Author: AIN Author

ಹುಬ್ಬಳ್ಳಿ : ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ್ದು, ಮೈ ಮೇಲೆ ಹಾಕಿದ್ದ ಜನಿವಾರವನ್ನು ಕಟ್ ಮಾಡಿದ್ದು ತಪ್ಪು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರತಿಕ್ರಿಯಿಸಿದರು. https://ainkannada.com/case-filed-on-january-11-kea-takes-action-dc-instructed-to-submit-a-report/ ಸಿಇಟಿ ಪರೀಕ್ಷೆ ವೇಳೆ ಜನಿವಾರ ಹಾಕಿದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಅಲ್ಲಿಯ ಹೋಮ್ ಗಾರ್ಡ್  ಮಾಡಿದ ವರ್ತನೆ ಸರಿಯಲ್ಲ. ಕೇವಲ ಬ್ರಾಹ್ಮಣರು ಅಷ್ಟೇ ಅಲ್ಲಾ ಬಹುತೇಕ ಜನರು ಜನಿವಾರ ಹಾಕುತ್ತಾರೆ. ಅನೇಕ ಓಬಿಸಿ ವರ್ಗದವರು ಸಹ ಹಾಕುತ್ತಾರೆ. ಆ ವಿದ್ಯಾರ್ಥಿಗೆ ನ್ಯಾಯ ಕೊಡಬೇಕು. ನ್ಯಾಯ ಅಂದರೆ ಕೇವಲ ಹಣ ಅಲ್ಲ, ವಿದ್ಯಾರ್ಥಿ ಭವಿಷ್ಯಕ್ಕೆ ಅನುಕೂಲ ಆಗಬೇಕು ಎಂದು ಆಗ್ರಹಿಸಿದರು.

Read More

ದಕ್ಷಿಣ ಕನ್ನಡ : ಮುಲ್ಕಿ ತಾಲೂಕಿನ ಪ್ರಸಿದ್ಧ ಕ್ಷೇತ್ರವಾದ ದೇವಳದ ಬಪ್ಪನಾಡು ಶ್ರೀದುರ್ಗಾ ಪರಮೇಶ್ವರಿ ರಥೋತ್ಸವದ ವೇಳೆ ಅವಘಡ ಭವಿಸಿದೆ ತೇರು ಮುರಿದು ಬಿದ್ದಿದೆ. ಜಾತ್ರಾ ಸಂಭ್ರಮದ ವೇಳೆ ರಥೋತ್ಸವದಲ್ಲಿ ತೇರು ಮುರಿದು ಬಿದಿದ್ದು, ಭಕ್ತರು ಅಪಶಕುನವೆಂದು ಗಾಬರಿಯಾಗಿದ್ದಾರೆ. ಕಳೆದ ಶುಕ್ರವಾರ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಳದ ರಥೋತ್ಸವ ಅದ್ಧೂರಿಯಾಗಿ ಸಾಗಿತ್ತು. ರಥ ಬೀದಿಗಳಲ್ಲಿ ರಥೋತ್ಸವ ಸಾಗುತ್ತಿದ್ದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದಿದೆ. ತೇರಿನ ಮೇಲ್ಬಾಗ ಕುಸಿದ ವೇಳೆ ಅರ್ಚಕರು ತೇರಿನಲ್ಲೇ ಇದ್ದರು. ಅದೃಷ್ಟವಶಾತ್  ಅಪಾಯದಿಂದ ಪಾರಾಗಿದ್ದಾರೆ. https://ainkannada.com/thieves-break-into-house-when-no-one-is-home-gold-worth-lakhs-stolen/ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಅವಘಡ ನಡೆದಿದೆ ಎನ್ನಲಾಗ್ತಿದೆ. ರಾತ್ರಿ ವೇಳೆಯೂ ಕೂಡ ರಥತೋತ್ಸವ ನೋಡಲು ಜನ ಸಾಗರವೇ ಹರಿದು ಬಂದಿತ್ತು. ಈ ಅವಘಡದಿಂದ, ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.

Read More

ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ ನೋಡಿದ ಖದೀಮರು ಮನೆ ಬಾಗಿಲಿನ ಲಾಕ್‌ ಮುರಿದು ಮನೆಯಲ್ಲಿದ್ದ 12 ತೊಲೆ ಬಂಗಾರ, ಬೆಳ್ಳಿ ಹಣವನ್ನು ಕಳ್ಳತನ ಮಾಡಿರುವ ಘಟನೆ ಹುಬ್ಬಳ್ಳಿಯ ಗುಡಿಹಾಳ ರೋಡ್ ವಾಣಿಪ್ಲಾಟ್‌ದಲ್ಲಿ  ರಾತ್ರಿ ನಡೆದಿದೆ. ಅಲ್ಲಾವುದ್ದೀನ್ ಎಂ. ಲೊಂಡೆವಾಲೆ ಎಂಬುವವರ ಮನೆ ಕಳ್ಳತನವಾಗಿದೆ. ಮನೆಯವರು ರಾತ್ರಿ ಆಸ್ಪತ್ರೆಗೆಂದು ಹೋಗಿದ್ದಾರೆ. ಮರಳಿ ಬರುವಷ್ಟರಲ್ಲಿ ಕಳ್ಳರು  ಇಡೀ ಮನೆಯನ್ನೇ ದೋಚಿಕೊಂಡು ಹೋಗಿದ್ದಾರೆ. ಮನೆಯಲ್ಲಿದ್ದ ಬೀರುವಿನ ಲಾಕರ್‌ಗಳನ್ನು ಮುರಿದು ಸುಮಾರು 12  ತೊಲೆ ಬಂಗಾರ, 60 ಗ್ರಾಮ ಬೆಳ್ಳಿ, ಒಂದು ಲಕ್ಷ ರೂ. ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.  ಹಳೇ ಹುಬ್ಬಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಳ್ಳತನವಾದ 12 ತೊಲೆಯಲ್ಲಿ ಕೆಲವೊಂದಿಷ್ಟು ಬಂಗಾರದ ಆಭರಣಗಳನ್ನು ಮನೆಯ ಸುತ್ತಮುತ್ತ ಸಿಕ್ಕಿವೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://ainkannada.com/youth-dies-in-swimming-pool-complaint-filed-against-owner/ ಇನ್ನು ಕೆಲವೇ ದಿನಗಳಲ್ಲಿ ಮದುವೆ ಇರೋದಕ್ಕೆ ಇಷ್ಟೊಂದು ಬಂಗಾರ ತಂದಿಟ್ಟಿದ್ದರು. ಈಗ ಕಳ್ಳತನವಾಗಿದ್ದರಿಂದ ಮನೆಯವರು ಚಿಂತೆಗೀಡಾಗಿದ್ದಾರೆ.

Read More

ರಾಮನಗರ : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣ ಸಂಬಂಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಮಧ್ಯರಾತ್ರಿ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್  ನಡೆದಿದ್ದು, ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್​ ಬ್ಯುಸಿನೆಸ್​ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದರು. ಇನ್ನೂ ಘಟನೆ ವೇಳೆ ಬಸವರಾಜ್​​ ಕಾರು ಚಾಲನೆ ಮಾಡುತ್ತಿದ್ದರು. ಬಸವರಾಜ್ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ ಶೆಟ್ಟಿ ಹಾಗೂ A4 ವೈದ್ಯನಾಥನ್ ವಿರುದ್ಧ ಬಿಎನ್​ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಕೇಸ್​ ದಾಖಲಾಗಿದೆ. ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜುವನ್ನು ವಿಚಾರಣೆ ಮಾಡಿದ ಪೊಲೀಸ್​, ಒಂದು ಬಾರಿ ದೊಡ್ಡ ಸದ್ದು ಕೇಳಿ ಬಂತ್ತು ಎಂದಿದ್ದಾರೆ. ಹಾಗಾಗಿ ಕಾರಿಗೆ ತಗುಲಿರುವ ಗುಂಡಿನ ಬಗ್ಗೆ ಪೊಲೀಸರಿಗೆ…

Read More

ಬೀದರ್: ಸ್ವಿಮ್ಮಿಂಗ್‌ ಮಾಡುವಾಗ  ಪಲ್ಟಿ ಹೊಡೆಯುವ ವೇಳೆ ಯುವಕನ ತಲೆಗೆ ಪೆಟ್ಟಾಗಿ ಸಾವನ್ನಪ್ಪಿರುವ ಘಟನೆ ಬೀದರ್‌ನ  ನರಸಿಂಹ ಝರಣಿ ದೇವಸ್ಥಾನದ ಹತ್ತಿರವಿರುವ ಖಾಸಗಿ ಈಜುಕೊಳದಲ್ಲಿ ನಡೆದಿದೆ. ಫೈಜ್‌ದರ್ಗಾ ಕಾಲೋನಿಯ ನಿವಾಸಿ ಸೈಯದ್ ಅಫಾನ್ (19) ಮೃತ ಯುವಕನಾಗಿದ್ದು, ಸೈಯದ್‌ ತನ್ನ ಸ್ನೇಹಿತರೊಂದಿಗೆ ಈಜುಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ಈಜುಕೊಳದಲ್ಲಿ ಪಲ್ಟಿ ಹೊಡೆಯುವ ವೇಳೆ ತಲೆಗೆ ಪೆಟ್ಟಾಗಿದ್ದು, ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. https://ainkannada.com/ksrtc-driver-attempted-suicide-by-writing-a-death-note-what-was-written-in-the-death-note/ ಇನ್ನೂ ಈಜುಕೊಳ ಮಾಲೀಕರ ನಿರ್ಲಕ್ಷ್ಯದಿಂದಲೇ ಅವಘಡ ಸಂಭವಿಸಿದೆ ಎಂದು ಮೃತ ಯುವಕನ ಕುಟುಂಬಸ್ಥರು ನಿರ್ಲಕ್ಷ್ಯ ಆರೋಪಿಸಿದ್ದು, ಈಜುಕೊಳದ ಮಾಲೀಕ ಡಾ.ವೈಜಿನಾಥ ಮದನಾ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಸಂಬಂಧ ಬೀದರ್‌ನ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೀದರ್:- ಈಜುಕೊಳದಲ್ಲಿ ಸ್ವಿಮ್ಮಿಂಗ್ ವೇಳೆ ತಲೆಗೆ ಗಂಭೀರ ಪೆಟ್ಟಾಗಿ 19 ವರ್ಷದ ಯುವಕ ಪ್ರಾಣಬಿಟ್ಟ ಘಟನೆ ಬೀದರ್‌ನ ನರಸಿಂಹ ಝರಣಿ ದೇವಸ್ಥಾನದ ಹತ್ತಿರವಿರುವ ಖಾಸಗಿ ಈಜುಕೊಳದಲ್ಲಿ ನಡೆದಿದೆ. https://ainkannada.com/just-follow-these-tips-to-complete-your-household-chores-in-less-time/ ಸೈಯದ್ ಅಫಾನ್ (19) ಮೃತ ಯುವಕ. ಸ್ನೇಹಿತರೊಂದಿಗೆ ಈಜುಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ತಲೆಯ ಹಿಂಭಾಗಕ್ಕೆ ಗಂಭೀರ ಪೆಟ್ಟಾಗಿ ಯುವಕ ಪೂಲ್‌ನಲ್ಲೇ ಮುಳುಗಿ ಮೃತಪಟ್ಟಿದ್ದಾನೆ. ಈಜು ಕೊಳದಲ್ಲಿ ಪಲ್ಟಿ ಹೊಡೆಯುವ ವೇಳೆ ತಲೆಗೆ ಗಂಭೀರ ಪೆಟ್ಟಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ಈಜುಕೊಳ ಮಾಲೀಕರ ವಿರುದ್ಧ ಮೃತ ಯುವಕನ ಕುಟುಂಬಸ್ಥರು ನಿರ್ಲಕ್ಷ್ಯ ಆರೋಪ ಹೊರಿಸಿದ್ದಾರೆ. ನಿಷ್ಕಾಳಜಿ ವಹಿಸಿದ ಈಜುಕೊಳದ ಮಾಲೀಕರ ವಿರುದ್ಧ ಕಾನೂನು ಕ್ರಮಕ್ಕೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಬೀದರ್‌ನ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು:- ಸೈಕ್ಲೋನ್ ಎಫೆಕ್ಟ್​ ಹಿನ್ನೆಲೆ, ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. https://ainkannada.com/ksrtc-driver-attempted-suicide-by-writing-a-death-note-what-was-written-in-the-death-note/ ಕಳೆದ ಎರಡು ದಿನಗಳಿಂದ ರಾತ್ರಿ ಸಮಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಕಂಡುಬಂದಿದ್ದು, ನಿನ್ನೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆ ಸುರಿಯಿತು. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿತ್ತು. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ತೆಲಂಗಾಣ, ತಮಿಳುನಾಡು, ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಚಿಕ್ಕಮಗಳೂರು, ಕೊಡಗು, ಕೋಲಾರ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಯಚೂರು. ಕೊಪ್ಪಳ, ಕಲಬುರಗಿ, ಯಾದಗಿರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ

Read More

ಚಿಕ್ಕಮಗಳೂರು:- ಜಿಲ್ಲೆಯ ಕಡೂರು ತಾಲೂಕಿನಲ್ಲಿ ಡೆತ್ ನೋಟ್ ಬರೆದಿಟ್ಟು KSRTC ಬಸ್ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. https://ainkannada.com/bill-gates-left-less-than-1-percent-of-his-wealth-to-his-children/ ಚಂದ್ರು ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಆರ್‌ಟಿಸಿ ಚಾಲಕ. ಮೇಲಾಧಿಕಾರಿ ಪುಟ್ಟಸ್ವಾಮಿ ವಿರುದ್ಧ ಡೆತ್‌ನೋಟ್‌ ಬರೆದಿಟ್ಟು ಕಡೂರು ಡಿಪೋದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹುಷಾರಿಲ್ಲದೇ ಕೆಲಸಕ್ಕೆ ಬಾರದಿದ್ದಕ್ಕೆ ಹಾಜರಾತಿಯಲ್ಲಿ ಗೈರು ಹಾಕಿದ್ದಾರೆ. ನನ್ನ ಖಾತೆಯಲ್ಲಿ ಸಾಕಷ್ಟು ರಜೆ ಇದೆ. ಆದ್ರೂ ಗೈರು ಹಾಕಿದ್ದಾರೆ. ಆದರೆ ಹಣ ಕೊಟ್ಟವರಿಗೆ ಎಷ್ಟು ದಿನ ರಜೆ ಬೇಕಾದ್ರೂ ಕೊಡ್ತಾರೆ ಎಂದು ಎಟಿಎಸ್ ಪುಟ್ಟಸ್ವಾಮಿ ವಿರುದ್ಧ ಆರೋಪ ಮಾಡಿದ್ದಾರೆ. ಸದ್ಯ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಚಂದ್ರುನನ್ನ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ. https://ainkannada.com/you-dont-need-a-gym-to-lose-weight-eat-this-fruit-that-you-can-find-in-your-backyard-get-results-in-a-month/ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಅದರಲ್ಲೂ ಬ್ಯಾಟ್ ಟು ಬ್ಯಾಕ್ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಆರ್​ಸಿಬಿ ಒಂದು ಹಂತದಲ್ಲಿ 63 ರನ್​ಗಳಿಗೆ 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಟಿಮ್ ಡೇವಿಡ್ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಆರ್​ಸಿಬಿ ತಂಡವು ನಿಗದಿತ 14 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿತು 96 ರನ್​ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿದರೂ, ಆ ಬಳಿಕ ಚೇತರಿಸಿಕೊಂಡಿತು. ಇದರ ನಡುವೆ ಕಣಕ್ಕಿಳಿದ ನೆಹಾಲ್ ವಧೇರಾ ಅತ್ಯುತ್ತಮ ಬ್ಯಾಟಿಂಗ್​ನೊಂದಿಗೆ ಅಜೇಯ 33 ರನ್ ಬಾರಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ಪಡೆ 12.1 ಓವರ್​ಗಳಲ್ಲಿ 98 ರನ್ ಬಾರಿಸಿ 5 ವಿಕೆಟ್​ಗಳ…

Read More

ಇಂದಿನ ಆಧುನಿಕ ಜೀವನಶೈಲಿಯ ಅಳವಡಿಕೆಯಿಂದ ಅನೇಕರು ಅಧಿಕ ತೂಕ ಹಾಗೂ ಬೊಜ್ಜು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಜೊತೆಗೆ, ತಾವು ಅನುಸರಿಸುವ ಆಹಾರ ಪದ್ಧತಿ ಅವರ ದೇಹದ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ತಪ್ಪಾದ ಆಹಾರ ಪದ್ಧತಿಯಿಂದ ಬಹುತೇಕರು ಅಧಿಕ ತೂಕ ಹಾಗೂ ಹೊಟ್ಟೆಯ ಕೊಬ್ಬಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. https://ainkannada.com/do-you-know-what-happens-if-you-mix-saffron-with-hot-milk-and-drink-it/ ಕೆಲವು ಜನರು ತೂಕ ಇಳಿಸಿಕೊಳ್ಳಲು ವಿವಿಧ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮತ್ತೆ ಕೆಲವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳುತ್ತಿದ್ದರೆ, ಇನ್ನು ಕೆಲವರು ಜಿಮ್‌ಗಳಿಗೆ ಹೋಗಿ ದೇಹ ದಂಡಿಸುತ್ತಾರೆ. ಆದರೂ ಕೂಡ ಹೆಚ್ಚಿನ ಬದಲಾವಣೆ ಕಾಣುವುದಿಲ್ಲ. ಎಷ್ಟೇ ಪ್ರಯತ್ನಿಸಿದರೂ ತೂಕ ಇಳಿಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆಯುರ್ವೇದವು ಪಪ್ಪಾಯಿಯಲ್ಲಿ ಹಲವು ಪ್ರಯೋಜನಕಾರಿ ಗುಣಗಳಿವೆ ಎಂದು ಹೇಳುತ್ತದೆ. ಇದನ್ನು ಸೇವಿಸುವುದರಿಂದ ವಿವಿಧ ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತವೆ. ಇದರಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳು ಮತ್ತು ಚರ್ಮಕ್ಕೆ ತುಂಬಾ ಒಳ್ಳೆಯದು. ಹಣ್ಣು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ, ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿರುವ ಜನರಿಗೆ…

Read More