ಹುಬ್ಬಳ್ಳಿ:- ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದಿದ್ದ ಐದು ವರ್ಷದ ಬಾಲಕಿ ರೇಪ್ ಆಂಡ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯನ್ನು ಎನ್ಕೌಂಟರ್ ಮಾಡಲಾಗಿದೆ. https://ainkannada.com/good-news-for-farmers-subsidy-will-be-available-under-this-scheme-for-drilling-borewells/ ಹೀಗಾಗಿ ಎನಕೌಂಟರ್ ಘಟನೆ ನಡೆದ ಸ್ಥಳಕ್ಕೆ ಸಿಐಡಿ ಎಡಿಜಿಪಿ ಬಿ.ಕೆ ಸಿಂಗ್ ಭೇಟಿ ನೀಡಿ ಪರಿಶೀಲಿಸಿದರು. ಹುಬ್ಬಳ್ಳಿ ನಗರದ ಪ್ರತಿಷ್ಟಿತ ಬಡಾವಣೆ ಯಲ್ಲಿ ಈ ಘಟನೆ ನಡೆದಿತ್ತು. ಸಿಐಡಿ ಎಸ್ಪಿ ವೆಂಕಟೇಶ ಮತ್ತು ಎಸಿಪಿ ಶಿವಪ್ರಕಾಶ್ ನಾಯಕ್ ರಿಂದ ಮಾಹಿತಿ ಪಡೆಯಲಾಗಿದೆ. ರೇಪ್ ಆಂಡ್ ಮರ್ಡರ್ ಆಗಿದ್ದ ಸ್ಥಳ ಪರಿಶೀಲನೆ ಮಾಡಿದ್ದಾರೆ. ಎಪ್ರಿಲ್ 13 ರಂದು ಈ ಘಟನೆ ನಡೆದಿತ್ತು. ಹೀಗಾಗಿ ಈ ಘಟನೆಯ ಇಂಚಿಂಚೂ ಮಾಹಿತಿ ಪಡೆಯುತ್ತಿದ್ದಾರೆ.
Author: AIN Author
ಲೈಂಗಿಕತೆ ಅನ್ನೋದು ಮನುಷ್ಯನ ಮೂಲಭೂತ ಅವಶ್ಯಕತೆಗಳಲ್ಲೊಂದು. ಯಾವುದೇ ವ್ಯಕ್ತಿ ಪ್ರೌಢಾವಸ್ಥೆಗೆ ಕಾಲಿಟ್ಟಾಗ, ಅವರಿಗೆ ಸೆಕ್ಸ್ನಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ವಯಸ್ಸಾದಂತೆ ಜವಾಬ್ದಾರಿಗಳೂ ಹೆಚ್ಚಾಗಲಿದ್ದು, ಲೈಂಗಿಕತೆಯಿಂದ ವಂಚಿತರೂ ಆಗಬಹುದು. ದೀರ್ಘ ಕಾಲದವರೆಗೆ ಸೆಕ್ಸ್ ಮಾಡದಿದ್ದರೆ, ಅವರು ಅಡ್ಡ ಪರಿಣಾಮಗಳನ್ನು ಎದುರಿಸುತ್ತಾರೆ. https://ainkannada.com/stop-taking-paracetamol-whenever-you-have-a-fever-or-headache-this-is-harmful-to-the-heart/ ಅನೇಕ ಭಾರತೀಯರು ಲೈಂಗಿಕತೆಯ ಬಗ್ಗೆ ಮುಕ್ತವಾಗಿ ಮಾತನಾಡಲು ಮುಜುಗರ ಪಡುತ್ತಾರೆ. ಆದರೆ ಈ ಬಗ್ಗೆ ಮಾತನಾಡುವುದು ನಮ್ಮ ಲೈಂಗಿಕ ಜ್ಞಾನವನ್ನು ಬೆಳೆಸುವುದರ ಜೊತೆಗೆ ನಾನಾ ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಹಾಗಾಗಿ ಇತ್ತೀಚಿನ ದಿನಗಳಲ್ಲಿ ಜನರು ಲೈಂಗಿಕ ಶಿಕ್ಷಣದ ಬಗ್ಗೆ ಶಾಲಾ ದಿನಗಳಲ್ಲಿಯೇ ಸ್ವಲ್ಪಮಟ್ಟಿಗೆ ಕಲಿಸಲು ಶಿಫಾರಸು ಮಾಡುತ್ತಾರೆ. ಪ್ರೀತಿ, ಕಾಮ, ಬಯಕೆ, ಸ್ಪರ್ಶ ಇತ್ಯಾದಿ ಅನೇಕ ಭಾವನೆಗಳನ್ನು ವ್ಯಕ್ತಪಡಿಸಲು ಲೈಂಗಿಕತೆಯನ್ನು ಬಳಸಲಾಗುತ್ತದೆ. ಲೈಂಗಿಕತೆಯು ಪ್ರೇಮಿಗಳು ಅಥವಾ ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸೆಕ್ಸ್ನ ಪ್ರಯೋಜನಗಳು: ಲೈಂಗಿಕ ಕ್ರಿಯೆಯು ನಮ್ಮ ದೇಹದಲ್ಲಿ ಹಲವಾರು ಬದಲಾವಣೆಗಳನ್ನು ತರುವುದಲ್ಲದೇ ಪ್ರಯೋಜನಗಳನ್ನು ಸಹ ನೀಡುತ್ತದೆ. ರಕ್ತದೊತ್ತಡ ಕಡಿಮೆ ಮತ್ತು ಒತ್ತಡ ನಿವಾರಣೆ…
ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ ಸಾರ್ವತ್ರಿಕ ದಾಖಲೆ ಬರೆದಿದೆ. ನಿನ್ನೆ ಗ್ರಾಮ್ಗೆ 70 ರೂ ಹೆಚ್ಚಿದ್ದ ಅದರ ಬೆಲೆ ಇವತ್ತು ಬರೋಬ್ಬರಿ 275 ರೂನಷ್ಟು ಏರಿಕೆ ಕಂಡಿದೆ. ಅಪರಂಜಿ ಚಿನ್ನವಂತೂ ಗ್ರಾಮ್ಗೆ 300 ರೂನಷ್ಟು ಹೆಚ್ಚಳವಾಗಿದೆ. 24 ಕ್ಯಾರಟ್ ಚಿನ್ನದ ಬೆಲೆ ಇದೇ ಮೊದಲ ಬಾರಿಗೆ 10,000 ರೂ ಗಡಿ ದಾಟಿದೆ. https://ainkannada.com/beware-people-another-big-scam-by-a-kerala-based-society-in-bengaluru/ ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,01,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,100 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 22ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,900 ರೂ 24 ಕ್ಯಾರಟ್ನ 10…
ಬೆಂಗಳೂರು:- ಕೇರಳ ಮೂಲದ ಮತ್ತೊಂದು ‘ಕೋ ಆಪರೇಟಿವ್ ಸೊಸೈಟಿ’ ಮಹಾಮೋಸ ಬೆಳಕಿಗೆ ಬಂದಿದೆ. ಅತಿ ಹೆಚ್ಚಿನ ಬಡ್ಡಿ ನೀಡುವುದಾಗಿ ಆಮಿಷ ತೋರಿಸಿ ಬೆಂಗಳೂರು ಹೊರವಲಯದಲ್ಲಿ ಸಾವಿರಾರು ಜನರಿಗೆ ಕೋಟಿ ಕೋಟಿ ರೂಪಾಯಿ ಪಂಗನಾಮ ಹಾಕಲಾಗಿದೆ. https://ainkannada.com/senior-lawyer-sada-shivareddy-condemns-the-attack-and-protests-by-wearing-a-red-armband/ ಹೌದು, ಮೋಸ ಹೋಗುವವರು ಇರುವ ತನಕ ಮೋಸ ಮಾಡುವವರು ಇದ್ದೇ ಇರುತ್ತಾರೆ. ಹೀಗಾಗಿ ಜನತೆ ಎಚ್ಚೆತ್ತುಕೊಳ್ಳಬೇಕು. ಎಸ್, 2019ರಲ್ಲಿ ಸರ್ಜಾಪುರದ ದೊಮ್ಮಸಂದ್ರದಲ್ಲಿ ಶಾಖೆ ಆರಂಭಿಸಿದ ‘ದಿ ಮಲಬಾರ್ ಸ್ಟೇಟ್ ಆಗ್ರೋ ಕೋ ಆಪರೇಟಿವ್ ಸೊಸೈಟಿ’ ಆಕರ್ಷಕ ಬಡ್ಡಿ ದರ ನೀಡುವುದಾಗಿ ಜನ ಸಾಮಾನ್ಯರನ್ನು ತನ್ನತ್ತ ಸೆಳೆದುಕೊಂಡಿದೆ. ಆದರಲ್ಲೂ ಹಿರಿಯ ನಾಗರೀಕರನ್ನು ಟಾರ್ಗೆಟ್ ಮಾಡಿ ಲಕ್ಷ ಲಕ್ಷ ಸ್ಥಿರ ಠೇವಣಿ ಮತ್ತು ಡೈಲಿ, ವೀಕ್ಲಿ ಮತ್ತು ಮಂತ್ಲಿ ಪಿಗ್ಮಿ ಕೂಡ ಸಂಗ್ರಹ ಮಾಡಿ ಆರಂಭದಲ್ಲಿಯೇ ಭರ್ಜರಿ ಸಂಗ್ರಹ ಮಾಡಿದೆ. ಆರಂಭದಲ್ಲಿ ಗ್ರಾಹಕರಿಗೆ ಹಣ ಕೂಡ ಹಿಂದಿರುಗಿಸಿದೆ. ಅದೇ ನಂಬಿಕೆಯಲ್ಲಿ ಗ್ರಾಹಕರು ಬೇರೆ ಬೇರೆ ಬ್ಯಾಂಕುಗಳಲ್ಲಿದ್ದ ಹಣವನ್ನು ಸೊಸೈಟಿಗೆ ಜಮಾ ಮಾಡಿದ್ದಾರೆ. ಆದರೆ 2024ರಲ್ಲಿ ದಿಢೀರ್ ಮಲಬಾರ್…
ಬೀದರ್:- ಹಿರಿಯ ವಕೀಲ ಸದಾ ಶಿವರೆಡ್ಡಿ ಮೇಲೆ ಹಲ್ಲೆ ಖಂಡಿಸಿ ತೋಳಿಗೆ ಕೆಂಪು ಪಟ್ಟಿ ಧರಿಸಿ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ ನಡೆದಿರುವ ಘಟನೆ ಬೀದರ್ನಲ್ಲಿ ಜರುಗಿದೆ. ಹಲ್ಲೆ ಖಂಡಿಸಿ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದೆ. https://ainkannada.com/rcb-vs-rr-match-likely-to-be-canceled-on-thursday/ ಪ್ರತಿಭಟನೆ ವೇಳೆ, ಏಕಾಏಕಿ ಕಚೇರಿಗೆ ನುಗ್ಗಿ ಹಲ್ಲೆ ಮಾಡಿದವರ ಬಂಧನ ಇನ್ನು ಆಗಿಲ್ಲಾ ಎಂದು ವಕೀಲರು ಆಕ್ರೋಶ ಹೊರ ಹಾಕಿದ್ದಾರೆ. ಸಾಮಾನ್ಯ ಜನರ ಮೇಲೆ ಹಲ್ಲೆ ನಡೆದಾಗ ಬಂಧನ ಆಗ್ತಾರೆ. ಇಂದು ವಕೀಲರ ಮೇಲೆ ಹಲ್ಲೆ ಆದ್ರೂ ಬಂಧನ ಅಗಿಲ್ಲಾ ಎಂದು ಅಸಮಧಾನ ಹೊರ ಹಾಕಿದ್ದಾರೆ. ಅಲ್ಲದೇ ರಾಜ್ಯದಲ್ಲಿ ವಕೀಲರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಹೀಗಾಗಿ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನ ಕೂಡಲೇ ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದರು. ಹಾಗೂ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಶಿವಶರಣಪ್ಪ ಪಾಟೀಲ್, ಉಪಾಧ್ಯಕ್ಷರು ಹಾಗು ಪದಾಧಿಕಾರಿಗಳು…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು RR ವಿರುದ್ಧ ತವರು ಮೈದಾನ ಚಿನ್ನಸ್ವಾಮಿಯಲ್ಲಿ ಆಡಲಿದ್ದು, ಆದರೆ ಈ ಪಂದ್ಯ ರದ್ದಾಗುವ ಸಾಧ್ಯತೆ ಇದೆ. https://ainkannada.com/it-is-not-right-to-talk-abroad-about-indias-democracy-mahesh-tenginakai-sparked-against-raga/ ಈಗಾಗಲೇ ಏಪ್ರಿಲ್ 18ರಂದು ಬೆಂಗಳೂರಿನ ಭಾರೀ ಮಳೆ ಸುರಿದ ಹಿನ್ನೆಲೆ ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್ಸಿಬಿಗೆ ತುಂಬಾ ಅಡೆತಡೆ ಆಯಿತು. ಆದರೆ, ನಂತರ ಪಿಚ್ ತೆವಾಂಶವೆಲ್ಲಾ ಹೋದ ಕಾರಣ ಪಂಜಾಬ್ ಬ್ಯಾಟಿಂಗ್ ತುಂಬಾ ಅನುಕೂಲ ಆಗಿದ್ದು, ಆರ್ಸಿಬಿ ವಿರುದ್ಧ ಸುಲಭವಾಗಿ ಗೆಲುವು ಸಾಧಿಸಲು ಅನುಕೂಲವಾಯಿತು. ಸಾಮಾನ್ಯವಾಗಿ ಈ ಪಿಚ್ನಲ್ಲಿ ಚೇಸ್ ಮಾಡಿರುವ ತಂಡ ಗೆಲುವು ಸಾಧಿಸಿರುವ ಉದಾಹರಣೆಗಳಿವೆ. ಅದರಲ್ಲೂ ಸಾಧಾರಣ ಮಳೆ ಬಂದು ನಿಂತರೆ, ಹೆಚ್ಚು ಅನುಕೂಲ ಆದಂತಾಗುತ್ತದೆ. ಇದೀಗ ಹಾಮಾನ ಇಲಾಖೆ ಪ್ರಕಾರ, ಮುಂದಿನ ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 24ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್ಸಿಬಿ ಸೆಣಸಲಿದೆ. ಒಂದು ವೇಳೆ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಸಾಧಾರಣ…
ಹುಬ್ಬಳ್ಳಿ:- ಜನಗಣತಿ ವರದಿ ಜಾರಿಗಾಗಿ ಮತ್ತೇ ಸಚಿವ ಸಂಪುಟದ ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/mutton-market-aita-sri-krishna-devaraya-memorial-memorial/ ಈ ಸಂಬಂಧ ಮಾತನಾಡಿದ ಅವರು, ಜನಗಣತಿ ವರದಿ ಜಾರಿಗಾಗಿ ಸಾಕಷ್ಟು ಚರ್ಚೆ ನಡೆದಿದೆ. ಸರಕಾರದ ನಿರ್ಧಾರ ಬಗ್ಗೆ ಒಪ್ಪಿಕೊಳ್ಳುವ ವಿಚಾರ ಇಲ್ಲ. ಜನಗಣತಿ ವರದಿ ಬಗ್ಗೆ ಜನರಿಗೆ ಯಾವುದೇ ರೀತಿಯ ವಿಶ್ವಾಸ ಇಲ್ಲ. ಯಾವುದೇ ಕಾರಣಕ್ಕೋ ಜಾತಿಗಣತಿ ಜಾರಿ ಆಗಲ್ಲ. ಈಗಾಗಲೇ ಸಚಿವ ಸಂಪುಟದಲ್ಲಿ ಸಾಕಷ್ಟು ಚರ್ಚೆ ಆಗಿದೆ. ಸಚಿವ ಸಂಪುಟದಲ್ಲಿ ಅವರದೇ ಸಚಿವರು ವಿರೋಧ ಮಾಡಿದ್ದಾರೆ. ಇನ್ನೊಂದು ಸಚಿವ ಸಂಪುಟದ ಸಭೆ ಕರೆಯುವ ಕುರಿತು ಸಿಎಂ ಹೇಳಿದ್ದಾರೆ. ಆ ಸಚಿವ ಸಂಪುಟದಲ್ಲಿ ಯಾವುದೇ ತೀರ್ಮಾನ ಆಗಲ್ಲ ಇನ್ನೊಂದು ಸಲ ಜಾತಿ ಗಣತಿ ಆಗಬೇಕು ಎಂದರು ಇನ್ನೂ ಎಐಸಿಸಿ ನಾಯಕ, ಸಂಸದ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ. USA ದಲ್ಲಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಕುರಿತು ಕೇವಲವಾಗಿ ಮಾತನಾಡಿದ್ದನ್ನ ವಿರೋಧ ಮಾಡುವೆ.…
ಕೊಪ್ಪಳ:- ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿರುವ ಐತಿಹಾಸಿಕ ಶ್ರೀಕೃಷ್ಣ ದೇವರಾಯ ನೆನಪಿನ ಸ್ಮಾರಕ ಇದೀಗ ಮಟನ್ ಮಾರ್ಕೆಟ್ ಆಯ್ತಾ ಎಂಬ ಪ್ರಶ್ನೆ ಮೂಡಿದೆ. https://ainkannada.com/twist-to-murder-attempt-wing-commander-who-tied-up-a-false-story-fir-record/ ಸ್ಥಳೀಯರ ಕುರಿ ಕಟ್ ಮಾಡುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಶ್ರೀಕೃಷ್ಣ ದೇವರಾಯ ನೆನಪಿಗಾಗಿ ನಿರ್ಮಿಸಿರುವ 64 ಕಂಬಗಳಿರೋ ಮಂಟಪ ಇದಾಗಿದ್ದು, ಪುರತಾತ್ವ ಶಾಸ್ತ್ರ ಇಲಾಖೆ ಬೇಜವಬ್ದಾರಿತನವೇ ಕಾರಣ ಎಂದು ಇತಿಹಾಸಕಾರರು ಆರೋಪಿಸಿದ್ದಾರೆ. ಐತಿಹಾಸಕ ಸ್ಮಾರಕಗಳಿಗೆ ಸೂಕ್ತ ರಕ್ಷಣೆ ಒದಗಿಸಲು ಒತ್ತಾಯ ಕೇಳಿ ಬಂದಿದೆ.
ಬೆಂಗಳೂರು:- ಕೊಲೆ ಯತ್ನ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ವಿರುದ್ಧ ಇದೀಗ FIR ದಾಖಲಾಗಿದೆ. https://ainkannada.com/summer-effect-swimming-pools-rise-increase-bengaluru-outrage/ ಹಲ್ಲೆಗೆ ಒಳಗಾದ ವಿಕಾಸ್ ನೀಡಿದ ದೂರಿನ ಆಧಾರದಲ್ಲಿ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾರಿನ ನಂಬರ್ ಆಧಾರದಲ್ಲಿ ಶಿಲಾದಿತ್ಯಾ ಬೋಸೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ಸೋಮವಾರ ಬೆಳಗ್ಗೆ ಸ್ನೇಹಿತನ ಬೈಕ್ ವಾಪಸ್ ನೀಡಲು ನಾನು ಹೋಗುತ್ತಿದ್ದೆ. ಟಿನ್ ಫ್ಯಾಕ್ಟರಿಯ ಬಳಿ ಬೈಕ್ಗೆ ಕಾರು ತಾಗಿದೆ. ಇದಕ್ಕೆ ಕಾರನ್ನು ಅಡ್ಡ ಹಾಕಿ ಗುದ್ದಿದ್ದು ಯಾಕೆ ಎಂದು ಕೇಳಿದೆ. ಪ್ರಶ್ನೆ ಮಾಡಿದ್ದಕ್ಕೆ ಕಾರಿನಲ್ಲಿದ್ದ ವ್ಯಕ್ತಿ ಕಾಲಿನಿಂದ ಒದ್ದು ಬೈಕನ್ನು ಕೆಳಗೆ ಬೀಳಿಸಿದ್ದಾನೆ. ನಾನು ಆಕ್ಷೇಪ ವ್ಯಕ್ತಪಡಿಸಿದಾಗ ನಿರಂತರವಾಗಿ ಹಲ್ಲೆ ಮಾಡಿದ್ದಾನೆ. ಸ್ನೇಹಿತನಿಗೆ ಕರೆ ಮಾಡಲು ಮುಂದಾದಾಗ ಮೊಬೈಲ್ ಎಸೆದಿದ್ದಾನೆ. ಜೊತೆಗೆ ಬೈಕ್ ಕೀ ಎಸೆಯುತ್ತಾನೆ. ಕುತ್ತಿಗೆ ಹಿಡಿದು ಸಾಯಿಸಲು ಯತ್ನಿಸಿದ್ದ ಎಂದು ವಿಕಾಸ್ ದೂರು ನೀಡಿದ್ದಾರೆ
ಬೆಂಗಳೂರು:- ಒಂದು ಕಡೆ ಬಿರು ಬಿಸಿಲು ಬೇಸಿಗೆ ಮತ್ತೊಂದು ಕಡೆ ಶಾಲಾ ಮಕ್ಕಳಿಗೆ ರಜೆ. ಇದನ್ನೇ ಗುರಿಯಾಗಿಸಿಕೊಂಡಿರುವ ಬಿಬಿಎಂಪಿ ಈಜುಕೊಳಗಳಲ್ಲೂ ಬೇಕಾ ಬಿಟ್ಟಿ ದರ ನಿಗದಿ ಮಾಡಿದೆ. ಮೊದಲೆಲ್ಲಾ ಚಿಕ್ಕಮಕ್ಕಳಿಗೆ 25 ರೂ. ದೊಡ್ಡವರಿಗೆ 30 ರೂ. ಇತ್ತು. ಈಗ ವಯಸ್ಕರಿಗೂ, ಚಿಕ್ಕಮಕ್ಕಳಿಗೂ 50 ರೂ. ನಿಗದಿಯಾಗಿದೆ ಬಿಬಿಎಂಪಿ ದರ ನಿಗದಿ ಮಾಡಿರುವುದು ಒಂದಾದರೆ, ಈಜುಕೊಳಗಳಲ್ಲಿ ಉಸ್ತುವಾರಿಗಳು ಮತ್ತೊಂದು ದರದಲ್ಲಿ ವಸೂಲಿ ಮಾಡುತ್ತಿದ್ದಾರೆ https://ainkannada.com/ricky-rais-firing-on-rai-is-a-lie-such-a-doubt/ ಚಿಕ್ಕ ಮಕ್ಕಳಿಗೂ ಒಂದೇ ದರ, ದೊಡ್ಡವರಿಗೆ ಒಂದೇ ದರ, ಹೇಳೋರಿಲ್ಲ ಕೇಳೋರಿಲ್ಲ. ಬೇಕಾಬಿಟ್ಟಿ ದರ ನಿಗದಿಗೆ ಇದೀಗ ಪೋಷಕರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಹಾಲಕ್ಷ್ಮೀ ಲೇಔಟ್ನ ಬಿಬಿಎಂಪಿ ಈಜುಕೊಳದಲ್ಲಿ 40 ನಿಮಿಷಕ್ಕೆ 50 ರೂ. ನಿಗದಿ ಮಾಡಿದ್ದಾರೆ. ಚಿಕ್ಕಮಕ್ಕಳಿಗೂ 50 ರೂ. ದೊಡ್ಡವರಿಗೂ 50 ರೂ. ಇದಕ್ಕೆ ಪೋಷಕರು ಮಕ್ಕಳಿಗೆ ದರ ಕಡಿಮೆ ಮಾಡಿ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಹಾಲಕ್ಷ್ಮೀ ಲೇಔಟ್ನಲ್ಲಿ ಎಲ್ಲರಿಗೂ 50 ರೂ. ನಿಗದಿ ಮಾಡಿದ್ದರು. ಆದರೆ ವಿಜಯನಗರದಲ್ಲಿ ಮಕ್ಕಳಿಗೆ 40…