Author: AIN Author

ಚಾಮರಾಜನಗರ : ಅಡುಗೆ ತಯಾರಿಸುವಾಗ  ಕುಕ್ಕರ್  ಸಿಡಿದು ಗೃಹಿಣಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಪುರ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ (40) ಗಾಯಗೊಂಡ ಮಹಿಳೆ. ಮನೆಯಲ್ಲಿ ಬೆಳಗಿನ ಉಪಹಾರ ತಯಾರಿಸಲು ಗ್ಯಾಸ್ ಒಲೆಯ ಮೇಲೆ ಕುಕ್ಕರ್ ಇಟ್ಟು ಅನ್ನ ತಯಾರಿಸುವಾಗ ಏಕಾಏಕಿ ಕುಕ್ಕರ್ ಸಿಡಿದು ಮುಚ್ಚುಳ ಮೇಲೆ ಹಾರಿ ಪಕ್ಕದಲ್ಲಿಯೇ ನಿಂತಿದ್ದ ರತ್ನಮ್ಮನ ತಲೆಯ ಮೇಲೆ ಬಿದ್ದ ಪರಿಣಾಮ ಗಾಯಗೊಂಡಿದ್ದಾರೆ. ಇದಲ್ಲದೆ ಅನ್ನದ ಬಿಸಿಗಂಜಿ ಮುಖ, ಕೈ ಕಾಲುಗಳಿಗೆ ಬಿದ್ದು ಸುಟ್ಟ ಗಾಯಗಳಾಗಿದೆ. https://ainkannada.com/heavy-rain-accompanied-by-storm-farmer-dies-after-being-struck-by-lightning/ ತಕ್ಷಣ ಕುಟುಂಬಸ್ಥರು ಕೊಳ್ಳೇಗಾಲ ಉಪವಿಭಾಗ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲು ಮಾಡಿದ್ದಾರೆ.  ವೈದ್ಯರಾದ ಡಾ. ಸುನಿತಾ ಮತ್ತು ಸಿಬ್ಬಂದಿಗಳು ಸೂಕ್ತ ಚಿಕಿತ್ಸೆ ನೀಡಿದ್ದಾರೆ. ಈ ಸಂಬಂಧ ರಾಮಪುರ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

Read More

ವಿಜಯನಗರ : ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಅನಾಹುತ ಸಂಭವಿಸಿವೆ. ರೇಷ್ಮೆ ಗೂಡಿಗೆ ಸಿಡಿಲು ಬಡಿದು ರೈತನೋರ್ವ ಸಾವನಪ್ಪಿದ್ದಾನೆ. ಮಳೆಯ ಪರಿಣಾಮ ಸಿಡಿಲು ಬಡಿದು ಹುಣಸೆಕಟ್ಟೆಯ ರೈತ ಬಸವರಾಜಪ್ಪ ಸಾವನ್ನಪ್ಪಿದ್ದಾರೆ. ಬಸವರಾಜಪ್ಪ ರೇಷ್ಮೆ ಗೂಡಿನ ಬಳಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಗಾಳಿ ಸಹಿತ ಮಳೆ ಶುರುವಾಗಿದ್ದು, ಏಕಾಏಕಿ ಸಿಡಿಲು ಬಡಿದು ದುರಂತ ಸಂಭವಿಸಿದೆ. https://ainkannada.com/a-young-man-died-while-swimming-in-the-waters-of-gundal-reservoir/ ಅಲ್ಲದೇ ಅಡವಿಹಳ್ಳಿಯ ಸಮೀಪದ ಹೊಂಬಳಗಟ್ಟೆ, ನಂದಿಬೇವೂರಿನಲ್ಲಿ ಬಳಿ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ವಿದ್ಯುತ್ ಕಂಬಗಳು ಧರೆಗುರುಳಿವೆ.

Read More

ಉಡುಪಿ: ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ. ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಮತ್ತು ಬೀದರ್‌ನಲ್ಲಿ ಜನಿವಾರ ಧರಿಸಿದ್ದಕ್ಕೆ ಪರೀಕ್ಷೆ ನಿರಾಕರಣೆ ಮಾಡಿದ ವಿಚಾರವಾಗಿ ಉಡುಪಿಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದಾರೆ. ಆಳುವ ಸರ್ಕಾರಕ್ಕೆ ಏನಾಗಿದೆಯೋ ಅರ್ಥವಾಗುತ್ತಿಲ್ಲ. ಸಿಇಟಿ ಪರೀಕ್ಷೆಯಲ್ಲಿ ಕಿವಿಯೋಲೆ ತೆಗೆಸಿದಾಗ ವಿವಾದ ಆಗಿತ್ತು. ಮಾಂಗಲ್ಯ ತೆಗೆಯಬೇಕು ಎಂಬ ಕಾರಣಕ್ಕೂ ಗಲಾಟೆ ಆಗಿತ್ತು. ಈಗ ಜನಿವಾರ ತೆಗೆಯಲು ಪ್ರಾರಂಭ ಮಾಡಿದ್ದಾರೆ. ಸರ್ಕಾರಕ್ಕೆ, ಮಂತ್ರಿಗಳಿಗೆ ಉನ್ನತ ಅಧಿಕಾರಿಗಳ ಗಮನಕ್ಕೆ ಬಂದಿಲ್ವಾ? ಸಾಮಾನ್ಯ ಸಿಬ್ಬಂದಿ ಈ ರೀತಿ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು. https://ainkannada.com/case-of-brahmin-student-being-forced-to-removed-janivara-for-cet-exam-action-against-officials-sought/ ಬ್ರಾಹ್ಮಣರು ಮಾತ್ರ ಯಜ್ಞೋಪವೀತ ಹಾಕುವುದಲ್ಲ. ಗೌಡ ಸರಸ್ವತರು, ವಿಶ್ವಕರ್ಮರು ಎಲ್ಲರೂ ಹಾಕುತ್ತಾರೆ. ಯಜ್ಞೋಪವೀತವನ್ನು ಪವಿತ್ರ ಎಂದು ಜನ ಭಾವಿಸುತ್ತಾರೆ. ಈ ರೀತಿ ಮಾಂಗಲ್ಯ ಕಿವಿಯೋಲೆ ಜನಿವಾರ ತೆಗೆಸುವುದು ಸರಿನಾ? ಜನಿವಾರದಲ್ಲಿ ನೇಣು ಹಾಕಿಕೊಳ್ಳುತ್ತೀರಾ ಅನ್ನೋದು ಸರಿಯಲ್ಲ ಎಂದು ಬೇಸರ ಹೊರಹಾಕಿದರು.

Read More

ಗದಗ : ಕಪ್ಪಾಗಿದ್ದೀಯಾ ಎಂದು ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗದಲ್ಲಿ ನಡೆದಿದೆ. ಮದುವೆಯಾದ ಕೇವಲ ನಾಲ್ಕು ತಿಂಗಳಲ್ಲಿ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗದಗ ಜಿಲ್ಲೆಯ ಬೆಟಗೇರಿಯ ಶರಣಬಸವೇಶ್ವರ ನಗರದ ನಿವಾಸಿಯಾದ ಅಮರೇಶ್ ಹಾಗೂ ಬಳ್ಳಾರಿ ಮೂಲದ ಪೂಜಾ ನಾಲ್ಕು ತಿಂಗಳ ಹಿಂದೆ ಮದುವೆತಾಗಿದ್ದರು. ಆದರೆ ಮದುವೆಯಾದ ಹೊಸದರಲ್ಲಿ ಅತ್ತೆ ಶಶಿಕಲಾ ಹಾಗೂ ಭಾವ ವೀರನಗೌಡ ನೀನು ಕಪ್ಪಾಗಿದ್ದಿಯಾ, ನಮ್ಮ ಅಮರೇಶನಿಗೆ ಇನ್ನೂ ಚೆನ್ನಾಗಿರುವ ಹುಡುಗಿ ಸಿಗುತ್ತಿದ್ದಳು ಎಂದು ಕಿರುಕುಳ ನೀಡುತ್ತಿದ್ದರಂತೆ . ಇದರಿಂದ ಬೇಸತ್ತ ಪೂಜಾ  ನನ್ನ ಸಾವಿಗೆ ಅತ್ತೆ ಹಾಗೂ ಭಾವನೇ ಕಾರಣ ಅಂತ ಡೆತ್ ನೋಟ್ ಬರೆದಿಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://ainkannada.com/thirthahalli-8-year-old-boy-dies-of-monkeypox/ ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುಉವ ಪೊಲೀಸರು ಅತ್ತೆ ಶಶಿಕಲಾ ಹಾಗೂ ಭಾವ ವೀರನಗೌಡನನ್ನು ಬಂಧಿಸಿದ್ದಾರೆ.

Read More

ಗದಗ : ಸಿಇಟಿ ಪರೀಕ್ಷೆ ಬರೆಯಲು ಬ್ರಾಹ್ಮಣ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದ ಪ್ರಕರಣ ಸಂಬಂಧ ಬ್ರಾಹ್ಮಣ ಸಮುದಾಯ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ಗದಗ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ರಾಹ್ಮಣ ಸಮಾಜ ಮುಖಂಡ ಗುರಣ್ಣ ಬಳಗಾನೂರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬೀದರ್ ಹಾಗೂ ಶಿವಮೊಗ್ಗ ಘಟನೆಯನ್ನು ಜನಿವಾರ ಹಾಕುವ ಎಲ್ಲ ಸಮುದಾಯಗಳು ಖಂಡಿಸಬೇಕು. ಜನಿವಾರ ತೆಗೆಯಲು ಹೇಳಿದ ಅಧಿಕಾರಿ, ಸಿಬ್ಬಂದಿಗೆ ಶಿಕ್ಷೆ ಆಗುವವರೆಗೂ ಹೋರಾಟ ಮಾಡುತ್ತೇವೆ. ಯಜ್ಞೋಪವೇತ ಧಾರಣೆ ಮಾಡುವ ಎಲ್ಲಾ ಸಮುದಾಯ ನಮ್ಮೊಂದಿಗೆ ಇರಬೇಕು. https://ainkannada.com/cm-participates-in-a-program-for-the-kuruba-community-in-tumkur/ ರಾಜ್ಯದಲ್ಲಿ ನಡೆದ ಘಟನೆಯನ್ನು ಖಂಡಿಸುತ್ತೇವೆ. ಬ್ರಾಹ್ಮಣ ಸಮಾಜವನ್ನು ಅವಮಾನ ಮಾಡುವುದು ಅವರ ಉದ್ದೇಶ ಆದಂತಿದೆ. ವಿದ್ಯಾರ್ಥಿಗಳಿಗೆ ಅವಮಾನ ಮಾಡಿದ ಅಧಿಕಾರಿ, ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸಬೇಕು. ಬ್ರಾಹ್ಮಣರ ಭಾವನೆಗೆ ದಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ತಪ್ಪಿತಸ್ಥರನ್ನು ಸೇವೆಯಿಂದ ವಜಾ ಮಾಡಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಇನ್ನೂ ಜಾತಿ ಗಣತಿಯಲ್ಲಿ ಬ್ರಾಹ್ಮಣ ಸಮಾಜಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. ರಾಜ್ಯಾದ್ಯಾಂತ 40 ರಿಂದ 50 ಲಕ್ಷ ಬ್ರಾಹ್ಮಣರಿದ್ದಾರೆ.…

Read More

ತುಮಕೂರು :  ತುಮಕೂರಿನಲ್ಲಿ ಕುರುಬ ಸಮುದಾಯದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ತುಮಕೂರು ನಗರದ ಶ್ರೀದೇವಿ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಕ ಕುರುಬರ ಸಾಂಸ್ಕೃತಿಕ ಪರಿಷತ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದು, ಅವರಿಗೆ ಸಚಿವ ಡಾ ಜಿ ಪರಮೇಶ್ವರ್, ಹೆಚ್ ಎಂ ರೇವಣ್ಣ,ಹುಲಿನಾಯ್ಕರ್ ಸೇರಿದಂತೆ ಇನ್ನುಳಿದ ನಾಯಕರು ಸಾಥ್‌ ನೀಡಿದರು. https://ainkannada.com/our-knowledge-should-be-rational-and-defy-the-theory-of-karma-cm/ ಇಂದಿನಿಂದ ಎರಡು ದಿನಗಳ ಕಾಲ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಸಾಂಸ್ಕೃತಿಕ ಪರಿಷತ್ ಕಾರ್ಯಕ್ರಮ, ಸಾಹಿತಿಗಳ ಸಾಂಸ್ಕೃತಿಕ ಸಮಾವೇಶ ನಡೆಯಲಿದೆ.

Read More

ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ, ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ಮಾತನಾಡಿದ ಅವರು, ನಮ್ಮ ಜ್ಞಾನ ತಿಳುವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ಧಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.  ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದಿದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರರಾಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ…

Read More

ಕೋಲಾರ : ಜಾತಿಗಣತಿ ಸಮೀಕ್ಷಾ ವರದಿಯನ್ನು ನಾನು ಓದಿದ್ದೇನೆ ರಾಜ್ಯದ ಶೇ.98 ರಷ್ಟು ಜನರಿಗೆ ಈ ವರದಿ ಅನುಕೂಲವಾಗಲಿದೆ. ಇನ್ನೂ ಶೇ.70 ಪರ್ಸೆಂಟ್ ಒಕ್ಕಲಿಗ ಹಾಗೂ ಲಿಂಗಾಯತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸತ್ಯದ ಆಧಾರದ ಮೇಲೆ ಚರ್ಚೆಗೆ ಸಿದ್ದ ಸಮೀಕ್ಷೆ ವರದಿ ಅನುಷ್ಟಾನವಾದರೆ ಎಲ್ಲರಿಗೂ ರಿಸವರ್ವೇಷನ್ ಹೆಚ್ಚಾಗಲಿದೆ. ಆದ್ರೆ ಕೆಲವರು ನಮ್ಮದೆ ಜಾಸ್ತಿ ಎನ್ನಲು ಹೊರಟಿದ್ದಾರೆ. ವಕ್ಕಲಿಗರಿಗೆ 3ಎ ನಲ್ಲಿ ಮೀಸಲಾತಿ ಇರುವುದು ಶೇ.4 ಮಾತ್ರ ಆದ್ರೆ ಶೇ.7 ಕ್ಕೆ ಏರಿಕೆಯಾಗಲಿದೆ.  ಲಿಂಗಾಯತರಿಗೆ 3 ಬಿಯಲ್ಲಿ ಶೇ.5ರಷ್ಟಿದೆ ಆದರೆ 8ಕ್ಕೆ ಹೆಚ್ಚು ಮಾಡಲು ಶಿಫಾರಸು ಮಾಡಲಾಗಿದೆ. ವರದಿ ಅನುಷ್ಟಾನವಾದರೆ ಎಲ್ಲರಿಗೂ ರಿಸವರ್ವೇಷನ್ ಹೆಚ್ಚಾಗಲಿದೆ. ವಕ್ಕಲಿಗರು ಹಾಗೂ ಲಿಂಗಾಯತರಿಗೆ ಶೇ 3 ರಷ್ಟು ಹೆಚ್ವಾಗಿದೆ. ಹಿಂದುಳಿದ ವರ್ಗ, ಅತಿ ಹಿಂದುಳಿದ ವರ್ಗ, ಅತ್ಯಂತ ಹಿಂದುಳಿದ ಮೂರು ವರ್ಗಗಳಿಗೂ ಅನುಕೂಲವಾಗಲಿದೆ ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ವಾದ ಮಾಡಬಹುದು ಎಂದರು. https://ainkannada.com/accident-during-bappanadu-sridurga-parameshwari-rathotsava/ ಒಂದು ಜಾತಿ…

Read More

ಶಿವಮೊಗ್ಗ : ಮಂಗನ ಕಾಯಿಲೆಯಿಂದ 8 ವರ್ಷದ ಬಾಲಕನ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ದತ್ತರಾಜಪುರ ಗ್ರಾಮದ ರಾಮು ಹಾಗೂ ಮಮತಾ ಎಂಬವರ ಮಗ ರಚಿತ್ ಮಂಗನ ಖಾಯಿಲೆಗೆ ಬಲಿಯಾಗಿದ್ದಾನೆ. ಮಂಗನ ಖಾಯಿಲೆ ಸೋಂಕಿಗೆ ತುತ್ತಾಗಿದ್ದ ಬಾಲಕನನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ.  ಆ ಮೂಲಕ ತೀರ್ಥಹಳ್ಳಿ ತಾಲೂಕಿನಲ್ಲಿ ಈ ವರ್ಷ ಮಂಗನ ಕಾಯಿಲೆಗೆ ಇಬ್ಬರು ಸಾವನ್ನಪ್ಪಿದ್ದಾರೆ. https://ainkannada.com/a-young-man-died-while-swimming-in-the-waters-of-gundal-reservoir/ ಇನ್ನೂ ಬಾಲಕ ಸಾವಿನ ಕುರಿತು ಒಂದು ವಾರದಲ್ಲಿ ಡೆತ್ ಅಡಿಟ್​ ವರದಿ ನೀಡಲು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಬೇಸಿಗೆ ತಿಂಗಳಲ್ಲಿ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು, ಮಂಗನ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸದ್ಯ ಮಂಗನ ಕಾಯಿಲೆ ಉಲ್ಭಣದಿಂದಾಗಿ ಕಾಡಿನಂಚಿನಲ್ಲಿ ನೆಲಸಿರುವ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

Read More

ವಿಜಯಪುರ : ಜನಿವಾರ ಧರಸಿದ್ದಕ್ಕೆ ಸಿಇಟಿ  ಪರೀಕ್ಷೆಗೆ ನಿರಾಕರಣೆ ಮಾಡಿದ್ದನ್ನು ಖಂಡಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತ ಬ್ರಾಹ್ಮಣ ಸಮಾಜ ಮಹಾಸಂಘ ಹಾಗೂ ಚಿದಂಬರ ಸೇವಾ ಸಮಿತಿ ವತಿಯಿಂದ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಳಿಕ ಡಿಸಿ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಲಾಯಿತು. https://ainkannada.com/brahmin-community-condemns-the-incident-of-students-being-given-a-janivara-exam-in-cet-exam/ ಸಿಇಟಿ ಪರೀಕ್ಷೆಯ ಸಂಧರ್ಭದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತಗೆಸಿದ ಕ್ರಮ ಖಂಡನೀಯ. ಜನಿವಾರ ತಗೆಸಿದ ಅಧಿಕಾರಿಯ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಘಟನೆ ಎಂದಿಗೂ ಆಗದಂತೆ ಎಚ್ಚರ ವಹಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Read More