ದೇವನಹಳ್ಳಿ:- ರಾಜ್ಯ ಸರಕಾರ ಅಧಿಕಾರ ಬಂದು 2 ವರ್ಷ ಪೂರೈಸುತ್ತಿರುವ ಹಿನ್ನೆಲೆ ಸರಕಾರದ ಸಾಧನೆ ಸಮಾರಂಭವನ್ನು ಇಂದು ಬೆಂಗಳೂರು ಗ್ರಾಮಾಂತರದ ಜಿಲ್ಲಾ ಕೇಂದ್ರವಾದ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದೆ. https://ainkannada.com/three-arrested-for-murdering-a-woman-and-escaping-for-just-rs-15000/ ಸಚಿವ ಕೆಚ್ ಹೆಚ್ ಮುನಿಯಪ್ಪ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆ ಸೇರಿದಂತೆ ಸಚಿವರು ಶಾಸಕರು ಭಾಗಿಯಾಗಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು, 256 ಕೋಟಿಯಷ್ಟು ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. 125 ಕೋಟಿಯಷ್ಟು ಸಿಎಸ್ ಆರ್ ಅನುಧಾನದ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದು, 465 ಕೋಟಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಅಷ್ಟೇ ಅಲ್ಲದೇ 1000 ಕೋಟಿಯಷ್ಟು ಸವಲತ್ತು ವಿತರಣೆ ಮತ್ತು ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಸಮಾವೇಶಕ್ಕೆ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಹೊಸಕೋಟೆ ತಾಲೂಕಿನಿಂದ ಜನರು ಆಗಮಿಸಲಿದ್ದಾರೆ. 50 ಸಾವಿರಕ್ಕೂ ಹೆಚ್ಚು ಜನ ಸಮಾವೇಶಕ್ಕೆ ಆಗಮಿಸುವ ಸಾಧ್ಯತೆ ಇದ್ದು, ಭದ್ರತೆಗಾಗಿ 1000 ಕ್ಕೂ ಅಧಿಕ ಪೋಲೀಸ್ ಸಿಬ್ಬಂದಿ ಮತ್ತು ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಬಿಜೆಪಿ ಜನಾಕ್ರೋಶ ಕಾರ್ಯಕ್ರಮಕ್ಕೆ ಪ್ರತಿಯಾಗಿ…
Author: AIN Author
ಬೆಳಗಾವಿ :-ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಮಹಿಳೆ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಾಯಿ, ಮಗಳು ಸೇರಿ ಅಪ್ರಾಪ್ತ ಪುತ್ರನನ್ನು ಪೊಲೀಸರು ಅರೆಸ್ಟ್ ಮಾಡಿ ತನಿಖೆ ಕೈಗೊಂಡಿದ್ದಾರೆ. ಜ್ಯೋತಿ ಬಾಂದೇಕರ್, ಸುಹಾನಿ ಬಾಂದೇಕರ್ ಹಾಗೂ ಕೊಲೆಗೆ ಸಾಥ್ ಕೊಟ್ಟ ಅಪ್ರಾಪ್ತ ಬಂಧಿತರು ಎನ್ನಲಾಗಿದೆ. ಗಣೇಶಪುರದ ಅಪಾರ್ಟ್ಮೆಂಟ್ನಲ್ಲಿ ಏ.22 ರಂದು ಅಂಜನಾ ದಡ್ಡೀಕರ್ನನ್ನು ಆರೋಪಿಗಳು ಹತ್ಯೆ ಮಾಡಿದ್ದರು. ಅಲ್ಲದೇ ಪೊಲೀಸರ ದಿಕ್ಕು ತಪ್ಪಿಸಲು ಆರೋಪಿಗಳು ಮಹಿಳೆಯ ಮೈಮೇಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. https://ainkannada.com/road-accident-three-spot-death-one-serious-sutak-at-madves-house/ ಕೊಲೆಯಾದ ಅಂಜನಾ 15 ಸಾವಿರ ರೂ. ಸಾಲ ವಾಪಸ್ ಕೇಳಿದ್ದಕ್ಕೆ ಆರೋಪಿಗಳು ಗಲಾಟೆ ಮಾಡಿ, ಹಲ್ಲೆ ಮಾಡಿದ್ದರು. ಈ ವೇಳೆ ತಲೆಗೆ ಪೆಟ್ಟಾಗಿ, ಅಂಜನಾ ಸಾವನ್ನಪ್ಪಿದ್ದಳು. ಬಳಿಕ ಅನುಮಾನ ಬರದಂತೆ, ಮಕ್ಕಳನ್ನು ಬಚಾವ್ ಮಾಡಲು ಮಹಿಳೆಯ ಚಿನ್ನಾಭರಣ ಕದ್ದಿದ್ದಳು. ಇಷ್ಟೇ ಅಲ್ಲದೇ ಘಟನೆ ನಡೆದ ದಿನ ಊರಲ್ಲಿ ಇರಲಿಲ್ಲ ಎಂಬಂತೆ ಬಿಂಬಿಸಿದ್ದರು. ಆದರೆ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಲಾಗಿದೆ.
ಕಲಬುರಗಿ :- ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಜರುಗಿದೆ. https://ainkannada.com/pahalgam-attack-every-indians-blood-is-boiling-namo/ ಮಹೇಶ್ (32), ಪ್ರೇಮ್ ಕುಮಾರ್ (25) ಮತ್ತು ಅನ್ನದಾನಯ್ಯ(25) ಮೃತರು. ನಿತ್ಯಾನಂದ ಗಾಯಗೊಂಡವರು. ಮದುವೆ ಆಮಂತ್ರಣ ಪತ್ರಿಕೆ ಕೊಡಲು ಕಾರಿನಲ್ಲಿ ಸೇಡಂ ಕಡೆಯಿಂದ ಗುಂಡಗುರ್ತಿ ಕಡೆಗೆ ಹೊರಟಿರುವಾಗ ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ಮಳಖೇಡ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನವದೆಹಲಿ:- ಜಮ್ಮುಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ಭಾರತೀಯಮ ರಕ್ತ ಕುದಿಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. https://ainkannada.com/terrorist-attack-bagalkot-athletes-observe-silence-for-the-deceased-and-carry-out-cleanliness-drive/ ಮನ್ ಕಿ ಬಾತ್’ ನ 121 ನೇ ಸಂಚಿಕೆಯಲ್ಲಿ ಮಾತನಾಡಿದ ಮೋದಿ, ಪಹಲ್ಗಾಮ್ ದಾಳಿಯಿಂದ ಸಂತ್ರಸ್ತರು ದುಃಖಿಸುತ್ತಿರುವ ದೃಶ್ಯಗಳನ್ನು ನೋಡಿದರೆ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ. ಪಹಲ್ಗಾಮ್ ದಾಳಿಯಿಂದ ನನಗೆ ತುಂಬಾ ನೋವಾಗಿದೆ. ಇದು ಭಯೋತ್ಪಾದನೆಯ ಬೆಂಬಲಿಗರ ಹತಾಶೆ ಅವರ ಹೇಡಿತನವನ್ನು ತೋರಿಸುತ್ತದೆ. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಲಿದೆ. ಅಪರಾಧ ಎಸಗಿದವರಿಗೆ, ಬೆಂಬಲಿಗರಿಗೆ, ಸೂತ್ರಧಾರಿಗಳವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗುಡುಗಿದರು. ಕಾಶ್ಮೀರ ಮತ್ತು ರಾಷ್ಟ್ರದ ಶತ್ರುಗಳು ಈ ಪ್ರದೇಶದ ಗಮನಾರ್ಹ ಪ್ರಗತಿಯನ್ನು ಹಳಿತಪ್ಪಿಸಲು ನಡೆಸಿದ ಹತಾಶ ಪ್ರಯತ್ನವಿದು. ಕಾಶ್ಮೀರ ಇತ್ತೀಚಿನ ವರ್ಷಗಳಲ್ಲಿ ಅಭೂತಪೂರ್ವ ಬೆಳವಣಿಗೆಯನ್ನು ಕಂಡಿತ್ತು. ಪ್ರವಾಸೋದ್ಯಮದಲ್ಲಿ ಯುವಕರಿಗೆ ಹೊಸ ಅವಕಾಶ ಸಿಕ್ಕಿತ್ತು ಎಂದು ಹೇಳಿದರು.
ಬಾಗಲಕೋಟೆ: ವಿವಾರ ಬೆಳಿಗಿನ ಜಾವ ಜಿಲ್ಲಾ ಕ್ರೀಡಾಂಗಣದಲ್ಲಿ ಕರಾಟೆ ಪಟುಗಳು ಹಾಗೂ ಆರ್ಮಿ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ತಮ್ಮ ಕಠಿಣ ತರಬೇತಿ ಮುಗಿದ ನಂತರ ಕರಾಟೆ ಮತ್ತು ವಿವಿಧ ಕ್ರೀಡೆಗಳ ಮುಖ್ಯಸ್ಥರೊಂದಿಗೆ ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ ದೇಶವಾಸಿಗಳಿಗೆ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. https://ainkannada.com/a-slight-break-in-gold-prices-do-you-know-what-the-gold-rate-is-in-bangalore/ ಈ ವೇಳೆ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಕರಾಟೆ ಚೀಪ್ ಕೋಚ್ ಎಸ್. ಆರ್. ರಾಠೋಡ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಮೇಶ ಬದ್ನೂರ, ಆರ್ಮಿ ತರಬೇತಿ ಕೇಂದ್ರದ ಉಮಾಕಾಂತ್ ತೇಲಕರ್ ಸೇರಿದಂತೆ ವಿವಿಧ ಕ್ರೀಡೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು
ಚಿನ್ನದ ಹಬ್ಬ ಅಕ್ಷಯ ತೃತೀಯಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಆಭರಣ ಪ್ರಿಯರ ಚಿತ್ತ ಚಿನ್ನದ ದರದತ್ತ ನೆಟ್ಟಿದೆ. ದಿನದಿಂದ ದಿನಕ್ಕೆ ಚಿನ್ನದ ದರ ಏರಿಕೆ ಕಾಣುತ್ತಿದ್ದು, ಮಧ್ಯಮವರ್ಗದ ಜನರಿಗೆ ಗಗನಕುಸುಮವಾಗುತ್ತಿದೆ. ಇನ್ನು ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿ ಮಾಡಬೇಕು ಎಂದು ಕನಸು ಕಂಡಿದ್ದವರಿಗೆ ಇತ್ತೀಚಿನ ದರ ಏರಿಕೆಯು ಬಿಗ್ ಶಾಕ್ ನೀಡಿತು. ಆದರೆ ಇಂದು ಚಿನ್ನದ ದರ ಅಲ್ಪ ಇಳಿಕೆ ಕಂಡಿದೆ. ಇದು ಗೋಲ್ಡ್ ಪ್ರಿಯರಿಗೆ ಸ್ವಲ್ಪ ಸಮಾಧಾನ ತಂದಿದೆ. https://ainkannada.com/dengue-scare-in-bengaluru-how-many-cases-were-registered-in-just-three-months-here-is-the-shocking-report/ ವಾರದ ಆರಂಭದ ಎರಡು ದಿನದಲ್ಲಿ ಗ್ರಾಮ್ಗೆ 350ಕ್ಕೂ ಹೆಚ್ಚು ರುಪಾಯಿಗಳಷ್ಟು ಏರಿಕೆಗೊಂಡಿದ್ದ ಚಿನ್ನದ ಬೆಲೆ ನಂತರ ಇಳಿಕೆಯಾಗತೊಡಗಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಬಹಳ ಅಲ್ಪ ಇಳಿಕೆ ಆಗಿದೆ. ಗ್ರಾಮ್ಗೆ 3 ರೂ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 90,020 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 98,210 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ…
ಬೆಂಗಳೂರು:- ನಗರದಲ್ಲಿ ಡೆಂಘಿ ಭೀತಿ ಹೆಚ್ಚಾಗಿದ್ದು, ಸಿಟಿ ಮಂದಿ ಗಾಬರಿಗೊಂಡಿದ್ದಾರೆ. ಕಳೆದ ಮೂರುವರೇ ತಿಂಗಳಲ್ಲಿ 2,361 ಡೆಂಘಿ ಶಂಕಿತರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅವರಲ್ಲಿ 435 ಮಂದಿಯಲ್ಲಿ ಡೆಂಘಿ ದೃಢಪಟ್ಟಿದೆ. ರಾಜಧಾನಿಯಲ್ಲಿ ಈಗ ಡೆಂಘಿ ಭೀತಿ ಶುರುವಾಗಿದೆ. ಅಕಾಲಿಕ ಬೇಸಿಗೆಯ ಮಳೆಗೂ ಡೆಂಘಿ ಪ್ರಕರಣ ಕಂಡು ಬರುತ್ತಿವೆ. ಕಳೆದ ವಾರದ ಹಿಂದಷ್ಟೆ ನಗರದಲ್ಲಿ ಸುರಿದ ಮಳೆಯಿಂದ ಡೆಂಘಿ ಹರಡುವ ಸಾಧ್ಯತೆ ಹೆಚ್ಚಿದೆ. https://ainkannada.com/hubballi-shri-moojagus-advice-for-a-grand-basava-jayanti-celebration/ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಡೆಂಘಿ ಕೇಸ್ ಹೆಚ್ಚಳವಾಗಿವೆ. ಪೂರ್ವ ಮುಂಗಾರು ಮಳೆ ಎಫೆಕ್ಟ್ ಬೇಸಿಗೆಯಲ್ಲಿಯೇ ಡೆಂಘಿ ಕೇಸ್ ಹೆಚ್ಚಳ ಕಂಡು ಬರುತ್ತಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಗರಿಷ್ಠ ಪ್ರಕರಣಗಳು ವರದಿಯಾಗಿದ್ದು, 2,361 ಡೆಂಘಿ ಶಂಕಿತರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ ನಗರದಲ್ಲಿ 435 ಮಂದಿಯಲ್ಲಿ ಡೆಂಘಿ ದೃಢಪಟ್ಟಿದೆ. ಪ್ರತಿ ವರ್ಷ ಮುಂಗಾರು ಮಳೆ ಕಾಣಿಸಿಕೊಂಡ ಬಳಿಕ ಈ ಜ್ವರ ಹೆಚ್ಚಿನವರನ್ನು ಬಾಧಿಸುತ್ತಿತ್ತು. ಆದರೆ ಈಗ ಬೇಸಿಗೆಯಲ್ಲಿಯೇ ಸೊಳ್ಳೆ ಕಾಟದಿಂದ ಡೆಂಘಿ ಜ್ವರ ಹೆಚ್ಚಳವಾಗಿದೆ. ಕಳೆದ ವರ್ಷ ಡೆಂಘಿ…
ಹುಬ್ಬಳ್ಳಿ: ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ರೋತ್ಸವದ ಅಂಗವಾಗಿ ನಗರದ ಮೂರುಸಾವಿರಹ ಮಠದಲ್ಲಿ ನಡೆಯುವ ಶ್ರೀ ಬಸವೇಶ್ವರ ಜಯಂತಿಯನ್ನ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಬೇಕು ಎಂದು ಜಗದ್ಗುರು ಡಾ.ಗುರುಸಿದ್ದ ರಾಜಯೋ ಗೀಂದ್ರ ಮಹಾಸ್ವಾಮಿಗಳ ಹೇಳಿದರು. https://ainkannada.com/bidar-a-different-kind-of-protest-by-sticking-a-pakistani-flag-on-the-road-to-condemn-the-terrorist-attack/ ನಗರದ ಮೂರು ಸಾವಿರ ಮಠದ ಆವರಣದಲ್ಲಿಂದು ಶ್ರೀ ಜಯಂತಿ ಅಂಗವಾಗಿ ಕಾರ್ಯಕ್ರಮದ ಸಾನಿಧ್ಯವಹಿಸಿ ಷಟ್ ಸ್ಥಲ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು. ಇಂದಿನಿಂದ ಆರಂಭಗೊಂಡು ಏಪ್ರಿಲ್ 30 ರವರೆಗೆ ವಿವಿಧ ಕಾರ್ಯ ಕ್ರಮಗಳನ್ನ ಅತ್ಯಂತ ಯಶಸ್ವಿಯಾಗಿ ಅಪಾರ ಭಕ್ತರ ನಡುವೆ ನಡೆಸಿಕೊಂಡು ಹೋಗಬೇಕು ಎಂದರು. ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷೆ ಗಿರಿಜಾ ಎಸ್. ಹೂಗಾರ ಮಾತನಾಡಿ, ಇಂದಿನಿಂದ ಬಸವ ಜಯಂತಿ ಪ್ರಯುಕ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇನ್ನು ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಎನ್ ಕೌಂಟರ್ ಮಾಡಿದ ಪಿಎಸ್ ಐ ಅನಸೂಯಾ, ರಾಜ್ಯಕ್ಕೆ ಪಿಯುಸಿ ಯಲ್ಲಿ ಐದನೇ ರಾಂಕ್ ಪಡೆದ ವಿದ್ಯಾರ್ಥಿನಿ ನಾಗವೇಣಿ ಹಾಗೂ ಪತ್ರಕರ್ತರಿಗೆ ಸನ್ಮಾನ…
ಬೀದರ್:- ಇತ್ತೀಚೆಗೆ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಪಾಕಿಸ್ತಾನದ ವಿರುದ್ದ ಬೀದರ್ ನಲ್ಲಿ ವಿಭಿನ್ನ ಹೋರಾಟ ನಡೆದಿದೆ. https://ainkannada.com/tragedy-while-going-to-watch-kabaddi-50-year-old-man-dies-where-did-the-incident-take-place/ ಬೀದರ್ನ ಅಂಬೇಡ್ಕರ್ ವೃತ್ತದಲ್ಲಿ ನಡು ರಸ್ತೆಯಲ್ಲಿ ಪಾಕಿಸ್ತಾನ ಧ್ವಜ ಅಂಟಿಸಿ ಯುವಕರು ಆಕ್ರೋಶ ಹೊರ ಹಾಕಿದ್ದಾರೆ. ಇದೇ ವೇಳೆ ರಸ್ತೆಗೆ ಧ್ವಜ ಅಂಟಿಸಿ, ಪಾಕ್ ಧ್ವಜ ಹರಿದು ಯುವಕರು ಘೋಷಣೆ ಕೂಗಿದ್ದಾರೆ. ಅಂಬೇಡ್ಕರ್ ವೃತ್ತದಲ್ಲಿ ಎರಡು ಮಾರ್ಗಗಳಲ್ಲಿ ಧ್ವಜ ಅಂಟಿಸಲಾಗಿದ್ದು, ಅದಕ್ಕೆ ಕಾಲಿನಿಂದ ಒದ್ದು ಆಕ್ರೋಶ ಹೊರ ಹಾಕಲಾಗಿದೆ.
ಮಂಡ್ಯ:- ಜಿಲ್ಲೆಯ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಕಬಡ್ಡಿ ಆಟ ನೋಡಲು ಹೋದ 50 ವರ್ಷದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ. https://ainkannada.com/terrorist-attack-in-pahalgam-nia-takes-over-investigation-centre/ ಸಾವಿರಾರು ಜನರು ಕಬಡ್ಡಿ ಆಟವನ್ನ ನೋಡಲು ಸೇರಿದ್ರು. ಹೀಗೆ ಪಂದ್ಯ ವೀಕ್ಷಣೆ ಮಾಡುವ ವೇಳೆ ಪ್ರೇಕ್ಷಕರ ಗ್ಯಾಲರಿ ದಿಢೀರ್ ಕುಸಿದು ಬಿಟ್ಟಿದೆ. ಪರಿಣಾಮ ಗ್ಯಾಲರಿಯಲ್ಲಿ ಇದ್ದ ಜನರೆಲ್ಲಾ ದಪ್ ಅಂತ ಕೆಳಗಡೆ ಬಿದ್ದಿದ್ದಾರೆ. ಪರಿಣಾಮ ಕಬಡ್ಡಿ ಪಂದ್ಯ ವೀಕ್ಷಿಸಲು ಬಂದಿದ್ದ 50 ವರ್ಷದ ಪಾಪಣ್ಣಚಾರಿ ಎಂಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನ ಸಂಬಂಧಿಕರು ಸುದ್ದಿ ತಿಳಿದು ತಕ್ಷಣವೇ ಸ್ಥಳಕ್ಕೆ ಆಗಮಿಸಿದ್ರು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ಯಾಲರಿ ಕುಸಿದ ಘಟನೆಯಲ್ಲಿ 13ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನ ತಕ್ಷಣವೇ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ಸದ್ಯ 13 ಜನರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಅಂತ ತಿಳಿದು ಬಂದಿದೆ.