ಚಿತ್ರದುರ್ಗ:- ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು 11 ವರ್ಷದ ಬಾಲಕಿ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. https://ainkannada.com/rain-news-heavy-rain-with-thunderstorm-in-vijayapura/ ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಸ್ಪಂದನಾ ಎಂದು ಗುರುತಿಸಲಾಗಿದೆ. ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಸ್ಪಂದನಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಕ್ಕದ ಮನೆಯ ಸ್ನೇಹಿತೆ ಜತೆ ಬಾಲಕಿ ನಿತ್ಯ ಸೈಕಲ್ ಆಡುತ್ತಿದ್ದಳು. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Author: AIN Author
ವಿಜಯಪುರ: ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ ಆಗಿದ್ದು, ಸಂಚಾರ ಅಸ್ತವ್ಯಸ್ತವಾಗಿತ್ತು. ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸುರಿದಿದೆ. https://ainkannada.com/kolar-housewife-hangs-herself-after-being-married-for-a-year-in-her-husbands-house/ ಭಾರೀ ಮಳೆ ಸುರಿದ ಪರಿಣಾಮ ರಸ್ತೆಗಳು ಜಲಾವೃತ್ತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇನ್ನೂ ನಿಲ್ಲಿಸಿದ್ದ ಬೈಕ್ ಹಾಗೂ ಕಾರುಗಳು ಮುಳುಗುವಷ್ಟು ನೀರು ನಿಂತಿದ್ದು, ಅಂಗಡಿ ಮುಂಗಟ್ಟುಗಳ ಜಲಾವೃತಗೊಂಡಿದೆ. ಏಕಾಏಕಿ ಸುರಿದ ಮಳೆಗೆ ಜನರು ಕಕ್ಕಾಬಿಕ್ಕಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲಿ ಸುರಿದ ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಬಸವನಬಾಗೇವಾಡಿ ತಾಲೂಕಿನ ಕರಭಂಟನಾಳ ಗ್ರಾಮದಲ್ಲಿ ಬಸವರಾಜ ಸದಾಶಿವ ಮಣ್ಣೂರ ಎಂಬುವವರಿಗೆ ಸೇರಿದ ಎಮ್ಮೆಯೊಂದು ಸಿಡಿಲು ಬಡಿದು ಸಾವನ್ನಪ್ಪಿದೆ.
ಅಥ ಣಿ:- ಜಮ್ಮು-ಕಾಶ್ಮೀರದ ಪೆಹೆಲ್ಗಾಂ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಥಣಿ ಬೀದಿ ಬದಿ ವ್ಯಾಪಾರಿಗಳ ಸಂಘ ವತಿಯಿಂದ ಕ್ಯಾಂಡಲ್ ಮಾರ್ಚ್ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. https://ainkannada.com/kolar-housewife-hangs-herself-after-being-married-for-a-year-in-her-husbands-house/ ಮಾನವೀಯತೆಯ ಮೇಲಿನ ದಾಳಿ ಇದಾಗಿದ್ದು, ಭಾರತದಲ್ಲಿರುವ ನಾವು ಹಿಂದೂ ಮುಸ್ಲಿಂ ಬಾಯಿ ಬಾಯಿ ಎಂದು ವಿವಿಧತೆಯಲ್ಲಿ ಏಕತೆಯಿಂದ ಬದುಕುತ್ತಿದ್ದು ಶಾಂತಿ ಕದಡುವ ಹುನ್ನಾರವನ್ನು ನಡೆಸುತ್ತಿರುವ ಕೆಲವು ಕ್ಷುದ್ರಶಕ್ತಿಗಳನ್ನು ಕೇಂದ್ರ ಸರ್ಕಾರ ಕೂಡಲೇ ಹೆಮ್ಮೆಟ್ಟಿಸುವ ಕೆಲಸವನ್ನು ಮಾಡಬೇಕು ಮತ್ತು ವಿದ್ವಾಂಸಕ ಕೃತ್ಯದಲ್ಲಿ ತೊಡಗಿದವರನ್ನು ಸಾಧ್ಯವಾದರೆ ಬಂಧಿಸಿ ಸಾರ್ವಜನಿಕವಾಗಿ ಅವರ ದೇಹದ ಅಂಗಗಳನ್ನು ಕತ್ತರಿಸುವ ಮೂಲಕ ಕಠಿಣ ಕ್ರಮ ತೀರಿಸಿ ಭಯೋತ್ಪಾದನೆ ಕೃತ್ಯಕ್ಕೆ ಕಠಿಣ ಶಿಕ್ಷೆ ಇದೆ ಎಂಬುದನ್ನು ಸಾಬೀತು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಅಥಣಿ ಪಟ್ಟಣದ ನೂರಾರು ಬೀದಿಬದಿಯ ವ್ಯಾಪಾರಸ್ಥರು ಭಾಗಿಯಾಗಿದ್ದು ಮುರುಗೇಂದ್ರ ಬ್ಯಾಂಕ್ ನಿಂದ ಆರಂಭವಾದ ಕ್ಯಾಂಡಲ್ ಮಾರ್ಚ್ ಪ್ರತಿಭಟನೆಯು ಅಂಬೇಡ್ಕರ್ ವೃತ್ತದಲ್ಲಿ ಸಮಾರೋಪಗೊಂಡಿತು. ಈ ವೇಳೆ ಬೀದಿ ಬದಿ…
ಮಾಲೂರು – ಪತಿಯ ಕುಟುಂಬಸ್ಥರ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಕೋಲಾರದ ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ನಡೆದಿದೆ. ಹೌದು, ರಶ್ಮಿ (25) ಮೃತ ದುರ್ದೈವಿ. ರಶ್ಮಿ, ಪತಿ ಮನೆಯಲ್ಲೇ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದಿನೇಶ್ ಹಾಗೂ ರಶ್ಮಿ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ವರ್ಷದ ಹಿಂದೆಯಷ್ಟೇ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. https://ainkannada.com/hubballi-aiobc-celebrates-jyotiba-pule-jayanti/ ಡೆತ್ನೋಟ್ನಲ್ಲಿ ʻರೀ ಸಾರಿ ನಿಮ್ಮ ಅಮ್ಮ, ದೊಡ್ಡಮ್ಮನ ಕಾಟ ತಡೆಯೋಕೆ ಆಗುತ್ತಿಲ್ಲ. ಮದುವೆಯಾಗಿ ಬಂದಾಗಿನಿಂದ ನೆಮ್ಮದಿಯೇ ಇಲ್ಲ. ನನ್ನಿಂದ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ನನ್ನ ಗಂಡ ಒಳ್ಳೆಯವನೇ, ಆದರೆ ಮನೆಯವರು ಒಳ್ಳೆಯವರಲ್ಲ. ಅದಕ್ಕೆ ನೀವು ಬರುವಷ್ಟರಲ್ಲೇ ಸಾಯುತ್ತಿದ್ದೇನೆ, ಬೈʼ ಎಂದು ಬರೆದಿದ್ದಾರೆ. ಇತ್ತ ತಂದೆ ತಾಯಿಗೂ ಕ್ಷಮೆ ಕೇಳಿರುವ ರಶ್ಮಿ, ಅಮ್ಮ ಇಷ್ಟು ದಿನ ಇಲ್ಲಿನ ಕಷ್ಟ ಸಹಿಸಿಕೊಂಡೆ. ಇಲ್ಲಿಯವರು ಒಳ್ಳೆಯವರಲ್ಲ. ವರದಕ್ಷಿಣೆ ತಂದಿಲ್ಲ ಎಂದು ಹೊಡೆಯುತ್ತಾರೆ ಎಂದು ಬರೆದು ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ…
ಹುಬ್ಬಳ್ಳಿ: ನಗರದ ಕೇಶ್ವಾಪುರ ರಸ್ತೆಯಲ್ಲಿರುವ ಅಖಿಲ ಭಾರತ ಹಿಂದುಳಿದ ವರ್ಗಗಳ ರೈಲ್ವೇ ನೌಕರರ ಸಂಘದ ಕಚೇರಿಯಲ್ಲಿ ಸಮಾಜ ಸುಧಾರಕ ಹಾಗೂ ಸಮಾನತೆಯ ಹರಿಕಾರರಾಗಿರುವ ಮಹಾನಾಯಕ ಮಹಾತ್ಮಾ ಜ್ಯೋತಿಬಾ ಪುಲೆ ಅವರ 198ನೇ ಜಯಂತಿಯನ್ನ ಭಕ್ತಿ ಭಯದಿಂದ ಹಾಗೂ ಉತ್ಸಾಹದಿಂದ ಅದ್ದೂರಿಯಾಗಿ ಆಚರಿಸಲಾಯಿತು. https://ainkannada.com/chikkodi-upsc-achievement-of-a-young-shepherd-551st-rank-in-the-country/ ಶಾಸಕ ಮಹೇಶ್ ಟೆಂಗಿನಕಾಯಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಮಹಾತ್ಮ ಪುಲೆ ಅವರ ಸಮಾಜ ಪರಿವರ್ತನೆಗೆ ನೀಡಿದ ಅಮೂಲ್ಯ ಆಗಿದ್ದು ಅವರ ಸಂದೇಶ ದ ಸರ್ವಕಾಲಿಕ ಎಂದರು. ಅಖಿಲ ಭಾರತ ಹಿಂದುಳಿದ ವರ್ಗಗಳ ರೈಲ್ವೇ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಎಐಒಬಿಸಿಯ ರಾಷ್ಟ್ರೀಯ ಅಧ್ಯಕ್ಷರಾದ ರಾಜೇಶ್, ಪ್ರಧಾನ ಕಾರ್ಯದರ್ಶಿಗಳಾದ ಗೋವರ್ಧನ, ಕಾರ್ಯಾಧ್ಯಕ್ಷರಾದ ರೇವಪ್ಪ ಎಳಮಲಿ ಹಾಗೂ ಪ್ರಮುಖರಾದ ಪಣೀಂದ್ರನಾಥ್, ವಿಜಯಕುಮಾರ ಯಾದವ, ವಿಠಲ್ ಎಕ್ಕೊಟೆ, ವೈ. ರಾಜಕುಮಾರ, ಯಲ್ಲಪ್ಪ ಜಗ್ಗಣ್ಣನವರ, ಜನಾರ್ದನ ಬೆಂಗಳೂರು ಹಾಗೂ ಮೈಸೂರು ವಿಭಾಗದ ಪದಾಧಿಕಾರಿಗಳು ಹಾಗೂ ಹಲವಾರು ಸದಸ್ಯರು ಉಪಸ್ಥಿತರಿದ್ದರು.
ಚಿಕ್ಕೋಡಿ : ಯುಪಿಎಸ್ಸಿ ಎಕ್ಸಾಮ ಬರೆಬೇಕು ಒಂದು ಉನ್ನತ ಮಟ್ಟದ ಹುದ್ದೆಗೆ ಏರಬೇಕು ಎಂದು ಬಹಳ ಜನರ ಕನಸಾಗಿರುತ್ತೆ. ಬಟ್ ಗುರಿ ಮುಟ್ಟುವರು ಮಾತ್ರ ಬಹಳ ಕಡಿಮೆ ಮಂದಿ. ಯಾಕಂದ್ರೆ ಆ ಹಾದಿ ಅಷ್ಟು ಕಠಿಣ ಇರುತ್ತೆ. ಅದಕ್ಕಾಗಿ ತುಂಬಾ ಶ್ರಮ ಹಾಕುವ ದೃಢ ಮನಸ್ಥಿತಿ ಇರಬೇಕು. ಅದನ್ನು ಪಡೆದೆ ತಿರುತ್ತೇನೆ ಎಂಬ ಛಲ ಸತತ ಪ್ರಯತ್ನ ತುಂಬಾ ಮುಖ್ಯ ಆಗಿರುತ್ತೆ. https://ainkannada.com/two-pakistani-women-found-in-koppal-information-available-from-high-ranking-sources/ ಹೌದು… ಇತ್ತೀಚಿಗೆ ಅಷ್ಟೇ ಯುಪಿಎಸ್ಸಿ ರಿಸಲ್ಟ್ ಪ್ರಕಟಕೊಂಡಿದ್ದು ಸಾಮಾನ್ಯ ಕುರಿ ಕಾಯುವ ಯುವಕನೊಬ್ಬ ಯುಪಿಎಸ್ಸಿ ಪಾಸ್ ಮಾಡಿದ್ದಾನೆ. ಈತ ಕುರಿಮೆಯಿಸುವಾಗಲೇ ಫಲಿತಾಂಶ ಪ್ರಕಟಗೊಂಡಿದ್ದು ದೇಶದಲ್ಲಿ 551 ರ್ಯಾಂಕ್ ಪಡೆಯುವ ಮೂಲಕ ಅಪ್ರತಿಮ ಸಾಧನೆ ಮಾಡಿದ್ದಾನೆ. ಈ ಕುರಿಗಾಹಿ ಸಾಧಕನ ಯಶೋಗಾಥೆ ಇಲ್ಲಿದೆ ನೋಡಿ… ಕುರಿ ಮೇಯಿಸುತ್ತಾ ಬೆಳಗಾವಿಯ ನಾನಾವಾಡಿಯಲ್ಲಿ ವಾಸವಿರುವ ಈ ಯುವಕನ ಹೆಸರು ಬೀರಪ್ಪ ಸಿದ್ದಪ್ಪ ಡೋಣಿ ಈತ ಮೂಲತ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಜಿಲ್ಲೆಯ ಎಮಗೆ ಗ್ರಾಮದವನು. ಸದ್ಯ ಬೀರಪ್ಪ ದೇಶವೇ ತಿರುಗಿ ನೋಡುವ…
ಕೊಪ್ಪಳ:- ಜಮ್ಮು ಕಾಶ್ಮೀರದಲ್ಲಿ ನಡೆದ ಭೀಕರ ದಾಳಿ ಬೆನ್ನಲ್ಲೇ ಕೆರಳಿರುವ ಭಾರತವು ಪಾಕಿಸ್ತಾನದ ಮೇಲೆ ಹಲವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಅದರಂತೆ ದಾಳಿ ಬೆನ್ನಲ್ಲೇ ಭಾರತದಲ್ಲಿ ನೆಲೆಯೂರಿರುವ ಪಾಕಿಸ್ತಾನಿಗರನ್ನು 72 ಗಂಟೆಯೊಳಗೆ ದೇಶ ತೊರೆಯುವಂತೆ ಕೇಂದ್ರ ಖಡಕ್ ಸೂಚನೆ ಕೊಟ್ಟಿದೆ. https://ainkannada.com/congress-is-doing-very-low-level-politics-chalawadi-narayanaswamy/ ಅದರಂತೆ ಈಗ ಭಾರತದಲ್ಲಿ ನೆಲೆಯೂರಿರುವ ಪಾಕಿಸ್ತಾನಿಗರು ಈಗಾಗಲೇ ದೇಶ ತೊರೆಯುತ್ತಿದ್ದಾರೆ. ಅದರಂತೆ ಕೊಪ್ಪಳ ಜಿಲ್ಲೆಯಲ್ಲೂ ಇಬ್ಬರು ಪಾಕಿಸ್ತಾನ ಪ್ರಜೆಗಳು ಇರುವ ಬಗ್ಗೆ ಪೊಲೀಸ್ ಇಲಾಖೆಯ ಉನ್ನತ ಮೂಲಗಳು ತಿಳಿಸಿದೆ. ಭಾರತೀಯರನ್ನೆ ಮದುವೆಯಾದ ಇಬ್ಬರು ಪಾಕಿಸ್ತಾನ ಮಹಿಳೆಯರು ಇಲ್ಲಿದ್ದು, ಈಗಾಗಲೇ ಓರ್ವ ಮಹಿಳೆ ಎಪ್ರೀಲ್ ನಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದಾರೆ. ಇನ್ನೊಬ್ಬ ಮಹಿಳೆ ಕೊಪ್ಪಳ ಜಿಲ್ಲೆಯ ತಾಲೂಕಿನ ಮುನಿರಾಬಾದ್ ನಲ್ಲಿದ್ದಾರೆ. ಇಬ್ಬರು ಮಹಿಳೆಯರ ಕಡೆ ಲಾಂಗ್ ಟರ್ಮ್ ವೀಸಾ ಇದೆ ಎಂಬುವುದು ಪೊಲೀಸ್ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು:- ಕಾಂಗ್ರೆಸ್ ಬಹಳ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಚಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. https://ainkannada.com/land-dispute-between-in-laws-protest-by-leaving-a-dead-body-for-3-days/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಭಾರತಕ್ಕೆ ಉಗ್ರಗಾಮಿಗಳಿಗಿಂತ ಕಾಂಗ್ರೆಸ್ಸಿಗರಿಂದಲೇ ಗಂಡಾಂತರ ಇದೆ. ಪಹಲ್ಗಾಮ್ ನಲ್ಲಿ ಉಗ್ರರು ಹಿಂದೂ ಮತ್ತು ಮುಸಲ್ಮಾನ ಪ್ರವಾಸಿಗರನ್ನು ಬೇರ್ಪಡಿಸಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡಿಕೊಂಡು ಗುಂಡಿಕ್ಕಿ ಕೊಂದಿದ್ದಾರೆ, ಆದರೆ ಕೆಲ ಕಾಂಗ್ರೆಸ್ ನಾಯಕರು ಈ ಅಂಶವನ್ನು ಅಲ್ಲಗಳೆಯುತ್ತಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರೇನಾದರೂ ಪಹಲ್ಗಾಮ್ ಘಟನೆಯನ್ನು ಕಣ್ಣಾರೆ ವೀಕ್ಷಿಸಿದ್ದಾರಾ? ತಮ್ಮ ತಂದೆ, ಚಿಕ್ಕಪ್ಪ, ಮಾವ ಮುಂತಾದವರ ಮೇಲೆ ಉಗ್ರರು ದಾಳಿ ನಡೆಸಿ ಕೊಂದಿದ್ದನ್ನು ಕಣ್ಣಾರೆ ನೋಡಿರುವ ಮಕ್ಕಳು ಹಿಂದೂಗಳನ್ನೇ ಟಾರ್ಗೆಟ್ ಮಾಡಿದ್ದರು ಅಂತ ಹೇಳುತ್ತಿದ್ದಾರೆ, ಕಾಂಗ್ರೆಸ್ ಬಹಳ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ, ಅದರ ನಾಯಕರ ಮಾತುಗಳನ್ನು ಕೇಳುತ್ತಿದ್ದರೆ ಭಾರತಕ್ಕೆ ಉಗ್ರಗಾಮಿಗಳಿಗಿಂತ ಅವರಿಂದಲೇ ಹೆಚ್ಚು ಗಂಡಾಂತರವಿದೆ ಅನಿಸುತ್ತದೆ ಎಂದು ಚಲವಾದಿ ಹೇಳಿದರು.
ಚಿಕ್ಕಬಳ್ಳಾಪುರ: ಜಮೀನು ವಿವಾದಕ್ಕೆ ಮೃತಪಟ್ಟ ವ್ಯಕ್ತಿಯ ಅಂತ್ಯಸAಸ್ಕಾರಕ್ಕೆ ಕಳೆದ ಮೂರು ದಿನಗಳಿಂದ ಕುಟುಂಬಸ್ಥರು ಅಡ್ಡಿಪಡಿಸುತ್ತಿರುವ ಘಟನೆಯೊಂದು ಚಿಕ್ಕಬಳ್ಳಾಪುರ ತಾಲ್ಲೂಕಿನ ಅರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.. https://ainkannada.com/cm-siddaramaiah-condoles-the-death-of-kasthurirangan/ ಹೌದು ಗ್ರಾಮದ ಕೋದಂಡಪ್ಪ ಕಳೆದ ಮೂರು ದಿನಗಳ ಹಿಂದೆ ಹೃದಯಾಘಾತದಿಂದ ಮನೆಯಲ್ಲಿ ಸಾವನ್ನಪ್ಪಿದ್ದರು. ಕುಟುಂಬಸ್ಥರು ಅಂತ್ಯಸAಸ್ಕಾರಕ್ಕೆ ಸಕಲ ಸಿದ್ದತೆಗಳನ್ನು ನಡೆಸಿಕೊಂಡಿದ್ರು. ಆದರೆ ಮೃತ ವ್ಯಕ್ತಿಯ ತಾಯಿಒ ಹಾಗೂ ತಮ್ಮನ ನಡುವೆ ಎರಡು ಎಕರೆ ಜಮೀನು ವಿಚಾರವಾಗಿ ತಗಾದೆ ಇದ್ದು ಇದೇ ವಿಚಾರವಾಗಿ ಮೃತ ದೇಹವನ್ನು ಜಮೀನಿನಲ್ಲಿ ಅಂತ್ಯಸAಸ್ಕಾರ ಮಾಡಲು ಬಿಡುವುದಿಲ್ಲ ಎಂದು ಕುಟುಂಬಸ್ಥರ ನಡುವೆ ಗಲಾಟೆ ನಡೆದಿದೆ. ಆದರೆ ಅದೇ ಜಮೀನಿನಲ್ಲಿ ಅಂತ್ಯಸAಸ್ಕಾರ ಮಾಡುವುದಾಗಿ ಕೋದಂಡಪ್ಪ ಕುಟುಂಬಸ್ಥರು ಪಟ್ಟು ಹಿಡಿದು ಕಳೆದ ಮೂರು ದಿನಗಳಿಂದ ಮೃತ ದೇಹವನ್ನು ಮನೆಯ ಬಳಿಯೇ ಇಟ್ಟುಕೊಂಡು ಧರಣಿ ನಡೆಸುತ್ತಿದ್ದಾರೆ. ಇನ್ನೂ ಘಟನೆಗೆ ಸಂಬAಧಿಸಿದAತೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ತಹಶೀಲ್ದಾರ್ ಅನಿಲ್ ಕುಮಾರ್ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದ್ದು ವಿಫಲರಾಗಿದ್ದಾರೆ.
ಬೆಂಗಳೂರು:- ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. https://ainkannada.com/i-have-been-to-chamarajanagar-20-times-and-have-been-chief-minister-twice-cm/ ಈ ಸಂಬಂಧ X ಮಾಡಿರುವ ಸಿದ್ದರಾಮಯ್ಯ, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಖಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ. ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು. ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ ಅಧ್ಯಕ್ಷರಾಗಿ ಮತ್ತು ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ ಡಾ.ಕಸ್ತೂರಿ ರಂಗನ್ ಅವರು ಸಲ್ಲಿಸಿದ ಸೇವೆಯಿಂದಾಗಿ ಭಾರತ ಇಂದು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ. ಡಾ.ಕಸ್ತೂರಿ ರಂಗನ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.