ಹುಬ್ಬಳ್ಳಿ: ಸಂವಿಧಾನ ಕರ್ತೃ ಡಾ. ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟ ತತ್ವ ಸಿದ್ಧಾಂತಗಳು ಒಂದು ದೇಶಕ್ಕೆ ಸೀಮಿತವಾಗಿಲ್ಲ. ಅವು ಇಡೀ ವಿಶ್ವಕ್ಕೆ ಮಾದರಿಯಾಗಿವೆ ಎಂದು ವ್ಯಾಪಾರಿ ಹಾಯ ಸಾಮಾಜಿಕ ಕಾರ್ಯಕರ್ತ ಸೋಮಣ್ಣ ಹಂಜಗಿ ತಿಳಿಸಿದರು. https://ainkannada.com/girl-murder-case-in-hubballi-this-is-an-issue-that-the-entire-society-is-bowing-down-to-santosha-lad/ ನಗರದ ಅಮರಗೋಳ ಎಪಿಎಂಸಿಯಲ್ಲಿಂದು ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಂಬೇಡ್ಕರ್ರವರು ನೀಡಿದ ಸಂವಿಧಾನದಲ್ಲಿ ಬಸವ ತತ್ವವಿದ್ದು ಕೀರ್ತನಾಕಾರರ ವಿಚಾರಧಾರೆಗಳೂ ಅಡಕವಾಗಿವೆ. ಹಾಗೆಯೇ ಪ್ರತಿಯೊಬ್ಬರಿಗೂ ಕಾನೂನಿನಲ್ಲಿ ಸಮಾನ ಅವಕಾಶ ನೀಡಲಾಗಿದೆ. ಇದರಿಂದಾಗಿ ಮಹಿಳೆಯೊಬ್ಬರು ದೇಶದ ರಾಷ್ಟ್ರಪತಿಯಾಗಲು ಸಾಧ್ಯವಾಗಿದೆ ಎಂದರು. ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತ ಕಂಡ ಮಹಾ ಸಾಮಾಜಿಕ ಪರಿವರ್ತಕ ಹಾಗೂ ಆರ್ಥಿಕ ತಜ್ಞ. ಅವರು ರಚಿಸಿದ ಸಂವಿಧಾನದಿಂದಾಗಿ ರಾಜಕೀಯ, ಸಾಮಾಜಿಕ ಸ್ವಾತಂತ್ರ್ಯ ಕಾಣಲು ಸಾಧ್ಯವಾಗಿದೆ ಎಂದು ತಿಳಿಸಿದರು. ಚಿಕ್ಕಂದಿನಲ್ಲೇ ಶ್ರೇಣೀಕೃತ ಸಮಾಜದಲ್ಲಿ ಅನುಭವಿಸಿದ ಸಂಕಷ್ಟ, ಶೋಷಣೆ ಹಾಗೂ ಮೌಲ್ಯಗಳ ವ್ಯವಸ್ಥೆಯನ್ನು ಸಾಮಾಜಿಕವಾಗಿ ಬದಲಾಯಿಸುವ ಹಾಗೂ ಸಮಾಜದ ಕಟ್ಟಕಡೆಯ ಸಮುದಾಯವಾಗಿ ಜೀವಿಸುತ್ತಿದ್ದ ದಲಿತರಿಗೂ ಪರಿಪೂರ್ಣ ಜೀವನಾವಕಾಶ ಒದಗಿಸುವ ಇರಾದೆ…
Author: AIN Author
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಇದು ಇಡೀ ಸಮಾಜ ತಲೆ ತಗ್ಗಿಸುವ ವಿಚಾರ ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ. https://ainkannada.com/a-police-constable-on-duty-at-kudachi-police-station-died-of-a-heart-attack/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಇದು ಇಡೀ ಸಮಾಜ ತಲೆಗಿಸುವ ವಿಚಾರ ಮಗುವಿನ ಮುಖ ನೋಡಲು ಆಗುತ್ತಿಲ್ಲ ಆರೋಪಿ ಡ್ರಗ್ ಸೇವನೆ ಬಗ್ಗೆ ಮಾಹಿತಿ ಇಲ್ಲ ಆರೋಪಿ ಮರಣೋತ್ತರ ಪರೀಕ್ಷೆ ಬಳಿಕ ಗೊತ್ತಾಗಲಿದೆ ಹುಬ್ಬಳ್ಳಿಯಲ್ಲಿ ಇನ್ನು ಮುಂದೆ ಮಹಿಳಾ ಸುರಕ್ಷಿತ ಕ್ರಮ ಕೈಗೊಳ್ಳಾಗುತ್ತದೆ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ ನಮ್ಮ ಸರ್ಕಾರ ಬಾಲಕಿ ಕುಟುಂಬಕ್ಕೆ ಈಗಾಗಲೇ ಪರಿಹಾರ ಘೋಷಣೆ ಮಾಡಿದೆ ಜಮೀರ್ ಅಹ್ಮದ್ ಕೂಡ ವಸತಿ ಇಲಾಖೆಯಿಂದ ಮೃತ ಬಾಲಕಿ ಕುಟುಂಬಸ್ಥರಿಗೆ ಮನೆ ನೀಡುವ ಭರವಸೆ ನೀಡಿದ್ದಾರೆ ಸರ್ಕಾರದ ಜೊತೆ ಮಾತನಾಡಿ ಇನ್ನೂ ಹೆಚ್ಚಿನ ಪರಿಹಾರಕ್ಕಾಗಿ ಮನವಿ ಮಾಡುತ್ತೇನೆ ಎಂದರು.
ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಹವಾಲ್ದಾರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕುಡಚಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. https://ainkannada.com/family-feud-mother-commits-suicide-by-falling-into-a-well-with-her-two-children/ ಮೃತ ಯಲ್ಲಪ್ಪ ಭೋಜ ಅವರಿಗೆ ರವಿವಾರ ರಾತ್ರಿ ಇದ್ದಕ್ಕಿದ್ದಂತೆ ತೀವ್ರ ಎದೆ ನೋವು ಕಾಣಿಸಿಕೊಂಡಾಗ ಅವರು ತಮ್ಮ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ, ನಂತರ ಅವರನ್ನು ತಕ್ಷಣವೇ ಮಹಾರಾಷ್ಟ್ರದ ಸಾಂಗಲಿ ನಗರದ ಭಾರತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಕುಡಚಿ ಚೆಕ್ಪೋಸ್ಟ್ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ನಿವಾಸಿಯಾದ 46 ವರ್ಷದ ಹವಾಲ್ದಾರ ಯಲ್ಲಪ್ಪ ಭೋಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದ ಕುಡಚಿ ಚೆಕ್ಪೋಸ್ಟ್ನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅವರನ್ನು ನಿಯೋಜಿಸಲಾಗಿತ್ತು, ಅಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅವರು ಕಳೆದ 9 ತಿಂಗಳಿನಿಂದ ಕುಡಚಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಅವರು ಪೋಷಕರು, ಪಿಡಿಓ ಆದ ಪತ್ನಿ, ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.
ಚಾಮರಾಜನಗರ:- ಮಹದೇಶ್ವರಬೆಟ್ಟದ ಕಾಡೊಲದಲ್ಲಿನ ಭಾವಿಯಲ್ಲಿ ಮುಳುಗಿ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. https://ainkannada.com/ipl-2025-csk-team-turns-to-god-distraught-by-defeats/ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರಬೆಟ್ಟ ಸಮೀಪದ ಕಾಡುಹೊಲದ ಸುಶೀಲ (30)ಮತ್ತು ಆಕೆಯ ಮಕ್ಕಳಾದ ಚಂದ್ರು (8 ) ದಿವ್ಯ (11ಎಂಬಾತರೆ ಮೃತಪಟ್ಟಂತಹ ದುರ್ದೈವಿಗಳಾಗಿದ್ದಾರೆ. ಮನೆಯಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು ತನ್ನ ಮಕ್ಕಳ ಜೊತೆ ಸುಶೀಲ ಮನೆಯಿಂದ ತೆರಳಿ ಕಾಡೊಲ ಸಮೀಪದಲ್ಲಿನ ಜಮಿನೊಂದರ ಭಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ ಸೋಮವಾರದಂದು ಜಮೀನಿನ ಬಾವಿಯಲ್ಲಿ ನೀರನ್ನು ತರಲು ತೆರಳಿದಂತಹ ಜಮೀನು ಮಾಲೀಕನಿಗೆ ಬಾವಿಯ ಬಳಿ ಚಪ್ಪಲಿ,ತಾಳಿ ಹಾಗೂ ಇನ್ನಿತರ ವಸ್ತುಗಳನ್ನು ಪ್ರತ್ಯೇಕ್ಷ ವಾಗಿದ್ದು ಕೂಡಲೆ ಗ್ರಾಮಸ್ಥರು ಮತ್ತು ಪೊಲೀಸರನ್ನು ಕರೆಸಿ ಪರಿಶೀಲಿಸಿದಾಗ ತಾಯಿ ಸೇರಿ ಮಕ್ಕಳು ಬಾವಿಯಲ್ಲಿ ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು ದೇವರ ಮೊರೆ ಹೋಗಿದ್ದಾರೆ. https://ainkannada.com/this-is-the-reason-why-congress-suddenly-remembers-ambedkar-vijayendra-sarcastically/ ಸಿಎಸ್ಕೆ ತಂಡದ ನಿಯಮಿತ ನಾಯಕ ರುತುರಾಜ್ ಗಾಯಕ್ವಾಡ್ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮೊಣಕೈ ಮುರಿತಕ್ಕೆ ಒಳಗಾಗಿದ್ದರು. ಹೀಗಾಗಿ ಅವರನ್ನು ಇಡೀ ಟೂರ್ನಿಯಿಂದ ಹೊರಗಿಡಲಾಗಿದೆ. ಆದಾಗ್ಯೂ ತಂಡದಲ್ಲಿಯೇ ಉಳಿದಿರುವ ರುತುರಾಜ್ ಇದೀಗ ತಂಡದ ಕೆಲವು ಸದಸ್ಯರು ಹಾಗೂ ಮಾಲೀಕರೊಂದಿಗೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಇಂದು ಪಂದ್ಯವಿದ್ದ ಕಾರಣ ಅಭ್ಯಾಸ ನಡೆಸುವ ಸಲುವಾಗಿ ತಂಡದ ಎಲ್ಲಾ ಆಟಗಾರರು ದೇವಸ್ಥಾನಕ್ಕೆ ಭೇಟಿ ನೀಡಿಲ್ಲ. ಇದೇ ಕಾರಣಕ್ಕಾಗಿಯೇ ನಾಯಕ ಧೋನಿ ಕೂಡ ದೇವಸ್ಥಾನಕ್ಕೆ ಬಂದಿಲ್ಲ ಎಂದು ತೊರುತ್ತದೆ. ಈ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಕಳೆದ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ತಂಡವು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಎಂಟು ವಿಕೆಟ್ಗಳ ಹೀನಾಯ ಸೋಲನ್ನು ಅನುಭವಿಸಿತು
ಬೆಂಗಳೂರು:- ಕಾಂಗ್ರೆಸ್ಸನ್ನು ಜನತೆ ಧಿಕ್ಕರಿಸಿದ್ದರಿಂದ ಅವರಿಗೆ ಈಗ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ನೆನಪಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. https://ainkannada.com/there-is-no-change-in-the-strike-shanmugappa/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತಕ್ಕೆ ಸಂವಿಧಾನ ಕೊಟ್ಟ ಅಂಬೇಡ್ಕರ್ರನ್ನು ಕಾಂಗ್ರೆಸ್ನವರು ಹೇಗೆ ನಡೆಸಿಕೊಂಡರು ಎಂಬ ಸತ್ಯ, ರಾಜ್ಯ ಮತ್ತು ದೇಶದ ಜನತೆಗೆ ಗೊತ್ತಾಗಬೇಕಿದೆ ಎಂದು ಹೇಳಿದರು. ಭಾರತದ ನಿಜವಾದ ರತ್ನವಾಗಿದ್ದ ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಡಲು ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದ ಬಿಜೆಪಿ ಬೆಂಬಲಿಸಿದ ವಿ.ಪಿ.ಸಿಂಗ್ ಅವರ ಸರ್ಕಾರವೇ ಬರಬೇಕಾಯಿತಲ್ಲವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ನವರು ಸ್ವಾತಂತ್ರ್ಯದ ನಂತರದಲ್ಲಿ 50-55 ವರ್ಷಗಳ ಕಾಲ ಸುದೀರ್ಘವಾಗಿ ಆಡಳಿತ ನಡೆಸಿದ್ದಾರೆ. 40-45 ವರ್ಷಗಳ ಕಾಲ ಸುದೀರ್ಘವಾಗಿ ಗಾಂಧಿ ಕುಟುಂಬವೇ ಈ ದೇಶದ ಆಡಳಿತದ ಚುಕ್ಕಾಣಿ ಹಿಡಿದಿದ್ದರೂ ಸಹ ಮಹಾನ್ ನಾಯಕ ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಡಲು ಕಾಂಗ್ರೆಸ್ನವರಿಗೆ ಆಗಲಿಲ್ಲ. ಗಾಂಧಿ ಕುಟುಂಬಕ್ಕೆ 3 ಭಾರತರತ್ನ ಸಿಗುತ್ತದೆ. ಆದರೆ ಸಂವಿಧಾನಶಿಲ್ಪಿ…
ಬೆಂಗಳೂರು:- ಲಾರಿ ಮುಷ್ಕರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮನ್ನು ಇದುವರೆಗೂ ಯಾರು ಕರೆದು ಮಾತನಾಡಿಲ್ಲ. ಹಾಗಾಗಿ ನಾವು ಘೋಷಣೆ ಮಾಡಿದಂತೆ ಮುಷ್ಕರ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರೆ. ಹಲವು ಬಾರಿ ಸಿಎಂ ಸಿದ್ದರಾಮಯ್ಯನವರಿಗೆ ನಾವು ಪತ್ರ ಬರೆದಿದ್ದೆವು. ಸರ್ಕಾರ ಕರೆದರೆ ಮಾತುಕತೆಗೆ ನಾವು ಸಿದ್ಧವಾಗಿದ್ದೇವೆ. ಕೂಡಲೇ ಲಾರಿ ಮಾಲೀಕರ ಸಮಸ್ಯೆಗಳನ್ನು ಸರ್ಕಾರ ಪರಿಹರಿಸಬೇಕು ಎಂದು ಆಗ್ರಹಿಸಿದ್ದಾರೆ. ಕಳೆದ 6 ತಿಂಗಳಲ್ಲಿ ಡೀಸೆಲ್ ದರ 5 ರೂ. ಹೆಚ್ಚಳ ಮಾಡಿದ್ದಾರೆ. ಇದರಿಂದ ಲಾರಿ ಮಾಲೀಕರಿಗೆ ಕಷ್ಟ ಆಗುತ್ತೆ. ರಾಜ್ಯದಲ್ಲಿ ಮೊದಲು ಕಡಿಮೆ ದರ ಇದ್ದಿದ್ದರಿಂದ ಈ ಹಿಂದೆ ಬೇರೆ ರಾಜ್ಯದ ಲಾರಿ ಚಾಲಕರು ಕರ್ನಾಟಕಕ್ಕೆ ಬರುತ್ತಿದ್ದರು. ಸರ್ಕಾರ ಕೂಡಲೇ ಡೀಸೆಲ್ ದರ ಬಗ್ಗೆ ಮರು ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ. ಲಾರಿ ಮಾಲೀಕರು, ಟ್ರ್ಯಾಕ್ಟರ್ ಮಾಲೀಕರು, ರೈತರು ಪರದಾಡುತ್ತಿದ್ದಾರೆ. ಗಡಿ ಚೆಕ್ಪೋಸ್ಟ್ಗಳಲ್ಲಿ ಆರ್ಟಿಓ…
ವಯಸ್ಸಾದಂತೆ, ನಮ್ಮ ತ್ವಚೆ ಕಾಂತಿಯನ್ನು ಕಳೆದುಕೊಂಡ ಹಾಗೆ, ನಮ್ಮ ತಲೆ ಕೂದಲಿನ ಬಣ್ಣ ಕೂಡ ಅಷ್ಟೇ ವಯಸ್ಸಾ ಗುತ್ತಾ ಹೋದಂತೆ, ಕಪ್ಪು ಬಣ್ಣದಿಂದ ಬಿಳಿ ಬಣ್ಣಕ್ಕೆ ತಿರು ಗುತ್ತದೆ! ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರು, ಸಣ್ಣ ವಯಸ್ಸಿಗೆ ಕೂದಲು ಬೆಳ್ಳಗೆ ಆಗುವ ಸಮಸ್ಯೆಯನ್ನು ಎದುರಿಸುತ್ತಿ ದ್ದಾರೆ. https://ainkannada.com/rain-news-rain-in-bangalore-motorists/ ಇದಕ್ಕೆ ಪ್ರಮುಖ ಕಾರಣಗಳು ಕೂದಲಿಗೆ, ಕೆಮಿಕಲ್ ಅಂಶ ಹೆಚ್ಚಿರುವ ಹೇರ್ ಡೈ, ಶಾಂಪೂ, ಸೋಪ್, ಹಾಗೂ ನಾವು ಅನುಸರಿಸುತ್ತಿರುವ ಜೀವನಶೈಲಿ ಹಾಗೂ ಆಹಾರ ಪದ್ಧತಿಗಳಿಂದಲೂ ಕೂಡ ಇಂದಿನ ದಿನಗಳಲ್ಲಿ, ಹೆಚ್ಚಿನವರಿಗೆ ಸಣ್ಣ ವಯಸ್ಸಿಗೆ ಕೂದಲು ಬೆಳ್ಳಗೆ ಆಗುವ ಸಮಸ್ಯೆ ಎದುರಾಗುತ್ತಿದೆ. ಬನ್ನಿ ಈ ಲೇಖನದಲ್ಲಿ ಕೂದಲಿ ಬೆಳ್ಳಗಾಗುವ ಸಮಸ್ಯೆಗೆ ಸರಳ ಮನೆಮದ್ದುಗಳ ಬಗ್ಗೆ ನೋಡೋಣ.. ಪೇರಲ ಹಣ್ಣಿನ ಗಿಡದ ಎಲೆಗಳು ಕೂದಲಿಗೆ ಅತ್ಯುತ್ತಮವಾಗಿವೆ. ಪೇರಲ ಎಲೆಗಳು ಅನೇಕ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಇದರಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ ಇರುತ್ತದೆ. ಕೂದಲು ಮತ್ತು ಚರ್ಮಕ್ಕೆ ಪೇರಲ ಎಲೆ ಪ್ರಯೋಜನಕಾರಿ ಆಗಿದೆ. ಕೂದಲಿಗೆ ಪೇರಲ ಎಲೆಗಳನ್ನು…
ಬೆಂಗಳೂರು:- ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/sweet-news-to-csk-a-17-year-old-explosive-player-for-ruturaj-position/ ಮಧ್ಯಾಹ್ನದಿಂದ ನಗರದೆಲ್ಲೆಡೆ ಮೋಡ ಕವಿದ ವಾತಾವರಣವಿತ್ತು. ಇದೀಗ ನಗರದ ಹಲವೆಡೆ ಧಾರಾಕಾರ ಮಳೆ ಆಗಿದೆ. ವಿಧಾನಸೌಧ, ಕೆ.ಆರ್ ಸರ್ಕಲ್, ಕಾರ್ಪೊರೇಷನ್, ಶಾಂತಿ ನಗರ, ಮೆಜೆಸ್ಟಿಕ್, ಮೈಸೂರ್ ಬ್ಯಾಂಕ್, ಟೌನ್ಹಾಲ್, ರಿಚ್ಮಂಡ್ ಟೌನ್, ಜಯನಗರ ಸೇರಿದಂತೆ ಹಲವೆಡೆ ಮಳೆ ಆಗಿದೆ. ಡಾ.ಅಂಬೇಡ್ಕರ್ ಜಯಂತಿ ಹಿನ್ನೆಲೆ ವಿಧಾನಸೌಧದ ಬಳಿ ಹಾಕಲಾಗಿದ್ದ ಪೆಂಡಾಲ್ ಕೆಳಗೆ ಜನರು ಆಶ್ರಯ ಪಡೆದಿದ್ದಾರೆ. ಇನ್ನು ರಜೆ ಹಿನ್ನಲೆ ವಿಧಾನಸೌಧ, ಕಬ್ಬನ್ ಪಾರ್ಕ್ ನೋಡಲು ಬಂದಿದ್ದ ಸಾರ್ವಜನಿಕರು ಮಳೆಯಿಂದ ಪರದಾಡಿದರು. ಮಳೆಗಾಲ ಆರಂಭಕ್ಕೂ ಮುನ್ನವೇ ಮಳೆರಾಯನ ಆರ್ಭಟ ಶುರುವಾಗಿದೆ. ಕರ್ನಾಟಕದಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ಬೆಂಗಳೂರು ಸೇರಿದಂತೆ ಕೆಲವೆಡೆ ಮಳೆ ಸುರಿದಿದೆ. ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು
2025ರ ಆವೃತ್ತಿಯ ಐಪಿಎಲ್ ನ ಆರಂಭಿಕ ಪಂದ್ಯವನ್ನು ಗೆದ್ದ ನಂತರ ಸತತ ಐದು ಪಂದ್ಯಗಳಲ್ಲಿ ಸೋಲನುಭವಿಸಿರುವ ಚೆನ್ನೈಸೂಪರ್ ಕಿಂಗ್ಸ್ ತಂಡ ಸದ್ಯ ಅನಿಶ್ಚಿತತೆಯ ಸ್ಥಿತಿಯಲ್ಲಿದೆ. ಐದು ಬಾರಿಯ ಚಾಂಪಿಯನ್ ಸಿ ಎಸ್ ಕೆ ತಂಡವು ಐಪಿಎಲ್ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. https://ainkannada.com/mix-this-powder-in-the-morning-to-bring-to-sugar-control-see-then-see/ 2025ರ IPL ನಲ್ಲಿ CSK ಗೆ ಕಠಿಣವಾಗಿದೆ. ಐದು ಬಾರಿಯ ಚಾಂಪಿಯನ್ ತಂಡ ಸತತ 5 ಪಂದ್ಯಗಳಲ್ಲಿ ಸೋಲನ್ನು ಕಂಡಿದ್ದು, ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ರೀತಿ ಕಳಪೆ ಸಾಧನೆ ಮಾಡಿದೆ. ಈ ಬಾರಿ ತಂಡದ ಬ್ಯಾಟಿಂಗ್ ಸಮಸ್ಯೆಯಾಗಿದ್ದು, ಆರಂಭಿಕರಿಂದ ಸ್ಥಿರ ಪ್ರದರ್ಶನ ಬಂದಿಲ್ಲ. ಈ ಸೋಲಿನ ಸರಣಿಯು ತಂಡದ ಆತ್ಮವಿಶ್ವಾಸವನ್ನು ಕುಗ್ಗಿಸಿದೆ. ಸಿಎಸ್ಕೆಗೆ ಮತ್ತೊಂದು ಹಿನ್ನಡೆಯೆಂದರೆ ನಾಯಕ ರುತುರಾಜ್ ಗಾಯಕ್ವಾಡ್ರ ಗಾಯ. ಮೊಣಕೈ ಗಾಯದಿಂದಾಗಿ ಋತುರಾಜ್ ಋತುವಿನ ಮಧ್ಯದಿಂದಲೇ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇದರಿಂದ ತಂಡದ ತಂತ್ರಗಾರಿಕೆ ಮತ್ತು ನಾಯಕತ್ವದ ಮೇಲೆ ಪರಿಣಾಮ ಬೀರಿದೆ. ಗಾಯಕ್ವಾಡ್ರ ಗೈರು ತಂಡಕ್ಕೆ ದೊಡ್ಡ ಆಘಾತವಾಗಿದೆ. ಗಾಯಕ್ವಾಡ್ರ ಅನುಪಸ್ಥಿತಿಯಲ್ಲಿ ಸಿಎಸ್ಕೆ ಅನುಭವಿ ವಿಕೆಟ್ಕೀಪರ್-ಬ್ಯಾಟ್ಸ್ಮನ್…