ಬೆಂಗಳೂರು:- ಕಾಂಗ್ರೆಸ್ಸನ್ನು ಜನತೆ ಧಿಕ್ಕರಿಸಿದ್ದರಿಂದ ಅವರಿಗೆ ಈಗ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ನೆನಪಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. https://ainkannada.com/there-is-no-change-in-the-strike-shanmugappa/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತಕ್ಕೆ ಸಂವಿಧಾನ ಕೊಟ್ಟ ಅಂಬೇಡ್ಕರ್ರನ್ನು ಕಾಂಗ್ರೆಸ್ನವರು ಹೇಗೆ ನಡೆಸಿಕೊಂಡರು ಎಂಬ ಸತ್ಯ, ರಾಜ್ಯ ಮತ್ತು ದೇಶದ ಜನತೆಗೆ ಗೊತ್ತಾಗಬೇಕಿದೆ ಎಂದು ಹೇಳಿದರು. ಭಾರತದ ನಿಜವಾದ ರತ್ನವಾಗಿದ್ದ ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಡಲು ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದ ಬಿಜೆಪಿ ಬೆಂಬಲಿಸಿದ ವಿ.ಪಿ.ಸಿಂಗ್ ಅವರ ಸರ್ಕಾರವೇ ಬರಬೇಕಾಯಿತಲ್ಲವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ನವರು ಸ್ವಾತಂತ್ರ್ಯದ ನಂತರದಲ್ಲಿ 50-55 ವರ್ಷಗಳ ಕಾಲ ಸುದೀರ್ಘವಾಗಿ ಆಡಳಿತ ನಡೆಸಿದ್ದಾರೆ. 40-45 ವರ್ಷಗಳ ಕಾಲ ಸುದೀರ್ಘವಾಗಿ ಗಾಂಧಿ ಕುಟುಂಬವೇ ಈ ದೇಶದ ಆಡಳಿತದ ಚುಕ್ಕಾಣಿ ಹಿಡಿದಿದ್ದರೂ ಸಹ ಮಹಾನ್ ನಾಯಕ ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಡಲು ಕಾಂಗ್ರೆಸ್ನವರಿಗೆ ಆಗಲಿಲ್ಲ. ಗಾಂಧಿ ಕುಟುಂಬಕ್ಕೆ 3 ಭಾರತರತ್ನ ಸಿಗುತ್ತದೆ. ಆದರೆ ಸಂವಿಧಾನಶಿಲ್ಪಿ…
Author: AIN Author
ಬೆಂಗಳೂರು:- ಲಾರಿ ಮುಷ್ಕರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮನ್ನು ಇದುವರೆಗೂ ಯಾರು ಕರೆದು ಮಾತನಾಡಿಲ್ಲ. ಹಾಗಾಗಿ ನಾವು ಘೋಷಣೆ ಮಾಡಿದಂತೆ ಮುಷ್ಕರ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರೆ. ಹಲವು ಬಾರಿ ಸಿಎಂ ಸಿದ್ದರಾಮಯ್ಯನವರಿಗೆ ನಾವು ಪತ್ರ ಬರೆದಿದ್ದೆವು. ಸರ್ಕಾರ ಕರೆದರೆ ಮಾತುಕತೆಗೆ ನಾವು ಸಿದ್ಧವಾಗಿದ್ದೇವೆ. ಕೂಡಲೇ ಲಾರಿ ಮಾಲೀಕರ ಸಮಸ್ಯೆಗಳನ್ನು ಸರ್ಕಾರ ಪರಿಹರಿಸಬೇಕು ಎಂದು ಆಗ್ರಹಿಸಿದ್ದಾರೆ. ಕಳೆದ 6 ತಿಂಗಳಲ್ಲಿ ಡೀಸೆಲ್ ದರ 5 ರೂ. ಹೆಚ್ಚಳ ಮಾಡಿದ್ದಾರೆ. ಇದರಿಂದ ಲಾರಿ ಮಾಲೀಕರಿಗೆ ಕಷ್ಟ ಆಗುತ್ತೆ. ರಾಜ್ಯದಲ್ಲಿ ಮೊದಲು ಕಡಿಮೆ ದರ ಇದ್ದಿದ್ದರಿಂದ ಈ ಹಿಂದೆ ಬೇರೆ ರಾಜ್ಯದ ಲಾರಿ ಚಾಲಕರು ಕರ್ನಾಟಕಕ್ಕೆ ಬರುತ್ತಿದ್ದರು. ಸರ್ಕಾರ ಕೂಡಲೇ ಡೀಸೆಲ್ ದರ ಬಗ್ಗೆ ಮರು ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ. ಲಾರಿ ಮಾಲೀಕರು, ಟ್ರ್ಯಾಕ್ಟರ್ ಮಾಲೀಕರು, ರೈತರು ಪರದಾಡುತ್ತಿದ್ದಾರೆ. ಗಡಿ ಚೆಕ್ಪೋಸ್ಟ್ಗಳಲ್ಲಿ ಆರ್ಟಿಓ…
ವಯಸ್ಸಾದಂತೆ, ನಮ್ಮ ತ್ವಚೆ ಕಾಂತಿಯನ್ನು ಕಳೆದುಕೊಂಡ ಹಾಗೆ, ನಮ್ಮ ತಲೆ ಕೂದಲಿನ ಬಣ್ಣ ಕೂಡ ಅಷ್ಟೇ ವಯಸ್ಸಾ ಗುತ್ತಾ ಹೋದಂತೆ, ಕಪ್ಪು ಬಣ್ಣದಿಂದ ಬಿಳಿ ಬಣ್ಣಕ್ಕೆ ತಿರು ಗುತ್ತದೆ! ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರು, ಸಣ್ಣ ವಯಸ್ಸಿಗೆ ಕೂದಲು ಬೆಳ್ಳಗೆ ಆಗುವ ಸಮಸ್ಯೆಯನ್ನು ಎದುರಿಸುತ್ತಿ ದ್ದಾರೆ. https://ainkannada.com/rain-news-rain-in-bangalore-motorists/ ಇದಕ್ಕೆ ಪ್ರಮುಖ ಕಾರಣಗಳು ಕೂದಲಿಗೆ, ಕೆಮಿಕಲ್ ಅಂಶ ಹೆಚ್ಚಿರುವ ಹೇರ್ ಡೈ, ಶಾಂಪೂ, ಸೋಪ್, ಹಾಗೂ ನಾವು ಅನುಸರಿಸುತ್ತಿರುವ ಜೀವನಶೈಲಿ ಹಾಗೂ ಆಹಾರ ಪದ್ಧತಿಗಳಿಂದಲೂ ಕೂಡ ಇಂದಿನ ದಿನಗಳಲ್ಲಿ, ಹೆಚ್ಚಿನವರಿಗೆ ಸಣ್ಣ ವಯಸ್ಸಿಗೆ ಕೂದಲು ಬೆಳ್ಳಗೆ ಆಗುವ ಸಮಸ್ಯೆ ಎದುರಾಗುತ್ತಿದೆ. ಬನ್ನಿ ಈ ಲೇಖನದಲ್ಲಿ ಕೂದಲಿ ಬೆಳ್ಳಗಾಗುವ ಸಮಸ್ಯೆಗೆ ಸರಳ ಮನೆಮದ್ದುಗಳ ಬಗ್ಗೆ ನೋಡೋಣ.. ಪೇರಲ ಹಣ್ಣಿನ ಗಿಡದ ಎಲೆಗಳು ಕೂದಲಿಗೆ ಅತ್ಯುತ್ತಮವಾಗಿವೆ. ಪೇರಲ ಎಲೆಗಳು ಅನೇಕ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಇದರಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ ಇರುತ್ತದೆ. ಕೂದಲು ಮತ್ತು ಚರ್ಮಕ್ಕೆ ಪೇರಲ ಎಲೆ ಪ್ರಯೋಜನಕಾರಿ ಆಗಿದೆ. ಕೂದಲಿಗೆ ಪೇರಲ ಎಲೆಗಳನ್ನು…
ಬೆಂಗಳೂರು:- ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/sweet-news-to-csk-a-17-year-old-explosive-player-for-ruturaj-position/ ಮಧ್ಯಾಹ್ನದಿಂದ ನಗರದೆಲ್ಲೆಡೆ ಮೋಡ ಕವಿದ ವಾತಾವರಣವಿತ್ತು. ಇದೀಗ ನಗರದ ಹಲವೆಡೆ ಧಾರಾಕಾರ ಮಳೆ ಆಗಿದೆ. ವಿಧಾನಸೌಧ, ಕೆ.ಆರ್ ಸರ್ಕಲ್, ಕಾರ್ಪೊರೇಷನ್, ಶಾಂತಿ ನಗರ, ಮೆಜೆಸ್ಟಿಕ್, ಮೈಸೂರ್ ಬ್ಯಾಂಕ್, ಟೌನ್ಹಾಲ್, ರಿಚ್ಮಂಡ್ ಟೌನ್, ಜಯನಗರ ಸೇರಿದಂತೆ ಹಲವೆಡೆ ಮಳೆ ಆಗಿದೆ. ಡಾ.ಅಂಬೇಡ್ಕರ್ ಜಯಂತಿ ಹಿನ್ನೆಲೆ ವಿಧಾನಸೌಧದ ಬಳಿ ಹಾಕಲಾಗಿದ್ದ ಪೆಂಡಾಲ್ ಕೆಳಗೆ ಜನರು ಆಶ್ರಯ ಪಡೆದಿದ್ದಾರೆ. ಇನ್ನು ರಜೆ ಹಿನ್ನಲೆ ವಿಧಾನಸೌಧ, ಕಬ್ಬನ್ ಪಾರ್ಕ್ ನೋಡಲು ಬಂದಿದ್ದ ಸಾರ್ವಜನಿಕರು ಮಳೆಯಿಂದ ಪರದಾಡಿದರು. ಮಳೆಗಾಲ ಆರಂಭಕ್ಕೂ ಮುನ್ನವೇ ಮಳೆರಾಯನ ಆರ್ಭಟ ಶುರುವಾಗಿದೆ. ಕರ್ನಾಟಕದಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ಬೆಂಗಳೂರು ಸೇರಿದಂತೆ ಕೆಲವೆಡೆ ಮಳೆ ಸುರಿದಿದೆ. ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು
2025ರ ಆವೃತ್ತಿಯ ಐಪಿಎಲ್ ನ ಆರಂಭಿಕ ಪಂದ್ಯವನ್ನು ಗೆದ್ದ ನಂತರ ಸತತ ಐದು ಪಂದ್ಯಗಳಲ್ಲಿ ಸೋಲನುಭವಿಸಿರುವ ಚೆನ್ನೈಸೂಪರ್ ಕಿಂಗ್ಸ್ ತಂಡ ಸದ್ಯ ಅನಿಶ್ಚಿತತೆಯ ಸ್ಥಿತಿಯಲ್ಲಿದೆ. ಐದು ಬಾರಿಯ ಚಾಂಪಿಯನ್ ಸಿ ಎಸ್ ಕೆ ತಂಡವು ಐಪಿಎಲ್ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. https://ainkannada.com/mix-this-powder-in-the-morning-to-bring-to-sugar-control-see-then-see/ 2025ರ IPL ನಲ್ಲಿ CSK ಗೆ ಕಠಿಣವಾಗಿದೆ. ಐದು ಬಾರಿಯ ಚಾಂಪಿಯನ್ ತಂಡ ಸತತ 5 ಪಂದ್ಯಗಳಲ್ಲಿ ಸೋಲನ್ನು ಕಂಡಿದ್ದು, ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ರೀತಿ ಕಳಪೆ ಸಾಧನೆ ಮಾಡಿದೆ. ಈ ಬಾರಿ ತಂಡದ ಬ್ಯಾಟಿಂಗ್ ಸಮಸ್ಯೆಯಾಗಿದ್ದು, ಆರಂಭಿಕರಿಂದ ಸ್ಥಿರ ಪ್ರದರ್ಶನ ಬಂದಿಲ್ಲ. ಈ ಸೋಲಿನ ಸರಣಿಯು ತಂಡದ ಆತ್ಮವಿಶ್ವಾಸವನ್ನು ಕುಗ್ಗಿಸಿದೆ. ಸಿಎಸ್ಕೆಗೆ ಮತ್ತೊಂದು ಹಿನ್ನಡೆಯೆಂದರೆ ನಾಯಕ ರುತುರಾಜ್ ಗಾಯಕ್ವಾಡ್ರ ಗಾಯ. ಮೊಣಕೈ ಗಾಯದಿಂದಾಗಿ ಋತುರಾಜ್ ಋತುವಿನ ಮಧ್ಯದಿಂದಲೇ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇದರಿಂದ ತಂಡದ ತಂತ್ರಗಾರಿಕೆ ಮತ್ತು ನಾಯಕತ್ವದ ಮೇಲೆ ಪರಿಣಾಮ ಬೀರಿದೆ. ಗಾಯಕ್ವಾಡ್ರ ಗೈರು ತಂಡಕ್ಕೆ ದೊಡ್ಡ ಆಘಾತವಾಗಿದೆ. ಗಾಯಕ್ವಾಡ್ರ ಅನುಪಸ್ಥಿತಿಯಲ್ಲಿ ಸಿಎಸ್ಕೆ ಅನುಭವಿ ವಿಕೆಟ್ಕೀಪರ್-ಬ್ಯಾಟ್ಸ್ಮನ್…
ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆಯಿಂದ ಹಾರ್ಟ್ ಅಟ್ಯಾಕ್ ಸಂಭವ ಹೆಚ್ಚಾಗಿದೆ. ನಮ್ಮ ಜೀವನ ಶೈಲಿ ಇದಕ್ಕೆ ಪ್ರಮುಖವಾದ ಕಾರಣವಾಗಿದೆ. ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ಅದರಿಂದ ಹಲವು ಬಗೆಯ ಆರೋಗ್ಯ ಸಮಸ್ಯೆಗಳು ಕೂಡ ಶುರುವಾಗುತ್ತವೆ. ಆದರೆ ಸಕ್ಕರೆ ಕಾಯಿಲೆಯನ್ನು ಸರಿಯಾದ ರೀತಿಯಲ್ಲಿ ಹೇಗೆ ನಿಯಂತ್ರಣ ಮಾಡಿಕೊಳ್ಳುವುದು ಎನ್ನುವುದು ಹಲವರ ಗೊಂದಲ. ಇದಕ್ಕಾಗಿ ಬೇರೆ ಬೇರೆ ಡಯಟ್ ಪದ್ಧತಿಗಳನ್ನು ಅನುಸರಿಸುತ್ತಾರೆ. ಆದರೂ ಕೂಡ ಕೆಲವೊಮ್ಮೆ ಪ್ರಯೋಜನಕ್ಕೆ ಬರುವುದಿಲ್ಲ. ಆದರೆ ವೈದ್ಯರು ಹೇಳುವ ಹಾಗೆ ಬೆಳಗಿನ ಸಮಯದಲ್ಲಿ ಈ ಟಿಪ್ಸ್ ಯಾರು ಫಾಲೋ ಮಾಡುತ್ತಾರೆ ಅವರಿಗೆ ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆ ಹೆಚ್ಚಾಗುತ್ತದೆ ಮತ್ತು ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿ ಉಳಿಯುತ್ತದೆ ಎಂದು ತಿಳಿದು ಬಂದಿದೆ. ದೇಹವು ರಕ್ತದಲ್ಲಿನ ಸಕ್ಕರೆಯನ್ನು ಸಂಸ್ಕರಿಸಲು ಸಾಧ್ಯವಾಗದಿದ್ದಾಗ ಮಧುಮೇಹ ಉಂಟಾಗುತ್ತದೆ. ಈ ಕಾಯಿಲೆ ಇರುವವರು ತಮ್ಮ ಆಹಾರದ ಬಗ್ಗೆ ಜಾಗರೂಕರಾಗಿರಬೇಕು. ಮಧುಮೇಹ ಇರುವವರು ಯಾವುದೇ ಆಹಾರ ತಿನ್ನುವ ಮೊದಲೂ ಯೋಚನೆ ಮಾಡಬೇಕು.. ಅದರಂತೆ ದಿನದ ಬೇರೆ ಯಾವುದೇ ಸಮಯದಲ್ಲಿ ಮಾಡದ…
ಬೆಂಗಳೂರು:- ಬ್ಯಾಂಕ್ ಜನಾರ್ಧನ್ ವಿಧಿನಶರಾಗಿದ್ದು, ಗೆಳೆಯನ ನಿಧನಕ್ಕೆ ಜಗ್ಗೇಶ್ ಭಾವುಕರಾಗಿದ್ದಾರೆ. ಬ್ಯಾಂಕ್ ಜನಾರ್ಧನ್ ಸಾವಿನ ಸುದ್ದಿ ಕೇಳುತ್ತಿದ್ದಂತೆ ಕನ್ನಡ ಚಿತ್ರರಂಗವೇ ಶಾಕ್ಗೆ ಒಳಗಾಗಿದೆ. ಅದರಲ್ಲೂ ಬ್ಯಾಂಕ್ ಜನಾರ್ಧನ್ ನಿಧನದ ವಿಚಾರ ತಿಳಿಯುತ್ತಿದ್ದಂತೆ ನವರಸ ನಾಯಕ ಜಗ್ಗೇಶ್ ಅವರು ಟ್ವೀಟ್ ಮಾಡುವ ಮೂಲಕ ಕಂಬನಿ ಮಿಡಿದಿದ್ದಾರೆ. https://ainkannada.com/heavy-rains-in-many-parts-of-karnataka-yellow-alert-announced-for-these-districts/ ಆತ್ಮೀಯ ಗೆಳೆಯ ಜನಾರ್ಧನ್ ಹೋಗಿ ಬಾ. ನಾವಿಬ್ಬರು ಪಾತ್ರಕ್ಕಾಗಿ ಹಸಿದು ಅಲೆದು ಪಡೆದು ಗೆದ್ದವರು. ನಾನು ನಿನ್ನ ಚಿತ್ರದಲ್ಲಿ ಕರೆಯುತ್ತಿದ್ದ ಬಾಂಡ್ಲಿ ಫಾದರ್ ಪದ ನಿನ್ನ ಓಡನಾಟ ನೆನೆದು ಭಾವುಕನಾದೆ. ಆತ್ಮಕ್ಕೆ ಶಾಂತಿ ಅಂತ ಬರೆದುಕೊಂಡಿದ್ದಾರೆ. ಚಿತ್ರರಂಗಕ್ಕೆ ಪಾದಾರ್ಪನೆ ಮಾಡಿದ ಸಂದರ್ಭದಲ್ಲಿ ನಟ ಜಗ್ಗೇಶ್ ಜತೆ ಬ್ಯಾಂಕ್ ಜನಾರ್ಧನ್ ಹೆಚ್ಚು ಕಾಲ ಕಳೆದಿದ್ದರು. ಜಗ್ಗೇಶ್ ಬಹುತೇಕ ಚಿತ್ರಗಳಲ್ಲಿ ನಟಿಸಿರುವ ಬ್ಯಾಂಕ್ ಜನಾರ್ಧನ್ ನಟಿಸಿದ್ದಾರೆ. ಜಗ್ಗೇಶ್ಗೆ ತಂದೆಯಾಗಿ ನಟಿಸಿದ ಸಿನಿಮಾಗಳು ಬ್ಲಾಕ್ ಬಸ್ಟರ್ ಆಗಿದ್ದವು. ಸೂಪರ್ನನ್ ಮಗ, ತರ್ಲೆ ನನ್ ಮಗ ಚಿತ್ರದಲ್ಲಿ ತಂದೆಯಾಗಿ ನಟಸಿದ್ದರು.
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/accident-driver-loses-control-tractor-overturns-police-constable-dies/ ಮುಂದಿನ ವಾರ ರಾಜ್ಯದ ವಿವಿಧ ಭಾಗಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು,ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದ ಕರಾವಳಿ ಮಧ್ಯ ಭಾಗಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸಮುದ್ರ ಮಟ್ಟದಿಂದ 0.9ಕಿ.ಮೀ ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪ್ರಸರಣವಿದ್ದು, ಇದರ ಪರಿಣಾಮವಾಗಿ, ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ತುಮಕೂರು ಮತ್ತು ಕೋಲಾರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ವಾರ ಕರಾವಳಿ ಮತ್ತು ಉತ್ತರ ಒಳನಾಡಿನ ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, ಯಾದಗಿರಿ ಮತ್ತು ಬೀದರ್ನಲ್ಲಿ ಒಣ…
ಗದಗ:- ಗದಗ ತಾಲೂಕಿನ ಮಲ್ಲಸಮುದ್ರ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕರ್ತವ್ಯನಿರತ ಪೊಲೀಸ್ ಪೇದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜರುಗಿದೆ. https://ainkannada.com/case-of-touching-a-young-womans-breast-and-performing-a-perversion-finally-a-street-sex-offender-is-arrested/ T0 ವರ್ಷದ ಮಹೇಶ ಕರಿಯಣ್ಣವರ ಸ್ಥಳದಲ್ಲೇ ಸಾವನ್ನಪ್ಪಿದ ಪೊಲೀಸ್ ಪೇದೆ ಎಂದು ಗುರುತಿಸಲಾಗಿದೆ. ಗದಗ ನಗರದ ಹೊರವಲಯದ ಮಲ್ಲಸಮುದ್ರ ಸಮೀಪದ ಗುಡ್ಡದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್ ಚಲಾಯಿಸಲು ಹೋದ ಮಹೇಶ್ ಕರಿಯಣ್ಣವರ ಮೇಲೆ ಟ್ರ್ಯಾಕ್ಟರ್ ಇಂಜಿನ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಘಟನೆ ಬಳಿಕ ಗದಗ ಗ್ರಾಮಿಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಬೆಂಗಳೂರು:- ಯುವತಿಯ ಎದೆ ಮುಟ್ಟಿ ಯುವಕನೋರ್ವ ಇತ್ತೀಚೆಗೆ ವಿಕೃತಿ ಮೆರೆದಿದ್ದ. ಅಲ್ಲದೇ ದೂರು ದಾಖಲಾಗುತ್ತಿದ್ದಂತೆ ಎಸ್ಕೇಪ್ ಆಗಿದ್ದ. ಆದರೆ ಇದೀಗ ಬೀದಿ ಕಾಮುಕ ಕೊನೆಗೂ ಅರೆಸ್ಟ್ ಆಗಿದ್ದಾನೆ. https://ainkannada.com/girls-murder-case-in-hubballi-state-government-announces-rs-10-lakh-compensation-for-the-family-of-the-deceased-girl/ ಕೇರಳದಲ್ಲಿ ಕಾಮುಕ ಸೆರೆಸಿಕ್ಕಿದ್ದಾನೆ. ಒಟ್ಟು 10 ದಿನ, 700 ಸಿಸಿಟಿವಿ, ಹತ್ತಾರು ಪೊಲೀಸರು, ಆಪರೇಷನ್ ಬಳಿಕ ಆರೋಪಿ ಕಾರ್ಯಾಚರಣೆಯೇ ಬಲು ರೋಚಕ ಆಗಿತ್ತು. ಮಾರ್ಚ್ 3ರ ಮಧ್ಯರಾತ್ರಿ 1.50ರ ಸಮಯದಲ್ಲಿ ಸದ್ದುಗುಂಟೆ ಪಾಳ್ಯದಲ್ಲಿ ನಡೆದ ಈ ಭಯಾನಕ ಘಟನೆ ಬೆಂಗಳೂರನ್ನ ಬೆಚ್ಚಿಬೀಳಿಸಿತ್ತು. ಹೆಣ್ಮಕ್ಕಳಿಗೆ ಸಿಲಿಕಾನ್ ಸಿಟಿ ಸೇಫ್ ಅಲ್ವಾ ಅನ್ನೋ ಪ್ರಶ್ನೆ ಹುಟ್ಟು ಹಾಕಿತ್ತು. ಈ ಘಟನೆ ನಡೆದು ವಾರ ಕಳೆದ್ರೂ ಆರೋಪಿ ಸಂತೋಷ್ ಪತ್ತೆಯಾಗದಿರೋದು ಆಕ್ರೋಶಕ್ಕೂ ಕಾರಣವಾಗಿತ್ತು. ಆದ್ರೀಗ ಕೊನೆಗೂ ಕತ್ತಲ ಕಾಮುಕ ಲಾಕ್ ಆಗಿದ್ದಾನೆ ಸದ್ದುಗುಂಟೆ ಪಾಳ್ಯದಲ್ಲಿ ನಡೆದ ಕಾಮುಕನ ಕೃತ್ಯದ ಸಂಬಂಧ ಸ್ಥಳೀಯ ನಿವಾಸಿ ಲೋಕೇಶ್ ಗೌಡ ದೂರು ದಾಖಲಿಸಿದ್ರು. ಸಿಸಿಟಿವಿ ದೃಶ್ಯಾವಳಿ ಸಮೇತ ಪೊಲೀಸರಿಗೆ ಕಂಪ್ಲೆಂಟ್ ನೀಡಿದ್ರು. ತಕ್ಷಣ ಆರೋಪಿ ಪತ್ತೆಗಾಗಿ ಎರಡು ಪ್ರತ್ಯೇಕ ತಂಡ…