ಚಾಮರಾಜನಗರ:- ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಓಂಕಾರ ವಲಯದ ಶ್ರೀಕಂಠಪುರ ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡು ಹುಲಿ ಮೃತದೇಹ ಪತ್ತೆಯಾಗಿರುವ ಘಟನೆ ಜರುಗಿದೆ. https://ainkannada.com/bomb-blast-pakistan-peace-committee-office-gutted-7-killed/ ಸುಮಾರು 8 ರಿಂದ 9 ವರ್ಷದ ಗಂಡು ಹುಲಿ ಇದಾಗಿದೆ ಎನ್ನಲಾಗಿದೆ. ವಾಚರ್, ಬೀಟ್ ಫಾರೆಸ್ಟ್ ಅಧಿಕಾರಿಗಳ ಕಣ್ಣಿಗೆ ಹುಲಿ ಕಳೇಬರ ಬಿದ್ದಿದೆ. ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಎನ್ಟಿಸಿಎ ಗೈಡ್ಲೈನ್ಸ್ ಅನ್ವಯ ಹುಲಿಯ ಅಂತ್ಯಕ್ರಿಯೆಯನ್ನು ಅರಣ್ಯಾಧಿಕಾರಿಗಳು ನಡೆಸಿದ್ದಾರೆ.
Author: AIN Author
ಇಸ್ಲಾಮಾಬಾದ್:- ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿರುವ ಶಾಂತಿ ಸಮಿತಿಯ ಕಚೇರಿಯ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ. https://ainkannada.com/heavy-rains-are-likely-in-karnataka-for-the-next-5-days-where-is-it/ ಸ್ಫೋಟದ ತೀವ್ರತೆಗೆ ಕಚೇರಿಯೇ ಧ್ವಂಸವಾಗಿದೆ. ಘಟನೆಯಲ್ಲಿ ಗಾಯಗೊಂಡ 16 ಮಂದಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈವರೆಗೆ ಯಾವುದೇ ಗುಂಪು ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ. ಮಾಹಿತಿ ಪಡೆದ ಬಳಿಕ ಸ್ಥಳೀಯ ರಕ್ಷಣಾ ಪಡೆಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಇನ್ನೂ ಅವಶೇಷಗಳ ಅಡಿ ಜನ ಸಿಲುಕಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಸದ್ಯ ಆರ್ಥಿಕವಾಗಿ ಈಗಾಗಲೇ ತತ್ತರಿಸಿ ಹೋಗಿರುವ ಪಾಕಿಸ್ತಾನದ ಮೇಲೆ ಒಂದು ಕಡೆಯಿಂದ ಬಲೂಚಿಸ್ತಾನದ ಪ್ರತ್ಯೇಕತಾವಾದಿಗಳು ಮತ್ತೊಂದು ಕಡೆಯಿಂದ ತಾಲಿಬಾನ್ ಕಡೆಯಿಂದ ದಾಳಿ ನಡೆಯುತ್ತಿದೆ. ಬಲೂಚಿಸ್ತಾನ, ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ – ಬಲೂಚಿಸ್ತಾನ ಲಿಬರೇಷನ್ ಆರ್ಮಿ ಬಂಡುಕೋರರು ಸೇನೆಯನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿ ನಡೆಸುತ್ತಲೇ ಇದ್ದಾರೆ. ಇದರಿಂದ ಭಾರೀ ಸಂಖ್ಯೆಯಲ್ಲಿ ಸೈನಿಕರು ಮೃತಪಟ್ಟಿದ್ದು, ಸಾಮೂಹಿಕ ರಾಜೀನಾಮೆಗೆ ಮುಂದಾಗುತ್ತಿದ್ದಾರೆ
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/ipl-2025-gujarat-win-over-rajasthan/ ಕರ್ನಾಟಕದ ಒಳನಾಡು ಅಂದರೆ ವಿಜಯನಗರ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಕೋಲಾರದ ಮುಳಬಾಗಿಲು, ಬಂಗಾರಪೇಟೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಂತೆಯೇ ಚಿತ್ರದುರ್ಗದ ಹೊಳಲ್ಕೆರೆ, ಚಳ್ಳಕೆರೆ, ಹಿರಿಯೂರು ಮತ್ತು ಹೊಸದುರ್ಗದಲ್ಲಿ ಚದುರಿದಂತೆ ಮಳೆಯಾಗಲಿದ್ದು, ಚಿತ್ರದುರ್ಗ ನಗರದಲ್ಲಿ ಒಣಹವೆ ಮುಂದುವರೆಯಲಿದೆ ಎನ್ನಲಾಗಿದೆ. ಉಳಿದಂತೆ ಉತ್ತರ ಕರ್ನಾಟಕ ಗದಗ, ಕೊಪ್ಪಳ, ಬಳ್ಳಾರಿ, ಹಾವೇರಿ ಯಲ್ಲಿ ಸಾಧಾರಣ ಮಳೆ ಜೊತೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಬೆಂಗಳೂರು ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಏಪ್ರಿಲ್ 30 ಮತ್ತು ಮೇ 01, 2025 ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ…
ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಭರ್ಜರಿಯಾಗಿ ಗೆದ್ದುಕೊಂಡಿದೆ. https://ainkannada.com/this-pile-is-unable-to-work-on-one-side-the-future-of-tuesdays-29-april-2025/ ರಾಜಸ್ಥಾನ ತಂಡಕ್ಕೆ ಪ್ಲೇಆಫ್ ಆಸೆ ಇನ್ನೂ ಜೀವಂತವಾಗಿದೆ. ಗುಜರಾತ್ ತಂಡವನ್ನು ರಾಜಸ್ಥಾನ 8 ವಿಕೆಟ್ಗಳಿಂದ ಸೋಲಿಸಿದೆ. ಈ ಅಮೋಘ ಗೆಲುವಿನ ಹೀರೋ 14 ವರ್ಷದ ವೈಭವ್ ಸೂರ್ಯವಂಶಿ ದಾಖಲೆಯ ಶತಕ ಸಿಡಿಸಿ ಸಂಭ್ರಮಿಸಿದರು ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 209 ರನ್ ಗಳಿಸಿತು. ಈ ಬೃಹತ್ ಗುರಿ ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ ಉತ್ತಮ ಆರಂಭದ ಬಲದಿಂದ ಕೇವಲ 15.5 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿ ಗೆಲುವು ಸಾಧಿಸಿತು. ಗುಜರಾತ್ ಟೈಟಾನ್ಸ್ ತಂಡ ನೀಡಿದ 210 ರನ್ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ತಂಡವು ಅದ್ಭುತ ಆರಂಭವನ್ನು ಪಡೆಯಿತು. ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಹಸಿದ ಸಿಂಹಗಳಂತೆ ಗುಜರಾತ್ ಮೇಲೆ…
ಸೂರ್ಯೋದಯ – 5:54 ಬೆ. ಸೂರ್ಯಾಸ್ತ – 6:32 ಸಂಜೆ. ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ವೈಶಾಖ ಮಾಸ, ತಿಥಿ – ಬಿದಿಗೆ ನಕ್ಷತ್ರ – ಕೃತ್ತಿಕೆ ಯೋಗ – ಸೌಭಾಗ್ಯ ಕರಣ – ಬಾಲವ *ಮಳೆ ನಕ್ಷತ್ರ :ಭರಣಿ* ರಾಹು ಕಾಲ – 03:00 ದಿಂದ 04:30 ವರೆಗೆ ಯಮಗಂಡ – 09:00 ದಿಂದ 10:30 ವರೆಗೆ ಗುಳಿಕ ಕಾಲ – 12:00 ದಿಂದ 01:30 ವರೆಗೆ ಬ್ರಹ್ಮ ಮುಹೂರ್ತ – 4:18 ಬೆ. ದಿಂದ 5:06 ಬೆ. ವರೆಗೆ ಅಮೃತ ಕಾಲ – 4:39 ಸಂಜೆ.ದಿಂದ 6:04 ಸಂಜೆ. ವರೆಗೆ ಅಭಿಜಿತ್ ಮುಹುರ್ತ – 11:48 ಬೆ. ದಿಂದ 12:38 ಮ. ವರೆಗೆ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob.…
ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆರ್ಸಿಬಿಯ ಮಾಜಿ ಮಾಲೀಕ ವಿಜಯ್ ಮಲ್ಯ ಅವರು ಕೊಂಡಾಡಿದ್ದಾರೆ. https://ainkannada.com/chief-minister-siddaramaiah-seems-to-be-distracted-jagdish-shetter/ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಈ ಸೀಸನ್ನಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ಅನ್ನು ತನ್ನದಾಗಿಸಿಕೊಂಡರೆ ಈ ಸೀಸನ್ನಲ್ಲಿ ಇದುವರೆಗೆ ಅತಿ ಹೆಚ್ಚು ವಿಕೆಟ್ಗಳನ್ನು ಪಡೆಯುವ ಮೂಲಕ ವೇಗದ ಬೌಲರ್ ಜೋಶ್ ಹೇಜಲ್ವುಡ್ ಪರ್ಪಲ್ ಕ್ಯಾಪ್ ತನ್ನದಾಗಿಸಿಕೊಂಡರು. ಒಂದೇ ಪಂದ್ಯದಲ್ಲಿ ಮೂರು ಮೂರು ಸಾಧನೆ ಮಾಡಿರುವ ಆರ್ಸಿಬಿ ತಂಡಕ್ಕೆ ಇದೀಗ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಶುಭ ಹಾರೈಸಿದಲ್ಲದೆ, ಎಲ್ಲಾ ಆಟಗಾರರನ್ನು ಅಭಿನಂದಿಸಿದ್ದಾರೆ. ಡೆಲ್ಲಿ ವಿರುದ್ಧ 6 ವಿಕೆಟ್ಗಳಿಂದ ಗೆದ್ದ ಆರ್ಸಿಬಿ ತಂಡವನ್ನು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಜಯ್ ಮಲ್ಯ 36 ಪದಗಳಲ್ಲಿ ಹಾಡಿ ಹೊಗಳಿದ್ದಾರೆ ತಮ್ಮ ಎಕ್ಸ್ ಖಾತೆಯಲ್ಲಿ ಆರ್ಸಿಬಿ ಆಟಗಾರರ ಪ್ರದರ್ಶನದ ಬಗ್ಗೆ ಬರೆದುಕೊಂಡಿರುವ ಮಲ್ಯ, ‘ಡೆಲ್ಲಿ…
ದೆಹಲಿ:- ಸಿಎಂ ಸಿದ್ದರಾಮಯ್ಯ ಸಾರ್ವಜನಿಕವಾಗಿ ಮಾನಸಿಕ ಸ್ಥಿಮಿತ ಕಳೆದುಕೊಳ್ಳುತ್ತಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. https://ainkannada.com/rice-bay-in-the-cooker-so-the-story-you-need-to-read/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ, ಅವರು ಸಾರ್ವಜನಿಕವಾಗಿ ಮಾನಸಿಕ ಸ್ಥಿಮಿತ ಕಳೆದಕೊಂಡು ಒಬ್ಬ ಜವಾಬ್ದಾರಿಯುತ ಪೊಲೀಸ್ ಆಧಿಕಾರಿಯ ಮೇಲೆ ರೇಗಾಡುವುದು, ಚೀರಾಡುವುದು ಅವರ ಸ್ಥಾನಕ್ಕೆ ಶೋಭೆ ತರೋದಿಲ್ಲ ಎಂದರು. ಬೆಳಗಾವಿಯಲ್ಲಿ ಅವರು ಭಾಷಣ ಮಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಶಾಂತಿಯುತವಾಗಿ ಪ್ರತಿಭಟನೆ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ, ಆ ಸಂದರ್ಭವನ್ನು ಅವರು ಹಿಂದಿನ ಮುಖ್ಯಮಂತ್ರಿ ಜೆಹೆಚ್ ಪಟೇಲ್ ಅವರ ಹಾಗೆ ಸ್ಥಿತಪ್ರಜ್ಞರಾಗಿ ಸ್ವೀಕರಿಸಬೇಕಿತ್ತು, ಅದು ಬಿಟ್ಟು ಒಬ್ಬ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗೆ ಕಪಾಳ ಮೋಕ್ಷ ಮಾಡಲು ಮುಂದಾಗಿದ್ದು ಸಿಎಂ ಮಾನಸಿಕ ಸಂತುಲನ ಕಳೆದುಕೊಳ್ಳುತ್ತಿರುವುದಕ್ಕೆ ದೊಡ್ಡ ಸಾಕ್ಷಿಯಾಗಿದೆ ಎಂದರು.
ಭಾರತೀಯ ಆಹಾರಪದ್ಧತಿಯಲ್ಲಿ ಅನ್ನಕ್ಕೆ ಹೆಚ್ಚಿನ ಮಹತ್ವವಿದೆ. ವಿದೇಶಗಳಲ್ಲಿರುವಂತೆ ಮೂರೂ ಹೊತ್ತು ಸ್ಯಾಂಡ್ವಿಚ್, ಬರ್ಗರ್, ರೋಟಿಯನ್ನು ತಿನ್ನದೆ ಭಾರತೀಯರು ಹೆಚ್ಚಾಗಿ ಅನ್ನವನ್ನೇ ತಿನ್ನುತ್ತಾರೆ. ಬೆಳಗ್ಗೆ, ಮಧ್ಯಾಹ್ನ, ಸಂಜೆ ಹೊತ್ತು ಎಲ್ಲಾ ಮನೆಗಳಿಂದಲೂ ಕುಕ್ಕರ್ ವಿಶಲ್ ಕೇಳಿ ಬರುತ್ತವೆ. ಚಿತ್ರಾನ್ನ, ಮೊಸರನ್ನ, ವಾಂಗೀಬಾತ್, ಪುಲಾವ್ ಹೀಗೆ ಹೆಚ್ಚಿನ ರೆಸಿಪಿಗಳನ್ನು ತಯಾರಿಸಲು ಅನ್ನವೇ ಬೇಕಾಗಿರುವ ಕಾರಣ ಹೆಚ್ಚಿನ ಜನರು ಕುಕ್ಕರ್ನಲ್ಲಿ ಸುಲಭವಾಗಿ ಅನ್ನವನ್ನು ಬೇಯಿಸಿಕೊಳ್ಳುತ್ತಾರೆ. ಹಳ್ಳಿಗಳಲ್ಲಿ ಈಗಲೂ ಸಾಂಪ್ರದಾಯಿಕ ರೀತಿಯಲ್ಲಿ ಕಟ್ಟಿಗೆ ಒಲೆ ಉರಿಸಿ, ನೀರಿಟ್ಟು, ಅಕ್ಕಿಯನ್ನು ಹಾಕಿ ಕುದಿಸಿ ಅನ್ನವನ್ನು ತಯಾರಿಸಲಾಗುತ್ತದೆ. https://ainkannada.com/the-indian-army-can-battle-at-any-time-minister-of-pakistan/ ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ರೈಸ್ ಕುಕ್ಕರ್ಗಳ ಬಳಕೆ ದಿನೇ ದಿನೇ ಹೆಚ್ಚುತ್ತಿದೆ. ಹೌದು ಎಲ್ಲರು ಕಡಿಮೆ ಸಮಯದಲ್ಲಿ ಅನ್ನವನ್ನು ಬೇಯಿಸಿಕೊಳ್ಳಲು ಇಷ್ಟಪಡುತ್ತಾರೆ. ಹೀಗಿರುವಾಗ ಎಲೆಕ್ಟ್ರಿಕ್ ರೈಸ್ ಕುಕ್ಕರ್ಗಳಲ್ಲಿ ಕಡಿಮೆ ಸಮಯದಲ್ಲಿ ಅನ್ನ ಮಾಡಬಹುದು. ಅಡುಗೆ ಬಗ್ಗೆ ಹೆಚ್ಚು ತಿಳಿದಿಲ್ಲದವರೂ ಕೂಡ ಎಲೆಕ್ಟ್ರಿಕ್ ರೈಸ್ ಕುಕ್ಕರ್ ಬಳಸಿ ಸುಲಭವಾಗಿ ಅನ್ನ ಬೇಯಿಸಬಹುದು. ಆದರೆ ಕುಕ್ಕರ್ ನಲ್ಲಿ ಅನ್ನ ಬೇಯಿಸುವುದರಿಂದ ಕೆಲವು ಆರೋಗ್ಯ…
ಇಸ್ಲಾಮಾಬಾದ್:- ಭಾರತೀಯ ಸೇನೆ ಯಾವುದೇ ಸಮಯದಲ್ಲಾದ್ರೂ ಯುದ್ಧ ಮಾಡಬಹುದು ಎಂದು ಪಾಕ್ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಹೇಳಿದ್ದಾರೆ. https://ainkannada.com/sopa-set-godown-burned-to-fire/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಭಾರತೀಯ ಸೇನೆ ಯಾವುದೇ ಸಮಯದಲ್ಲಿ ದಾಳಿ ಮಾಡಬಹುದು. ಹಾಗಾಗು ಗಡಿಯಲ್ಲಿ ನಮ್ಮ ಪಡೆಗಳನ್ನು ಬಲಪಡಿಸಿದ್ದೇವೆ. ಏಕೆಂದರೆ ಸೇನಾ ಸಿದ್ಧತೆ ನಮಗೂ ಅನಿವಾರ್ಯವಿದೆ. ಈ ಪರಿಸ್ಥಿತಿಯಲ್ಲಿ ಕೆಲವು ಕಾರ್ಯತಂತ್ರದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಆಸಿಫ್ ತಿಳಿಸಿದ್ದಾರೆ. ಸಚಿವರ ಈ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪಸುರಿದಂತಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನೆತ್ತರು ಹರಿಸಿದ ಘಟನೆಯು ಭಯೋತ್ಪಾದನೆ ಮತ್ತು ಭಯೋತ್ಪಾದಕರ ವಿರುದ್ಧ ಇಡೀ ದೇಶವೇ ಒಗ್ಗೂಡುವಂತೆ ಮಾಡಿದೆ. ಈ ಕೃತ್ಯಕ್ಕೆ ಕಾರಣರಾದವರನ್ನ ಶಿಕ್ಷಿಸಲು ಸರ್ಕಾರ ಮಾಡುವ ಎಲ್ಲ ಪ್ರಯತ್ನಗಳಿಗೆ ಇಡೀ ದೇಶ ಬೆಂಬಲವಾಗಿ ನಿಂತಿದೆ. ದೇಶದ ಜನ, ಸಾಮಾಜಿಕ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಬಲವಾದ ಸಂದೇಶ ರವಾನಿಸಿವೆ. ಇನ್ನೂ ಪಹಲ್ಗಾಮ್ ಉಗ್ರರ ದಾಳಿ ಬಳಿಕ ಉಭಯ ರಾಷ್ಟ್ರಗಳ…
ಕೋಲಾರ :- ಆಕಸ್ಮಿಕ ಬೆಂಕಿಗೆ ಸೋಪಾ ಸೆಟ್ ಗೋಡೌನ್ ಹೊತ್ತಿ ಉರಿದ ಘಟನೆ ಕೋಲಾರ ನಗರದ ಇಲಾಹಿ ಮಸೀದಿ ಬಳಿ ಜರುಗಿದೆ. https://ainkannada.com/hogbard-to-show-sentiment-to-militants-prem-condemned-the-attack/ ಸೋಪಾ ಸೆಟ್ ಹಾಗೂ ಕುಶನ್ ತಯಾರು ಮಾಡುವ ಗೊಡಾನ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು 4 ಲಕ್ಷ ರೂಪಾಯಿ ವಸ್ತುಗಳು ಬೆಂಕಿ ಗಾಹುತಿಯಾಗಿದೆ. ಮೊಹಮ್ಮದ್ ಸರ್ದಾರ್ ಎಂಬುವರಿಗೆ ಸೇರಿದ ಗೋಡೌನ್ ಇದಾಗಿದ್ದು, ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಹರಸಹಾಸಪಟ್ಟಿದ್ದಾರೆ. ಕೋಲಾರ ಗಲ್ ಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.