Author: AIN Author

! ಸೂರ್ಯೋದಯ – 5:57 ಬೆ. ಸೂರ್ಯಾಸ್ತ – 6:31 ಸಂಜೆ. ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ದ್ವಾದಶಿ ನಕ್ಷತ್ರ – ಪೂರ್ವಾಭಾದ್ರೆ ಯೋಗ – ಐಂದ್ರ ಕರಣ – ತೈತಲೇ ರಾಹು ಕಾಲ – 10:30 ದಿಂದ 12:00 ವರೆಗೆ ಯಮಗಂಡ – 03:00 ದಿಂದ 04:30 ವರೆಗೆ ಗುಳಿಕ ಕಾಲ – 07:30 ದಿಂದ 09:00 ವರೆಗೆ ಬ್ರಹ್ಮ ಮುಹೂರ್ತ – 4:21 ಬೆ. ದಿಂದ 5:09 ಬೆ. ವರೆಗೆ ಅಮೃತ ಕಾಲ – 2:07 ಬೆ. ದಿಂದ 3:33 ಬೆ. ವರೆಗೆ ಅಭಿಜಿತ್ ಮುಹುರ್ತ – 11:49 ಬೆ. ದಿಂದ 12:39 ಮ. ವರೆಗೆ ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ,…

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿದೆ. https://ainkannada.com/rcb-vs-rr-bombat-batting-rajasthan-206-target-bangalore/ ಮೊದಲಿಗೆ RCB ಪರ ಬ್ಯಾಟಿಂಗ್ ಶುರುಮಾಡಿದ ವಿರಾಟ್ ಕೊಹ್ಲಿ ಬೊಂಬಾಟ್ ಆಟ ಅಡಿ ತವರಲ್ಲಿ ರನ್ ಗಳ ಬರ ನೀಗಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಐಪಿಎಲ್ 2025 ರ 42 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಅರ್ಧಶತಕ ಗಳಿಸುವ ಮೂಲಕ ತಮ್ಮ ತವರಿನಲ್ಲಿ ರನ್‌ಗಳ ಬರವನ್ನು ಕೊನೆಗೊಳಿಸಿದರು. ಈ ಮೂಲಕ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿಕೊಟ್ಟಿದಲ್ಲದೆ ಕ್ರಿಸ್ ಗೇಲ್ ದಾಖಲೆಯನ್ನು ಮುರಿದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಸೀಸನ್​ನ ಕೊನೆಯ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ವಿಫಲರಾಗಿದ್ದರು. ಕಳೆದ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕೇವಲ 30 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಆದರೆ ಅವರು ರಾಜಸ್ಥಾನ ರಾಯಲ್ಸ್ ವಿರುದ್ಧ ಅದ್ಭುತ ಪುನರಾಗಮನ ಮಾಡಿ ಅರ್ಧಶತಕ ಗಳಿಸುವ ಮೂಲಕ ತವರಿನ ಪ್ರೇಕ್ಷಕರ ಮುಖದಲ್ಲಿ…

Read More

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಬಿಗ್ ಫೈಟ್ ನಡೆಯುತ್ತಿದ್ದು, ಮೊದಲಿಗೆ ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ದುಕೊಂಡು ಆರ್ ಸಿಬಿಯನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. https://ainkannada.com/terrorist-attack-in-pahalgam-hc-balakrishna-says-the-centre-is-responsible-for-this/ ಅದರಂತೆ RCB ಪರ ಓಪನರ್ ಗಳಾದ ವಿರಾಟ್ ಕೊಹ್ಲಿ ಹಾಗೂ ಸಾಲ್ಟ್ ಉತ್ತಮ ಆರಂಭ ಒದಗಿಸಿದರು. ಸಾಲ್ಟ್ ಔಟ್ ಆದ ಬಳಿಕ ಕ್ರೀಸ್ ಗೆ ಬಂದ ಕನ್ನಡಿಗ ದೇವದತ್ ಪಡಿಕ್ಕಲ್ ಹಾಗೂ ಕೊಹ್ಲಿ ಬೊಂಬಾಟ್ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಆ ಬಳಿಕ ದೇವದತ್ತ್ ಪಡಿಕ್ಕಲ್ ಔಟ್ ಆದ ಬಳಿಕ ಬಂದ ಕ್ಯಾಪ್ಟನ್ ರಜತ್ ಬಹುಬೇಗ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದ್ದರು. ನಂತರ ಜಿತೇಶ್ ಹಾಗೂ ಟಿಮ್ ಡೇವಿಡ್ ಅವರಿಂದ ಬೊಂಬಾಟ್ ಜೊತೆಯಾಟ ಮೂಡಿ ಬಂದಿತು. ಈ ಮೂಲಕ ಆರ್‌ಸಿಬಿ 205 ರನ್ ಗಳಿಸಿತು. ತಂಡದ ಪರ ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ 70 ರನ್ ಮತ್ತು ದೇವದತ್ ಪಡಿಕಲ್ 27 ಎಸೆತಗಳಲ್ಲಿ 50 ರನ್…

Read More

ರಾಮನಗರ:- ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಕೇಂದ್ರವೇ ಹೊಣೆ ಹೊರಬೇಕು ಎಂದು ಹೆಚ್ ಸಿ ಬಾಲಕೃಷ್ಣ ಹೇಳಿದ್ದಾರೆ. https://ainkannada.com/rs-92-crore-grant-for-cauvery-aarti-mla-dinesh-gooli-gowda-congratulates-cm-dcm-and-in-charge-minister/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು. ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಯಾವ ಸರ್ಕಾರ ಅಧಿಕಾರದಲ್ಲಿ ಇರುತ್ತೋ ಅದೇ ಸರ್ಕಾರ ಹೊಣೆ ಹೊರಬೇಕು. ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ಫೆಲ್ಯೂರ್ ಆಗಿದೆ. ಹಾಗಾಗಿ ಅಮಾಯಕರು ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ ಕಾಶ್ಮೀರದಲ್ಲಿ ಪ್ರವಾಸಿಗರಿಗೆ ರಕ್ಷಣೆ ನೀಡಬೇಕಿತ್ತು. ಕೆಂದ್ರದಲ್ಲಿ ಅಧಿಕಾರ ನಡೆಸುವವರೇ ಇದಕ್ಕೆ ಜವಾಬ್ದಾರಿ. ಮೃತರ ಕುಟುಂಬಕ್ಕೆ ಇಡೀ ರಾಜ್ಯ ಸರ್ಕಾರ ಸಾಂತ್ವನ ಹೇಳಿದೆ. ಸಿಎಂ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಸಂತೋಷ್ ಲಾಡ್ ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರನ್ನ ರಕ್ಷಣೆ ಮಾಡಿದ್ದಾರೆ. ನಾವು ನಮ್ಮ ಕೆಲಸ ಮಾಡಿದ್ದೇವೆ. ಯಾರು ಅಮಾಯಕರ ರಕ್ಷಣೆ ಮಾಡಬೇಕಿತ್ತೋ ಅವರು ಮಾಡಿಲ್ಲ ಎಂಬುದು ದೂರು ಎಂದು ಅಸಮಾಧಾನ ಹೊರಹಾಕಿದ್ದಾರೆ.

Read More

ಮಂಡ್ಯ: ಕಾವೇರಿ ಮಾತೆಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನೆರವೇರಿಸುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟದಲ್ಲಿ 92 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಇದಕ್ಕೆೆ ಕಾರಣೀಕರ್ತರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲವರಾಯಸ್ವಾಮಿ ಅವರನ್ನು ಹಾಗೂ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ಅವರನ್ನು ಕಾವೇರಿ ಪ್ರಾಂತ್ಯದ ಮಹಾಜನತೆ ಪರವಾಗಿ ಅಭಿನಂದಿಸುತ್ತೇನೆ ಎಂದು ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಹೇಳಿದ್ದಾರೆ. https://ainkannada.com/ipl-is-more-important-to-me-than-psl-pakistani-cricketers-explosive-statement/ ದೇಶದ ಪುಣ್ಯ ನದಿಗಳಲ್ಲಿ ಕಾವೇರಿಯೂ ಒಂದು. ಅತ್ಯಂತ ಶ್ರೇಷ್ಠವಾದ ತಾಯಿ ಕಾವೇರಿಗೆ ಪೂಜೆ ಸಲ್ಲಿಸಲು ಈ ಅನುದಾನವನ್ನು ಬಳಸಿಕೊಳ್ಳಲಾಗುತ್ತದೆ. ಅಲ್ಲಿ ಕಾವೇರಿ ಆರತಿಗೆ ಸಂಬಂಧಪಟ್ಟಂತೆ ಎಲ್ಲ ಮೂಲಭೂತ ಸೌಕರ್ಯವನ್ನು ಕಲ್ಪಿಸಲು ಇಂದಿನ ಸಚಿವ ಸಂಪುಟವು 92 ಕೋಟಿ ರೂಪಾಯಿಗೆ ಅನುಮೋದನೆಯನ್ನು ನೀಡಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕಾವೇರಿ ಆರತಿಗಾಗಿ ಮನವಿ ಮಾಡಿದ್ದ ಶಾಸಕರು: ಗಂಗಾರತಿ ಮಾದರಿಯಲ್ಲಿ ಕರ್ನಾಟಕದಲ್ಲಿ ಕಾವೇರಿ ಆರತಿ ಮಾಡುವ ಸಂಬಂಧ…

Read More

ಪಹಲ್ಗಾಮ್ ದಾಳಿಯ ನಂತರ ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ ಸ್ಥಿತಿ ನಿರ್ಮಾಣವಾಗಿದೆ. ಇದರೊಂದಿಗೆ ಉಭಯ ದೇಶಗಳ ಕ್ರಿಕೆಟ್ ತಂಡಗಳ ನಡುವಿನ ಕ್ರಿಕೆಟ್ ಪಂದ್ಯಾವಳಿಯ ಕನಸು ಭಗ್ನವಾಗಿದೆ. ಆದರೆ ಇದೆಲ್ಲದರ ನಡುವೆ ಪಾಕಿಸ್ತಾನದ ವೇಗಿ ಮೊಹಮ್ಮದ್ ಆಮಿರ್ ಆಘಾತಕಾರಿ ಹೇಳಿಕೆ ನೀಡಿದ್ದಾರೆ. https://ainkannada.com/the-central-government-should-take-immediate-action-against-terrorists-mla-k-m-uday/ ಎಸ್, ಪಾಕಿಸ್ತಾನದ ವೇಗಿ ಮೊಹಮ್ಮದ್ ಆಮಿರ್ ಅವರು ಮುಂದಿನ ವರ್ಷದಿಂದ IPL ಆಡುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದಾರೆ. ನಾನು ಬ್ರಿಟಿಷ್ ಪೌರತ್ವವನ್ನು ಹೊಂದಿರುವುದರಿಂದ ಮುಂದಿನ ವರ್ಷ ಐಪಿಎಲ್ ಆಡಬಹುದು ಎಂದು ಅಮಿರ್ ಹೇಳಿದ್ದಾರೆ. ಅಲ್ಲದೆ ಪಿಎಸ್ಎಲ್ ಅಥವಾ ಐಪಿಎಲ್ ಎರಡರಲ್ಲಿ ಒಂದನ್ನು ಆಯ್ಕೆ ಮಾಡಲು ಅವಕಾಶ ಸಿಕ್ಕರೆ, ನಾನು ನಿಸ್ಸಂಶಯವಾಗಿ ಐಪಿಎಲ್ ಅನ್ನು ಆಯ್ಕೆ ಮಾಡುತ್ತೇನೆ ಎಂದು ಆಮಿರ್ ಹೇಳಿಕೊಂಡಿದ್ದಾರೆ. ಮುಂದಿನ ವರ್ಷ ಪಿಎಸ್‌ಎಲ್ ಮತ್ತು ಐಪಿಎಲ್ ವೇಳಾಪಟ್ಟಿಯಲ್ಲಿ ಘರ್ಷಣೆ ಇರುತ್ತದೆ ಎಂದು ನಾನು ಭಾವಿಸುವುದಿಲ್ಲ. ಏಕೆಂದರೆ ಈ ಬಾರಿ ಚಾಂಪಿಯನ್ಸ್ ಟ್ರೋಫಿ ಮತ್ತು ಇತರ ವಿಷಯಗಳು ಇದ್ದವು. ಆದರೆ ನಾನು ಪಿಎಸ್‌ಎಲ್‌ನಲ್ಲಿ ಮೊದಲು ಆಯ್ಕೆಯಾದರೆ ನನ್ನ ಹೆಸರನ್ನು ಹಿಂಪಡೆಯಲು…

Read More

ಮಂಡ್ಯ :- ಜಮ್ಮು ಕಾಶ್ಮೀರದ ಪಹಲ್ಗಾಮ್ ಗೆ ಪ್ರವಾಸಕ್ಕೆ ತೆರಳಿದ್ದರ ಮೇಲೆ ಪಾಕಿಸ್ತಾನದ ಭಯೋತ್ಪಾದಕರು ಅತ್ಯಂತ ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವುದು ಖಂಡನೀಯವಾಗಿದ್ದು, ಈ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಭಯೋತ್ಪಾದನೆಯ ಹುಟ್ಟಡಗಿಸುವ ಕೆಲಸವನ್ನು ಮಾಡಬೇಕಿದೆ ಎಂದು ಶಾಸಕ ಕೆ.ಎಂ.ಉದಯ್ ಆಕ್ರೋಶ ವ್ಯಕ್ತಪಡಿಸಿದರು. https://ainkannada.com/chief-secretary-shalini-rajneesh-inspected-gaganchukki-pre-plaza/ ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತು ಅರುವನಹಳ್ಳಿ ಗ್ರಾಮದಲ್ಲಿ ಶಾಲಾಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದ ಪಹಲ್ಗಾಮ್‌ನಲ್ಲಿ 28 ಮಂದಿ ಮುಗ್ಧ ನಾಗರಿಕರು ಬಲಿಯಾಗಿದ್ದಾರೆ. ಇದು ಸಹಿಸಲು ಅಸಾಧ್ಯವಾದ ಕೃತ್ಯವಾದದ್ದು, ನರರಾಕ್ಷಕರಿಗೆ ತಕ್ಷ ಶಿಕ್ಷೆ ಆಗಬೇಕು. ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ನೂರಾರು ಕೋಟಿ ರೂ ವೆಚ್ಚದಲ್ಲಿ ನೀರಾವರಿ, ಕೆರೆ ಅಭಿವೃದ್ಧಿ, ಗ್ರಾಮೀಣ ಭಾಗದ ರಸ್ತೆಗಳು, ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬೇಸಿಗೆ ಕಾಲ ಮುಗಿಯುವುದರೊಳಗೆ ದುಸ್ಥಿತಿಯಲ್ಲಿರುವ ಶಾಲಾ…

Read More

ಮಂಡ್ಯ :- ಮಳವಳ್ಳಿ ತಾಲ್ಲೂಕಿನ ಹೊಸಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-209(948)ರ ಗಗನಚುಕ್ಕಿ ಪ್ರೀ ಪ್ಲಾಜಾಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. https://ainkannada.com/approval-for-construction-of-a-well-equipped-cricket-stadium-in-mysore-pratap-simha-congratulates-siddaramaiah/ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಟೋಲ್ ಫ್ರೀ ಪ್ಲಾಜಾ ಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಅಪೂರ್ಣ ಹಾಗೂ ಅವೈಜ್ಞಾನಿಕತೆಯಾಗಿದೆ ಎಂದು ಸ್ಥಳೀಯರು ಹಾಗೂ ರೈತ ಮುಖಂಡರು ಆರೋಪಿಸಿದ್ದು, ಕಳೆದ ತಿಂಗಳು ಪ್ರತಿಭಟನೆ ಕೂಡ ನಡೆಸಿದ್ದರು. ಶಾಸಕ ಪಿ.ಎಂ.ನರೇಂದ್ರಸ್ವಾಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುರುವಾರ ಟೋಲ್‌ಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ಸುಗಮ ಸಂಚಾರ ವ್ಯವಸ್ಥೆ ಕುರಿತು…

Read More

ಮೈಸೂರು:- ಮೈಸೂರಿನಲ್ಲಿ ಸುಸಜ್ಜಿತವಾದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಮಾಡಲು ಮಲೈ ಮಹದೇಶ್ವರ ಬೆಟ್ಟದಲ್ಲಿ ನಡೆದ ಸರ್ಕಾರದ ಕ್ಯಾಬಿನೆಟ್‌ ನಲ್ಲಿ ಅನುಮೋದನೆ ನೀಡಲಾಗಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಧನ್ಯವಾದ ತಿಳಿಸಿದ್ದಾರೆ. https://ainkannada.com/malai-mahadeshwar-hill-will-now-be-free-from-drinking-water-cms-announcement/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮೈಸೂರಿಗೆ ಒಂದು ಸುಸಜ್ಜಿತವಾದ ಕ್ರಿಕೆಟ್‌ ಸ್ಟೇಡಿಯಂ ಬೇಕೆಂಬುದು ಮೈಸೂರಿಗರ ಬಹು ವರ್ಷಗಳ ಕನಸಾಗಿತ್ತು. ಮೈಸೂರು ನಗರದ ಸಾತಗಳ್ಳಿ ಸಮೀಪ ಮೂಡಾ ಗುರುತು ಮಾಡಿದಂತಹ ಸುಮಾರು19.5 ಎಕರೆ ಜಾಗವನ್ನ 2021ರಲ್ಲಿ ಶ್ರೀ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಬಂದ ನಂತರ, ಆ ಭೂಮಿಯನ್ನು ಹಸ್ತಾಂತರ ಮಾಡಲು ನಾನು ಎಲ್ಲಾ ಪ್ರಯತ್ನವನ್ನು ಮಾಡಿದ್ದೆ. ಆದರೆ ಒಂದು ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಮಾಡಲು ಕನಿಷ್ಠ 06 ಎಕರೆ ಮೈದಾನಕ್ಕೆ ಹಾಗೂ 05 ಎಕರೆ ಸ್ಟೇಡಿಯಂ ನಿರ್ಮಾಣಕ್ಕೆ ಬೇಕು, ಜತೆಗೆ ಪಾರ್ಕಿಂಗ್‌, ಕ್ಲಬ್‌ ಹೌಸ್‌ ನಿರ್ಮಾಣಕ್ಕೂ ಕೂಡ ಜಾಗ ಬೇಕಾಗಿತ್ತು. ಆದರೆ 19.5 ಎಕರೆ ಜಾಗದ ಮಧ್ಯದಲ್ಲಿ ಒಂದು ನಿರ್ಜೀವ ಕೆರೆ ಇತ್ತು,…

Read More

ಮಲೈ ಮಹದೇಶ್ವರ ಏ24:  ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. https://ainkannada.com/ipl-2025-rcb-loses-toss-again-at-home-rajasthan-bowls/ ಇಲ್ಲಿಯವರೆಗೂ ಬೆಟ್ಟದಲ್ಲಿ,  ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು… *ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು. *ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು. *ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು. *ಪ್ರಾಧಿಕಾರ ಮತ್ತು…

Read More