ಬೆಂಗಳೂರು:- ಆಟೋದಲ್ಲಿ ತೆರಳ್ತಿದ್ದ ಯುವತಿಯರಿಬ್ಬರಿಗೆ ಚುಡಾಯಿಸಿ ಕಿರುಕುಳ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. https://ainkannada.com/honor-killing-father-kills-his-beloved-daughter/ ಮುಬಾರಕ್ ಮತ್ತು ಹಫೀಫ್ ಬಂಧಿತರು. ಏಪ್ರಿಲ್ 23 ರಂದು ಸಾರಕ್ಕಿ ಮಾರುಕಟ್ಟೆ ಬಳಿ ಈ ಘಟನೆ ನಡೆದಿತ್ತು. ಬೈಕ್ ನಲ್ಲಿ ಬಂದು ಆಟೋ ಅಡ್ಡಗಟ್ಟಿ ಇಬ್ಬರು ಕಿಡಿಗೇಡಿಗಳು ಚುಡಾಯಿಸಿದ್ದರು. ಇದನ್ನು ಪ್ರಶ್ನಿಸಿದ್ದ ಯುವತಿಯರ ತಾಯಿಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಮಾನ ಮಾಡಿದ್ದರು. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಗೆ ಯುವತಿಯರ ತಾಯಿ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ಕೈಗೊಂಡಿದ್ದ ಪೊಲೀಸರು, ಇದೀಗ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
Author: AIN Author
ರಾಯಚೂರು:- ಕರ್ನಾಟಕದಲ್ಲಿ ಮರ್ಯಾದಾ ಹತ್ಯೆ ಒಂದು ನಡೆದಿದ್ದು, ಪ್ರೀತಿಸಿದ ಮಗಳ ಸಾಯಿಸಿ ಪಾಪಿ ತಂದೆ ಓರ್ವ ನದಿಗೆ ಎಸೆದಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಜರುಗಿದೆ https://ainkannada.com/serial-accident-4-cars-damaged-on-bengaluru-airport-road/ ಅಪ್ರಾಪ್ತೆ ಅನ್ಯ ಜಾತಿಯ ಯುವಕ ಹನುಮಂತ ಎಂಬಾತನನ್ನ ಪ್ರೀತಿ ಮಾಡಿದ್ಲು. ಈ ಪ್ರೀತಿ ಆಕೆಯ ತಂದೆ ಲಕ್ಕಪ್ಪ ಕಂಬಳಿಗೆ ಕೋಪ ತರಿಸಿತ್ತು. ಅವನನ್ನೇ ಮದುವೆಯಾಗುವ ಪಣ ತೊಟ್ಟಿದ್ದ ಮಗಳ ಹಠದಿಂದ ಗ್ರಾಮದಲ್ಲಿ ತನ್ನ ಹಾಗೂ ಕುಟುಂಬ ಮರ್ಯಾದೆ ಮಣ್ಣು ಪಾಲಾಗುತ್ತೆ ಎಂದು ಲಕ್ಕಪ್ಪ ಆತಂಕದಲ್ಲಿದ್ದ. ಇದೇ ಸಿಟ್ಟಿನಲ್ಲಿ ಆತ ಮಾಡಿದ್ದು ಮಾತ್ರ ಘೋರ ಕೃತ್ಯ ನಡೆದಿದೆ. ಅಪ್ರಾಪ್ತೆ ಹಾಗೂ ಹನುಮಂತ ಒಂದೇ ಗ್ರಾಮದವರಾದ್ರಿಂದ ಇವರಿಬ್ಬರ ಪ್ರೀತಿ ಗುಟ್ಟಾಗಿರದೆ ಗ್ರಾಮದಲ್ಲಿ ಎಲ್ಲರಿಗೂ ತಿಳಿದ ವಿಷಯವಾಗಿತ್ತು. ಎಲ್ಲೆಂದರಲ್ಲಿ ಒಟ್ಟಿಗೆ ಓಡಾಡುತ್ತಿದ್ದರು. ಇವರಿಬ್ಬರ ಪ್ರೀತಿಗೆ ಮನೆಯಲ್ಲಿ ಅಪಸ್ವರ ಕೇಳಿ ಬಂದಿತ್ತು. ಅಲ್ಲದೇ ಪ್ರೀತಿಸಿದ ಯುವಕನೊಂದಿಗೆ ಬಾಲಕಿ ಮನೆ ಬಿಟ್ಟು ಹೋಗಿದ್ಲು. ಆಗ ತಂದೆ ಲಕ್ಕಪ್ಪ ಆಕೆಯನ್ನ ಹುಡುಕಿಸಿ ಕರೆತಂದಿದ್ದ. ಅದಾದ ನಂತರವೂ ಇಬ್ಬರು…
ಬೆಂಗಳೂರು:- ಸರಣಿ ಅಪಘಾತ ಸಂಭವಿಸಿ 4 ಕಾರುಗಳು ಜಖಂಗೊಂಡ ಘಟನೆ ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಜರುಗಿದೆ. https://ainkannada.com/i-am-indian-but-i-hate-india-doctors-post-angers-hindus/ ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆಯಲ್ಲಿ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 4 ಕಾರುಗಳು ಜಖಂಗೊಂಡಿದ್ದು, ಕೆಲವರು ಗಾಯಗೊಂಡಿದ್ದಾರೆ. ಅತಿ ವೇಗವಾಗಿ ಬರುತ್ತಿದ್ದ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಮಂಗಳೂರು:- ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ವೈದ್ಯೆ ಹಿಂದುಗಳನ್ನು ಕೆರಳಿಸುವ ಹಾಗೆ ಪೋಸ್ಟ್ ಮಾಡಿರುವುದಕ್ಕೆ ಹಿಂದೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತವಾಗಿದೆ. https://ainkannada.com/alert-after-cet-blunder-railway-exam-cannot-be-held-on-mangalsutra-january-railway-department-orders/ ಹೌದು, ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿದ್ದು ಇದೀಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ಎಂಬಾಕೆ ದೇಶ ವಿರೋಧಿ ಸಂದೇಶ ಪ್ರಕಟಿಸಿದ್ದು, ಸದ್ಯ ಆಕೆಯ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಹೈಲ್ಯಾಂಡ್ ಆಸ್ಪತ್ರೆ ಹೆಚ್ಆರ್ ಮೊಹಮ್ಮದ್ ಅಸ್ಲಾಂ ದೂರು ಆಧರಿಸಿ ಬಿಎನ್ಎಸ್ ಕಲಂ 196(1)(a), 353(2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರು :- ಇತ್ತೀಚೆಗೆ CET ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ರೈಲ್ವೇ ಇಲಾಖೆ ಎಚ್ಚೆತ್ತುಕೊಂಡಿದೆ. ರೈಲ್ವೇ ನೇಮಕಾತಿ ಪರೀಕ್ಷೆ ವೇಳೆ ಮಂಗಳಸೂತ್ರ ಧರಿಸಿದ್ರೆ ಪರೀಕ್ಷೆಗೆ ಅವಕಾಶವಿಲ್ಲ ಎಂಬ ನಿರ್ಬಂಧವನ್ನು ರೈಲ್ವೆ ಸಚಿವಾಲಯ ವಾಪಸ್ ಪಡೆದಿದೆ. https://ainkannada.com/devotees-participation-is-required-in-basava-jayanti-celebrations-basavaraja-horatti/ ಜನಿವಾರ ವಿವಾದದಿಂದಾಗಿ ತೀವ್ರ ಟೀಕೆ, ಅಸಮಾಧಾನ ವ್ಯಕ್ತವಾಗಿದ್ದ ಬೆನ್ನಲ್ಲೇ ಈಗ ನಿರ್ಬಂಧ ಸಡಿಲಿಸಲಾಗಿದೆ. ಮಾರ್ಗಸೂಚಿಯಲ್ಲಿ ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂದು ಉಲ್ಲೇಖಿಸಲಾಗಿತ್ತು. ಈ ಬಗ್ಗೆ ಸಂಸದರು, ಶಾಸಕರು ಮನವಿ ಮಾಡಿದ ಹಿನ್ನೆಲೆ ಟ್ವೀಟ್ ಮೂಲಕ ಕೇಂದ್ರ ಸಚಿವ ಸೋಮಣ್ಣ ಗೊಂದಲಕ್ಕೆ ಇತಿಶ್ರೀ ಹಾಡಿದ್ದಾರೆ. ಜನಿವಾರ, ಮಾಂಗಲ್ಯ, ಸಂಸ್ಕೃತಿ ಬಿಂಬಿಸುವ ಯಾವುದೇ ವಸ್ತು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸೂಚಿಸಲಾಗಿದೆ.
ಬೆಂಗಳೂರು:- ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಪೌರ ಕಾರ್ಮಿಕ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿಜಯನಗರ ಸಂಚಾರಿ ಠಾಣಾ ವ್ಯಾಪ್ತಿಯ ಶಿವನಹಳ್ಳಿ ಸಿಗ್ನಲ್ ಬಳಿ ಜರುಗಿದೆ. https://ainkannada.com/devotees-participation-is-required-in-basava-jayanti-celebrations-basavaraja-horatti/ ಶ್ರೀರಾಂಪುರ ನಿವಾಸಿಯಾಗಿರುವ ಸರೋಜಮ್ಮ (51) ಮೃತ ಮಹಿಳೆ. ಇಂದು ಮುಂಜಾನೆ 6.30 ರಲ್ಲಿ ಕೆಲಸಕ್ಕೆ ಹಾಜರಾಗಲು ಹೋಗುವಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ತೀವ್ರರಕ್ತಸ್ರಾವವಾಗಿ ಮಹಿಳೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಲ್ಲದೇ ಸ್ಥಳದಲ್ಲಿ ಬಿಬಿಎಮ್ ಪಿ ಸಿಬ್ಬಂದಿ, ಪೌರ ಕಾರ್ಮಿಕರು ಕೂಡ ಇದ್ದರು. ಸ್ಥಳೀಯ ವ್ಯಕ್ತಿ ರೋಷನ್ ಹೇಳಿದ್ದೇನು!? ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ವ್ಯಕ್ತಿ ರೋಷನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇಂದು ಬೆಳಗ್ಗೆ 6.30ರ ಸುಮಾರಿಗೆ ಸರೋಜಮ್ಮ ಎಂಬ ಮಹಿಳೆ, ಶಿವನಹಳ್ಳಿ ಸಿಗ್ನಲ್ ದಾಟುವಾಗ ಲಾರಿ ಡಿಕ್ಕಿಯಾಗಿದೆ. ಚಾಲಕ ಗ್ರೀನ್ ಸಿಗ್ನಲ್ ಬಿತ್ತು ಅಂತಾ ಆತ ಗಾಡಿ ಮೂವ್ ಮಾಡಿದ್ದಾನೆ.. ಮೊಬೈಲ್ ನಲ್ಲಿ ಮಾತಾಡ್ಕೊಂಡು ಆಕೆ ಇರೋದು ನೋಡದೆ ಹೋಗಿದಾನೆ.…
ಹುಬ್ಬಳ್ಳಿ: ದೇಶ ವಿದೇಶಗಳಲ್ಲಿ ಶ್ರೀ ಬಸವೇಶ್ವರ ಜಯಂತಿಯನ್ನ ಭಾರೀ ಅದ್ದೂರಿಯಾಗಿ ಆಚರಣೆ ಮಾಡಲಾಗುತಿದ್ದು ನಮ್ಮ ರಾಜ್ಯದಲ್ಲಿ ಬಸವ ಜಯಂತಿ ಆಚರಣೆಗೆ ಸಾರ್ವಜನಿಕರು ಹಾಗೂ ಭಕ್ತರು ಬರಲು ಹಿಂದೇಟು ಮಾಡುತಿದ್ದಾರೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಳವಳ ವ್ಯಕ್ತಪಡಿಸಿದರು. ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ರೋತ್ಸವದ ಅಂಗವಾಗಿ ನಗರದ ಮೂರುಸಾವಿರ ಮಠದ ಆವರಣದಲ್ಲಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳ ಸಮಾರಂಭದ ಮುಖ್ಯ ಅತಿಯಾಗಿ ಆಗಮಿಸಿ ಅವರು ಮಾತನಾಡಿದರು. https://ainkannada.com/the-morale-of-police-officers-will-decline-mla-mahesh-tenginakai/ ಜಗದ್ಗುರು ಡಾ.ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳ ಮಾತನಾಡಿ, ನಾಡಿನ ಮಠಗಳಲ್ಲಿ ಒಂದಾದ ಮೂರು ಸಾವಿರ ಮಠದಲ್ಲಿ ಬಸವೇಶ್ವರ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ ಬಸವೇಶ್ವರರ ಅನುಯಾಯಿಗಳು ಭಾಗವಹಿಸಬೇಕು ಎಂದರು. ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷೆ ಗಿರಿಜಾ ಎಸ್. ಹೂಗಾರ ಮಾತನಾಡಿ, ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದು ಇಂತಹ ಕಾರ್ಯಕ್ರಮಗಳು ನಾಡಿನ ಜನತೆಗೆ ಶ್ರೀ ಬಸವೇಶ್ವರರ ಕಾಲಾವಧಿ ಶರಣರ ತತ್ವ ವಚನಗಳು ಇನ್ನಷ್ಟು ತಿಳಿಯವಂತಹ ಆಗಬೇಕು ಎಂದರು. ಮಹಿಳೆಯರಿಂದ ಮತ್ತು…
ಹುಬ್ಬಳ್ಳಿ:ಸಿಎಂ ಸಿದ್ದರಾಮನವರಿಂದ ಎಎಸ್ ಪಿ ಮೇಲೆ ಮ್ಯಾನ್ ಹ್ಯಾಡಲಿಂಗ್ ಯತ್ನ ಮಾಡಿದ್ದು ಸರಿಯಾದ ಕ್ರಮವಲ್ಲ ಇದೊಂದು ನಾಚೀಕೇಡು ಸಂಗತಿ ಆಗಿದೆ ಎಂದಿ ಶಾಸಕ ಮಹೇಶ ಟೆಂಗಿನಕಾಯಿ ಕಳವಳ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. https://ainkannada.com/new-commissioner-enters-bbmp-government-transfers-tushar-girinath/ ಅನೇಕ ಕಾರ್ಯಕ್ರಮಗಳಲ್ಲಿ ಇಂತಹ ಕಪ್ಪು ಬಟ್ಟೆಗಳನ್ನ ಪ್ರದರ್ಶನ ಮಾಡಲಾಗಿದ್ದುಅನೇಕ ಕಾರ್ಯಕ್ರಮಗಳಲ್ಲಿ ಪೊಲೀಸ್ ಅಧಿಕಾರಿಗಳು ಕರ್ತವ್ಯ ಮಾಡತಾ ಇರುತ್ತಾರೆ ಈ ರೀತಿ ಮಾಡುವದು ಎಷ್ಟು ಸರಿ ಇದರ ಜೊತೆಗೆ ಅನೇಕ ಕಾರ್ಯಕ್ರಮಗಳಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ನವರು ಕಪ್ಪು ಬಟ್ಟಿ ಪ್ರದರ್ಶನ ಮಾಡಿದ್ದಾರೆ. ವೇದಿಕೆಗೆ ಪೊಲೀಸ್ ಅಧಿಕಾರಿ ಕರೆಸಿಕೊಂಡು ಹಲ್ಲೆಗೆ ಮುಂದಾಗಿರುವುದು ಒಳ್ಳೆಯ ಲಕ್ಷಣವಲ್ಲ.ಪೊಲೀಸ್ ಅಧಿಕಾರಿಗಳ ನೈತಿಕ ಸ್ಥೈರ್ಯ ಏನಾಗುತ್ತದೆ ನಾಳೆ ಏನಾದರೂ ಅನಾಹುತ ಆದರೆ ಪೊಲೀಸ್ ಬರದೇ ಇದ್ದರೆ ಯಾರು ಇದರ ಹೊಣೆ ತೆಗೆದುಕೊಳ್ಳುತ್ತಾರೆ, ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದವರು ಇದು ಮಾಡುವುದು ಸರಿಯಲ್ಲಯಾರೇ ಏನೇ ಮಾಡಿದರು ಅವರನ್ನ ಕರೆದು ಹೊರಗೆ ಹಾಕಿ ಅಂತಾ ಹೇಳಬೇಕು ಎಂದರು. ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಹುಡುಕಿ…
ಬೆಂಗಳೂರು:- ಬಿಬಿಎಂಪಿ ಮುಖ್ಯ ಆಯುಕ್ತ ಹುದ್ದೆಯಿಂದ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. https://ainkannada.com/dead-body-of-male-tiger-found-in-a-decomposed-state/ ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿದೆ. ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತರಾಗಿ ನೇಮಕ ಮಾಡುವ ಮೂಲಕ ಹೆಚ್ಚುವರಿ ಹೊಣೆ ನೀಡಲಾಗಿದೆ. ತುಷಾರ್ ಗಿರಿನಾಥ್ ಅವರು ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಖ್ಯಸ್ಥರಾಗಿದ್ದರು. ತುಷಾರ್ ಗಿರಿನಾಥ್ ಅವರು ಎರಡೂವರೆ ವರ್ಷಗಳ ಕಾಲ ಬಿಬಿಎಂಪಿಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಚಾಮರಾಜನಗರ:- ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಓಂಕಾರ ವಲಯದ ಶ್ರೀಕಂಠಪುರ ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡು ಹುಲಿ ಮೃತದೇಹ ಪತ್ತೆಯಾಗಿರುವ ಘಟನೆ ಜರುಗಿದೆ. https://ainkannada.com/bomb-blast-pakistan-peace-committee-office-gutted-7-killed/ ಸುಮಾರು 8 ರಿಂದ 9 ವರ್ಷದ ಗಂಡು ಹುಲಿ ಇದಾಗಿದೆ ಎನ್ನಲಾಗಿದೆ. ವಾಚರ್, ಬೀಟ್ ಫಾರೆಸ್ಟ್ ಅಧಿಕಾರಿಗಳ ಕಣ್ಣಿಗೆ ಹುಲಿ ಕಳೇಬರ ಬಿದ್ದಿದೆ. ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಎನ್ಟಿಸಿಎ ಗೈಡ್ಲೈನ್ಸ್ ಅನ್ವಯ ಹುಲಿಯ ಅಂತ್ಯಕ್ರಿಯೆಯನ್ನು ಅರಣ್ಯಾಧಿಕಾರಿಗಳು ನಡೆಸಿದ್ದಾರೆ.