ರಾಯಚೂರು :- ಸಿಡಿಲು ಬಡಿದು ಬೊಲೆರೋ ವಾಹನ ಸುಟ್ಟುಕರಕಲಾಗಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೇವದುರ್ಗ ತಾಲೂಕಿನ ಗಾಣದಾಳ ಗ್ರಾಮದಲ್ಲಿ ನಡೆದಿದೆ. https://ainkannada.com/fiance-is-now-a-financier-kannada-actress-shares-cute-photo-with-cricketer-husband/ ತೆಂಗಿನ ಮರದ ಕೆಳಗೆ ಬೊಲೆರೋ ನಿಲ್ಲಿಸಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದೇ ವೇಳೆ, ಜಮೀನಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸಿಡಿಲು ಮೊದಲು ತೆಂಗಿನ ಮರಕ್ಕೆ ಬಡಿದಿದೆ. ಅದರ ಕಿಡಿಯಿಂದ ಪಕ್ಕದ ಹುಲ್ಲಿನ ಬಣವೆಗೆ ಬೆಂಕಿ ತಗುಲಿ, ವಾಹನ ಸುಟ್ಟು ಕರಕಲಾಗಿದೆ.
Author: AIN Author
ಬೆಂಗಳೂರು:- ಪ್ಲೀಸ್ ಲವ್ ಮಿ ಎಂದು ಯುವತಿ ಹಿಂದೆ ಬೆನ್ನು ಬಿದ್ದು, ಆಕೆ ಒಪ್ಪದಿದ್ದಾಗ ಹಲ್ಲೆ ಮಾಡಿರುವ ಕಾಮುಕ ಟೆಕ್ಕಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಶ್ರೀಕಾಂತ್ ಬಂಧಿತ ಆರೋಪಿ.ಶ್ರೀಕಾಂತ್ಗೆ ಈ ಹಿಂದೆ ಮದುವೆಯಾಗಿದ್ದು, ಆತನ ಮನೆಯಲ್ಲಿ ಬಾಡಿಗೆಗೆ ಇದ್ದ 20 ವರ್ಷದ ಕಾಲೇಜು ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದನು ಈ ಬಗ್ಗೆ ಯುವತಿಯು ಆತನ ಪತ್ನಿಗೆ ದೂರು ನೀಡಿದ್ದಳು. ಆದರೆ ಇದರಿಂದ ಯಾವುದೇ ಪ್ರಯೋಜನ ಆಗಿರಲಿಲ್ಲ. ಯುವತಿಯು ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಟೆಕ್ಕಿಯು ಕೋಪಗೊಂಡಿದ್ದ ಕಳೆದ 3 ದಿನಗಳ ಹಿಂದೆ ಯುವತಿ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಬೇರೊಬ್ಬ ಯುವಕನೊಂದಿಗೆ ನಿಂತಿದ್ದಳು. ಇದನ್ನೂ ಟೆಕ್ಕಿ ಗಮನಿಸಿದ್ದ. ಬೇರೊಬ್ಬ ಯುವಕನೊಂದಿಗೆ ಪ್ರೀತಿ ಇರುವುದಕ್ಕೆ ನಿರಾಕರಿಸುತ್ತಿದ್ದೀಯಾ ಎಂದು ಟೆಕ್ಕಿಯು ಯುವಕ ಯುವತಿಗೆ ಚಾಕು ಹಾಕಿದ್ದ. ನೊಂದ ಯುವತಿಯು ಟೆಕ್ಕಿಯ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಅನ್ವಯ ಅರೆಸ್ಟ್ ಮಾಡಲಾಗಿದೆ.
ಬೆಂಗಳೂರು:- 2014ರಿಂದ ಆಗಿರುವ ಹಿಂದೂಗಳ ಸಾವಿನ ಕೇಂದ್ರವೇ ಹೊಣೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. https://ainkannada.com/another-milestone-bangalore-kempegowda-airport/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಳೆದ 11 ವರ್ಷಗಳಿಂದಲೂ ಕೇಂದ್ರ ಸರ್ಕಾರ ದಿನದ 24 ಗಂಟೆಯೂ ಮುಸ್ಲಿಂ.. ಮುಸ್ಲಿಂ.. ಮುಸ್ಲಿಂ.. ಅಂತ ಬೈಯೋದು ಬಿಟ್ರೆ ಬೇರೇನು ಮಾಡಿಲ್ಲ ಎಂದರು. ಸರ್ಜಿಕಲ್ ಸ್ಟ್ರೈಕ್ ಏನಾಯ್ತು? ಪುಲ್ವಾಮಾ ದಾಳಿ ಏನಾಯ್ತು? ಯಾರೂ ಚರ್ಚೆ ಮಾಡ್ತಿಲ್ಲ ಯಾಕೆ..? ಯಾಕೆ ಮೆರವಣಿಗೆ ಮಾಡ್ತೀರ, ನೀವು ಹಿಂದೂಗಳನ್ನ ಕೊಂದಿರೋದು. 2014ರಿಂದ ಆಗಿರುವ ಹಿಂದೂಗಳ ಹತ್ಯೆಯ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು. 20 ರಾಜ್ಯಗಳಲ್ಲಿ ನಿಮ್ಮ ಪಕ್ಷದವರೇ ಸಿಎಂ, ನೀವೆ ಪಿಎಂ, ಬರೀ ಹಿಂದೂ ಮುಸ್ಲಿಂ ಬಿಟ್ರೆ ಬೇರೆ ಏನೂ ಇಲ್ಲ. ಸರ್ಕಾರ ಬಂದು ಇವತ್ತು ವೈಫಲ್ಯ ಅಂತ ಹೇಳಿದೆ. ಇವರೇ ಆರ್ಟಿಕಲ್ 370 ರದ್ದು ಮಾಡಿದ್ರು, ಎಲ್ಲಾ ನಮ್ಮ ಕಂಟ್ರೋಲ್ನಲ್ಲೇ ಇದೆ ಅಂದ್ರು. ನಾನು ನೋಡಿದಂತೆ ಅಲ್ಲಿನ ಲೋಕಲ್ ಜನ ಬ್ಯೂಟಿಫುಲ್ ಆಗಿದ್ದಾರೆ. ಆದ್ರೆ ನಮಗಿಂತ ಹೆಚ್ಚಾಗಿ ಅಲ್ಲಿನ…
ದೇವನಹಳ್ಳಿ: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ದಕ್ಷಿಣ ಭಾರತದ ಅತಿದೊಡ್ಡ ಲಾಜೆಸ್ಟಿಕ್ ಪಾರ್ಕ್ ಕೆಐಎಬಿಯಲ್ಲಿ ಉದ್ಘಾಟನೆ ಆಗಿದ್ದು, ಏರ್ ಇಂಡಿಯಾ ಸ್ಯಾಟ್ಸ್ ಚೇರ್ಮಾನ್ ನಿಪುನ್ ಅರ್ಗವಾಲ್, ಬಾಬ್ ಚೀ ಮತ್ತು ಏರ್ಪೋಟ್ ಎಂಡಿ ಹರಮರನ್ ಅವರಿಂದ ದೀಪ ಬೆಳಗಿಸುವ ಮೂಲಕ ಚಾಲನೆ ದೊರೆತಿದೆ. https://ainkannada.com/do-you-know-sweet-lovers-whats-in-english-for-juicy-rasagullah/ ಕೆಐಎಬಿಯು, ದೇಶದಲ್ಲೆ ಮೂರನೆ ಅತಿದೊಡ್ಡ ಬ್ಯುಸಿಯೆಸ್ಟ್ ಏರ್ಪೋಟ್ ಆಗಿದ್ದು, 502.480 ಮೆಟ್ರಿಕ್ ಟನ್ ಸರಕು ಸಾಗಣೆ ಮಾಡ್ತಿದ್ದು 2030 ಕ್ಕೆ 1 ಮಿಲಿಯನ್ ಮೆಟ್ರಿಕ್ ಟನ್ ಕಾರ್ಗೋ ಗುರಿ ಹೊಂದಿದೆ. 2 ಲಕ್ಷ 40 ಸಾವಿರ ಚದರ ಅಡಿಗಳ ನೂತನ ಲಾಜೆಸ್ಟಿಕ್ ಏರ್ ಇಂಡಿಯಾ ಸ್ಯಾಟ್ಸ್ ಪಾರ್ಕ್ ಉದ್ಘಾಟಿಸಲಾಗಿದ್ದು, 11 ಸಾವಿರ ಚದರ ಅಡಿಯ ಜನರಲ್ ವೇರ್ ಹೌಸ್, 24 ಸಾವಿರ ಚದರ ಅಡಿಯ ಕಛೇರಿ, ಕೋಲ್ಡ್ ಸ್ಟೋರೇಜ್, ಏಕ್ಸಪ್ರೇಸ್ ಕೊರಿಯರ್, ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಲಾಜೆಸ್ಟಿಕ್ ಪಾರ್ಕ್ ಇದಾಗಿದೆ.
ಸ್ವೀಟ್ಸ್ ಅಂದ್ರೆ ಸಾಕು ಕೆಲವರು ಬಾಯಿ ಚಪ್ಪರಿಸಿಕೊಂಡು ತಿನ್ತಾರೆ. ಇನ್ನು ಕೆಲವೊಬ್ಬರಿಗೆ ಸ್ವೀಟ್ಸ್ ಅಂದ್ರೆ ಅಷ್ಟು ಇಷ್ಟ ಇಲ್ಲಾಂದ್ರೂ ಮಧ್ಯಾಹ್ನದ ಊಟ, ರಾತ್ರಿಯ ಊಟ ಮಾಡಿ ಸ್ವೀಟ್ಸ್ ಕೊಟ್ರೆ ಸೈ ಅಂತಾರೆ. ಕೆಲವೊಂದು ಸಾರಿ ಅದೆಷ್ಟು ಊಟ ಮಾಡಿದ್ರೂ, ಸ್ನ್ಯಾಕ್ಸ್ ತಿಂದ್ರೂ ಥಟ್ಟಂತ ಏನಾದ್ರೂ ಸ್ವೀಟ್ಸ್ ತಿನ್ನೋಣ ಅನ್ನೋ ಬಯಕೆ ಕಾಡೋದಿದೆ. https://ainkannada.com/heavy-rains-in-these-districts-of-karnataka/ ಇನ್ನೂ ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರಿಗೂ ರಸಗುಲ್ಲಾ ಅಂದ್ರೆ ತುಂಬಾ ಇಷ್ಟ. ಈ ಸಿಹಿಯಾದ ತಿಂಡಿ. ಯಾವುದೇ ದಿಕ್ಕಿನಿಂದ ನೋಡಿದರೂ ಗುಂಡಾಗಿ ಬಿಳಿಯಾಗಿರುವ ಈ ಸಿಹಿಯನ್ನು ತಿನ್ನುವುದರಲ್ಲಿ ಸಿಗುವ ಖುಷಿಯೇ ಬೇರೆ ಖುಷಿಯಲ್ಲಿದ್ದಾಗ ಕೆಲ ಮಂದಿ ರಸಗುಲ್ಲಾ ಹಂಚಿ ತಿನ್ನಲು ಇಷ್ಟಪಡುತ್ತಾರೆ. ಅದೇ ರೀತಿ ಕೋಪ ಅಥವಾ ದುಃಖದಲ್ಲಿರುವವರಿಗೆ ರಸಗುಲ್ಲಾ ನೀಡಿದರೆ ಸಾಕು ತಕ್ಷಣವೇ ತಣ್ಣಗಾಗಿ ಸಮಾಧಾನಗೊಳ್ಳುತ್ತಾರೆ. ರಸಗುಲ್ಲಾಗೆ ರಸಗುಲ್ಲಾವೇ ಸಾಟಿ. ಬೇರೆ ತಿಂಡಿಗಳಿಗೆ ಹೋಲಿಸಿದರೆ ರಸಗುಲ್ಲಾ ಯಾವುದೇ ಸಿಹಿ ತಿಂಡಿಗಳಿಗೂ ಕಡಿಮೆ ಇಲ್ಲ ಎಂದೇ ಹೇಳಬಹುದು. ವಾಸ್ತವವಾಗಿ, ಇದೊಂದು ಬೆಂಗಾಲಿ ಸ್ವೀಟ್ ಆಗಿದ್ದು, ಬಂಗಾಳಿಗರ…
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 27ರ ಬಳಿಕ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಬಿಸಿಲ ಧಗೆ ಹೆಚ್ಚಾಗಿದೆ. ಎಚ್ಎಎಲ್ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ
5 ಬಾರಿ ಟ್ರೋಫಿ ಎತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 2025 ರ ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ ಮುಂದುವರಿಸಿದೆ. ಆಡಿರುವ ಒಂಭತ್ತು ಪಂದ್ಯದಲ್ಲಿ ಕೇವಲ 2 ಪಂದ್ಯ ಗೆದ್ದಿದ್ದು, 7 ಪಂದ್ಯ ಸೋತಿದೆ. https://ainkannada.com/this-pile-is-a-kind-of-fear-for-something-saturdays-heap-future-26-april-2025/ ಅದರಂತೆ ನಿನ್ನೆ ತವರು ಮೈದಾವ ಚಿದಂಬರಂ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ SRH ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲು ಕಂಡಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಬಹುತೇಕ ಈ ಆವೃತ್ತಿಯಲ್ಲಿ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ 19.5 ಓವರ್ಗಳಲ್ಲಿ 154 ರನ್ಗಳಿಗೆ ಆಲೌಟ್ ಆಯಿತು. 155 ರನ್ಗಳ ಸವಾಲಿನ ಮೊತ್ತ ಗುರಿ ಬೆನ್ನಟ್ಟಿದ ಸನ್ ರೈಸರ್ಸ್ ಹೈದರಾಬಾದ್ 18.4 ಓವರ್ಗಳಲ್ಲೇ ಗುರಿ ಪೂರೈಸಿ ಅಂಕಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಜಿಗಿತ ಕಂಡಿತು. ಸಿಎಸ್ಕೆ ಪರ ದೇವಾಲ್ ಬ್ರೇವಿಸ್ ಸ್ಫೋಟಕ 42 ರನ್, ಆಯುಷ್ ಮಾತ್ರೆ 30 ರನ್, ಜಡೇಜಾ 21 ರನ್,…
ರಾಯಚೂರು:- 9 ತಿಂಗಳ ತುಂಬು ಗರ್ಭಿಣಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ಜರುಗಿದೆ. ಘಟನೆ ಸಂಬಂಧ ಗೃಹಿಣಿಯ ಪತಿಯನ್ನು ಅರೆಸ್ಟ್ ಮಾಡಲಾಗಿದೆ. https://ainkannada.com/this-pile-is-a-kind-of-fear-for-something-saturdays-heap-future-26-april-2025/ ಅನುಪಮ ಮೃತ ಮಹಿಳೆ. ಈಕೆ ಶವ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸಾವಿನ ಸುತ್ತ ಸಾಕಷ್ಟು ಅನುಮಾನ ಮೂಡಿದ್ದು, ಅನುಮಾನದ ಮೇರೆಗೆ ಪೊಲೀಸರು ಮಹಿಳೆ ಪತಿಯನ್ನು ಬಂಧಿಸಿದ್ದಾರೆ. ಅನುಪಮಾ ಹಾಗೂ ರಾಯಚೂರಿನ ಬೂದಿಹಾಳದ ನಾಗರಾಜ್ ಇನ್ಸ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದರು. ಇಬ್ಬರ ಪರಿಚಯ ಪ್ರೀತಿಗೆ ತಿರುಗಿ ಬಳಿಕ 11 ತಿಂಗಳ ಹಿಂದೆ ಮದುವೆಯಾಗಿದ್ದರು. ಮದುವೆಯಾದ ಹೊಸದರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದ್ರೆ, ಅದೇನಾಯ್ತೋ ಏನೋ ಅನುಪಮ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಎನ್ನಲಾಗಿದೆ. ಆದ್ರೆ, ಜಾತಿ ಹಾಗೂ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಅನುಪಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆ ಪೋಷಕರು ಆರೋಪಿಸಿದ್ದಾರೆ. ನಾಗರಾಜ್ ಮನೆಯವರು ಜಾತಿ ಬೇರೆ, ವರದಕ್ಷಿಣೆ ತಂದಿಲ್ಲವೆಂದು ಕಿರುಕುಳ ನೀಡುತ್ತಿದ್ದರು. ಗಂಡನ ಮನೆಯವರ ಕಿರುಕುಳ, ಹಿಂಸೆಯಿಂದಲೇ ತಮ್ಮ ಮಗಳು…
ಸೂರ್ಯೋದಯ – 5:56ಬೆ ಸೂರ್ಯಾಸ್ತ – 6:31ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ತ್ರಯೋದಶಿ ನಕ್ಷತ್ರ – ಉತ್ತರಾಭಾದ್ರೆ ಯೋಗ – ವೈಧೃತಿ ಕರಣ – ವಣಿಜ ರಾಹು ಕಾಲ – 09:00 ದಿಂದ 10:30 ವರೆಗೆ ಯಮಗಂಡ – 01:30 ದಿಂದ 03:00 ವರೆಗೆ ಗುಳಿಕ ಕಾಲ – 06:00 ದಿಂದ 07:30 ವರೆಗೆ ಬ್ರಹ್ಮ ಮುಹೂರ್ತ – 4:20 ಬೆ. ದಿಂದ 5:08 ಬೆ. ವರೆಗೆ ಅಮೃತ ಕಾಲ – 1:31 ಬೆ.ದಿಂದ 2:56 ಬೆ. ವರೆಗೆ ಅಭಿಜಿತ್ ಮುಹುರ್ತ – 11:48 ಬೆ. ದಿಂದ 12:39 ಮ. ವರೆಗೆ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob.…
ಮೈಸೂರು:- ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪಿ ಮೌಲ್ವಿ ಮುಷ್ತಾಕ್ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. https://ainkannada.com/rain-news-heavy-rain-with-thunderstorm-in-vijayapura/ ಆರೋಪಿ ಮೌಲ್ವಿ ಮುಷ್ತಾಕ್, ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಮುಸ್ಲಿಂ ಯುವಕರು ಕಲ್ಲು ತೂರಲು ಪ್ರೇರೇಪಣೆ ಮಾಡಿದ್ದ ಆರೋಪ ಹೊತ್ತಿದ್ದ. ಘಟನೆ ಬಳಿಕ ಆರೋಪಿ ನಾಪತ್ತೆಯಾಗಿದ್ದ. 11 ದಿನಗಳ ಬಳಿಕ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದರು. ಜಾಮೀನಿಗಾಗಿ ಆರೋಪಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಆರೋಪಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.