ಬೆಂಗಳೂರು/ರಾಮನಗರ:- ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಇತ್ತೀಚೆಗೆ ನಡೆದಿತ್ತು. ಇದರಿಂದ ತೀವ್ರ ಗಾಯಗೊಂಡಿರುವ ರಿಕ್ಕಿ ರೈ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, https://ainkannada.com/dattamoorthy-kulkarni-says-this-is-not-the-right-course-of-action/ ಆದರೆ ಈ ಹೊತ್ತಲ್ಲೇ ಪೊಲೀಸರಿಗೆ ಒಂದು ಅನುಮಾನ ಮೂಡಿದೆ. ಅಂದ್ರೆ ಈ ಗುಂಡಿನ ದಾಳಿಯೇ ಸುಳ್ಳು ಎಂದು ಶಂಕಿಸಿದ್ದಾರೆ. ರಿಕ್ಕಿ ರೈಗೆ ಒಂದು ಕಾಲದಲ್ಲಿ ಗನ್ ಮ್ಯಾನ್ ಆಗಿದ್ದ ವಿಠ್ಠಲ ಎಂಬಾತ ಕಾರಿನ ಮೇಲೆ ಫೈರಿಂಗ್ ಮಾಡಿದ್ದಾನೆ. ಎಂಬ ಆರೋಪ ಕೇಳಿ ಬಂದಿದೆ. ಮಾಜಿ ಗನ್ ಮ್ಯಾನ್ ವಿಠ್ಠಲನನ್ನು ಬಿಡದಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿಠ್ಠಲ ಬಹುಕಾಲದವರೆಗೆ ರಿಕ್ಕಿ ರೈನ ಗನ್ ಮ್ಯಾನ್ ಆಗಿದ್ದ. ಅನಾರೋಗ್ಯ ಹಿನ್ನೆಲೆ ರಿಕ್ಕಿ ಫಾರ್ಮ್ ಹೌಸ್ ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದಾನೆ. ಶೂಟೌಟ್ ರಾತ್ರಿ ವಿಠ್ಠಲ, ರಿಕ್ಕಿ ಜೊತೆಗೆ ಪರ್ಸನಲ್ ಆಗಿ ಮಾತನಾಡಿದ್ದಾನೆ ಎನ್ನಲಾಗಿದೆ. ರಿಕ್ಕಿ ಕಾರು ಹೊರಡುವ ಸ್ವಲ್ಪ ಸಮಯದ ಮುನ್ನ ವಿಠ್ಠಲ ಫಾರ್ಮ್ ಹೌಸ್ನಿಂದ…
Author: AIN Author
ಹುಬ್ಬಳ್ಳಿ:- CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ ವಿಚಾರಕ್ಕೆ ಬ್ರಾಹ್ಮಣ ಸಮಾಜದ ಮುಖಂಡ ದತ್ತಮೂರ್ತಿ ಕುಲಕರ್ಣಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/controversy-threatens-to-the-sentiments-of-billions-of-brahmins/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಇದೇ 25 ರಂದು ಚೆನ್ನಮ್ಮ ಸರ್ಕಲ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿ ಸೇರಿದಂತೆ ಧಾರವಾಡ ಉತ್ತರ ಕರ್ನಾಟಕ ಭಾಗದ ಪ್ರಮುಖರು ಭಾಗಿ ಆಗುವರು. ಬ್ರಾಹ್ಮಣ ಸಮಾಜ ಸೇರಿದಂತೆ 20 ವಿವಿಧ ಜನಿವಾರ ಧರಿಸುವ ಸಮಾಜದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಧಾರವಾಡ, ಶಿವಮೊಗ್ಗ ಹಾಗೂ ಬೀದರ್ ಜಿಲ್ಲೆಗಳಲ್ಲಿ CET ಪರೀಕ್ಷೆಯಲ್ಲಿ ಜನಿವಾರಧಾರಿ ವಿದ್ಯಾರ್ಥಿಗಳಿಗೆ ತೊಂದರೆ ಕೊಡಲಾಗಿದೆ. ವಿವಿಧ ಸಮಾಜದ ಜನಿವಾರಾ ಧಾರಿಗಳಿಂದ ಉಗ್ರ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ವಿಚಾರ ಕೋಟ್ಯಂತರ ಬ್ರಾಹ್ಮಣರ ಭಾವನೆಗೆ ಧಕ್ಕೆ ತಂದಿದೆ ಸರಿಯಾದ ಕ್ರಮವಲ್ಲ ಎಂದರು.
ಹುಬ್ಬಳ್ಳಿ:- CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಾಹ್ಮಣ ಸಮಾಜದ ಮುಖಂಡ ಜಯತೀರ್ಥ ಕಟ್ಟಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/rape-murder-case-on-girl-2-year-old-accused/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜನಿವಾರ ಧರಿಸುವ ವಿವಿಧ ಸಮಾಜದ ನಾಯಕರ ನೇತ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಸಲಾಗುವುದು. ಹುಬ್ಬಳ್ಳಿಯಲ್ಲಿ ಇದೇ 25 ರಂದು ಚೆನ್ನಮ್ಮ ಸರ್ಕಲ್ ಬಳಿ ಪ್ರತಿಭಟನೆ ಮಾಡಲಾಗುತ್ತದೆ. ಹುಬ್ಬಳ್ಳಿ ಸೇರಿದಂತೆ ಧಾರವಾಡ ಉತ್ತರ ಕರ್ನಾಟಕ ಭಾಗದ ಪ್ರಮುಖರು ಭಾಗಿ ಆಗುವರು ಬ್ರಾಹ್ಮಣ ಸಮಾಜ ಸೇರಿದಂತೆ 20 ವಿವಿಧ ಜನಿವಾರ ಧರಿಸುವ ಸಮಾಜದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಧಾರವಾಡ, ಶಿವಮೊಗ್ಗ ಹಾಗೂ ಬೀದರ್ ಜಿಲ್ಲೆಗಳಲ್ಲಿ CET ಪರೀಕ್ಷೆಯಲ್ಲಿ ಜನಿವಾರಧಾರಿ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಹೀಗಾಗಿ ವಿವಿಧ ಸಮಾಜದ ಜನಿವಾರಾ ಧಾರಿಗಳಿಂದ ಉಗ್ರ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ವಿಚಾರ ಕೋಟ್ಯಂತರ ಬ್ರಾಹ್ಮಣರ ಭಾವನೆಗೆ ಧಕ್ಕೆ ತಂದಿದೆ. ಇದು ಕೇವಲ ಬ್ರಾಹ್ಮಣರ ಸಮಾಜ ಅಷ್ಟೇ ಅಲ್ಲಾ. ಜನಿವಾರಧಾರೆ ಧರಿಸುವ ಅನೇಕ ಸಮಾಜದ ಪ್ರಮುಖರಿಂದ…
ಕಲಬುರ್ಗಿ:- ಬಾಲಕಿ ಮೇಲಿನ ಹತ್ಯೆ ಹಾಗೂ ಕೊಲೆ ಕೇಸ್ ಗೆ ಸಂಬಂಧ ಎರಡು ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ ಪ್ರಕಟಿಸಲಾಗಿದ್ದು, ಗಲ್ಲು ಶಿಕ್ಷೆ ಜೊತೆಗೆ 1 ಲಕ್ಷ ರೂ. ದಂಡ ವಿಧಿಸಸಲಾಗಿದೆ. https://ainkannada.com/retired-dgp-murder-case-accused-wife-pallaviga-14-day-judicial-custody/ ಗುಂಡೇರಾವ ಚೋಪಡೆ (28) ಶಿಕ್ಷೆಗೆ ಒಳಗಾದ ಆರೋಪಿ. 2023ರ ಜು.15ರಂದು ಆಳಂದ ತಾಲ್ಲೂಕಿನ ಗ್ರಾಮವೊಂದರ ಬಾಲಕಿ ಪುಸ್ತಕವೊಂದನ್ನು ತರಲು ಮತ್ತೊಂದು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಅಪರಾಧಿ ಗುಂಡೇರಾವ ಬಾಲಕಿಯನ್ನು ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದ. ಬಳಿಕ ಉಸಿರುಗಟ್ಟಿಸಿ ಸಾಯಿಸಿ, ಪಕ್ಕದ ಹೊಲದಲ್ಲಿದ್ದ ಬಾವಿಯೊಂದರಲ್ಲಿ ಶವವನ್ನು ಬೀಸಾಡಿ ಹೋಗಿದ್ದ. ಈ ಕುರಿತು ಆಳಂದ ತಾಲ್ಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖಾಧಿಕಾರಿ ಭಾಸು ಚವ್ಹಾಣ ನೇತೃತ್ವದಲ್ಲಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಪೋಕ್ಸೊ ಕಾಯ್ದೆಯಡಿ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ.…
ಬೆಂಗಳೂರು:- ನಿವೃತ್ತ ಡಿಜಿಪಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತೆ ಪತ್ನಿ ಪಲ್ಲವಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. https://ainkannada.com/ipl-2025-gujarat-won-by-39-runs-against-kolkata/ ಪಲ್ಲವಿ ಅವರನ್ನು ಸೋಮವಾರ ನ್ಯಾಯಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಜರ್ಡ್ಜ್ ಜಿ.ಎ.ಲತಾದೇವಿ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಮೇ 3ರ ವರೆಗೆ ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನೂ ಮಾಜಿ ಡಿಜಿಪಿ ಅವರನ್ನು ಚಾಕುವಿನಿಂದ ಇರಿದು ಬಹಳ ಹಿಂಸೆಯಿಂದ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಓಂ ಪ್ರಕಾಶ್, ಹಾಗೂ ಸಹೋದರಿ ದೂರು ಕೊಟ್ಟಿದ್ದರು. ದೂರಿನ ಅನ್ವಯ ಮಗಳು ಮತ್ತು ಪತ್ನಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಗಿಲ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕೋಲ್ಕತ್ತಾ ವಿರುದ್ಧ ಗುಜರಾತ್ಗೆ 39 ರನ್ಗಳ ಭರ್ಜರಿ ಜಯ ಸಿಕ್ಕಿದೆ. https://ainkannada.com/very-lucky-to-marry-with-this-pile-tuesdays-fate-is-22-april-2025/ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್, ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 198 ರನ್ ಪೇರಿಸಿತು. ಟೈಟನ್ಸ್ ನೀಡಿದ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನಿಗದಿತ ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿ ಸೋಲಿಗೆ ಶರಣಾಯಿತು. ಕೋಲ್ಕತ್ತಾ ಪರ ಅಜಿಂಕ್ಯ ರಹಾನೆ 36 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ನೆರವಿಂದ 50 ರನ್, ಆಂಡ್ರೆ ರಸೆಲ್ 15 ಎಸೆತಗಳಲ್ಲಿ 1 ಸಿಕ್ಸರ್, 3 ಬೌಂಡರಿ ನೆರವಿಂದ 21 ರನ್, ಸುನಿಲ್ ನರೈನ್ 13 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ನೆರವಿಂದ 17 ರನ್ ಗಳಿಸಿದರು. ಅಂಗ್ಕ್ರಿಶ್ ರಘುವಂಶಿ 13 ಎಸೆತಗಳಲ್ಲಿ 27 ರನ್ ಕಲೆಹಾಕಿ ಔಟಾಗದೆ ಉಳಿದರು. ಗುಜರಾತ್ ಪರ ಮೊಹಮ್ಮದ್ ಸಿರಾಜ್, ರಶೀದ್ ಖಾನ್, ಪ್ರಸಿದ್ಧ್ ಕೃಷ್ಣ ತಲಾ 2 ವಿಕೆಟ್, ವಾಷಿಂಗ್ಟನ್…
ಸುರ್ಯೋದಯ- 5:59 ಬೆ. ಸೂರ್ಯಾಸ್ತ – 6:30 ಸಂಜೆ. ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ನವಮಿ ನಕ್ಷತ್ರ – ಶ್ರವಣ ಯೋಗ – ಶುಭ ಕರಣ – ತೈತಲೆ * *ಮಳೆ ನಕ್ಷತ್ರ- ಅಶ್ವಿನಿ* ರಾಹು ಕಾಲ – 03:00 ದಿಂದ 04:30 ವರೆಗೆ ಯಮಗಂಡ – 09:00 ದಿಂದ 10:30 ವರೆಗೆ ಗುಳಿಕ ಕಾಲ – 12:00 ದಿಂದ 01:30 ವರೆಗೆ ಬ್ರಹ್ಮ ಮುಹೂರ್ತ – 4:23 ಬೆ. ದಿಂದ 5:11 ಬೆ. ವರೆಗೆ ಅಮೃತ ಕಾಲ – 1:58 ಬೆ. ದಿಂದ 3:31 ಬೆ. ವರೆಗೆ ಅಭಿಜಿತ್ ಮುಹುರ್ತ – 11:49 ಬೆ. ದಿಂದ 12:39 ಮ. ವರೆಗೆ ನಿಮ್ಮ ಹೆಸರು, ಜನ್ಮ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ಸಂಪೂರ್ಣ ಭವಿಷ್ಯ…
ಚಿಕ್ಕಮಗಳೂರು:- ಹಣಕಾಸಿನ ವಿಚಾರಕ್ಕೆ ಯುವಕನ ಬರ್ಬರ ಕೊಲೆ ನಡೆದಿರುವ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. https://ainkannada.com/rohit-sharmas-retirement-is-in-doubt-the-hit-man-gets-an-a-grade-2/ ಸಂಜುನಾಯ್ಕ ಮೃತ ದುರ್ದೈವಿ. ರುದ್ರೇಶ್ ನಾಯ್ಕ (30) ಹತ್ಯೆಗೈದ ಆರೋಪಿಯಾಗಿದ್ದಾನೆ. ಅಮೃತಾಪುರ ಗ್ರಾಮದ ಸೇವಾಲಾಲ್ ಸಂಘದ ಚೀಟಿ ವ್ಯವಹಾರದಲ್ಲಿ ಇಬ್ಬರ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ರುದ್ರೇಶ್, ಸಂಜುನಾಯ್ಕನ ತಲೆ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡು ರಕ್ತಸ್ರಾವದಿಂದ ಯುವಕ ಸಾವಿಗೀಡಾಗಿದ್ದಾನೆ. ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿ ರುದ್ರೇಶ್ ನಾಯ್ಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ
ರೋಹಿತ್ ಶರ್ಮಾ ಅವರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಬಾರಿಯೂ ಬಿಸಿಸಿಐ ನಾಲ್ವರು ಆಟಗಾರರಿಗೆ ಎ+ ಗ್ರೇಡ್ನಲ್ಲಿ ಅವಕಾಶ ನೀಡಿದ್ದು, ಆ ನಾಲ್ವರಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಸೇರಿದ್ದಾರೆ. https://ainkannada.com/accident-case-car-hits-pedestrian-woman-dies-on-the-spot/ ಏಕೆಂದರೆ ಈ ಇಬ್ಬರು ಆಟಗಾರರು ಈಗ ಕೇವಲ 2 ಮಾದರಿಗಳಲ್ಲಿ ಮಾತ್ರ ಆಡುತ್ತಿದ್ದಾರೆ. ಆದಾಗ್ಯೂ ಈ ಇಬ್ಬರಿಗೆ ಎ+ ಗ್ರೇಡ್ ಸಿಕ್ಕಿದೆ. ಅದರಲ್ಲೂ ರೋಹಿತ್ ಶರ್ಮಾಗೆ ಈ ಗ್ರೇಡ್ನಲ್ಲಿ ಸ್ಥಾನ ಸಿಕ್ಕಿರುವುದು ಹಲವಾರು ಅನುಮಾನಗಳಿಗೆ ತೆರೆ ಎಳೆದಿದೆ. ವಾಸ್ತವವಾಗಿ ಕಳೆದ ವರ್ಷ ಟೆಸ್ಟ್ ಮಾದರಿಯಲ್ಲಿ ರೋಹಿತ್ ಶರ್ಮಾ ಅವರ ಪ್ರದರ್ಶನ ವಿಶೇಷವಾಗಿರಲಿಲ್ಲ. ಕಳಪೆ ಫಾರ್ಮ್ನಿಂದ ಬಳಲುತ್ತಿದ್ದ ರೋಹಿತ್, ಇತ್ತ ತಮ್ಮ ನಾಯಕತ್ವವದಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿರಲಿಲ್ಲ. ಪರಿಸ್ಥಿತಿ ಹೇಗಿತ್ತೆಂದರೆ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ನ ಆಡುವ ಹನ್ನೊಂದರ ಬಳಗದಿಂದಲೂ ರೋಹಿತ್ ಹೊರಗುಳಿದ್ದಿದ್ದರು. ಇದಾದ ನಂತರ, ರೋಹಿತ್ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾಗಬಹುದು ಎಂಬ ಊಹಾಪೋಹಗಳು ಹುಟ್ಟಿಕೊಂಡಿದ್ದವು. ರೋಹಿತ್ ಈಗಾಗಲೇ ಟಿ20 ಅಂತಾರಾಷ್ಟ್ರೀಯ…
ಮುಂಬೈ:- ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದ ಹೆದ್ದಾರಿಯಲ್ಲಿ ಜರುಗಿದೆ. ಸಿಂಧುಬಾಯಿ ರಂಭಾವು ಗಲ್ಫಡೆ ಮೃತ ಮಹಿಳೆ. https://ainkannada.com/retired-dgp-om-prakashs-funeral-held-with-state-honours/ ಮಹಿಳೆ ತಲೆಯ ಮೇಲೆ ಮಡಕೆಯನ್ನು ಇಟ್ಟುಕೊಂಡು ರಸ್ತೆ ದಾಟುತ್ತಿದ್ದಳು. ಈ ವೇಳೆ ಕಾರು ವೇಗವಾಗಿ ಬಂದು ಮಹಿಳೆಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ, ಕಾರಿಗಿಂತಲೂ ಎತ್ತರಕ್ಕೆ ಹಾರಿ, ರಸ್ತೆ ಮೇಲೆ ಬಿದ್ದಿದ್ದಾಳೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಪೈಥಾನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.