Author: AIN Author

ನವದೆಹಲಿ : ಯುಪಿಎಸ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕೇಂದ್ರ ಲೋಕಸೇವಾ ಆಯೋಗ 2024ರ ನಾಗರಿಕ ಸೇವಾ ಪರೀಕ್ಷೆಯಲ್ಲಿ 1009 ಅಭ್ಯರ್ಥಿಗಳ ಉತ್ತೀರ್ಣರಾಗಿದ್ದಾರೆ. ಟಾಪ್‌ 50ರ ಪಟ್ಟಿಯಲ್ಲಿ ಕರ್ನಾಟಕದ ಇಬ್ಬರು ಸ್ಥಾನ ಪಡೆದಿದ್ದಾರೆ. ಶಕ್ತಿ  ಎಂಬುವರು ದೇಶದಲ್ಲಿ ನಂಬರ್‌ 1 ಸ್ಥಾನ ಪಡೆದಿದ್ದು, ಟಾಪ್‌ 50ರೊಳಗೆ ಕರ್ನಾಟಕದ ಇಬ್ಬರು ವೈದ್ಯರಿದ್ದರು. ಡಾ.ರಂಗ ಮಂಜು 24ನೇ ಮತ್ತು ಡಾ.ಸಚಿನ್ ಹರಿಹರ್ 41ನೇ ಸ್ಥಾನ ಪಡೆದಿದ್ದಾರೆ.  ಶಕ್ತಿ ದುಬೆ, ಹರ್ಷಿತಾ ಗೋಯೆಲ್, ಡೋಂಗ್ರೆ ಅರ್ಚಿತ್ ಪರಾಗ್, ಶಾ ಮಾರ್ಗಿ ಚಿರಾಗ್, ಆಕಾಶ್ ಗರ್ಗ್, ಕೊಮ್ಮಲ್ ಪುನಿಯಾ, ಆಯುಷಿ ಬನ್ಸಾಲ್, ರಾಜ್ ಕೃಷ್ಣ ಝಾ, ಆದಿತ್ಯ ವಿಕ್ರಮ್ ಅಗರ್ವಾಲ್, ಮಾಯಾಂಕ್ ತ್ರಿಪಾಠಿ ಟಾಪ್‌ ಹತ್ತರ ಸ್ಥಾನದಲ್ಲಿದ್ದಾರೆ. ಇನ್ನೂ ಯುಪಿಎಸ್ ಸಿ ಫಲಿತಾಂಶದಲ್ಲಿ ವಿಜಯಪುರ‌ ಜಿಲ್ಲೆಯ ವೈದ್ಯನ ಸಾಧನೆ ಮಾಡಿದ್ದಾರೆ. ಮುದ್ದೇಬಿಹಾಳ ತಾಲ್ಲೂಕಿನ ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಮಹೇಶ್ ಮಡಿವಾಳರ 482 ನೇ ರ್ಯಾಂಕ್‌ ಪಡೆದಿದ್ದಾರೆ. https://ainkannada.com/people-did-not-leave-during-vijayendras-speech-yatnal-criticizes-janakrosha-yatra/ ಇನ್ನೂ ಕೋಲಾರ ತಾಲೂಕು ಇರಗಸಂದ್ರ ಗ್ರಾಮದ…

Read More

ವಿಜಯಪುರ : ವಿಜಯೇಂದ್ರ ನೇತೃತ್ವದ ಜನಾಕ್ರೋಶ ಯಾತ್ರೆ ವಿಚಾರವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವ್ಯಂಗ್ಯವಾಡಿದ್ದು, ಮತ್ತೆ ಬಿಎಸ್‌ವೈ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ. ವಿಜಯಪುರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಬಿಎಸ್‌ವೈ ಕುಟುಂಬದ ವೈಭವಿಕರಣದ ಯಾತ್ರೆ. ವಿಜಯೇಂದ್ರ 60 ವಾಹನಗಳನ್ನ ತೆಗೆದುಕೊಂಡು ಅಡ್ಡಾಡುತ್ತಿದ್ದಾನೆ. ದಾವಣಗೆರೆಯಲ್ಲಿ 60 ವಾಹನಗಳ ಸಮೇತ ಅಡ್ಡಾಡಿದ್ದಾನೆ. ಆದರೆ ಸಾವಿರಕ್ಕಿಂತ ಹೆಚ್ಚು ಜನ ಎಲ್ಲಿಯೂ ಸೇರಿಲ್ಲ. ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ವೇಳೆ ಜನ ಇರಲಿಲ್ಲ. ಐದು ಸಾವಿರ ಕೆಪಾಸಿಟಿ ಗ್ರೌಂಡಲ್ಲಿ ಶೇ. 25 ರಷ್ಟು ಚೇರ್ ಇರಲಿಲ್ಲ. ನನ್ನ ಉಚ್ಚಾಟನೆ ಯಾತ್ರೆಯ ಆಕ್ರೋಶ ಕಡಿಮೆ ಮಾಡಲು ಈ ಯಾತ್ರೆ. ಜನಾಕ್ರೋಶ ಯಾತ್ರೆ ಕಾಂಗ್ರೆಸ್ ವಿರುದ್ಧ ಅಲ್ಲ ಎಂದು ಲೇವಡಿ ಮಾಡಿದ್ದಾರೆ. https://ainkannada.com/cm-siddaramaiah-is-not-a-clean-politician-bjp-state-president-b-y-vijayendra/ ಇನ್ನೂ  ವಿಜಯೇಂದ್ರಗೆ ತಮಿಳುನಾಡು ಕಾ ಅಧ್ಯಕ್ಷನನ್ನ ತೆಗೆದಂತೆ ತನ್ನನ್ನು ತೆಗೆಯುತ್ತಾರೆ ಎನ್ನುವ ಭಯ ಕಾಡುತ್ತಿದೆ ಎಂದು  ಮತ್ತೆ ವಿಜಯೇಂದ್ರ ವಿರುದ್ದ ಮತ್ತೆ ಮುಗಿಬಿದ್ದರು.

Read More

ಬೆಳಗಾವಿ : ವೈದ್ಯರೊಬ್ಬ ಕುಡಿದ ಮತ್ತಿನಲ್ಲಿ ರೋಗಿಯ ತಪಾಸಣೆ ನಡೆಸಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಕಂಠಪೂರ್ತಿ ಕುಡಿದು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯ ತಪಾಸಣೆ ನಡೆಸಿದ್ದಾರೆ ಎನ್ನಲಾಗಿದೆ.   ಭಾನುವಾರ ರಾತ್ರಿ ಹೃದಯ ಸಂಬಂಧಿ ಕಾಯಿಲೆಯಿಂದ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿಯೆ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಸುರೇಶ್ ಹಿತ್ತಲಮನಿ ರೋಗಿಯ ತಪಾಸಣೆ ನಡೆಸಿದ್ದಾರೆ. ರೋಗಿಯ ಸಂಬಂಧಿಕರು ತಪಾಸಣೆ ನಡೆಸದಂತೆ ಹೇಳಿದರೂ ಕೇಳದೇ ತಪಾಸಣೆ ನಡೆಸಿದ್ದಾರೆ ಎನ್ನಲಾಗಿದೆ. https://ainkannada.com/meat-purification-at-sri-krishnadevaraya-samadhi-mantapa-fir-against-three/ ಬಳಿಕ ರೋಗಿ ಸಂಬಂಧಿಕರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ನರ್ಸ್ ತಪಾಸಣೆ ನಡೆಸಿದ್ದಾರೆ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳ ಬಳಿ ದೂರು ನೀಡಿದರೂ ಸಹ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

Read More

ಕೊಪ್ಪಳ : ತುಂಗಾಭದ್ರಾ ನದಿ ದಡದಲ್ಲಿರುವ ಶ್ರೀಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ದೀಕರಣ ಮಾಡಿದ್ದ ಪ್ರಕರಣ ಭಾರೀ ಸದ್ದು ಮಾಡುವುದರ ಜೊತೆಗೆ ವ್ಯಾಪಕ ಆಕ್ರೋಶಕ್ಕೂ ಕಾರಣಕ್ಕೂ ಕಾರಣವಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಹೌದು, ಶ್ರೀ ಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ಧೀಕರಣ ಮಾಡಿದ್ದ ಆನೆಗುಂದಿ ಗ್ರಾಮದ) ಹನುಮಂತ, ಫಕೀರಪ್ಪ, ಹುಲಗಪ್ಪ ಎಂಬುವರ ವಿರುದ್ಧ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. https://ainkannada.com/selling-meat-on-the-tomb-of-krishna-devaraya-what-did-yatnal-say/ ಶ್ರೀ ಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ಧೀಕರಣ ಮಾಡಿದ್ದ ವಿಡಿಯೋ ವೈರಲ್​ ಆಗುತ್ತಿದ್ದಂತೆ, ಪ್ರವಾಸೋದ್ಯಮ ಸಚಿವ ಹೆಚ್​ಕೆ ಪಾಟೀಲ್​ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ರಾಜಕೀಯ ಬೆರೆಸುವುದಿಲ್ಲ, ಅವರೂ ಬೆರೆಸಬಾರದು. ಅಪಮಾನ ಆಗಿದ್ದನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದರು. ಇನ್ನೂ ಕೃಷ್ಣದೇವರಾಯರ ಸಮಾಧಿಯ ಮೇಲೆ ಮಾಂಸ ಶುದ್ಧೀಕರಣದ ಕುರಿತು ವಿಜಯಪುರ ಶಾಸಕ ಯತ್ನಾಳ್‌ ಕೂಡ ಕಿಡಿಕಾರಿದ್ದರು.

Read More

ಮಂಡ್ಯ : ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ  ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಸಮೀಕ್ಷೆ ವರದಿ ಬಗ್ಗೆ ಪಕ್ಷದ ನಾಯಕರಿಂದ ಅಪಸ್ವರ ಎದ್ದಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಯಾವುದೇ ನ್ಯೂನ್ಯತೆಗಳಿದ್ದರೆ ಸರಿಪಡಿಸಲಾಗುವುದು. ವರದಿ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಂತೆ ಸಚಿವರಿಗೆ ತಿಳಿಸಲಾಗಿದ್ದು, ಅವುಗಳನ್ನು ಪರಿಶೀಲಿಸಿ ನಂತರ ಸೂಕ್ತ ತೀರ್ಮಾನವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದರು. https://ainkannada.com/excessive-behavior-of-youths-at-chamundi-hills-police-give-them-a-lesson/ 1984 ರಲ್ಲಿ ನಡೆದ ಸಮೀಕ್ಷೆಯಲ್ಲಿದ್ದ ಮುಸ್ಲಿಮರ ಸಂಖ್ಯೆ ಈಗ  ವರದಿಯಲ್ಲಿ ಶೇ.90 ರಷ್ಟು ಹೆಚ್ಚಾಗಿದ್ದು, ಲಿಂಗಾಯತರ ಸಂಖ್ಯೆ ಕೇವಲ ಶೇ.8 ರಷ್ಟು ಜಾಸ್ತಿಯಾಗಿರುವುದಾಗಿ ಬಿಜೆಪಿಯವರು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಕಾಂತರಾಜು ಆಯೋಗದ ಅಂಕಿಅಂಶಗಳ ಆಧಾರದ ಮೇಲೆ ಜಯಪ್ರಕಾಶ್ ಹೆಗಡೆಯವರು ಶಿಫಾರಸ್ಸು ಮಾಡಿದ್ದಾರೆ ಎಂದರು. ರಾಜ್ಯದಲ್ಲಿ ಹಿಂದಿ…

Read More

ಮೈಸೂರು: ಪ್ರಸಿದ್ದ ಕ್ಷೇತ್ರ ಚಾಮುಂಡಿ ಬೆಟ್ಟದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಹೊರ ರಾಜ್ಯದ ಯುಕವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕಾರ್ ಘಟನೆ ಸಂಬಂಧ ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್  ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಹೊರ ರಾಜ್ಯದ ಕೆಲ ಯುವಕರು ಸಾರ್ವಜನಿಕ ಸ್ಥಳದಲ್ಲಿಯೇ  ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾರೆ. ಇದರಿಂದ ಬೇಸತ್ತ ಜನರು, ಅವರ ಫೋಟೋಗಳನ್ನು ತೆಗೆದು,  ಫೋಟೋಗಳ ಸಮೇತ ಪೊಲೀಸರಿಗೆ ದೂರು ನಿಡಿದ್ದಾರೆ. ಬಳಿಕ ಚಾಮುಂಡಿ ಬೆಟ್ಟ ಠಾಣೆ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. https://ainkannada.com/a-man-who-took-his-daughters-friend-home-and-sexually-assaulted-her/ ವಿಚಾರಣೆ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸದಂತೆ ಯುವಕರಿಗೆ ತಿಳುವಳಿಕೆ ಹೇಳಿದ್ದು, ಅವರಿಂಧ ಮುಚ್ಚಳಿಕೆ ಪತ್ರ ಬರೆಸಿಕೊಂಡು ಬಳಿಕ ಬಿಟ್ಟಿದ್ದಾರೆ.

Read More

ಮಡಿಕೇರಿ ; ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ  ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಧು ಎಂಬಾತನೇ ಈ ಕೃತ್ಯ ಎಸಗಿದ್ದು, ಸೋಮವಾರ ಸಂಜೆ ತನ್ನ ಮಗಳ ಸ್ನೇಹಿತೆಯನ್ನು ಫೋನ್‌ ಮಾಡಿಸಿ ಕರೆಸಿಕೊಂಡಿದ್ದಾನೆ. ಆಕೆ ಮನೆಗೆ ಹೋದ ವೇಳೆ ಚಾಕೋಲೇಟ್‌ ನೀಡಿ, ತನ್ನ ಮಗಳನ್ನು ಮತ್ತೆ ಚಾಕೋಲೇಟ್‌ ತರುವಂತೆ ನಪ ಹೇಳಿ ಕಳುಹಿಸಿದ್ದಾನೆ. ಈ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಪೋಷಕರು ಮಗಳನ್ನು ಕಳುಹಿಸುವಂತೆ ಫೋನ್‌ ಮಾಡಿದರು ಸಹ ಸರಿಯಾಗಿ ಮಾತಾಡದೇ ಕಟ್‌ ಮಾಡಿದ್ದಾನೆ. https://ainkannada.com/refusal-to-get-married-crazy-lover-stabs-young-woman-with-knife/ ಅನುಮಾನಗೊಂಡ ಬಾಲಕಿಯ ಪೋಷಕರು ಮಗಳ ಸ್ನೇಹಿತೆಯ ಮನೆಗೆ ಹೋಗಿ ವಿಚಾರ ಮಾಡುವಾಗ ತನ್ನ ಮೇಲೆ ನಡೆದಿರುವ ಘಟನೆ ಬಗ್ಗೆ ಪೋಷಕರ ಬಳಿ ಬಾಲಕಿ ಹೇಳಿಕೊಂಡಿದ್ದಾಳೆ‌. ಸದ್ಯ ಬಾಲಕಿಯ ಪೋಷಕರು ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Read More

ಕೊಡಗು : ವನ್ಯಜೀವಿ-ಮಾನವ ಸಂಘರ್ಷ ಶಾಶ್ವತವಾಗಿ ತಡೆಗಟ್ಟುವ ಹಿನ್ನೆಲೆಯಲ್ಲಿ ಅತ್ಯಂತ ಗಂಭೀರವಾಗಿ ಕಾರ್ಯಸೂಚಿಗಳನ್ನು ರೂಪಿಸುತ್ತಿರುವ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಇಂದು ಅರಣ್ಯ ಇಲಾಖೆ ವತಿಯಿಂದ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆಯ ಸ್ಥಿತಿಗತಿಯನ್ನು ಪರಿಶೀಲಿಸಿದರು. ಪೊನ್ನಂಪೇಟೆ ತಾಲೂಕು ಬಿರುನಾಣಿ ಗ್ರಾಮದ, ತೆರಾಲು ಭಾಗದಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯು ಪ್ರಗತಿಯಲ್ಲಿದ್ದು, ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಸೆರೆ ಕಾರ್ಯಚರಣೆಯ ನೇತೃತ್ವವಹಿಸಿದ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದರು. ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನವನ್ನು ಬಳಸಿ ಅತ್ಯಂತ ಶೀಘ್ರದಲ್ಲಿ ಈ ಕಾರ್ಯಾಚರಣೆಗೆ ಅಂತ್ಯ ಹಾಡಬೇಕು ಎಂದು ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. https://ainkannada.com/today-is-world-earth-day-know-the-history-and-significance-of-this-day/ ಈ ಸಂದರ್ಭದಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಶ್ರೀ ಸಂಕೇತ್ ಪೂವಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಪೊನ್ನಂಪೇಟೆ ತಾಲೂಕು ಅಧ್ಯಕ್ಷರಾದ…

Read More

ಮಂಡ್ಯ : ಕನ್ನಡದ ಹುಡುಗ ವಿಕಾಸ್‌ ಮೇಲೆ ವಿಂಗ್‌ ಕಮಾಂಡರ್‌ ಹಲ್ಲೆ ಪ್ರಕರಣದಲ್ಲಿ ತಪ್ಪು ಯಾರೇ ಮಾಡಿದ್ದರೂ ತಪ್ಪೇ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.   ಮಂಡ್ಯದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕನ್ನಡದ ಹುಡುಗ ವಿಕಾಸ್ ಮೇಲೆ ಹಲ್ಲೆ ಮಾಡಿರುವ ಡಿಅರ್​ಡಿಒ ಉದ್ಯೋಗಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ. ಎರಡೂ ಕಡೆಯವರು ದೂರು ಸಲ್ಲಿಸಿದ್ದಾರ. ಹಲ್ಲೆ ಮಾಡಿದವ ವಿಂಗ್ ಕಮಾಂಡರ್ ಆಗಿರಲಿ, ಮತ್ತೇನಾದರೂ ಅಗಿರಲಿ, ಕಾನೂನಿನ್ವಯ ಕ್ರಮ ಜರುಗಿಸಲು ಹೇಳಿದ್ದೇನೆ ಎಂದರು. https://ainkannada.com/wing-commanders-true-colors-revealed-attempted-murder-case-registered-against-shiladitya-bose/ ಇದೇ ವೇಳೆ ರಾಜ್ಯದಲ್ಲಿ ಹಿಂದಿ ಹೇರಿಕೆಗೆ ನಾವು ಬಿಡಲ್ಲ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಒಪ್ಪಲ್ಲ, ನಮ್ಮ ವಿರೋಧವಿದೆ. ರಾಜ್ಯದಲ್ಲಿ ದ್ವಿಭಾಷ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಮತ್ತು ಇಂಗ್ಲಿಷ್ ಕಲಿಯುವ ಅವಕಾಶ ಇದೆ. ನಮ್ಮಲ್ಲಿ ತ್ರಿಭಾಷ ಸೂತ್ರವಿಲ್ಲ. ಕನ್ನಡ, ಇಂಗ್ಲಿಷ್ ಮಾತ್ರ ಕಲಿಸುತ್ತೇವೆ ಎಂದರು.

Read More

ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಲೀನ್ ಪೊಲಿಟಿಷಿಯನ್‌ ಅಲ್ಲ ಕರೆಪ್ಟ್ ಪೊಲಿಟಿಷಿಯನ್‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದರು. ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕ್ಲೀನ್ ಪೊಲಿಟೀಶಿಯನ್ ಅಲ್ಲ ಕರೆಪ್ಟ್ ಪೊಲಿಟೀಶಿಯನ್ ಅಂತಾ ರಾಜ್ಯದ ಜನ ಅರ್ಥ ಮಾಡಿಕೊಂಡಿದ್ದಾರೆ. ಜಾತಿ ಜನಗಣತಿ ಬಗ್ಗೆ ತೀರ್ಮಾನ ಮಾಡಿ ಬಿಡ್ತಾರೆ ಅಂತಾ ವಿಶೇಷ ಕ್ಯಾಬಿನೆಟ್ ಕರೆದರೂ ಅಲ್ಲೂ ತೀರ್ಮಾನ ಆಗಿಲ್ಲ. ಸಿದ್ದರಾಮಯ್ಯ ಜಾತಿ ಜನಗಣತಿ ಹಿಡಿದುಕೊಂಡು ಆಡಳಿತ ಪಕ್ಷದಲ್ಲಿ ಇರೋ ಸಿಎಂ ಆಕಾಂಕ್ಷಿ ಇದ್ದಾರೆ ಅವರಿಗೆ ಬೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ.  ವಿರೋಧ ಪಕ್ಷದವರಿಗೂ ಕೂಡಾ ಬೆದರಿಸೋ ತಂತ್ರ ಮಾಡ್ತಿದ್ದಾರೆ. ಈ ತಂತ್ರದ ಹಿಂದೆ ಕುತಂತ್ರ ಇದೆ ಎಂದರು. https://ainkannada.com/senior-lawyer-sada-shivareddy-condemns-the-attack-and-protests-by-wearing-a-red-armband/ ಇನ್ನೂ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರವಾಗಿ ಮಾತನಾಡಿ, ಪರೀಕ್ಷಾರ್ಥಿಗಳ ಜನಿವಾರ ತೆಗೆದಿರೋದು ಮಕ್ಕಳ ಮೇಲಲ್ಲ, ಹಿಂದೂ ಸಮಾಜದ ಮೇಲೆ ಬಲಾತ್ಕಾರ ಮಾಡ್ತಿದ್ದಾರೆ. ಹಿಂದೂಗಳಿಗೆ ಅಪಮಾನ ಮಾಡೋದು ಅಂದ್ರೆ ಸಿದ್ದರಾಮಯ್ಯನವರಿಗೆ ಪರಮಾನಂದ. ಹಿಂದೂಗಳಿಗೆ ಅಪಮಾನ ಮಾಡೋದು ಬಹಳ…

Read More