ಚಿಕ್ಕಮಗಳೂರು:- ಜಿಲ್ಲೆಯ ಕಡೂರು ತಾಲೂಕಿನಲ್ಲಿ ಡೆತ್ ನೋಟ್ ಬರೆದಿಟ್ಟು KSRTC ಬಸ್ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. https://ainkannada.com/bill-gates-left-less-than-1-percent-of-his-wealth-to-his-children/ ಚಂದ್ರು ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಆರ್ಟಿಸಿ ಚಾಲಕ. ಮೇಲಾಧಿಕಾರಿ ಪುಟ್ಟಸ್ವಾಮಿ ವಿರುದ್ಧ ಡೆತ್ನೋಟ್ ಬರೆದಿಟ್ಟು ಕಡೂರು ಡಿಪೋದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹುಷಾರಿಲ್ಲದೇ ಕೆಲಸಕ್ಕೆ ಬಾರದಿದ್ದಕ್ಕೆ ಹಾಜರಾತಿಯಲ್ಲಿ ಗೈರು ಹಾಕಿದ್ದಾರೆ. ನನ್ನ ಖಾತೆಯಲ್ಲಿ ಸಾಕಷ್ಟು ರಜೆ ಇದೆ. ಆದ್ರೂ ಗೈರು ಹಾಕಿದ್ದಾರೆ. ಆದರೆ ಹಣ ಕೊಟ್ಟವರಿಗೆ ಎಷ್ಟು ದಿನ ರಜೆ ಬೇಕಾದ್ರೂ ಕೊಡ್ತಾರೆ ಎಂದು ಎಟಿಎಸ್ ಪುಟ್ಟಸ್ವಾಮಿ ವಿರುದ್ಧ ಆರೋಪ ಮಾಡಿದ್ದಾರೆ. ಸದ್ಯ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಚಂದ್ರುನನ್ನ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: AIN Author
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ. https://ainkannada.com/you-dont-need-a-gym-to-lose-weight-eat-this-fruit-that-you-can-find-in-your-backyard-get-results-in-a-month/ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಅದರಲ್ಲೂ ಬ್ಯಾಟ್ ಟು ಬ್ಯಾಕ್ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಆರ್ಸಿಬಿ ಒಂದು ಹಂತದಲ್ಲಿ 63 ರನ್ಗಳಿಗೆ 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಟಿಮ್ ಡೇವಿಡ್ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಆರ್ಸಿಬಿ ತಂಡವು ನಿಗದಿತ 14 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿತು 96 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿದರೂ, ಆ ಬಳಿಕ ಚೇತರಿಸಿಕೊಂಡಿತು. ಇದರ ನಡುವೆ ಕಣಕ್ಕಿಳಿದ ನೆಹಾಲ್ ವಧೇರಾ ಅತ್ಯುತ್ತಮ ಬ್ಯಾಟಿಂಗ್ನೊಂದಿಗೆ ಅಜೇಯ 33 ರನ್ ಬಾರಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ಪಡೆ 12.1 ಓವರ್ಗಳಲ್ಲಿ 98 ರನ್ ಬಾರಿಸಿ 5 ವಿಕೆಟ್ಗಳ…
ಇಂದಿನ ಆಧುನಿಕ ಜೀವನಶೈಲಿಯ ಅಳವಡಿಕೆಯಿಂದ ಅನೇಕರು ಅಧಿಕ ತೂಕ ಹಾಗೂ ಬೊಜ್ಜು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಜೊತೆಗೆ, ತಾವು ಅನುಸರಿಸುವ ಆಹಾರ ಪದ್ಧತಿ ಅವರ ದೇಹದ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ತಪ್ಪಾದ ಆಹಾರ ಪದ್ಧತಿಯಿಂದ ಬಹುತೇಕರು ಅಧಿಕ ತೂಕ ಹಾಗೂ ಹೊಟ್ಟೆಯ ಕೊಬ್ಬಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. https://ainkannada.com/do-you-know-what-happens-if-you-mix-saffron-with-hot-milk-and-drink-it/ ಕೆಲವು ಜನರು ತೂಕ ಇಳಿಸಿಕೊಳ್ಳಲು ವಿವಿಧ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮತ್ತೆ ಕೆಲವರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳುತ್ತಿದ್ದರೆ, ಇನ್ನು ಕೆಲವರು ಜಿಮ್ಗಳಿಗೆ ಹೋಗಿ ದೇಹ ದಂಡಿಸುತ್ತಾರೆ. ಆದರೂ ಕೂಡ ಹೆಚ್ಚಿನ ಬದಲಾವಣೆ ಕಾಣುವುದಿಲ್ಲ. ಎಷ್ಟೇ ಪ್ರಯತ್ನಿಸಿದರೂ ತೂಕ ಇಳಿಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆಯುರ್ವೇದವು ಪಪ್ಪಾಯಿಯಲ್ಲಿ ಹಲವು ಪ್ರಯೋಜನಕಾರಿ ಗುಣಗಳಿವೆ ಎಂದು ಹೇಳುತ್ತದೆ. ಇದನ್ನು ಸೇವಿಸುವುದರಿಂದ ವಿವಿಧ ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತವೆ. ಇದರಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳು ಮತ್ತು ಚರ್ಮಕ್ಕೆ ತುಂಬಾ ಒಳ್ಳೆಯದು. ಹಣ್ಣು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ, ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿರುವ ಜನರಿಗೆ…
ನವದೆಹಲಿ:- ನಸುಕಿನಲ್ಲೇ ನಾಲ್ಕಂತಸ್ತಿನ ಕಟ್ಟಡ ಕುಸಿದು ನಾಲ್ವರು ದುರ್ಮರಣ ಹೊಂದಿರುವ ಘಟನೆ ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಜರುಗಿದೆ. https://ainkannada.com/ipl-2025-hat-trick-defeat-in-bengaluru-rcb-captain-reveals-scheming/ ಈಶಾನ್ಯ ದೆಹಲಿಯ ದಯಾಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಚಾಂದಿನಿ, ದಾನಿಶ್, ರೇಷ್ಮಾ ಮತ್ತು ನವೀದ್ ಎಂದು ಗುರುತಿಸಲಾಗಿದೆ. ಕಟ್ಟಡ ಕುಸಿದಾಗ ಸುಮಾರು 24 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು ಅವರಲ್ಲಿ 18 ಮಂದಿಯನ್ನ ರಕ್ಷಿಸಲಾಗಿದ್ದು, ಈ ಪೈಕಿ ತೀವ್ರವಾಗಿ ಗಾಯಗೊಂಡಿದ್ದ 14 ಮಂದಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ಅವಶೇಷಗಳಡಿಯಲ್ಲಿ ಹೂತು ಹೋಗಿರಬಹುದು. ಸದ್ಯ ಎನ್ಡಿಆರ್ಎಫ್, ಡಾಗ್ ಸ್ಕ್ವಾಡ್, ದೆಹಲಿ ಪೊಲೀಸರ ತಂಡಗಳು ಮತ್ತು ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯವಾಗಿ ಸೋಲು ಕಂಡಿದೆ. ಈ ಸೋಲಿನೊಂದಿಗೆ ಆರ್ಸಿಬಿ ಪಡೆ ತವರಿನಲ್ಲಿ ಸತತ ಮೂರು ಪಂದ್ಯಗಳಲ್ಲೂ ಪರಾಜಯಗೊಂಡಂತಾಗಿದೆ. ಅಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ತಂಡ ಈ ಬಾರಿ ಯಾವುದೇ ಪಂದ್ಯ ಗೆದಿಲ್ಲ. https://ainkannada.com/shooting-attack-on-muthappa-rais-son-was-the-security-personnel-responsible-for-the-miss-firing/ ಮಳೆಯ ಕಾರಣ 14 ಓವರ್ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಆರ್ಸಿಬಿ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಟಿಮ್ ಡೇವಿಡ್ ಅಜೇಯ 50 ರನ್ ಬಾರಿಸುವ ಮೂಲಕ ಆರ್ಸಿಬಿ ತಂಡದ ಸ್ಕೋರ್ ಅನ್ನು 95 ಕ್ಕೆ ತಂದು ನಿಲ್ಲಿಸಿದರು. ಈ ಸುಲಭ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡವು 12.1 ಓವರ್ಗಳಲ್ಲಿ ಚೇಸ್ ಮಾಡಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ. ಸೋಲಿನ ಬಳಿಕ…
ಬೆಂಗಳೂರು/ರಾಮನಗರ:- ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಗುಂಡಿನ ದಾಳಿಯಾಗಿದೆ. ಬಿಡದಿಯ ಮುತ್ತಪ್ಪ ರೈ ನಿವಾಸದ ಕೂಗಳತೆಯಲ್ಲೇ ಅಪರಿಚಿತರು ಫೈರಿಂಗ್ ಮಾಡಿ ಪರಾರಿಯಾಗಿದ್ದಾರೆ. ರಿಕ್ಕಿ ರೈ ಮೂಗು ಹಾಗೂ ಬಲ ಭುಜಕ್ಕೆ ಗುಂಡು ತಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://ainkannada.com/there-is-a-home-remedy-to-reduce-belly-fat-see-results-in-a-week/ ಇನ್ನೂ ರಿಕ್ಕಿ ರೈ ಮೇಲೆ ಫೈರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಮೇಲೆ ನಡೆದಿರೋದು ಮಿಸ್ ಪೈರಿಂಗಾ? ರಿಕ್ಕಿ ರೈ ತೋಟದ ಮನೆ ಸೆಕ್ಯೂರಿಟಿ ಗಳು ಶಾಟ್ ಗನ್ ಬಳಸುತ್ತಾರಂತೆ. ರಿಕ್ಕಿ ರೈ, ಸೆಕ್ಯೂರಿಟಿ ಅಥವಾ ಅಂಗ ರಕ್ಷಕರಿಂದಲೇ ಮಿಸ್ ಫೈರ್ ಶಂಕೆ ವ್ಯಕ್ತವಾಗಿದೆ. ಪ್ರೊಫೆಷನಲ್ ಶೂಟರ್ ಹತ್ಯೆಗೆ ಸ್ಟನ್ ಗನ್ ಅಥವಾ ರಿವಾಲ್ಚಾರ್ ಬಳಸೋದೆ ಹೆಚ್ಚು. ಆದ್ರೆ ಶಾಟ್ ಗನ್ ನಲ್ಲಿ ರಿಕ್ಕಿ ರೈ ಫೈರಿಂಗ್ ನಡೆದಿದೆ. ಇದೇ ಪೊಲೀಸ್ರಿಗೆ ಸಾಕಷ್ಟು ಅನುಮಾನ ಹುಟ್ಟಿಸಿದೆ. ಶಾಟ್ ಗನ್ ನಲ್ಲಿ ಸೆಪ್ಟಿ ಕಡಿಮೆ ಇರುತ್ತೆ. ಶಾಟ್ ಗನ್ ನಲ್ಲಿ ಪೈರಿಂಗ್ ರೇಂಜ್ ಕೂಡ ತುಂಬಾ…
ತುಳಸಿ ಸಸ್ಯವನ್ನು ಪ್ರತಿ ಹಿಂದೂ ಮನೆಯ ವಿಶಿಷ್ಟ ಲಕ್ಷಣವೆಂದು ಪರಿಗಣಿಸಲಾಗುತ್ತದೆ. ಪ್ರಾಚೀನ ಕಾಲದಿಂದಲೂ, ಪ್ರತಿಯೊಂದು ಹಿಂದೂ ಧರ್ಮೀಯರ ಮನೆಯಲ್ಲೂ ತುಳಸಿ ಗಿಡವನ್ನು ನೆಡುವ ಸಂಪ್ರದಾಯವಿದೆ. ಧರ್ಮಗ್ರಂಥಗಳಲ್ಲಿ, ತುಳಸಿಯನ್ನು ಪೂಜ್ಯ, ಪವಿತ್ರ ಮತ್ತು ದೇವತೆ ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ, ಮನೆಯಲ್ಲಿ ತುಳಸಿ ಇದ್ದರೆ, ಕೆಲವು ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಈ ವಿಷಯಗಳನ್ನು ನೋಡಿಕೊಂಡರೆ, ಎಲ್ಲಾ ದೇವತೆಗಳ ವಿಶೇಷ ಅನುಗ್ರಹವು ನಮ್ಮ ಮನೆಯ ಮೇಲಿರುತ್ತದೆ. https://ainkannada.com/midnight-firing-on-former-don-muthappa-rais-younger-son-ricky-rais-condition-critical/ ಇನ್ನೂ ಮಧುಮೇಹವನ್ನೂ ಗುಣ ಪಡಿಸಲು ವಿಜ್ಞಾನಿಗಳು ಇಲ್ಲಿಯವರೆಗೂ ಯಾವುದೇ ಔಷಧಿಯನ್ನು ಕಂಡು ಹಿಡಿಯಲಾಗಿಲ್ಲ. ಹೀಗಿರುವಾಗ, ಆಹಾರ ಪದ್ಧತಿ ಮತ್ತು ಜೀವನಶೈಲಿಯ ಬಗ್ಗೆ ನಾವು ಬಹಳ ಜಾಗರೂಕರಾಗಿರಬೇಕು. ಏನು ತಿನ್ನಬಹುದು ಮತ್ತು ಏನು ತಿನ್ನಬಾರದು ಎಂಬುದರ ಬಗ್ಗೆ ನೀವು ಯಾವಾಗಲೂ ಜಾಗರೂಕರಾಗಿರಬೇಕು. ಆಯುರ್ವೇದದಲ್ಲಿ ತುಳಸಿ ಸಸ್ಯವನ್ನು ಔಷಧೀಯ ಸಸ್ಯಗಳ ರಾಣಿ ಎಂದು ಕರೆಯಲಾಗುತ್ತದೆ. ತುಳಸಿಯಲ್ಲಿ ಖನಿಜಗಳು, ಉತ್ಕರ್ಷಣ ನಿರೋಧಕಗಳು ಮತ್ತು ಜೀವಸತ್ವಗಳು ಸಮೃದ್ಧವಾಗಿವೆ. ಇವುಗಳನ್ನು ಸೇವಿಸುವುದರಿಂದ ದೇಹದ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದು ರಕ್ತವನ್ನು ಶುದ್ಧೀಕರಿಸಿ, ದೇಹದಲ್ಲಿ ಶಕ್ತಿಯ…
ಬೆಂಗಳೂರು/ ಬಿಡದಿ:- ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ನಲ್ಲಿ ದುಷ್ಕರ್ಮಿಗಳು ಫೈರಿಂಗ್ ನಡೆಸಿರುವ ಘಟನೆ ಬಿಡದಿಯ ಮುತ್ತಪ್ಪ ರೈ ನಿವಾಸದ ಮುಂದೆಯೇ ಜರುಗಿದೆ. https://ainkannada.com/is-it-a-threat-from-lizards-if-so-grow-these-types-of-plants-at-home-and-there-wont-be-any/ ತಡರಾತ್ರಿ ೧೨.೫೦ ಸುಮಾರಿಗೆ ಈ ಘಟನೆ ಜರುಗಿದೆ. ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…
ಯಾವುದೇ ನೇರ ಅಪಾಯವಿಲ್ಲದಿದ್ದರೂ ಸಹ ಮನೆಯ ಗೋಡೆಗಳ ಮೇಲೆ ಹಲ್ಲಿಗಳು ಕಾಣಿಸಿಕೊಂಡರೆ ಅನೇಕರು ಭಯಪಡುತ್ತಾರೆ. ಅವುಗಳನ್ನು ಓಡಿಸಲು ವಿವಿಧ ರೀತಿಯ ಸ್ಪ್ರೇಗಳನ್ನು ಬಳಸಲಾಗುತ್ತದೆ. ಆದರೆ, ಇವುಗಳ ಬಳಕೆಯಿಂದ ಮನೆಯೊಳಗೆ ಆಂತರಿಕ ಮಾಲಿನ್ಯ ಹೆಚ್ಚಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಮಕ್ಕಳು ಮತ್ತು ವೃದ್ಧರಿರುವ ಮನೆಯಲ್ಲಿ ಅವುಗಳನ್ನು ಬಳಸದಿರುವುದು ಉತ್ತಮ ಎಂದು ಸಲಹೆ ನೀಡಲಾಗುತ್ತದೆ https://ainkannada.com/snakes-and-dogs-are-not-neglected-in-your-dream-learn-first/ ಬೇಸಿಗೆ ಆರಂಭವಾಗಿ ಮಳೆಗಾಲ ಮುಗಿಯುವವರೆಗೂ ಹಲ್ಲಿಗಳು ಹೆಚ್ಚಾಗಿ ಮನೆಗಳಲ್ಲಿ ಕಾಣಿಸಿಕೊಂಡು ಭಯ ಹುಟ್ಟಿಸುತ್ತವೆ. ಅದರಲ್ಲೂ ಮಳೆಗಾಲದಲ್ಲಿ ಗೋಡೆ, ಗೋಡೆಯ ಸಂಧಿಗಳಿಂದ ಇಣುಕಿ ಕೆಳಗಿಳಿದು ನೆಲದ ಮೇಲೆ ಸರಿದಾಡುತ್ತವೆ. ಇದು ನಿಮಗೂ ಸಮಸ್ಯೆಯಾಗಿ ಕಾಡುತ್ತಿರಬಹುದು… ಹೆಚ್ಚಾಗಿ ಹಲ್ಲಿಗಳನ್ನು ಹಿಮ್ಮೆಟ್ಟಿಸಲು ಈ ಗಿಡಗಳನ್ನು ಮನೆಯಲ್ಲಿ ಬೆಳೆಸಿ. ಹಲ್ಲಿಗಳನ್ನು ತೊಡೆದುಹಾಕಲು ಇಂತಹ ಮನೆಮದ್ದುಗಳು ಪರಿಣಾಮಕಾರಿಯಾಗಿದ್ದು, ಅದ್ಭುತ ಫಲಿತಾಂಶಗಳನ್ನು ನೀಡುತ್ತವೆ. ಮನೆಯ ಆವರಣದಲ್ಲಿ ಬೇವಿನ ಮರವನ್ನು ನೆಟ್ಟರೆ ಹಲ್ಲಿಗಳು ಮನೆಗೆ ಬರುವುದನ್ನು ಕಡಿಮೆ ಮಾಡುತ್ತದೆ. ಏಕೆಂದರೆ ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ. ಇದರ ಕಟುವಾದ ವಾಸನೆಯು ಹಲ್ಲಿಗಳನ್ನು…
ನಾವು ನಿದ್ದೆಗೆ ಜಾರಿದಾಗ ಕೆಲವೊಮ್ಮೆ ಕೆಲವೊಂದು ದೃಶ್ಯಗಳು ಕಣ್ಣಿಗೆ ಕಟ್ಟುತ್ತದೆ. ಕೆಲವೊಮ್ಮೆ ಈ ಘಟನೆಗಳು ಭವಿಷ್ಯದಲ್ಲಿ ನಿಜವಾದರೆ, ಇನ್ನು ಕೆಲವು ಕನಸಾಗಿಯೇ ಉಳಿದು ಬಿಡುತ್ತದೆ. ನಿದ್ದೆಯಿಂದ ಎದ್ದಾಕ್ಷಣ ನಾವು ಕಂಡ ಕನಸುಗಳ ಬಗ್ಗೆ ಯೋಚಿಸಬೇಕು. ಆ ಕನಸು ನಮಗೆ ಏನನ್ನು ಸೂಚಿಸುತ್ತದೆ ಎಂಬೂದನ್ನು ತಿಳಿದುಕೊಳ್ಳಲು ಪ್ರಯತ್ನಿಸಬೇಕು. ಭವಿಷ್ಯದಲ್ಲಿ ಏನಾಗುತ್ತದೆ ಎನ್ನುವುದನ್ನು ಕನಸುಗಳು ತಿಳಿಸುತ್ತದೆ ಎಂಬ ನಂಬಿಕೆಯಿದೆ. https://ainkannada.com/rainfall-in-bellary-power-poles-huge-trees/ ನಿಮ್ಮ ಮುಂದೆ ಅಥವಾ ನಿಮ್ಮ ಕನಸಿನಲ್ಲಿ ನಾಯಿ, ಹಾವು ಅಥವಾ ಕಾಗೆ ಬಂದು ಕೆಲ ಸೂಚನೆ ಕೊಡ್ತಾವಂತೆ. ಇವು ಮುಂಬರುವ ಅಪಾಯದ ಬಗ್ಗೆ ಹೇಗೆ ಎಚ್ಚರಿಸುತ್ತವೆ ಗೊತ್ತಾ? ಕೆಟ್ಟ ಸಮಯಗಳು ಹತ್ತಿರ ಬಂದಾಗ, ಪ್ರಾಣಿಗಳು, ಪಕ್ಷಿಗಳು ಮತ್ತು ಕನಸುಗಳ ಮೂಲಕ ನಮಗೆ ಎಚ್ಚರಿಕೆಗಳು ಕೊಡುತ್ತೆ ಎನ್ನಲಾಗುತ್ತೆ. ಖ್ಯಾತ ಜ್ಯೋತಿಷಿ ಆಚಾರ್ಯ ಸಂತೋಷ್ ಕುಮಾರ್ ಚೌಬೆ ಅವರ ಪ್ರಕಾರ, ನಾಯಿಗಳು, ಹಾವುಗಳು ಮತ್ತು ಕಾಗೆಗಳಂತಹ ಪ್ರಾಣಿಗಳು ಮತ್ತು ಪಕ್ಷಿಗಳು ಕೆಟ್ಟ ಶಕುನಗಳನ್ನು ನೀಡುತ್ತವಂತೆ. ಈ ಚಿಹ್ನೆಗಳನ್ನು ಅರ್ಥಮಾಡಿಕೊಳ್ಳುವ ಮೂಲಕ ಮತ್ತು ಸಮಯಕ್ಕೆ ತಕ್ಕ ಕ್ರಮಗಳನ್ನು…