇದೆ. ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ಪರಮೇಶ್ವರ ಪ್ರಸನ್ನ ಅವರು ವಿಚಾರಣೆ ನಡೆಸಲಿದ್ದಾರೆ. ವಿಶೇಷ ಪ್ರಕರಣದಂತೆ ಪರಿಗಣಿಸಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ಮಾದರಿಯಲ್ಲಿ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಸಿಐಡಿ ಹಾಗೂ ನೇಹಾ ಹಿರೇಮಠ ಪರವಾಗಿ ಹಿರಿಯ ಅನುಭವಿ ವಕೀಲ ಮಹೇಶ್ ವೈದ್ಯರಿಂದ ವಾದ ಮಂಡಿಸಲಿದ್ದಾರೆ. ನೇಹಾ ಹತ್ಯೆ ಸಾಮಾಜಿಕ ಆರೋಪ, ನೇಹಾ ಹತ್ಯೆ ಮಾದರಿಯಾಗಿಟ್ಟುಕೊಂಡು ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಆಗಿದೆ. ಹೀಗಾಗಿ ಆರೋಪಿಗೆ ಮರಣದಂಡನೆಗೆ ಒತ್ತಾಯಿಸಿ ವಾದ ಮಂಡನೆ ಸಾಧ್ಯತೆ ಇದೆ. 80 ಕ್ಕೂ ಅಧಿಕ ಸಾಕ್ಷಿಗಳು ವಿಚಾರಣೆ ನಡೆಯಲಿದೆ. ಮತ್ತೊಂದು ಕಡೆ ಆರೋಪಿ ಪರ ಕಾನೂನು ಸೇವಾ ಸಮಿತಿಯಿಂದ ನೇಮಕವಾದ ವಕೀಲರಿಂದ ವಾದ ಮಂಡನೆಯಾಗಲಿದೆ. https://ainkannada.com/two-arrested-for-harassing-and-harassing-two-young-women-travelling-in-an-auto/ ಹುಬ್ಬಳ್ಳಿ ಧಾರವಾಡ…
ಬೆಂಗಳೂರು:- ಆಟೋದಲ್ಲಿ ತೆರಳ್ತಿದ್ದ ಯುವತಿಯರಿಬ್ಬರಿಗೆ ಚುಡಾಯಿಸಿ ಕಿರುಕುಳ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. https://ainkannada.com/honor-killing-father-kills-his-beloved-daughter/ ಮುಬಾರಕ್ ಮತ್ತು ಹಫೀಫ್ ಬಂಧಿತರು. ಏಪ್ರಿಲ್ 23 ರಂದು ಸಾರಕ್ಕಿ ಮಾರುಕಟ್ಟೆ ಬಳಿ ಈ ಘಟನೆ ನಡೆದಿತ್ತು. ಬೈಕ್ ನಲ್ಲಿ ಬಂದು ಆಟೋ ಅಡ್ಡಗಟ್ಟಿ ಇಬ್ಬರು ಕಿಡಿಗೇಡಿಗಳು ಚುಡಾಯಿಸಿದ್ದರು. ಇದನ್ನು ಪ್ರಶ್ನಿಸಿದ್ದ ಯುವತಿಯರ ತಾಯಿಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಮಾನ ಮಾಡಿದ್ದರು. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಗೆ ಯುವತಿಯರ ತಾಯಿ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ಕೈಗೊಂಡಿದ್ದ ಪೊಲೀಸರು, ಇದೀಗ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ರಾಯಚೂರು:- ಕರ್ನಾಟಕದಲ್ಲಿ ಮರ್ಯಾದಾ ಹತ್ಯೆ ಒಂದು ನಡೆದಿದ್ದು, ಪ್ರೀತಿಸಿದ ಮಗಳ ಸಾಯಿಸಿ ಪಾಪಿ ತಂದೆ ಓರ್ವ ನದಿಗೆ ಎಸೆದಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಜರುಗಿದೆ https://ainkannada.com/serial-accident-4-cars-damaged-on-bengaluru-airport-road/ ಅಪ್ರಾಪ್ತೆ ಅನ್ಯ ಜಾತಿಯ ಯುವಕ ಹನುಮಂತ ಎಂಬಾತನನ್ನ ಪ್ರೀತಿ ಮಾಡಿದ್ಲು. ಈ ಪ್ರೀತಿ ಆಕೆಯ ತಂದೆ ಲಕ್ಕಪ್ಪ ಕಂಬಳಿಗೆ ಕೋಪ ತರಿಸಿತ್ತು. ಅವನನ್ನೇ ಮದುವೆಯಾಗುವ ಪಣ ತೊಟ್ಟಿದ್ದ ಮಗಳ ಹಠದಿಂದ ಗ್ರಾಮದಲ್ಲಿ ತನ್ನ ಹಾಗೂ ಕುಟುಂಬ ಮರ್ಯಾದೆ ಮಣ್ಣು ಪಾಲಾಗುತ್ತೆ ಎಂದು ಲಕ್ಕಪ್ಪ ಆತಂಕದಲ್ಲಿದ್ದ. ಇದೇ ಸಿಟ್ಟಿನಲ್ಲಿ ಆತ ಮಾಡಿದ್ದು ಮಾತ್ರ ಘೋರ ಕೃತ್ಯ ನಡೆದಿದೆ. ಅಪ್ರಾಪ್ತೆ ಹಾಗೂ ಹನುಮಂತ ಒಂದೇ ಗ್ರಾಮದವರಾದ್ರಿಂದ ಇವರಿಬ್ಬರ ಪ್ರೀತಿ ಗುಟ್ಟಾಗಿರದೆ ಗ್ರಾಮದಲ್ಲಿ ಎಲ್ಲರಿಗೂ ತಿಳಿದ ವಿಷಯವಾಗಿತ್ತು. ಎಲ್ಲೆಂದರಲ್ಲಿ ಒಟ್ಟಿಗೆ ಓಡಾಡುತ್ತಿದ್ದರು. ಇವರಿಬ್ಬರ ಪ್ರೀತಿಗೆ ಮನೆಯಲ್ಲಿ ಅಪಸ್ವರ ಕೇಳಿ ಬಂದಿತ್ತು. ಅಲ್ಲದೇ ಪ್ರೀತಿಸಿದ ಯುವಕನೊಂದಿಗೆ ಬಾಲಕಿ ಮನೆ ಬಿಟ್ಟು ಹೋಗಿದ್ಲು. ಆಗ ತಂದೆ ಲಕ್ಕಪ್ಪ ಆಕೆಯನ್ನ ಹುಡುಕಿಸಿ ಕರೆತಂದಿದ್ದ. ಅದಾದ ನಂತರವೂ ಇಬ್ಬರು…