Author: AIN Author

ಹುಬ್ಬಳ್ಳಿ: ದೇಶದಲ್ಲಿ ಎಲ್ಲಿಯವರೆಗೆ ಇವರೆಲ್ಲಾ ಇರುತ್ತಾರೆ ಅಲ್ಲಿಯವರೆಗೆ ಭಾರತದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಿಂದೂಗಳ ಪಕ್ಷವೇ ಅಲ್ಲ. ಅದು ಹುಟ್ಟಿದ್ದೇ ಮುಸ್ಲಿಂರಿಗಾಗಿ. ಎಲ್ಲಿಯವರಗೆ ದೇಶದಲ್ಲಿ ಮುಸ್ಲಿಂರು ಮತ್ತು ತಾಯಿಗಂಡರು ಇರುತ್ತಾರೋ ಅಲ್ಲಿವರೆಗೆ ಅವರು ಕಲ್ಲು ಹೊಡೆಯೋರೆ. ಸಿಎಂ ಸಿದ್ದರಾಮಯ್ಯ ಪಾಕಿಸ್ತಾನ ಏಜೆಂಟ್ ಇದ್ದಂತೆ. ಅವರು ಬೇಕಾದರೆ ಪಾಕಿಸ್ತಾನಕ್ಕೆ ಹೋಗಿ ಪ್ರಧಾನಿ ಆಗಲಿ. ಯಾರು ಬೇಡ ಅಂತಾರೇ ಎಂದು ಹರಿಹಾಯ್ದರು. ಸಂತೋಷ ಲಾಡ್ ಮೋದಿ ಮುಂದೆ ಬಚ್ಚಾ. ಅವರ ಬಗ್ಗೆ ಹೀಯಾಳಿಸಿ ಮಾತನಾಡಿದರೆ ಸೋನಿಯಾ, ರಾಹುಲ್ ಗಾಂಧಿ ಖುಷಿಯಾಗುತ್ತಾರೆ. ತನ್ನ ಮಂತ್ರಿ ಸ್ಥಾನ ಉಳಿಯುತ್ತೆ ಅಂತ ಆ ರೀತಿ ಮಾತನಾಡುತ್ತಿದ್ದಾರೆ. ಪ್ರಧಾನಿ ಮೋದಿ ಬಗ್ಗೆ ಮಾತನಾಡಲು ಕಾಂಗ್ರೆಸ್‌ಗೆ ನೈತಿಕತೆ ಇಲ್ಲ ಎಂದು ಕುಟುಕಿದರು. ಅಂಬೇಡ್ಕರ್ ಹೇಳಿದ್ದು ನೋಡಿದರೆ ಒಬ್ಬ ದಲಿತ ಕೂಡ ಕಾಂಗ್ರೆಸ್‌ಗೆ ಮತ ಹಾಕಬಾರದು. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಕುಂಕುಮ, ಜನಿವಾರ ನಿಷೇಧ ವಿಚಾರವಾಗಿ ಪ್ರತಿಕ್ರಿಯಿಸುತ್ತ,…

Read More

ಬಾಗಲಕೋಟೆ : ಬಸವ ಜಯಂತಿ ಅಂಗವಾಗಿ ಏ.29ಮತ್ತು 30ರಂದು ಕೂಡಲಸಂಗಮದಲ್ಲಿ ಜರುಗುವ ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆಗೆ ಭಾನುವಾರ ಮುಂಜಾನೆ ರಬಕವಿ ಪಟ್ಟಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು. https://ainkannada.com/good-news-for-jewelry-lovers-huge-drop-in-gold-and-silver-prices-2/ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ  ಪಟ್ಟಣದ ಬಸ್ ನಿಲ್ದಾನದ ಹತ್ತಿರ ಸ್ವಾಗತ ಕಾರ್ಯಕ್ರಮ ನಡೆಯಿತು. ಈ ವೇಳೆ ಶ್ರೀ ಮ. ನಿ. ಪ್ರ. ಸಿದ್ದರಾಮ್ ಮಹಾಸ್ವಾಮಿಗಳು ವಿರಕ್ತಮಠ ರಬಕವಿ- ಮರೆಗುದ್ದಿ.ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ, ಚಿದಾನಂದ ಸೊಲ್ಲಾಪುರ, ರಾಮಣ್ಣ ಹುಲಕುಂದ, ಧರೆಪ್ಪ ಉಳ್ಳಾಗಡ್ಡಿ, ಸಂಜಯ ತೆಗ್ಗಿ, ಮ. ಕೃ. ಮೇಗಾಡಿ,  ಗಿರೀಶ ಮುತ್ತೂರ, ಬಸವರಾಜ ತೆಗ್ಗಿ, ಮಲ್ಲಿಕಾರ್ಜುನ ಗಡೆನ್ನವರ, ಡಿ. ಬಿ. ಜಾಯಗೋಂಡ, ಡಾ. ರವಿ ಜಮಖಂಡಿ, ಸಂಜಯ ತೇಲಿ, ವಿಜಯಕುಮಾರ ಹಲಕುರ್ಕಿ, ಯಲ್ಲಪ್ಪ ಕಟಗಿ, ಪರಶುರಾಮ ಕಾಖಂಡಕಿ, ಡಾ. ಜಿ. ಎಚ್. ಚಿತ್ತರಗಿ, ಸೋಮಶೇಖರ ಕೊಟ್ಟರಶೆಟ್ಟಿ, ಬಸವರಾಜ ಗುಂಡಿ, ಮೃತ್ಯುಂಜಯ ರಾಮದುರ್ಗ, ಮಹಾದೇವ ಕೋಟ್ಯಾಳ, ಮಹಾದೇವ  ದುಪದಾಳ, ನಗರ ಸಭೆ ಅಧ್ಯಕ್ಷರು ವಿದ್ಯಾ ಧಬಾಡಿ,…

Read More

ರಾಮನಗರ : ರಿಕಿ ರೈ ಮೇಲೆ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ಬಿಡದಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಬಿಡದಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ನಲ್ಲಿ ಅನುರಾಧ ಕೂಡ ಆರೋಪಿಯಾಗಿದ್ದಾರೆ. ಹೀಗಾಗಿ ಪೊಲೀಸರು ಸತತ ಆರು ಗಂಟೆಗಳ ಕಾಲ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿದ ಅನುರಾಧ, ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ, ಆದರೂ, ನನ್ನ ವಿರುದ್ಧ ಏಕೆ ದೂರು ದಾಖಲಿಸಲಾಗಿದೆ ಎಂದು ನನಗೆ ತಿಳಿದಿಲ್ಲ, ವಿಚಾರಣೆಯ ಸಮಯದಲ್ಲಿ ನಾನು ಪೊಲೀಸರಿಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಒದಗಿಸಿದ್ದೇನೆ. ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದ ರಿಕಿ ಮತ್ತು ತನ್ನ ನಡುವಿನ ಭೂ ವಿವಾದ ಪ್ರಕರಣವನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ಕೋರ್ಟ್ ಗೆ ಪತ್ರಗಳಿಗೆ ಸಹಿ ಹಾಕಲು ಬಂದಾಗ ನಾನು ರಿಕಿಯನ್ನು ನೋಡಿದೆ. ಅಂದಿನಿಂದ, ನಾನು ಅವನೊಂದಿಗೆ ಯಾವುದೇ ಸಂಪರ್ಕವನ್ನು ಹೊಂದಿಲ್ಲ ಎಂದು…

Read More

ತುಮಕೂರು : ಜನವಸತಿ ಪ್ರದೇಶದಲ್ಲಿ ಕರಡಿ ಕಾಣಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ತುಮಕೂರು‌ ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ಘಟನೆ ನಡೆದಿದೆ. ಕೊರಟಗೆರೆಯ 15ನೇ ವಾರ್ಡ್ ನ ವಾಲ್ಮೀಕಿ ನಗರದಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು,  ತಡರಾತ್ರಿ ಕರಡಿ ಓಡಾಟದಿಂದ ಸ್ಥಳೀಯರು ಭಯಭೀತರಾಗಿದ್ದಾರೆ.  ಪಟ್ಟಣ ಸಮೀಪದ ಬೆಟ್ಟದಿಂದ ಕರಡಿ ಬಂದಿರುವ ಶಂಕೆ ವ್ಯಕ್ತವಾಗಿದೆ. https://ainkannada.com/murderers-who-killed-a-man-in-nelamangala-and-dumped-him-in-tumkur/ ವಾಲ್ಮೀಕಿ‌ ನಗರದ ಸುತ್ತಮುತ್ತ ಕೆಲ ಹೊತ್ತು ಕರಡಿ ತಿರುಗಾಡಿದ್ದು, ಸ್ಥಳೀಯರು ಮೊಬೈಲ್ ನಲ್ಲಿ ಕರಡಿ ಓಡಾಟದ ವಿಡಿಯೋ ಸೆರೆ ಹಿಡಿದಿದ್ದಾರೆ. ಕೂಡಲೇ ಕರಡಿಯನ್ನ ಸೆರೆಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Read More

ತುಮಕೂರು : ತುಮಕೂರಿನ ಜಯಪುರ ಬಯಲು ಪ್ರದೇಶದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಬೇರೆಡೆ ವ್ಯಕ್ತಿಯ ಕೊಲೆ ಮಾಡಿ, ಇಲ್ಲಿ ತಂದು ಬಿಸಾಡಿದ್ದಾರೆ ಎನ್ನಲಾಗಿದೆ. ಮೃತ ವ್ಯಕ್ತಿಯನ್ನು ಸೋಲೂರು ಮೂಲದ ದಿಲೀಪ್ ಎಂದು ಗುರುತಿಸಲಾಗಿದೆ. ದಿಲೀಪ್ ವಿವಾಹಿತ ಮಹಿಳೆ ಅಮೃತ ಎಂಬಾಕೆಯನ್ನು ಪ್ರೀತಿಸಿ ಓಡಿ ಹೋಗಿದ್ದ ಎನ್ನಲಾಗಿದೆ. ಭಾನುವಾರ ದಿಲೀಪ್‌ನ ಹತೈಗೈದು  ತುಮಕೂರಿನ ಜಯಪುರ ಬಳಿ ಶವ ಎಸೆದು ಆರೋಪಿಗಳು ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದೆ.. https://ainkannada.com/four-pakistani-nationals-deported-exemption-for-long-term-visa-holders/ ಸದ್ಯ ಘಟನಾ ಸ್ಥಳಕ್ಕೆ ತಿಲಕ್ ಪಾರ್ಕ್ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಶವಗಾರಕ್ಕೆ ಮೃತದೇಹ ರವಾ‌ನಿಸಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ  ನೆಲಮಂಗಲ ಬಳಿ ಹತ್ಯೆ ಮಾಡಿರುವುದು ಪತ್ತೆಯಾಗಿದೆ. ಈ ಸಂಬಂಧ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರೆಸಿದ್ದಾರೆ.

Read More

ಬೆಂಗಳೂರು: ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್‌ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ. ಇನ್ನೂ ದೀರ್ಘಾವಧಿ ವೀಸಾ  ಹೊಂದಿರುವ 91 ಮಂದಿ ಪಾಕ್‌ ಪ್ರಜೆಗಳು ಇನ್ನೂ ಕರ್ನಾಟಕದಲ್ಲೇ ಇದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಾರ್ಯಾಚರಣೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕ್‌ ಪ್ರಜೆಗಳು  ವಾಸವಾಗಿದ್ದಾರೆ ಎಂದು ಪತ್ತೆಯಾಗಿದೆ. 5 ಪಾಕಿಸ್ತಾನಿ ಪ್ರಜೆಗಳು ವೈದ್ಯಕೀಯ ವೀಸಾದಡಿ ರಾಜ್ಯದಲ್ಲಿದ್ದಾರೆ. ಇವರಿಗೆ ಏ.29ರವರೆಗೆ ಮಾತ್ರ ದೇಶದಲ್ಲಿರಲು ಕೇಂದ್ರ ವಿನಾಯ್ತಿ ನೀಡಿದೆ. https://ainkannada.com/water-level-of-jhelum-river-rises-suddenly-emergency-declared/ ರಾಜ್ಯದಲ್ಲಿ ಅತಿ ಹೆಚ್ಚು ಪಾಕಿಸ್ತಾನಿ ಪ್ರಜೆಗಳು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದಾರೆ. ಭಟ್ಕಳದಲ್ಲಿ 14 ಹಾಗೂ ಕಾರವಾರದಲ್ಲಿ ಒಬ್ಬರು ಸೇರಿ ಒಟ್ಟಾರೆ 15 ಮಂದಿ ವಾಸವಾಗಿದ್ದಾರೆ. ಇನ್ನೊಂದೆಡೆ ದಾವಣಗೆರೆಯಲ್ಲಿ ಒಬ್ಬ ಪಾಕಿಸ್ತಾನ ವಿದ್ಯಾರ್ಥಿ ಶಿಕ್ಷಣದ ವೀಸಾ ಮೇಲೆ ಭಾರತಕ್ಕೆ ಬಂದಿದ್ದಾರೆ. ದಾವಣಗೆರೆಯ ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದಾರೆ. ಇವರ ವೀಸಾ ಅವಧಿ ಇನ್ನೂ ಮುಗಿದಿಲ್ಲ. ಹೀಗಾಗಿ ಅವರ ಗಡಿಪಾರು…

Read More

ಕೋಲಾರ : ಬೆಟ್ಟಿಂಗ್ ಕಟ್ಟಿ ಸಿಕಾಪಟ್ಟೆ ವಿಸ್ಕಿ ಕುಡಿದ ಯುವಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಕಾರ್ತಿಕ್ (21) ಎಂದು ಗುರುತಿಸಲಾಗಿದೆ. ಕಾರ್ತಿಕ್ ಗ್ರಾಮದ ವೆಂಕಟರೆಡ್ಡಿ ಎಂಬುವನೊಂದಿಗೆ 5 ಬಾಟಲ್ ಓಸಿ ವಿಸ್ಕ್ ಕುಡಿಯಲು ಹತ್ತು ಸಾವಿರ ಬೆಟ್ಟಿಂಗ್ ಕಟ್ಟಿದ್ದಾನೆ.  ಇದೇ ಬೆಟ್ಟಿಂಗ್‌ ಗೋಸ್ಕರ ಕುಡಿಯುವ ವೇಳೆ ಕಾರ್ತಿಕ್ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. https://ainkannada.com/illegal-cow-smuggling-raid-led-by-muthalik-police-arrest/ ಕಾರ್ತಿಕ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಕಳೆದ 9 ದಿನಗಳ ಹಿಂದೆಯಷ್ಟೇ ಒಂದು ಮಗು ಕೂಡ ಆಗಿತ್ತು. ಈ ಸಂಬಂಧ ನಂಗಲಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಜಿ ಕಟ್ಟಿದ್ದ ವೆಂಕಟರೆಡ್ಡಿ ಮತ್ತು ಸುಬ್ರಮಣಿ ಸೇರಿದಂತೆ ಆರು ಮಂದಿ ವಿರುದ್ದ ದೂರು ದಾಖಲಾಖಿಸಲಾಗಿದೆ. ಪೊಲೀಸರು ವೆಂಕಟರೆಡ್ಡಿ ಮತ್ತು ಸುಬ್ರಮಣಿ ಬಂಧಿಸಿದ್ದು, ಇನ್ನುಳಿದವರಿಗಾಗಿ  ಹುಡುಕಾಟ ನಡೆಸುತ್ತಿದ್ದಾರೆ.  

Read More

ಧಾರವಾಡ : ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಗೋವುಗಳ ಸಾಗಿಸುತ್ತಿದ್ದ ವಾಹನವನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಅವರು ತಡೆದು , ಗೋವುಗಳ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಿದರು. ಧಾರವಾಡ ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಕ್ರಮ ಗೋವು ಸಾಗಾಟ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದೆ. ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಪೊಲೀಸರಿಗೆ ಆಗ್ರಹಿಸಿದರು. https://ainkannada.com/high-alert-at-guru-raya-sannidhi-mantralaya-heres-the-reason/ ಸ್ಥಳೀಯರು ಹಾಗೂ ಶ್ರೀ ರಾಮ ಸೇನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ತಡೆದು, ಪರಿಶೀಲನೆ ನಡೆಸಿ, ಸರಿಯಾದ ದಾಖಲೆ ಇಲ್ಲದ ಕಾರಣ ಧಾರವಾಡ ಗರಗ ಪೊಲೀಸರಿಗೆ ಮಾಹಿತಿ ನೀಡಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಂಜುನಾಥ ಕಾಟೀಕರ್ ಸೇರಿದಂತೆ ಶ್ರೀ ರಾಮ ಸೇನೆ ಕಾರ್ಯಕರ್ತರು ಇದ್ದರು. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಯಚೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆ ಆಂಧ್ರಪ್ರದೇಶದಲ್ಲಿ ಪೊಲೀಸ್‌ ಇಲಾಖೆ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ.. ಇದಲ್ಲದೇ ಪ್ರಸಿದ್ದ ಧಾರ್ಮಿಕ್ಷ ಕ್ಷೇತ್ರಗಳಲ್ಲೂ ಸೆಕ್ಯುರಿಟಿ ಹೆಚ್ಚಿಸಿದ್ದು, ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಭದ್ರತಾ ದೃಷ್ಠಿಯಿಂದಾಗಿ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಗುರು ರಾಘವೇಂದ್ರ ಸ್ವಾಮಿ ಮಠ ಹಾಗೂ ಮಂತ್ರಾಲಯದಲ್ಲಿ ತೀವ್ರ ತಪಾಸಣೆ ಮಾಡಲಾಯಿತು. ಮುನ್ನೆಚ್ಚರಿಕೆಯ ಕ್ರಮವಾಗಿ ಹಾಗೂ ಜಾಗೃತಿ ಮೂಡಿಸಲು ಪೊಲೀಸರು ಮಂತ್ರಾಲಯದಲ್ಲಿ ತೀವ್ರ ತಪಾಸಣೆ ನಡೆಸಿದರು. https://ainkannada.com/pro-hindu-organization-demands-war-against-pakistan/ ಮಠದ ಪ್ರಾಂಗಣ, ಭೋಜನ ಶಾಲೆ, ತುಂಗಭದ್ರಾ ನದಿ ತೀರ, ಬಸ್ ನಿಲ್ದಾಣ, ವ್ಯಾಪಾರಿ ಮಳಿಗೆಗಳು, ವಸತಿಗೃಹಗಳು, ಮಂತ್ರಾಲಯಕ್ಕೆ ಬರುವ ಬಸ್ ,ಕಾರುಗಳಲ್ಲಿ ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್‌ ಪರಿಶೀಲನೆ ನಡೆಸಿದವು. ಜೊತೆಗೆ ದೇವಸ್ಥಾನಕ್ಕೆ ಬರುವ ಭಕ್ತರ ಬ್ಯಾಗ್‌ಗಳನ್ನ ಸಹ ತಪಾಸಣೆ ಮಾಡಲಾಯಿತು. ಇನ್ನೂ ಭದ್ರತೆ ಬಿಗಿಗೊಳಿಸಲು ಮಂತ್ರಾಲಯ ಮಠದ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ.

Read More

ಭೋಪಾಲ್:-ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯಲ್ಲಿ ವೇಗವಾಗಿ ಬಂದ ವ್ಯಾನ್, ಬೈಕ್‌ಗೆ ಡಿಕ್ಕಿಯಾಗಿ ಬಾವಿಗೆ ಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ https://ainkannada.com/confrontation-king-kohli-says-this-is-my-ground-in-front-of-kl-rahul/ ಅಪಘಾತದಲ್ಲಿ ವ್ಯಾನ್‌ನಲ್ಲಿದ್ದ 9 ಮಂದಿ, ಬೈಕ್‌ ಸವಾರ ಹಾಗೂ ರಕ್ಷಣೆಗಾಗಿ ಬಾವಿಗೆ ಇಳಿದ ಸ್ಥಳೀಯರೊಬ್ಬರು ಸೇರಿದಂತೆ 11 ಮಂದಿ ಸಾವಿಗೀಡಾಗಿದ್ದಾರೆ. ವ್ಯಾನ್‌ನಲ್ಲಿ 13 ಜನರು ಪ್ರಯಾಣಿಸುತ್ತಿದ್ದರು. ವೇಗವಾಗಿ ಬಂದ ವ್ಯಾನ್ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಈ ಭೀಕರ ಅವಘಡ ಸಂಭವಿಸಿದೆ. ವ್ಯಾನ್‌ನಲ್ಲಿದ್ದ ನಾಲ್ವರನ್ನು ರಕ್ಷಿಸಲಾಗಿದೆ..

Read More