Author: AIN Author

ಕೋಲ್ಕತ್ತಾ:- ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬದುರಿಯಾದ ಶಾಲಾ ಶಿಕ್ಷಕರೊಬ್ಬರು ಇಸ್ಲಾಂ ತ್ಯಜಿಸಲು ನಿರ್ಧರಿಸಿದ್ದಾರೆ. ಸಬೀರ್ ಹುಸೇನ್ ಇಸ್ಲಾಂ ತೊರೆಯಲು ನಿರ್ಧರಿಸಿರುವ ಶಿಕ್ಷಕ. https://ainkannada.com/drug-smuggling-in-food-kit-foreign-woman-arrested-drugs-worth-rs-8-5-crore-seized/ ಈ ಬಗ್ಗೆ ವೀಡಿಯೋ ಹಂಚಿಕೊಂಡಿರುವ ಶಿಕ್ಷಕ ಸಬೀರ್ ಹುಸೇನ್, ಕಾಶ್ಮೀರ ಸೇರಿದಂತೆ ವಿವಿಧೆಡೆ ಧರ್ಮವನ್ನು ಹಿಂಸೆಗಾಗಿ ಆಯುಧವನ್ನಾಗಿ ಬಳಸಲಾಗುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ ನಾನು ಇಸ್ಲಾಂನ್ನು ತ್ಯೆಜಿಸುತ್ತೇನೆ. ಯಾವ ಧರ್ಮದ ವ್ಯಾಪ್ತಿಗೂ ಒಳಪಡದೆ, ಕೇವಲ ಮಾನವನಾಗಿ ಗುರುತಿಸಿಕೊಳ್ಳಲು ಬಯಸುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ.

Read More

ಬೆಂಗಳೂರು:- ಮಕ್ಕಳ ಫುಡ್ ಕಿಟ್‌ನಲ್ಲಿ ಡ್ರಗ್ಸ್ ಸಾಗಾಟ ಮಾಡಲಾಗುತ್ತಿದ್ದ ವಿದೇಶಿ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದ್ದು, 8.5 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ ಮಾಡಲಾಗಿದೆ. https://ainkannada.com/is-it-easy-for-pakistan-to-stop-water-does-india-have-the-ability-to-stop-the-indus-what-do-experts-say/ ಸದ್ಯ ನೈಜೀರಿಯಾ ಯುವತಿಯನ್ನು ಬಂಧಿಸಿದ ಡಿಆರ್‌ಐ 14 ದಿನ ಕಸ್ಟಡಿಗೆ ಪಡೆದಿದೆ. ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ನೈಜೀರಿಯಾ ಯುವತಿ ಮಕ್ಕಳ ಆಹಾರದ ಕಿಟ್‌ನಲ್ಲಿ ಡ್ರಗ್ಸ್ ಮಾರಾಟ ಮಾಡಲು ಯತ್ನಿಸಿದ್ದಳು. ಯುವತಿಯಿಂದ 4.5 ಕೆಜಿಯ 8.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಡಿಆರ್‌ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Read More

ಬೆಂಗಳೂರು:- ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಗೆ ಇಡೀ ಭಾರತ ಬೆಚ್ಚಿಬಿದ್ದಿದೆ. ಉಗ್ರರ ಬೇರನ್ನು ಬುಡಸಮೇತ ಕಿತ್ತು ಹಾಕಬೇಕು ಎಂದು ಸಮಸ್ತ ಭಾರತೀಯರು ಅವುಡುಗಚ್ಚಿ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಮತ್ತೊಂದೆಡೆ ಕೇಂದ್ರದ ಘಟಾಘಟಿ ನಾಯಕರು ಪ್ರತಿಕಾರದ ಮಾತುಗಳನ್ನು ಆಡುತ್ತಿದ್ದಾರೆ. ಇದರಿಂದ ಯುದ್ಧದ ಕಾರ್ಮೋಡ ಆವರಿಸಿದೆ. ಅಷ್ಟೇ ಯಾಕೆ ಪಾಕ್ ಮೇಲೆ ಕೇಂದ್ರ ಹಲವು ಕಟ್ಟುನಿಟ್ಟಾದ ಕ್ರಮ ಕೈಗೊಂಡಿದ್ದು, ಅದರಲ್ಲಿ ಸಿಂಧೂ ಕೂಡ ಒಂದು. https://ainkannada.com/siddaramaiah-is-now-world-famous-the-karnataka-cm-who-shined-in-the-pakistani-media/ ಹಾಗಿದ್ರೆ ಪಾಕಿಸ್ತಾನಕ್ಕೆ ನೀರು ನಿಲ್ಲಿಸೋದು ನಿಜಕ್ಕೂ ಸುಲಭನಾ? ಸಾವಿರಾರು ಕಿ.ಮೀ ಹರಿಯೋ ಸಿಂಧೂ ತಡೆಯೋ ಸಾಮಾರ್ಥ್ಯ ಭಾರತಕ್ಕಿದೀಯಾ? ಪಾಕಿಸ್ತಾನ ವಿರುದ್ಧ ನೀರಿನ ಯುದ್ಧ ಹೇಗೆ? ಇದೆಲ್ಲದರ ವಾಸ್ತವತೆಯನ್ನು ನೀರಾವರಿ ತಜ್ಞ ಕ್ಯಾಪ್ಟನ್ ರಾಜಾರಾವ್ ಬಿಚ್ಚಿಟ್ಟಿದ್ದಾರೆ. ಅಷ್ಟು ದೊಡ್ಡ ನದಿ ನೀರು ನಿಲ್ಲಿಸಲು ಇರುವ ಆಯ್ಕೆಗಳೇನು? ಸವಾಲುಗಳೇನು ಎಂಬ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯ 1960ರ ಸಿಂಧೂ ನದಿ ಒಪ್ಪಂದದ ಪ್ರಕಾರ, 35 ಮಿಲಿಯನ್ ಎಕರ್ ಫೀಟ್ ನೀರು ಭಾರತಕ್ಕೆ, 135 ಎಕರ್ ಫೀಟ್ ನೀರು ಪಾಕಿಸ್ತಾನಕ್ಕೆ…

Read More

ಬೆಂಗಳೂರು:- ಪಹಲ್ಗಾಮ್ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧದ ಕೊಂಡಿ ಕಳಚಿ ಬಿದ್ದಿದೆ. ಈ ನಡುವೆಯೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾತ್ರ ಪಾಕ್ ಮಾಧ್ಯಮಗಳಲ್ಲಿ ಮಿಂಚುವ ಮೂಲಕ ಸಖತ್ ಫೇಮಸ್ ಆಗಿದ್ದಾರೆ. https://ainkannada.com/countdown-to-the-annual-festival-of-sri-chowdeshwari-temple-all-preparations-from-the-management-board/ ಭಾರತ ಯುದ್ಧ ಮಾಡಬಾರದು ಎಂದಿದ್ದ ಸಿಎಂ ಅವರ ಹೇಳಿಕೆಯನ್ನು ಪಾಕ್‌ ಮಾಧ್ಯಮಗಳು ಪ್ರಸಾರ ಮಾಡಿವೆ. ಪಾಕ್‌ ಮಾಧ್ಯಮಗಳಲ್ಲಿ ಸಿದ್ದರಾಮಯ್ಯನವರ ಹೇಳಿಕೆ ಪ್ರಸಾರವಾದ ಬೆನ್ನಲ್ಲೇ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ಪಾಕಿಸ್ತಾನ ರತ್ನ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ. ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ,…

Read More

ದೇವನಹಳ್ಳಿ :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಶ್ರೀ ಚೌಡೇಶ್ವರಿ ದೇವಾಲಯದ ವಾರ್ಷಿಕ ಮಹೋತ್ಸವಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. https://ainkannada.com/we-are-ready-for-war-if-indus-river-water-is-not-released-pakistan-home-minister/ ದೇವಾಲಯದ ಆಡಳಿತ ಮಂಡಳಿ ಯಿಂದ ಇದೇ ತಿಂಗಳ 29 ಹಾಗೂ 30 ನೇ ತಾರೀಕಿನಂದು ನಡೆಯಲಿರುವ ದೇವಾಲಯದ12 ನೇ ವಾರ್ಷಿಕ ಮಹೋತ್ಸವಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ವಾರ್ಷಿಕ ಮಹೋತ್ಸವ ದಂದು ದೇವಾಲಯದಲ್ಲಿ ಗಂಗಾ ಪೂಜೆ, ಮಹಾ ಸಂಕಲ್ಪ, ಮಹಾಭಿಷೇಕ ನಡೆಯಲಿದೆ. ದೇವಾಲಯದ ಮಹೋತ್ಸವ ದಲ್ಲಿ ಚಿನ್ನಲೇಪಿತ ಅಮ್ಮನವರ ಉತ್ಸವ ಮೂರ್ತಿ ಮೆರವಣಿಗೆ ಆಯೋಜನೆ ಮಾಡಲಾಗಿದೆ. ಪ್ರಥಮ ಬಾರಿಗೆ ದೇವಾಲಯದಲ್ಲಿ ಭೂ ವ್ಯಾಜ್ಯಗಳ ನಿವಾರಣೆ ಹಾಗೂ ಲೋಕ ಕಲ್ಯಾಣಕ್ಕೆ ವಾರಾಹಿ ಹೋಮ ನಡೆಯಲಿದೆ. ವಾರ್ಷಿಕ ಮಹೋತ್ಸವ ಕ್ಕೆ ಆಡಳಿತ ಮಂಡಳಿಯಿಂದ ದೇವಿಯ ಅನುಗ್ರಹ ಪಡೆಯುವಂತೆ ಭಕ್ತ ಗಣದಲ್ಲಿ ವಿಜ್ಞಾಪನೆ ಮಾಡಲಾಗಿದೆ. ಒಟ್ಟಾರೆ ಮಹೋತ್ಸವಕ್ಕೆ ಎಲ್ಲಾ ರೀತಿಯ ತಯಾರಿ ನಡೆಯುತ್ತಿದೆ.

Read More

ಇಸ್ಲಾಮಾಬಾದ್:- ಪಹಲ್ಗಾಮ್ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧದ ಕೊಂಡಿ ಕಳಚಿದೆ. ಹೀಗಾಗಿ ಪಾಕ್ ಮೇಲೆ ಸಾಕಷ್ಟು ಕಠಿಣ ನಿರ್ಧಾರಗಳನ್ನು ಭಾರತ ಕೈಗೊಂಡಿದೆ. https://ainkannada.com/transportation-bus-bike-face-to-face-collision-rider-death/ ಎಸ್, ಪಹಲ್ಗಾಮ್‌ ದಾಳಿಯ ಬಳಿಕ ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನತೆ ವ್ಯಾಪಕವಾಗುತ್ತಿದೆ. ಸಿಂಧೂ ಜಲ ಒಪ್ಪಂದ ರದ್ದುಗೊಳಿಸುವುದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಭಾರತ ಸರ್ಕಾರ ತೆಗೆದುಕೊಂಡ ಬಳಿಕ ಪಾಕಿಸ್ತಾನದ ಒಬ್ಬೊಬ್ಬರು ಸಚಿವರು ಬಾಲ ಬಿಚ್ಚುತ್ತಿದ್ದಾರೆ. ಇದೀಗ ಪಾಕ್ ಗೃಹ ಸಚಿವ ನಖ್ವಿ ಯುದ್ಧಕ್ಕೆ ಸಿದ್ಧ ಎಂದು ಬುಸುಗುಟ್ಟಿದ್ದಾರೆ.ಭಾರತವು ಸಿಂಧೂ ಜಲ ಒಪ್ಪಂದವನ್ನ ಏಕಪಕ್ಷೀಯವಾಗಿ ಕೊನೆಗೊಳಿಸಲು ಸಾಧ್ಯವಿಲ್ಲ. ಏಕೆಂದರೆ ವಿಶ್ವಬ್ಯಾಂಕ್ ಈ ಒಪ್ಪಂದದ ಮಧ್ಯಸ್ಥಿಕೆ ವಹಿಸಿದೆ. ಅಂತಹ ಯಾವುದೇ ಕ್ರಮ ಕೈಗೊಂಡರೆ, ಪಾಕಿಸ್ತಾನ ಯುದ್ಧಕ್ಕೆ ಸಿದ್ಧವಾಗಿದೆ ಎಂದು ನಖ್ವಿ ಎಚ್ಚರಿಕೆ ನೀಡಿದ್ದಾರೆ.

Read More

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ನಡುವೆ ತಾಲ್ಲೂಕಿನ “ಕುಸುಗಲ್ಲ ಗ್ರಾಮದ ರಿಂಗ್ ರಸ್ತೆ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ, ತಾಲ್ಲೂಕಿನ ಇಂಗಳಹಳ್ಳಿ ಗ್ರಾಮದ ರವಿ ಬಾಳಿಕಾಯಿ (33) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. https://ainkannada.com/the-department-of-meteorology-which-has-forecasted-one-rainfall-in-many-districts-of-karnataka/ ಹುಬ್ಬಳ್ಳಿಯಿಂದ ನವಲಗುಂದಕ್ಕೆ ಬಸ್ ತೆರಳುತ್ತಿದ್ದು, ನವಲಗುಂದ ಕಡೆ ಯಿಂದ ಹುಬ್ಬಳ್ಳಿಗೆ ಬೈಕ್ ಸವಾರ ರವಿ ಬರುತ್ತಿದ್ದರು. ಅಪಘಾತದಿಂದ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು:- ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/ipl-2025-today-delhi-r-cbs-fight-bangalore-in-reveng/ ಇಂದಿನಿಂದ ಮೇ.1ರವರೆಗೆ ಕರ್ನಾಟಕದ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾವೇರಿ, ಬೀದರ್, ಬಳ್ಳಾರಿ, ವಿಜಯನಗರ, ತುಮಕೂರು ಹಾಗೂ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ…

Read More

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಏಪ್ರಿಲ್ 27 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2025 ರ 46ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸಂಜೆ 7:30ಕ್ಕೆ ಆರಂಭವಾಗುವ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. https://ainkannada.com/pbks-vs-kkr-cancel-the-match-one-point-for-both-teams/ ಈವರೆಗೆ ತವರಿನಿಂದ ಹೊರಗೆ ಆಡಿರುವ ಎಲ್ಲಾ ಐದು ಪಂದ್ಯಗಳಲ್ಲೂ ಭರ್ಜರಿ ಗೆಲುವು ಸಾಧಿಸಿರುವು ಆರ್ ಸಿಬಿ ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಲೀಗ್​ನಲ್ಲಿ ಉಭಯ ತಂಡಗಳ ನಡುವೆ ಇದು ಎರಡನೇ ಪಂದ್ಯವಾಗಿದ್ದು, ಆರ್​ಸಿಬಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಈ ಹಿಂದೆ ಉಭಯ ತಂಡಗಳ ನಡುವೆ ನಡೆದಿದ್ದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಆರ್​ಸಿಬಿ ತಂಡವನ್ನು ಬೆಂಗಳೂರಿನಲ್ಲಿ ಮಣಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಆರ್​ಸಿಬಿ ಡೆಲ್ಲಿ ತಂಡವನ್ನು ಅವರ ನೆಲದಲ್ಲಿ ಮಣಿಸಿ ಸೇಡು ತೀರಿಸಿಕೊಳ್ಳುವ ಗುರಿ ಹೊಂದಿ ತವರಿನಿಂದ ಹೊರಗೆ ಬಲಿಷ್ಠ ತಂಡಗಳನ್ನೇ ಮಟ್ಟ ಹಾಕಿರುವ ಆರ್ ಸಿಬಿ ಭಾನುವಾರ ನಡೆಯುವ ಪಂದ್ಯದಲ್ಲಿ…

Read More

ನಿರಂತರ ಮಳೆ ಹಿನ್ನೆಲೆ ಈಡನ್‌ ಗಾರ್ಡನ್‌ ಮೈದಾನದಲ್ಲಿ ನಿನ್ನೆ ನಡೆಯಬೇಕಾಗಿದ್ದ PBKS vs KKR ಪಂದ್ಯ ರದ್ದಾಗಿದೆ. ಇದರಿಂದ 11 ಅಂಕಗಳೊಂದಿಗೆ ಪಂಜಾಬ್‌ ಕಿಂಗ್ಸ್‌ 4ನೇ ಸ್ಥಾನಕ್ಕೆ ಜಿಗಿದರೆ, ಕೋಲ್ಕತ್ತಾ ನೈಟ್‌ರೈಡರ್ಸ್‌ 7 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿ ಉಳಿದಿದೆ. ಮೊದಲ ಮೂರು ಸ್ಥಾನಗಳಲ್ಲಿ ಕ್ರಮವಾಗಿ ಗುಜರಾತ್‌ ಟೈಟಾನ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌, ಆರ್‌ಸಿಬಿ ಸ್ಥಾನ ಪಡೆದುಕೊಂಡಿವೆ. https://ainkannada.com/these-piles-are-planning-to-open-a-new-branch-of-business-sundays-rashi-future-27-april-2025/ ಗೆಲುವಿಗೆ 202 ರನ್‌ಗಳ ಗುರಿ ಪಡೆದ ಕೋಲ್ಕತ್ತಾ ರೆಹಮಾನುಲ್ಲಾ ಗುರ್ಬಾಜ್‌, ಸುನೀಲ್‌ ನರೇನ್‌ ಆರಂಭಿಕ ಜೋಡಿಯನ್ನು ಕಣಕ್ಕಿಳಿಸಿತ್ತು. ಮೊದಲ ಓವರ್‌ನಲ್ಲಿ 7 ರನ್‌ ಗಳಿಸುತ್ತಿದ್ದಂತೆ ಮಳೆ ಕಾಟ ಶುರುವಾಯಿತು. ಇದರಿಂದ ರಾತ್ರಿ 11:44 ಗಂಟೆಗೆ 5 ಓವರ್‌ಗಳ ಪಂದ್ಯ ನಡೆಸಲು ಯೋಜಿಸಲಾಗಿತ್ತು. ಆದ್ರೆ ನಿರಂತರ ಮಳೆಯಾಗಿದ್ದರಿಂದ ಪಂದ್ಯವನ್ನು ಫಲಿತಾಂಶವಿಲ್ಲದೇ ರದ್ದುಗೊಳಿಸಲಾಯಿತು.

Read More