Author: AIN Author

ಸೂರ್ಯೋದಯ – 6:03 ಬೆ ಸೂರ್ಯಾಸ್ತ – 6:28 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ,  ಉತ್ತರ ಅಯಣ,  ಶುಕ್ಲ ಪಕ್ಷ, ವಸಂತ ಋತು,  ಚೈತ್ರ ಮಾಸ, ತಿಥಿ – ತದಿಗೆ  ನಕ್ಷತ್ರ – ಅನುರಾಧ  ಯೋಗ – ವ್ಯತೀಪಾತ  ಕರಣ – ವಿಷ್ಟಿ  ರಾಹು ಕಾಲ – 12:00 ದಿಂದ 01:30 ವರೆಗೆ ಯಮಗಂಡ – 07:30 ದಿಂದ 09:00 ವರೆಗೆ ಗುಳಿಕ ಕಾಲ – 10:30 ದಿಂದ 12:00 ವರೆಗೆ ಬ್ರಹ್ಮ ಮುಹೂರ್ತ – 4:27 ಬೆ ದಿಂದ 5:15 ಬೆ ವರೆಗೆ ಅಮೃತ ಕಾಲ – 6:18 ಸಂಜೆ ದಿಂದ 8:05 ರಾ.ವರೆಗೆ ಅಭಿಜಿತ್ ಮುಹುರ್ತ – ಇಲ್ಲ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 …

Read More

ಬೆಂಗಳೂರು:- ಡೀಸೆಲ್ ಬೆಲೆ ಏರಿಕೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಲಾರಿ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ. https://ainkannada.com/congress-leaders-do-not-have-a-good-opinion-of-ambedkar-by-vijayendra/ ಹೀಗಾಗಿ ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ನಡೆಸಿದ ಸಭೆ ವಿಫಲವಾಗಿದೆ. ಮುಷ್ಕರ ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರೂ ಲಾರಿ ಮಾಲೀಕರ ಸಂಘ ಒಪ್ಪದ ಹಿನ್ನೆಲೆಯಲ್ಲಿ ಸುದೀರ್ಘ ಒಂದೂವರೆ ಗಂಟೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಹೀಗಾಗಿ ಮತ್ತೊಮ್ಮೆ ಸಭೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಅವರು, ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ವಿಫಲವಾಗಿದೆ. ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯಲ್ಲ. ನಾವು ತೀರ್ಮಾನ ಮಾಡಿಯಾಗಿದೆ. ಮುಖ್ಯಮಂತ್ರಿಗಳು ಮುಷ್ಕರ ಹಿಂಪಡೆಯಲು ಹೇಳಿದರು, ಆದ್ರೆ, ಆಗಲ್ಲ ಅಂದ್ವಿ. ನಾಳೆಯಿಂದ ಅನಿರ್ದಿಷ್ಟಾವಧಿ ಉಗ್ರ ಹೋರಾಟ ಮಾಡ್ತೇವೆ ಎಂದು ಹೇಳಿದರು. ಮುಖ್ಯಮಂತ್ರಿ ಅವರು ಇಂದು ಕಾವೇರಿಯಲ್ಲಿ ಮುಷ್ಕರ ನಿರತ ಲಾರಿ ಮಾಲಿಕರ…

Read More

ಚಿಕ್ಕೋಡಿ:- ಕಾಂಗ್ರೆಸ್ ನಾಯಕರ ಮನಸ್ಸಲ್ಲಿ ಅಂಬೇಡ್ಕರ್ ಬಗ್ಗೆ ಒಳ್ಳೆಯ ಅಭಿಪ್ರಾಯ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. https://ainkannada.com/is-the-devadasi-system-still-alive-the-police-freed-the-young-woman-by-getting-her-married/ ನಿಪ್ಪಾಣಿಯಲ್ಲಿ ಮಾತನಾಡಿದ ವಿಜಯೇಂದ್ರ, ಭಾರತಕ್ಕೆ ಸಂವಿಧಾನ ತಂದುಕೊಟ್ಟ ಪುಣ್ಯಾತ್ಮ ಅಂಬೇಡ್ಕರ್. ದುರಂತ ಅಂದ್ರೇ ಅರವತ್ತೈದು ವರ್ಷ ಕಾಂಗ್ರೆಸ್ ದೇಶದಲ್ಲಿ ಆಡಳಿತ ನಡೆಸಿತು. ಸಂವಿಧಾನ ನೀಡಿದ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಗಾಂಧಿ ಕುಟುಂಬಕ್ಕೆ, ಕಾಂಗ್ರೆಸ್ ಪಕ್ಷಕ್ಕೆ ಭಾರತ ರತ್ನ ನೀಡಬೇಕು ಅನ್ನೋದು ಮನಸ್ಸಿನಲ್ಲಿ ಬರಲಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ ಮೇಲೆ ಭಾರತ ರತ್ನ ನೀಡಿದ್ರೂ. ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ಅಂಬೇಡ್ಕರ್ ಅವರ ಅಂತ್ಯಸಂಸ್ಕಾರಕ್ಕೆ ಜಾಗ ನೀಡಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನ ಕಾಂಗ್ರೆಸ್ ಸೋಲಿಸಿದ್ರೂ‌. ಅವರನ್ನ ಸೋಲಿಸಿದವರಿಗೆ ಕಾಂಗ್ರೆಸ್ ಪದ್ಮಭೂಷಣ ನೀಡಿ ಸನ್ಮಾನಿಸಿತು. ಕಾಂಗ್ರೆಸ್ ನವರಿಗೆ ಅಂಬೇಡ್ಕರ್ ಅವರ ಬಗ್ಗೆ ಒಳ್ಳೆಯ ವಿಚಾರ ಇಲ್ಲ. ಕಾಂಗ್ರೆಸ್ ಚುನಾವಣೆಯಲ್ಲಿ ಸೋತ ಮೇಲೆ ಅಂಬೇಡ್ಕರ್ ಅವರನ್ನ ಪದೇ ಪದೇ ನೆನಪಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ, ರಾಹುಲ್ ಗಾಂಧಿ ಅವರ…

Read More

ಬಳ್ಳಾರಿ : ಕುಟುಂಬಸ್ಥರಿಂದಲೇ ದೇವದಾಸಿ ಪದ್ಧತಿಗೆ ದೂಡಲಾಗುತ್ತಿದ್ದ ಯುವತಿಯನ್ನು ರಕ್ಷಿಸಿರುವ ಪೊಲೀಸರು, ಆಕೆ ಪ್ರೀತಿಸಿದ್ದ ಯುವಕನ ಜೊತೆಗೆ ವಿವಾಹ ಮಾಡಿಸಿದ್ದಾರೆ. https://ainkannada.com/hdks-statement-on-the-census-of-hatred-what-did-ganiga-ravikumar-say/ ಯುವತಿ ತನ್ನದೇ ಯುವಕನನ್ನು ಪ್ರೀತಿಸುತ್ತಿದ್ದರು. ವಿಷಯ ತಿಳಿದ ಯುವತಿಯ ತಾಯಿ ಪ್ರೀತಿಯನ್ನು ವಿರೋಧಿಸಿ ದೇವದಾಸಿ ಆಗುವಂತೆ ನಿತ್ಯ ಒತ್ತಾಯಿಸುತ್ತಿದ್ದರು. ಇದಕ್ಕೆ ಒಪ್ಪದ ಯುವತಿ ಪುನರ್ವಸತಿ ಕಲ್ಪಿತ ದೇವದಾಸಿಯರ ವಿಮೋಚನಾ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಎಚ್‌.ಯಂಕಮ್ಮ ಅವರನ್ನು ಸಂಪರ್ಕಿಸಿದ್ದರು. ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕುರುಗೋಡು ಠಾಣೆಯ ಪಿಎಸ್‌ಐ ಸುಪ್ರಿತ್‌ ವಿರೂಪಾಕ್ಷಪ್ಪ ಅವರು ಯುವತಿ ಮತ್ತು ಯುವಕನ ಕುಟುಂಬದವರನ್ನು ಠಾಣೆಗೆ ಕರೆಯಿಸಿ ದೇವದಾಸಿ ಪದ್ಧತಿಯ ದುಷ್ಪರಿಣಾಮಗಳ ಕುರಿತು ತಿಳಿವಳಿಕೆ ನೀಡಿ ಮನವೊಲಿಸಿದ್ದಾರೆ. ಎಲ್ಲರ ಸಮ್ಮುಖದಲ್ಲಿಯೇ ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ವಿವಾಹ ಮಾಡಿಸಲಾಗಿದೆ. ಈ ಕುರಿತು ಸುಪ್ರಿತ್ ವಿರೂಪಾಕ್ಷಪ್ಪ, ‘ದೇವದಾಸಿ ಪದ್ಧತಿಗೆ ದೂಡುವ ಪ್ರಕರಣ ಕಂಡುಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಕೋರಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿಯೂ ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ. ಈ ಪದ್ಧತಿ 1982ರಲ್ಲಿ ನಿಷಿದ್ಧಗೊಂಡಿದ್ದರೂ, ಬಳ್ಳಾರಿ, ಕೊಪ್ಪಳ,…

Read More

ಮಂಡ್ಯ: – ದ್ವೇಷದ ಜನಗಣತಿ ಎಂಬ ಹೆಚ್ಡಿಕೆ ಹೇಳಿಕೆ ವಿಚಾರವಾಗಿ ಶಾಸಕ ಗಣಿಗ ರವಿಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/if-siddaramaiah-has-any-respect-he-should-resign-mp-ramesh-jigajinagi/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕುಮಾರಣ್ಣ ಬರಿ ದ್ವೇಷ ಮಾಡೋದು, ಹೊಡೆದಾಟ ಇದೆ ಅವರದು. ಮಾಜಿ ಸಿಎಂ, ಮಾಜಿ ಪ್ರಧಾನಿ ಮಗ ಸಲಹೆ ಕೊಡಲಿ ಸ್ವೀಕಾರ ಮಾಡ್ತೇವೆ. ಎಲ್ಲರ ಮೇಲೆ ದಾಳಿ ಮಾಡೋದ್ರಿಂದ ಸಮಾಜವನ್ನು ಮೇಲಕ್ಕೆತ್ತಲ್ಲಾಗಲ್ಲ. ಒಕ್ಕಲಿಗರಿಗೆ ಏನಾಗಬೇಕು ಅಂತ ಸಲಹೆ ಕೊಡಲಿ. ಅದನ್ನ ಬಿಟ್ಟು ಬರಿ ಬೈದು ಕೊಂಡು ಓಡಾಡಿದ್ರೆ ಒಕ್ಕಲಿಗರನ್ನ ಉದ್ದಾರ ಮಾಡಕ್ಕಾಗಲ್ಲ. ಎರಡೂ ಬಾರಿ ಮುಖ್ಯಮಂತ್ರಿ ಆಗಿದ್ದವರು ಸಲಹೆ ಕೊಡಲಿ. ಅದನ್ನ ಬಿಟ್ಟು ಬರಿ ಮಾತನಾಡಿದ್ರೆ ಏನು ಪ್ರಯೋಜನ ಇಲ್ಲ ಎಂದರು. ಪೆನ್,ಪೇಪರ್ ಕೇಳಿದ ವ್ಯಕ್ತಿ ಸಮಾಜವನ್ನು ಮರಣಶಾಸನ ಬರೆಯಲು ಹೊರಟಿದ್ದಾರೆ ಎಂಬ ಎಚ್ಡಿಕೆ ಹೇಳಿಕೆ ವಿಚಾರವಾಗಿ ಮಾತನಾಡಿ, ಡಿಕೆ ಶಿವಕುಮಾರ್ ಪೆನ್ನು ಪೇಪರ್ ಕೋಡಿ ಅಂತ ಕೇಳಿದ್ದು ನಿಜ. ಡಿಕೆಶಿ ಅವರೇನು ಜಾತಿ ಗಣತಿ ಮಾಡಿಲ್ಲ. ಒಬ್ಬರ ಕಾಲು ಒಬ್ಬರು ಎಳೆದು ಸಮಾಜ ಈ…

Read More

ವಿಜಯಪುರ:- ಸಿದ್ದರಾಮಯ್ಯ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಲಿ ಎಂದು ಸಂಸದ ರಮೇಶ ಜಿಗಜಿಣಗಿ ಆಕ್ರೋಶ ಹೊರ ಹಾಕಿದ್ದಾರೆ. https://ainkannada.com/sri-madduramma-jatra-festival-special-lamp-decorations-are-in-full-swing-across-the-town/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ರ‌್ಯಾಲಿಯಲ್ಲಿ ಹೆಚ್ಚಿನ ಜನರು ಭಾಗಿಯಾಗಬೇಕು. ದುಡಿದ ಜನರಿಗೆ ಇಂದು ಸಂಬಳವಿಲ್ಲ, ದಿನನಿತ್ಯ ಬಳಿಕೆಯ ವಸ್ತುಗಳ ಬೆಲೆ ಏರುತ್ತಿದೆ‌. ಕುಡಿಯುವ ನೀರು ಸೇರಿದಂತೆ ಎಲ್ಲದಕ್ಕೂ ಹೆಚ್ಚಿನ‌ ಬೆಲೆ. ನಾನು 18 ವರ್ಷದಿಂದ ಇಂತಹ ಸರ್ಕಾರ ನೋಡಿಲ್ಲ. ಜನರಿಗೆ ಪ್ರೀಯಾಗಿ ಕೊಡುತ್ತೇನೆ ಎಂದು ಹೇಳಿ ಸಿದ್ದರಾಮಯ್ಯ ಇನ್ನೊಂದೆಡೆ ಬೆಲೆ ಏರಿಕೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ತಮ್ಮ‌ ಗೌರವ ಉಳಿಸಿಕೊಳ್ಳಬೇಕು ಎಂದರೆ ಮಂತ್ರಿಮಂಡಲ ತೊರೆಯಬೇಕು. ಇಂದು ಕಾಂಟ್ರ್ಯಾಕ್ಟರ್ ಗಳಿಗೆ ಬಿಲ್ಲು ಇಲ್ಲ. ಜನಗಣತಿ ಇಂದು ತರಲು ಹೊರಟಿದ್ದಕ್ಕೆ ಪ್ರಮುಖ‌ ಕಾರಣ ಇವರ ಮಾಡಿದ ತಪ್ಪನ್ನು ಮುಚ್ಚಿಕೊಳ್ಳಲು. ರಾಜ್ಯದಲ್ಲಿ ಅಲ್ಪಸಂಖ್ಯಾತರು ದಲಿತರು ಎಂದು ಮತಕ್ಕಾಗಿ ಹೇಳುತ್ತಾರೆ. ಸಿದ್ದರಾಮಯ್ಯ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು. ಜಾತಿ ಜನಗಣತಿ ಇದು ವೈಜ್ಞಾನಿಕ ಅಲ್ಲ ಎಂದು…

Read More

ಮಂಡ್ಯ :- ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮ ದೇವಿಯ ಹಬ್ಬದ ಜಾತ್ರಾ ಮಹೋತ್ಸವದ ಪ್ರಯುಕ್ತ ನಾಡ ಹಬ್ಬ ದಸರಾ ಮಾದರಿಯಲ್ಲಿ ಮದ್ದೂರು ಪಟ್ಟಣದಾದ್ಯಂತ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಶ್ರೀ ಮದ್ದೂರಮ್ಮನ ಹಬ್ಬದ ಅಂಗವಾಗಿ ಪುರಸಭೆಯ ವತಿಯಿಂದ ಪ್ರಮುಖ ಬೀದಿಗಳಲ್ಲಿ ಅಳವಡಿಸಿರುವ ವಿಶೇಷ ದೀಪಾಲಂಕಾರಕ್ಕೆ ಶಾಸಕ ಕೆ.ಎಂ.ಉದಯ್ ಸೋಮವಾರ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಶಾಸಕ ಕೆ.ಎಂ.ಉದಯ್, ಶ್ರೀ ಮದ್ದೂರಮ್ಮ ಜಾತ್ರಾ ಮಹೋತ್ಸವಕ್ಕೆ ಹಲವಾರು ವರ್ಷಗಳ ಇತಿಹಾಸವಿದೆ. ಜಾತ್ರಾ ಮಹೋತ್ಸವಕ್ಕೆ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಜಾತ್ರಾ ಮಹೋತ್ಸವಕ್ಕೆ ಮತ್ತಷ್ಟು ಮೆರಗು ತರಲು ಈ ಬಾರಿ ತಾಲೂಕು ಆಡಳಿತ ಮತ್ತು ಪುರಸಭೆ ವತಿಯಿಂದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಇದೇ ಪ್ರಪ್ರಥಮವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಾಂಲಕಾರ ಮಾಡಿರುವುದು ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದ್ದು, ಶ್ರೀ ಮದ್ದೂರಮ್ಮ ದೇವಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದರು. ಇದೇ…

Read More

ಬೆಂಗಳೂರು:-ಸಾಕಷ್ಟು ಪರ-ವಿರೋಧ ಚರ್ಚೆಗೆ ಕಾರಣವಾಗಿರುವ ಜಾತಿ ಜನಗಣತಿ ವಿಚಾರ ಇದೀಗ ಕುತೂಹಲದ ಘಟ್ಟಕ್ಕೆ ತಲುಪಿದೆ. ಸಾಮಾಜಿ ಶೈಕ್ಷಣಿಕ ಸಮೀಕ್ಷೆಯ ಕುರಿತಾಗಿ ಬಹಿರಂಗಗೊಳ್ಳುತ್ತಿರುವ ಅಂಕಿ- ಸಂಖ್ಯೆಗಳು ಪ್ರಭಾವಿ ಸಮುದಾಯಗಳ ವಿರೋಧಕ್ಕೆ ಕಾರಣವಾಗುತ್ತಿದೆ. ಈ ನಡುವೆ ಒಕ್ಕಲಿಗರ ಸಂಘದ ಮುಂದಿನ ಹೆಜ್ಜೆಗಳು ಕುತೂಹಲಕ್ಕೆ ಕಾರಣವಾಗಿದೆ. https://ainkannada.com/bad-breath-has-gotten-worse-dont-worry-follow-these-simple-tricks/ ಅಲ್ಲದೇ ಜಾತಿಗಣತಿ ವಿರುದ್ಧ ಒಕ್ಕಲಿಗರ ಸಂಘವು, ಹೋರಾಟದ ಎಚ್ಚರಿಕೆ ಕೊಟ್ಟಿದೆ. ಈ ಬಗ್ಗೆ ರಾಜ್ಯ ಒಕ್ಕಲಿಗರ ಸಂಘದಿಂದ ಇಂದು ಸಭೆ ನಡೆಸಲಾಗಿದ್ದು, ಮುಂದಿನ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದೇವೆ. ಆರೋಗ್ಯಕರವಾಗಿ ವರದಿ ಕೊಟ್ಟಿಲ್ಲ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು ಆಕ್ರೋಶ ಹೊರಹಾಕಿದ್ದಾರೆ. 10 ವರ್ಷದ ಬಳಿಕ ವರದಿ ತಂದು ಈಗ ಒಪ್ಪಿಕೊಳ್ಳಿ ಎಂದು ಸರ್ಕಾರ ಹೇಳುತ್ತಿದೆ. ಒಕ್ಕಲಿಗರ ಸಂಖ್ಯೆ 61 ಲಕ್ಷ ಎಂದು ವರದಿಯಲ್ಲಿ ತೋರಿಸಿದ್ದಾರೆ. ನಮಗೆ ಅನ್ಯಾಯ ಮಾಡುತ್ತಿದ್ದಾರೆ. ಎಲ್ಲರೂ ಒಂದಾಗಿ ಕರ್ನಾಟಕ ಬಂದ್ ಮಾಡಬೇಕು. ಅನ್ಯಾಯಕ್ಕೊಳಗಾದವರೆಲ್ಲ ಸೇರಿ ಬಂದ್‌ ಮಾಡಬೇಕು ಎಂದು ಅವರು ಕರೆ ನೀಡಿದರು. ಅಲ್ಲದೇ ವೀರಶೈವ ಸಮುದಾಯದವರ…

Read More

ಪ್ರಸ್ತುತ ನಡೆಯುತ್ತಿರುವ ಐಪಿಎಲ್​ನಲ್ಲಿ ಆರ್​ಸಿಬಿ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು ಇದರಲ್ಲಿ 4 ಮ್ಯಾಚ್​ಗಳಲ್ಲಿ ರೋಚಕ ಗೆಲುವು ಸಾಧಿಸಿದೆ. ಆದರೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಎರಡು ಪಂದ್ಯಗಳಲ್ಲಿ ಸೋಲುಂಡಿದೆ. ಗುಜರಾತ್​ ಟೈಟನ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆರ್​ಸಿಬಿ ತವರಲ್ಲಿ ಮಕಾಡೆ ಮಲಗಿ ಅಭಿಮಾನಿಗಳಿಗೆ ಭಾರೀ ನಿರಾಸೆ ಮಾಡಿದೆ. https://ainkannada.com/bad-breath-has-gotten-worse-dont-worry-follow-these-simple-tricks/ ತವರಿನಲ್ಲಿ ನಿರಾಸೆ ಮೂಡಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿನ ಪಂದ್ಯ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ನಡೆಯಲಿದೆ. ತವರಲ್ಲಿ ನಡೆಯುವ ಪಂದ್ಯದ ಕುರಿತು ಆರ್​​ಸಿಬಿ ಅಭಿಮಾನಿಗಳು ಹೃದಯ ಗಟ್ಟಿ ಮಾಡಿಕೊಳ್ಳಬೇಕು. ಏಕೆಂದರೆ ಹೊರಗೆ ವೀರಾವೇಶದಿಂದ ಹೋರಾಡುವ ರಜತ್ ಪಡೆ, ಮನೆಯಂಗಳದಲ್ಲಿ ನೆಲ ಕಚ್ಚುತ್ತಿರುವುದು ಲಾಯಲ್​​ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಅದು ಏನೇ ಇರಲಿ, 2025ನೇ ಆವೃತ್ತಿಯಲ್ಲಿ ಆರ್‌ಸಿಬಿಗೆ ಉತ್ತಮ ಆರಂಭ ಸಿಕ್ಕಿದ್ದು, ಕೊಹ್ಲಿ ಮತ್ತು ಮಿ. ನಾಗ್ಸ್ ನಡುವಿನ ‘guided meditation session’ ಅನ್ನು ಹಂಚಿಕೊಂಡಿದೆ. ಈ ಮಾತುಕತೆಯಲ್ಲಿ, ಕಳೆದ 17 ಸೀಸನ್‌ಗಳಿಂದ ತಮ್ಮ ತಂಡ ಎದುರಿಸುತ್ತಿರುವ…

Read More

ಕೆಲವರಿಗೆ ಬಾಯಿ ದುರ್ಗಂಧ ಬರುವ ಸಮಸ್ಯೆ ಇರುತ್ತದೆ. ಇದರಿಂದ ಮತ್ತೊಬ್ಬರ ಬಳಿ ಮಾತನಾಡಲು ಕೂಡ ಹಿಂಜರಿಯುತ್ತಾರೆ. ಅಷ್ಟೇ ಅಲ್ಲ ಬಾಯಿ ದುರ್ವಾಸನೆ ಬರುತ್ತಿದ್ದವರೊಂದಿಗೆ ಸಮೀಪದಲ್ಲಿ ನಿಂತು ಮಾತನಾಡಲು ಇತರರಿಗೂ ಹಿಂಸೆ ಆಗುತ್ತದೆ. https://ainkannada.com/23-year-old-biker-dies-due-to-gescom-negligence/ ನಮ್ಮ ಬಾಯಿ ವಾಸನೆ ಬರುತ್ತಿರುವ ಬಗ್ಗೆ ನಮಗೆ ಹೆಚ್ಚಾಗಿ ತಿಳಿದಿಲ್ಲದಿರಬಹುದು. ಆದರೆ, ನಮ್ಮ ಸುತ್ತಮುತ್ತಲಿರುವವರಿಗೆ ನಮ್ಮಿಂದ ಕಷ್ಟವಾಗುತ್ತಿರುತ್ತದೆ. ಇದನ್ನು ಹೇಳಲು ಅವರು ಪರದಾಡುತ್ತಿರುತ್ತಾರೆ. ಕೆಲವೊಂದು ಬಾರಿ ನೇರವಾಗಿ ಹೇಳಿಬಿಡುತ್ತಾರೆ. ಇದರಿಂದ ನಮಗೆ ಮುಜುಗರವಾಗುತ್ತದೆ. ಲವಂಗ ಅಗಿಯಿರಿ: ಲವಂಗವು ಒಂದು ಮಸಾಲೆ ಪದಾರ್ಥವಾಗಿದ್ದು, ಇದನ್ನು ಅಡುಗೆ ಮಾತ್ರವಲ್ಲದೆ ಮನೆಮದ್ದುಗಳಲ್ಲೂ ಬಳಸಲಾಗುತ್ತದೆ. ಬ್ಯಾಕ್ಟೀರಿಯಾ ವಿರೋದಿ ಗುಣಗಳನ್ನು ಹೊಂದಿರುವ ಲವಂಗವನ್ನು ಜಗಿಯುವ ಮೂಲಕ ಬಾಯಿ ದುರ್ವಾಸನೆಯ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಸೋಂಪು ಜಗಿಯಿರಿ: ಸೋಂಪು ಕೂಡಾ ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಲು ಸಹಾಯಕವಾಗಿದೆ. ಪ್ರತಿದಿನ ನೀವು ಊಟದ ಬಳಿಕ ಸ್ವಲ್ಪ ಸೋಂಪು ಕಾಳುಗಳನ್ನು ಜಗಿಯುವುದರಿಂದ ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸುವುದರ ಜೊತೆಗೆ ಹೊಟ್ಟೆ ಸಂಬಂಧಿ ಸಮಸ್ಯೆಗಳಿಂದ ದೂರವಿರಬಹುದು. ಪುದೀನಾ:ಬಾಯಿಯ ದುರ್ವಾಸನೆಯನ್ನು ತೊಡೆದುಹಾಕಲು, ನೀವು ಪುದೀನಾ…

Read More