ಬೆಳಗಾವಿ:- ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಒಂದೇ ದಿನ ಗ್ರಾಮದ ಎಂಟು ಜನರಿಗೆ ಬೀದಿ ನಾಯಿ ಕಚ್ಚಿರುವ ಘಟನೆ ಬೆಳಗಾವಿ ತಾಲೂಕಿನ ಕುದ್ರೆಮನಿ ಗ್ರಾಮದಲ್ಲಿ ಜರುಗಿದೆ. https://ainkannada.com/dr-b-r-ambedkar-babujagjivanram-jayanti-celebration-at-jp-bhavan-ta-sharavana-participating/ ಹುಚ್ಚು ನಾಯಿ ದಾಳಿಯಿಂದ ಎಂಟಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಕೈ, ಕಾಲು, ಹೊಟ್ಟೆ ಭಾಗ ಸೇರಿ ದೇಹದ ವಿವಿಧ ಭಾಗಗಳ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದ್ದು, ಅವರುಗಳನ್ನು ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಠ್ಠಲ್ ದೇವಸ್ಥಾನದಲ್ಲಿ ಸಂಜೆ ಹೊತ್ತು ಗ್ರಾಮಸ್ಥರು ಕುಳಿತಿದ್ದರು. ಈ ವೇಳೆ ದೇವಸ್ಥಾನದ ಒಳಗೆ ನುಗ್ಗಿದ ಹುಚ್ಚು ನಾಯಿ, ಎಲ್ಲರ ಮೇಲೂ ದಾಳಿ ಮಾಡಿದೆ. ಓರ್ವ ಮಹಿಳೆ ಸೇರಿ ಏಳು ಜನ ಪುರುಷರ ಮೇಲೆ ದಾಳಿ ಮಾಡಿದೆ. ದಾಳಿಗೊಳಗಾದವರನ್ನು ಮಲ್ಲಪ್ಪ ಪಾಟೀಲ್, ಮಲಪ್ರಭಾ ಪಾಟೀಲ್, ನೀಲಕಂಠ ಸಾಕರೆ, ವಿಠ್ಠಲ್ ಮಾಂಡೇಕರ್ ಸೇರಿ ಹಲವರು ಎಂದು ಗುರುತಿಸಲಾಗಿದೆ. ಮೊದಲು ನಾಯಿ ದಾಳಿ ಮಾಡುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ನಾಯಿಯ ಮೇಲೆ ಮರುದಾಳಿ ಮಾಡಿದ್ದಾರೆ. ಹುಚ್ಚು ನಾಯಿಯನ್ನು ಹೊಡೆದು ಗ್ರಾಮಸ್ಥರು ಕೊಂದಿದ್ದಾರೆ.…
Author: AIN Author
ವಿಜಯಪುರ:- ಸಾಲಗಾರರ ಕಿರುಕುಳಕ್ಕೆ ಬೇಸತ್ತ ಯುವಕನೋರ್ವ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. https://ainkannada.com/dr-b-r-ambedkar-babujagjivanram-jayanti-celebration-at-jp-bhavan-ta-sharavana-participating/ ವಿಜಯಪುರ ನಗರದ ಆದರ್ಶ ನಗರ ಬಡಾವಣೆಯ ನಿವಾಸಿ ಶೋಬಿತ ಬಳ್ಳೂಳಗಿಡದ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ, ಬಡ್ಡಿ ರೂಪದಲ್ಲಿ ಹಾಗೂ ಕ್ರೆಡಿಟ್ ಕಾರ್ಡ್ ಮೂಲಕ ಯುವಕ ಸಾಲ ಮಾಡಿದ್ದ. ಸಾಲ ಹೆಚ್ಚಾಗಿ ಮಾಡಿಕೊಂಡ ಕಾರಣ ಯುವಕನ ತಂದೆಗೂ ಸಾಲ ಪಾವತಿಸುವಂತೆ ಸಾಲಗಾರರು ನಿತ್ಯ ಕಿರುಕುಳ ಕೊಡುತ್ತಿದ್ದರು. ಈ ಕಿರುಕುಳದ ಬಗ್ಗೆ ಆದರ್ಶ ನಗರ ಪೊಲೀಸರಿಗೆ ಯುವಕ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸಾಲಗಾರರ ಕಿರುಕುಳದ ಬಗ್ಗೆ ವಿಡಿಯೋ ಮಾಡಿ ಬಳಿಕ ಯುವಕ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಯುವಕ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ. ಆದರ್ಶ ನಗರ ಪೊಲೀಸ್ ಠಾಣಾ…
ಬೆಂಗಳೂರು:- ಬೆಂಗಳೂರಿನ ಜೆಪಿ ಭವನದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಡಾ. ಬಾಬುಜಗಜೀವನರಾಂ ಜಯಂತಿ ಕಾರ್ಯಕ್ರಮ ಆಚರಿಸಲಾಗಿದೆ. ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪರಿಷತ್ ಶಾಸಕ ಟಿಎ ಶರವಣ ಅವರು, ಬಿ. ಆರ್ ಅಂಬೇಡ್ಕರ್ ಹಾಗೂ ಬಾಬುಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಟಿಎ ಶರವಣ, ಡಾ. ಬಿ ಆರ್ ಅಂಬೇಡ್ಕರ್, ಹಾಗೂ ಡಾ. ಬಾಬುಜಗಜೀವನರಾಂ ಈ ಇಬ್ಬರು ನಾಯಕರ ವ್ಯಕ್ತಿತ್ವ ಹಾಗೂ ಚರಿತ್ರೆ ಇಂದಿನ ಯುವ ಪೀಳಿಗೆಗೆ ಮಾದರಿ ಎಂದಿದ್ದಾರೆ. ಅಲ್ಲದೇ ಶೋಷಿತರಿಗಾಗಿ ಈ ಇಬ್ಬರು ನಾಯಕರು ಹೋರಾಡಿದ ಹೋರಾಟಗಳನ್ನು ಇದೇ ವೇಳೆ ಟಿಎ ಶರವಣ ನೆನೆದರು. ಬಳಿಕ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಸೇರಿ ಪಕ್ಷದ ವಿವಿಧ ಮುಖಂಡರು ಹಾಜರಿದ್ದರು.
ಬೆಳಗಾವಿ:- ಮೆರವಣಿಗೆಗೆ ಬರ್ತಿದ್ದ ಡಾಲ್ಬಿ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಹೊರ ವಲಯದಲ್ಲಿ ಜರುಗಿದೆ. https://ainkannada.com/one-way-muslims-are-contract-marriage/ ಅಂಬೇಡ್ಕರ್ ಜಯಂತಿ ಹಿನ್ನೆಲೆ ಮೆರವಣಿಗೆಗೆ ಆಗಮಿಸುವಾಗ ಘಟನೆ ಜರುಗಿದೆ. ಗಾಯಾಳುಗಳಿಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಕೊಪ್ಪಳ:- ಮುಸ್ಲಿಮರದ್ದು ಕಾಂಟ್ರ್ಯಾಕ್ಟ್ ಮ್ಯಾರೇಜ್ ಎಂದು ಹೇಳುವ ಮೂಲಕ ಬಸವರಾಜ್ ರಾಯರೆಡ್ಡಿ ಅವರು ಮತ್ತೊಮ್ಮೆ ನಾಲಗೆ ಹರಿಬಿಟ್ಟಿದ್ದಾರೆ. https://ainkannada.com/tumkur-go-to-choose-the-street-lamp-and-touch-the-electricity-and-the-death-of-the-teacher/ ನಗರದಲ್ಲಿ ಮಾತನಾಡಿದ ಅವರು, ಮುಸ್ಲಿಮರ ಮದುವೆ ನೋಂದಣಿ ಆಗುತ್ತದೆ. ಮುಸ್ಲಿಮರ ಗುರುಗಳು ನೋಂದಣಿ ಪುಸ್ತಕದಲ್ಲಿ ದಾಖಲಿಸುತ್ತಾರೆ. ಅವರದ್ದು ಕಾಂಟ್ರ್ಯಾಕ್ಟ್ ಮ್ಯಾರೇಜ್ ಬೇಡ ಎಂದರೆ ಬಿಟ್ಟು ಬಿಡುತ್ತಾರೆ ಅದರಲ್ಲೇನು ತಪ್ಪಿಲ್ಲ. ಅವರದ್ದು ಹಿಂದುಗಳ ರೀತಿ ಏಳೇಳು ಜನುಮದ ಬಂಧ ಅಲ್ಲ ಎಂದರು. ನರೇಂದ್ರ ಮೋದಿ ಗೊತ್ತಿದ್ದು, ಮಾತನಾಡುತ್ತಾರೋ ಏನೋ ಗೊತ್ತಿಲ್ಲ. ಮೋದಿ ಮಾತಾಡಿದ್ದು ತಪ್ಪು. ಮುಸ್ಲಿಮರ ಸ್ಥಿತಿ-ಗತಿ ತೀರಾ ಹೀನಾಯವಾಗಿದೆ. ಕೇಂದ್ರದ ವಕ್ಫ್ ತಿದ್ದುಪಡಿ ಕಾಯ್ದೆಯಾಗಿದೆ ಎನ್ನುವ ಓಬಿಸಿ ಮೀಸಲಾತಿ ತೆಗೆದು, ಮುಸ್ಲಿಮರಿಗೆ ನೀಡುತ್ತಿದ್ದಾರೆ ಎಂದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿದರು.
ತುಮಕೂರು:- ತುಮಕೂರಿನಲ್ಲಿ ಬೀದಿ ದೀಪ ಆರಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಶಿಕ್ಷಕ ಸಾವನ್ನಪ್ಪಿರುವ ಘಟನೆ ಜರುಗಿದೆ. https://ainkannada.com/ipl-2025-a-series-of-5-consecutive-matches-broken-csk-3rd-defeat-for-lucknow/ 35 ವರ್ಷದ ಲೋಕೇಶ್ ರಾವ್ ಮೃತ ದುರ್ದೈವಿ. ಬೆಳಗ್ಗೆ ಮನೆ ಸಮೀಪದ ಬೀದಿ ದೀಪ ಆರಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಬೀದಿ ದೀಪಗಳಿಗೆ ಅಳವಡಿಸಿರುವ ವೈರ್ಗೆ ಸ್ವಿಚ್ ಹಾಕುವಂತೆ ಅನೇಕ ಬಾರಿ ಸಂಬಂಧಿಸಿದ ಬೆಸ್ಕಾಂ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಸ್ವಿಚ್ ಅಳವಡಿಸುವುದಕ್ಕೆ ಬದಲಾಗಿ ವೈರನ್ನೇ ಒಂದಕ್ಕೊಂದು ಸ್ಪರ್ಶಿಸಿ ಇಟ್ಟಿರುವುದೇ ಅನಾಹುತಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮೃತರು ಪತ್ನಿ, ಎರಡು ವರ್ಷದ ಹೆಣ್ಣು ಮಗು ಹಾಗೂ ಒಂದು ತಿಂಗಳ ಮಗುವನ್ನು ಅಗಲಿದ್ದಾರೆ.
2025ರ ಐಪಿಎಲ್ 30ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. https://ainkannada.com/dhana-praty-yoga-for-employees-of-this-pile-promotion-bhagya-in-employment/ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊನೆಗೂ ತನ್ನ ಸೋಲಿನ ಸರಣಿಯನ್ನು ಮುರಿದಿದೆ. ಸತತ ಐದು ಪಂದ್ಯಗಳಲ್ಲಿ ಸೋತ ನಂತರ, ಚೆನ್ನೈ ತಂಡವು ಈ ಸೀಸನ್ನಲ್ಲಿ ಎರಡನೇ ಗೆಲುವು ದಾಖಲಿಸಿತು. ಲಕ್ನೋ ನೀಡಿದ 167 ರನ್ಗಳ ಗುರಿ ಬೆನ್ನಟ್ಟಿದ ಸಿಎಸ್ಕೆ ಕೊನೆಯ ಓವರ್ನಲ್ಲಿ ಗುರಿ ಸಾಧಿಸಿತು. ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನಲ್ಲಿ ಎಂಎಸ್ ಧೋನಿ ಅವರ ಪ್ರದರ್ಶನ ಅತ್ಯುತ್ತಮವಾಗಿತ್ತು. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಚೆನ್ನೈ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿತು. 2025ರಲ್ಲಿ ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಪಂತ್ ಅವರ ಅಮೋಘ ಆಟದ ನೆರವಿನಿಂದ ಎಲ್ಎಸ್ಜಿ ಸಾಧಾರಣ ಮೊತ್ತ ಕಲೆ ಹಾಕಿತು. 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಸಿಎಸ್ಕೆ, 19.3 ಓವರ್ಗಳಲ್ಲೇ 5…
ಸೂರ್ಯೋದಯ – 6:03ಬೆ. ಸೂರ್ಯಾಸ್ತ – 6:28ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ಬಿದಿಗೆ ನಕ್ಷತ್ರ – ವಿಶಾಖ ಯೋಗ – ಸಿದ್ಧಿ ಕರಣ – ಗರಜೆ ರಾಹು ಕಾಲ – 03:00 ದಿಂದ 04:30 ವರೆಗೆ ಯಮಗಂಡ – 09:00 ದಿಂದ 10:30 ವರೆಗೆ ಗುಳಿಕ ಕಾಲ – 12:00 ದಿಂದ 01:30 ವರೆಗೆ ಬ್ರಹ್ಮ ಮುಹೂರ್ತ – 4:27 ಬೆ. ದಿಂದ 5:15 ಬೆ. ವರೆಗೆ ಅಮೃತ ಕಾಲ – 5:16 ಸಂಜೆ ದಿಂದ 7:04 ಸಂಜೆ ವರೆಗೆ ಅಭಿಜಿತ್ ಮುಹುರ್ತ – 11:51 ಬೆ. ದಿಂದ 12:41 ಮ. ವರೆಗೆ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.…
ಬೆಂಗಳೂರು:- ಜಾತಿ ಗಣತಿ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ನಾಳೆ ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಮಹತ್ವದ ಸಭೆ ಕರೆದಿದ್ದು, ಅವರೊಂದಿಗೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಹೇಳಿದ್ದಾರೆ. https://ainkannada.com/are-you-writing-the-cet-exam-if-so-then-this-is-the-dress-code/ ಸದ್ಯ ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಟಾಪಟಿ ಭುಗಿಲೆದ್ದಿದೆ. ಜಾತಿಗಣತಿ ಅನ್ನೋ ಜೇನುಗೂಡಿಗೆ ಕಲ್ಲೊಡೆದಿರುವ ಸರ್ಕಾರ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿದ್ದು, ಪರ ವಿರೋಧ ಚರ್ಚೆ ಜೋರಾಗುತ್ತಿದೆ. ಹೀಗಿರುವಾಗಲೇ ಡಿಸಿಎಂನ ಈ ನಡೆ ಕುತೂಹಲ ಕೆರಳಿಸಿದೆ. ಈ ಸಂಬಂಧ ಮಾತನಾಡಿದ ಡಿಕೆಶಿ, ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜತೆ ಚರ್ಚೆ ಮಾಡಿ ಯಾರ ಮನಸ್ಸಿಗೂ ನೋವಾಗದಂತೆ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ ಎಂದಿದ್ದಾರೆ. ಬೆಂಗಳೂರಿನ ಕುಮಾರ ಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಸರ್ಕಾರಿ ನಿವಾಸದಲ್ಲಿ ದಿನಾಂಕ ನಾಳೆ…
ಬೆಂಗಳೂರು:- ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ವಾರ್ಷಿಕವಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ. 2025ರ ಸಿಇಟಿ ಪರೀಕ್ಷೆಗೆ ಕೌಂಟ್ ಡೌನ್ ಶುರುವಾಗಿದ್ದು, ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅನ್ನು KEA ಬಿಡುಗಡೆ ಮಾಡಿದೆ. https://ainkannada.com/ambedkars-philosophies-are-a-model-for-the-entire-world-somanna-hanjagi/ ವಿದ್ಯಾರ್ಥಿಗಳ ಡ್ರೆಸ್ ಕೋಡ್ ಹೀಗಿರಲಿ:- * ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ವಸ್ತ್ರ ಸಂಹಿತೆ. * ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು. * ಸಾಧ್ಯವಾದಷ್ಟು ಕಾಲರ್ ಇಲ್ಲದಿರುವುದನ್ನು ಹಾಕಿಕೊಂಡು ಬಂದರೆ ಉತ್ತಮ. * ಪುರುಷರು, ಜೇಬು ಇಲ್ಲದ/ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು. * ಕುರ್ತಾ ಪೈಜಾಮ/ಜೀನ್ಸ್ ಪ್ಯಾಂಟ್ಗೆ ಅವಕಾಶ ಇಲ್ಲ. * ಶೂ ಕೂಡ ನಿಷೇಧ. * ಮೊಬೈಲ್, ಪೆನ್ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇಧ.