ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಖಾಮುಖಿಯಾಗಲಿದೆ. ಈವರೆಗೆ ತವರಿನಿಂದ ಹೊರಗೆ ಆಡಿರುವ ಎಲ್ಲಾ ಐದು ಪಂದ್ಯಗಳಲ್ಲೂ ಭರ್ಜರಿ ಗೆಲುವು ಸಾಧಿಸಿರುವು ಆರ್ ಸಿಬಿ ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. https://ainkannada.com/cricket-ties-with-pakistan-should-be-ended-sourav-ganguly/ ತವರಿನಿಂದ ಹೊರಗೆ ಬಲಿಷ್ಠ ತಂಡಗಳನ್ನೇ ಮಟ್ಟ ಹಾಕಿರುವ ಆರ್ ಸಿಬಿ ಭಾನುವಾರ ನಡೆಯುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಏಪ್ರಿಲ್ 27ರಂದು ಭಾನುವಾರ ಸಂಜೆ 7.30ಕ್ಕೆ ಈ ಪಂದ್ಯ ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಈ ಹಿಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರ್ ಸಿಬಿ ವಿರುದ್ಧ 6 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತ್ತು, ಕರ್ನಾಟಕದ ಆಟಗಾರ ಕೆಎಲ್ ರಾಹುಲ್ ಅಜೇಯ ಅರ್ಧಶತಕ ಸಿಡಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ಗೆ ಸುಲಭ ಗೆಲುವು ತಂದುಕೊಟ್ಟಿದ್ದರು. ಗೆಲುವಿನ ಬಳಿಕ ಕೆಎಲ್ ರಾಹುಲ್ ಸಂಭ್ರಮಾಚರಣೆ ಮಾಡಿದ್ದು ಸಾಕಷ್ಟು ಗಮನ ಸೆಳೆದಿತ್ತು. ಗೆಲುವಿನ ರನ್ ಗಳಿಸಿದ ಬಳಿಕ ಕೆಎಲ್ ರಾಹುಲ್…
Author: AIN Author
ಬೆಂಗಳೂರು:- ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರೈಲ್ವೇ ಇಲಾಖೆಯಿಂದ 5 ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ. https://ainkannada.com/terrorism-will-not-be-tolerated-pakistans-relationship-with-cricket-should-be-stopped-sourav-ganguly/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರೈಲ್ವೆ ಇಲಾಖೆಯು ಮಿಷನ್ ಮೋಡ್ ನೇಮಕಾತಿ ಅಭಿಯಾನದಡಿಯಲ್ಲಿ 2014 ರಿಂದ 2024 ರವರೆಗೆ 5.02 ಲಕ್ಷ ಯುವಜನರಿಗೆ ಉದ್ಯೋಗಾವಕಾಶ ನೀಡಿದದರು. ಪ್ರಧಾನಮಂತ್ರಿಯವರ ಆಶಯದಂತೆ ಉದ್ಯೋಗ ಸೃಷ್ಟಿಯ ಪ್ರಕ್ರಿಯೆಯನ್ನು ನಿರಂತರವಾಗಿ ನಡೆಸಲು ರೈಲ್ವೆ ಇಲಾಖೆಯು ವಾರ್ಷಿಕ ನೇಮಕಾತಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2024ರ ಜನವರಿಯಿಂದ ಇದುವರೆಗೆ ರೈಲ್ವೆ ಇಲಾಖೆಯಲ್ಲಿ ಸುಮಾರು 71,000 ಹುದ್ದೆಗಳನ್ನು ಸೃಷ್ಟಿಸಿದ್ದು ಇವುಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಅವರು ಹೇಳಿದರು. 2047ರಲ್ಲಿ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಕ್ರಮಗಳನ್ನು ಸರ್ಕಾರ ಕೈಗೊಂಡಿದ್ದು, ಅದರಲ್ಲಿ ರಾಷ್ಟ್ರೀಯ ಉದ್ಯೋಗ ಮೇಳವೂ ಒಂದು, ಅದರ ಅಂಗವಾಗಿ 2022ರ ಅಕ್ಟೋಬರ್ ನಲ್ಲಿ ಪ್ರಧಾನಮಂತ್ರಿಯವರು 10 ಲಕ್ಷ ಉದ್ಯೋಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದರು…
ಭಯೋತ್ಪಾದನೆ ಸಹಿಸಲ್ಲ, ಕ್ರಿಕೆಟ್ ಜೊತೆಗಿನ ಪಾಕಿಸ್ತಾನ್ ಸಂಬಂಧ ಅಂತ್ಯಗೊಳಿಸಬೇಕು ಎಂದು ಸೌರವ್ ಗಂಗೂಲಿ ಹೇಳಿದ್ದಾರೆ. https://ainkannada.com/anekal-five-day-free-health-camp-organized-by-venkateshwara-motors/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದೊಂದಿಗಿನ ಸಂಬಂಧವನ್ನು 100 ಪ್ರತಿಶತ ಕೊನೆಗೊಳಿಸಬೇಕು ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ. ಪ್ರತಿ ವರ್ಷ ಇಂತಹ ಘಟನೆಗಳು ನಡೆಯುವುದು ತಮಾಷೆಯಲ್ಲ. ಭಯೋತ್ಪಾದನೆಯನ್ನು ಸಹಿಸಲಾಗುವುದಿಲ್ಲ ಎಂದು ಗಂಗೂಲಿ ಹೇಳಿಕೆ ನೀಡಿದ್ದಾರೆ. ಪಹಲ್ಗಾಮ್ ಘಟನೆ ತಮಾಷೆಯಲ್ಲ. ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ. ಇಡೀ ದೇಶದಾದ್ಯಂತ ಈ ದಾಳಿಯನ್ನು ಖಂಡಿಸಲಾಗುತ್ತಿದೆ. ಹೀಗಾಗಿ ಪಾಕಿಸ್ತಾನದ ವಿರುದ್ಧ ಐಸಿಸಿ ಮತ್ತು ಏಷ್ಯನ್ ಪಂದ್ಯಾವಳಿಗಳಲ್ಲಿಯೂ ಆಡಬಾರದು. ಕ್ರಿಕೆಟ್ ಜೊತೆಗೆ ಪಾಕಿಸ್ತಾನದೊಂದಿಗೆ ಯಾವ ಸಂಬಂಧವೂ ಬೇಡ ಎಂದು ಗಂಗೂಲಿ ಗುಡುಗಿದ್ದಾರೆ.
ಆನೇಕಲ್ : ಪಟ್ಟಣದ ಶ್ರೀರಾಮ ಕುಟಿರದಲ್ಲಿ ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ದ್ವಿಚಕ್ರವಾಹನಗಳ ಮೇಳ ಆಯೋಜನೆ ಅಯೋಜನ ಮಾಡಲಾಗಿತ್ತು. ಡ್ರೈ ಎಕ್ಸ್ ಮತ್ತು ವೆಂಕ್ಟೇಶ್ವರ ಮೋಟರ್ಸ್ ಮಾಲೀಕರಾದ ನಂಜುಂಡಪ್ಪ ನೇತೃತ್ವದಲ್ಲಿ ಡ್ರೈವ್ ಎಕ್ಸ್ , ವೆಂಕಟೇಶ್ವರ ಮೋಟಾರ್ಸ್, ಲಯನ್ಸ್ ಕ್ಲಬ್ ರಾಗಿನಾಡು ಹಾಗೂ ನಿಸರ್ಗ ಸೇವಾ ಸಂಸ್ಥೆ ಸಹಭಾಗಿತ್ವದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು. ಆನೇಕಲ್ ಪಟ್ಟಣದ ನೂರಾರು ಸಾರ್ವಜನಿಕರು ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು ಜೊತೆಗೆ ಡ್ರೈವ್ ಎಕ್ಸ್ ಹಾಗೂ ಶ್ರೀ ವೆಂಕಟೇಶ್ವರ ಮೋಟಾರ್ಸ್ ವತಿಯಿಂದ ನಡೆಸಿದ ದ್ವಿಚಕ್ರವಾಹನಗಳ ಮೇಳದಲ್ಲಿ ನೂರಾರು ಮಂದಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು ಈ ಕುರಿತು ಮಾತನಾಡಿದ ವೆಂಕಟೇಶ್ವರ ಮೋಟರ್ಸ್ ನಂಜುಂಡಪ್ಪ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುತ್ತಿದೆ. ಜೊತೆಗೆ ವಾಹನ ಮೆಳಕ್ಕೂ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇಲ್ಲಿ ಮೇಳದಲ್ಲಿ ದ್ವಿಚಕ್ರ ವಾಹನಗಳ ಎಕ್ಸ್ಚೇಂಜ್ ಗೂ ಅವಕಾಶವಿದೆ ಎಂದು ತಿಳಿಸಿದರು. ಡ್ರೈವ್ ಎಕ್ಸ್…
ಬೆಂಗಳೂರು, ಏಪ್ರಿಲ್ 26:ದೇಶ ಸಂಕಷ್ಟದಲ್ಲಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಆಘಾತ ತಂದಿದೆ. ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ ಹಾಗೂ ಖಂಡನೀಯ. ಈ ಕುರಿತು ಸಿಎಂ ಸಿದ್ದರಾಮಯ್ಯ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. https://ainkannada.com/pahalgam-terror-attack-the-countrys-security-failure-is-evident-mla-s-n-narayanaswamy/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್ನಲ್ಲಿ ನಾಗರಿಕರು ಸಂಭ್ರಮಿಸುತ್ತಿರುವಾಗ ಅವರನ್ನು ಕೊಂದಂತೆಯೇ, ಜಮ್ಮು ಕಾಶ್ಮೀರದಲ್ಲೂ ಭಯೋತ್ಪಾದಕರು ಹಿಂದೂಗಳ ಹತ್ಯೆ ಮಾಡಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಕ್ಷಮಿಸಬಹುದು. ದೇಶಕ್ಕೇನಾದರೂ ಆಗಲಿ ಪರವಾಗಿಲ್ಲ, ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ. ಅವರು ಯಾವುದೇ ಸಿದ್ಧಾಂತ ಇಲ್ಲದ ವ್ಯಕ್ತಿ. ಅವರಿಗೆ ಅಧಿಕಾರದಲ್ಲಿದ್ದರೆ ಸಾಕು ಎಂದರು. ದೇಶಾದ್ಯಂತ ಜನರು ಪ್ರತಿಭಟನೆ ನಡೆಸುತ್ತಿರುವಾಗ, ಹೋದ ಜೀವಗಳನ್ನು ವಾಪಸ್ ತರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ಘಟನೆ ಅವರ ಕುಟುಂಬಕ್ಕೆ ಆಗಿದ್ದರೆ ಅವರ ಮಾತು ಹೀಗೆ ಇರುತ್ತಿರಲಿಲ್ಲ. ಕರುಣೆ ಇಲ್ಲದೆಯೇ…
ಕೋಲಾರ:- ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. https://ainkannada.com/do-you-eat-mangoes-at-night-so-see-this-news-miss-modde/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಯನ್ನು ಖಂಡಿಸುತ್ತೇನೆ. ನರಮೇಧ ನಡೆಸಿದ ಇಂತಹ ಉಗ್ರರನ್ನು ಬಗ್ಗು ಬಡಿಯಬೇಕು ಎಂದರು. ಇದರಲ್ಲಿ ದೇಶದ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ, ಬೇಹುಗಾರಿಕೆ ಸಂಪೂರ್ಣ ವಿಫಲವಾಗಿದೆ. ಗೃಹ ಸಚಿವ ಅಮಿಶ್ ಶಾ ಅವರ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಅವರು ಹಿಂದೂಗಳನ್ನು ಟಾರ್ಗೆಟ್ ಮಾಡಿದ್ದಾರೆ ಅನ್ನೋದು ಇಲ್ಲ. ಇದರಲ್ಲಿ ಧರ್ಮ ಅನ್ನೋದಕ್ಕಿಂತ ಎಲ್ಲರದ್ದು ಜೀವ ಅಲ್ವಾ ಎಂದು ಪ್ರಶ್ನಿಸಿದರು. ಗೃಹ ಇಲಾಖೆ ವಿಫಲವಾಗಿದೆ. ಹಾಗಾಗಿ ಇಂದಿರಾಗಾಂಧಿ, ನೆಹರು ಕಾಲದಲ್ಲಿ ದೇಶವನ್ನ ರಕ್ಷಣೆ ಮಾಡಿದಂತೆ ಸದ್ಯ ಈಗಲೂ ಕೇಂದ್ರ ಸರ್ಕಾರ ಎಚ್ವೆತ್ತುಕೊಂಡು ಇಂತಹದಕ್ಕೆ ಕಡಿವಾಣ ಹಾಕಬೇಕಿದೆ ಎಂದು ತಿಳಿಸಿದರು.
ಪ್ರಕೃತಿ ಕಾಲಕಾಲಕ್ಕೆ ತಕ್ಕ ಹಾಗೆ ನಿಸರ್ಗದತ್ತವಾದ ಹಣ್ಣು ಮತ್ತು ತರಕಾರಿಗಳನ್ನು ಮನುಷ್ಯನಿಗೆ ನೀಡುತ್ತಾ ಬರುತ್ತಿದೆ. ಹೀಗಾಗಿ ಖುತುವಿಗೆ ಅನುಗುಣವಾಗಿ ಸಿಗುವ ಈ ಹಣ್ಣುಗಳನ್ನು ಮತ್ತು ತರಕಾರಿಗಳನ್ನು ಸೇವಿಸುತ್ತಾ ಬರುವುದರಿಂದ ನಮ್ಮ ಆರೋಗ್ಯವನ್ನು ಸದೃಢತೆಯನ್ನು ಕಾಯ್ದು ಕೊಳ್ಳಲು ನೆರವಾಗುವುದು, ಇದರಲ್ಲಿ ಮಾವಿನಹಣ್ಣು ಕೂಡ ಒಂದು. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳು ಬಂತೆಂದರೆ ಮಾವಿನ ಹಣ್ಣಿನ ಸೀಜನ್ ಶುರುವಾಗಿ ಬಿಡುತ್ತದೆ. ಹಣ್ಣುಗಳ ರಾಜ ಎಂದೇ ಕರೆಯಲಾಗುವ ಈ ಹಣ್ಣು ಮಾರುಕಟ್ಟೆಗೆ ಕಾಲಿಟ್ಟ ಎಂದರೆ ಉಳಿದ ಹಣ್ಣುಗಳ ಬೇಡಿಕೆ ಕೊಂಚ ಕುಸಿಯುತ್ತದೆ. https://ainkannada.com/chikkaballapura-father-and-daughter-die-while-going-to-teach-swimming/ ತಜ್ಞರು ಹೇಳುವ ಪ್ರಕಾರ, ಹಗಲಿನಲ್ಲಿ ಮಾವಿನಹಣ್ಣು ಸೇವಿಸುವುದರಿಂದ ಪ್ರಯೋಜನಕಾರಿಯಾಗಲಿದೆ, ಆದರೆ ರಾತ್ರಿಯಲ್ಲಿ ಈ ಹಣ್ಣನ್ನು ತಿನ್ನುವುದರಿಂದ ಹಲವಾರು ರೀತಿಯಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆಯಂತೆ. ಊಟದ ಬಳಿಕ ಕೆಲವೊಂದು ಹಣ್ಣುಗಳನ್ನು ಸೇವನೆ ಮಾಡ ಬಾರದು ಎಂದು ತಜ್ಞರು ಹೇಳುತ್ತಾರೆ. ಇದರಲ್ಲಿ ಮಾವಿನ ಹಣ್ಣುಗಳು ಕೂಡ ಒಂದು. ಯಾಕಂದ್ರೆ ರಾತ್ರಿ ಸಮಯದಲ್ಲಿ ದೇಹದ ಜೀರ್ಣಕ್ರಿಯೆ ಪ್ರಕ್ರಿಯೆಯು ನಿಧಾನವಾಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಮಾವಿನ ಹಣ್ಣನ್ನು…
ಚಿಕ್ಕಬಳ್ಳಾಪುರ : ಈಜು ಕಲಿಸಲು ಹೋಗಿ ತಂದೆ, ಮಗಳು ಇಬ್ಬರು ಸಾವು ಚಿಕ್ಕಬಳ್ಳಾಪುರ : ತನ್ನ ಮಗಳಿಗೆ ಈಜು ಕಲಿಸಲು ಹೋಗಿ ತಂದೆ, ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ನಾಗೇಶ್ ಮಗಳಿಗೆ ಈಜು ಕಲಿಸಲು ಹೋಗಿದ್ದ ವೇಳೆ ಮೃತಪಟ್ಟಿದ್ದಾರೆ. ಕೆರೆಯಲ್ಲಿ ಹೂಳು ತುಂಬಿದ್ದರಿಂದ ಅಡಿಯಲ್ಲಿ ಸಿಲುಕಿ ತಂದೆ ನಾಗೇಶ್ (42) ಮಗಳು ಧನುಶ್ರೀ (12) ದಾರುಣವಾಗಿ ಸಾವನ್ನಪ್ಪಿದ್ದಾರೆ. https://ainkannada.com/explosion-at-firecracker-factory-three-workers-killed/ ಮೃತ ಧನುಶ್ರೀ ಭರತನಾಟ್ಯದಲ್ಲಿ ಖ್ಯಾತಿ ಪಡೆದಿದ್ದಳು. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಶಿಡ್ಲಘಟ್ಟ ಶಾಸಕ ಬಿ ಎನ್ ರವಿಕುಮಾರ್ ಸಹ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.
ಲಕ್ನೋ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಉತ್ತರಪ್ರದೇಶದ ಸಹರಾನ್ಪುರದ ನಿಹಾಲ್ ಖೇಡಿ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಪಟಾಕಿ ಕಚೇರಿಯಲ್ಲಿ ಬೆಳಗಿನ ಜಾವ 4:30ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ಶಬ್ದ ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಪ್ರತಿಧ್ವನಿಸಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಕಟ್ಟಡ ಕುಸಿದು ಬಿದ್ದಿದೆ. ಘಟನೆ ಸಂಭವಿಸಿದ ವೇಳೆ ಕಾರ್ಖಾನೆಯಲ್ಲಿ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://ainkannada.com/dharwad-suburban-police-station-operation-arrest-of-bike-thieves/ ಕೂಡಲೇ ಪೊಲೀಸ್ ಸಿಬ್ಬಂದಿ, ವಿಧಿವಿಜ್ಞಾನ ತಂಡ ಮತ್ತು ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಘಟನೆ ಸಂಬಂಧ ಕಾರ್ಖಾನೆಯ ಮೂವರು ನಿರ್ವಾಹಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧಾರವಾಡ: ಧಾರವಾಡ ಉಪನಗರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಬೈಕ್ ಕಳ್ಳರನ್ನಿ ಬಂಧಿಸಿದ್ದು, ಬಂಧಿತರಿಂದ 3 ಲಕ್ಷ ರೂ. ಮೌಲ್ಯದ ಒಟ್ಟು 5 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಧಾರವಾಡದಲ್ಲಿ ಬೈಕ್ ಕಳ್ಳತನ ಹೆಚ್ಚಾಗಿತ್ತು. ಕಳ್ಳರ ಮೇಲೆ ನಿಗಾವಹಿಸಿದ್ದ ಪೊಲೀಸರು ಕಳ್ಳರ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. https://ainkannada.com/union-minister-raksha-kadse-visits-the-sports-complex-mla-bellada-supports-the-minister/ ಎಸಿಪಿ ಪ್ರಶಾಂತ ಸಿದ್ದನಗೌಡರ ಮಾರ್ಗದರ್ಶನದಲ್ಲಿ ಸಿಪಿಐ ದಯಾನಂದ ಶೇಗುಣಸಿ, ಪಿಎಸ್ಐ ರುದ್ರಪ್ಪ ಗುಡದರಿ, ವಿ.ಐ.ಬಳ್ಳಾರಿ, ಸಿಬ್ಬಂದಿ ದಯಾನಂದ, ಮುಸ್ತಫಾ ಬೀಳಗಿ, ನಾಗರಾಜ ವಡ್ಡಪ್ಪಗೋಳ, ಪ್ರದೀಪ ಕುಂದಗೋಳ, ಹನುಮಂತ ಜಟ್ಟಣ್ಣವರ ಸೇರಿ ಇತರರು ಕಾರ್ಯಾಚರಣೆಯಲ್ಲಿ ನಡೆಸಿದ್ದಾರೆ. ಸದ್ಯ ಈ ಸಂಬಂಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.