ಬೆಂಗಳೂರು:- 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ವಿರುದ್ಧ ಕೋರ್ಟ್ ಖಾಸಗಿ ಶಾಲೆ ಒಕ್ಕೂಟ ಕೋರ್ಟ್ ಮೊರೆ ಹೋಗಿದೆ. https://ainkannada.com/blackmailed-by-ex-lover-young-woman-hangs-herself-out-of-fear-for-her-dignity-what-was-in-the-death-note/ ಒಂದನೇ ತರಗತಿ ದಾಖಲಾತಿಗೆ ಕಡ್ಡಾಯ 6 ವರ್ಷ ತುಂಬಿರಬೇಕು ಎಂಬ ಆದೇಶ ಸಂಘರ್ಷಕ್ಕೆ ಕಾರಣವಾಗಿತ್ತು. ಪೋಷಕರ ಒತ್ತಾಯಕ್ಕೆ ಶಿಕ್ಷಣ ಇಲಾಖೆ ಈ ವರ್ಷಕ್ಕೆ ವಿನಾಯಿತಿಯನ್ನ ನೀಡಿದೆ. ಆದರೆ ಈ ವಿನಾಯತಿ ಈಗ ಮತ್ತೊಂದು ಹೊಸ ಸಂಘರ್ಷಕ್ಕೆ ಕಾರಣವಾಗಿದೆ. ಶಾಲಾ ಶಿಕ್ಷಣ ಇಲಾಖೆ ಹಾಗೂ ಸಚಿವರು ಸುದ್ದಿಗೋಷ್ಠಿ ಮಾಡಿ 2025-26 ನೇ ಸಾಲಿಗೆ ಸಿಮಿತಗೊಳಸಿ ಒಂದು ವರ್ಷ ವಯೋಮಿತಿ ಸಡಲಿಕೆ ಮಾಡಿದೆ. ಈ ವರ್ಷ 1ನೇ ತರಗತಿ ದಾಖಲಾತಿಗೆ 5.5 ವರ್ಷ ತುಂಬಿರಬೇಕು ಜೊತೆಗೆ ಯುಕೆಜಿ ಅಥವಾ ಅಂಗನವಾಡಿ ಗ್ರೇಡ್ – 2 ಕಂಪ್ಲಿಟ್ ಆಗಿರಬೇಕು ಅಂತಾ ಕಂಡಿಷನ್ ಮೇಲೆ ಅವಕಾಶ ನೀಡಿದೆ. ಮುಂದಿನ ವರ್ಷ ಕಡ್ಡಾಯ 6 ವರ್ಷ ಒಂದನೇ ತರಗತಿ ದಾಖಲಾತಿಗೆ ತುಂಬಿರಬೇಕು ಅಂತಾ ಹೇಳಿದೆ. ಆದರೆ ಇದು ಸಿಬಿಎಸ್ಇ ಹಾಗೂ ಐಸಿಎಸ್ಇ ಶಾಲೆಗಳು…
Author: AIN Author
ಗದಗ:- ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮಾಜಿ ಪ್ರೇಮಿ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಮರ್ಯಾದೆಗೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ. ಸಾಯಿರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡ ಯುವತಿ. https://ainkannada.com/shreyas-showed-greatness-despite-kohlis-scolding-what-did-he-say-about-virat/ ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೇ 8ರಂದು ಸಾಯಿರಾಬಾನು ನದಾಫ್ ಮದುವೆ ನಿಗದಿಯಾಗಿತ್ತು. ಹಾಗಾಗಿ ಇತ್ತ ಮನೆಯಲ್ಲಿ ಅದ್ಧೂರಿ ಮದುವೆಗೆ ಭರ್ಜರಿ ತಯಾರಿ ಕೂಡ ನಡೆದಿತ್ತು. ಸಾಯಿರಾಬಾನು ಖುಷಿಯಿಂದಲೇ ತಾಳಿ, ಬಟ್ಟೆ ಎಲ್ಲವನ್ನು ಖರಿಸಿದ್ದರು. ಇಂದು ಪೋಷಕರು ಮದುವೆ ವಸ್ತುಗಳ ಖರೀದಿಗೆ ಹೋದಾಗ ಸಾಯಿರಾಬಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಬಾಗಿಲು ತೆರೆದು ನೋಡಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿದುಬಂದಿದೆ. ಮಗಳ ಸ್ಥಿತಿ ನೋಡಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಮದುವೆ ಸಂಭ್ರಮದಲ್ಲಿ ಇದ್ದ ಮನೆಯಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ ಐದು ವರ್ಷಗಳ ಹಿಂದೆ ಮೈಲಾರಿ ಜೊತೆ ಸಾಯಿರಾಬಾನು ನದಾಫ್ ಲವ್ ಬ್ರೇಕಪ್ ಆಗಿತ್ತು. ನಿನಗೆ ತೊಂದರೆ ಕೊಡಲ್ಲ ಅಂತ ಮಾಜಿ ಪ್ರೇಮಿ…
ಮಂಡ್ಯ : ಮೈಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೆಜ್ಜಲಗೆರೆ ಬಳಿ ಕಾರು ಮುಂದೆ ಹೋಗುತ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಿ, ಸಾಫ್ಟವೇರ್ ಎಂಜಿನಿಯರ್ ಅಶ್ವಿನಿ (33) ಮೃತಪಟ್ಟವರು. ಅಶ್ವಿನಿ ಅವರ ಪತಿ ಸಾಫ್ಟ್ವೇರ್ ಎಂಜಿನಿಯರ್ ಶ್ರೀಕಾಂತ್ ಭಟ್ (37) ಮತ್ತು 2 ವರ್ಷದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರವಾಸ ಮುಗಿಸಿಕೊಂಡು ಮೈಸೂರಿನಿಂದ ಬೆಂಗಳೂರು ಕಡೆ ಹೋಗುತ್ತಿದ್ದಾಗ ಭಾನುವಾರ ಮಧ್ಯಾಹ್ನ 3 ಗಂಟೆಯಲ್ಲಿ ಈ ಅಪಘಾತ ಸಂಭವಿಸಿದೆ. https://ainkannada.com/parents-disagree-with-living-together-young-man-commits-suicide-by-jumping-onto-train-tracks/ ಶ್ರೀಕಾಂತ್ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದವರು. ಕೆಲಸದ ನಿಮಿತ್ತ ಪ್ರಸ್ತುತ ಬೆಂಗಳೂರು ನಗರದಲ್ಲಿ ವಾಸವಾಗಿದ್ದಾರೆ. ಈ ಸಂಬಂಧ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿಯಾಗಿ ಗೆದ್ದು ಬೀಗಿದೆ. ಈ ಗೆಲುವಿಗೆ ಮುಖ್ಯ ರುವಾರಿ ಪಡಿಕ್ಕಲ್ ಹಾಗೂ ಕೊಹ್ಲಿ ಎಂದರೆ ತಪ್ಪಾಗೋದಿಲ್ಲ. ಆದರೆ ಎಲ್ಲವೂ ಸರಿ ಕೊಹ್ಲಿ ಕೊಂಚ ಸೆಲೆಬ್ರೇಷನ್ ಮಿತಿ ಮೀರಿದ್ದು ಯಾಕೆ? ಜಗಳ ಆದರೂ ಶ್ರೇಯಸ್ ಆಡಿದ ಮಾತುಗಳು ಅಭಿಮಾನಿಗಳ ಮನಮುಟ್ಟಿದೆ ಹಾಗೂ ಶ್ರೇಯಸ್ ಅವರ ಗುಣಕ್ಕೆ ಫಿದಾ ಆಗಿದ್ದಾರೆ. https://ainkannada.com/youve-been-here-for-20-years-even-your-coach-knows-kirik-kohlis-behavior-has-crossed-the-line/ ಹೌದು ಗೆಲುವಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಗುರಿಯಾಗಿಸಿ ಸಂಭ್ರಮಿಸಿದ್ದರು. ಅತಿರೇಕಕ್ಕೆ ಕಾರಣವಾಗಿದ್ದ ಈ ಸಂಭ್ರಮಾಚರಣೆಯಿಂದ ಅಯ್ಯರ್ ಕೂಡ ಕೋಪಗೊಂಡಿದ್ದರು. ಇದಾಗ್ಯೂ ಪಂದ್ಯದ ಬಳಿಕ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸಣ್ಣತನ ಮೆರೆದಿಲ್ಲ ಎಂಬುದು ವಿಶೇಷ. ಈ ಸೋಲಿನ ಬಳಿಕ ಮಾತನಾಡಿದ ಶ್ರೇಯಸ್ ಅಯ್ಯರ್, ನಮ್ಮ ತಂಡದ ಹೆಚ್ಚಿನ ಬ್ಯಾಟ್ಸ್ಮನ್ಗಳು ಮೊದಲ ಎಸೆತದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡುತ್ತಿದ್ದಾರೆ. ಆದರೆ ನಾವು ಮೊದಲು ಬ್ಯಾಟ್ ಮಾಡುವಾಗ ವಿಕೆಟ್…
ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿಯಾಗಿ ಗೆದ್ದು ಬೀಗಿದೆ. https://ainkannada.com/everything-is-fake-rcb-fans-you-believed-this-lie/ ಈ ಗೆಲುವಿನ ಬಳಿಕ ಕೊಹ್ಲಿಯ ಸೆಲೆಬ್ರೇಷನ್ ವರ್ತನೆ ಕೊಂಚ ಮಿತಿ ಮೀರಿದೆ ಎನ್ನಲಾಗಿದೆ. ಮೊದಲಿಗೆ ವಿರಾಟ್ ಕೊಹ್ಲಿ ಹಾಗೂ ಪಂಜಾಬ್ ಕಿಂಗ್ಸ್ ಸ್ಪಿನ್ನರ್ ಹರ್ಪ್ರೀತ್ ಬ್ರಾರ್ ಮಾತಿನ ಚಕಮಕಿ ನಡೆಸಿದರೆ, ಆ ಬಳಿಕ ಶ್ರೇಯಸ್ ಅಯ್ಯರ್ ಹಾಗೂ ಕಿಂಗ್ ಕೊಹ್ಲಿ ಕಿತ್ತಾಡಿಕೊಂಡಿದ್ದರು. ಅದರಲ್ಲೂ ಹರ್ಪ್ರೀತ್ ಬ್ರಾರ್ ನಡುವಣ ಮಾತಿನ ಚಕಮಕಿ ನಡುವೆ ವಿರಾಟ್ ಕೊಹ್ಲಿ, ಎಲ್ಲೆ ಮೀರಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಮಾತಿನ ನಡುವೆ ಕಿಂಗ್ ಕೊಹ್ಲಿ ನಾನು 20 ವರ್ಷದಿಂದ ಇಲ್ಲಿದ್ದೀನಿ. ನಿನ್ನ ಕೋಚ್ ಕೂಡ ನನಗೆ ಗೊತ್ತಿದೆ ಎಂದು ಹೇಳುತ್ತಿರುವುದು ಸ್ಟಂಪ್ ಮೈಕ್ನಲ್ಲಿ ಸೆರೆಯಾಗಿದೆ. ಇದಾಗ್ಯೂ ವಿರಾಟ್ ಕೊಹ್ಲಿ ಯುವ ಸ್ಪಿನ್ನರ್ನನ್ನು ಟಾರ್ಗೆಟ್ ಮಾಡಿದ್ಯಾಕೆ ಎಂಬುದು ಮಾತ್ರ ಬಹಿರಂಗವಾಗಿಲ್ಲ. ವಿಶೇಷ ಎಂದರೆ ಇದೇ…
ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿಯಾಗಿ ಗೆಲುವು ಸಾಧಿಸಿದೆ. ಈ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಅವರ ಸಂಭ್ರಮ ವಿಚಿತ್ರ ಆಗಿತ್ತು. ಇದಕ್ಕೆ ಹಲವರು ಇದು ಕೊಹ್ಲಿ ರಿವೆಂಜ್ ತೀರಿಸಿಕೊಂಡಿರೋದು ಎಂಬ ಕಾಮೆಂಟ್ ಮಾಡುತ್ತಿದ್ದರು. https://ainkannada.com/retired-dgp-omprakash-murder-case-wife-pallavi-left-explosive-case-in-front-of-police/ ಹೌದು, ಈ ಗೆಲುವಿನ ಬಳಿಕ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಕಿಚಾಯಿಸುವಂತೆ ಸಂಭ್ರಮಿಸಿದ್ದರು. ಇದು ಶ್ರೇಯಸ್ ಅಯ್ಯರ್ ಅವರ ಸೌಂಡ್ ಸೆಲೆಬ್ರೇಷನ್ಗೆ ರಿಯಾಕ್ಷನ್ ಎಂದು ನೀವಂದುಕೊಂಡರೆ ನಿಮ್ಮ ಊಹೆ ತಪ್ಪು. ಏಕೆಂದರರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ವಿರುದ್ಧ ಗೆದ್ದ ಬಳಿಕ ಶ್ರೇಯಸ್ ಅಯ್ಯರ್ RCB RCB… ಎಂಬ ನಿಮ್ಮ ಶಬ್ದ ಕೇಳಿಸುತ್ತಿಲ್ಲ ಎಂದು ಶ್ರೇಯಸ್ ಅಯ್ಯರ್ ಯಾವುದೇ ಸನ್ನೆ ಮಾಡಿರಲಿಲ್ಲ. ಬದಲಾಗಿ ಮುಲ್ಲನ್ಪುರ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆದ್ದ ಬಳಿಕ ಶ್ರೇಯಸ್ ಅಯ್ಯರ್ ಮಾಡಿದ ಸನ್ನೆಯನ್ನೇ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ. ಕೆಕೆಆರ್ ವಿರುದ್ಧ ಗೆದ್ದ ಬಳಿಕ ಶ್ರೇಯಸ್ ಅಯ್ಯರ್, ಪಂಜಾಬ್…
ಬೆಂಗಳೂರು:- ನಿವೃತ್ತ ಡಿಜಿಪಿ ಓಂಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ ಬಯಲಾಗುತ್ತಿದೆ. ಪೊಲೀಸರ ಮುಂದೆ ಕೊಲೆ ಆರೋಪಿ ಪಲ್ಲವಿ ಹೇಳಿಕೆ ನೀಡಿದ್ದು, ಕಳೆದ ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪದೇ ಪದೇ ಗನ್ ತಂದು ನನಗೆ ಮತ್ತು ನನ್ನ ಮಗಳಿಗೆ ಶೂಟ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ರು. https://ainkannada.com/rain-news-heavy-rains-in-these-districts-of-karnataka-today/ ಬೆಳಗ್ಗೆಯಿಂದ ಬೇರೆ ಬೇರೆ ವಿಚಾರಕ್ಕೆ ಮನೆಯಲ್ಲಿ ಜಗಳ ಶುರುವಾಗಿತ್ತು. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋದಾಗ ನಮ್ಮನ್ನೇ ಕೊಲೆ ಮಾಡಲು ಓಂಪ್ರಕಾಶ್ ಯತ್ನ ನಡೆಸಿದ್ರು. ಈ ವೇಳೆ ನಮ್ಮನ್ನು ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದ್ವೀ. ನಂತರ ಓಂಪ್ರಕಾಶ್ ಮೇಲೆ ಖಾರದ ಪುಡಿ ಹಾಗು ಅಡುಗೆ ಆಯಿಲ್ ಸುರಿದಿದ್ದರು. ನಂತರ ಓಂಪ್ರಕಾಶ್ ಕೈಕಾಲು ಕಟ್ಟಿ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಪಲ್ಲವಿ ಚುಚ್ಚಿದ್ದಾರೆ. ನಂತರ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಸಂಜೆ ಸ್ಥಳೀಯ ಪೊಲೀಸರಿಗೆ ಪಲ್ಲವಿ ಮಾಹಿತಿ ನೀಡಿದ್ದಾರೆ. ಪ್ರಕರಣದಲ್ಲಿ ಪತ್ನಿ ಪಲ್ಲವಿ A-1 ಆರೋಪಿ ಆಗಿದ್ದಾರೆ. ಪ್ರಕರಣ ದಾಖಲಾದ ಕೂಡಲೇ ಪೊಲೀಸರು,…
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ https://ainkannada.com/ipl-2025-another-defeat-to-chennai-mumbai-won-against-csk/ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಭವಿಷ್ಯ ಹೇಳಿದೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ದಾಖಲಿಸಿದೆ. https://ainkannada.com/retired-dgp-om-prakash-murder-case-vvip-security/ ಈ ಸೀಸನ್ನಲ್ಲಿ ತನ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಿತ್ತು. ಆ ಪಂದ್ಯವನ್ನು ಚೆನ್ನೈ 4 ವಿಕೆಟ್ಗಳಿಂದ ಗೆದ್ದುಕೊಂಡಿತ್ತು. ಆದರೆ ಇದೀಗ ಈ ಪಂದ್ಯವನ್ನು ಗೆಲ್ಲುವ ಮೂಲಕ ಹಳೆಯ ಸೋಲಿಗೆ ಮುಂಬೈ ಸೇಡು ತೀರಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 176 ರನ್ ಗಳಿಸಲಷ್ಟೇ ಶಕ್ತವಾಯಿತು. ಮುಂಬೈ ಕರಾರುವಕ್ಕಾದ ದಾಳಿ ಮುಂದೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ 11 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 73 ರನ್ ಗಳಿಸಲಷ್ಟೇ ಶಕ್ತವಾಯಿತು. ಇದಾದ ನಂತರ, ರವೀಂದ್ರ ಜಡೇಜಾ ಮತ್ತು ಶಿವಂ ದುಬೆ ತಲಾ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಉತ್ತಮ ಸ್ಕೋರ್ಗೆ ಕೊಂಡೊಯ್ದರು. ಶಿವಂ ದುಬೆ 32 ಎಸೆತಗಳಲ್ಲಿ 50 ರನ್ ಗಳಿಸಿದರೆ, ರವೀಂದ್ರ ಜಡೇಜಾ 35 ಎಸೆತಗಳಲ್ಲಿ 53 ರನ್…
ಬೆಂಗಳೂರು:- ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿ ವಿ ಐ ಪಿ ಸೆಕ್ಯುರಿಟಿ ಇನ್ಸ್ಪೆಕ್ಟರ್ ಶ್ರೀನಿವಾಸ್ ಪ್ರತಿಕ್ರಿಯೆ ನೀಡಿದ್ದಾರೆ. https://ainkannada.com/kohli-padikkals-half-century-game-rcb-won-by-7-wickets-against-punjab/ ಭಾನುವಾರ ಮಧ್ಯಾಹ್ನ 3:05 ನಿಮಿಷಕ್ಕೆ ಕಾಲ್ ಮಾಡಿದ್ರು. ತುಂಬಾ ಚೆನ್ನಾಗಿ ಮಾತನಾಡಿದ್ರ. ಮನೆಗೆ ಬರ್ತೀನಿ ಸಾರ್ ಅಂದೆ. ಆದ್ರೆ ಬೇಡ ಬರಬೇಡ ಮನೆಯಲ್ಲಿ ಮೇಡಮ್ ಇರ್ತಾರೆ ಅಂದ್ರು. ತುಂಬಾ ಕ್ರೂರವಾಗಿ ಕೊಲೆ ಮಾಡಿದ್ದಾರೆ. ಕೊಲೆ ಹಿಂದಿನ ಉದ್ದೇಶ ಏನು ಅನ್ನೋದು ಗೊತ್ತಾಗಿಲ್ಲ. ರೂಢಿಗತವಾಗಿ ಕೊಲೆ ಮಾಡಿದ್ದಾರೆ. ಕುತ್ತಿಗೆ ಭಾಗಕ್ಕೆ ಇರಿದಿದ್ದಾರೆ. ಎರಡು ಬಾರಿ ಇರಿದಿದ್ದಾರೆ. ತಲೆಗೂ ಕೂಡ ಚಾಕು ಹಾಕಿದ್ದಾರೆ. ಉಸಿರು ಇರುವಾಗಲೇ ಕ್ರೂರವಾಗಿ ಕೊಲೆ ಮಾಡಿದ್ದಾರೆ ಒಳ್ಳೆಯ ಅಧಿಕಾರಿ ಅವರು. ಇವರೇನ ಕೊಲೆ ಆಗಿರೋದು ಅಂತ ಅನಿಸ್ತಾ ಇದೆ. ಮೇಡಮ್ ಅವರು ಮನೆಯ ಬಳಿ ಬರೋಕೆ ಬಿಡ್ತಾ ಇರಲಿಲ್ಲ. ಫ್ಯಾಮಿಲಿ ವಿಚಾರದ ಬಗ್ಗೆ ಗೊತ್ತಿಲ್ಲ. ಮಾನಸಿಕವಾಗಿ ನೊಂದಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಟ್ರೀಟ್ ಮೆಂಟ್ ಮಾಡಿಸ್ತಾ ಇದೀನಿ ಅಂದ್ರು. ಸಾಹೇಬ್ರು ಯಾರನ್ನಾದ್ರೂ ಭೇಟಿ…