Author: AIN Author

ಕೂಡ್ಲಿಗಿ : ಲಾರಿಯೊಂದು ಚಲಿಸುತ್ತಿರುವಾಗಲೇ ಏಕಾಏಕಿ ಧರೆಗೆ ಉರುಳಿದೆ. ಈ ವೇಳೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ಧಗ, ಧಗನೆ ಹೊತ್ತಿ ಉರಿದಿದೆ. ಈ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಲೂಕಿನ ಶಿವಪುರ ಗ್ರಾಮದಲ್ಲಿ ಘಟನೆ. ಬೆಂಕಿ ಹೊತ್ತಿ ಉರಿದ ಲಾರಿ ಹೊಸಪೇಟೆ ಮಾರ್ಗವಾಗಿ ಚಿತ್ರದುರ್ಗದತ್ತ ಚಲಿಸುತ್ತಿರುವಾಗ ಈ ದುರ್ಘಟನೆ ನಡೆದಿದೆ. https://ainkannada.com/rahul-gandhi-the-day-is-not-far-when-you-will-go-on-a-penance-pilgrimage-nikhil-kumaraswamy/ ಶೇಂಗಾ ಹೊತ್ತು ಹೊರಟಿದ್ದ ಲಾರಿ, ಏಕಾ, ಏಕಿ ಪಲ್ಟಿಯಾಗಿದೆ‌. ರಸ್ತೆಗೆ ಲಾರಿ ಬೀಳ್ತಿದ್ದಂತೆ ಡೀಸೆಲ್ ಟ್ಯಾಂಕ್ ಒಡೆದಿದೆ. ಬಳಿಕ ಬೆಂಕಿಯ ಕಿಡಿ ಹೊತ್ತಿಕೊಂಡು ಲಾರಿ ಸಂಪೂರ್ಣ ಸುಟ್ಟು ಭಸ್ಮ ಆಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಜಾತಿಗಣತಿ ವರದಿಯ ಅಂಕಿ ಅಂಶಗಳ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಸಭೆ ಕರೆಯಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. https://ainkannada.com/it-was-wrong-to-remove-january-from-the-cet-exam-this-excess-should-not-continue-nikhil-kumaraswamy/ ಅಲ್ಲದೆ, ಎಲ್ಲಾ ಸಮುದಾಯಗಳ ಸ್ವಾಮೀಜಿಗಳು, ಮುಖಂಡರು, ಬುದ್ದಿಜೀವಿಗಳನ್ನು ಆಹ್ವಾನಿಸಿ ಸಮಾಲೋಚನೆ ನಡೆಸಬೇಕು ಹಾಗೂ ಇದಕ್ಕೆ ಸರ್ವಸಮ್ಮತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಸರ್ಕಾರವನ್ನು ಆಗ್ರಹಪಡಿಸಿದರು. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಗಣತಿಗೆ ಜೆಡಿಎಸ್ ಯಾವುದೇ ಕಾರಣಕ್ಕೂ ವಿರೋಧ ಮಾಡುತ್ತಿಲ್ಲ. ಆದರೆ, ಸಮೀಕ್ಷೆ ಕ್ರಮಬದ್ಧವಾಗಿ ಇಲ್ಲ. ಸೋರಿಕೆ ಆಗಿರುವ ಅಂಕಿ ಅಂಶಗಳ ಸತ್ಯಾಸತ್ಯತೆ ಬಗ್ಗೆ ಪ್ರಶ್ನೆ ಮಾಡಿದ್ದೇವೆ ಹಾಗೂ ಆ ಅಂಕಿ ಅಂಶಗಳು ಸತ್ಯಕ್ಕೆ ದೂರವಾಗಿವೆ ಎಂದಷ್ಟೇ ಹೇಳಿದ್ದೇವೆ ಎಂದು ಹೇಳಿದರು. ಸಮೀಕ್ಷೆ ವಿಧಾನವೇ ಸರಿ ಇಲ್ಲ. ಯಾರ ಮನೆಗೆ ಹೋಗಿದ್ದಾರೆ, ಯಾವ ಮಾನದಂಡ ಇಟ್ಟುಕೊಂಡು ಸಮೀಕ್ಷೆ ಮಾಡಿದ್ದಾರೆ ಎಂಬ ಸರಿಯಾದ ಮಾಹಿತಿ ಇಲ್ಲ. ಹೀಗಾಗಿ ಇಡೀ ವರದಿಯನ್ನು ಪುನಾ ಪರಿಶೀಲನೆ…

Read More

ಬೆಂಗಳೂರು: ಬೀದರ್ ಮತ್ತು ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತಪ್ಪು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. https://ainkannada.com/do-you-want-to-buy-a-bda-site-if-so-how-do-you-apply-complete-details-are-here/ ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತಿ ಜಾತಿ ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಎಂದರು. ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ? ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ಜನಿವಾರ ಇದ್ದರೆ ಏನು ಸಮಸ್ಯೆ? ಸ್ಮಾರ್ಟ್ ವಾಚ್ ಕಟ್ಟಿಕೊಂಡು ಬಂದರೆ ನೀವು ತೆಗೆಸಬೇಕು ಎನ್ನುವುದು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅವರಿಗೆ ಬುದ್ದಿವಾದ ಹೇಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮ ವಹಿಸಬೇಕು ಎಂದು ನಿಖಿಲ್…

Read More

ಬೆಂಗಳೂರಿನಲ್ಲಿ ಸೈಟ್ ಖರೀದಿ ಮಾಡಲು ನೀವು ಪ್ಲ್ಯಾನ್ ಮಾಡುತ್ತಿದ್ದೀರಾ? ಹಾಗಾದರೆ ನೀವು ಓದಲೇಬೇಕಾದ ಸುದ್ದಿಯೊಂದು ಇಲ್ಲಿದೆ. ರಾಜಧಾನಿ ಬೆಂಗಳೂರು ಜನರಿಗೆ ಮನೆ, ಸೈಟ್‌ ಖರೀದಿ ಮಾಡಬೇಕು ಎಂಬ ಕನಸು ಇದ್ದೇ ಇರುತ್ತದೆ. ಆ ಕನಸನ್ನು ನೀವು ಈಡೇರಿಸಿಕೊಳ್ಳಬೇಕಾ? https://ainkannada.com/bangalore-fire-at-medical-store-more-damage/ ಹೌದು, ಬೆಂಗಳೂರಿನಲ್ಲಿ ನಿವೇಶನಗಳ ಬೆಲೆ ಗಗನಕ್ಕೇರಿರುವ ಈ ಸಂದರ್ಭದಲ್ಲಿ ಖಾಸಗಿ ಸೈಟ್​​ಗಳನ್ನು ಕೊಂಡುಕೊಳ್ಳುವುದು ಸುಲಭವೂ ಅಲ್ಲ, ದಾಖಲೆ ಇನ್ನಿತರ ವಿಚಾರಗಳ ದೃಷ್ಟಿಯಿಂದ ಅಷ್ಟು ಸರಳವೂ ಅಲ್ಲ. ಹಾಗಾದರೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸಿರುವ ಸೈಟ್​​ಗಳನ್ನು ಕೊಂಡುಕೊಳ್ಳಬೇಕಾದರೆ? ಅರ್ಹತೆ ಏನು? ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ? ಏನೆಲ್ಲ ದಾಖಲೆಗಳು ಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಆ ಕುರಿತ ಸಂದೇಹಗಳನ್ನು ನಿವಾರಿಸಲು ಇಲ್ಲಿ ಪ್ರಯತ್ನಿಸಲಾಗಿದೆ. ಬಿಡಿಎ ನಿವೇಶನದ ಮರು ಮಾರಾಟ ಅಥವಾ ರೀಸೆಲ್ ವೇಳೆ ಯಾರು ಬೇಕಾದರೂ ಕೊಂಡುಕೊಳ್ಳಬಹುದು. ಆದರೆ ಹರಾಜು ಪ್ರಕ್ರಿಯೆ ಮೂಲಕ ಮಾರಾಟ ಮಾಡಲಾಗುವ ಬಿಡಿಎ ಸೈಟ್ ಅನ್ನು ಭಾರತೀಯ ನಾಗರಿಕ ಮಾತ್ರ ಖರೀದಿಸಬಹುದಾಗಿದೆ. ಒಂದು ವೇಳೆ, ಅನಿವಾಸಿ ಭಾರತೀಯರು ಬಿಡಿಎ…

Read More

ಬೆಂಗಳೂರು:- ಮೆಡಿಕಲ್ ಸ್ಟೋರ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ಗಾಯತ್ರಿನಗರ ಮುಖ್ಯರಸ್ತೆಯ ಮೆಡಿಕಲ್ ನಲ್ಲಿ ಜರುಗಿದೆ. https://ainkannada.com/kannada-actress-ready-to-tie-the-knot-with-a-cricketer/ ಇಲ್ಲಿನ ಹೆಲ್ತ್ ಕೇರ್ ಫಾರ್ಮಾ & ಜನರಲ್ ಸ್ಟೋರ್ ನಲ್ಲಿ ಘಟನೆ ಜರುಗಿದೆ. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸೋ ಕಾರ್ಯ ನಡೆದಿದೆ, ಘಟನೆಯಲ್ಲಿ ಯಾವುದೇ ಪ್ರಣಾಪಾಯವಾಗಿಲ್ಲ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೆಡಿಸಿನ್ ಬೆಂಕಿಗಾಹುತಿಯಾಗಿದೆ. ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ನಮ್ಮ ಆಹಾರದಲ್ಲಿ ಬಳಸಲಾಗುವ ಅನೇಕ ಪದಾರ್ಥಗಳು ಔಷಧೀಯ ಗುಣಗಳನ್ನು ಹೊಂದಿದ್ದು, ಅದು ನಮಗೆ ಲೆಕ್ಕವಿಲ್ಲದಷ್ಟು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಅದರಲ್ಲಿಯೂ ಅನೇಕ ಮಂದಿ ಪುದೀನಾ ತಿನ್ನಲು ಇಷ್ಟಪಡುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಹಲವಾರು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ನಿರ್ದಿಷ್ಟವಾಗಿ ಪುದೀನ ಎಲೆಗಳನ್ನು ಅವುಗಳ ರಿಫ್ರೆಶ್ ಪರಿಮಳ ಮತ್ತು ಉತ್ತಮ ರುಚಿಗಾಗಿ ಅನೇಕ ಭಕ್ಷ್ಯಗಳಲ್ಲಿ ಸಂಯೋಜಕವಾಗಿ ಬಳಸಲಾಗುತ್ತದೆ. ಅನೇಕ ಮಂದಿ ತಮ್ಮ ಆಹಾರದಲ್ಲಿ ವಾರಕ್ಕೆ ಒಂದು ಅಥವಾ ಎರಡು ಬಾರಿ ಪುದೀನಾವನ್ನು ಸೇರಿಸುತ್ತಾರೆ. https://ainkannada.com/haveri-beo-falls-into-lokayukta-trap/ ಪುದೀನದಲ್ಲಿ ಉತ್ಕರ್ಷಣ ನಿರೋಧಕಗಳು, ಮೆಂಥಾಲ್ ಮತ್ತು ಫೈಟೊನ್ಯೂಟ್ರಿಯಂಟ್‍ಗಳಿವೆ. ಇವು ಕಿಣ್ವಗಳಿಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತವೆ. ಪುದೀನದಲ್ಲಿ ಇರುವ ಸಾರಭೂತ ತೈಲಗಳು ಬಲವಾದ ಆಂಟಿಬ್ಯಾಕ್ಟೀರಿಯಾ ಮತ್ತು ನಂಜು ನಿರೋಧಕ ಪರಿಣಾಮಗಳನ್ನು ಹೊಂದಿರುತ್ತವೆ. ಅವು ಹೊಟ್ಟೆಯ ಸೆಳೆತವನ್ನು ಶಾಂತಗೊಳಿಸುತ್ತದೆ. ಆಮ್ಲೀಯತೆ ಮತ್ತು ವಾಯುವನ್ನು ಹಿಡಿತದಲ್ಲಿ ಇಡಲು ಸಹಾಯ ಮಾಡುವುದು. ನಿಯಮಿತವಾಗಿ ಪುದೀನ ರಸ ಅಥವಾ ಪುದೀನ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಎದೆಯ ದಟ್ಟಣೆ ಕಡಿಮೆಯಾಗುತ್ತದೆ. ಪುದೀನದಲ್ಲಿ ಇರುವ ಮೆಂಥಾಲ್…

Read More

ಹಾವೇರಿ: ಬಾಕಿ ವೇತನ ಬಿಡುಗಡೆ ಮಾಡುವ ಸಂಬಂಧ ಶಿಕ್ಷಕರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಾವೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. https://ainkannada.com/former-mla-for-bjp-party-a-t-ramaswamys-resignation/ ಶಿಕ್ಷಕ ಪ್ರತಾಪ್ ಬಾರ್ಕಿ ಅವರ ಹಳೆಯ ವೇತನ ಮಾಡಿಕೊಡಲು ಬಿಇಒ ಮೌನೇಶ ಬಡಿಗೇರ 50 ಸಾವಿರ ರೂ., ಹಣಕ್ಕೆ ಬೇಡಿಕೆ ಇಟ್ಟು ಶನಿವಾರ ಮನೆಗೆ ಕರೆಯಿಸಿಕೊಂಡು 15ಸಾವಿರ ರೂ., ಮುಂಗಡವಾಗಿ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತರು ಬಂಧಿಸಿದ್ದಾರೆ. ಸದ್ಯ ಈ ಕುರಿತು ತನಿಖೆ ಮುಂದುವರೆದಿದೆ.

Read More

ಬೆಂಗಳೂರು: ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಎಟಿ ರಾಮಸ್ವಾಮಿ ಅವರು ರಾಜ್ಯಾಧ್ಯಕ್ಷ ವಿಜಯೇಂದ್ರಗೆ  ರಾಜೀನಾಮೆ ಪತ್ರ ಬರೆದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದು, ರಾಜೀನಾಮೆ ಪತ್ರದಲ್ಲಿ ಪರಿಸರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಉಲ್ಲೇಖಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ರಾಮಸ್ವಾಮಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಜೆಡಿಎಸ್ ಜತೆ ಮೈತ್ರಿ ಬಳಿಕ ಅಸಮಾಧಾನಗೊಂಡು  ಬಿಜೆಪಿ ಚಟುವಟಿಕೆಗಳಿಂದ ರಾಮಸ್ವಾಮಿ ದೂರ ಉಳಿದಿದ್ದರು. ಇದೀಗ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. https://ainkannada.com/cm-participates-in-a-program-for-the-kuruba-community-in-tumkur/ ರಾಜೀನಾಮೆಯಲ್ಲಿನ ಏನಿದೆ..? ವಿಶ್ವ ತಾಪಮಾನ ವಿಪರೀತ ಏರಿಕೆಯಿಂದಾಗಿ ಹವಾಮಾನದ ಅಸಮತೋಲನ ಉಂಟಾಗಿದೆ. ಇದರಿಂದ ನೆರೆ, ಬರ, ಚಂಡಮಾರುತ, ಭೂಕಂಪನಗಳು ಸೃಷ್ಟಿಯಾಗುತ್ತಿವೆ. ನಾವು ಕುಡಿಯುವ ನೀರು, ಉಸಿರಾಡುವ ಗಾಳಿ, ಸೇವಿಸುವ ಆಹಾರ ವಿಷಪೂರಿತವಾಗಿವೆ. ಬೆಟ್ಟ, ಗುಡ್ಡ, ಅರಣ್ಯಗಳ ನಾಶದಿಂದ ನದಿ, ತೊರೆಗಳೂ ಬತ್ತಿ ಹೋಗಿವೆ. ಅಂತರ್ಜಲ ಕುಸಿದಿದೆ. ಜೀವ ಸಂಕುಲಗಳಿಗೆ ಸಂಕಷ್ಟ ಬಂದೊದಗಿದೆ. ಈ ಹೊತ್ತಿನಲ್ಲಾದರೂ ನಾವು ಜನರಲ್ಲಿ ಜಾಗೃತಿ ಮೂಡಿಸಿ ಪರಿಸರ ಸಂರಕ್ಷಣೆ ಕಾರ್ಯ ಮಾಡಬೇಕಾಗಿದೆ.…

Read More

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ ಏಪ್ರಿಲ್ 24ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವ ಸಂಪುಟ ಸಭೆಯನ್ನು ಯಶಸ್ವಿಗೊಳಿಸಲು ಇಡೀ ಜಿಲ್ಲಾಡಳಿತ ಡೊಂಕ ಕಟ್ಟಿ ನಿಂತಿದೆ. ಹೀಗಾಗಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಶಾಸಕರಾದ ಎಂ.ಆರ್. ಮಂಜುನಾಥ್, ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಪೂರ್ವ ಸಿದ್ದತೆಗಳನ್ನು ಪರಿಶೀಲಿಸಿದರು. ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು, ಸಚಿವರು ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ ವ್ಯಾಪಕವಾಗಿ ವಿವಿಧ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಿದ್ದತೆಗಳ ಸಂಬಂಧ ಪರಿಶೀಲನೆ ನಡೆಸಿದರು. ಶಾಶ್ವತ ಹೆಲಿಪ್ಯಾಡ್ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿ ಕೈಗೊಳ್ಳಬೇಕಾದ ಪೂರ್ವ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು. ಮುಖ್ಯಮಂತ್ರಿಗಳು, ಸಚಿವರು, ಗಣ್ಯರು, ಹಿರಿಯ ಅಧಿಕಾರಿಗಳ ವಾಸ್ತವ್ಯಕ್ಕಾಗಿ ನಿಗದಿಯಾಗಿರುವ ವಸತಿಗೃಹಗಳಿಗೆ ಭೇಟಿಕೊಟ್ಟು ಕೈಗೊಳ್ಳಲಾಗಿರುವ ಸ್ವಚ್ಚತೆ, ಸಿದ್ದತೆ, ಇನ್ನಿತರೆ ವ್ಯವಸ್ಥೆಗಳನ್ನು ವೀಕ್ಷಿಸಿದರು. ವಸತಿಗೃಹ ಬಳಿ ವಾಹನಗಳ ನಿಲುಗಡೆಗೆ ಇರುವ ಸ್ಥಳವನ್ನು ಸಹ ವೀಕ್ಷಿಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು. ಸಚಿವ ಸಂಪುಟ ಸಭೆ ನಿಗದಿಯಾಗಿರುವ ದೀಪದಗಿರಿ…

Read More

ಚಾಮರಾಜನಗರ : ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮಲೆಮಹದೇಶ್ವರಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸುವ ದಿನಾಂಕಗಳಿಗೆ ಮಾತ್ರ ಸೀಮಿತವಾಗಿ ಸಭೆಯ ಸಮಯ ಕೂಡಿಬರದೆ ಮುಂದೂಡುತ್ತಲೇ  ಸಾಗಿತ್ತು. ಇದೀಗ ಏಪ್ರಿಲ್ 24 ರಂದು ಸಚಿವ ಸಂಪುಟ ಫಿಕ್ಸ್ ಆಗಿದ್ದು. ಜಿಲ್ಲೆಯ ಸಮಗ್ರ ಅಭಿವೃದ್ದಿಯ ಆಸೆ ಜನರಲ್ಲಿ ಗರಿಗೆದರಿದೆ. ಪ್ರಾರಂಭದಲ್ಲಿ ಕ್ಯಾಬಿನೆಟ್ ಸಭೆಯನ್ನು ಫೆಬ್ರವರಿ 15 ರಂದು ನಡೆಸುವ ಯೋಜನೆ ಇತ್ತು, ಬಳಿಕ ಫೆಬ್ರವರಿ 17 ಕ್ಕೆ ಮುಂದೂಡಲಾಗಿತ್ತು. ಆದರೆ ಹಲವಾರು ಕಾರಣಗಳಿಂದ ಮತ್ತೆ ಸಭೆ ಮುಂದೂಡಲಾಗಿತ್ತು. ಇದೀಗ  ಸರ್ಕಾರ ಏಪ್ರಿಲ್ 24 ರಂದು ಸಭೆ ನಡೆಸಲು ನಿರ್ಧಾರ ಕೈಗೊಂಡಿದೆ. ಈಗಾಗಲೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಸಭೆಗೆ ಸಂಬಂಧಿಸಿದ ಎಲ್ಲಾ ವ್ಯವಸ್ಥೆಗಳನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. https://ainkannada.com/cm-participates-in-a-program-for-the-kuruba-community-in-tumkur/ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮೈಸೂರು ವಿಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವನೆಗಳು ಚರ್ಚೆಗೆ ಬರಲಿವೆ. ಜಿಲ್ಲೆಯ ಪ್ರವಾಸೋದ್ಯಮ, ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌…

Read More