ಬೆಂಗಳೂರು ಗ್ರಾಮಾಂತರ : ಕೆಂಪೇಗೌಡ ಏರ್ಪೋರ್ಟ್ನಲ್ಲಿ ನಿಲ್ಲಿಸಿದ್ದ ಇಂಡಿಗೋ ವಿಮಾನಕ್ಕೆ ಟೆಂಪೋ ಟ್ರಾವೆಲ್ಲರ್ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಕೂದಲಳತೆ ಅಂತರದಲ್ಲಿ ಏರ್ಪೋಟ್ ನಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಇಂಜಿನ್ ರಿಪೇರಿಯಿಂದಾಗಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಟಿಟಿ ವಾಹನದ ಟಾಪ್ ನಜ್ಜುಗುಜ್ಜಾಗಿದೆ. ಟಿಟಿ ವಾಹನದ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. https://ainkannada.com/overturned-while-moving-lorry-suddenly-catches-fire-and-bursts-into-flames/ ಕಳೆದ ಹಲವು ದಿನಗಳಿಂದ ಏರ್ಪೋಟ್ ಒಳಭಾಗದ ಆಲ್ಪಾ ಪಾರ್ಕಿಂಗ್ ಬೇ 71 ರಲ್ಲಿ ಇಂಡಿಗೋ ವಿಮಾನವು ಇಂಜಿನಿ ರಿಪೇರಿಯಿಂದಾಗಿ ನಿಂತಿತ್ತು. ಏರ್ಪೋಟ್ ಒಳ ಭಾಗದಲ್ಲಿ ವಿಮಾನಗಳಿಗೆ ಸಿಬ್ಬಂದಿಯನ್ನ ಕರೆದುಕೊಂಡು ಹೋಗಿ ಬಿಡುತ್ತಿದ್ದ ಟಿಟಿ ವಾಹನವು , ಸಿಬ್ಬಂದಿಯನ್ನ ಬಿಟ್ಟು ಬರ್ತಿದ್ದ ವೇಳೆ ನಿಂತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದಲೇ ಅವಘಡ ನಡೆದಿದ್ದು, ನಾಗರೀಕ ವಿಮಾನಯಾನ ಇಲಾಖೆ ಅಧಿಕಾರಿಗಳು ಮತ್ತು ಏರ್ಪೋಟ್ ಸಿಬ್ಬಂದಿ ಘಟನೆ ಕುರಿತು ತನಿಖೆ ಕೈಗೊಂಡಿದ್ದಾರೆ.
Author: AIN Author
ಸೂರ್ಯೋದಯ – 6:00 AM ಸೂರ್ಯಾಸ್ತ – 6:29 PM ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ಸಪ್ತಮಿ ನಕ್ಷತ್ರ – ಪೂರ್ವಾಷಾಢ ಯೋಗ – ಸಿದ್ಧ ಕರಣ – ವಿಷ್ಟಿ *ಮಳೆ ನಕ್ಷತ್ರ- ಅಶ್ವಿನಿ* ರಾಹು ಕಾಲ – 04:30 ದಿಂದ 06:00 ವರೆಗೆ ಯಮಗಂಡ – 12:00 ದಿಂದ 01:30 ವರೆಗೆ ಗುಳಿಕ ಕಾಲ – 03:00 ದಿಂದ 04:30 ವರೆಗೆ ಬ್ರಹ್ಮ ಮುಹೂರ್ತ – 4:24 ಬೆ. ದಿಂದ 5:12 ಬೆ.ವರೆಗೆ ಅಮೃತ ಕಾಲ – 6:43 ಬೆ.ದಿಂದ 8:24 ಬೆ. ವರೆಗೆ ಅಭಿಜಿತ್ ಮುಹುರ್ತ – 11:50ಬೆ. ದಿಂದ 12:40 ಮ. ವರೆಗೆ ಮೇಷ ರಾಶಿ: ಸ್ಟಾಕ್ ಷೇರಿನ ವ್ಯಾಹಾರದಲ್ಲಿ ಸಾಕಷ್ಟು ಲಾಭ ಗಳಿಸುವಿರಿ,ಜ್ಯೂಸು ಅಂಗಡಿ ಮಾರಾಟಗಾರರಿಗೆ ಲಾಭ, ರಂಗಭೂಮಿ ಕಲಾವಿದರಿಗೆ ಶುಭದಾಯಕ, ಪಾಲುದಾರಿಕೆ ವ್ಯಾಪಾರ…
ಬೆಂಗಳೂರು:- ಜನಿವಾರ ವಿವಾದ ಕೇಸ್ ಗೆ ಸಂಬಧಪಟ್ಟಂತೆ ಬೀದರ್ನ ಸಾಯಿ ಸ್ಪೂರ್ತಿ ಕಾಲೇಜಿನ ಪ್ರಿನ್ಸಿಪಾಲ್, ಸಿಬ್ಬಂದಿಯನ್ನಿ ಸಸ್ಪೆಂಡ್ ಮಾಡಲಾಗಿದೆ. https://ainkannada.com/janiwar-controversy-principal-sda-dismissed-from-work/ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿದ್ದಾನೆಂಬ ಕಾರಣಕ್ಕೆ ಆತನಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಬೀದರ್ನಲ್ಲಿ ನಡೆದಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇಂದು ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದ ಬೀದರ್ ಜಿಲ್ಲಾಧಿಕಾರಿ ಈ ಘಟನೆಯಲ್ಲಿ ಅಧಿಕಾರದ್ದೇ ತಪ್ಪು ಎಂದು ವರದಿ ಸಲ್ಲಿಸಿದ್ದರು. ಅದರ ಬೆನ್ನಲ್ಲೇ ಈ ಘಟನೆ ನಡೆದ ಬೀದರ್ನ ಖಾಸಗಿ ಕಾಲೇಜಿನ ಪ್ರಾಂಶುಪಾಲ ಮತ್ತು ಆ ಕಾಲೇಜಿನ ಕೆಲವು ಸಿಬ್ಬಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಕಾಲೇಜು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಪರೀಕ್ಷಾರ್ಥಿಗೆ ಪರೀಕ್ಷೆಗೆ ಅವಕಾಶ ನೀಡದ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.…
ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಕೋಶ, ಆಗ್ನೇಯ ಮಧ್ಯ ರೈಲ್ವೆ ಇಲಾಖೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. https://ainkannada.com/janiwar-controversy-state-government-is-attacking-peoples-trust-prahlad-joshi/ ಆಗ್ನೇಯ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಉದ್ಯೋಗಗಳನ್ನು ಭರ್ತಿ ಮಾಡಲಾಗುತ್ತಿದೆ. ಇವು ಅಪ್ರೆಂಟಿಸ್ ಹುದ್ದೆಗಳು ಆಗಿದ್ದರಿಂದ ಯಾವುದೇ ಪರೀಕ್ಷೆ ಇರುವುದಿಲ್ಲ. ಕೇವಲ ಮೆರಿಟ್ ಲಿಸ್ಟ್ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಭಾರತದಲ್ಲಿ ರೈಲ್ವೆ ಇಲಾಖೆಯು ಅತ್ಯಂತ ದೊಡ್ಡ ಜಾಲ ಹೊಂದಿದೆ. ಅಭ್ಯರ್ಥಿಗಳು ಅಪ್ರೆಂಟಿಸ್ ಆಗಿ ಕೆಲಸ ಮಾಡಿದರೆ ಮುಂದೆ ನೀವು ದೇಶದಲ್ಲಿ ಎಲ್ಲಿಯೇ ಹೋದರು ರೈಲ್ವೆ ಇಲಾಖೆಯಲ್ಲಿ ಒಂದು ಅವಕಾಶ ಸುಲಭವಾಗಿ ಸಿಗಬಹುದು. ಒಟ್ಟು ಉದ್ಯೋಗಗಳು- 1007 ಅರ್ಜಿ ಶುಲ್ಕ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಅರ್ಹತೆ ಆಧಾರಿತವಾಗಿದೆ. ಹೀಗಾಗಿ ಯಾವುದೇ ವರ್ಗಕ್ಕೆ ಅರ್ಜಿ ಶುಲ್ಕ ಇರಲ್ಲ. ಶೈಕ್ಷಣಿಕ ಅರ್ಹತೆ- 10ನೇ ತರಗತಿಯಲ್ಲಿ ಕನಿಷ್ಠ ಶೇ. 50 ರಷ್ಟು ಅಂಕ ಇರಬೇಕು. ಜೊತೆಗೆ ITI ಪ್ರಮಾಣೀಕರಣ ಹೊಂದಿರಬೇಕು. ವಯೋಮಿತಿ- 15 ರಿಂದ 24 ವರ್ಷದ ಒಳಗಿನವರಿಗೆ…
ಹುಬ್ಬಳ್ಳಿ:- ಜನಿವಾರ ತೆಗೆಸಿರುವುದು ಜನರ ನಂಬಿಕೆ ಮೇಲೆ ಪ್ರಹಾರ ಮಾಡುವಂತಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. https://ainkannada.com/delay-in-issuing-a-khata-b-khata-for-properties-protest-from-krs-party/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಜನಿವಾರ ತೆಗೆಸಿರುವುದು ಜನರ ನಂಬಿಕೆ ಮೇಲೆ ಪ್ರಹಾರ ನಡೆಸಿದಂತೆ ಆಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಹೋಂಗಾರ್ಡ್ನನ್ನು ಅಮಾನತ್ತು ಮಾಡಿ ಕೈ ತೊಳೆದುಕೊಂಡಿದ್ದು, ಇದು ಸರಿಯಲ್ಲ. ಕೇವಲ ಬ್ರಾಹ್ಮಣರಷ್ಟೇ ಜನಿವಾರ ಹಾಕುವುದಿಲ್ಲ. ಇದೊಂದು ಧಾರ್ಮಿಕ ನಂಬಿಕೆಯಾಗಿದ್ದು, ಇದರ ಮೇಲೆ ಪ್ರಹಾರ ನಡೆಸಿದೆ. ಇದನ್ನ ಗಂಭೀರವಾಗಿ ಪರಿಗಣಿಸಿ ಸರ್ಕಾರ ಇದಕ್ಕೊಂದು ಸ್ಪಷ್ಟ ಮಾರ್ಗಸೂಚಿ ಹೊರಡಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಶುರುವಾದ ಜಾತಿಗಣತಿ ವಿವಾದ, ಆಡಳಿತ ವೈಫಲ್ಯ ಮರೆಮಾಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಏನಾದರೊಂದು ವಿಷಯಾಂತರ ಮಾಡುತ್ತಲೇ ಇರುತ್ತದೆ ಎಂದು ಟೀಕಿಸಿದರು.
ಚಾಮರಾಜನಗರ:- ಕೊಳ್ಳೇಗಾಲ ನಗರಸಭೆಯಲ್ಲಿ ಸಾರ್ವಜನಿಕರ ಆಸ್ತಿಗಳಿಗೆ ಎ-ಖಾತೆ ಮತ್ತು ಬಿ-ಖಾತಾ ವನ್ನು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. https://ainkannada.com/buttlers-half-century-gujarat-secure-thrilling-7-wicket-win-over-delhi/ ನಗರಸಭೆ ಕಚೇರಿಯ ಮುಂಭಾಗದಲ್ಲಿ ಕೆ.ಅರ್.ಎಸ್ ಪಕ್ಷದ ಮುಖಂಡರು ಧಿಕ್ಕಾರ ಕೂಗುವ ಮೂಲಕ ಪ್ರತಿಭಟಿಸಿದರು. ಪ್ರತಿಭಟನೆ ವೇಳೆಯಲ್ಲಿ ಮಾತನಾಡಿದ ಕೆ.ಆರ್.ಎಸ್ ಪಕ್ಷದ ಜಿಲ್ಲಾಧ್ಯಕ್ಷ ಕೆ.ಗಿರೀಶ್, ನಗರಸಭೆಯಲ್ಲಿ ಸುಮಾರು 400 ಜನರು ಕಂದಾಯ ಕಟ್ಟಿ ಖಾತೆ ಮಾಡಿಸಿಕೊಳ್ಳಲು ತಯಾರಿದ್ದಾರೆ. ಅಲ್ಲದೆ ಕಂದಾಯ ಕಟ್ಟಿದ ಮೂರು ತಿಂಗಳ ಅವಧಿಯೊಳಗೆ ಖಾತೆ ಮಾಡಬೇಕೆಂಬ ನಿಯಮವಿದ್ದರೂ ಕೂಡ ಅಧಿಕಾರಿಗಳು ಸಾರ್ವಜನಿಕರಿಗೆ ಖಾತೆ ಮಾಡುತ್ತಿಲ್ಲ. ಪ್ರತಿನಿತ್ಯ ಸಾರ್ವಜನಿಕರು ನಗರಸಭೆಗೆ ಅಲೆದು ಅಲೆದು ಸಾಕಾಗಿದೆ. ಹಾಗಾಗಿ ಸಾರ್ವಜನಿಕರ ದೂರುಗಳ ಆಧಾರದ ಮೇಲೆ ನಾವು ಸಾರ್ವಜನಿಕರ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಖಾತೆ ಮಾಡಿಕೊಡಬೇಕು ಇಲ್ಲವಾದಲ್ಲಿ ಅನಿರ್ಧಿಷ್ಟ ಅವಧಿ ಮುಷ್ಕರ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಗಣೇಶ್, ಜಿಲ್ಲಾ ಕಾರ್ಯದರ್ಶಿ ಶಿವಶಂಕರ್, ಮಧುನಾಯಕ ಇತರರು ಭಾಗವಹಿಸಿದ್ರು
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ 7 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. https://ainkannada.com/onion-price-not-met-farmer-destroys-crop-by-grazing-sheep/ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ 8 ವಿಕೆಟ್ ನಷ್ಟಕ್ಕೆ 203 ರನ್ ಹೊಡೆಯಿತು. ಕಠಿಣ ಮೊತ್ತವಾದರೂ ಇನ್ನೂ 4 ಎಸೆತ ಬಾಕಿ ಇರುವಂತೆ ಗುಜರಾತ್ 3 ವಿಕೆಟ್ ಕಳೆದುಕೊಂಡು 204 ರನ್ ಹೊಡೆದು ಜಯಗಳಿಸಿತು. ನಾಯಕ ಶುಭಮನ್ ಗಿಲ್ 7 ರನ್ ಗಳಿಸಿ ಔಟಾದಾಗ ಗುಜರಾತ್ಗೆ ಆರಂಭದಲ್ಲೇ ಹಿನ್ನಡೆಯಾಗಿತ್ತು. ಎರಡನೇ ವಿಕೆಟಿಗೆ ಸಾಯಿ ಸುದರ್ಶನ್ ಮತ್ತು ಬಟ್ಲರ್ 35 ಎಸೆತಗಳಲ್ಲಿ 60 ರನ್ ಹೊಡೆಯುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಸಾಯಿ ಸುದರ್ಶನ್ 36 ರನ್ (21 ಎಸೆತ, 5 ಬೌಂಡರಿ, 1 ಸಿಕ್ಸ್ )ಸಿಡಿಸಿ ಔಟಾದರು. ಮೂರನೇ ವಿಕೆಟಿಗೆ ಬಟ್ಲರ್ ಮತ್ತು ರುದರ್ರ್ಫೋರ್ಡ್ 69 ಎಸೆತಗಳಲ್ಲಿ 119 ರನ್ ಚಚ್ಚುವಾಗಲೇ ಗುಜರಾತ್ ಗೆಲುವು ಖಚಿತವಾಯಿತು.
ವಿಜಯನಗರ:- ಈರುಳ್ಳಿಗೆ ಬೆಂಬಲ ಬೆಲೆ ಸಿಗದ ಹಿನ್ನಲೆ ರೈತ ಕಣ್ಣೀರು ಹಾಕುತ್ತಿದ್ದು, ಅನ್ನದಾತನ ಸ್ಥಿತಿ ನೋಡಿದ್ರೆ ಮರುಕ ಹುಟ್ಟುವಂತೆ ಮಾಡಿದೆ. https://ainkannada.com/overturned-while-moving-lorry-suddenly-catches-fire-and-bursts-into-flames/ ಅದರಂತೆ ಇಲ್ಲೋರ್ವ ರೈತ, ಈರುಳ್ಳಿ ಬೆಲೆ ಸಿಗದ ಹಿನ್ನೆಲೆ, ಬೆಳೆ ಬೆಳೆದಿದ್ದ ಹೊಲವನ್ನ ಕುರಿಗಳನ್ನು ಬಿಟ್ಟು ಮೇಯಿಸಿದ್ದಾನೆ. ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಜರುಗಿದೆ. ಅನ್ನದಾತ ಶರಣಪ್ಪ ಎಂಬಾತನೇ ಬೆಳೆದ ಬೆಳೆಯನ್ನು ತಾನೇ ನಾಶ ಮಾಡಿದ್ದಾರೆ. ರೈತ ಶರಣಪ್ಪ, ಮೂರು ಎಕರೆ ಹೊಲದಲ್ಲಿ ಈರುಳ್ಳಿ ಬೆಳೆ ಬೆಳೆದು ಲಾಭದ ನಿರೀಕ್ಷೆಯಲ್ಲಿದ್ದ. ಆದ್ರೆ ಬೆಲೆ ಕುಸಿತದಿಂದ ದಾರಿ ತೋಚದೆ ಕುರಿಗಳಿಗೆ ಈರುಳ್ಳಿ ಬೆಳೆಯನ್ನೆ ಆಹಾರವಾಗಿಸಿದ. ರಾಜ್ಯ ಸರ್ಕಾರಕ್ಕೆ ಹಲವು ಭಾರೀ ವಿಜಯನಗರದ ರೈತರು ಈರುಳ್ಳಿ ಶೈಥಿಕರಣ ಘಟಕ ತೆರೆಯುವಂತೆ ಒತ್ತಾಯಿಸಿದ್ರು. ಆದ್ರೆ ರೈತರ ಕಷ್ಟಕ್ಕೆ ಸ್ಪಂದಿಸದ ಸರ್ಕಾರಕ್ಕೆ ಅನ್ನದಾತರು ಹಿಡಿಶಾಪ ಹಾಕ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ರೈತರ ಕಷ್ಟಕ್ಕೆ ಅಧಿವೇಶನಗಳು ಧ್ವನಿಯಾಗುತ್ತಿಲ್ಲ. ಪ್ರತಿಭಾರಿಯೂ ಈ ಭಾಗದ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಜನಪ್ರತಿನಿಧಿಗಳ ವಿರುಧ್ದವು ರೈತರು…
ಕೂಡ್ಲಿಗಿ : ಲಾರಿಯೊಂದು ಚಲಿಸುತ್ತಿರುವಾಗಲೇ ಏಕಾಏಕಿ ಧರೆಗೆ ಉರುಳಿದೆ. ಈ ವೇಳೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ಧಗ, ಧಗನೆ ಹೊತ್ತಿ ಉರಿದಿದೆ. ಈ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಲೂಕಿನ ಶಿವಪುರ ಗ್ರಾಮದಲ್ಲಿ ಘಟನೆ. ಬೆಂಕಿ ಹೊತ್ತಿ ಉರಿದ ಲಾರಿ ಹೊಸಪೇಟೆ ಮಾರ್ಗವಾಗಿ ಚಿತ್ರದುರ್ಗದತ್ತ ಚಲಿಸುತ್ತಿರುವಾಗ ಈ ದುರ್ಘಟನೆ ನಡೆದಿದೆ. https://ainkannada.com/rahul-gandhi-the-day-is-not-far-when-you-will-go-on-a-penance-pilgrimage-nikhil-kumaraswamy/ ಶೇಂಗಾ ಹೊತ್ತು ಹೊರಟಿದ್ದ ಲಾರಿ, ಏಕಾ, ಏಕಿ ಪಲ್ಟಿಯಾಗಿದೆ. ರಸ್ತೆಗೆ ಲಾರಿ ಬೀಳ್ತಿದ್ದಂತೆ ಡೀಸೆಲ್ ಟ್ಯಾಂಕ್ ಒಡೆದಿದೆ. ಬಳಿಕ ಬೆಂಕಿಯ ಕಿಡಿ ಹೊತ್ತಿಕೊಂಡು ಲಾರಿ ಸಂಪೂರ್ಣ ಸುಟ್ಟು ಭಸ್ಮ ಆಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಜಾತಿಗಣತಿ ವರದಿಯ ಅಂಕಿ ಅಂಶಗಳ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಸಭೆ ಕರೆಯಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. https://ainkannada.com/it-was-wrong-to-remove-january-from-the-cet-exam-this-excess-should-not-continue-nikhil-kumaraswamy/ ಅಲ್ಲದೆ, ಎಲ್ಲಾ ಸಮುದಾಯಗಳ ಸ್ವಾಮೀಜಿಗಳು, ಮುಖಂಡರು, ಬುದ್ದಿಜೀವಿಗಳನ್ನು ಆಹ್ವಾನಿಸಿ ಸಮಾಲೋಚನೆ ನಡೆಸಬೇಕು ಹಾಗೂ ಇದಕ್ಕೆ ಸರ್ವಸಮ್ಮತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಸರ್ಕಾರವನ್ನು ಆಗ್ರಹಪಡಿಸಿದರು. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಗಣತಿಗೆ ಜೆಡಿಎಸ್ ಯಾವುದೇ ಕಾರಣಕ್ಕೂ ವಿರೋಧ ಮಾಡುತ್ತಿಲ್ಲ. ಆದರೆ, ಸಮೀಕ್ಷೆ ಕ್ರಮಬದ್ಧವಾಗಿ ಇಲ್ಲ. ಸೋರಿಕೆ ಆಗಿರುವ ಅಂಕಿ ಅಂಶಗಳ ಸತ್ಯಾಸತ್ಯತೆ ಬಗ್ಗೆ ಪ್ರಶ್ನೆ ಮಾಡಿದ್ದೇವೆ ಹಾಗೂ ಆ ಅಂಕಿ ಅಂಶಗಳು ಸತ್ಯಕ್ಕೆ ದೂರವಾಗಿವೆ ಎಂದಷ್ಟೇ ಹೇಳಿದ್ದೇವೆ ಎಂದು ಹೇಳಿದರು. ಸಮೀಕ್ಷೆ ವಿಧಾನವೇ ಸರಿ ಇಲ್ಲ. ಯಾರ ಮನೆಗೆ ಹೋಗಿದ್ದಾರೆ, ಯಾವ ಮಾನದಂಡ ಇಟ್ಟುಕೊಂಡು ಸಮೀಕ್ಷೆ ಮಾಡಿದ್ದಾರೆ ಎಂಬ ಸರಿಯಾದ ಮಾಹಿತಿ ಇಲ್ಲ. ಹೀಗಾಗಿ ಇಡೀ ವರದಿಯನ್ನು ಪುನಾ ಪರಿಶೀಲನೆ…