Author: AIN Author

ಚೆನ್ನೈ, ಏಪ್ರಿಲ್ 26, 2025:  ಮದ್ರಾಸ್ ಇಂಟರ್‌ನ್ಯಾಷನಲ್ ಸರ್ಕ್ಯೂಟ್‌ನಲ್ಲಿ ಆರಂಭಗೊಂಡ ಎಫ್‌ಐಎ (FIA) ಏಷ್ಯಾ ಪೆಸಿಫಿಕ್ ರ್ಯಾಲಿ ಚಾಂಪಿಯನ್‌ಶಿಪ್ (APRC)ನಲ್ಲಿ  ಹಾಲಿ ರಾಷ್ಟ್ರೀಯ ಚಾಂಪಿಯನ್ ಅರ್ಕಾ ಮೋಟಾರ್‌ಸ್ಪೋರ್ಟ್ಸ್‌ನ ಕರ್ಣ ಕಡೂರ್ ಮತ್ತು ಮೂಸಾ ಶೆರಿಫ್ ವೇಗದ ಸಮಯ ದಾಖಲಿಸಿದ್ದಾರೆ. ಬೆಂಗಳೂರಿನ ಕರ್ಣ ಕಡೂರ್ ಅನುಭವಿ ಸಹ-ಚಾಲಕ ಕೇರಳದ ಮೂಸಾ ಶೆರಿಫ್ ಅವರೊಂದಿಗೆ 1.45-ಕಿಮೀ ಅನ್ನು 2 ನಿಮಿಷ 50.9 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿದರು.  ಮೊದಲ ಲ್ಯಾಪ್ ನಂತರ ಅಮಿತ್ರಜೀತ್ ಘೋಷ್ ಮತ್ತು ಅಶ್ವಿನ್ ನಾಯಕ್ ವೇಗವನ್ನು ಹೆಚ್ಚಿಸಿದರು ಆದರೆ ಕರ್ಣ ಕಡೂರ್ ತಮ್ಮ ಎರಡನೇ ಲೂಪ್‌ನಲ್ಲಿ 1 ನಿಮಿಷ, 24.4 ಸೆಕೆಂಡುಗಳ ಲ್ಯಾಪ್‌ನೊಂದಿಗೆ ದಿನದ ವೇಗದ ಚಾಲಕರಾದರು. https://ainkannada.com/fia-asia-pacific-championship-india-makes-record-entry-into-asia-zone-round/ ಜೇಸನ್ ಸಾಲ್ಡಾನ್ಹಾ ಮತ್ತು ಪಿವಿ ಶ್ರೀನಿವಾಸ ಮೂರ್ತಿ ದಿನದ ಅಂತ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಘೋಷ್ ಮತ್ತು ನಾಯಕ್ ಮೂರನೇ ಸ್ಥಾನಕ್ಕೆ ತೃಪ್ತರಾದರು.  ವಂಸಿ ಮೆರ್ಲಾ  ಅವರಿಂದ ಪ್ರಚಾರ ಪಡೆದ ಮತ್ತು ಮದ್ರಾಸ್ ಮತ್ತು ಮೋಟಾರ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ ಎಪಿಆರ್‌ಸಿ (APRC) ರ್ಯಾಲಿ …

Read More

ಹುಬ್ಬಳ್ಳಿ: ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿ ಇರುವ ರಿಂಗ್ ರೋಡ್ ನಲ್ಲಿ ನಡೆದಿದೆ. ಹೌದು, ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದ ರವಿ ಬಾಳಿಕಾಯಿ (30) ಎಂಬಾತ ಮೃತಪಟ್ಟ ವ್ಯಕ್ತಿ. ಹುಬ್ಬಳ್ಳಿಯಿಂದ ನವಲಗುಂದ ಕಡೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ.ಇನ್ನೂ ಈ ಘಟನೆಗೆ  ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. https://ainkannada.com/kalaburagi-firing-on-accused-in-atm-robbery-case/ ಇನ್ನೂ ಘಟನೆ ಖಂಡಿಸಿ ಗ್ರಾಮಸ್ಥರು ಹಾಗೂ ಇತರರು ಕೆಎಸ್ ಆರ್ ಟಿಸಿ ಸಂಸ್ಥೆ…

Read More

ಕಲಬುರಗಿ : ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಎಟಿಎಂ ದರೋಡೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್‌ ನಡೆಸಿದ್ದಾರೆ. ಕಲಬುರಗಿ ಹೊರವಲಯದ ಬೇಲೂರು ಕ್ರಾಸ್ ಬಳಿ ಘಟನೆ ನಡೆದಿದೆ. ಕಲಬುರಗಿಯಲ್ಲಿ ಎಟಿಎಂ ದರೋಡೆ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಪೊಲೀಸರು ಮೇಲೆಯೇ ಆರೋಪಿಗಗಳು ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. https://ainkannada.com/atm-in-belgaum-too-cctv-footage/ ಹರಿಯಾಣ ಮೂಲದ ತಸ್ಲಿಂ & ಶರೀಫ್ ಕಾಲಿಗೆ ಗುಂಡೇಟು ತಗುಲಿದೆ. ಈ ಇಬ್ಬರು ಆರೋಪಿಗಳು ಮತ್ತೊಂದು ದರೋಡೆಗೆ ಹೊಂಚು ಹಾಕುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೂ ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಹುಬ್ಬಳ್ಳಿ; ಜಗಜ್ಯೋತಿ ಬಸವೇಶ್ವರ ಜಯಂತಿ ಅಂಗವಾಗಿ ನಗರದ ಗೋಕುಲ ರಸ್ತೆಯಲ್ಲಿನ ಗಾಂಧಿನಗರದಲ್ಲಿನ ಶ್ರೀ ಬಲಮುರಿ ಗಣಪತಿ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ಬಸವ ಜಯಂತಿ ಏಪ್ರಿಲ್ 26 ರಿಂದ ಮೇ 1 ವರೆಗೆ ವಿವಿಧ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಬಲಮುರಿ ಗಣಪತಿ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನ ಹಾಗೂ ಶ್ರೀ ಮೃತ್ಯುಂಜಯ ಸೇವಾ ಸಮಿತಿ ಸಹಯೋಗದೊಂದಿಗೆ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಶ್ರೀ ಬಲಮುರಿ ಗಣಪತಿ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿ  ಅಧ್ಯಕ್ಷರಾದ ಎಸ್.ಬಿ.ಸವದತ್ತಿ, ಗೌರವಾದ್ಯಕ್ಷರಾದ ವಿನೋದ ನಾಯಕ, ಪ್ರಧಾನ ಕಾರ್ಯದರ್ಶಿ ಎಮ್.ಸಿ.ರವದಿ, ಸಹ ಕಾರ್ಯದರ್ಶಿ ಸಿದ್ದೇಶ್ವರ ಕಾರದಕಟ್ಟಿ, ಸಂಘಟನಾ ಕಾರ್ಯದರ್ಶಿ ಬಸವರಾಜ ಹಳಕಟ್ಟಿ, ಮಾರ್ಗದರ್ಶಕರಾದ, ಎಸ್.ಎಸ್.ಶಿವಶಿಂಪರ, ನಿರ್ದೇಶಕರಾದ ವೀರಣ್ಣಾ ಯಾವಗಲ, ಬಣಕಾರ,  ಪ್ಯಾಟಿಶೆಟ್ಟರ, ರಾಜು ಮುಲಿಮನಿ, ಮಹೇಶ್ವರಪ್ಪಾ, ಕೋರಿ ಉದಯ ಹೊಳಿಮಠ, ಸಂತೋಷ ಬಡಿಗೇರ  ಕಮೀಟಿಯ  ಎಲಾ ಪದಾದಿಕಾರಿಗಳು ಸದಸ್ಯರು ಮತ್ತುಗುರು ಹಿರಿಯರು ಮಾರ್ಗದರ್ಶನದಲ್ಲಿ ಎಲ್ಲ‌ ಕಾರ್ಯಕ್ರಮಗಳು ಜರುಗುವವು. https://ainkannada.com/brahmin-community-launches-fierce-protest-against-terrorists-heinous-act/ ಯುವ ಪ್ರೋತ್ಸಾಹಕರಾದ ಶ್ರೇಯಸ್ ಹರಗಿಮಠ, ಆದಿತ್ಯ ಗೌಡರ, ಯಶವಂತ ಪಾಟೀಲ್,…

Read More

ಹುಬ್ಬಳ್ಳಿ: ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿ  ಖಂಡಿಸಿ ಹುಬ್ಬಳ್ಳಿಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿ ಬೃಹತ್‌ ಪ್ರತಿಭಟನೆ ಮಾಡಿದರು. ಉಗ್ರರು ತಮ್ಮ ಉಗ್ರ ಕೃತ್ಯವನ್ನು ಪ್ರದರ್ಶಿಸಿ ದೇಶದ ಪ್ರವಾಸಿಗರ ಮೇಲೆ ಹಾಗೂ ಹಿಂದೂಗಳೆಂದು ಕೇಳಿ ದಾಳಿ ಮಾಡಿ ಹತ್ಯೆಗೈದಿರುವುದು ಖಂಡನಾರ್ಹ. ಅಲ್ಲದೇ ಸರ್ಕಾರ ಭಯೋತ್ಪಾದನಾ ಚಟುವಟಿಕೆಯನ್ನು ಹತ್ತಿಕ್ಕಲು ಇನ್ನೂ ಹೆಚ್ಚಿನ ಕಾರ್ಯತಂತ್ರವನ್ನು ರೂಪಿಸಬೇಕು ಎಂದು ಬ್ರಾಹ್ಮಣ ಮಹಾಸಭಾ ಒತ್ತಾಯಿಸಿತು. https://ainkannada.com/terrorist-attack-in-kashmir-strong-condemnation-from-athani-street-vendors-for-the-terrorist-act/ ಇನ್ನೂ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಶಿವಮೊಗ್ಗ, ಬೀದರ ಹಾಗೂ ಧಾರವಾಡದ ಪರೀಕ್ಷಾ ಕೇಂದ್ರಗಳಲ್ಲಿ ವಿಪ್ರ ವಿದ್ಯಾರ್ಥಿಗಳ ಜನಿವಾರವನ್ನು ತುಂಡರಿಸಿದ್ದನ್ನು‌ ಖಂಡಿಸಿದ ಪ್ರತಿಭಟನಾಕಾರರು, ಪರೀಕ್ಷೆ ಬರೆಯಲು ಹೋದಾಗ ಪರೀಕ್ಷಾ ನೀತಿ ನಿಯಮಗಳಿಗೆ ವಿರುದ್ಧವಾಗಿ ಅಧಿಕಾರಿಗಳು ಪರೀಕ್ಷೆ ಬರೆಯಲ್ಪಡುವ ವಿದ್ಯಾರ್ಥಿಗಳ ಜನಿವಾರವನ್ನು ಕಟ್ಟು ಮಾಡಿ ಧಾರ್ಮಿಕ ಸ್ವಾತಂತ್ರ್ಯವನ್ನು ಮತ್ತು ಭಾವನಾತ್ಮಕ ವಿಷಯಗಳಿಗೆ ಧಕ್ಕೆಯನ್ನುಂಟು ಆಗಿದೆ.  ಶೋಷಣೆಗೊಳಗಾದ ವಿದ್ಯಾರ್ಥಿಗಳಿಗೆ ಸೂಕ್ತವಾದ ಕಾಲೇಜಿನಲ್ಲಿ ಪ್ರವೇಶ ಕೊಡುವುದರೊಂದಿಗೆ ನ್ಯಾಯದೊರಕಿಸಿ‌ ಕೊಡಬೇಕೆಂದು ಸರ್ಕಾರಕ್ಕೆ ಆಗ್ರಹಪಡಿಸುತ್ತೇವೆಂದು ಒತ್ತಾಯಿಸಿದರು

Read More

ಚೆನ್ನೈ: ಮದ್ರಾಸ್ ಇಂಟರ್ನ್ಯಾಷನಲ್ ಸರ್ಕ್ಯೂಟ್‌ನಲ್ಲಿ ಏಪ್ರಿಲ್ 25 ರಿಂದ 27 ರವರೆಗೆ ನಡೆಯಲಿರುವ ಏಷ್ಯಾ ಪೆಸಿಫಿಕ್ ರ್ಯಾಲಿ ಚಾಂಪಿಯನ್‌ಶಿಪ್ (APRC)ನ ಏಷ್ಯಾ ವಲಯ ಸುತ್ತಿಗೆ  21 ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಮದ್ರಾಸ್ ಮೋಟಾರ್ ಸ್ಪೋರ್ಟ್‌ ಕ್ಲಬ್ (MMSC) ಆಯೋಜಿಸಿರುವ ಎಫ್‌ಎಂಎಸ್‌ಸಿಐ ಇಂಡು ಚಂಧೋಕಾ ಸ್ಮಾರಕ ಇಂಡಿಯನ್ ರ್ಯಾಲಿ ಚಾಂಪಿಯನ್‌ಷಿಪ್ (INRC) ಜೊತೆಗೆ ಈ ಸ್ಪರ್ಧೆಯೂ ನಡೆಯಲಿದೆ. APRC ಇಂಡಿಯಾ ಲೆಗ್‌ನ ಹಾಲಿ ಚಾಂಪಿಯನ್ಸ್‌ ಆಗಿರುವ ಎಪಿಆರ್‌ಸಿ ಇಂಡಿಯಾ ಲೆಗ್‌ನ ಹಾಲಿ ಚಾಂಪಿಯನ್‌ಗಳಾದ ಅರ್ಕಾ ಮೋಟಾರ್‌ಸ್ಪೋರ್ಟ್ಸ್‌ನ ಹರ್‌ಕ್ರಿಶನ್ ವಾಡಿಯಾ ಮತ್ತು ಕುನಾಲ್ ಕಶ್ಯಪ್ ಮತ್ತು ಹಾಲಿ ರಾಷ್ಟ್ರೀಯ ಚಾಂಪಿಯನ್‌ಗಳಾದ ಕರ್ಣ ಕಡೂರ್ ಮತ್ತು ಮೂಸಾ ಶೆರಿಫ್ ಸ್ಪರ್ಧೆಯನ್ನು ಮುನ್ನಡೆಸಲಿದ್ದಾರೆ.  ಇವರಿಗೆ ಮಾಜಿ ಐಎನ್‌ಆರ್‌ಸಿ(INRC) ಚಾಂಪಿಯನ್ ಮತ್ತು ಇಆರ್‌ಸಿ(ERC) ಸುತ್ತಿನ ವಿಜೇತ ಅಮಿತ್ರಜೀತ್ ಘೋಷ್, 2019ರ ಐಎನ್‌ಆರ್‌ಸಿ (INRC) ಚಾಂಪಿಯನ್ ಚೇತನ ಶಿವರಾಮ್ ಮತ್ತು ಸಹಚಾಲಕ ಇ ಶಿವಪ್ರಕಾಶ್, ಹಾಗು ಹೈದ್ರಾಬಾದ್‌ನ ನವೀನ್ ಪುಳಿಗಿಲ್ಲಾ  ಸಹಚಾಲಕರಾಗಿ ಸಂತೋಷ್ ಥಾಮಸ್ ಜೊತೆಯಲ್ಲಿ ತೀವ್ರವಾದ ಸ್ಪರ್ಧೆಯನ್ನು ನೀಡಲಿದ್ದಾರೆ. ನವೀನ್…

Read More

2025ರ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕಳಪೆ ಪ್ರದರ್ಶನ ತೋರಿದ್ದು, ಆಡಿರುವ 9 ಪಂದ್ಯದಲ್ಲಿ ಕೇವಲ 2 ಪಂದ್ಯದಲ್ಲಿ ಮಾತ್ರ ಗೆಲುವು ಕಂಡಿದೆ. https://ainkannada.com/a-new-type-of-scam-has-been-discovered-in-the-gmail-app-do-you-know-the-warning/ ನಿನ್ನೆಯ ಪಂದ್ಯದಲ್ಲಿ ಸಿಎಸ್‌ಕೆ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೂಡ 5 ವಿಕೆಟ್‌ಗಳಿಂದ ಸೋತಿತು. ಈ ಸೋಲಿನಿಂದಾಗಿ ತಂಡವು ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ. ಹೀನಾಯ ಸೋಲಿನಿಂದ ಸಿಎಸ್‌ಕೆ ನಾಯಕ ಎಂಎಸ್ ಧೋನಿ ತುಂಬಾ ನಿರಾಶೆಗೊಂಡಂತೆ ಕಂಡುಬಂದರು. ಯಾಕೆಂದರೆ ಧೋನಿ ಕೂಡ ತಮ್ಮ ತಂಡಕ್ಕೆ ಹೆಚ್ಚಿನ ಕೊಡುಗೆ ಒದಗಿಸಲು ಸಾಧ್ಯವಾಗಿಲ್ಲ. ಇದರಿಂದಾಗಿ ತಂಡವು ಸಾಕಷ್ಟು ನಷ್ಟ ಅನುಭವಿಸಿದೆ. ಸಿಎಸ್‌ಕೆ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ ತಂಡದ ಸೋಲಿನ ನಂತರ, ನಾಯಕ ಧೋನಿ ಬೇಸರ ವ್ಯಕ್ತಪಡಿಸಿ, ತಮ್ಮ ತಂಡ ನಿರಂತರವಾಗಿ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಇತ್ತು, ಇದರಿಂದಾಗಿ ಪಂದ್ಯದ ಮೇಲೆ ಹಿಡಿತ ಸಾಧಿಸುವುದು ಕಷ್ಟವಾಯಿತು ಎಂದು ಹೇಳಿದರು. ಮೊದಲ ಇನ್ನಿಂಗ್ಸ್ ಪಿಚ್ ಉತ್ತಮವಾಗಿದೆ ಎಂದು ನಾಯಕ ಬಣ್ಣಿಸಿದರೂ, ಚೆಂಡು ಹೆಚ್ಚು ತಿರುವು ಪಡೆಯುತ್ತಿರಲಿಲ್ಲವಾದ್ದರಿಂದ ಆ…

Read More

ಬೆಂಗಳೂರು ಗ್ರಾಮಾಂತರ:- ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಪಕ್ಷವನ್ನು ಸಮಯಕ್ಕೆ ಬೇಕಾದಂತೆ ಬಳಸಿಕೊಳ್ಳುತ್ತಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದ್ದಾರೆ. https://ainkannada.com/does-a-pan-card-have-an-expiry-date-what-happens-to-a-pan-card-after-a-person-dies/ ದೊಡ್ಡಬಳ್ಳಾಪುರ ತಾಲ್ಲೂಕಿನ ಅಭಿವೃದ್ಧಿ ವಿಚಾರದಲ್ಲಿ ಹಾಲಿ ಮತ್ತು ಮಾಜಿ ಶಾಸಕರ ಪೈಟ್ ವಿಚಾರವಾಗಿ ಮಾತನಾಡಿ, ಜೆಡಿಎಸ್ ಪಕ್ಷದಲ್ಲಿ 25 ವರ್ಷದಿಂದ ತಾಲ್ಲೂಕಿನಲ್ಲಿ ಯಾರು ಶಾಸಕರಾಗಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳು ಸಮಯಕ್ಕೆ ಬೇಕಾದಂತೆ ಜೆಡಿಎಸ್ ಪಕ್ಷವನ್ನು ಬಳಸಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಮೈತ್ರಿಯಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಅಭಿವೃದ್ಧಿ ವಿಚಾರದಲ್ಲಿ ಹಾಲಿ ಮತ್ತು ಮಾಜಿ ಶಾಸಕರ ಕೆಸರೆರಚಾಟ ಬಿಡಿ. ಬಿಜೆಪಿ ಮತ್ತು ಕಾಂಗ್ರೆಸ್ ಸೇರಿ ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಎಂದು ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಹರೀಶ್ ಗೌಡ ಹೇಳಿಕೆ ಕೊಟ್ಟಿದ್ದಾರೆ.

Read More

ಬೆಂಗಳೂರು:- ಗ್ಯಾರಂಟಿ ಹೆಸರೇಳಿ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಕುಂಟು ನೆಪಹೇಳಿ ಬಡವರಿಗೆ ಹೊರೆಯಾಗುವ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತಿದೆ. https://ainkannada.com/kohli-not-hazlewood-who-is-the-real-hero-behind-rcbs-victory/ ಅದರಂತೆ ಕರ್ನಾಟಕ ಸರ್ಕಾರದ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಈ ಆದೇಶ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು ಬೆಸ್ಕಾಂ ವಕೀಲರಿಗೆ ನೋಟಿಸ್ ಜಾರಿ ಮಾಡಿದೆ. ಸ್ಮಾರ್ಟ್ ಮೀಟರ್ ಕಡ್ಡಾಯ ಉಚಿತ ಭಾಗ್ಯಗಳನ್ನು ಕೊಟ್ಟಿರುವ ಪರಿಣಾಮಾನಾ? ನಿಮಗೆ ಉಚಿತ ವಿದ್ಯುತ್ ಕೇಳಿದವರು ಯಾರು? ಬಡವರು ಎಲ್ಲಿಗೆ ಹೋಗಬೇಕು ಎಂದು ಸರ್ಕಾರಿ ಪರ ವಕೀಲರನ್ನು ಜಡ್ಜ್ ತರಾಟೆಗೆ ತೆಗೆದುಕೊಂಡರು.

Read More

ಮಂಡ್ಯ:- ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ‌ ಬಳಿ ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ‌ ಆಕಸ್ಮಿಕ ಬೆಂಕಿ‌ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿದಿರುವ ಘಟನೆ ಜರುಗಿದೆ https://ainkannada.com/saalumarada-thimmakka-unveils-the-title-song-of-the-film-kuladali-keelyavudo/ ಅದೃಷ್ಟವಶಾತ್ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇಂದು ಬೆಳಗ್ಗಿನ ಜಾವ 5 ಗಂಟೆ ವೇಳೆಯಲ್ಲಿ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ‌ ಬೆಂಗಳೂರು ಕಡೆಗೆ ಖಾಸಗಿ ಬಸ್ ಚಲಿಸುತ್ತಿತ್ತು. ಕದಬಹಳ್ಳಿ ಬಳಿ ಇದ್ದಕ್ಕಿದ್ದಂತೆ ಬಸ್‌ನಲ್ಲಿ‌ ಬೆಂಕಿ‌ ಕಾಣಿಸಿದೆ. ಕೂಡಲೇ ಬಸ್ ಚಾಲಕ ಬಸ್‌ನಲ್ಲಿ‌ ಇದ್ದ 25 ಮಂದಿ ಪ್ರಯಾಣಿಕರನ್ನು ತಮ್ಮ ಲೆಗೇಜ್‌ ಸಹಿತ ಕೆಳಗೆ‌ ಇಳಿಯಲು ಹೇಳಿದ್ದಾನೆ. ಬಳಿಕ‌ ಎಲ್ಲಾ ಪ್ರಯಾಣಿಕರು ಬಸ್‌ನಿಂದ ಕೆಳಗೆ ಇಳಿಸಿದಿದ್ದಾರೆ. ಬಳಿಕ‌ ಬಸ್‌ನಲ್ಲಿ‌ ಬೆಂಕಿಯ ಪ್ರಮಾಣ ಹೆಚ್ಚಿದ್ದು, ನೋಡ‌ ನೋಡುತ್ತಿದ್ದಂತೆ ಬಸ್ ಧಗಧಗನೇ‌ ಹೊತ್ತಿ‌ ಉರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಸ್‌ನ ಬೆಂಕಿಯನ್ನು ಹಾರಿಸಿದ್ದಾರೆ

Read More