Author: AIN Author

ಚಿಕ್ಕಮಗಳೂರು:- ಹಣಕಾಸಿನ ವಿಚಾರಕ್ಕೆ ಯುವಕನ ಬರ್ಬರ ಕೊಲೆ ನಡೆದಿರುವ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. https://ainkannada.com/rohit-sharmas-retirement-is-in-doubt-the-hit-man-gets-an-a-grade-2/ ಸಂಜುನಾಯ್ಕ ಮೃತ ದುರ್ದೈವಿ. ರುದ್ರೇಶ್ ನಾಯ್ಕ (30) ಹತ್ಯೆಗೈದ ಆರೋಪಿಯಾಗಿದ್ದಾನೆ. ಅಮೃತಾಪುರ ಗ್ರಾಮದ ಸೇವಾಲಾಲ್ ಸಂಘದ ಚೀಟಿ ವ್ಯವಹಾರದಲ್ಲಿ ಇಬ್ಬರ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ರುದ್ರೇಶ್, ಸಂಜುನಾಯ್ಕನ ತಲೆ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡು ರಕ್ತಸ್ರಾವದಿಂದ ಯುವಕ ಸಾವಿಗೀಡಾಗಿದ್ದಾನೆ. ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿ ರುದ್ರೇಶ್ ನಾಯ್ಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ

Read More

ರೋಹಿತ್ ಶರ್ಮಾ ಅವರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಬಾರಿಯೂ ಬಿಸಿಸಿಐ ನಾಲ್ವರು ಆಟಗಾರರಿಗೆ ಎ+ ಗ್ರೇಡ್‌ನಲ್ಲಿ ಅವಕಾಶ ನೀಡಿದ್ದು, ಆ ನಾಲ್ವರಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಸೇರಿದ್ದಾರೆ. https://ainkannada.com/accident-case-car-hits-pedestrian-woman-dies-on-the-spot/ ಏಕೆಂದರೆ ಈ ಇಬ್ಬರು ಆಟಗಾರರು ಈಗ ಕೇವಲ 2 ಮಾದರಿಗಳಲ್ಲಿ ಮಾತ್ರ ಆಡುತ್ತಿದ್ದಾರೆ. ಆದಾಗ್ಯೂ ಈ ಇಬ್ಬರಿಗೆ ಎ+ ಗ್ರೇಡ್ ಸಿಕ್ಕಿದೆ. ಅದರಲ್ಲೂ ರೋಹಿತ್ ಶರ್ಮಾಗೆ ಈ ಗ್ರೇಡ್‌ನಲ್ಲಿ ಸ್ಥಾನ ಸಿಕ್ಕಿರುವುದು ಹಲವಾರು ಅನುಮಾನಗಳಿಗೆ ತೆರೆ ಎಳೆದಿದೆ. ವಾಸ್ತವವಾಗಿ ಕಳೆದ ವರ್ಷ ಟೆಸ್ಟ್ ಮಾದರಿಯಲ್ಲಿ ರೋಹಿತ್ ಶರ್ಮಾ ಅವರ ಪ್ರದರ್ಶನ ವಿಶೇಷವಾಗಿರಲಿಲ್ಲ. ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ರೋಹಿತ್, ಇತ್ತ ತಮ್ಮ ನಾಯಕತ್ವವದಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿರಲಿಲ್ಲ. ಪರಿಸ್ಥಿತಿ ಹೇಗಿತ್ತೆಂದರೆ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್‌ನ ಆಡುವ ಹನ್ನೊಂದರ ಬಳಗದಿಂದಲೂ ರೋಹಿತ್ ಹೊರಗುಳಿದ್ದಿದ್ದರು. ಇದಾದ ನಂತರ, ರೋಹಿತ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಬಹುದು ಎಂಬ ಊಹಾಪೋಹಗಳು ಹುಟ್ಟಿಕೊಂಡಿದ್ದವು. ರೋಹಿತ್ ಈಗಾಗಲೇ ಟಿ20 ಅಂತಾರಾಷ್ಟ್ರೀಯ…

Read More

ಮುಂಬೈ:- ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದ ಹೆದ್ದಾರಿಯಲ್ಲಿ ಜರುಗಿದೆ. ಸಿಂಧುಬಾಯಿ ರಂಭಾವು ಗಲ್ಫಡೆ ಮೃತ ಮಹಿಳೆ. https://ainkannada.com/retired-dgp-om-prakashs-funeral-held-with-state-honours/ ಮಹಿಳೆ ತಲೆಯ ಮೇಲೆ ಮಡಕೆಯನ್ನು ಇಟ್ಟುಕೊಂಡು ರಸ್ತೆ ದಾಟುತ್ತಿದ್ದಳು. ಈ ವೇಳೆ ಕಾರು ವೇಗವಾಗಿ ಬಂದು ಮಹಿಳೆಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ, ಕಾರಿಗಿಂತಲೂ ಎತ್ತರಕ್ಕೆ ಹಾರಿ, ರಸ್ತೆ ಮೇಲೆ ಬಿದ್ದಿದ್ದಾಳೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಪೈಥಾನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು:- ಸರ್ಕಾರಿ ಗೌರವಗಳೊಂದಿಗೆ ನಿವೃತ್ತ ಡಿಜಿಪಿ ಓಂ ಪ್ರಕಾಶ ಅಂತ್ಯಕ್ರಿಯೆ ನೆರವೇರಿದೆ. ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಅಂತ್ಯಕ್ರಿಯೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. https://ainkannada.com/energy-minister-in-trouble-bjp-files-complaint-with-lokayukta-against-minister-george/ ಮೂರು ಸುತ್ತು ಕುಶಲತೋಪು ಸಿಡಿಸುವ ಮೂಲಕ ಸರ್ಕಾರಿ ಗೌರವ ಸೂಚಿಸಲಾಗಿದೆ. ಅಂತ್ಯಕ್ರಿಯೆಗೂ ಮುನ್ನ ಹೆಚ್‍ಎಸ್‍ಆರ್ ಲೇಔಟ್‍ನ ಎಂಸಿಹೆಚ್‍ಎಸ್ ಕ್ಲಬ್‍ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಓಂ ಪ್ರಕಾಶ್ ಜೊತೆಗೆ ಕೆಲಸ ಮಾಡಿದ ಪೊಲೀಸ್ ಅಧಿಕಾರಿಗಳು ಅಂತಿಮ ದರ್ಶನ ಪಡೆದರು. ಈ ವೇಳೆ ಅವರ ಜೊತೆಗಿನ ಒಡನಾಟ ನೆನೆದು ಕಣ್ಣೀರಿಟ್ಟಿದ್ದಾರೆ. ಇನ್ನೂ ಹೆಚ್‌ಎಸ್‌ಆರ್ ಲೇಔಟ್‌ನ ಮನೆಯಲ್ಲಿ ಓಂ ಪ್ರಕಾಶ್ ಅವರನ್ನು ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಪತ್ನಿ ಪಲ್ಲವಿಯವರೇ ಕಣ್ಣಿಗೆ ಖಾರದ ಪುಡಿ ಎರಚಿ, ಚಾಕುವಿನಿಂದ 8-10 ಬಾರಿ ಎದೆ, ಹೊಟ್ಟೆ ಭಾಗಕ್ಕೆ ಇರಿದು ಕೊಲೆಗೈದಿದ್ದರು.

Read More

ಬೆಂಗಳೂರು:- ಇಂಧನ ಸಚಿವರಿಗೆ ಸಂಕಷ್ಟ ಎದುರಾಗಿದ್ದು, ಸ್ಮಾರ್ಟ್ ಮೀಟರ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು ನೀಡಿದೆ. https://ainkannada.com/ipl-2025-big-shock-to-rajasthan-royals-ahead-of-match-against-rcb/ ಇಂಧನ ಸಚಿವ ಕೆ.ಜೆ.ಜಾರ್ಜ್, ಗೌರವ್ ಗುಪ್ತಾ, ಟೆಕ್ನಿಕಲ್ ಡೈರೆಕ್ಟರ್ ಮಹಾಂತೇಶ್ & ಬಾಲಾಜಿ ಮೇಲೆ ದೂರು ನೀಡಲಾಗಿದೆ. ಶಾಸಕರಾದ ಅಶ್ವಥ್ ನಾರಾಯಣ್, ಎಸ್.ಆರ್.ವಿಶ್ವನಾಥ್, ಧೀರಜ್ ಮುನಿರಾಜು ನೇತೃತ್ವದ ನಿಯೋಗದಿಂದ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ, ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರುನೀಡಿದ್ದಾರೆ. ಲೋಕಾಯುಕ್ತಕ್ಕೆ ದೂರು ನೀಡಿದ ಬಳಿಕ ಮಾತನಾಡಿದ ಶಾಸಕ ಅಶ್ವಥ್ ನಾರಾಯಣ್, ಇಂಧನ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ನೀಡಿದ್ದೇವೆ. ಇಂಧನ ಸಚಿವ ಕೆಜೆ ಜಾರ್ಜ್, ಗೌರವ್ ಗುಪ್ತಾ, ಟೆಕ್ನಿಕಲ್ ಡೈರೆಕ್ಟರ್ ಮಹಾಂತೇಶ್ & ಬಾಲಾಜಿ ವಿರುದ್ಧ ದೂರು ನೀಡಿದ್ದು, ರಾಜಶ್ರೀ ಕಂಪನಿಯ ಕಂಬ ತಯಾರಿಸುವ ಕಂಪನಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಟೆಂಡರ್ ನೀಡಿದ್ದಾರೆ. ನಿಯಮಗಳ ಉಲ್ಲಂಘನೆ, ಬ್ಲಾಕ್ ಲಿಸ್ಟ್ ಕಂಪನಿಗೆ ಟೆಂಡರ್ ನೀಡಿದ್ದಾರೆ ಎಂದು ಆರೋಪಿಸಿದರು.

Read More

RCB ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ಗೆ ಬಿಗ್ ಶಾಕ್ ಎದುರಾಗಿದೆ. ಇಂಜುರಿಯಿಂದ ಬಳಲುತ್ತಿರುವ ತಂಡದ ಖಾಯಂ ನಾಯಕ ಸಂಜು ಸ್ಯಾಮ್ಸನ್ ಇದೀಗ ಆರ್‌ಸಿಬಿ ವಿರುದ್ಧದ ಮುಂದಿನ ಪಂದ್ಯದಿಂದ ಹೊರಗುಳಿದಿದ್ದಾರೆ. https://ainkannada.com/gold-rate-gold-rate-in-india-has-risen-sharply-again-close-to-1-lakh/ ಏಪ್ರಿಲ್ 24 ರಂದು ಆರ್‌ಸಿಬಿ ವಿರುದ್ಧದ ಪಂದ್ಯದಿಂದ ಸ್ಯಾಮ್ಸನ್ ಅವರನ್ನು ಕೈಬಿಡಲಾಗಿದೆ. ಸಂಜು ಸ್ಯಾಮ್ಸನ್ ಪ್ರಸ್ತುತ ಚೇತರಿಕೆಯ ಹಂತದಲ್ಲಿದ್ದು, ಅವರು ತಂಡದ ತವರು ನೆಲೆಯಲ್ಲಿಯೇ ಉಳಿಯಲಿದ್ದಾರೆ ಎಂದು ರಾಜಸ್ಥಾನ ರಾಯಲ್ಸ್ ತಂಡದ ಆಡಳಿತ ಮಂಡಳಿ ತಿಳಿಸಿದೆ. ಮುಂದಿನ ಪಂದ್ಯಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಸಂಜು ಸ್ಯಾಮ್ಸನ್ ಮಾತ್ರ ತಂಡದಲ್ಲಿ ಕಾಣಿಸಿಕೊಂಡಿಲ್ಲ. ತಂಡದ ಆಡಳಿತ ಮಂಡಳಿಯು ಸಂಜು ಸ್ಯಾಮ್ಸನ್ ಅವರ ಗಾಯದ ಮೇಲೆ ನಿಗಾ ಇಟ್ಟಿದ್ದು, ಅವರು ಸಂಪೂರ್ಣ ಫಿಟ್ ಆದ ನಂತರವೇ ತಂಡಕ್ಕೆ ಮರಳುತ್ತಾರೆ ಎಂಬ ಮಾಹಿತಿ ನೀಡಿದೆ. ಇದರರ್ಥ ಆರ್‌ಸಿಬಿ ವಿರುದ್ಧದ ಮುಂದಿನ ಪಂದ್ಯದಲ್ಲೂ ರಿಯಾನ್ ಪರಾಗ್ ತಂಡವನ್ನು ಮುನ್ನಡೆಸಲಿದ್ದಾರೆ.

Read More

‌ಇತ್ತೀಚಿನ ಕೆಲ ದಿನಗಳ ಏರಿಕೆ ನೋಡಿ, ಎಲ್ಲರ ಬಾಯಲ್ಲೂ ಗೋಲ್ಡ್‌ ರೇಟ್‌ನದ್ದೇ ಮಾತಾಗಿದೆ. ಏನಪ್ಪಾ, ಹೀಗೆ ದಿನ ದಿನ ಏರಿಕೆಯಾಗ್ತಿದೆ, ಮದುವೆ, ಹಬ್ಬಗಳಿಗೆ ಖರೀದಿ ಮಾಡೋದು ಹೇಗೆ ಅನ್ನೋ ಚಿಂತೆ ಕಾಡ್ತಿದೆ. ಕೆಲ ವರದಿಗಳಂತೂ ಮುಂದಿನ ವರ್ಷ ಮುಗಿಯುವುದರಲ್ಲಿ ಬಂಗಾರದ ಬೆಲೆ ಎಷ್ಟಾಗುತ್ತದೆ ಎಂದು ಊಹಿಸೋದು ಕೂಡ ಕಷ್ಟ ಎನ್ನುತ್ತಿವೆ. https://ainkannada.com/why-do-they-put-gold-in-the-mouth-of-a-coffin-do-you-know-this/ ದೆಹಲಿಯಲ್ಲಿ ಚಿನ್ನದ ಬೆಲೆಯೂ 1,650 ರೂಪಾಯಿ ಏರಿಕೆಯಾಗಿದ್ದು 1 ಲಕ್ಷ ರೂಪಾಯಿಗೆ ಇನ್ನೊಂದು ಹೆಜ್ಜೆ ಮಾತ್ರ ಬಾಕಿ ಇದೆ. ಅಖಿಲ ಭಾರತ ಸರಾಫಾ ಸಂಘದ ನಂತೆ ದೆಹಲಿಯಲ್ಲಿ ಶೇಕಡಾ 99.9 ರಷ್ಟು ಶುದ್ಧತೆಯ ಚಿನ್ನವು 10 ಗ್ರಾಂಗೆ 99,800 ರೂಪಾಯಿ ಆಗಿದೆ. ಕಳೆದ ಶುಕ್ರವಾರ ಇದರ ಬೆಲೆಯಲ್ಲಿ 20 ರೂಪಾಯಿ ಕಡಿಮೆಯಾಗಿ 10 ಗ್ರಾಂ ಚಿನ್ನಕ್ಕೆ 98,150 ರೂಪಾಯಿ ಇತ್ತು. ಆದರೆ ಇದೀಗ ಏಕಾಏಕಿ 1,650 ರೂಪಾಯಿ ಏರಿಕೆ ಆಗಿದ್ದರಿಂದ ಬಂಗಾರವೂ 1 ಲಕ್ಷ ರೂಪಾಯಿ ತಲುಪಲು ಕೇವಲ 200 ರೂಪಾಯಿ ಮಾತ್ರ ಬೇಕಿದೆ ಅಷ್ಟೇ. ಬಂಗಾರವು ಸ್ಥಳೀಯ…

Read More

ಸನಾತನ ಧರ್ಮದಲ್ಲಿ, ಒಬ್ಬ ವ್ಯಕ್ತಿಯ ಹುಟ್ಟಿನಿಂದ ಸಾಯುವವರೆಗೆ ಒಟ್ಟು 16 ವಿಧದ ಆಚರಣೆಗಳಿವೆ, ಅವುಗಳಲ್ಲಿ ಒಂದು ಅಂತಿಮ ಸಂಸ್ಕಾರವಾಗಿದೆ. ಈ ಎಲ್ಲಾ ಆಚರಣೆಗಳನ್ನು ಗರುಡ ಪುರಾಣದಲ್ಲಿ ವಿವರವಾಗಿ ವಿವರಿಸಲಾಗಿದೆ. https://ainkannada.com/do-you-want-to-always-look-young-then-follow-these-tips/ ಎಲ್ಲಾ ಆಚರಣೆಗಳನ್ನು ಗರುಡ ಪುರಾಣದಲ್ಲಿ ವಿವರವಾಗಿ ವಿವರಿಸಲಾಗಿದೆ. ಗರುಡ ಪುರಾಣದಲ್ಲಿ ಒಬ್ಬ ವ್ಯಕ್ತಿಯ ಹುಟ್ಟಿನಿಂದ ಸಾಯುವವರೆಗೆ ಅನೇಕ ಪ್ರಮುಖ ವಿಷಯಗಳನ್ನು ಉಲ್ಲೇಖಿಸಲಾಗಿದೆ. ಸನಾತನ ಧರ್ಮದಲ್ಲಿ ಒಬ್ಬ ವ್ಯಕ್ತಿ ಸತ್ತಾಗ ಆ ಮನೆಯಲ್ಲಿ ಗರುಡ ಪುರಾಣವನ್ನು ಓದಲಾಗುತ್ತದೆ ಮತ್ತು ಮನೆಯಲ್ಲಿ ಒಲೆಯನ್ನು ಹಚ್ಚುವುದಿಲ್ಲ ಅಥವಾ ಯಾವುದೇ ರೀತಿಯಾದ ಆಹಾರವನ್ನು ಸಿದ್ಧೊಡಿಸುವುದಿಲ್ಲ. ಅಂತಹ ಸಮಯದಲ್ಲಿ, ಸಂಬಂಧಿಕರು ಅಥವಾ ನೆರೆಹೊರೆಯವರಿಂದ ಆಹಾರ ಬರುತ್ತದೆ ಯಾರಾದರೂ ಸತ್ತ ನಂತರ, ಅವರ ಅಂತ್ಯಕ್ರಿಯೆಯ ಸಮಯದಲ್ಲಿ ಅವರ ಬಾಯಿಯಲ್ಲಿ ಚಿನ್ನ, ಗಂಗಾಜಲ ಮತ್ತು ತುಳಸಿ ಎಲೆಗಳನ್ನು ಇಡುವುದನ್ನು ನಾವು ಆಗಾಗ್ಗೆ ಕೇಳುತ್ತೇವೆ ಅಥವಾ ನೋಡುತ್ತೇವೆ. ನಾವು ಇದನ್ನು ಒಂದು ಸಂಪ್ರದಾಯವಾಗಿ ಮಾಡುತ್ತಿದ್ದರೂ, ಅದರ ಹಿಂದೆ ಧಾರ್ಮಿಕ ಮತ್ತು ಸ್ವಲ್ಪ ಮಟ್ಟಿಗೆ ವೈಜ್ಞಾನಿಕ ದೃಷ್ಟಿಕೋನವಿದೆ ಇದರ ಹಿಂದಿನ ಕಾರಣ ಹಲವರಿಗೆ…

Read More

ನೀವು ಸದಾ ಯಂಗ್ ಆಗಿ ಕಾಣಲು ಹೀಗೆ ಮಾಡಿ, ಹಾಗೆ ಮಾಡಿ ಅಂತೆಲ್ಲಾ ಬರುವ ಸಾಕಷ್ಟು ಜಾಹೀರಾತುಗಳನ್ನು ನೀವು ನೋಡಿರಬಹುದು. ಅದರಲ್ಲೂ 90ರ ದಶಕದಲ್ಲಿ ಈ ಜಾಹಿರಾತುಗಳು ತುಂಬಾ ಜನಪ್ರಿಯವಾಗಿತ್ತು. ಆದರೆ ಸಾಮಾನ್ಯವಾಗಿ ಎಲ್ಲರೂ ತಾವು ಯಾವಾಗಲೂ ಯಂಗ್ ಆಗಿ ಕಾಣಬೇಕೆಂಬ ಬಯಕೆ ಇರುತ್ತದೆ. ಹೀಗಿದ್ದರೂ ವಯಸ್ಸಾಗುವುದು ಸಹಜ ಪ್ರಕ್ರಿಯೆ. ಆದರೂ ಪ್ರತಿಯೊಬ್ಬ ವ್ಯಕ್ತಿಯೂ ತಮ್ಮ ವಯಸ್ಸಿಗಿಂತ ಕಿರಿಯರಾಗಿ ಅಂದರೆ ಯಂಗ್ ಆಗಿ ಕಾಣಬೇಕೆಂದು ಬಯಸುತ್ತಾರೆ. https://ainkannada.com/attention-motorists-will-this-fine-be-lifted-from-now-on-so-what-are-the-new-rules/ ಪ್ರತಿದಿನ ಸೂರ್ಯನ ಕಿರಣಗಳಿಗೆ ಮತ್ತು ಅತಿಯಾದ ಬಿಸಿಲಿಗೆ ಒಡ್ಡಿಕೊಳ್ಳುವುದರಿಂದ ಚರ್ಮದ ಆರೋಗ್ಯ ಹಾಳಾಗುತ್ತದೆ. ಇದರಿಂದ ಬೇಗನೆ ವಯಸ್ಸಾಗುವುದು, ಮುಖದ ಮೇಲೆ ಸೂಕ್ಷ್ಮ ರೇಖೆಗಳು ಮತ್ತು ಸುಕ್ಕುಗಳಿಂದ ಹಿಡಿದು ಕಪ್ಪು ಕಲೆಗಳು ಮತ್ತು ಚರ್ಮದ ಸ್ಥಿತಿಸ್ಥಾಪಕತ್ವದ ಕುಸಿತಕ್ಕೆ ಕಾರಣವಾಗುತ್ತದೆ. ಮೋಡ ಕವಿದ ದಿನಗಳಲ್ಲಿಯೂ ಸಹ ಪ್ರತಿದಿನ ಸನ್‌ಸ್ಕ್ರೀನ್ ಅನ್ನು ಬಳಸಿ. ನಿಮ್ಮ ಚರ್ಮದ ಪ್ರಕಾರಕ್ಕೆ ಸೂಕ್ತವಾದ ಸೂತ್ರವನ್ನು ಆರಿಸಿಕೊಳ್ಳಿ. ಜೆಲ್ ಆಧಾರಿತ ಅಥವಾ ಮ್ಯಾಟ್-ಫಿನಿಶ್ ಸನ್‌ಸ್ಕ್ರೀನ್‌ಗಳು ಎಣ್ಣೆಯುಕ್ತ ಚರ್ಮಕ್ಕೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತವೆ. ಆದರೆ…

Read More

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಸುಗಮ ಸಂಚಾರಕ್ಕಾಗಿ ಪೊಲೀಸರು ಹೊಸ ಸಂಚಾರಿ ನಿಯಮಗಳನ್ನು ರೂಪಿಸಿದ್ದಾರೆ. ವಾಹನಗಳ ಸಂಖ್ಯೆ ಹೆಚ್ಚಿದಂತೆ ಪೊಲೀಸರಿಗೆ ಟ್ರಾಫಿಕ್ ಕಂಟ್ರೋಲ್ ಮಾಡೋದೇ ದೊಡ್ಡ ಸವಾಲಾಗಿ ಬಿಟ್ಟಿದೆ. ಈ ಮಧ್ಯೆ ಸಂಚಾರಿ ನಿಯಮಗಳ ಉಲ್ಲಂಘಿಸುವವರ ಅಬ್ಬರ ಹೆಚ್ಚಾಗಿ ಬಿಟ್ಟಿದೆ. ಕಾನೂನಿನ ಭಯ ಇಲ್ಲದೇ ವಾಹನ ಸವಾರರು ನಡೆದುಕೊಳ್ತಿದ್ದಾರೆ. https://ainkannada.com/ipl-2025-another-good-news-for-rcb-after-winning-against-punjab/ ಹೀಗಾಗಿ ಅಪಘಾತಗಳನ್ನು ತಡೆಗಟ್ಟಲು ರಸ್ತೆಗಳಲ್ಲಿ ಸ್ಪೀಡ್ ಗನ್‌ ಗಳನ್ನು ಅಳವಡಿಸಲಾಗುತ್ತಿದ್ದು, ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುತ್ತಿದೆ ವಾಹನ ಮಾಲೀಕರಿಗೆ ಈ ಸ್ಪೀಡ್ ಗನ್‌ ಗಳ ಬಗ್ಗೆ ಹಲವು ಅನುಮಾನಗಳಿವೆ. ಕಡಿಮೆ ವೇಗದಲ್ಲಿ ವಾಹನ ಚಲಾಯಿಸಿದ್ದಕ್ಕೂ ದಂಡ ವಿಧಿಸಲಾಗುತ್ತಿರುವುದಕ್ಕೆ ಅನೇಕ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ಮುಂದೆ ಜನರಿಗೆ ಈ ಸಮಸ್ಯೆ ತಪ್ಪಲಿದೆ. ಈ ವರ್ಷದ ಜುಲೈ 1 ರ ನಂತರ ಪರಿಸ್ಥಿತಿ ಬದಲಾಗುತ್ತದೆ. ಹೊಸ ನಿಯಮ ಬರಲಿದೆ. ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಸಂಚಾರ ನಿಯಮಗಳ ಜಾರಿಯಲ್ಲಿ ಪಾರದರ್ಶಕತೆಯನ್ನು ತರಲು ಗ್ರಾಹಕ ವ್ಯವಹಾರಗಳ ಇಲಾಖೆಯು ಕಾನೂನು ಮಾಪನಶಾಸ್ತ್ರ ನಿಯಮಗಳು, 2011 ರ ಅಡಿಯಲ್ಲಿ…

Read More