ಸೂರ್ಯೋದಯ – 5:56 ಬೆ ಸೂರ್ಯಾಸ್ತ – 6:31 ಸಂಜೆ. ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ಅಮಾವಾಸ್ಯೆ ನಕ್ಷತ್ರ – ಅಶ್ವಿನಿ ಯೋಗ – ಪ್ರೀತಿ ಕರಣ – ಚತುಷ್ಪಾತ್ ರಾಹು ಕಾಲ – 04:30 ದಿಂದ 06:00 ವರೆಗೆ ಯಮಗಂಡ – 12:00 ದಿಂದ 01:30 ವರೆಗೆ ಗುಳಿಕ ಕಾಲ – 03:00 ದಿಂದ 04:30 ವರೆಗೆ ಬ್ರಹ್ಮ ಮುಹೂರ್ತ – 4:20 ಬೆ. ದಿಂದ 5:08 ಬೆ. ವರೆಗೆ ಅಮೃತ ಕಾಲ – 6:19 ಸಂಜೆ. ದಿಂದ 7:43 ಸಂಜೆ. ವರೆಗೆ ಅಭಿಜಿತ್ ಮುಹುರ್ತ – 11:48 ಬೆ. ದಿಂದ 12:39 ಮ. ವರೆಗೆ ನಿಮ್ಮ ಹೆಸರು, ಜನ್ಮ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು ಅದರ ಜೊತೆಗೆ ಭಾವ ಚಿತ್ರ ಹಾಗೂ ಹಸ್ತಸಾಮುದ್ರಿಕೆ ಕಳಿಸಿದರೆ…
Author: AIN Author
ಉತ್ತರ:- ಕೇಂದ್ರ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. https://ainkannada.com/pahalgam-attack-central-intelligence-has-completely-failed-mla-sharath-bachegowda/ ಅನೀಸ್ ಹುಲ್ಗರ್ ಬಂಧಿತ ಆರೋಪಿ. ಆರೋಪಿ ಅನೀಸ್ ಹುಲ್ಗರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮೀತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಆಸ್ಸಾಂ ರಾಜ್ಯದ ಮುಖ್ಯಮಂತ್ರಿ ಹೇಮಂತ ಬಿಸ್ವಾ ಶರ್ಮಾ ಅವರ ಮುಖಗಳ ಭಾವಚಿತ್ರಗಳನ್ನು ನಾಯಿಯ ದೇಹದ ಭಾವಚಿತ್ರಗಳಿಗೆ ಅಂಟಿಸಿದ್ದಾನೆ. ಎಐಎಮ್ಐಎಮ್ ಪಕ್ಷದ ಸಂಸದ ಅಸಾವುದ್ದಿನ ಓವೈಸಿ ಡಾಗ್ ಚೈನ ಹಿಡಡಿಕೊಂಡು ಹೋಗುತ್ತಿರುವ ಭಾವಚಿತ್ರವನ್ನು ಫೇಸ್ಬುಕ್ ಖಾತೆ ಅಕೌಂಟ್ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದು ಎರಡು ವರ್ಗಗಳ ಜನರ ದ್ವೇಷ-ವೈಶ್ಯಮ್ಯ ಬೆಳೆಯುವಂತೆ ಮಾಡಲು ಪ್ರಚೋದಿಸುತ್ತಿದ್ದಾನೆ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುತ್ತದೆ ಎಂದು ಆರೋಪಿ ವಿರುದ್ಧ ದೂರು ದಾಖಲಾಗಿದೆ. ಅಲ್ಲದೇ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ದೇವನಹಳ್ಳಿ:- ಪಹಲ್ಗಾಮ್ ನಲ್ಲಿ ಹಿಂದುಗಳ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಶರತ್ ಬಚ್ಚೇಗೌಡ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/train-services-will-start-earlier-than-3-am-tomorrow-must-see-news-for-metro-passengers/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪ್ರಚೋದನೆ ಮಾತುಗಳನ್ನ ಕೇಳಿ ಕೇಳಿ ಸಾಕಾಗಿದೆ. ಬ್ರಿಟೀಷರು ಸ್ವತಂತ್ರ ನೀಡುವ ವೇಳೆ ಎರಡು ಕಂಟ್ರಿ ಫಾರ್ಮುಲ ಬಳಸಿ ದೇಶನ ಒಡೆದಿದ್ದಾರೆ. ಈಗ ಮತ್ತೊಮ್ಮೆ ಅವರ ಸಂತತಿ ಏನಿದರೆ ಅವರ ಕೇಂದ್ರದಲ್ಲಿ ಈಗ ಮತ್ತೊಮ್ಮೆ ದೇಶ ಒಡೆದು ಎರಡು ಭಾಗ ಮಾಡಲು ಹೋಗಿದ್ದಾರೆ. ಪಹಲ್ಗಾಮ್ ನಲ್ಲಿ ನಡೆದ ದಾಳಿಗೂ ಇಲ್ಲಿರುವ ಜನಗಳಿಗೆ ಏನು ಸಂಬಂಧ. ಕೇಂದ್ರ ಸರ್ಕಾರದ ಇಂಟಲಿಜೆನ್ಸಿ ಸಂಪೂರ್ಣ ವಿಫಲವಾಗಿದೆ. ಪಾಕಿಸ್ತಾನದ ಡಿಫೆನ್ಸ್ ಮಿನಿಸ್ಟರ್ ಹೇಳ್ತಾರೆ, ಭಾರತೀಯರು ಅಲ್ಲ, ಹಿಂದುಗಳೇ ನಮ್ಮ ವಿರೋಧಿಗಳು ಅಂತಾರೆ. ಸ್ಟೇಟ್ಮೆಂಟ್ ಕೊಟ್ಟ ಎರಡು ವಾರಗಳಲ್ಲಿ ಈ ದಾಳಿ ನಡೆದಿದೆ. ಜಾತಿ, ಧರ್ಮನ ಕೇಳಿ ಉಗ್ರರು ದಾಳಿ ಮಾಡಿದ್ದಾರೆ. ಪಾಕಿಸ್ತಾನಕ್ಕೆ ಈಗ ಯುದ್ಧ ಬೇಕಾಗಿದೆ. ಈ ಹಿಂದೆ ನೋಡಿದರೆ ಕಾಶ್ಮೀರದಲ್ಲಿ ಪೊಲೀಸ್ ಮತ್ತು ಸೈನಿಕರನ್ನ ಹೊಡೆಯೋದನ್ನ ನೋಡಿದ್ದೇವೆ. ಅಮಾಯಕ…
ಬೆಂಗಳೂರು:- ನಮ್ಮ ಮೆಟ್ರೋ ದೈನಂದಿನ ಪ್ರಯಾಣಿಕರ ಸಂಖ್ಯೆ ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿದೆ. ಅಲ್ಲದೇ ಮೆಟ್ರೋ ರೈಲಿಗೆ ನಿತ್ಯ ಅವಲಂಬಿತರಾಗಿರುವವರು ಈ ಸುದ್ದಿ ನೋಡಲೇಬೇಕಾಗಿದೆ. https://ainkannada.com/hail-rain-in-hassan-life-disrupted/ ನಮ್ಮ ಮೆಟ್ರೋದಲ್ಲಿ ನಿತ್ಯ ಲಕ್ಷಾಂತರ ಪ್ರಯಾಣಿಕರು ಪ್ರಯಾಣಿಸುತ್ತಾರೆ. ನಮ್ಮ ಮೆಟ್ರೋ ಆಗಾಗ ಜನರ ಅನುಕೂಲತೆಗೆ ತಕ್ಕಂತೆ ಹೆಚ್ಚುವರಿ ಸಮಯ ಕಾರ್ಯ ನಿರ್ವಹಿಸುತ್ತದೆ. ಇದೀಗ, ಭಾನುವಾರ ರಂದು ನಮ್ಮ ಮೆಟ್ರೋ ಬೆಳಗ್ಗೆ 6 ಗಂಟೆ ಬದಲಾಗಿ ನಸುಕಿನ ಜಾವ 3:30ಕ್ಕೆ ಆರಂಭವಾಗಲುದೆ. ಟಿಸಿಎಸ್ ವರ್ಲ್ಡ್ 10ಕೆ-2025 ಮ್ಯಾರಥಾನ್ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮೆಟ್ರೋ ಸಮಯ ವಿಸ್ತರಣೆ ಮಾಡಿದೆ. ಟಿಸಿಎಸ್ ವರ್ಲ್ಡ್ 10ಕೆ-2025 ಮ್ಯಾರಥಾನ್ನ 17ನೇ ಆವೃತ್ತಿಯಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ, ಬಿಎಂಆರ್ಸಿಎಲ್ ಏಪ್ರಿಲ್ 27 ರ ಭಾನುವಾರ ಬೆಳಿಗ್ಗೆ, 3:30ಕ್ಕೆ ಮೆಟ್ರೋ ರೈಲು ಸೇವೆ ಪ್ರಾರಂಭವಾಗಲಿದೆ. ಇದು ಸಾಮಾನ್ಯ ಸಮಯಕ್ಕಿಂತ ಮೂರುವರೆ ಗಂಟೆಗಳ ಮುಂಚೆಯೇ ಪ್ರಾರಂಭವಾಗುತದೆ. ಈ ವಿಸ್ತ್ರತ ಅವಧಿಯಲ್ಲಿ ನಾಲ್ಕು ಮೆಟ್ರೋ ಟರ್ಮಿನಲ್ ಗಳು ಮತ್ತು ನಾಡಪ್ರಭು ಕೆಂಪೇಗೌಡ ನಿಲ್ಯಾಣ ಮೆಜೆಸ್ಟಿಕ್…
ಹಾಸನ:- ಇಂದು ಹಾಸನದಲ್ಲಿ ಆಲಿಕಲ್ಲು ಮಳೆ ಆಗಿದೆ. ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. https://ainkannada.com/protest-condemning-pahalgam-attack-outrage-as-slippers-are-placed-on-the-pakistani-flag/ ಮಳೆಯ ಜೊತೆಗೆ ಬೀಸಿದ ಬಿರುಗಾಳಿ ಹಲವು ಮನೆಗಳ ಮೇಲ್ಛಾವಣಿಯನ್ನು ನೆಲಕ್ಕೆ ಬೀಳಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ತಾಲೂಕು ದಂಡಾಧಿಕಾರಿ ಸಂತೋಷ್ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಾರ್ಯಾಚರಣೆಗೆ ಇಳಿದಿದ್ದು, ತೊಂದರೆಗೆ ಸಿಲುಕಿರುವ ರೈತರು, ಜನರ ಆಗು ಹೋಗುಗಳಿಗೆ ಸ್ಪಂದಿಸುತ್ತಿದ್ದಾರೆ. ಮಳೆಯ ನಡುವೆಯೇ ನಗರದ ತಗ್ಗು ಪ್ರದೇಶದ ಬಡಾವಣೆಗಳಿಗೆ ಭೇಟಿ ನೀಡಿದ ತಹಶೀಲ್ದಾರ್ ಸಂತೋಷ್ ಕುಮಾರ್ ಮತ್ತು ನಗರಸಭೆ ಅಧಿಕಾರಿಗಳು ಮಳೆ, ಗಾಳಿಯಿಂದ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿದರು. ಅಲ್ಲದೇ ನಿರಾಶ್ರಿತರಿಗೆ ಸೂಕ್ತ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದರು.
ಬಾಗಲಕೋಟ:- ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬಾಗಲಕೋಟೆಯಲ್ಲಿ ಹಿಂದು ಜಾಗರಣವೇದಿಕೆ ಹಾಗೂ ಬಿಜೆಪಿ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ ಮಾಡಲಾಗಿದೆ. https://ainkannada.com/i-am-not-from-pakistan-i-am-an-indian-daughter-in-law-seema-haider/ ಪಾಕ್ ಹಾಗೂ ಉಗ್ರರ ವಿರುದ್ಧ ಘೋಷಣೆ ಕೂಗಿ, ಪಾಕ್ ಧ್ವಜದ ಮೇಲೆ ಚಪ್ಪಲಿ ಇಟ್ಟು ತುಳಿದು ಆಕ್ರೋಶ ಹೊರ ಹಾಕಿದ್ದಾರೆ. ಕಿಲ್ಲಾ ಓಣಿಯಿಂದ ಎಮ್ ಜಿ ರಸ್ತೆ ಮಾರ್ಗವಾಗಿ ಪಂಜಿನ ಮೆರವಣಿಗೆ ಪ್ರತಿಭಟನೆ ನಡೆದಿದ್ದು, ಉಗ್ರರ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಭಾಗಿಯಾಗಿದ್ದರು.
ಲಕ್ನೋ:- ನಾನು ಪಾಕಿಸ್ತಾನದವಳಲ್ಲ. ನಾನು ಭಾರತದ ಸೊಸೆ, ಇಲ್ಲೇ ಇರುತ್ತೇನೆ ಎಂದು ಸೀಮಾ ಹೈದರ್ ಹೇಳಿದ್ದಾರೆ. https://ainkannada.com/delhi-rcb-high-voltage-match-tomorrow-bengaluru-seeking-revenge-at-home/ ಪಹಲ್ಗಾಮ್ ದಾಳಿ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ಧ ಹಲವಾರು ಮಹತ್ವದ ನಿರ್ಧಾರ ಕೈಗೊಂಡಿದೆ. ಅಲ್ಲದೇ 48 ಗಂಟೆಗಳಲ್ಲಿ ಪಾಕ್ ಪ್ರಜೆಗಳು ಭಾರತ ಬಿಟ್ಟು ತೊಲಗುವಂತೆ ಸೂಚನೆ ನೀಡಿದೆ. ಈ ಬೆನ್ನಲ್ಲೇ ಪ್ರಿಯಕರನಿಗೋಸ್ಕರ 4 ಮಕ್ಕಳೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಸೀಮಾ ಹೈದರ್ ಮಾತನಾಡಿರುವ ವೀಡಿಯೋವೊಂದು ವೈರಲ್ ಆಗಿದೆ. ನಾನು ಪಾಕಿಸ್ತಾನಕ್ಕೆ ಹೋಗಲು ಬಯಸುವುದಿಲ್ಲ. ನಾನು ಭಾರತದಲ್ಲಿ ಉಳಿಯಲು ಅವಕಾಶ ನೀಡುವಂತೆ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡುತ್ತೇನೆ. ಸಚಿನ್ ಮೀನಾ ಅವರನ್ನು ಮದುವೆಯಾದ ಬಳಿಕ ನಾನು ಹಿಂದೂ ಧರ್ಮವನ್ನು ಅಳವಡಿಸಿಕೊಂಡಿದ್ದೇನೆ. ನನಗೆ ಭಾರತದಲ್ಲಿಯೇ ಇರಲು ಬಿಡಿ ಎಂದು ಸೀಮಾ ವೀಡಿಯೋದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಖಾಮುಖಿಯಾಗಲಿದೆ. ಈವರೆಗೆ ತವರಿನಿಂದ ಹೊರಗೆ ಆಡಿರುವ ಎಲ್ಲಾ ಐದು ಪಂದ್ಯಗಳಲ್ಲೂ ಭರ್ಜರಿ ಗೆಲುವು ಸಾಧಿಸಿರುವು ಆರ್ ಸಿಬಿ ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. https://ainkannada.com/cricket-ties-with-pakistan-should-be-ended-sourav-ganguly/ ತವರಿನಿಂದ ಹೊರಗೆ ಬಲಿಷ್ಠ ತಂಡಗಳನ್ನೇ ಮಟ್ಟ ಹಾಕಿರುವ ಆರ್ ಸಿಬಿ ಭಾನುವಾರ ನಡೆಯುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಏಪ್ರಿಲ್ 27ರಂದು ಭಾನುವಾರ ಸಂಜೆ 7.30ಕ್ಕೆ ಈ ಪಂದ್ಯ ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಈ ಹಿಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರ್ ಸಿಬಿ ವಿರುದ್ಧ 6 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತ್ತು, ಕರ್ನಾಟಕದ ಆಟಗಾರ ಕೆಎಲ್ ರಾಹುಲ್ ಅಜೇಯ ಅರ್ಧಶತಕ ಸಿಡಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ಗೆ ಸುಲಭ ಗೆಲುವು ತಂದುಕೊಟ್ಟಿದ್ದರು. ಗೆಲುವಿನ ಬಳಿಕ ಕೆಎಲ್ ರಾಹುಲ್ ಸಂಭ್ರಮಾಚರಣೆ ಮಾಡಿದ್ದು ಸಾಕಷ್ಟು ಗಮನ ಸೆಳೆದಿತ್ತು. ಗೆಲುವಿನ ರನ್ ಗಳಿಸಿದ ಬಳಿಕ ಕೆಎಲ್ ರಾಹುಲ್…
ಬೆಂಗಳೂರು:- ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರೈಲ್ವೇ ಇಲಾಖೆಯಿಂದ 5 ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ. https://ainkannada.com/terrorism-will-not-be-tolerated-pakistans-relationship-with-cricket-should-be-stopped-sourav-ganguly/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರೈಲ್ವೆ ಇಲಾಖೆಯು ಮಿಷನ್ ಮೋಡ್ ನೇಮಕಾತಿ ಅಭಿಯಾನದಡಿಯಲ್ಲಿ 2014 ರಿಂದ 2024 ರವರೆಗೆ 5.02 ಲಕ್ಷ ಯುವಜನರಿಗೆ ಉದ್ಯೋಗಾವಕಾಶ ನೀಡಿದದರು. ಪ್ರಧಾನಮಂತ್ರಿಯವರ ಆಶಯದಂತೆ ಉದ್ಯೋಗ ಸೃಷ್ಟಿಯ ಪ್ರಕ್ರಿಯೆಯನ್ನು ನಿರಂತರವಾಗಿ ನಡೆಸಲು ರೈಲ್ವೆ ಇಲಾಖೆಯು ವಾರ್ಷಿಕ ನೇಮಕಾತಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2024ರ ಜನವರಿಯಿಂದ ಇದುವರೆಗೆ ರೈಲ್ವೆ ಇಲಾಖೆಯಲ್ಲಿ ಸುಮಾರು 71,000 ಹುದ್ದೆಗಳನ್ನು ಸೃಷ್ಟಿಸಿದ್ದು ಇವುಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಅವರು ಹೇಳಿದರು. 2047ರಲ್ಲಿ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಕ್ರಮಗಳನ್ನು ಸರ್ಕಾರ ಕೈಗೊಂಡಿದ್ದು, ಅದರಲ್ಲಿ ರಾಷ್ಟ್ರೀಯ ಉದ್ಯೋಗ ಮೇಳವೂ ಒಂದು, ಅದರ ಅಂಗವಾಗಿ 2022ರ ಅಕ್ಟೋಬರ್ ನಲ್ಲಿ ಪ್ರಧಾನಮಂತ್ರಿಯವರು 10 ಲಕ್ಷ ಉದ್ಯೋಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದರು…
ಭಯೋತ್ಪಾದನೆ ಸಹಿಸಲ್ಲ, ಕ್ರಿಕೆಟ್ ಜೊತೆಗಿನ ಪಾಕಿಸ್ತಾನ್ ಸಂಬಂಧ ಅಂತ್ಯಗೊಳಿಸಬೇಕು ಎಂದು ಸೌರವ್ ಗಂಗೂಲಿ ಹೇಳಿದ್ದಾರೆ. https://ainkannada.com/anekal-five-day-free-health-camp-organized-by-venkateshwara-motors/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದೊಂದಿಗಿನ ಸಂಬಂಧವನ್ನು 100 ಪ್ರತಿಶತ ಕೊನೆಗೊಳಿಸಬೇಕು ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ. ಪ್ರತಿ ವರ್ಷ ಇಂತಹ ಘಟನೆಗಳು ನಡೆಯುವುದು ತಮಾಷೆಯಲ್ಲ. ಭಯೋತ್ಪಾದನೆಯನ್ನು ಸಹಿಸಲಾಗುವುದಿಲ್ಲ ಎಂದು ಗಂಗೂಲಿ ಹೇಳಿಕೆ ನೀಡಿದ್ದಾರೆ. ಪಹಲ್ಗಾಮ್ ಘಟನೆ ತಮಾಷೆಯಲ್ಲ. ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ. ಇಡೀ ದೇಶದಾದ್ಯಂತ ಈ ದಾಳಿಯನ್ನು ಖಂಡಿಸಲಾಗುತ್ತಿದೆ. ಹೀಗಾಗಿ ಪಾಕಿಸ್ತಾನದ ವಿರುದ್ಧ ಐಸಿಸಿ ಮತ್ತು ಏಷ್ಯನ್ ಪಂದ್ಯಾವಳಿಗಳಲ್ಲಿಯೂ ಆಡಬಾರದು. ಕ್ರಿಕೆಟ್ ಜೊತೆಗೆ ಪಾಕಿಸ್ತಾನದೊಂದಿಗೆ ಯಾವ ಸಂಬಂಧವೂ ಬೇಡ ಎಂದು ಗಂಗೂಲಿ ಗುಡುಗಿದ್ದಾರೆ.