ಬೆಂಗಳೂರು:- ನಾಳೆಯಿಂದ ಎರಡು ದಿನ ಅಂದ್ರೆ ಶನಿವಾರ, ಭಾನುವಾರ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ವಿವೇಕಾನಂದ ರಸ್ತೆ ಸೋಮೇಶ್ವರ ದೇವಸ್ಥಾನದ ಉತ್ಸವದ ಪ್ರಯುಕ್ತ ಬೆಂಗಳೂರು ಟ್ರಾಫಿಕ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ. https://ainkannada.com/rain-news-heavy-rain-likely-in-bengaluru-this-evening/ ಎಲ್ಲಿ ವಾಹನ ಸಂಚಾರ ನಿರ್ಬಂಧ? ಹಳೆ ಮದ್ರಾಸ್ ರಸ್ತೆ ಆಂಜನೇಯ ಜಂಕ್ಷನ್ನಿಂದ ರಾಮಯ್ಯ ಜಂಕ್ಷನ್ ವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. (ಎರಡೂ ದಿಕ್ಕಿನಲ್ಲೂ). ತಾಮರೈ ಕಣ್ಣನ್ ಜಂಕ್ಷನ್ ಬಳಿ ಬಲತಿರುವು ಪಡೆಯುವುದನ್ನು ನಿರ್ಬಂಧಿಸಲಾಗಿರುತ್ತದೆ. ಬೇಗಂ ಮಹಲ್ ಜಂಕ್ಷನ್ ನಿಂದ ರಾಮಯ್ಯ ಜಂಕ್ಷನ್ವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ಜೀವನ್ ಭೀಮಾ ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಸಾಗರ ಜಂಕ್ಷನ್ನಿಂದ ಆದರ್ಶ ಜಂಕ್ಷನ್ವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ಪರ್ಯಾಯ ರಸ್ತೆಗಳು ಯಾವುವು? ಇಂದಿರಾನಗರದ 80 ಅಡಿ ರಸ್ತೆ ಮತ್ತು 100 ಅಡಿ ರಸ್ತೆಯಿಂದ ಟ್ರಿನಿಟಿ ಜಂಕ್ಷನ್ ಕಡೆಗೆ ಸಂಚರಿಸುವ ವಾಹನ ಸವಾರರು ಆಂಜನೇಯ ಜಂಕ್ಷನ್ ಬಳಿ…
Author: AIN Author
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದ ವಿವಿಧೆಡೆ ಇಂದು ಕೂಡ ಮಳೆ ಯಾಗಲಿದೆ. ಹಲವು ಕಡೆ ಮೋಡಕವಿದ ವಾತಾವರಣವಿದೆ. https://ainkannada.com/control-of-missed-driver-ksrtc-bus-jumped-into-the-pits-minor-injury-to-passengers/ ಬಿಸಿಲ ತಾಪ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಏಪ್ರಿಲ್ 22ರ ಬಳಿಕ ಕರ್ನಾಟಕದಾದ್ಯಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಹೊಂಡಕ್ಕೆ ಹಾರಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಹುಬ್ಬಳ್ಳಿ ಬೈಪಾಸ್ ನೇಕಾನಗರ ಬಳಿ ನಡೆದಿದೆ. https://ainkannada.com/tea-drinking-on-the-chair-in-the-middle-of-the-night/ ಸವಣೂರುನಿಂದ ವಾಸ್ಕೋಗೆ ತೆರಳ್ಳುತ್ತಿದ್ದ KSRTC ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಜಾರಿದ ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ತದನಂತರ ಪ್ರಯಾಣಿಕರನ್ನು ಪರ್ಯಾಯ ಬಸ್ ಮೂಲಕ ಸ್ಥಳಾಂತರಿಸಲಾಗಿದೆ.
ಬೆಂಗಳೂರು:- ಭೂಪನೋರ್ವ ನಡುರಸ್ತೆಯಲ್ಲೇ ಚೇರ್ ಮೇಲೆ ಕುಳಿತು ಟೀ ಕುಡಿದು, ಇತರ ವಾಹನ ಸವಾರರಿಗೆ ತೊಂದರೆ ಕೊಟ್ಟವನಿಗೆ ಪೊಲೀಸರು ಸರಿಯಾಗಿ ಬುದ್ದಿ ಕಲಿಸಿದ್ದಾರೆ. https://ainkannada.com/pl-2025-rainfall-in-bangalore-suspicion-of-rcb-match-today/ ಹೌದು, ರಸ್ತೆ ಮಧ್ಯೆ ಚಯರ್ ಹಾಕಿಕೊಂಡು ಟೀ ಕುಡಿಯುತ್ತಾ ರೀಲ್ಸ್ ಮಾಡಿ ಹುಚ್ಚಾಟ ಮಾಡಿದವನಿಗೆ ಬೆಂಗಳೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಪ್ರಚಾರದ ತೆವಲಿಗೆ ಕಳೆದ ಏಪ್ರಿಲ್ 12 ರಂದು ವಾಹನ ಸಂಚಾರ ಹೆಚ್ಚಾಗಿರುವ ಎಸ್.ಜೆ.ಪಾರ್ಕ್ ಬಳಿ ರಸ್ತೆಯಲ್ಲಿ ರೀಲ್ಸ್ ಮಾಡುತ್ತಾ ಕಿರಿಕ್ ಮಾಡಿದ್ದ. ನಂತರ ಆ ರೀಲ್ಸ್ ಅನ್ನು ತನ್ನ ಇನ್ಸ್ಟಾಗ್ರಾಮ್ ಖಾತೆ simbu_str_123 ನಲ್ಲಿ ಅಪ್ಲೋಡ್ ಮಾಡಿದ್ದ. ಸಿಟಿ ಪೊಲೀಸ್ ಸೋಷಿಯಲ್ ಮೀಡಿಯಾ ವಿಂಗ್ ಪುಂಡನ ರೀಲ್ಸ್ ಗಮನಿಸಿತ್ತು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಯುವಕರಿಗೆ ತಪ್ಪು ಸಂದೇಶ ನೀಡಿದ ಅಡಿ ಎಸ್.ಜೆ.ಪಾರ್ಕ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಪುಂಡನನ್ನು ಬಂಧಿಸಿದ್ದರು.
ಬೆಂಗಳೂರು:- ಐಪಿಎಲ್ ಸೀಸನ್ ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈವರೆಗೂ ಸರಿಯಾದ ದಾರಿಯಲ್ಲಿ ಸಾಗಿದೆ. ಈವರೆಗೆ ಆಡಿರುವ 6 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿ 8 ಅಂಕ ಗಳಿಸಿ 3ನೇ ಸ್ಥಾನದಲ್ಲಿದೆ. ಈಗ ಇರುವ ಲಯದಲ್ಲಿ ಇನ್ನುಳಿದ 8 ಪಂದ್ಯಗಳಲ್ಲಿ ಕನಿಷ್ಠ 6 ಪಂದ್ಯಗಳನ್ನಾದರೂ ಗೆಲ್ಲಬಹುದು ಎಂಬುದು ಅಭಿಮಾನಿಗಳ ಲೆಕ್ಕಾಚಾರವಾಗಿದೆ. ಹಾಗಾದಲ್ಲಿ ಮೊದಲೆರಡು ಸ್ಥಾನಿಯಾಗಿ ಪ್ಲೇ ಆಫ್ ಹಂತಕ್ಕೇರುವುದು ಖಚಿತ. https://ainkannada.com/do-you-know-why-do-you-have-two-button-on-the-toilet-flush-how-to-use-heres-the-answer/ ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಬಿಗ್ ಫೈಟ್ ನಡೆಯಲಿದ್ದು, ಪಂದ್ಯ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ಆದ್ರೆ ಪಂದ್ಯ ನಡೆಯುವ ಬಗ್ಗೆ ಇದೀಗ ಅನುಮಾನ ಶುರುವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಈ ಎರಡು ತಂಡಗಳು ಬಲಿಷ್ಠವಾಗಿದ್ದು ಪಂದ್ಯವೂ ರೋಚಕ ಕ್ಷಣಕ್ಕೆ ಕಾರಣವಾಗಬಹುದು. ಇದರ ನಡುವೆ ಆರ್ಸಿಬಿ- ಪಂಜಾಬ್ನ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿ ಆಗೋ ಆತಂಕವಿದೆ. ರಜತ್ ಪಾಟಿದಾರ್…
ಸಾಮಾನ್ಯವಾಗಿ ಮನೆಯಾಗಲಿ ಅಥವಾ ಕಚೇರಿಯಾಗಲಿ ನಾವು ಪ್ರತಿದಿನ ಶೌಚಾಲಯವನ್ನು ಬಳಸಿಯೇ ಬಳಸುತ್ತೇವೆ. ನಮ್ಮ ದೈನಂದಿನ ಜೀವನದಲ್ಲಿ ಶೌಚಾಲಯ ಕೂಡ ಬಹುಮುಖ್ಯ ಪಾತ್ರವನ್ನು ಹೊಂದಿದೆ. ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸಾಕಷ್ಟು ಮುಂದುವರೆದಿದೆ. ಇತ್ತೀಚಿನ ದಿನಗಳಲ್ಲಿ ಹೊಸ ಬಗೆಯ ಕಮಾಡ್ಗಳು ಮಾರುಕಟ್ಟೆಗೆ ಬಂದಿದ್ದು, ಇದರಲ್ಲಿ ಆಧುನಿಕ ಫಿನಿಶಿಂಗ್ ಜತೆಗೆ ಹಲವು ಪರಿಕರಗಳಿವೆ. https://ainkannada.com/this-pile-of-bakery-hotel-tea-condiments-sari-center-ready-to-wear-businesses-fridays-fate-of-18-april-2025/ ಹಿಂದಿನ ಕಾಲದಲ್ಲಿ ಶೌಚಾಲಯವಿಲ್ಲದೇ ಒದ್ದಾಡುತ್ತಿದ್ದ ಜನರು ಈಗ ತಮ್ಮ ಮನೆಗಳಲ್ಲಿ ಎರಡೆರಡು ಶೌಚಾಲಯಗಳನ್ನು ನಿರ್ಮಿಸಿದ್ದಾರೆ. ಅದರಲ್ಲೂ ಈಗಂತೂ ಪಾಶ್ಚಿಮಾತ್ಯ ಶೌಚಾಲಯಗಳನ್ನು ಜನರು ಹೆಚ್ಚಾಗಿ ಬಳಸಲು ಶುರು ಮಾಡಿದ್ದಾರೆ. ಏಕೆಂದರೆ ಇದರಿಂದ ಅನೇಕ ಸೌಲಭ್ಯಗಳಿವೆ. ದಿನದಲ್ಲಿ ಅನೇಕ ಬಾರಿ ಎಲ್ಲರೂ ಶೌಚಾಲಯ ಬಳಸುತ್ತೇವೆ. ಆದರೆ ಎಂದಾದರೂ ಪಾಶ್ಚಿಮಾತ್ಯ ಶೌಚಾಲಯದ ಫ್ಲಶ್ ನಲ್ಲಿ ಎರಡು ಬಟನ್ಗಳು ಏಕಿದೆ ಅಂತ ಯೋಚಿಸಿದ್ದೀರಾ? ಹೌದು, ನೋಡಲು ವಿಭಿನ್ನವಾಗಿರುವ ಫ್ಲಶ್ ಬಟನ್ನಲ್ಲಿ ಒಂದು ಚಿಕ್ಕದಾದ ಬಟನ್ ಇದ್ದರೆ, ಮತ್ತೊಂದರಲ್ಲಿ ದೊಡ್ಡ ಬಟನ್ ಇದೆ. ಇವೆರಡನ್ನೂ ಒತ್ತುವುದರಿಂದ ನೀರು ಬಿಡುಗಡೆಯಾಗುತ್ತದೆ. ಸದ್ಯ ಈಗಿರುವ ಪ್ರಶ್ನೆ ಏನೆಂದರೆ, ಎರಡೂ ಗುಂಡಿಗಳನ್ನು…
ಸೂರ್ಯೋದಯ – 6:01 ಬೆ ಸೂರ್ಯಾಸ್ತ – 6:29 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ಪಂಚಮಿ ನಕ್ಷತ್ರ – ಜ್ಯೇಷ್ಠ ಯೋಗ – ಪರಿಘ ಕರಣ – ತೈತಲೆ ಮಳೆ ನಕ್ಷತ್ರ- ಅಶ್ವಿನಿ ರಾಹು ಕಾಲ – 10:30 ದಿಂದ 12:00 ವರೆಗೆ ಯಮಗಂಡ – 03:00 ದಿಂದ 04:30 ವರೆಗೆ ಗುಳಿಕ ಕಾಲ – 07:30 ದಿಂದ 09:00 ವರೆಗೆ ಬ್ರಹ್ಮ ಮುಹೂರ್ತ – 4:25ಬೆ. ದಿಂದ 5:13 ಬೆ. ವರೆಗೆ ಅಮೃತ ಕಾಲ – 3:30 ಬೆ. ದಿಂದ 5:14 ಬೆ. ವರೆಗೆ ಅಭಿಜಿತ್ ಮುಹುರ್ತ – 11:50 ಬೆ. ದಿಂದ 12:40 ಮ. ವರೆಗೆ ಬ್ರಹ್ಮ ಮುಹೂರ್ತ – 5:09 ಬೆ.ದಿಂದ 5:57 ಬೆ.ವರೆಗೆ ಅಮೃತ ಕಾಲ – 9:47 ರಾ.ದಿಂದ 11:34 ರಾ.ವರೆಗೆ ಅಭಿಜಿತ್…
ಕ್ರಿಕೆಟ್ ಜಗತ್ತಿನಲ್ಲಿ ಈಗ ಎರಡು ಪ್ರಮುಖ ಲೀಗ್ಗಳು ಏಕಕಾಲಕ್ಕೆ ಗಮನ ಸೆಳೆಯುತ್ತಿವೆ. ಒಂದೆಡೆ ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ತನ್ನ ಹಿರಿಮೆಯೊಂದಿಗೆ ನಡೆಯುತ್ತಿದ್ದರೆ, ಮತ್ತೊಂದೆಡೆ ಪಾಕಿಸ್ತಾನದಲ್ಲಿ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) 2025 ಆವೃತ್ತಿಯು ಸದ್ದು ಮಾಡುತ್ತಿದೆ. ಐಪಿಎಲ್ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಎಂಬ ಖ್ಯಾತಿಯನ್ನು ಹೊಂದಿದ್ದು, ಆಟಗಾರರಿಗೆ ದೊಡ್ಡ ಮೊತ್ತದ ಹಣವನ್ನು ನೀಡುತ್ತದೆ. ಆದರೆ, ಪ್ಲೇಯರ್ ಆಫ್ ದಿ ಮ್ಯಾಚ್’ ಪ್ರಶಸ್ತಿಯಂತಹ ವಿಷಯಕ್ಕೆ ಬಂದಾಗ ಪಿಎಸ್ಎಲ್ ಐಪಿಎಲ್ಗಿಂತ ಶ್ರೇಷ್ಟ ಎಂದು ಪಾಕಿಸ್ತಾನದ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆಸಿದ್ದಾರೆ. https://ainkannada.com/muslim-organizations-protesting-against-waqf-high-court-says-this-is-not-right/ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಅತೀ ಹೆಚ್ಚು ಜನಮನ್ನಣೆ ಪಡೆದಿರುವ ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಚೂಣಿಯಲ್ಲಿದೆ. ಒಂದೆಡೆ ಇಂಡಿಯನ್ ಪ್ರೀಮಿಯರ್ ಲೀಗ್ ಜರುಗುತ್ತಿದ್ದರೆ, ಮತ್ತೊಂದೆಡೆ ಪಾಕ್ನಲ್ಲಿ ಪಾಕಿಸ್ತಾನ್ ಸೂಪರ್ ಲೀಗ್ ನಡೆಯುತ್ತಿದೆ. ಒಂದೇ ಸಮಯದಲ್ಲಿ ಎರಡು ಲೀಗ್ಗಳು ಜರುಗುತ್ತಿರುವುದರಿಂದ ಯಾವ ಟೂರ್ನಿ ಬೆಸ್ಟ್ ಎಂಬ ಚರ್ಚೆಗಳು ಕೂಡ ಜೋರಾಗಿದೆ. ಈ ಚರ್ಚೆಗಳ ನಡುವೆಯೇ ಪಾಕಿಸ್ತಾನ್…
ಮಂಗಳೂರು:- ಇತ್ತೀಚೆಗೆ ಕೇಂದ್ರ ಸರ್ಕಾರವು ವಕ್ಫ್ ಮಸೂದೆ ತಿದ್ದುಪಡಿ ಮಾಡಿ ಆದೇಶ ಹೊರಡಿಸಿದ್ದು, ಇದಕ್ಕೆ ಮುಸ್ಲಿಂ ಸಂಘಟನೆಗಳು ವ್ಯಾಪಕ ವಿರೋಧಿಸಿ ಪ್ರತಿಭಟನೆಗೆ ಕರೆ ಕೊಟ್ಟಿದೆ. https://ainkannada.com/siddaramaiah-has-no-sincere-concern-about-the-census-by-vijayendra/ ಹೌದು, ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಶುಕ್ರವಾರ ರಂದು ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರು ಶಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಿವೆ. ಆದರೆ, ಪ್ರತಿಭಟನೆ ವೇಳೆ ರಸ್ತೆ ಸಂಚಾರ ನಿರ್ಬಂಧಿಸದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಕ್ಫ್ ತಿದ್ದುಪಡಿ ವಿಚಾರ ಸುಪ್ರೀಂ ಕೋರ್ಟ್ ಪರಿಗಣಿಸುವಾಗ ಪ್ರತಿಭಟನೆ ಸರಿಯಲ್ಲ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಎನ್ಹೆಚ್ 73 ಬಂದ್ ಮಾಡಿ ಪ್ರತಿಭಟನೆ ನಡೆಸುವಂತಿಲ್ಲ. ಸರ್ಕಾರ ಅನುಮತಿ ನೀಡಿದ ಸ್ಥಳದಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು. ಸರ್ಕಾರ ಅನುಮತಿ ನೀಡುವಾಗ ಸುಪ್ರೀಂಕೋರ್ಟ್ ವಿಚಾರಣೆ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಪೀಠ ಹೇಳಿದೆ.
ವಿಜಯಪುರ:- ಜಾತಿ ಗಣತಿ ವಿಚಾರವಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನ ಮಾಡುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/caste-census-controversy-government-unable-to-reach-any-conclusion-discussion-incomplete-cabinet-meeting-unable-to-reach-consensus/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಾತಿಗಣತಿ ನಾಲ್ಕು ವರ್ಷವಾದ್ರೂ ತೆಗೆದುಕೊಳ್ಳುವದಿಲ್ಲ. ರಾಜ್ಯದ ಸಿಎಂಗೆ ಜಾತಿ ಜನಗಣತಿ ವಿಚಾರವಾಗಿ ಸಿದ್ದರಾಮಯ್ಯ ನವರಿಗೆ ಪ್ರಾಮಾಣಿಕ ಕಳಕಳಿ ಇಲ್ಲ. ಹಿಂದೂಳಿದ ಸಮುದಾಯಗಳಿಗೆ ನ್ಯಾಯ ಕೊಡುವ ಇಚ್ಛಾಶಕ್ತಿ ಇಲ್ಲ. ಸಮಾಜಗಳ ನಡುವೆ ಹುಡುಗಾಟಿಕೆ ಮಾಡುತ್ತಿದ್ದಾರೆ. ಸಿಎಂ ಈ ಹುಡುಗಾಟವನ್ನ ಬಿಡಬೇಕು. ತಮ್ಮ ಸಿಎಂ ಸ್ಥಾನ ಭದ್ರಗೊಳಿಸುವ ಸಲುವಾಗಿ ಈ ತರಹದ ಹುಡುಗಾಟಿಕೆ ಸಿಎಂ ಬಿಡಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ.