ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಇಂದು ಹೈವೋಲ್ಟೇಜ್ ಮ್ಯಾಚ್ ನಡೆಯಲಿದೆ. ಮೊದಲಿಗೆ ಟಾಸ್ ಗೆದ್ದಿರುವ ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಮೊದಲಿಗೆ ಪಂಜಾಬ್ ಬ್ಯಾಟಿಂಗ್ ಮಾಡಲಿದೆ. https://ainkannada.com/us-vice-president-jd-vance-will-visit-india-tomorrow/ ಬ್ಯಾಕ್ ಟು ಬ್ಯಾಕ್ ಪಂದ್ಯ ಆಡುತ್ತಿರುವ ಉಭಯ ತಂಡಗಳು ಗೆಲುವಿಗಾಗಿ ಸೆಣಸಾಡಲಿದೆ. ಶುಕ್ರವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಇದರಲ್ಲಿ ತವರಲ್ಲೇ ಆರ್ ಸಿಬಿ ಹೀನಾಯವಾಗಿ ಸೋತಿತ್ತು. 14 ಓವರ್ ಗಳ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಉತ್ತಮ ಬೌಲಿಂಗ್ ಹಾಗೂ ಬ್ಯಾಟಿಂಗ್ ನೆರವಿನಿಂದ ಬೆಂಗಳೂರು ತಂಡವನ್ನು ಮಣಿಸಿತ್ತು. ಇನ್ನೂ ಕಳೆದ ಪಂದ್ಯದ ಸೋಲಿನ ರುಚಿ ಕಂಡಿರುವ ಬೆಂಗಳೂರು ತಂಡವು, ಇಂದು ತನ್ನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಆರ್ ಸಿಬಿ ಮತ್ತೆ ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯವು ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ. ವೇಗದ ಬೌಲರ್ ಗಳನ್ನು ಗಣನೆಗೆ ತೆಗೆದುಕೊಂಡರೆ ಆರ್ ಸಿಬಿಯಲ್ಲಿ ಜೋಶ್ ಹೇಜಲ್ವುಡ್, ಭುವನೇಶ್ವರ್…
Author: AIN Author
ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್! ಅವರು ನಾಳೆ ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ಮೋದಿಯಿಂದ ವಿಶೇಷ ಔತಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವ್ಯಾನ್ಸ್ ಅವರು ತಮ್ಮ ಭಾರತೀಯ ಮೂಲದ ಪತ್ನಿ ಉಷಾ ಮತ್ತು ಮೂವರು ಮಕ್ಕಳಾದ ಇವಾನ್, ವಿವೇಕ್ ಮತ್ತು ಮಿರಾಬೆಲ್ ಸೋಮವಾರ ಭಾರತಕ್ಕೆ ಬರಲಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ದೆಹಲಿಯ ಪಾಲಂ ಏರ್ಪೋರ್ಟ್ಗೆ ಬಂದಿಳಿಯಲಿದ್ದು, ಕೇಂದ್ರದ ಹಿರಿಯ ಸಚಿವರು ರಾಜಸ್ಥಾನಿ ಶೈಲಿಯಲ್ಲಿ ವ್ಯಾನ್ಸ್ ಕುಟುಂಬವನ್ನು ಸ್ವಾಗತಿಸಲಿದ್ದಾರೆ. ಬಳಿಕ ದೆಹಲಿ ಜೊತೆಗೆ ಜೈಪುರ ಮತ್ತು ಆಗ್ರಾಕ್ಕೆ ವ್ಯಾನ್ಸ್ ಪ್ರಯಾಣಿಸಲಿದ್ದಾರೆ. ಈ ಸಂದರ್ಭದಲ್ಲಿ ಪೆಂಟಗನ್ನ ಐವರು ಹಿರಿಯ ಅಧಿಕಾರಿಗಳು ವ್ಯಾನ್ಸ್ ಜೊತೆಗಿರಲಿದ್ದಾರೆ. https://ainkannada.com/r-ashok-never-told-the-truth-cm-sidhu-lashes-out-at-samrat/ ದೆಹಲಿಗೆ ಬಂದ ಕೆಲ ಗಂಟೆಗಳ ಬಳಿಕ ವ್ಯಾನ್ಸ್ ಮತ್ತು ಅವರ ಕುಟುಂಬ ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದೆ. ಜೊತೆಗೆ ಸಾಂಪ್ರದಾಯಿಕ ಭಾರತೀಯ ಕರಕುಶಲ ವಸ್ತುಗಳನ್ನು ಮಾರಾಟ ಮಾಡುವ ಶಾಪಿಂಗ್ ಕಾಂಪ್ಲೆಕ್ಸ್ ಭೇಟಿ ನೀಡಲಿದೆ. ಇದೆಲ್ಲದಕ್ಕಿಂತ ಮುಖ್ಯವಾಗಿ ಸೋಮವಾರ ಸಂಜೆ 6:30ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ…
ಕೋಲಾರ : ಸಾರ್ವಜನಿಕರಿಗೆ ಕಮೀಷನ್ ಆಸೆ ತೋರಿಸಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಸೈಬರ್ ಅಪರಾಧಕ್ಕೆ ಬಳಕೆ ಮಾಡುತ್ತಿದ್ದ ಅಂತರ್ ರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಸಿಇಎನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಮ್ಮಿರಿ ರಾಜ್ ಕುಮಾರ್, ಕೊಡಾ ಸುರೇಶ್, ಅಖಿಲ್ ಶೇಖ್ ಅಬೀದ್ ಪಾಷ ಬಂಧಿತ ಆರೋಪಿಗಳಾಗಿದ್ದು, ಇವರು ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶ ಹಾಗೂ ಕೋಲಾರ ಜಿಲ್ಲೆ ಮತ್ತು ದೇಶದ ಇತರೆ ರಾಜ್ಯಗಳಲ್ಲಿ ಸಾರ್ವಜನಿಕರಿಗೆ ವಿವಿಧ ಆಮಿಷ ಒಡ್ಡಿ ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆಸಿ ಸೈಬರ್ ವಂಚಕರೊಂದಿಗೆ ಕೈಜೋಡಿಸಿ ಈ ಬ್ಯಾಂಕ್ ಖಾತೆಗಳನ್ನು ಸೈಬರ್ ಅಪರಾಧಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದರು. https://ainkannada.com/dc-leaves-car-for-service-after-courts-seizure-order-whats-the-mystery/ ಮೂವರು ಆರೋಪಿಗಳು ಆಂಧ್ರಪ್ರದೇಶದವರಾಗಿದ್ದು, ಬಂಧಿತರಿಂದ 137 ವಿವಿಧ ಬ್ಯಾಂಕ್ ಗಳ ಎಟಿಎಂ ಕಾರ್ಡ್ಗಳು, 21 ಬ್ಯಾಂಕ್ ಪಾಸ್ ಬುಕ್ ಗಳು, 10 ಚೆಕ್ ಬುಕ್ ಗಳು 3 ಸಿಮ್ ಕಾರ್ಡ್ಗಳು ಹಾಗೂ ಕೃತ್ಯಕ್ಕೆ ಬಳಕೆ ಮಾಡಿದ್ದ ಮೂರು ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ…
ಬೆಳಗಾವಿ : ಜಾತಿ ಗಣತಿ ವರದಿ ಮೂಲಪ್ರತಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿದೆ ಎಂಬ ಆರ್.ಅಶೋಕ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ ಅವರು ಆರ್.ಅಶೋಕ್ ವಿರುದ್ಧ ಗುಡುಗಿದ್ದರು. ಆರ್. ಅಶೋಕ ಯಾವತ್ತು ಸತ್ಯ ಹೇಳಿದ್ದಾನೆ. ಮೂಲಪ್ರತಿ ನಮ್ಮ ಮನೆಯಲ್ಲಿ ಇರೋಕೆ ಹೇಗೆ ಸಾಧ್ಯವಾಗುತ್ತೆ..? ಸೀಲ್ಡ್ ಕವರ್ ನಲ್ಲಿ ಇದ್ದ ವರದಿ ಕ್ಯಾಬಿನೆಟ್ ನಲ್ಲಿ ಎಲ್ಲರ ಎದುರು ಓಪನ್ ಮಾಡಿದ್ದೇವೆ. ಬರೀ ಸುಳ್ಳು ಹೇಳುವುದು. ಬಿಜೆಪಿಯವರು ಸತ್ಯ ಸುಳ್ಳು ಮಾಡ್ತಾರೆ, ಸುಳ್ಳು ಸತ್ಯ ಮಾಡುತ್ತಾರೆ. ಆರ್ಎಸ್ಎಸ್.ನವರು ಅವರಿಗೆ ಹೇಳಿಕೊಟ್ಟಿದ್ದಾರೆ ಎಂದು. ಜಾತಿ ಗಣತಿ ಬೇಗ ಜಾರಿ ಮಾಡಿ ಎಂದು ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನನಗೆ ಯಾವ ಪತ್ರನೂ ಬರೆದಿಲ್ಲ. ರಾಹುಲ್ ಗಾಂಧಿ ಜೊತೆಗೆ ಚರ್ಚೆ ಮಾಡಿದ್ದೀನಿ. ಚರ್ಚೆ ಮಾಡಿ ಮಂಡಿಸಿದ್ದೇನೆ ಅಂದ್ರೆ ಏನರ್ಥ. ಅವರ ಒಪ್ಪಿಗೆ ಇಲ್ಲದೇ ಮಂಡಿಸಕ್ಕೆ ಆಗುತ್ತಾ ಎಂದರು. ಸಂಪುಟದಲ್ಲಿ ಯಾರೂ ಜಾತಿ…
ಬೆಂಗಳೂರು:- ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://ainkannada.com/dc-leaves-car-for-service-after-courts-seizure-order-whats-the-mystery/ ಆಸ್ಪತ್ರೆಗೆ ಭೇಟಿ ನೀಡುವ ಮೊದಲೇ ರಿಕ್ಕಿ ರೈಗೆ (Rikki Rai) ಕರೆ ಮಾಡಿ ಘಟನೆ ಹೇಗಾಯ್ತು ಎಂದು ಮಾಹಿತಿ ಪಡೆದಿದ್ದಾರೆ. ಆರೋಪಿಗಳು ಯಾರೇ ಆಗಿದ್ದರೂ ಪೊಲೀಸರು ಪತ್ತೆ ಹಚ್ಚುತ್ತಾರೆ. ನಾನು ಗೃಹ ಇಲಾಖೆ ಜೊತೆಗೆ ಪ್ರಕರಣದ ಬಗ್ಗೆ ಮಾತನಾಡುತ್ತೇನೆ. ಪೊಲೀಸರು ಆರೋಪಿಗಳನ್ನ ಪತ್ತೆ ಮಾಡುತ್ತಾರೆ. ನೀನು ಆರೋಗ್ಯದ ಕಡೆ ಗಮನ ಕೊಡು ಎಂದು ಡಿಕೆಶಿ ಪೋನ್ ಮೂಲಕ ಸಾಂತ್ವನ ಹೇಳಿದ್ದಾರೆ ಎಂದು ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಶನಿವಾರ ಸಂಜೆ ಡಿಕೆಶಿ ರಿಕ್ಕಿ ರೈ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಇತ್ತ ಪೊಲೀಸರ ತನಿಖೆ ನಡುವೆ ಡಿಸಿಎಂ ಆರೋಗ್ಯ ವಿಚಾರಿಸಿರುವುದು ಆತ್ಮಬಲ ಹೆಚ್ಚಿಸಿದೆ ಎಂದು ರಿಕ್ಕಿ ರೈ ಹೇಳಿದ್ದಾರೆ.
ಕೊಪ್ಪಳ : ಕೋರ್ಟ್ ಕಾರನ್ನು ಜಪ್ತಿ ಮಾಡುವ ಆದೇಶ ನೀಡಿದ ನಡುವೆಯೇ ಜಿಲ್ಲಾಧಿಕಾರಿ ತಮ್ಮ ಕಾರನ್ನು ಸರ್ವೀಸ್ಗೆ ಬಿಟ್ಟಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೊಸಪೇಟೆ ಟೊಯೋಟಾ ಶೋ ರೂಂನಲ್ಲಿ ಕೊಪ್ಪಳ ಡಿಸಿ ಕಾರು ಪತ್ತೆಯಾಗಿದ್ದು, ಕೋರ್ಟ್ ಆದೇಶದ ನೀಡಿದ ಬಳಿಕ ಕಾರು ಸರ್ವಿಸ್ ಮಾಡಿಸುವ ಅಗತ್ಯ ಇದ್ಯಾ ಅಥವಾ ಜಪ್ತಿಯಿಂದ ತಪ್ಪಿಸಿಕೊಳ್ಳುವ ನೆಪವಾ ಎಂಬ ಪ್ರಶ್ನೆ ಮೂಡಿದೆ. https://ainkannada.com/the-case-of-students-being-removed-from-their-uniforms-during-the-cet-exam-this-is-what-the-law-minister-said/ ಏನಿದು ಪ್ರಕರಣ..? ಗಂಗಾವತಿ ನಗರಸಭೆ ಮಾಲೀಕರಿಗೆ ಮಾಹಿತಿ ನೀಡದೇ ಖಾಸಗಿ ಭೂಮಿಯಲ್ಲಿ ರಸ್ತೆ ನಿರ್ಮಿಸಿತ್ತು. ಈ ಸಂಬಂಧ ಹಿನ್ನೆಲೆ ಗಂಗಾವತಿ ಕಲ್ಮಠ ಆಡಳಿತ ಮಂಡಳಿ ಕೋರ್ಟ್ ಮೆಟ್ಟಿಲೇರಿದ್ದು, ಪರಿಹಾರಕ್ಕೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಗಂಗಾವತಿ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಜಿಲ್ಲಾಧಿಕಾರಿ ನಳಿನ್ ಅತುಲ್ ನ್ಯಾಯಾಲಯ ಸೂಚನೆಯನ್ನು ನಿರ್ಲಕ್ಷ್ಯ ಮಾಡಿದ್ದರು. ಈ ಸಂಬಂಧ ಗಂಗಾವತಿ ಹಿರಿಯ ಸಿವಿಲ್ ನ್ಯಾಯಾಲಯವು ಡಿಸಿ ಕಾರ್ ಜಪ್ತಿಗೆ ಆದೇಶ ನೀಡಿತ್ತು. ಆದರೆ ಈ ಆದೇಸ ಬಂದ ಬಳಿಕ ಜಿಲ್ಲಾಧಿಕಾರಿ ಸರ್ಕಾರಿ ವಾಹನ ಸಂಖ್ಯೆ ಕೆಎ 01…
IPL 2025 ರಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿರುವ ಕರ್ನಾಟಕ ವೇಗಿ ಪ್ರಸಿದ್ಧ್ ಕೃಷ್ಣ ಅತ್ಯದ್ಭುತ ಪ್ರದರ್ಶನ ಮುಂದುವರೆಸಿದ್ದಾರೆ. https://ainkannada.com/tt-vehicle-collision-case-with-indigo-plane-here-is-the-clarification-given-by-kempegowda-airport-board/ 7 ಪಂದ್ಯಗಳಲ್ಲಿ 27 ಓವರ್ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ ಒಟ್ಟು 201 ರನ್ ನೀಡುವ ಮೂಲಕ 14 ವಿಕೆಟ್ಗಳನ್ನು ಕಬಳಿಸಿದ್ದಾರೆ. ಅದು ಕೂಡ ಪ್ರತಿ ಓವರ್ನಲ್ಲಿ ಕೇವಲ 7.44 ಎಕಾನಮಿಯಲ್ಲಿ ರನ್ ಬಿಟ್ಟು ಕೊಡುವ ಮೂಲಕ ಎಂಬುದು ವಿಶೇಷ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಪ್ರಸಿದ್ಧ್ ಕೃಷ್ಣ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್. 7 ಪಂದ್ಯಗಳಲ್ಲಿ 28 ಓವರ್ಗಳನ್ನು ಎಸೆದಿರುವ ಕುಲ್ದೀಪ್ ಯಾದವ್ 6.25ರ ಎಕಾನಮಿಯಲ್ಲಿ 175 ರನ್ ನೀಡುವ ಮೂಲಕ ಒಟ್ಟು 12 ವಿಕೆಟ್ಗಳನ್ನು ಕಬಳಿಸಿದ್ದಾರೆ ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಪಿನ್ನರ್ ನೂರ್ ಅಹ್ಮದ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 7 ಪಂದ್ಯಗಳಲ್ಲಿ 24 ಓವರ್ಗಳನ್ನು ಎಸೆದಿರುವ ನೂರ್ ಅಹ್ಮದ್ 171…
ಬೆಂಗಳೂರು:-ಇಂಡಿಗೋ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪೇಗೌಡ ಏರ್ಪೋರ್ಟ್ ಮಂಡಳಿ ಸ್ಪಷ್ಟನೆ ಕೊಟ್ಟಿದೆ. https://ainkannada.com/crime-news-sinful-son-kills-father-who-was-strict-with-him/ ಇಂಜಿನ್ ರಿಪೇರಿಯಿಂದಾಗಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಟಿ ವಾಹನದ ಟಾಪ್ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಟಿಟಿ ವಾಹನದ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಕೂದಲಳತೆ ಅಂತರದಲ್ಲಿ ದೊಡ್ಡ ಅನಾಹುತ ತಪ್ಪಿದೆ. ಕಳೆದ ಹಲವು ದಿನಗಳಿಂದ ಇಂಜಿನ ರಿಪೇರಿಯಿಂದ ಏರ್ಪೋಟ್ ಒಳಭಾಗದ ಆಲ್ಪಾ ಪಾರ್ಕಿಂಗ್ ಬೇ 71 ರಲ್ಲಿ ಇಂಡಿಗೋ ವಿಮಾನ ನಿಂತಿತ್ತು. ಆದರೆ ಚಾಲಕನ ಅಜಾಗರೂಕತೆಯಿಂದ ಪ್ಲೈಟ್ ನ ಮುಂಬಾಗಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಟಿಟಿ ವಾಹನವು, ಏರ್ಪೋಟ್ ಒಳ ಭಾಗದಲ್ಲಿ ವಿಮಾನಗಳಿಗೆ ಸಿಬ್ಬಂದಿಯನ್ನ ಕರೆದುಕೊಂಡು ಹೋಗಿ ಬಿಡುತ್ತಿತ್ತು. ಅದರಂತೆ ಸಿಬ್ಬಂದಿಯನ್ನ ಬಿಟ್ಟು ಬರ್ತಿದ್ದ ವೇಳೆ ನಿಂತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ಬಗ್ಗೆ ಕೆಂಪೇಗೌಡ ಏರ್ಪೋರ್ಟ್ ಆಡಳಿತ ಮಂಡಳಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಏ.18ರ ಮಧ್ಯಾಹ್ನ…
ಬೆಂಗಳೂರು:- ಸ್ಟ್ರಿಕ್ಟ್ ಮಾಡ್ತಿದ್ದರು ಅಂತಾ ತನ್ನ ತಂದೆಯನ್ನೇ ಮಗ ಚಾಕುವಿನಿಂದ ಇರಿದು ಕೊಲೆ ಮಾಡಿರುವಂತಹ ಘಟನೆ ವಿವೇಕನಗರ ಬಸ್ ನಿಲ್ದಾಣದ ಹಿಂಭಾಗ ತಡರಾತ್ರಿ ನಡೆದಿದೆ. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ಮಗ ಬೋಲು ಅರಬ್ನಿಂದ ನಿವೃತ್ತ ಯೋಧ 47 ವರ್ಷದ ಇಸ್ಲಾಂ ಅರಬ್ ರನ್ನ ಕೊಲೆ ಮಾಡಲಾಗಿದೆ. ಸದ್ಯ ವಿವೇಕನಗರ ಪೊಲೀಸರಿಂದ ಆರೋಪಿ ಬೋಲು ಅರಬ್ನನ್ನು ಬಂಧಿಸಲಾಗಿದೆ. ಬೋಲು ಅರಬ್, ಬಿಕಾಂ ಮೊದಲನೇ ವರ್ಷದಲ್ಲಿ ಓದುತ್ತಿದ್ದಾನೆ. ತಂದೆ ಇಸ್ಲಾಂ ಅರಬ್ ಮನೆಯಲ್ಲಿ ಕಟ್ಟುನಿಟ್ಟಾಗಿದ್ದರು. ಮಗನಿಗೆ ಹೆಚ್ಚಾಗಿ ಹಣ ಖರ್ಚು ಮಾಡಲು ಬಿಡುತ್ತಿರಲಿಲ್ಲ. ಕಾಲೇಜಿನಿಂದ ತಡವಾಗಿ ಬಂದರೆ ಪ್ರಶ್ನೆ ಮಾಡುತ್ತಿದ್ದರು. ಇದರಿಂದ ತಂದೆ ಮೇಲೆ ಪುತ್ರ ಬೇಸರಗೊಂಡಿದ್ದ. ಆದರೆ ತಂದೆ ಮಗನನ್ನ ಹೆಚ್ಚಾಗಿ ಪ್ರೀತಿಸುತ್ತಿದ್ದರು. ಆತನನ್ನು ದೊಡ್ಡ ಆರ್ಮಿ ಅಧಿಕಾರಿ ಮಾಡಬೇಕು ಎಂಬ ಕನಸು ಕಟ್ಟಿಕೊಂಡಿದ್ದರು. ಮೊದಲಿಗೆ ಯಾರೋ ಐದಾರು ಜನ ಬಂದು ಹೊಡೆದು ಹೋದರು ಎಂದಿದ್ದ ಪುತ್ರ, ಅನುಮಾನಗೊಂಡ ಪೊಲೀಸರು ಮನೆ ಬಳಿಯ ಸಿಸಿಟಿವಿ ದೃಶ್ಯ ಪರಿಶೀಲಿಸಿದ್ದಾರೆ. ಈ ವೇಳೆ ಯಾರು ಮನೆಗೆ ಬಂದಿರುವ ದೃಶ್ಯ…
ಅತಿಯಾದರೆ ಅಮೃತವೂ ವಿಷ ಎನ್ನುವಂತೆ ಕೊರೊನಾ ಡೋಲೋ 650 ಮಾತ್ರೆ ಸೇವನೆ ಮಾಡುವುದು ಕೂಡ ಆರೋಗ್ಯಕ್ಕೆ ಬಹಳ ಅಪಾಯಕಾರಿಯಾಗಿದೆ.. ಕೊರೊನಾ ರೋಗ ಕಾಣಿಸಿಕೊಂಡವರಿಗೂ ವೈದ್ಯರು ಕೂಡ ಪ್ಯಾರಾಸಿಟಮಾಲ್ ಔಷಧಿಯಾದ ಡೋಲೋ 650 ಮಾತ್ರೆಯನ್ನು ಸೇವಿಸಲು ಸೂಚಿಸಿದರು.. ಹೀಗಾಗಿಯೇ ಜನರು ಸಾಂಕ್ರಮಿಕ ರೋಗದ ಸಂದರ್ಭದಲ್ಲಿ ತಮ್ಮ ಮನೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರಾಥಮಿಕ ಚಿಕಿತ್ಸೆ ಎನ್ನುವಂತೆ ಡೋಲೋ 650 ಮಾತ್ರೆಯನ್ನು ತಂದು ಇಟ್ಟು ಕೊಂಡಿದ್ದಾರೆ.. ಕೊಂಚ ಶೀತ ನೆಗಡಿ ತಲೆನೋವು ಜ್ವರ ಕಾಣಿಸಿಕೊಂಡರು ಸಹ ಡೋಲೋ 650 ಮಾತ್ರೆ ತೆಗೆದುಕೊಳ್ಳುವ ಮೂಲಕ ರೋಗ ಗುಣಪಡಿಸಿಕೊಳ್ಳಲು ಪ್ರಯತ್ನ ಪಡುತ್ತಿದ್ದಾರೆ.. https://ainkannada.com/janiwar-controversy-i-condemn-such-an-incident-g-parameshwara/ ಆದರೆ ಹೀಗೆ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಡೋಲೋ ಮಾತ್ರೆ ಸೇವನೆ ಮಾಡುವುದು ಬಹಳ ಅಪಾಯಕಾರಿಯಾಗಿ ಪರಿಣಮಿಸಿದೆ. ಭಾರತೀಯರು ಸ್ವಲ್ಪ ತಲೆನೋವಾಗಲಿ, ಜ್ವರವಾಗಲಿ ಬಂದರೆ ಕ್ಯಾಲ್ಪೋಲ್, ಕ್ರೋಸಿನ್, ಡೋಲೋ ಮುಂತಾದ ಪ್ಯಾರಾಸಿಟಮಾಲ್ ಔಷಧಿಯನ್ನು ಸೇವಿಸುತ್ತಾರೆ. ಆದರೆ ಹೆಚ್ಚಿನ ಜನರಿಗೆ ಅದರ ನಿಖರವಾದ ಪ್ರಮಾಣದ ಬಗ್ಗೆ ತಿಳಿದಿಲ್ಲ. ಪ್ಯಾರಾಸಿಟಮಾಲ್ ಸ್ಟೀರಾಯ್ಡ್ ಗಳನ್ನು ಹೊಂದಿದ್ದು, ಅದರ ಅನುಚಿತ ಡೋಸೇಜ್…