Author: AIN Author

ಭುವನೇಶ್ವರ : ಸಂಬಂಧಿಯಿಂದಲೇ 4 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ವರದಿಯಾಗಿದೆ. ಒಡಿಶಾದ ಗಂಜಾಂನಲ್ಲಿ ಈ ಘಟನೆ ನಡೆದಿದ್ದು, ಸುಮಾರು 27 ವರ್ಷದ ವ್ಯಕ್ತಿ ತನ್ನ  ಸಂಬಂಧಿಯ 4 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡಿ, ಕೊಲೆ ಮಾಡಿದ್ದಾನೆ. ಶುಕ್ರವಾರ ಸಂಜೆ ಮಗು ಕಾಣೆಯಾಗಿದ್ದ ಬಗೆ ಮಗುವಿನ ಪೋಷಕರು ದೂರು ನೀಡಿದ್ದರು. ಶನಿವಾರ ನಿರ್ಮಾಣ ಹಂತದ ಮನೆಯಲ್ಲಿ ಅಪ್ರಾಪ್ತೆಯ ಮೃತದೇಹ ಪತ್ತೆಯಾಗಿತ್ತು ಸದ್ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. https://ainkannada.com/terrorist-attack-in-pahalgam-nia-takes-over-investigation-centre/ ಆರೋಪಿಯು ಬಾಲಕಿಗೆ ಚಾಕೊಲೇಟ್ ಆಮಿಷ ಒಡ್ಡಿ, ತಮ್ಮ ಗ್ರಾಮದಲ್ಲಿ ನಡೆಯುವ ಹಬ್ಬಕ್ಕೆ ಕರೆದುಕೊಂಡು ಹೋಗುವುದಾಗಿ ಹೇಳಿದ್ದ ಕರೆದೊಯ್ದಿದ್ದಾನೆ. ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕೆಯ ಕುತ್ತಿಗೆ ಹಿಸುಕಿ ಕೊಂದು, ನಂತರ ಶವವನ್ನು ಎಸೆದಿದ್ದ. ಈ ಕುಕೃತ್ಯ ಮಾಡುವ ಸಮಯದಲ್ಲಿ ಆತ ಮದ್ಯದ ಅಮಲಿನಲ್ಲಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More

ಧಾರವಾಡ : ಕಲಘಟಗಿ ತಾಲೂಕಿನ ಬಹು ನಿರೀಕ್ಷಿತ ಯೋಜನೆಯಾದ ಬೇಡ್ತಿ ನದಿ ಏತ ನೀರಾವರಿ ಮೂಲಕ 107 ಕೆರೆಗಳನ್ನು ತುಂಬಿಸುವ ಎರಡನೇ ಹಂತದ ಯೋಜನೆಗೆ ರಾಜ್ಯ ಸರಕಾರ 180 ಕೋಟಿ ರೂ. ಅನುದಾನಕ್ಕೆ ಅನುಮೋದನೆ ನೀಡಿದೆ. ತಾಲೂಕಿನ ಬೆಲವಂತರ ಬಳಿ ಈಗಾಗಲೇ ಮೊದಲನೇ ಹಂತದ ಕಾಮಗಾರಿ ಸಂಪೂರ್ಣಗೊಂಡಿದೆ. ಪ್ರಾಯೋಗಿಕವಾಗಿ ಈಗಾಗಲೇ ಕೆರೆಗಳಿಗೆ ನೀರು ಹರಿಸಿ ತುಂಬಿಸಲಾಗಿದೆ. ಈ ಯೋಜನೆಯನ್ನು ಇನ್ನಷ್ಟು ವಿಸ್ತರಿಸಿ ಇನ್ನುಳಿದ ಕೆರೆಗಳನ್ನು ತುಂಬಿಸಬೇಕು ಎಂದು ಕಲಘಟಗಿ ಶಾಸಕರಾದ ಸಚಿವ ಸಂತೋಷ ಲಾಡ್ ಅವರಿಗೆ ತಾಲೂಕಿನ ರೈತರು ಮನವಿ ಮಾಡಿದ್ದರು. https://ainkannada.com/bus-driver-saves-passengers-life-with-his-sense-of-time/ ರೈತರ ಬೇಡಿಕೆ ಅರಿತು ಸಚಿವರು ರಾಜ್ಯ ಸರಕಾರಕ್ಕೆ ಈ ಕುರಿತು ಪ್ರಸ್ತಾವ ಸಲ್ಲಿಸಿದ್ದರು. ಸಚಿವ ಸಂತೋಷ ಲಾಡ್ ಅವರ ಪ್ರಸ್ತಾವಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ 107 ಕೆರೆ ತುಂಬಿಸುವ ಎರಡನೇ ಹಂತದ ಬೇಡ್ತಿ ನದಿ ಏತ ನೀರಾವರಿ ಯೋಜನಾ ವರದಿಗೆ 180 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ…

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆ ತೆರಳುತ್ತಿದ್ದ ಕೆ.ಎಸ್. ಆರ್.ಟಿ.ಸಿ ಬಸ್ಸು ಚಲಿಸುತ್ತಿದ್ದಂತೆ ಏಕಾಏಕಿ ಬ್ರೇಕ್ ಫೇಲ್ ಆಗಿತ್ತು. ಈ ವೇಳೆ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮಾಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದತ್ತ ತೆರಳುತ್ತಿದ್ದ ಭಕ್ತಾಧಿಗಳಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ತಾಳುಬೆಟ್ಟದ ಪೊನ್ನಾಚಿ ಕ್ರಾಸ್ ಬಳಿ ತಿರುವಿನೊಂದರಲ್ಲಿ ಬ್ರೇಕ್ ಫೇಲ್ ಆಗಿದೆ . ಇದನ್ನು ಗಮನಿಸಿದ ಚಾಲಕ ತನ್ನ ಸಮಯ ಪ್ರಜ್ಞೆಯಿಂದ ಹಳ್ಳಕ್ಕೆ ಬೀಳಬೇಕಾಗಿದ್ದ ಬಸ್ ನ್ನು ತಡೆಗೋಡೆಯ ಮೇಲೆ ಹತ್ತಿಸಿ, ಪ್ರಯಾಣಿಕರ ಪ್ರಾಣ ಉಳಿಸಿದ್ದಾರೆ. https://ainkannada.com/no-one-should-do-politics-in-the-house-of-death-ganiga-ravikumar/ ಬಸ್ ಚಾಲಕನ ಸಮಯ ಪ್ರಜ್ನೆ ಯನ್ನು ಸಾರ್ವಜನಿಕರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಕಳೆದ ಶನಿವಾರ ರಾತ್ರಿ ಬ್ರೇಕ್ ಫೆಲ್ ಆಗಿದ್ದ ಬಸ್ಸು ಕಂದಕಕ್ಕೆ ಬಿದ್ದು 20 ಜನರಿಗೆ ಗಂಭೀರವಾದ ಗಾಯಗಳಾಗಿ ಬದುಕಿದ್ದೆ ಪವಾಡ ಎನಿಸಿತ್ತು. ಇದಾದ…

Read More

ಚಾಮರಾಜನಗರ : ಅಜ್ಜೀಪುರ ಸಫಾರಿ ಕೇಂದ್ರದ ಪ್ರಾರಂಭವಾದ ನಂತರ ಇದೇ ಮೊದಲ ಬಾರಿಗೆ ಹುಲಿ ಕಾಣಿಸಿಕೊಂಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿರಾಯ ದರ್ಶನ ನೀಡಿದ್ದಾನೆ. https://ainkannada.com/%e0%b2%ae%e0%b3%81%e0%b2%82%e0%b2%a6%e0%b2%bf%e0%b2%a8-%e0%b2%a6%e0%b2%bf%e0%b2%a8%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%87%e0%b2%82%e0%b2%a4%e0%b2%b9-%e0%b2%95%e0%b3%83/ ಕಳೆದ ತಿಂಗಳು ನಿರಂತರವಾಗಿ ಬಿದ್ದ ಮಳೆಗೆ ಅರಣ್ಯವು ಅಚ್ಚ ಹಸಿರಿನಿಂದ ಕಂಗೊಳಿಸುತ್ತಿರುವುದರಿಂದ ಸಫಾರಿಗೆ ತೆರಳುವ ವನ್ಯ ಪ್ರಿಯರಿಗೆ ಒಂದಲ್ಲ ಒಂದು ಪ್ರಾಣಿಗಳು ಕಾಣಸಿಗುತ್ತಿವೆ.ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸಫಾರಿ ಕೇಂದ್ರ ಅಕ್ಟೋಬರ್ 2 2024ರಂದು ಪ್ರಾರಂಭಿಸಲಾಗಿತ್ತು. ಆದರೆ ಇದುವರೆಗೂ ಒಮ್ಮೆಯೂ ಹುಲಿರಾಯ ದರ್ಶನ ನೀಡಿರಲಿಲ್ಲ. ಇಂದು ಮೊದಲ ಬಾರಿಗೆ ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಹುಲಿ ಕಾಣಿಸಿಕೊಂಡಿದೆ.

Read More

ದೇವನಹಳ್ಳಿ : ಇಲ್ಲಿಯವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಸರಿ ಪಡೆಗೆ ತಿರುಗೇಟು ನೀಡಿದರು. ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರ ಸಾವಿರ ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳೆಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ ಎಂದರು. https://ainkannada.com/no-one-should-do-politics-in-the-house-of-death-ganiga-ravikumar/ ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾಣುತ್ತದೆ ಎಂದು ಟೀಕಿಸಿದರು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ…

Read More

ಬೆಂಗಳೂರು: ಪಹಲ್ಗಾಮ್ ನಲ್ಲಿನ ಭಯೋತ್ಪಾದಕರ ದಾಳಿ ಕುರಿತ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಸಿಎಂ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು ಎಂದಿದ್ದಾರೆ. ಪಹಲ್ಗಾಮ್ ನಲ್ಲಿ ನಡೆದ ಪಾಕ್‍ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ. ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ…

Read More

ಬೆಂಗಳೂರು : ಖ್ಯಾತ ವಿಜ್ಞಾನಿ ಡಾ. ಕಸ್ತೂರಿ ರಂಗನ್ ಅವರ ನಿಧನದಿಂದ ಅಪಾರ ಜ್ಞಾನ ಸಂಪತ್ತನ್ನು ಕಳೆದುಕೊಂಡಿದ್ದೇವೆ. ಇವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಬೇಡಿಕೊಳ್ಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. https://ainkannada.com/road-accident-three-spot-death-one-serious-sutak-at-madves-house/ ಕಸ್ತೂರಿ ರಂಗನ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,‌ ನಾಡು ಮತ್ತು ಕಾಡಿನ ಸಂಪತ್ತು ಉಳಿಯಲು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡವರು ಕಸ್ತೂರಿ ರಂಗನ್ ಅವರು. ಭಾರತದ ಹಾಗೂ ಪ್ರಪಂಚದ ಶ್ರೇಷ್ಠ ವಿಜ್ಞಾನಿಗಳಾಗಿದ್ದ ಕಸ್ತೂರಿ ರಂಗನ್ ಅವರು ಜ್ಞಾನ ಆಯೋಗದ ಅಧ್ಯಕ್ಷರಾಗಿ, ರಾಜ್ಯಸಭಾ ಸದಸ್ಯರಾಗಿ ಸಮಾಜಕ್ಕೆ ಅಪಾರ ಕೊಡುಗೆ ಕೊಟ್ಟಿದ್ದಾರೆ‌. ಸಾವು ಖಚಿತ, ಆದರೆ ನಾವು ಏನು ಕೊಡುಗೆಗಳನ್ನು ಬಿಟ್ಟು ಹೋಗುತ್ತೇವೆ ಎನ್ನುವುದು ಮುಖ್ಯ” ಎಂದು ಹೇಳಿದರು. ಸರ್ಕಾರ ಇವರ ಕೊಡುಗೆಗಳ ಬಗ್ಗೆ ಚರ್ಚಿಸಿ, ಅವುಗಳನ್ನು ಉಳಿಸುವ ಕೆಲಸ ಮಾಡಲಾಗುವುದು. ಇಸ್ರೋಗೆ ದೊಡ್ಡ ಹೆಸರು ಬರಲು ಇವರ ಕೊಡುಗೆ ಅಪಾರ ಎಂದು ಸ್ಮರಿಸಿದರು.

Read More

ಬೆಂಗಳೂರು: ಡಾ. ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಅದರಲ್ಲೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ: ಕೆ ಕಸ್ತೂರಿ ರಂಗನ್ ರವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ದೇಶ ಕಂಡಂತ ಹೆಸರಾಂತ ವಿಜ್ಞಾನಿ.ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ದೀರ್ಘ ಕಾಲ ಇಸ್ರೋ ಅಧ್ಯಕ್ಷರಾಗಿ ದ್ದವರು. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರನ್ನು ನಾವು ಮರೆಯಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಕೂಡ ಮಾಡುವ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ರಾಷ್ಟ್ರ ಮಟ್ಟದಲ್ಲಿ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು ಎಂದರು. ಪರಿಸರ ಕ್ಷೇತ್ರಕ್ಕೆ ಹಾಗೂ ಕರ್ನಾಟಕಕ್ಕೆ ಅವರ ಕೊಡುಗೆ ಅಪಾರವಾದುದು. ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. https://ainkannada.com/good-news-for-senior-citizens-if-you-have-someone-over-60-years-of-age-in-your-household-check-out-this-news/ ಅನಿವಾರ್ಯವಾದಾಗ ಮಾತ್ರ ಯುದ್ಧಮಾಡಬೇಕು. ಯುದ್ಧ ಬೇಡ ಎಂಬ ಮುಖ್ಯಮಂತ್ರಿಗಳ ಹೇಳಿಕೆಯ…

Read More

ಕಲಬುರಗಿ: ಪಾಕಿಸ್ತಾನ ವಿರುದ್ಧ ಯುದ್ಧ ಬೇಡ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ತ್ನಾಳ್ ಗರಂ ಆಗಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮುಸ್ಲಿಂ ಏಜೆಂಟ್ ಪಾಕಿಸ್ತಾನದ ಏಜೆಂಟ್ಸಿ. ಸಿದ್ದರಾಮಯ್ಯಗೆ ಮಾನ ಮಾರ್ಯಾದೆ ಏನಾದರೂ ಇದ್ಯಾ..? ಧರ್ಮ ಯಾವುದು ಅಂತಾ ಕೇಳಿ ಫೈರಿಂಗ್ ಮಾಡಿದ್ದಾರೆ. ಸಿದ್ದರಾಮಯ್ಯ ಹಿಂದೂಗಳು ವೋಟ್ ಹಾಕಿಲ್ವ? ಕೇವಲ ಸಾಬುರುಗಳೇ ವೋಟ್ ಹಾಕಿದಾರ? ಸಾಬರ ಎಂಜಲು ತಿನ್ನೊ ಪಾರ್ಟಿ ಕಾಂಗ್ರೆಸ್ ಪಾರ್ಟಿ, ಕಾಂಗ್ರೆಸ್ ಅಂದ್ರೆ ಸಾಬೂರ ಪಾರ್ಟಿ ಆಗಿಬಿಟ್ಟಿದೆ. ಪಾಕ್‌ಗೆ ನೀರು ಬಿಡೋದು ಬಿಟ್ಟು ಹೆಚ್ಚಾದರೇ ಏನ್ ಮಾಡ್ತಿರ ಅಂತಾ ಕೇಳ್ತಾರೆ. ನಾಚಿಕೆಯಾಗಬೇಕು ಇವರ ಜನ್ಮಕ್ಕೆ.. https://ainkannada.com/what-a-time-it-has-been-guru-wife-tries-to-kill-husband-who-questioned-her/ ಕಾಂಗ್ರೆಸ್‌ನವರು ಅಯೋಗ್ಯರು ಪಾಕಿಸ್ತಾನದ ಪರ ಮಾತಾಡ್ತಾರೆ. ಯುದ್ಧ ಬೇಕು ಬೇಡ ಅನ್ನೊದು ಸಿದ್ದರಾಮಯ್ಯಗೆ ಸಂಬಂಧವಿಲ್ಲ. ಸಿದ್ದರಾಮಯ್ಯ ಕರ್ನಾಟಕ ಸಿಎಂ ಅಷ್ಟೇ. ಯುದ್ಧದ ಬಗ್ಗೆ ನಿರ್ಣಯ ತೆಗೆದುಕೊಳ್ಳೊದು ಕೇಂದ್ರ ಸರ್ಕಾರ ಹಾಗೂ ಸೇನೆ ಎಂದು ತಿರುಗೇಟು ನೀಡಿದರು.

Read More

ಮಂಡ್ಯ : ಸಾವಿನ ಮನೆಯಲ್ಲಿ ಯಾರೂ ರಾಜಕಾರಣ ಮಾಡಬಾರದು. ಫಹಲ್ಗಾಮ್ ನಲ್ಲಿ ನಡೆದ ಘಟನೆ ನಿಜಕ್ಕೂ ಖಂಡನೀಯ ಎಂದು ಶಾಸಕ ರವಿಕುಮಾರ್ ಗಾಣಿಗ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ಮಾತನಾಡಿದ ಅವರು,ಸಂವಿಧಾನವನ್ನು ತಿರುಚಿ ರಾಜಕಾರಣ ಮಾಡುವುದು ಸರಿಯಲ್ಲ. ಸಂವಿಧಾನಕ್ಕೆ ನಾವು ಗೌರವ ಕೊಡಬೇಕು. ಹೆಣ ಇಟ್ಟುಕೊಂಡು ರಾಜಕಾರಣ ಮಾಡುವುದು ಸರಿಯಲ್ಲ. ನಾವು ಶಾಂತಿ ಪ್ರಿಯರು ಈ ಘಟನೆ ನಿಜಕ್ಕೂ ಖಂಡನೀಯ. ಸಾವಿನ ಮನೆಯೆಂಬುದು ಕಾಣದೇ ರಾಜಕಾರಣ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. https://ainkannada.com/pahalgam-attack-case-srimurali-lashes-out-at-terrorists/ ಭಾರತದಲ್ಲಿ ಹೆಣದ ಮೇಲಿನ ರಾಜಕಾರಣ ನಡೆಯಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರ ಎಂದು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ರವಿಕುಮಾರ್ ಗಣಿಗ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಬಿಜೆಪಿಗರ ಜನಾಕ್ರೋಶ ಯಾತ್ರೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಹಿಳೆಯರ ಬಾಯಿಗೆ ಮೋದಿ ಮಣ್ಣಾಕಿದರು. ಮೋದಿ ಬೆಲೆ ಏರಿಕೆ ಮಾಡಿದ್ದಾರೆ. ಅವರ ವಿರುದ್ದ ಇಂದು ಮಂಡ್ಯದಲ್ಲಿ ಪ್ರತಿಭಟನೆ ಮಾಡ್ತಿದ್ದಾರಾ?. ಮಹಿಳೆಯರ ಬಾಯಿಗೆ ಮೋದಿಯವ್ರು…

Read More