Author: AIN Author

ಬೆಂಗಳೂರು:- ಇತ್ತೀಚೆಗೆ ರಾಜ್ಯ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ಏರಿಕೆ ಜೊತೆಗೆ ಡೀಸೆಲ್ ದರವನ್ನು ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಇದರಿಂದ ಸಿಟ್ಟಿಗೆದ್ದಿರುವ ಲಾರಿ ಚಾಲಕರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. https://ainkannada.com/attention-government-employees-submission-of-asset-details-is-mandatory-every-year/ ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್‌ 14ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ರಾಜ್ಯಾದ್ಯಂತ 6 ಲಕ್ಷ ಲಾರಿಗಳ ಸಂಚಾರ ಬಂದ್‌ ಆಗಲಿದ್ದು, ರಾಜ್ಯಕ್ಕೆ ಬರುವ ಮತ್ತು ಹೊರರಾಜ್ಯಗಳಿಗೆ ತೆರಳುವ ಸರಕು ಸಾಗಣೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆಯಿದೆ. ಪ್ರಸ್ತುತ ಡಿಸೇಲ್ ದರ ಹೆಚ್ಚಳ, ರಾಜ್ಯ ಹೆದ್ದಾರಿಗಳಿಗೆ ಟೋಲ್ ಅಳವಡಿಕೆ ಹಣ ವಸೂಲಿ, ಆರ್‌ಟಿಓ ಬಾರ್ಡರ್ ಚೆಕ್ ಪೋಸ್ಟ್, FC ಶುಲ್ಕ ಹೆಚ್ಚಿಸಿರುವುದು, ಬೆಂಗಳೂರು ನಗರದಲ್ಲಿ ಸರಕು ಸಾಗಾಣಿಕೆ ವಾಹನಗಳಿಗೆ ನೋ ಎಂಟ್ರಿ, ಚಾಲಕರ ಮೇಲೆ ಹಲ್ಲೆ ಹೀಗೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆ‌ರ್.ಷಣ್ಮುಖಪ್ಪ ತಿಳಿಸಿದ್ದಾರೆ. ಆಲ್ ಇಂಡಿಯಾ ಮೋಟರ್ ಟ್ರಾನ್ಸ್…

Read More

ಬೆಂಗಳೂರು:- ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ಪ್ರತಿ ವರ್ಷ ಸರ್ಕಾರಿ ನೌಕರರು ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯವಾಗಿದೆ. https://ainkannada.com/veteran-sandalwood-actor-bank-janardhan-passes-away/ ಪ್ರತಿಯೊಬ್ಬ ಸರ್ಕಾರಿ ನೌಕರರು ಸರ್ಕಾರಿ ಸೇವೆಗೆ ಸೇರುವಾಗ ಹಾಗೂ ಪ್ರತಿ ವರ್ಷ ನೌಕರರ ಹಾಗೂ ಕುಟುಂಬದ ಆಸ್ತಿ ವಿವರ ಸಲ್ಲಿಸೋದು ಈಗಾಗಲೇ ಕಡ್ಡಾಯವಾಗಿದೆ. ಅದರಂತೆ ಲೋಕಾಯಕ್ತದವರು ಯಾವ ಅಧಿಕಾರಿಗಳ ಬಗ್ಗೆ ಆಸ್ತಿ ವಿವರ ಕೇಳುತ್ತಾರೋ ವಿಳಂಬವಿಲ್ಲದೇ ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸೂಚನೆಗಳನ್ನು ಪಾಲಿಸದಿದ್ದರೆ ಇಲಾಖಾ ಮುಖ್ಯಸ್ಥರು ಹಾಗೂ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತೆ ಅಂತಾ ಸರ್ಕಾರ ಎಚ್ಚರಿಕೆ ನೀಡಿದೆ ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಹೆಚ್ಚಾಗುತ್ತಿವೆ. ಎಲ್ಲಾ ನೌಕರರೂ ಚರಾಸ್ತಿ-ಸ್ಥಿರಾಸ್ತಿಗಳನ್ನು ವೆಬ್‌ಸೈಟ್‌ನಲ್ಲಿ ಘೋಷಿಸಬೇಕು ಎಂದು ಲೋಕಾಯುಕ್ತ ಹೇಳಿತ್ತು. ಆದರೆ, ಇದಕ್ಕೆ ಸರ್ಕಾರಿ ನೌಕರರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹೊತ್ತಲ್ಲಿ ಸರ್ಕಾರ ಜಾಣನಡೆ ಅನುಸರಿಸಿದೆ.

Read More

ಬೆಂಗಳೂರು:- ಸ್ಯಾಂಡಲ್​ವುಡ್​ನ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ. ಕನ್ನಡ ಚಿತ್ರರಂಗ ಕಂಡ ಅಪರೂಪದ ಕಲಾವಿದ, ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್ ತಮ್ಮ 76ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. https://ainkannada.com/these-are-the-symptoms-seen-in-the-final-stages-of-liver-cirrhosis/ ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ನಟ ಬ್ಯಾಂಕ್‌ ಜನಾರ್ಧನ್‌ ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಬ್ಯಾಂಕ್ ಜನಾರ್ಧನ್ ಪುತ್ರ ಗುರುಪ್ರಸಾದ್​ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Read More

ಸ್ನಾನ ಮಾಡುವಾಗ ಸೋಪು ಉಪಯೋಗಿಸದೇ ಇರುವವರೇ ಇಲ್ಲ ಎಂದು ಹೇಳಬಹುದು. ಅದರಲ್ಲೂ ಮಾಧ್ಯಮ ವರ್ಗದವರು ಒಮ್ಮೆ ಮಾರುಕಟ್ಟೆಗೆ ಹೋದರೆ ಯಾವುದರಲ್ಲಿ ಹೆಚ್ಚು ಆಫರ್ ಇರುತ್ತದೆಯೋ ಅದನ್ನು ಹುಡುಕಿ ತಿಂಗಳಿಗೆ ಬೇಕಾಗುವಷ್ಟು ಸಾಬೂನು ಖರೀದಿಸುತ್ತಾರೆ. https://ainkannada.com/these-are-the-symptoms-seen-in-the-final-stages-of-liver-cirrhosis/ ಏಕೆಂದರೆ ಒಂದು ಸೋಪ್ ಖಾಲಿಯಾದಾಗ ಇನ್ನೊಂದನ್ನು ತಕ್ಷಣವೇ ಬಳಸಬಹುದು. ಆದರೆ ಅನೇಕ ಮಂದಿ ತಮ್ಮ ಮನೆಯಲ್ಲಿ ಎಷ್ಟು ಸಾಬೂನುಗಳಿವೆ ಎಂಬುವುದರ ಬಗ್ಗೆ ಗಮನ ಹರಿಸಿರುವುದಿಲ್ಲ. ಇದರಿಂದ ಏಕಾಏಕಿ ಸೋಪು ಖಾಲಿಯಾದಾಗ ಮಾರುಕಟ್ಟೆಗೆ ಮತ್ತೆ ಹೋಗಬೇಕಾಗುತ್ತದೆ. ಇದರಿಂದ ಸಾಕಷ್ಟು ಹಣ ವ್ಯರ್ಥವಾಗುತ್ತದೆ. ಎಷ್ಟೋ ಹೆಣ್ಣು ಮಕ್ಕಳು, ಮಾರುಕಟ್ಟೆಗಳಲ್ಲಿ ಎಷ್ಟೇ ಬಗೆಯ ಸೋಪುಗಳಿದ್ದರೂ ಮೆಡಿಮಿಕ್ಸ್ ಬಿಟ್ಟು ಬೇರೆ ಬಳಕೆ ಮಾಡದವರಿದ್ದಾರೆ. ಅದರಲ್ಲಿಯೂ ಕೆಲವು ಹುಡುಗಿಯರಿಗೆ ಈ ಸೋಪ್ ಬಳಕೆ ಮಾಡುವುದು ಬಹಳ ಇಷ್ಟವಾಗುತ್ತದೆ ಹಾಗಾಗಿ ಇದನ್ನು ಅತಿ ಹೆಚ್ಚು ಹುಡುಗಿಯರು ದಿನನಿತ್ಯ ಬಳಸುತ್ತಾರೆ. ಆದರೆ ಈ ಮೆಡಿಮಿಕ್ಸ್ ಸೋಪ್ ಅನ್ನು ಹೆಣ್ಣು ಮಕ್ಕಳಿಗಾಗಿ ತಯಾರು ಮಾಡಿದ್ದಲ್ಲಾ ಎಂದರೆ ನಂಬುತ್ತೀರಾ? ಹೌದು ಕಣ್ರೀ. ಈ ಸೋಪ್ ಅನ್ನು ತಯಾರು ಮಾಡಿದ್ದೆ…

Read More

ಯಕೃತ್ತಿನ ಸಿರೋಸಿಸ್ ಎಂದರೆ ಶಾಶ್ವತವಾದ ಗಾಯವಾಗಿದ್ದು ಅದು ನಿಮ್ಮ ಯಕೃತ್ತನ್ನು ಹಾನಿಗೊಳಿಸುತ್ತದೆ ಮತ್ತು ಅದರ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುತ್ತದೆ. ಇದು ಯಕೃತ್ತಿನ ವೈಫಲ್ಯಕ್ಕೆ ಕಾರಣವಾಗಬಹುದು. ಸಿರೋಸಿಸ್ ಹಲವು ವರ್ಷಗಳಿಂದ ನಿರಂತರ ಯಕೃತ್ತಿನ ಹಾನಿಯ ಪರಿಣಾಮವಾಗಿದೆ. ಆಲ್ಕೋಹಾಲ್ ಮತ್ತು ಔಷಧಿಗಳು, ವೈರಸ್‌ಗಳು ಮತ್ತು ಚಯಾಪಚಯ ಅಂಶಗಳು ಸಾಮಾನ್ಯ ಕಾರಣಗಳಾಗಿವೆ. https://ainkannada.com/bangalore-dental-student-commits-suicide-by-hanging/ ಯಕೃತ್ತಿನ ಸಿರೋಸಿಸ್ ಒಂದು ಕೊನೆಯ ಹಂತದ ಯಕೃತ್ತಿನ ಕಾಯಿಲೆಯಾಗಿದ್ದು, ಇದರಲ್ಲಿ ಆರೋಗ್ಯಕರ ಯಕೃತ್ತಿನ ಅಂಗಾಂಶವನ್ನು ಕ್ರಮೇಣ ಗಾಯದ ಅಂಗಾಂಶದಿಂದ ಬದಲಾಯಿಸಲಾಗುತ್ತದೆ. ಇದು ದೀರ್ಘಕಾಲದ, ದೀರ್ಘಕಾಲದ ಹೆಪಟೈಟಿಸ್‌ನ ಪರಿಣಾಮವಾಗಿದೆ. ಹೆಪಟೈಟಿಸ್ ನಿಮ್ಮ ಯಕೃತ್ತಿನಲ್ಲಿ ಉರಿಯೂತವಾಗಿದೆ, ಇದಕ್ಕೆ ಹಲವು ಕಾರಣಗಳಿವೆ. ಉರಿಯೂತ ಮುಂದುವರಿದಾಗ, ನಿಮ್ಮ ಯಕೃತ್ತು ಗಾಯದ ಮೂಲಕ ತನ್ನನ್ನು ತಾನೇ ಸರಿಪಡಿಸಿಕೊಳ್ಳಲು ಪ್ರಯತ್ನಿಸುತ್ತದೆ. ಲಿವರ್‌ ಸಿರೋಸಿಸ್ ಕೊನೆಯ ಹಂತವನ್ನು ತಲುಪಿದಾಗ ಈ ಎಲ್ಲಾ ಲಕ್ಷಣಗಳು ಕಾಣಿಸಲಾರಂಭಿಸುತ್ತದೆ. ದೀರ್ಘಕಾಲದ ಯಕೃತ್ತಿನ ಕಾಯಿಲೆ ಅಥವಾ ತೀವ್ರ ಯಕೃತ್ತಿನ ವೈಫಲ್ಯದಿಂದಾಗಿ ನಿಮ್ಮ ಯಕೃತ್ತು ಸರಿಪಡಿಸಲಾಗದಷ್ಟು ಹಾನಿಗೊಳಗಾದಾಗ ಕೊನೆಯ ಹಂತದ ಯಕೃತ್ತಿನ ಕಾಯಿಲೆ ಉಂಟಾಗುತ್ತದೆ. ದೀರ್ಘಕಾಲದ ಯಕೃತ್ತಿನ ಕಾಯಿಲೆಗಳೊಂದಿಗೆ ಯಕೃತ್ತಿನ…

Read More

ಬೆಂಗಳೂರು:- ಡೆಂಟಲ್‌ ವಿದ್ಯಾರ್ಥಿನಿಯೊಬ್ಬರು ನೇಣಿಗೆ ಕೊರಳೊಡ್ಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. https://ainkannada.com/ipl-2025-mumbai-won-in-a-thrilling-match-delhis-first-defeat/ ರಾಜಾಜಿನಗರ ಖಾಸಗಿ ಕಾಲೇಜಿನಲ್ಲಿ ದ್ವೀತಿಯ ವರ್ಷದ ಡೆಂಟಲ್ ಓದುತ್ತಿದ್ದ ಸೌಮ್ಯ ಗಣೇಶ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ನಿನ್ನೆ ಸಂಜೆ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಶರಣಾಗಿದ್ದಾಳೆ. ಪರೀಕ್ಷೆ ಸಮಯದಲ್ಲಿ ಆತಂಕಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಕಳೆದ 15 ದಿನಗಳ ಹಿಂದೆ ಯುವತಿಗೆ ಪೋಷಕರು ಕೌನ್ಸೆಲಿಂಗ್ ಮಾಡಿಸಿದ್ದರು. ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.‌ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ:- ಡೆಲ್ಲಿ ವಿರುದ್ಧದ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದು ಬೀಗಿದೆ. ದೆಹಲಿ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 20 ಓವರ್‌ಗೆ 5 ವಿಕೆಟ್‌ ನಷ್ಟಕ್ಕೆ 205 ರನ್‌ ಗಳಿಸಿತು. 206 ರನ್‌ ಗುರಿ ಬೆನ್ನತ್ತಿದ ಡೆಲ್ಲಿ 19 ಓವರ್‌ಗೆ 193ಕ್ಕೆ ಆಲೌಟ್‌ ಆಗಿ ಮೊದಲ ಸೋಲೊಪ್ಪಿಕೊಂಡಿತು. https://ainkannada.com/this-pile-of-electrical-work-is-beyond-expectation-mondays-rashi-future-14-april-2025/ ಮುಂಬೈ ಪರ ತಿಲಕ್‌ ವರ್ಮಾ ಅರ್ಧಶತಕ ಗಳಿಸಿ (59 ರನ್‌, 33 ಬಾಲ್‌, 6 ಫೋರ್‌, 3 ಸಿಕ್ಸರ್)‌ ಗಮನ ಸೆಳೆದರು. ರಯಾನ್ ರಿಕೆಲ್ಟನ್ 41, ಸೂರ್ಯಕುಮಾರ್‌ ಯಾದವ್‌ 40, ನಮನ್ ಧೀರ್ 38 (ಔಟಾಗದೇ) ರನ್‌ ಗಳಿಸಿದರು. ರೋಹಿತ್‌ ಶರ್ಮಾ (18 ರನ್) ಎಂದಿನಂತೆ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು. ‌ಹಾರ್ದಿಕ್‌ ಪಾಂಡ್ಯ ಕೂಡ ಕೇವಲ 2 ರನ್‌ ಗಳಿಸಿ ಕೈಕೊಟ್ಟರು. ಅಂತಿಮವಾಗಿ ಮುಂಬೈ 5 ವಿಕೆಟ್‌ ಕಳೆದುಕೊಂಡು 205 ರನ್‌ ಗಳಿಸಿತು 206 ರನ್‌ ಗುರಿ ಬೆನ್ನತ್ತಿದ ಡೆಲ್ಲಿಗೆ ಆರಂಭಿಕ ಆಘಾತ ಎದುರಾಯಿತು. ಮೊದಲ ಎಸೆತಕ್ಕೆ ಜೇಕ್ ಫ್ರೇಸರ್-ಮೆಕ್‌ಗುರ್ಕ್…

Read More

ಸೂರ್ಯೋದಯ – 6:04 ಬೆ ಸೂರ್ಯಾಸ್ತ – 6:28 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ಪಾಡ್ಯ ನಕ್ಷತ್ರ – ಸ್ವಾತಿ ಯೋಗ – ವಜ್ರ ಕರಣ – ಕೌಲವ ರಾಹು ಕಾಲ – 07:30 ದಿಂದ 09:00 ವರೆಗೆ ಯಮಗಂಡ – 10:30 ದಿಂದ 12:00 ವರೆಗೆ ಗುಳಿಕ ಕಾಲ – 01:30 ದಿಂದ 03:00 ವರೆಗೆ ಬ್ರಹ್ಮ ಮುಹೂರ್ತ – 4:28 ಬೆ. ದಿಂದ 5:16 ಬೆ.ವರೆಗೆ ಅಮೃತ ಕಾಲ – 2:27 ಮ.ದಿಂದ 4:16 ಸಂಜೆ ವರೆಗೆ ಅಭಿಜಿತ್ ಮುಹುರ್ತ – 11:51ಬೆ. ದಿಂದ 12:41 ಮ.ವರೆಗೆ ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.…

Read More

ಹುಬ್ಬಳ್ಳಿ:- ರಾಜ್ಯ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ರಾಜೀನಾಮೆ ನೀಡುವ ಮಾತುಗಳನ್ನಾಡಿದ್ದಾರೆ. ಬಿಜೆಪಿ ತಮ್ಮ ಅವಧಿಯಲ್ಲಿ ಒಂದೇ ಒಂದು ಮನೆ ನೀಡಿರುವುದು ಸಾಬೀತು ಮಾಡಿದ್ರೆ, ನಾನು ನಾಳೆಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವರು ಸವಾಲ್ ಹಾಕಿದ್ದಾರೆ. https://ainkannada.com/5-year-old-girl-murder-case-what-did-minister-prahlad-joshi-say/ ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಮನೆಗಳನ್ನು ಮಂಜೂರು ಮಾಡಲಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರ ಮತ್ತು ಬಿಜೆಪಿ ಸರ್ಕಾರದಲ್ಲಿ ಮನೆಗಳ ಯಾವುದೇ ಅಭಿವೃದ್ಧಿ ಆಗಿಲ್ಲ. ಬಿಜೆಪಿ ಸರ್ಕಾರ ತಮ್ಮ ಅವಧಿಯಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ಈ ಹಿಂದೆ ನಾವೇ ಮಂಜೂರು ಮಾಡಿರುವ ಮನೆ ನಿರ್ಮಾಣ ಮಾಡಲು 8 ವರ್ಷ ಬೇಕಾಯಿತು ಎಂದು ಕಿಡಿಕಾರಿದರು. ಮುಂದಿನ ತಿಂಗಳು ರಾಜ್ಯ ವ್ಯಾಪ್ತಿಯಲ್ಲಿ ಒಟ್ಟು 42 ಸಾವಿರ ಮನೆಗಳನ್ನು ನೀಡುತ್ತಿದ್ದೇವೆ. ಹುಬ್ಬಳ್ಳಿ ಒಂದಕ್ಕೆ ಒಂದು ಸಾವಿರಕ್ಕೂ ಅಧಿಕ ಮನೆ ನೀಡುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ…

Read More

ಹುಬ್ಬಳ್ಳಿ:- 5 ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/5-year-old-girl-murder-case-police-shot-dead/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವರ್ಷದ ಬಾಲಕಿ ಮೇಲೆ ಆತ್ಯಾಚಾರಕ್ಕೆ ಯತ್ನಿಸಿ, ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲೆ ಕಟ್ಟಿನಿಟ್ಟಿನ ಕ್ರಮ ಆಗಬೇಕು ಎಂದಿದ್ದಾರೆ. ಈ ಘಟನೆ ಈಗಷ್ಟೇ ನನ್ನ ಗಮನಕ್ಕೆ ಬಂದಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇದರಲ್ಲಿ ನಾನು ರಾಜಕೀಯ ಮಾತನಾಡುವುದಿಲ್ಲ. ಆದರೆ, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಆಗಬೇಕು. ಎಲ್ಲ ರೀತಿಯ ಮುಂಜಾಗ್ರತೆ ತೆಗೆದುಕೊಳ್ಳಬೇಕು. ಪೊಲೀಸರು ಕೂಡಲೇ ಕಾರ್ಯ ಪ್ರವೃತ್ತರಾಗಬೇಕು. ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು. ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬಿಹಾರ್ ಮೂಲದ ಸೈಕೋಪಾತ್ ಈ ಕೃತ್ಯ ಎಸಗಿದ್ದಾನೆ. ಘಟನೆಯನ್ನು ತೀವ್ರವಾಗಿ ಖಂಡಿಸಿದ ಸ್ಥಳೀಯರು ಪೊಲೀಸ್ ಠಾಣೆ ಎದುರು ಜಮಾಯಿಸಿ ಆಕ್ರೋಶ ಹೊರಹಾಕಿದರು.

Read More