ಭೋಪಾಲ್:-ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯಲ್ಲಿ ವೇಗವಾಗಿ ಬಂದ ವ್ಯಾನ್, ಬೈಕ್ಗೆ ಡಿಕ್ಕಿಯಾಗಿ ಬಾವಿಗೆ ಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ https://ainkannada.com/confrontation-king-kohli-says-this-is-my-ground-in-front-of-kl-rahul/ ಅಪಘಾತದಲ್ಲಿ ವ್ಯಾನ್ನಲ್ಲಿದ್ದ 9 ಮಂದಿ, ಬೈಕ್ ಸವಾರ ಹಾಗೂ ರಕ್ಷಣೆಗಾಗಿ ಬಾವಿಗೆ ಇಳಿದ ಸ್ಥಳೀಯರೊಬ್ಬರು ಸೇರಿದಂತೆ 11 ಮಂದಿ ಸಾವಿಗೀಡಾಗಿದ್ದಾರೆ. ವ್ಯಾನ್ನಲ್ಲಿ 13 ಜನರು ಪ್ರಯಾಣಿಸುತ್ತಿದ್ದರು. ವೇಗವಾಗಿ ಬಂದ ವ್ಯಾನ್ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿಯಾದ ಪರಿಣಾಮ ಈ ಭೀಕರ ಅವಘಡ ಸಂಭವಿಸಿದೆ. ವ್ಯಾನ್ನಲ್ಲಿದ್ದ ನಾಲ್ವರನ್ನು ರಕ್ಷಿಸಲಾಗಿದೆ..
Author: AIN Author
ಭಾನುವಾರ ದೆಹಲಿಯಲ್ಲಿ ರಾಯಲ್ ಚಾಲೆಂಜರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪಂದ್ಯ ಏರ್ಪಟ್ಟಿತು. ಮೊದಲು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ RCB ಬೊಂಬಾಟ್ ಬೌಲಿಂಗ್ ಪ್ರದರ್ಶಿಸಿ ಎದುರಾಳಿಯನ್ನು ಕೇವಲ 163 ರನ್ ಗಳಿಗೆ ಕಟ್ಟಿ ಹಾಕಿದರು. https://ainkannada.com/fatal-attack-over-land-issue-suspected-of-betel-nut-attack-by-brothers-son-and-son-in-law-auto-driver-suffering-in-hospital/ ನಂತರ ಬ್ಯಾಟ್ ಹಿಡಿದು ಬಂದ RCB, ಮೊದಲ ಮೂರು ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಸೋಲುವ ಭೀತಿ ಉಂಟು ಮಾಡಿತ್ತು. ಆದ್ರೆ ಕೊಹ್ಲಿಯ ತಾಳ್ಮೆ ಆಟ ಕೃನಾಲ್ ಪಾಂಡ್ಯ ಬ್ಯಾಟಿಂಗ್ ನೆರವಿನಿಂದ 18 ಓವರ್ ನಲ್ಲೇ ಟಾರ್ಗೆಟ್ ರೀಚ್ ಮಾಡಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಬೆಂಗಳೂರು ತಂಡ ಗೆದ್ದುಕೊಂಡಿದೆ. 6 ವಿಕೆಟ್ಗಳ ಜಯಗಳಿಸಿದ ಬಳಿಕ ರಾಹುಲ್ ಜೊತೆ ಕೊಹ್ಲಿ ಸಂತೋಷದಿಂದ ಮಾತನಾಡುತ್ತಿದ್ದರು. ಈ ವೇಳೆ ಕೊಹ್ಲಿ ನೆಲಕ್ಕೆ ಕೈ ತೋರಿಸುತ್ತಾ ಇದು ನನ್ನ ಮೈದಾನ ಹೇಳಿದರು. ಇದಕ್ಕೆ ರಾಹುಲ್, ಪೆವಿಲಿಯನ್ಗೆ ಕೊಹ್ಲಿ ಹೆಸರು ಇದೆ ಎಂದು ಸನ್ನೆ ಮಾಡಿದರು. ನಂತರ ಕೊಹ್ಲಿ ರಾಹುಲ್ ಅವರನ್ನು ಅಪ್ಪಿ ಮಾತನಾಡಿದರು. ಈ ಎಲ್ಲಾ ದೃಶ್ಯಗಳು…
ಬೆಂಗಳೂರು:- ಜಾಗದ ವಿಚಾರಕ್ಕೆ ದಾಯಾದಿಗಳ ನಡುವೆ ಗಲಾಟೆ ನಡೆದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಬಿಬಿಎಂಪಿ ಜಿಮ್ ಬಳಿ ಜರುಗಿದೆ. ಇನ್ನೂ ಈ ಮಾರಣಾಂತಿಕ ಗಲಾಟೆ ಹಿಂದೆ ಸುಪಾರಿ ನೆರಳು ಇರುವ ಶಂಕೆ ವ್ಯಕ್ತವಾಗಿದೆ. ಅಣ್ಣನ ಮಗನ ಹೊಡೆಯಲು ತಮ್ಮನ ಮಗ,ಅಳಿಯನಿಂದ ಸುಪಾರಿ ಕೊಟ್ಟಿರುವ ಆರೋಪ ಕೇಳಿ ಬಂದಿದೆ. ಎಸ್, ಮುನಿರಾಜು ಮತ್ತು ಚಿಕ್ಕಮುನಿಯಪ್ಪ ಅಣ್ಣ ತಮ್ಮಂದಿರು. ಮುನಿರಾಜು ಮಗ ಮುನಿಕುಮಾರ್ ಮೇಲೆ ಇದೀಗ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಈ ಹಲ್ಲೆಗೆ ಚಿಕ್ಕಮುನಿಯಪ್ಪನ ಮಗ ಮತ್ತು ಅಳಿಯನ ಮೇಲೆ ಸುಪಾರಿ ಹಾಗೂ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. https://ainkannada.com/she-was-harassing-me-to-get-married-accused-reveal-the-truth-three-arrested-for-killing-mangalamukhi/ ಜಾಗದ ವಿಚಾರಕ್ಕೆ ಎರಡು ಕುಟುಂಬದ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಇತ್ತೀಚೆಗೆ ಗಲಾಟೆ ಜೋರಾದಾಗ ಮುನಿಕುಮಾರ್ ಬುದ್ದಿವಾದ ಹೇಳಿದ್ದ. ಆ ಸಮಯದಲ್ಲಿ ಚಿಕ್ಕಮುನಿರಾಜು ಅಪ್ರಾಪ್ತ ಪುತ್ರ ಕೊಲೆ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಹಾಕಿ ಮೂರನೇ ದಿನಕ್ಕೆ ಆರೋಪಿ ಅಟ್ಯಾಕ್ ಮಾಡಿದ್ದಾನೆ. 25 ರ ಸಂಜೆ ಜಿಮ್ ಮುಗಿಸಿ…
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ಮಂಗಳಮುಖಿ ತನುಶ್ರೀ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಲ್ಲಿ ಸ್ಪೋಟಕ ವಿಚಾರ ಬೆಳಕಿಗೆ ಬಂದಿದೆ. https://ainkannada.com/pro-hindu-organization-demands-war-against-pakistan/ ಜಗದೀಶ್ ಗೆ ತನ್ನ ಜೊತೆಗೆ ಇರುವಂತೆ ಮೃತ ತನುಶ್ರೀ ಒತ್ತಾಯಿಸುತ್ತಿದ್ರಂತೆ. ಅಲ್ಲದೇ ಬಲವಂತವಾಗಿ ತನ್ನನ್ನ ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಆರೋಪಿ ಕೃತ್ಯ ಎಸಗಿದ್ದಾನೆ. ಕೊಲೆ ಮಾಡಿದ ಬಳಿಕ ಪ್ರಮುಖ ಆರೋಪಿ ಜಗದೀಶ್ ತಿರುಪತಿಗೆ ಹೋಗಿದ್ದ. ತನಿಖೆ ಚುರುಕುಗೊಳಿಸಿದ ಪೊಲೀಸರು, ಪ್ರಮುಖ ಆರೋಪಿ ಸೇರಿ ಕೊಲೆ ಸಾಥ್ ಕೊಟ್ಟ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಜಗದೀಶ್, ಪ್ರಭಾಕರ್, ಸುಶಾಂತ್ ಬಂಧಿತ ಆರೋಪಿಗಳು ಎನ್ನಲಾಗಿದೆ. ತನುಶ್ರೀ ಮೃತದೇಹ ಪತ್ತೆ ಆಗಿದ್ದೇಗೆ!? ಏ.20ರಂದು ಮಂಗಳಮುಖಿಯ ತನುಶ್ರೀ ಮೃತದೇಹ ಮನೆಯಲ್ಲೇ ಪತ್ತೆಯಾಗಿತ್ತು. ಮೃತಪಟ್ಟ ಮೂರು ದಿನದ ಬಳಿಕ ಮೃತದೇಹ ಪತ್ತೆಯಾಗಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಪೊಲೀಸರು, ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ತನುಶ್ರೀಗೆ ಆರೋಪಿ ಪರಿಚಯ ಹೇಗೆ!? ಸೋಷಿಯಲ್ ಸರ್ವೀಸ್ ಮಾಡುತ್ತಿದ್ದ ಜಗದೀಶ್ ಗೆ ತನುಶ್ರೀ ಪರಿಚಯವಾಗಿದೆ. ಹೀಗಾಗಿ…
ಕಲಬುರಗಿ:- ಕಾಶ್ಮೀರದಲ್ಲಿ ಅಮಾಯಕರ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಗೆ ವಿಶ್ವದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ದೇಶದೆಲ್ಲೆಡೆ ಉಗ್ರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿ ಬಂದಿದ್ದು, ಪ್ರತಿಭಟನೆ ಮೂಲಕ ಉಗ್ರರ ದಾಳಿ ಖಂಡಿಸಿದ್ದಾರೆ. https://ainkannada.com/college-professor-assaulted-in-nadu-road-in-bangalore/ ಅದರಂತೆ ಪಾಕ್ ವಿರುದ್ಧ ಯುದ್ಧ ಸಾರುವಂತೆ ಹಿಂದೂಪರ ಸಂಘಟನೆ ಆಗ್ರಹಿಸಿದ್ದು, ಈಡುಗಾಯಿ ಒಡೆಯುವ ಮೂಲಕ ಕೇಂದ್ರಕ್ಕೆ ಆಗ್ರಹಿಲಿದ್ದಾರೆ. ಯುದ್ಧ ಮಾಡಲೇಬೇಕಾದ ಸ್ಥಿತಿ ಈಗ ಬಂದಿದೆ. ಹೀಗಾಗಿ ಯುದ್ಧ ಮಾಡುವಂತೆ ಶ್ರೀ ಶರಣಬಸವೇಶ್ವರ ಗುಡಿಮುಂದೆ ಈಡುಗಾಯಿ ಒಡೆದು ಆಗ್ರಹಿಸಿದ್ದಾರೆ. ಪಾಕ್ ಬೆಂಬಲಿತ ಉಗ್ರರಿಗೆ ಪಾಠ ಕಲಿಸಲು ಯುದ್ಧ ಘೋಷಿಸಿ. ಮೋದಿ ಸರ್ಕಾರ ಕೂಡಲೇ ಯುದ್ಧ ಘೋಷಣೆ ಮಾಡಲೇಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು:- ನಗರದಲ್ಲಿ ಕ್ಷುಲ್ಲಕ ವಿಚಾರಕ್ಕೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಅದರಂತೆ ಕಸ ಬಿಸಾಡಬೇಡಿ ಎಂದಿದ್ದಕ್ಕೆ ನಡು ರಸ್ತೆಯಲ್ಲೇ ಕಾಲೇಜು ಪ್ರಾಧ್ಯಾಪಕನ ಮೇಲೆ ಯುವಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ. ಏಪ್ರಿಲ್ 21 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. https://ainkannada.com/a-young-man-who-was-assaulted-with-a-knife/ ಕುಮಾರಸ್ವಾಮಿ ಲೇಔಟ್ನ ಜೆಹೆಚ್ ಬಿಸಿ ಲೇಔಟ್ನಲ್ಲಿ ಖಾಸಗಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು. ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಕೆಎಸ್ ಲೇಔಟ್ ಪೊಲೀರು ಮೂವರು ಆರೋಪಿಗಳಾದ ಭಾನುಪ್ರಸಾದ್, ಶರತ್, ಅಮೃತ್ ಕುಮಾರ್ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸದ್ಯ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.
ಹುಬ್ಬಳ್ಳಿ:- ನಗರದಲ್ಲಿ ರೌಡಿಗಳ ಹಾವಳಿ ಮಿತಿಮೀರಿದೆ. ಹಳೆ ವೈಷಮ್ಯದ ಹಿನ್ನಲೆ ಯುವಕನ ಮೇಲೆ ರೌಡಿಗಳ ಗ್ಯಾಂಗ್ ಹಲ್ಲೆ ನಡೆಸಿ ಚಾಕು ಇರಿದಿದೆ. ಈ ಘಟನೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಯಲ್ಲಾಪುರ ಓಣಿಯಲ್ಲಿ ಜರುಗಿದೆ. https://ainkannada.com/rain-news-more-than-22-districts-of-karnataka-today-where-is-it/ ಘಟನೆಯಲ್ಲಿ ಗಾಯಗೊಂಡ ಯುವಕನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕೆತ್ಸೆ ನೀಡಲಾಗುತ್ತಿದೆ. ಕೂಡಲೇ ಹುಬ್ಬಳ್ಳಿ ಧಾರವಾಡ ಡಿಸಿಪಿ ನಂದಗಾವಿ ಕೃತ್ಯ ನಡೆದ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದರು. ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/this-is-my-ground-virat-kohli-tong-to-kl-rahul/ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಮತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಮಳೆಯಾಗುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0…
ದೆಹಲಿಯಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು. https://ainkannada.com/treasury-is-not-empty-by-guarantees-bjps-speech-siddaramaiah/ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 162 ರನ್ ಕಲೆಹಾಕಿತು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.3 ಓವರ್ಗಳಲ್ಲಿ ಚೇಸ್ ಮಾಡಿ 6 ವಿಕೆಟ್ಗಳ ಗೆಲುವು ದಾಖಲಿಸಿದೆ. ಗೆಲುವಿನ ಬಳಿಕ ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಎಲ್ ರಾಹುಲ್ ಅವರ ಕಾಲೆಳೆದಿದ್ದಾರೆ. ಪಂದ್ಯದ ಬಳಿಕ ಭೇಟಿಯಾದ ಕೆಎಲ್ ರಾಹುಲ್ ಮುಂದೆ ಇದು ನನ್ನ ಮೈದಾನ ಎಂಬ ಸೆಲೆಬ್ರೇಷನ್ ತೋರಿಸುವ ಮೂಲಕ ಕೊಹ್ಲಿ ಕಿಚಾಯಿಸಿದ್ದಾರೆ. ಈ ವೇಳೆ ರಾಹುಲ್ ಹೌದು, ನಿಮ್ಮದೇ ಮೈದಾನ ಎಂದು ಪೆವಿಲಿಯನ್ ಮೇಲಿರುವ ಕೊಹ್ಲಿಯ ಹೆಸರನ್ನು ತೋರಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ರಾಹುಲ್ ಅವರಿಂದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ ನಗುತ್ತಾ ಕೊಹ್ಲಿ ತಬ್ಬಿಕೊಂಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ಪಡೆದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ:- ಗ್ಯಾರಂಟಿಗಳಿಂದ ಖಜಾನೆ ಖಾಲಿ ಆಗಿಲ್ಲ. ಬಿಜೆಪಿಯವರ ಮಾತು ನಂಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. https://ainkannada.com/series-accident-between-3-cars-person-death-five-injuries/ ಈ ಸಂಬಂಧ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಖಜಾನೆ ಖಾಲಿ, ಪಾಪರ್ ಸರ್ಕಾರ ಎಂದು ಬಿಜೆಪಿಯವರು ಟೀಕೆ ಮಾಡುತ್ತಾರೆ. ಬಿಜೆಪಿಯವರ ಮಾತಲ್ಲಿ ಎಳ್ಳಷ್ಟು ಸತ್ಯ ಇಲ್ಲ ಎಂದರು. ಚುನಾವಣಾ ಪೂರ್ವದಲ್ಲಿ ಜನರಿಗೆ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಿದ್ದೆವು. ಅಧಿಕಾರಕ್ಕೆ ಬಂದ ಕೂಡಲೇ ನಾವು 5 ಗ್ಯಾರಂಟಿಗಳನ್ನ ಜನರಿಗೆ ಕೊಡುತ್ತಿದ್ದೇವೆ. 2 ವರ್ಷದಲ್ಲಿ 80 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದೇವೆ. ಈ ವರ್ಷವೂ ಕೂಡ 50 ಸಾವಿರ ಕೋಟಿಗೂ ಹೆಚ್ಚು ಹಣ ಬಜೆಟ್ನಲ್ಲಿಟ್ಟಿದ್ದೇವೆ. ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಹಾಗಿದ್ರೆ ಇಂದು 1,000 ಕೋಟಿಗೂ ಅಧಿಕ ಕಾಮಗಾರಿಗಳಿಗೆ ಚಾಲನೆ ಕೊಡೋಕೆ ಆಗುತ್ತಿತ್ತಾ? ಪಾಪರ್ ಆಗಿರುವ ಸರ್ಕಾರ ಈ ಕೆಲಸ ಮಾಡಲು ಸಾಧ್ಯ ಇಲ್ಲ ಎಂದರು ಬಿಜೆಪಿಯವರು ಜನಾಕ್ರೋಶ ಅಂತ ಹೋರಾಟ ಮಾಡುತ್ತಿದ್ದಾರೆ. ಸುರ್ಜೇವಾಲರು ಹೇಳಿರುವ ಹಾಗೆ ಗೋಡೆ ಮಂಕಾಗಿದೆ, ಕೊಳಕಾಗಿದೆ ಎಂದು ಹೆಣ್ಣುಮಗಳು…