ಬೆಂಗಳೂರು:- ಅಡುಗೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಎದುರಾಗಿದ್ದು, ಬೆಂಗಳೂರಲ್ಲಿ ತೆಂಗಿನ ಕಾಯಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ತೆಂಗಿನಕಾಯಿ ಬೆಲೆ ಗರಿಷ್ಠ ಮಟ್ಟಕ್ಕೆ ಹೋಗಿದ್ದು, ತೆಂಗಿನಕಾಯಿ ಕೊಳ್ಳುವುದು ಜೇಬಿಗೆ ಭಾರವಾಗಿದೆ. https://ainkannada.com/harassment-by-wife-mother-in-law-hanged-engineer/ ದೈನಂದಿನ ಜೀವನದಲ್ಲಿ ತೆಂಗಿನಕಾಯಿ ಬಳಸುವ ಗ್ರಾಹಕರಿಗೆ ಭಾರೀ ಹೊಡೆತ ಬಿದ್ದಿದೆ. ಪ್ರತಿ ಕೆ.ಜಿ.ಗೆ ₹65 ರಿಂದ ₹85ರಂತೆ ತೆಂಗಿನಕಾಯಿ ಮಾರಾಟವಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ತೆಂಗಿನಕಾಯಿ ಅತ್ಯಧಿಕ ದರ ತಲುಪಿದೆ. ಅಲ್ಲದೇ ಶತಕ ಬಾರಿಸುವ ಹಂತಕ್ಕೆ ಬಂದಿದೆ. ಈ ಬಾರಿ ಬೇಸಿಗೆಯಲ್ಲಿ ಕರ್ನಾಟಕದ ಎಳನೀರಿಗೆ ನಮ್ಮ ರಾಜ್ಯ ಹಾಗೂ ಬೇರೆ ರಾಜ್ಯಗಳಿಗೆ ಸಿಕ್ಕಾಪಟ್ಟೆ ಬೇಡಿಕೆ ಇತ್ತು. ಎಳನೀರು ಭರ್ಜರಿ ಮಾರಾಟವಾದ ಹಿನ್ನೆಲೆಯಲ್ಲಿ ಈಗ ತೆಂಗಿನಕಾಯಿಯ ಇಳುವರಿ ಕಡಿಮೆ ಆಗಿದೆ
Author: AIN Author
ಲಕ್ನೋ: ಪತ್ನಿ ಮತ್ತು ಆಕೆಯ ಮನೆಯವರ ವಿರುದ್ಧ ಕಿರುಕುಳ ಆರೋಪ ಮಾಡಿ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಇಟಾವಾದಲ್ಲಿ ಈ ಘಟನೆ ನಡೆದಿದೆ. 33 ವರ್ಷದ ಎಂಜಿನಿಯರ್ ಮೋಹಿತ್ ಯಾದವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿದ್ದು, ಅದರಲ್ಲಿ ತಮ್ಮ ಅತ್ತೆ-ಮಾವ ಬೆದರಿಕೆಯೊಡ್ಡಿದ್ದಾರೆ ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ‘ನನ್ನ ಮರಣದ ನಂತರವೂ ನನಗೆ ನ್ಯಾಯ ಸಿಗದಿದ್ದರೆ, ನನ್ನ ಅಸ್ಥಿಯನ್ನು ಚರಂಡಿಗೆ ಎಸೆಯಿರಿ’ ಎಂದು ಹೇಳಿಕೊಂಡಿದ್ದಾರೆ. https://ainkannada.com/shooting-indian-student-dies-in-canada/ ಯಾದವ್ ಕಳೆದ ಗುರುವಾರ ಇಟಾವಾದ ಜಾಲಿ ಹೋಟೆಲ್ಗೆ ಚೆಕ್ ಇನ್ ಆಗಿದ್ದರು. ಅವರು ಕೊಠಡಿಯಿಂದ ಹೊರಬರದೇ ಇದ್ದಾಗ ಸಿಬ್ಬಂದಿಗೆ ಅನುಮಾನ ಬಂದು ರೂಮ್ ಪರಿಶೀಲನೆ ನಡೆಸಿದಾಗ ಯಾದವ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಔರೈಯಾ ಜಿಲ್ಲೆಯ ನಿವಾಸಿಯಾಗಿದ್ ಯಾದವ್, ಸಿಮೆಂಟ್ ಕಂಪನಿಯಲ್ಲಿ ಫೀಲ್ಡ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. 2023ರಲ್ಲಿ ಪ್ರಿಯಾ ಎಂಬುವವರನ್ನು ಮದುವೆಯಾಗಿದ್ದರು. ಎರಡು ತಿಂಗಳ ಹಿಂದಷ್ಟೇ ಬಿಹಾರದಲ್ಲಿ…
ಬೆಂಗಳೂರು:- ಕೋರಮಂಗಲ, ಆಡುಗೋಡಿ ಸೇರಿ ಹಲವೆಡೆ ಭಾರೀ ಮಳೆ ಆಗಿದೆ. ಕೋರಮಂಗಲ, ಆಡುಗೋಡಿ, ಎಲೆಕ್ಟ್ರಾನ್ ಸಿಟಿ ಸುತ್ತಮುತ್ತ ಇಂದು ಮಳೆಯಾಗಿದ್ದು, ಬಿಸಿಲ ಬೇಗೆಗೆ ಕಾದಿದ್ದವರು ಫುಲ್ ಕೂಲ್ ಆಗಿದ್ದಾರೆ. https://ainkannada.com/kohli-is-no-1-on-instagram-too-how-many-crores-does-king-virat-earn-per-post/ ನಗರದ ಹಲವೆಡೆ ಇಂದು ಸಂಜೆ ಮುಂಗಾರು ಪೂರ್ವ ಮಳೆಯಾಗಿದ್ದು, ರಸ್ತೆಯಲ್ಲಿ ಸಿಲುಕಿದ್ದ ವಾಹನ ಸವಾರರು ಪರದಾಡುವ ದೃಶ್ಯ ಕಂಡು ಬಂದಿದೆ. ಕೆಲ ದಿನಗಳಿಂದ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ಬೆಂಗಳೂರಲ್ಲಿ ಮುಂದಿನ ಕೆಲವು ದಿನಗಳು ವರುಣನ ಅಬ್ಬರ ಮುಂದುವರೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಏಪ್ರಿಲ್ 24, 25ರಂದು ಮತ್ತೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇನ್ನು ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಯ ಒಂದು ಅಥವಾ ಎರಡು ಕಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಸಮಂತಾ ರುತ್ ಪ್ರಭು ನಿರ್ದೇಶಕ ರಾಜ್ ನಿಡಿಮೋರು ಜೊತೆಗೆ ಡೇಟಿಂಗ್ ನಲ್ಲಿದ್ದಾರೆ ಅನ್ನೋ ವದಂತಿಗಳ ನಡುವೆ ತಿರುಪತಿಯಲ್ಲಿ ಇಬ್ಬರು ಒಟ್ಟಾಗಿ ಕಾಣಸಿಕೊಂಡಿದ್ದಾರೆ. ಶನಿವಾರ ನಿರ್ದೇಶಕ ರಾಜ್ ನಿಡಿಮೋರು, ನಟಿ ಸಮಂತ್ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಣಿಸಿಕೊಂಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಡಿವೋರ್ಸ್ ನಂತರ ಸಮಂತಾ ನಿಡಿಮೋರು ಜೊತೆಗೆ ಡೇಟಿಂಗ್ ನಲ್ಲಿದ್ದಾರೆ ಅನ್ನೋ ಸುದ್ದಿ ಸಖತ್ ಸದ್ದು ಮಾಡಿತ್ತು. ಸದ್ಯ ವೆಬ್ ಸಿರೀಸ್, ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸಮಂತಾ ನಿಡಿಮೋರು ಜೊತೆಗೆ ಸಾಂಪ್ರದಾಯಿಕ ಉಡುಗೆಯಲ್ಲಿ ತಿರುಪತಿ ತಿಮ್ಮಪ್ಪನ ಸನ್ನಧಿಗೆ ಭೇಟಿ ನೀಡಿ, ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸದ್ಯ ಇಬ್ಬರು ಒಟ್ಟಿಗೆ ದೇವಸ್ಥಾನದೊಳಗೆ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. https://ainkannada.com/kannada-actress-ready-to-tie-the-knot-with-a-cricketer/ ಸಾಂಪ್ರದಾಯಿಕ ದಿರಿಸಿನಲ್ಲಿ ದೇವಾಲಯಕ್ಕೆ ಆಗಮಿಸಿದ ಇವರಿಬ್ಬರೂ ದೇವರ ಆಶೀರ್ವಾದ ಪಡೆದಿದ್ದಾರೆ. ಸಮಂತಾ ಆಗಾಗ್ಗೆ ದೇವಾಲಯಕ್ಕೆ ಭೇಟಿ ನೀಡುತ್ತಿರುತ್ತಾರೆ. ಸಮಂತಾ ಗುಲಾಬಿ ಸಲ್ವಾರ್ ಸೂಟ್ ನಲ್ಲಿದ್ದರೆ, ರಾಜ್ ನಿಡಿಮೋರು ನೀಲಿ ಶರ್ಟ್ ಮತ್ತು ಬಿಳಿ ಪಂಚೆಯಲ್ಲಿ ಕಾಣಿಸಿಕೊಂಡಿದ್ದಾರೆ.…
ಇನ್ಸ್ಟಾಗ್ರಾಮ್ ಸದ್ಯ ವಿಶ್ವದ ಹೆಚ್ಚಿನ ಯುವಕ ಯುವತಿಯರನ್ನ ಆವರಿಸುವ ಸಾಮಾಜಿಕ ಜಾಲತಾಣವಾಗಿದೆ. ಕೆಲವರಂತೂ ಇದನ್ನೇ ಬಂಡವಾಳ ಮಾಡಿಕೊಂಡು ಹಣ ಸಂಪಾದನೆ ಮಾಡುತ್ತಿದ್ದಾರೆ. ಈ ಇನ್ಸ್ಟಾದಲ್ಲಿ ಕ್ರಿಕೆಟರ್ಸ್, ಬಾಲಿವುಡ್ ಸೆಲೆಬ್ರೆಟಿಗಳು, ಖ್ಯಾತ ಉದ್ಯಮಿಗಳು ಮಿಲಿಯನ್ ಗಟ್ಟಲೇ ಫಾಲೋವರ್ಸ್ ಹೊಂದಿದ್ದಾರೆ. ಎಷ್ಟು ಜನರನ್ನ ಫಾಲೋವರ್ಸ್ ಹೊಂದಿದ್ದಾರೋ ಅದಕ್ಕಿಂತ ಡಬಲ್ ಸಂಪಾದನೆ ಮಾಡ್ತಿದ್ದಾರೆ ಎನ್ನಬಹುದು. https://ainkannada.com/parents-disagree-with-living-together-young-man-commits-suicide-by-jumping-onto-train-tracks/ ವಿರಾಟ್ ಕೊಹ್ಲಿ ಕೂಡ ಇನ್ಸ್ಟಾದಲ್ಲಿ 271 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಅಂದರೆ ಕೊಹ್ಲಿ ಅವರ ಇನ್ಸ್ಟಾವನ್ನು 27,10,00,000 ಜನರು ಫಾಲೋ ಮಾಡುತ್ತಿರುವುದು ವಿಶೇಷ. ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಸ್ಟಾರ್ ಕ್ರಿಕೆಟರ್ ಕೊಹ್ಲಿ ಆಗಿದ್ದಾರೆ. ಹೀಗಾಗಿ ಇವರ ಇನ್ಸ್ಟಾ ಖಾತೆಯಲ್ಲಿ ಒಂದು ಪೋಸ್ಟ್ ಶೇರ್ ಮಾಡಿದ್ರೆ ಫಾಲೋವರ್ಸ್ಗೆಲ್ಲಾ ತಲುಪುತ್ತದೆ ಎಂದು ದೊಡ್ಡ ದೊಡ್ಡ ಕಂಪನಿಗಳು ಕೊಹ್ಲಿ ಹಿಂದೆ ಬೀಳುತ್ತಿವೆ. ತಮ್ಮ ಬ್ರ್ಯಾಂಡ್ ಪ್ರಚಾರ ಮಾಡುವುದಕ್ಕಾಗಿ ವಿರಾಟ್ ಕೊಹ್ಲಿ ಅವರಿಗೆ ಭಾರೀ ಮೊತ್ತದಲ್ಲಿ ಹಣ ಪಾವತಿ ಮಾಡಿ ಅವರ ಇನ್ಸ್ಟಾದಲ್ಲಿ ಜಾಹೀರಾತು ಶೇರ್ ಮಾಡುತ್ತಾರೆ ಎಂದು ಹೇಳಲಾಗುತ್ತದೆ. ಹೀಗಾಗಿಯೇ ವಿರಾಟ್…
ಕಲಬುರಗಿ: ಲಿವಿಂಗ್ ಟುಗೆದರ್ಗೆ ಮನೆಯವರು ವಿರೋಧಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ನಾಗನಹಳ್ಳಿಯಲ್ಲಿ ನಡೆದಿದೆ. ಕುಮಸಿ ಗ್ರಾಮದ ಶಿವಕುಮಾರ್ (28) ಮೃತ ಯುವಕನಾಗಿದ್ದು. ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಕುಮಾರ್ ಮಹಿಳೆಯೊಂದಿಗೆ ಲಿವಿಂಗ್ ಟುಗೆದರ್ ರಿಲೇಷನ್ ನಲ್ಲಿದ್ದ. ಈ ಬಗ್ಗೆ ತಮ್ಮ ಮನೆಯವರಿಗೆ ತಿಳಿಸಿದ್ದ. ಆದರೆ ಇದಕ್ಕೆ ಮನೆಯವರು ನಿರಾಕರಿಸಿದ್ದಕ್ಕೆ, ಲಿವಿಂಗ್ ಟುಗೆದರ್ನಲ್ಲಿದ್ದ ಮಹಿಳೆಗೆ ಕರೆಮಾಡಿ ಬಳಿಕ ನಾಗನಹಳ್ಳಿ ರೈಲ್ವೆ ಹಳಿಯ ಬಳಿ ತೆರಳಿ ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಸ್ಥಳಕ್ಕೆ ಬಂದು ಆತನ ರಕ್ಷಣೆಗೆ ಮುಂದಾಗಿದ್ದ ಯುವತಿ ಕೂಡ ಗಾಯಗೊಂಡಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. https://ainkannada.com/three-fraudsters-arrested-for-opening-bank-accounts-and-stealing-money/ ಸದ್ಯ ಈ ಸಂಬಂಧ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನವವಿವಾಹಿತೆ ಮಂಗಳಮುಖಿಯ ಬರ್ಬರ ಕೊಲೆ ನಡೆದಿರುವ ಘಟನೆ ಬೆಂಗಳೂರಿನ ಗಾಯತ್ರಿ ಲೇಔಟ್ನಲ್ಲಿ ಜರುಗಿದೆ. https://ainkannada.com/shooting-indian-student-dies-in-canada/ 40 ವರ್ಷದ ತನುಶ್ರೀ ಮೃತ ಮಂಗಳಮುಖಿ. ಮೂರು ತಿಂಗಳ ಹಿಂದೆ ಜಗನ್ನಾಥ್ ಎಂಬುವರ ಜೊತೆ ತನುಶ್ರೀ ವಿವಾಹವಾಗಿತ್ತು. ಮೂರು ದಿನಗಳ ಹಿಂದೆಯೇ ತನುಶ್ರೀಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ತನುಶ್ರೀಯ ಪತಿ ಜಗನ್ನಾಥ್ ಮತ್ತು ಮನೆಗೆಲಸದಾಕೆ ಪರಾರಿಯಾಗಿದ್ದಾರೆ. ತನುಶ್ರೀ ಅವರು ಸಂಗಮ ಎಂಬ ಹೆಸರಿನ ಎನ್ಜಿಒ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಹ್ಯಾಮಿಲ್ಟನ್:- ಗುಂಡಿನ ದಾಳಿಗೆ ಭಾರತೀಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕೆನಡಾದಲ್ಲಿ ಜರುಗಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಗುಂಡಿಗೆ ಗುರಿಯಾಗಿದ್ದಾಳೆ. https://ainkannada.com/police-constable-raped-fir-filed-against-army-officer/ ಹ್ಯಾಮಿಲ್ಟನ್ನ ಕಿಂಗ್ ಸ್ಟ್ರೀಟ್ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಈ ಗುಂಡಿನ ದಾಳಿಯಲ್ಲಿ ಮೊಹಾಕ್ ಕಾಲೇಜಿನಲ್ಲಿ ಓದಿತ್ತಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾಗೆ ಗುಂಡು ತಗುಲಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪ್ರಾಥಮಿಕ ತನಿಖೆಯಲ್ಲಿ ಕಪ್ಪು ಬಣ್ಣದ ಕಾರಿನ ಪ್ರಯಾಣಿಕನೊಬ್ಬ ಬಿಳಿ ಸೆಡಾನ್ ಕಾರಿನಲ್ಲಿದ್ದವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಎರಡೂ ವಾಹನಗಳು ಸ್ಥಳದಿಂದ ಹೊರಟುಹೋಯಿತು ಎಂದು ತಿಳಿದು ಬಂದಿದೆ. ಪೊಲೀಸರ ಪ್ರಕಾರ, ಈ ಗುಂಡಿನ ದಾಳಿಯು ಉದ್ದೇಶಿತ ಗುರಿಯಾಗಿರಲಿಲ್ಲ. ಘಟನೆಯ ಬಗ್ಗೆ ತನಿಖೆ ಆರಂಭವಾಗಿದ್ದು, ಶಂಕಿತರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಬೆಳಗಾವಿ: ಬೆಳಗಾವಿಯ ಟಿಳಕವಾಡಿಯಲ್ಲಿ ನಿರ್ಮಾಣವಾಗಿರುವ ಕಲಾಮಂದಿರವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು. ಕಲಾಮಂದಿರ ಉದ್ಘಾಟನೆ ಬಳಿಕ ಮಾತನಾಡಿದ ಅವರು, ಕಲಾಮಂದಿರ ಮತ್ತು ಮಳಿಗೆ ಇರುವ ಹೊಸ ಕಟ್ಟಡ ಉದ್ಘಾಟನೆ ಮಾಡಿದ್ದೇವೆ. ಈ ಕಟ್ಟಡವನ್ನ ಅತ್ಯಂತ ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. ಇದು ಬಹು ಉಪಯುಕ್ತವಾದಂತ ಕಟ್ಟಡವಾಗಿದೆ. ಇದರ ಆದಾಯ ಕೂಡ ಬೆಳಗಾವಿಗೆ ಬರುತ್ತದೆ. ಸ್ಮಾರ್ಟ್ ಸಿಟಿ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ಸೇರಿ ಮಾಡುವ ಕಾರ್ಯಕ್ರಮ ಎಂದರು. ಸ್ಮಾರ್ಟ್ ಸಿಟಿ ಇಡೀ ದೇಶದಲ್ಲಿ ಪ್ರಾರಂಭವಾಗಿದೆ. ಎರಡು ಸರ್ಕಾರಗಳು ಐವತ್ತು ಪರ್ಸೆಂಟ್ ಹಾಕಿ ಕಟ್ಟಿರುವುದು. ಯಾವುದೋ ಒಂದು ಸರ್ಕಾರ ಮಾಡಿದ ಕಾರ್ಯಕ್ರಮ ಅಲ್ಲಾ. ಕೇಂದ್ರ ಸರ್ಕಾರ ಒಂದೇ ಮಾಡಿದ್ದು ಅಲ್ಲಾ ರಾಜ್ಯ ಸರ್ಕಾರ ಕೂಡ ಒಂದೇ ಮಾಡಿದ ಕಾರ್ಯಕ್ರಮ ಅಲ್ಲಾ. ಮಳಿಗೆಗಳನ್ನ ಹರಾಜು ಮಾಡಿ ನೀಡುವಂತೆ ಹೇಳಿದ್ದೇನೆ. ಇದರಿಂದ ಬಂದ ಹಣವನ್ನು ಬೆಳಗಾವಿ ನಗರ ಅಭಿವೃದ್ಧಿಗೆ ಖರ್ಚು ಮಾಡಬೇಕು ಎಂದರು. ಜಾಗೃತಿಯಿಂದ ಹರಾಜು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.…
ಭೋಪಾಲ್: ಮಧ್ಯಪ್ರದೇಶದ ಭೋಪಾಲ್ನಲ್ಲಿ ಪೊಲೀಸ್ ಪೇದೆ ಮೇಲೆ ಸೇನಾಧಿಕಾರಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. 42 ವರ್ಷದ ಮಹಿಳಾ ಪೊಲೀಸ್ ಪೇದೆ ನೀಡಿದ ದೂರಿನ ಆಧಾರದ ಮೇಲೆ ಸೇನಾಧಿಕಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 69 (ಮದುವೆಯ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಭೋಗ) ಮತ್ತು 351 (2) (ಅಪರಾಧ ಬೆದರಿಕೆ) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಿಯೋಜನೆಗೊಂಡಿರುವ ಲೆಫ್ಟಿನೆಂಟ್ ಕರ್ನಲ್ ವರುಣ್ ಪ್ರತಾಪ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. https://ainkannada.com/three-fraudsters-arrested-for-opening-bank-accounts-and-stealing-money/ ಇನ್ನೂ ಈ ಕುರಿತು ಪ್ರತಿಕ್ರಿಯಿಸಿದ ಭೋಪಾಲ್ ಮಹಿಳಾ ಪೊಲೀಸ್ ಭದ್ರತಾ ಸಹಾಯಕ ಕಮಿಷನರ್ ನಿಧಿ ಸಕ್ಸೇನಾ, ಆರೋಪಿ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದು, ಆತ ಕರ್ತವ್ಯ ನಿರ್ವಹಿಸುತ್ತಿರುವ ಸೇನಾ ಘಟಕಕ್ಕೆ ಅತ್ಯಾಚಾರ ಕುರಿತು ಮಾಹಿತಿ ನೀಡಿದ್ದೇವೆ. ಅವರು ವಿಚಾರಣೆಗೆ ಬಂದರೆ ಒಳ್ಳೆಯದು , ಇಲ್ಲದಿದ್ದರೆ ಬಂಧನ ಕಾರ್ಯವಿಧಾನವನ್ನು ಅನುಸರಿಸಬೇಕಾಗುತ್ತದೆ ಎಂದರು.