ಉಗ್ರರಿಗೆ ಸೆಂಟಿಮೆಂಟ್ ತೋರಿಸಲು ಹೋಗ್ಬಾರ್ದು ಎಂದು ಉಗ್ರರ ದಾಳಿಯನ್ನು ನಟ ಪ್ರೇಮ್ ಖಂಡಿಸಿದ್ದಾರೆ. https://ainkannada.com/13-lakhs-stolen-from-a-scooter-collision-the-crime-took-place-right-in-front-of-the-bank/ ಉಗ್ರರ ದಾಳಿಯ ಕುರಿತು ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಉಗ್ರರು ನಮ್ಮ ಜನಗಳನ್ನ ಸಾಯಿಸ್ತಾರೆ ಅಂದ್ರೆ ನಾವ್ ಯುದ್ಧ ಮಾಡ್ಲೇಬೇಕು ಎಂದು ನಿರ್ದೇಶಕ ಪ್ರೇಮ್ ಪೆಹಲ್ಗಾಮ್ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಉಗ್ರರಿಗೆ ಸೆಂಟಿಮೆಂಟ್ ತೊರಿಸಲು ಹೋಗಲೇಬಾರದು. ಏನಿದ್ರೂ ಹೊಡಿ, ಕಡಿ ಅಷ್ಟೇ. ಅಮಾಯಕ ಜೀವಗಳನ್ನ ತೆಗೆದಿದ್ದಾರೆ ಅಂದ್ರೆ ಅವರನ್ನೆಲ್ಲ ಕತ್ತರಿಸಿ, ಪೀಸ್ ಮಾಡಿ ಎಸೆಯಬೇಕು ಎಂದು ಆಕ್ರೋಶ ಹೊರಹಾಕಿದರು. ಅವರದ್ದು ಹೇಡಿತನ, ಅವರ ಮೇಲೆ ಎಮೋಷನ್ಸ್ ಬೇಡ. ಕೆಲವರು ಯುದ್ಧ ಬೇಡ ಅಂತಾ ಹೇಳ್ತಾರಲ್ಲ. ಆದರೆ ಸ್ವಾಮಿ ಯುದ್ಧ ಮಾಡ್ಬೇಕು. ನಾವು ಬದುಕಬೇಕು ಅಂದ್ರೆ ಯುದ್ಧ ಮಾಡಲೇಬೇಕು. ನಮ್ಮ ಜನಗಳನ್ನ ಸಾಯಿಸ್ತಾರೆ ಅಂದ್ರೆ ನಾವು ಯುದ್ಧ ಮಾಡಬೇಕು. ಇದು ಉಗ್ರರ ಹೀನಕೃತ್ಯ ಎಂದು ಕಿಡಿಕಾರಿದರು. ಪ್ರಧಾನಿ ಮೋದಿಯವ್ರು ಇದ್ದಾರೆ. 100% ಅವರು ಇದನ್ನು ಹ್ಯಾಂಡಲ್ ಮಾಡ್ತಾರೆ. ನಮ್ಮವರು ಏನೂ ಕಮ್ಮಿ ಇಲ್ಲ. ಆ ಉಗ್ರರನ್ನು…
Author: AIN Author
ಹಾಸನ:- ಸಕಲೇಶಪುರ ಪಟ್ಟಣದ ಬಿ.ಎಂ ರಸ್ತೆಯಲ್ಲಿ ಬ್ಯಾಂಕ್ ಎದುರು ನಿಲ್ಲಿಸಿದ್ದ ಸ್ಕೂಟರ್ನ ಡಿಕ್ಕಿಯಿಂದ 13 ಲಕ್ಷ ರೂ. ನಗದನ್ನು ಖದೀಮರು ದೋಚಿರುವ ಘಟನೆ ಜರುಗಿದೆ. https://ainkannada.com/siddaramaiah-did-not-say-no-to-war-with-pakistan-basavaraja-rayareddy/ ಹಣ ಕಳೆದುಕೊಂಡ ವ್ಯಕ್ತಿಯನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ಯೋಗೇಶ್ ಅವರು ತುರ್ತು ಕಾರ್ಯದ ನಿಮಿತ್ತ ಮನೆಯಲ್ಲಿದ್ದ ಚಿನ್ನಾಭರಣವನ್ನು ನಗರದ ಬ್ಯಾಂಕ್ ಆಫ್ ಬರೋಡದಲ್ಲಿ ಗಿರವಿ ಇಟ್ಟು 13 ಲಕ್ಷ ರೂ. ಸಾಲ ಪಡೆದಿದ್ದರು. ಇನ್ನೂ ಅಗತ್ಯವಿದ್ದ ಹೆಚ್ಚುವರಿ 2.5 ಲಕ್ಷ ರೂ. ಹಣವನ್ನು ಡ್ರಾ ಮಾಡಲು ಕೆನರಾ ಬ್ಯಾಂಕ್ ಶಾಖೆಗೆ ಬಂದಿದ್ದರು. ಕೆನರಾ ಬ್ಯಾಂಕ್ನೊಳಗೆ ಹೋಗುವ ಮುನ್ನ ಈ ಮೊದಲು ತಂದಿದ್ದ 13 ಲಕ್ಷ ರೂ. ಹಣವನ್ನು ಸ್ಕೂಟರ್ನ ಡಿಕ್ಕಿಯಲ್ಲಿ ಇಟ್ಟು, ಲಾಕ್ ಮಾಡಿ ಹೋಗಿದ್ದರು. ಬ್ಯಾಂಕ್ನೊಳಗೆ ಹೋಗಿ ಬರುವಷ್ಟರಲ್ಲಿ ಕಳ್ಳರು ಡಿಕ್ಕಿಯನ್ನು ಮುರಿದು ಹಣ ದೋಚಿ ಪರಾರಿಯಾಗಿದ್ದಾರೆ ಯೋಗೇಶ್ ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಖದೀಮರಿಗೆ ಬಲೆ ಬೀಸಿದ್ದಾರೆ.
ಬೆಂಗಳೂರು:- ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಯುದ್ಧ ಪ್ರಾರಂಭ ಮಾಡಲಿ ಎಂದು ಬಸವರಾಜ ರಾಯರೆಡ್ಡಿ ಹೇಳಿಕೆ ಕೊಟ್ಟಿದ್ದಾರೆ. https://ainkannada.com/encounter-case-investigation-report-to-be-submitted-to-the-government-soon-commission-chairman-dr-sham-bhat/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ಘಟನೆ ಸೇಡು ತೀರಿಸಿಕೊಳ್ಳಲು ಕೂಡಲೇ ಕೇಂದ್ರ ಸರ್ಕಾರ ಯುದ್ಧ ಪ್ರಾರಂಭ ಮಾಡಬೇಕು. ಅಲ್ಲದೇ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಾದ ಅಶೋಕ್, ವಿಜಯೇಂದ್ರ ಸಿಎಂ ವಿರುದ್ಧದ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಅವರು ಯುದ್ಧ ಬೇಡ ಅಂತ ಹೇಳಿಲ್ಲ. ಅವರ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ. ಇದರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಅಶೋಕ್, ವಿಜಯೇಂದ್ರ ಅವರು ಸಿಎಂ ವಿರುದ್ಧ ಮಾತನಾಡೋದು ಸರಿಯಲ್ಲ. ಕೂಡಲೇ ಇಬ್ಬರು ತಮ್ಮ ಹೇಳಿಕೆ ವಾಪಸ್ ಪಡೆಯಬೇಕು ಎಂದು ಆಗ್ರಹ ಮಾಡಿದರು. ಸಿಎಂ ಅವರ ಹೇಳಿಕೆ ಪಾಕಿಸ್ತಾನದಲ್ಲಿ ಬಂದರೆ ಅದಕ್ಕೂ ನಮಗೂ ಸಂಬAಧವಿಲ್ಲ. ಸಿದ್ದರಾಮಯ್ಯ ಯಾವತ್ತೂ ದೇಶದ ವಿರುದ್ಧ ಮಾತಾಡಿಲ್ಲ ಎಂದು ಸಿಎಂ ಪರ ಬ್ಯಾಟ್ ಬೀಸಿದರು. ಕೇಂದ್ರ ಸರ್ಕಾರ ಕೂಡಲೇ ಪಾಕಿಸ್ತಾನದ ವಿರುದ್ದ ಯುದ್ಧ…
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಎನಕೌಂಟರ್ ಪ್ರಕರಣದ ಬಗ್ಗೆ ನಮಗಿಂತ ಮಾಧ್ಯಮದವರಿಗೆ ಹೆಚ್ಚಿನ ಮಾಹಿತಿ ಇದೆ. ಪೊಲೀಸ್ ಕಮೀಷನರ್ ರಿಪೋರ್ಟ್ ಆದರಿಸಿ ಇಲ್ಲಿ ಬಂದಿದ್ದೇವೆ. ಎನಕೌಂಟರ್ ಆದ ಸಂದರ್ಭದಲ್ಲಿ ನಾವು ಬರುವುದು ಸಹಜ. ಇಲ್ಲಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಶೀಘ್ರವಾಗಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್ ಹೇಳಿದರು. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು,ಎನಕೌಂಟರ್ ಬಗ್ಗೆ ನಾವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬಂದಿದ್ದೇವೆ. ನ್ಯಾಷನಲ್ ಹ್ಯೂಮನ್ ರೈಟ್ಸ್ ನಲ್ಲಿ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಈ ನಿಟ್ಟಿನಲ್ಲಿ ನಾವು ಕೂಡ ಕನ್ಪರ್ಮ್ ಮಾಡಿಕೊಂಡು ನಾವು ಇಲ್ಲಿಗೆ ಬಂದಿದ್ದೇವೆ. ಪ್ರಕರಣ ನಡೆದಿರುವ ಸ್ಥಳದಿಂದ ಆರಂಬಿಸಿ ಈಗ ಎನಕೌಂಟರ್ ಸ್ಥಳ ಕೂಡ ಪರಿಶೀಲನೆ ನಡೆಸಿದ್ದೇವೆ ಎಂದರು. ಈ ಪ್ರಕರಣದಲ್ಲಿ ಠಾಣೆ ಇನ್ಸ್ಪೆಕ್ಟರ್ ಕಂಪ್ಲೆಂಟರ್ ಆಗಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇವೆ. ನಮ್ಮ ವ್ಯಾಪ್ತಿಗೆ ಬರುವುದು ಎನಕೌಂಟರ್ ವಿಷಯ ಈ ಹಿನ್ನೆಲೆಯಲ್ಲಿ…
ಮಾಡ್ರೆನ್ ಲೈಫ್ ಸ್ಟೈಲ್ನಿಂದಾಗಿ ಅನೇಕ ಮಂದಿ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವರಿಗೆ ವಯಸ್ಸು ಇನ್ನೂ ಕೂಡ 20-25 ಕೂಡಆಗಿರುವುದಿಲ್ಲ. ಆಗಲೇ ತಲೆ ಕೂದಲಿನಲ್ಲಿ ಅಲ್ಲಲ್ಲಿ ಬಿಳಿ ಕೂದಲು ಕಾಣಿಸುತ್ತಿರುತ್ತದೆ. ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಕೂದಲಿಗೆ ಎಣ್ಣೆ ಹಚ್ಚುವುದು ಮುಖ್ಯ. https://ainkannada.com/ipl-2025-which-rcb-has-written-a-new-history-in-ipl-history/ ಕೂದಲಿನಲ್ಲಿ ಮೆಲನಿನ್ ಅಂಶ ಕಡಿಮೆ ಆಗಲು ಹಲವು ಕಾರಣಗಳಿವೆ. ಅದರಲ್ಲಿ ಬದಲಾದ ಜೀವನಶೈಲಿ, ಕಳಪೆ ಆಹಾರಪದ್ದತಿ, ಒತ್ತಡಭರಿತ ಜೀವನಶೈಲಿ ಎಲ್ಲವೂ ಕೂದಲಿನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಉಂಟು ಮಾಡುತ್ತವೆ. ಕೆಲವು ಮನೆಮದ್ದುಗಳನ್ನು ಬಳಸಿ ಬಿಳಿ ಕೂದಳನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು. ಅದರಲ್ಲೂ ಬೇಸಿಗೆಯಲ್ಲಿ ದಾಸವಾಳ ಮತ್ತು ಮೊಸರಿನ ಪ್ಯಾಕ್ ನಿಂದ ಬಿಳಿ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತದೆ. ಮೊಸರಿನಲ್ಲಿ ವಿಟಮಿನ್ ಬಿ 12 ಉತ್ತಮ ಪ್ರಮಾಣದಲ್ಲಿದೆ. ಇದು ಕೂದಲಿಗೆ ಉತ್ತಮ ಕಂಡಿಷನರ್ ಆಗಿದ್ದು, ಕೂದಲನ್ನು ಬುಡದಿಂದ ಗಟ್ಟಿಯಾಗಿಸಿ ಹೊಳಪನ್ನು ನೀಡುತ್ತದೆ. ದಾಸವಾಳದ ಹೂ ಹಾಗೂ ಎಲೆಗಳಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಗುಣಲಕ್ಷಣಗಳು ಕೂದಲು ಬೆಳ್ಳಗಾಗುವುದನ್ನು ತಡೆಯಲು ಸಹಾಯಕವಾಗಿದೆ. ಅಲ್ಲದೆ, ಬಿಳಿ ಕೂದಲನ್ನು…
2025ರ ಐಪಿಎಲ್ ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ತೋರುತ್ತಿದೆ. ಆರಂಭದಲ್ಲೇ ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್ ಮತ್ತು ನಾಯಕ ರಜತ್ ಪಾಟಿದಾರ್ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆರ್ಸಿಬಿಗೆ ನೆರವಾಗಿದೆ. https://ainkannada.com/rain-news-heavy-rain-in-these-districts-of-karnataka-for-the-next-four-to-five-days/ ಡಿಸಿ ನೀಡಿದ್ದ 163 ರನ್ಗಳ ಗುರಿಯನ್ನು ಇನ್ನು 9 ಎಸೆತ ಬಾಕಿ ಇರುವಾಗಲೇ ಗೆಲುವು ಸಾಧಿಸಿತು. ಈ ಮೂಲಕ, ಟಿ20 ಲೀಗ್ನ 18ನೇ ಆವೃತ್ತಿಯಲ್ಲಿ ಆರ್ಸಿಬಿ ತವರಿನಿಂದ ಹೊರಗೆ ಸತತ 6ನೇ ಜಯವನ್ನು ದಾಖಲಿಸಿದೆ. ಲೀಗ್ ಇತಿಹಾಸದಲ್ಲಿಯೇ ಈ ಜಯ ಸಾಧಿಸಿದ ಮೊದಲ ತಂಡ ಎಂಬ ಖ್ಯಾತಿ ಪಡೆದಿದೆ. ಈ ಆವೃತ್ತಿಯಲ್ಲಿ ಆರ್ಸಿಬಿ ತವರಿನಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಆದರೆ, ತವರಿನಿಂದ ಹೊರಗೆ ಆಡಿರುವ ಎಲ್ಲ ಪಂದ್ಯಗಳನ್ನು ಗೆಲ್ಲುವ ಮೂಲಕ ದಾಖಲೆ ಬರೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಆರ್ಸಿಬಿ 6 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ದೆಹಲಿಯ…
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/ipl-2025-cap-namde-table-top-namde-how-kohli-fos/ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗಲಿದೆ ಇನ್ನೂ ರಾಜ್ಯದಲ್ಲಿ ಏಪ್ರಿಲ್ ತಿಂಗಳ ಬಿಸಿಲಿನ ತಾಪಮಾನಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ವಿಪರೀತ ತಾಪಮಾನ ತಗ್ಗಿಸಲು ರಾಜ್ಯದ ಕೆಲವು ಕಡೆ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದೆ. ಈ ಮಳೆ ಇನ್ನೂ ನಾಲ್ಕೈದು ದಿನ ಕೆಲ ಜಿಲ್ಲೆಯಲ್ಲಿ ಅರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಪ್ರಸಕ್ತ ಐಪಿಎಲ್ ರೋಚಕತೆ ಹೆಚ್ಚಿಸಿದ್ದು, ಈಗಾಗಲೇ ಎಲ್ಲ ತಂಡಗಳು ಕನಿಷ್ಠ 8 ಪಂದ್ಯಗಳನ್ನು ಆಡಿವೆ. ಈ ವೇಳೆ ಸ್ಟಾರ್ ಆಟಗಾರರು ತಮ್ಮ ಸ್ಥಿರ ಪ್ರದರ್ಶನದ ಬಲದಿಂದ ತಂಡದ ಗೆಲುವಿನಲ್ಲಿ ಮಿಂಚುತ್ತಿದ್ದಾರೆ. ಈ ಆಟಗಾರರ ವೈಯಕ್ತಿಕ ಸಾಧನೆಯ ಮೇಲೆ ಅಭಿಮಾನಿಗಳ ಕಣ್ಣು ನೆಟ್ಟಿರಲಿದೆ. https://ainkannada.com/fatal-road-accident-car-hits-container-five-dead-two-seriously-injured/ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಹಲವು ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಅದರಲ್ಲಿ ಎಲ್ಲರ ಕಣ್ಣುಗಳು ಆ ಎರಡು ಪ್ರಶಸ್ತಿಯ ಮೇಲೆ ನೆಟ್ಟಿರಲಿವೆ. ಅವುಗಳೆಂದರೆ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್. ಈ ಎರಡೂ ಕ್ಯಾಪ್ಗಳನ್ನು ಪಡೆದು ರಾಜನಂತೆ ಮೆರೆಯಲು ಆಟಗಾರರು ಪ್ಲ್ಯಾನ್ ಮಾಡಿಕೊಂಡಿರುತ್ತಾರೆ. ಆರೆಂಜ್ ಕ್ಯಾಪ್ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರಿಗೆ ನೀಡಲಾಗುತ್ತದೆ. ಇನ್ನು ಗರಿಷ್ಠ ವಿಕೆಟ್ ಪಡೆದ ಪ್ಲೇಯರ್ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಆರೆಂಜ್ ಕ್ಯಾಪ್ ರೇಸ್ನಲ್ಲಿರುವ ಮೂವರು ಆಟಗಾರರು ಕಣ್ಣು ನೆಟ್ಟಿದ್ದಾರೆ. 2025ರ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಆಡಿರುವ 10 ಪಂದ್ಯದಲ್ಲಿ 7 ಪಂದ್ಯವನ್ನು ಗೆದ್ದಿರುವ ಆರ್…
ಚಾಮರಾಜನಗರ : ಮಂಟೇಸ್ವಾಮಿ ಪರಂಪರೆಯು ಕಾಯಕ ಯೋಗಿಗಳ ಶಕ್ತಿಯಾಗಿದ್ದು, ಸಮಾಜದಲ್ಲಿ ಜನರು ಶಾಂತಿ, ಸಮಾನತೆ ಹಾಗೂ ಸಹಬಾಳ್ವೆಯಲ್ಲಿ ಬದುಕುವ ಸಂಕೇತವಾಗಿದ್ದಾರೆ. ಹಾಗಾಗಿ ಆ ಪರಂಪರೆಯು ಶ್ರೀಮಂತವಾಗಿರಬೇಕು ಎಂದು ಹರವೆ ಮಠದ ಸರ್ಪಭೂಷಣ ಸ್ವಾಮೀಜಿಗಳು ಹೇಳಿದರು. ಚಾಮರಾಜನಗರ ನಗರಸಭಾ ವ್ಯಾಪ್ತಿಯ ಕರಿನಂಜನಪುರ ಬಡಾವಣೆಯಲ್ಲಿ ಇಂದು ಶ್ರೀ ಮಂಟೇಸ್ಚಾಮಿ ದೇವರಗುಡ್ಡರ ದೇವಸ್ಥಾನದ ಸೇವಾ ಟ್ರಸ್ಟಿನಿಂದ ಶ್ರೀ ಮಂಟೇಸ್ವಾಮಿ ದೇವಸ್ಥಾನದ ಭೂಮಿಪೂಜೆ ಕಾರ್ಯ ನೆರವೇರಿಸಿ ಶ್ರೀಗಳು ಮಾತನಾಡಿದ ಅವರು, ಪ್ರಸ್ತುತ ಮಂಟೇಸ್ವಾಮಿ ಗುಡ್ಡರು ಮಂಟೇಸ್ಚಾಮಿ ಪರಂಪರೆಯನ್ನು ಉಳಿಸಿ ಬೆಳಿಸಿಕೊಂಡು ಹೋಗುತ್ತಿದ್ದಾರೆ. ಸಮಾಜದ ಎಲ್ಲಾ ವರ್ಗದ ಜನರು ಒಗ್ಗಟ್ಟಿನಿಂದ ಕಾಯಕ ನಿಷ್ಟೆಯಲ್ಲಿ ತೊಡಗುವಂತೆ ಆಶೀರ್ವದಿಸಿದರು. https://ainkannada.com/fire-accident-at-a-factory-in-an-industrial-area/ ಕಾರ್ಯಕ್ರಮದಲ್ಲಿ ಮಂಟೇಸ್ವಾಮಿ ದೇವಾಲಯಕ್ಕೆ ಸ್ಥಳ ದಾನ ಮಾಡಿದ ಶಿವಮಲ್ಲಪ್ಪ ಹಾಗೂ ಸುಬ್ರಹ್ಮಣ್ಯ ರವರನ್ನು ಸನ್ಮಾನಿಸಲಾಯಿತು. ಈ ವೇಳೆಯಲ್ಲಿ ಚಂದ್ರಶೇಖರ್, ನಗರಸಭಾ ಸದಸ್ಯ ಮನೋಜ್ಪಾಟೀಲ್, ಮಲ್ಲೇಶಪ್ಪ, ಲಿಂಗಪ್ಪ, ಕುಮಾರ್, ನಾಗರಾಜು ಷಡಕ್ಷರಸ್ವಾಮಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕೋಲಾರ : ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ನಿಗಮದ ಕೈಗಾರಿಕಾ ವಲಯದಲ್ಲಿರುವ ಸೌತ್ ಫೀಲ್ಡ್ ಪೈಂಟ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ. ಆದರೆ ಈ ಅವಘಡದಲ್ಲಿ ಯಾವುದೇ ಜೀವ ಹಾನಿ ಆದ ವರದಿಯಾಗಿಲ್ಲ. ಆದರೆ ಕೋಟ್ಯಾಂತರ ರೂಪಾಯಿ ಬೆಲೆಯ ದಾಸ್ತಾನು ಹಾಗೂ ಉಪಕರಣಗಳು ಬೆಂಕಿಗಾಹುತಿಯಾಗಿದೆ. https://ainkannada.com/bear-roaming-in-residential-area-people-in-panic/ ಕೋಲಾರ ಮತ್ತು ಮಾಲೂರಿನಿಂದ ಅಗ್ನಿಶಾಮಕ ದಳದ ವಾಹನಗಳು ಕೂಡಲೇ ಸ್ಥಳಕ್ಕೆ ದೌಡಾಯಿಸಿ, ಬೆಂಕಿಯನ್ನು ನಂದಿಸುವ ಪ್ರಯತ್ನದಲ್ಲಿ ತೊಡಗಿವೆ. ಬೆಂಕಿಯಿಂದಾಗಿ ಕೈಗಾರಿಕಾ ವಲಯದಲ್ಲಿ ಆಕಾಶದೆತ್ತರಕ್ಕೆ ದಟ್ಟವಾದ ಹೊಗೆ ಆವರಿಸಿಕೊಂಡಿದೆ.