Author: AIN Author

ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಮಯ ಸಿಕ್ಕಾಗೆಲ್ಲಾ ಸಹ ದೇಗುಲಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಇಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. https://ainkannada.com/caste-census-report-no-hasty-decision-work-to-provide-justice-after-knowing-the-truth-dcm-dk/ ಹೌದು, ಕಳೆದ ವಾರವಷ್ಟೇ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದಿದ್ದ ಡಿಸಿಎಂ ಇಂದು ಬೆಳ್ಳಂಬೆಳಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥನ ದರ್ಶನ ಪಡೆದಿದ್ದಾರೆ. ಧರ್ಮಸ್ಥಳದಲ್ಲಿ ಒಂದು ಸುತ್ತು ದೇವಸ್ಥಾನ ಪ್ರದಕ್ಷಿಣೆ ಹಾಕಿ, ಮಂಜುನಾಥಸ್ವಾಮಿಯ ದರ್ಶನ ಪಡೆದು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಂಜುನಾಥನ ದರ್ಶನದ ಬಳಿಕ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರರನ್ನ ಭೇಟಿಯಾಗಿದ್ದು, ಅವರ ಕಾಲಿಗೆ ಬಿದ್ದು ಆಶೀರ್ವಾದ ಸಹ ಪಡೆದಿದ್ದಾರೆ. ಬಳಿಕ ಕೆಲ ಕಾಲ ಗೌಪ್ಯ ಮಾತುಕತೆ ನಡೆಸಿದ್ದಾರೆ.

Read More

ಬೆಂಗಳೂರು :- ಕರ್ನಾಟಕದಲ್ಲಿ ಜನಿವಾರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/hat-trick-defeat-for-rr-royals-surrender-to-lucknow-super-game-thrilling-2-run-win/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನನಗೆ ಹೆಚ್ಚು ಮಾಹಿತಿ ಇಲ್ಲ. ನಾನೂ ಕೂಡ ಖಂಡಿಸಿದ್ದೇನೆ. ಯಾಕೆ ಆ ರೀತಿ ಮಾಡಿದ್ರು, ಯಾರ್ ಸೂಚನೆ ಕೊಟ್ರು ಅನ್ನೋದು ಗೊತ್ತಿಲ್ಲ. ಹಿರಿಯ ಅಧಿಕಾರಿಗಳಿಗೆ ತಿಳಿಸಬಹುದಿತ್ತು. ಯಾಕೆ ತೆಗಿಸಿದ್ರು, ಏನ್ ಕಾರಣನೋ ಗೊತ್ತಿಲ್ಲ ಎಂದರು. ಜಾತಿಜನಗಣತಿ ವರದಿ ಜಾರಿಗೆ ವಿರೋಧ ವಿಚಾರವಾಗಿ ಮಾತನಾಡಿ, ಅವ್ರ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅಂತಿಮವಾಗಿ ಕ್ಯಾಬಿನೆಟ್ ತೀರ್ಮಾನ ಮಾಡುತ್ತೆ. ಜಟಿಲ ಅಂಥಾ ನನಗೇನೂ ಕಾಣ್ತಿಲ್ಲ. ಕೆಲವು ಸಚಿವರು ಕೇಳಿದ್ದಾರೆ, ಅದನ್ನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ತೀರ್ಮಾನ. ಮೇ 2 ಕ್ಕೆ ಸಭೆ ಕರೆದಿದ್ದಾರೆ ಎಂದರು. ರಿಕ್ಕಿ ರೈ ಮೇಲೆ ಶೂಡೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಯಾರ್ ಮಾಡಿದ್ರೂ ಅಂತಾ ತನಿಖೆ ಮಾಡ್ತಿದ್ದಾರೆ. ಸಿಕ್ಕಿದ್ಮೇಲೆ ಗೊತ್ತಾಗುತ್ತೆ. ಇಂಥದ್ರಲ್ಲಿ ಊಹಾಪೋಹ ಮಾಡೋಕೆ ಆಗಲ್ಲ. ಗುಂಡು ಹಾರಿಸಿದವರು ಸಿಕ್ಕಿದ ನಂತ್ರ…

Read More

ಹುಬ್ಬಳ್ಳಿ: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣವನ್ನು ಬಿಜೆಪಿಯವರು ಹಿಡಿದುಕೊಂಡಿರುವ ಅಸ್ತ್ರವಾಗಿಸಿಕೊಂಡು, ಕೇವಲ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡತಾ ಇದೆ ಎಂಬ ಆರೋಪ ಮಾಡುತ್ತಿದ್ದಾರೆ ಎಂದು ಕಾನೂನು ಸಚಿವ ಹೆಚ್‌.ಕೆ.ಪಾಟೀಲ್‌ ಅಸಮಾಧಾನ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,  ನಮ್ಮ ದೇಶದ ಪ್ರಜೆಗಳು ಅಂತಾ ಒಪ್ಪಿಕೊಂಡ‌ ಮೇಲೆ ನ್ಯಾಯಯುತ ಹಕ್ಕನ್ನ ಕೊಡಬೇಕು. ಈ ಬಗ್ಗೆ ಯಾಕೆ ಅಸೂಯೆ ಇದರಲ್ಲಿ ತಮ್ಮ ಉದ್ದೇಶ ಏನು..? ರಾಷ್ಟ್ರದಲ್ಲಿ ದೇಶ ರಾಷ್ಟ್ರ ಕಟ್ಟುವುದರಲ್ಲಿ ಒಂದು ಎಲ್ಲರಿಗಿಂತ ಮುಂದೆ‌ ಇದ್ದಾರೆ. ಅಲ್ಪ ಸಂಖ್ಯಾತರಿಗೆ ಏನಾದರೂ ಸೌಲಭ್ಯ ಕೊಟ್ಟರೆ ಟೀಕೆ ಟಿಪ್ಪಣಿ  ಆಗಿದ್ದು ನೀವು ಟಿಪ್ಪು ಸುಲ್ತಾನ್ರ  ಟೊಪ್ಪಿಗೆ ಹಾಕಿಕೊಂಡು ತಿರುಗಾಡುತ್ತಿರೆ. ಇದು ನಿಮಗೆ ಬಹಳ ಯೋಗ್ಯ ಅನ್ನಿಸುತ್ತಾ ಇದ್ದು  ಬಿಜೆಪಿಯವರೆಗೆ ಬೇಕಾದಾಗ ಇಪ್ತಿಯಾರ್ ಕೂಟ ಮಾಡುತ್ತಾರೆ ಎಂದದರು. ಇನ್ನೂ ಜಾತಿ ಗಣತಿ ವರದಿ ಕುರಿತು ಮೇ.2ರಂದು ಇನ್ನೊಂದು ಸಲ ಸಚಿವ ಸಂಪುಟ ಸಭೆ ಕರೆದ ವಿಚಾರವಾಗಿ ಮಾತನಾಡಿ,  ಜಾತಿ ಗಣತಿ ವರದಿ ಸಂಪೂರ್ಣ ಅಧ್ಯಯನ ಆಗಿರಲಿಲ್ಲ.…

Read More

ರಾಜಸ್ಥಾನ್ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 2 ರನ್ ಗಳ ರೋಚಕ ಗೆಲುವು ಸಾಧಿಸಿದೆ. https://ainkannada.com/teenage-infatuation-a-premature-baby-thrown-into-the-trash/ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಬೀಸಿದ ಲಕ್ನೋ 5 ವಿಕೆಟ್‌ ನಷ್ಟಕ್ಕೆ 180 ರನ್‌ ಗಳಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ರಾಜಸ್ಥಾನ 20 ಓವರ್‌ಗಳಲ್ಲಿ 5 ವಿಕೆಟಿ ನಷ್ಟಕ್ಕೆ 178 ರನ್‌ ಹೊಡೆದು ಸೋಲನ್ನು ಒಪ್ಪಿಕೊಂಡಿತ್ತು. ಕೊನೆಯ ಓವರ್‌ವರೆಗೂ ಗೆಲುವು ರಾಜಸ್ಥಾನ ಕಡೆಗೆ ವಾಲಿತ್ತು. ಕೊನೆಯ 6 ಎಸೆತಗಳಲ್ಲಿ 9 ರನ್‌ ಬೇಕಿತ್ತು.ಕ್ರೀಸ್‌ನಲ್ಲಿ ಹೆಟ್ಮೇಯರ್‌ ಮತ್ತು ಧ್ರುವ್‌ ಜುರೇಲ್‌ ಇದ್ದರು. ಮೊದಲ ಎರಡು ಎಸೆತದಲ್ಲಿ ಸಿಂಗಲ್‌ ಮತ್ತು 2 ರನ್‌ ತೆಗೆದ ಹೆಟ್ಮೇಯರ್‌ ಮೂರನೇ ಎಸೆತದಲ್ಲಿ ಕ್ಯಾಚ್‌ ನೀಡಿ ಔಟಾಗುವ ಮೂಲಕ ಪಂದ್ಯ ರೋಚಕ ಘಟ್ಟದತ್ತ ತಿರುಗಿತು. 4ನೇ ಎಸೆತದಲ್ಲಿ ಯಾವುದೇ ರನ್‌ ಬರಲಿಲ್ಲ. 5 ಎಸೆತದಲ್ಲಿ ದುಬೆ ಸಿಕ್ಸ್‌ ಸಿಡಿಸಲು ಹೋದರು. ಆದರೆ ಮಿಲ್ಲರ್‌ ಕ್ಯಾಚ್‌ ಡ್ರಾಪ್‌ ಮಾಡಿದ ಕಾರಣ 2 ರನ್‌ ಓಡಿದರು. ಕೊನೆಯ ಎಸೆತದಲ್ಲಿ 4 ರನ್‌ ಬೇಕಿತ್ತು.…

Read More

ಬೆಂಗಳೂರು:- ಹದಿಹರೆಯದ ವಯಸ್ಸಿನಲ್ಲಿ ಅಪ್ರಾಪ್ತ ಇಬ್ಬರು ಪ್ರೀತಿಯಲ್ಲಿ ಬಿದ್ದು ಪುಟ್ಟ ಕಂದಮ್ಮನನ್ನೇ ಬಲಿಕೊಟ್ಟಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಅಚ್ಚರಿ ಏನೆಂದರೆ ಸ್ನೇಹಿತರೇ ಸೇರಿಕೊಂಡು ಡೆಲಿವರಿ ಮಾಡಿರುವ ಬಗ್ಗೆ ಗೊತ್ತಾಗಿದೆ. https://ainkannada.com/former-municipal-council-member-brutally-murdered-in-karwar/ 2ನೇ ತಾರೀಖು ಮಂಗಳವಾರ ರಾತ್ರಿ ಈ ಘಟನೆ ಜರುಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಲಹಂಕದ ಗಾಂಧಿನಗರ ಏರಿಯಾದಲ್ಲಿ ಸೈಕಲ್ ನಲ್ಲಿ ಬಂದಿದ್ದ ವ್ಯಕ್ತಿ ಕಸದ ರಾಶಿಯಲ್ಲಿ ಕವರ್ ಬಿಸಾಕಿ ಹೋಗಿದ್ದ. ಮನೆ ಹತ್ತಿರದಲ್ಲೇ ವಾಸವಿರುವ ವೃದ್ಧನ ಕೈಯಲ್ಲಿ ಈ ಕಸ ಬಿಸಾಡಿ ಎಂದು ಯುವತಿ ಶಿಶುವಿದ್ದ ಕವರ್ ಅನ್ನು ಕೊಟ್ಟಿದ್ದಾಳೆ. ಆಗ ವೃದ್ಧ ಅದರ ಅರಿವಿಲ್ಲದೇ ಆ ಕವರ್​ ಅನ್ನು ಎತ್ತಿ ಕಸದ ಬುಟ್ಟಿಗೆ ಹಾಕಿ ಹೋಗಿದ್ದಾರೆ. ಬಳಿಕ ಪೌರಕಾರ್ಮಿಕರು ಬೆಳಗ್ಗೆ ಕಸ ಸ್ವಚ್ಛ ಮಾಡುವಾಗ ಶಿಶುವಿನ ಶವ ಕಂಡು ಶಾಕ್ ಆಗಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ಕೂಡಲೇ ಪೊಲೀಸರಿಂದ ತನಿಖೆ ಶುರು ಮಾಡಿ ಸುತ್ತಮುತ್ತಲ ಸಿಸಿಟಿವಿ ಸರ್ಚ್…

Read More

ಕಾರವಾರ: ವಾಯುವಿಹಾರಕ್ಕೆ ತೆರಳಿದ್ದ ವೇಳೆ ನಗರಸಭೆ ಮಾಜಿ ಸದಸ್ಯನ ಭೀಕರ ಹತ್ಯೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್​ಎನ್​ಎಲ್​ ಕಚೇರಿ ಬಳಿ‌ ಘಟನೆ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಸತೀಶ್‌ ಕೋಳಂಕರ್‌ ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು, ಪರಾರಿಯಾಗಿದ್ದಾರೆ. ತಕ್ಷಣವೇ ಸತೀಶ್​ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. https://ainkannada.com/car-accident-case-hebbalkar-congratulates-police-for-arresting-accused/ ನಗರ ಠಾಣೆಯಲ್ಲಿ ಸತೀಶ್‌ ಕೋಳಂಕರ್‌ ಮೇಲೆ ರೌಡಿ ಶೀಟರ್ ಪಟ್ಟಿ ಇದೆ. ಜೊತೆಗೆ ರಿಯಲ್‌ ಎಸ್ಟೇಟ್‌ ಹಣಕಾಸು ವ್ಯವಹಾರದಲ್ಲೂ ತೊಡಗಿದ್ದ ಎನ್ನಲಾಗಿದೆ. ಹಣಕಾಸು ಹಾಗೂ ವೃತ್ತಿ ವೈಷಮ್ಯದಲ್ಲಿ ಈ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಂತಕರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಕಾರವಾರ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣದ ಆರೋಪಿ ಬಂಧನ‌ ವಿಚಾರವಾಗಿ ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ನಿದ್ದೆಗಣ್ಣಲ್ಲಿ ಇದ್ದೆ ಬಂದು ಅಪಘಾತ ಮಾಡಿದ್ದಾರೆ. ಮೂರು ತಿಂಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬೆಳಗಾವಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ನನಗೆ ಆರೋಪಿಯನ್ನು ಹಿಡಿಯುತ್ತಾರೆ ಅಂತ ಅನಿಸರಲಿಲ್ಲ. ಕಲರ್ ಮ್ಯಾಚ್ ಮಾಡಲು ಎಫ್ ಎಸ್ ಎಲ್ ಮೊರೆ ಸಹ ಹೋಗಿದರು. ಹಿಟ್ ಅಂಡ್ ರನ್ ಕೇಸ್ ಬಹುತೇಕ ಪತ್ತೆ ಆಗಲ್ಲ. ಅಪಘಾದ ಬಗ್ಗೆ ನನಗೆ ಯಾವುದೇ ಅನುಮಾನ ಇಲ್ಲ ಎಂದರು. https://ainkannada.com/minister-hebbalkar-car-accident-case-accused-arrested-released/ ಜಾತಿಗಣತಿ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಜಾತಿ ಗಣತಿ ಬಗ್ಗೆ ಚರ್ಚೆ ಆಗಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಿದೆ. ಸಂಪುಟದಲ್ಲಿ ಯಾರು ವಿರೋಧ ಮಾಡಿಲ್ಲ. ಚರ್ಚೆಯ ಅಪೂರ್ಣವಾಗಿದೆ. ನಾನು ಸಂಪುಟದಲ್ಲಿ ಪೂರ್ಣ ಪ್ರಮಾಣ ಚರ್ಚೆ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಇನ್ನು ಶಿವಾನಂದ ಪಾಟೀಲ್ ಹಾಗೂ ಎಂ ಬಿಪಿ ನಡುವೆ ‌ವಾದ…

Read More

ಚಂಢೀಗಢ ಮುಲ್ಲನ್‌ಪುರದಲ್ಲಿ ಇಂದು ಆರ್ ಸಿಬಿ-ಪಂಜಾಬ್ ನಡುವೆ ಐಪಿಎಲ್ ಪಂದ್ಯ ನಡೆಯಲಿದೆ. https://ainkannada.com/suspected-of-having-an-illicit-relationship-with-his-wife-driver-kidnapped-and-assaulted-rowdy-sheeter-and-gang-arrested/ ಆರ್ ಸಿಬಿ ಈವರೆಗೆ ಆಡಿರುವ 7 ಪಂದ್ಯಗಳಲ್ಲಿ ಮೂರು ಪಂದ್ಯಗಳು ತವರಿನಲ್ಲಿ ನಡೆದಿದ್ದು ಸೋಲು ಕಂಡರೆ, ತವರಿನ ಹೊರಗೆ ಆಡಿರುವ ನಾಲ್ಕೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾನುವಾರ ನಡೆಯಲಿರುವ ಪಂದ್ಯ ಕೂಡ ತವರಿನ ಹೊರಗೆ ನಡೆಯುತ್ತಿದ್ದು ಬೆಂಗಳೂರು ಸೋಲಿಗೆ ಸೇಡು ತೀರಿಸಿಕೊಳ್ಳುವ ವಿಶ್ವಾಸದಲ್ಲಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಬದಲಾಗಿ ಮನೋಜ್ ಭಾಂಡಗೆ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿದರು. ಆದರೆ ಕೇವಲ 1 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದ್ದರು. ಭಾನುವಾರ ನಡೆಯುವ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ವಾಪಸಾತಿ ಮಾಡಲಿದ್ದಾರೆ. 7 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವ ಲಿಯಾಮ್ ಲಿವಿಂಗ್‌ಸ್ಟೋನ್‌ ಭಾನುವಾರ ನಡೆಯುವ ಪಂದ್ಯದಲ್ಲಿ ಬೆಂಚ್ ಕಾಯುವ ಸಾಧ್ಯತೆ ಇದೆ. ಅವರ ಬದಲಾಗಿ ಇಂಗ್ಲೆಂಡ್‌ನ ಮತ್ತೊಬ್ಬ ಸ್ಪೋಟಕ ಆಲ್‌ರೌಂಡರ್ ಜೇಕಬ್ ಬೆಥೆಲ್ ಆಡುವ ಸಾಧ್ಯತೆ ಇದೆ. ಅಥವಾ ವೆಸ್ಟ್ ಇಂಡೀಸ್‌ನ ರೊಮಾರಿಯೋ ಶೆಫರ್ಡ್ ಅವರು…

Read More

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಮುಸ್ತಾಫಾಬಾದ್‌ನಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 11ಕ್ಕೇರಿದೆ. ಏಫ್ರಿಲ್‌ 19ರಂದು ನಸುಕಿನ ಜಾವ ಮೂರು ಗಂಟೆ ಸುಮಾರಿಗೆ ಮುಸ್ತಾಫಾಬಾದ್‌ನಲ್ಲಿ ನಾಲ್ಕಂತಸ್ತಿನ ಕಟ್ಟಡ ಕುಸಿದಿದ್ದು, ಸುಮಾರು 22ಕ್ಕೂ ಅಧಿಕ ಮಂದಿ ಅವಶೇಷಗಳಡಿ ಸಿಲುಕಿದ್ದರು. ಸತತ 12 ಗಂಟೆಗಳ ಕಾಲ ಅವಶೇಷಗಳಡಿ ಸಿಲುಕಿದ್ದವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ, . ಇನ್ನೂ ಈ ಅವಘಡದಲ್ಲಿ ಒಂದೇ ಕುಟುಂಬದ ಎಂಟು ಮಂದಿ ಸೇರಿ 11 ಮಂದಿ ದುರ್ಮರಣಕ್ಕೀಡಾಗಿದ್ದಾರೆ. 11 ಜನರಿಗೆ ಗಾಯಗಳಾಗಿವೆ. ಗಾಯಗೊಂಡವರಲ್ಲಿ 6 ಮಂದಿಯನ್ನು ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನುಳಿದ 5 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. https://ainkannada.com/four-story-building-collapses-in-the-early-hours-of-the-morning-four-dead/ ಪ್ರಾಥಮಿಕ ತನಿಖೆಯ ಪ್ರಕಾರ ನೆಲಮಹಡಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ನಿರ್ಮಾಣ ಕೆಲಸದಿಂದಾಗಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಥಳೀಯರ ಪ್ರಕಾರ, ಕಟ್ಟಡದ ನೆಲಮಹಡಿಯಲ್ಲಿರುವ ಎರಡು ಅಥವಾ ಮೂರು ಅಂಗಡಿಗಳಲ್ಲಿ ಅನಧಿಕೃತ ಕೆಲಸಗಳು ನಡೆಯುತ್ತಿದ್ದವು. ಒಳಚರಂಡಿ ನೀರು ಅಡಿಪಾಯಕ್ಕೆ ಹರಿಯುತ್ತಿರುವುದು, ಕಟ್ಟಡದ ರಚನೆ ದುರ್ಬಳಗೊಳ್ಳಲು ಕಾರಣ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು:- ಡ್ರೈವರ್ ಗೆ ಗನ್ ತೋರಿಸಿ ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದ ರೌಡಿಶೀಟರ್ ಅಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://ainkannada.com/muthappa-rais-son-rikki-rai-was-shot-this-is-what-rikki-rai-said-before-the-police/ ರೌಡಿಶೀಟರ್ ಹೆಂಡತಿ ಜೊತೆ ಡ್ರೈವರ್ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೇಳಿ ಬಂದಿದೆ. ಡ್ರೈವರ್ ಮೇಲೆ ಆವಲಹಳ್ಳಿ ಮಂಜೇಶ್ ಅಂಡ್ ಟೀಂನಿಂದ ಗನ್ ತೋರಿಸಿ ಹಲ್ಲೆ ನಡೆದಿದೆ. ಇದೀಗ ಆವಲಹಳ್ಳಿ ಮಂಜೇಶ್ ಅಂಡ್ ಟೀಂ ಅನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರಲ್ಲಿ ಮಂಜೇಶ್, ಮಾಜಿ ಕಾರ್ಫೋರೇಟರ್ ಸೋಮಣ್ಣನ ಅಣ್ಣನ ಮಗನ ಕೊಲೆ ಕೇಸ್ ಆರೋಪಿ ಆಗಿದ್ದಾನೆ. ವಿನೋದ್ ಕೊಲೆ ಕೇಸ್ ನಲ್ಲಿ ಐದು ವರ್ಷಗಳು ಜೈಲಿನಲ್ಲಿದ್ದ. ರಿಲೀಸ್ ಆದಾಗ ನೈಸ್ ರೋಡ್ ಬಳಿ ಹುಡುಗರ ಜೊತೆ ಶೋ ಕೊಟ್ಟು ಬಂದಿದ್ದ. ನೂರಾರು ಹುಡುಗರ ಜೊತೆ ಹತ್ತಾರು ಕಾರುಗಳಲ್ಲಿ ಶೋ ನಡೆಸಿದ್ದ ಎನ್ನಲಾಗಿದೆ. ಮಂಜೇಶ್ ಹೆಂಡತಿ‌ ಜೊತೆ ಡ್ರೈವರ್ ಕಿರಣ್ ಅಕ್ರಮ ಸಂಬಂಧ ಹೊಂದಿದ್ದಾನೆಂದು ಆರೋಪಿಸಲಾಗಿದ್ದು, ಟ್ರಿಪ್ ಗೆ ಹೋಗಲು ಮಹಿಳೆವೊಬ್ಬರಿಂದ ಮಂಜೇಶ್ ಗಾಡಿ ಬುಕ್ ಮಾಡಿಸಿದ್ದ. ಕೋಟಿಲಿಂಗೇಶ್ವರಕ್ಕೆ ಹೋಗಬೇಕು…

Read More