ಹುಬ್ಬಳ್ಳಿ: ಇಲ್ಲಿ ನಡೆದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಪ್ರಕರಣದ ಆರೋಪಿಯು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. https://ainkannada.com/no-one-opposes-the-caste-census-report-h-c-mahadevappa/ ಹುಬ್ಬಳ್ಳಿ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರಿ ಮೂಲದ ವ್ಯಕ್ತಿಯೊಬ್ಬ ಅಪಹರಣ ಮಾಡಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇನ್ನೂ ಈ ಘಟನೆ ಖಂಡಿಸಿ ಜನ ಆರೋಪಿಯನ್ನು ಹಿಡಿದು ನಮ್ಮ ಕೈಗೆ ಕೊಡಿ ನಾವು ನೋಡಿಕೊಳ್ಳುತ್ತೇವೆ ಎಂದು ಪೊಲೀಸ್ ಠಾಣೆ ಎದುರು ಇಂದು ಬೆಳಿಗ್ಗೆಯಿಂದಲೇ ಹೋರಾಟ ನಡೆಯುತ್ತಲೇ ಇತ್ತು. ಇತ್ತ ಪೊಲೀಸರು ಆರೋಪಿಯನ್ನು ಹಿಡಿಯಲು ಮುಂದಾಗಿದ್ರು ಈ ವೇಳೆ ಆರೋಪಿ ತಪ್ಪಿಕೊಳ್ಳಲು ಪ್ರಯತ್ನಿಸಿದಾಗ ಪೊಲೀಸರ ಗುಂಡೇಟಿಗೆ ಸಾವನ್ನಪ್ಪಿದ್ದಾನೆ. ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಬೆಳಗ್ಗೆ ಹುಬ್ಬಳ್ಳಿ ಅಶೋಕ ನಗರ ವಿಜಯನಗರ ಬಳಿ ಮಗು ಮಿಸ್ ಆಗಿದೆ ಎಂದು ಮಾಹಿತಿ ಇತ್ತು. ಪ್ರಕರಣದ ಆರೋಪಿ ಬಿಹಾರ ಮೂಲದ ಪಾಟ್ನಾದವನು. ಹುಬ್ಬಳ್ಳಿ ತಾರಿಹಾಳರ…
Author: AIN Author
ಬೆಂಗಳೂರು:- ಜಾತಿಗಣತಿ ವರದಿ ಯಾರ ವಿರೋಧವೂ ಇಲ್ಲ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ. https://ainkannada.com/the-notice-of-diabetics-eat-it-on-an-empty-stomach-in-the-morning/ ಈ ಸಂಬಂಧ ಮಾತನಾಡಿದ ಅವರು, ಜಾತಿಗಣತಿ ವರದಿ ಯಾರ ಪರವಾಗಿಯೂ ಇಲ್ಲ. ವಿರೋಧವೂ ಇಲ್ಲ. ಸಂವಿಧಾನದ ಆಶಯದ ಪ್ರಕಾರ ಎಲ್ಲರಿಗೂ ಸಮಾನ ಅವಕಾಶ ದೊರೆಯಬೇಕು. ಏ.17 ರಂದು ಮತ್ತೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು. ಸಾಮಾಜಿಕ ಶೈಕ್ಷಣಿಕ ಆರ್ಥಿಕ ಗಣತಿ ವರದಿ ಇದು. ಸಿಎಂ ಸಿದ್ದರಾಮಯ್ಯ ಅವರು ಸಮಿತಿ ರಚನೆ ಮಾಡಿದ್ದರು. ಸುಮಾರು 200 ಕೋಟಿ ರೂ. ಕೊಟ್ಟು ವರದಿ ಮಾಡಿಸಿದ್ದರು. ಪ್ರಣಾಳಿಕೆಯಲ್ಲೂ ಜಾತಿಗಣತಿಗೆ ಪಕ್ಷ ಬದ್ಧವಾಗಿತ್ತು. ಭಾರತ ದೇಶದಲ್ಲಿ ಜಾತಿಗಣತಿ ಮಾಡಲು ಕೆಲ ಪ್ರಯತ್ನ ಆಗಿತ್ತು. ಎಲ್ಲವನ್ನೂ ಕೂಲಂಕಶವಾಗಿ ಪರಿಗಣಿಸಿ ವರದಿ ಮಾಡಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡರು. ಸ್ವಾತಂತ್ರ್ಯ ಬಂದಾಗ 35 ಕೋಟಿ ಜನಸಂಖ್ಯೆ ಇತ್ತು. ಈಗ 140 ಕೋಟಿ ಜನಸಂಖ್ಯೆ ಆಗಿದೆ. ಅದರ ಆಧಾರದ ಮೇಲೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಯೋಜನೆಗಳನ್ನ ನೀಡಬೇಕು. ಯಾವ ಯಾವ ಸಮಾಜಕ್ಕೆ ಏನು ಸಿಗಬೇಕು…
ಮಧುಮೇಹದ ಬಗ್ಗೆ ಬೇಗನೆ ಎಚ್ಚೆತ್ತುಕೊಳ್ಳದಿದ್ದರೆ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮಧುಮೇಹವನ್ನು ಸಾಮಾನ್ಯವಾಗಿ ಮೂಕ ಕೊಲೆಗಾರ ಎಂದು ಕರೆಯಲಾಗುತ್ತದೆ. ದೇಹದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದಾಗ ಮತ್ತು ಇನ್ಸುಲಿನ್ ಕೊರತೆಯಾದಾಗ ಮಧುಮೇಹ ಬರುತ್ತದೆ. ಆದ್ದರಿಂದ ಮಧುಮೇಹವನ್ನು ಅತ್ಯಂತ ಅಪಾಯಕಾರಿ ಕಾಯಿಲೆ ಎಂದು ಪರಿಗಣಿಸಲಾಗುತ್ತದೆ. https://ainkannada.com/it-is-a-rare-leaf-that-controls-sugar-complete-see-once-in-the-backyard/ ನೇರಳೆ ಮರದ ಹಣ್ಣುಗಳು ಫಲ ನೀಡಲು ಪ್ರಾರಂಭಿಸುತ್ತವೆ, ಇವು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರ ಸಿಹಿ-ಹುಳಿ ರುಚಿಕರವಾಗಿರುವುದಲ್ಲದೆ, ಕಡಿಮೆ ಕ್ಯಾಲೋರಿ ಅಂಶದಿಂದಾಗಿ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ. ಅಲ್ಲದೆ, ಇದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ನೇರಳೆ ಹಣ್ಣಿನ ಹಣ್ಣುಗಳು, ಬೀಜಗಳು ಮತ್ತು ಸಿಪ್ಪೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆಯುರ್ವೇದದ ಪ್ರಕಾರ, ಈ ಸಸ್ಯವು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಮತ್ತು ಉತ್ತಮ ಪ್ರಮಾಣದ ಇನ್ಸುಲಿನ್ ಅನ್ನು ಹೊಂದಿರುತ್ತದೆ, ಇದು ಮಧುಮೇಹ ರೋಗಿಗಳಿಗೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಜಾಮುನ್ ನಿಯಮಿತ ಸೇವನೆಯು ಮಧುಮೇಹ, ಚರ್ಮದ ಸಮಸ್ಯೆಗಳು, ರಕ್ತಹೀನತೆ, ತೂಕ ನಿಯಂತ್ರಣ, ಹಲ್ಲು ಮತ್ತು ಒಸಡುಗಳನ್ನು ಬಲಪಡಿಸುವುದು ಮತ್ತು…
ಪರಂಗಿ ಮರ ಮನೆಯ ಬಳಿ ಇದ್ದರೆ ನಾವು ಹಲವು ಲಾಭಗಳನ್ನು ಇದರಿಂದ ಪಡೆದುಕೊಳ್ಳಬಹುದು. ಏಕೆಂದರೆ ಪರಂಗಿ ಮರ ಮತ್ತು ಅದರ ಎಲ್ಲಾ ಭಾಗಗಳು ಒಂದಲ್ಲ ಒಂದು ರೀತಿಯಲ್ಲಿ ಉಪಯೋಗಕ್ಕೆ ಬರುತ್ತವೆ. ಪರಂಗಿ ಕಾಯಿಯಿಂದ ಹಿಡಿದು ಅದರ ಹಣ್ಣು, ಎಲೆಗಳು, ಕಾಂಡ ಇತ್ಯಾದಿಗಳಿಂದ ಸಿಗುವ ಲಾಭಗಳು ಒಂದೆರಡಲ್ಲ. ಈ ಲೇಖನದಲ್ಲಿ ಪರಂಗಿ ಎಲೆಗಳಿಂದ ನಮಗೆ ಯಾವ ರೀತಿ ಅನುಕೂಲವಿದೆ ಎಂಬುದನ್ನು ತಿಳಿದುಕೊಳ್ಳೋಣ. https://ainkannada.com/attempted-rape-and-murder-case-of-a-girl-accused-shot-in-the-leg-by-police/ ಹೆಚ್ಚುತ್ತಿರುವ ಮಾರಕ ಕಾಯಿಲೆಗಳನ್ನು ಕಡಿಮೆ ಮಾಡಿ ದೇಹವನ್ನು ರಕ್ಷಿಸಿಕೊಳ್ಳಲು ಈ ಪಪ್ಪಾಯಿ ಎಲೆಯ ರಸವನ್ನು ದಿನಕ್ಕೆ ಒಂದು ಚಮಚದಷ್ಟು ಸೇವಿಸುವುದು ಉತ್ತಮ.. ಏಕೆಂದರೇ ಇದರಿಂದ ಯಾವುದೇ ಆರೋಗ್ಯ ಸಮಸ್ಯೆಗಳು ಬಾಧಿಸುವುದಿಲ್ಲ ಎಂದು ಹೇಳಲಾಗುತ್ತದೆ. ಪಪ್ಪಾಯಿ ಎಲೆಯ ಪ್ರಯೋಜನಗಳನ್ನು ಇಲ್ಲಿ ತಿಳಿಯೋಣ. ಪಪ್ಪಾಯಿ ಎಲೆಗಳ ರಸವನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಪಪ್ಪಾಯಿ ಜ್ಯೂಸ್ ಕುಡಿಯುವುದರಿಂದ ಜ್ವರ ಬರುವುದಿಲ್ಲ. ಈ ಎಲೆಯ ರಸದಲ್ಲಿ ವಿಟಮಿನ್ ಎ, ಇ, ಸಿ, ಕೆ ಮತ್ತು ಬಿ ಸಮೃದ್ಧವಾಗಿದೆ.…
ಬೆಳಗಾವಿ:- 4 ತಿಂಗಳಿಂದ ಸಂಬಳ ಸಿಗದಿದ್ದಕ್ಕೆ ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. 25 ವರ್ಷದ ಓಂಕಾರ ಪವಾರ್ ಮೃತ ದುರ್ದೈವಿ. https://ainkannada.com/attempted-rape-and-murder-case-of-a-girl-accused-shot-in-the-leg-by-police/ ಮೃತ ಓಂಕಾರ ಪವಾರ್ ಅವರು ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್ನ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಕಳೆದ ನಾಲ್ಕು ತಿಂಗಳ ಸಂಬಳ ನೀಡಿದೇ ಆಸ್ಪತ್ರೆಯವರು ಸತಾಯಿಸುತ್ತಿದ್ದರು. ಸಂಬಳಕ್ಕಾಗಿ ಮನವಿ ಮಾಡಿದ್ರೂ ಸ್ಪಂದಿಸದ ಹಿನ್ನೆಲೆಯಲ್ಲಿ ನೊಂದ ಓಂಕಾರ ಪವಾರ್ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಡೆತ್ ನೋಟ್ ಬರೆದಿಟ್ಟು, ಶಹಾಪುರದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು, ಸೇಂಟ್ರಾ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕುಟುಂಬಸ್ಥರು ಮತ್ತು ಡ್ರೈವರ್ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ. ಹೌದು, 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. https://ainkannada.com/salt-kohlis-bombshell-batting-rcb-wins-by-9-wickets-against-rr/ ಆರೋಪಿಯು, ಬಾಲಕಿಯನ್ನ ಶೆಡ್ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್ನತ್ತ ಧಾವಿಸಿದ್ದರು. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದ. ಇದೀಗ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ಆತನ ಕಾಲಿಗೆ ಗುಂಡೇಟು ನೀಡಿ, ಬಂಧಿಸಿದ್ದಾರೆ
ಸಾಲ್ಟ್, ಕೊಹ್ಲಿ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ RR ವಿರುದ್ಧ ಆರ್ಸಿಬಿಗೆ 9 ವಿಕೆಟ್ಗಳ ಭರ್ಜರಿ ಜಯ ಸಿಕ್ಕಿದೆ. ತವರಿನ ಅಂಗಳದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 9 ವಿಕೆಟ್ಗಳಿಂದ ಬಗ್ಗು ಬಡಿದಿದೆ. https://ainkannada.com/eight-deaths-in-fireworks-factory/ ಆರ್ಸಿಬಿ ನಾಯಕ ರಜತ್ ಪಾಟಿದಾರ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿ, ರಾಜಸ್ಥಾನ್ ರಾಯಲ್ಸ್ ಆಟಗಾರರನ್ನು ಬ್ಯಾಟಿಂಗ್ ಮಾಡಲು ಆಹ್ವಾನ ಮಾಡಿದರು. ಆರ್ಆರ್ ಪರ ಆರಂಭಿಕರಾಗಿ ಕ್ರೀಸ್ಗೆ ಆಗಮಿಸಿದ ಕ್ಯಾಪ್ಟನ್ ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಪಡೆಯಲಿಲ್ಲ. ನಾಯಕ ಸಂಜು 15 ರನ್ಗೆ ವಿಕೆಟ್ ಒಪ್ಪಿಸಿದರು. ಆದರೆ ಓಪನರ್ ಯಶಸ್ವಿ ಜೈಸ್ವಾಲ್ ಅಮೋಘವಾದ ಅರ್ಧಶತಕ ಸಿಡಿಸಿದರು. ಕೇವಲ 35 ಎಸೆತದಲ್ಲಿ 1 ಸಿಕ್ಸರ್ ಹಾಗೂ 7 ಭರ್ಜರಿ ಬೌಂಡರಿ ಇಂದ ಹಾಫ್ಸೆಂಚುರಿ ಗಳಿಸಿದರು. ಒಟ್ಟು 47 ಎಸೆತಗಳಲ್ಲಿ ಜೈಸ್ವಾಲ್ 10 ಫೋರ್, 2 ಸಿಕ್ಸರ್ನಿಂದ 75 ರನ್ಗೆ ಎಲ್ಬಿಗೆ ಬಲಿಯಾದರು. ಹೆಟ್ಮರ್ 9, ಧೃವ್ ಜುರೆಲ್…
ಅಮರಾವತಿ:- ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಜರುಗಿದೆ. https://ainkannada.com/attempted-rape-and-murder-of-a-girl-parents-and-villagers-protest-in-hubballi/ ಇನ್ನೂ ಅವಘಡದಲ್ಲಿ 8 ಮಂದಿ ಸಾವನ್ನಪ್ಪಿದರೆ, 7 ಜನರು ಗಾಯಗೊಂಡಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಬೆಂಕಿ ಅವಘಡದ ನಿಖರ ಕಾರಣ ತಿಳಿದು ಬಂದಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಹುಬ್ಬಳ್ಳಿ:- ಬಾಲಕಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಹಿನ್ನಲೆ ಸಾರ್ವಜನಿಕರು ಹಾಗೂ ಪಾಲಕರ ಆಕ್ರೋಶ ಭುಗಿಲೆದ್ದಿರುವ ಘಟನೆ ಹುಬ್ಬಳ್ಳಿಯಲ್ಲಿ ಜರುಗಿದೆ. https://ainkannada.com/all-the-allegations-made-by-the-president-of-the-contractors-association-are-false-ravi-bosaraju/ ಹುಬ್ಬಳ್ಳಿನಗರದ ಮೂರು ಕಡೆಗಳಲ್ಲಿ ಪ್ರತಿಭಟನೆ ನಡೆದಿದ್ದು, ಆರೋಪಿಗೆ ತಕ್ಕ ಶಿಕ್ಷೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗಿದೆ. ಹುಬ್ಬಳ್ಳಿ ಕೆಎಂಸಿಆರ್ ಐ ಆಸ್ಪತ್ರೆಯ ಶವಾಗಾರ ಮುಂದೆ ದಲಿತ ಸಂಘಟನೆಗಳಿಂದ ಆಕ್ರೋಶ ಹೊರ ಹಾಕಿದ್ದಾರೆ. ವಿದ್ಯಾನಗರದ ಕಿಮ್ಸ್ ಆಸ್ಪತ್ರೆ ಮುಂದೆ ವಿವಿಧ ಕನ್ನಡ ಪರ ಸಂಘಟನೆಗಳಿಂದ ಆಕ್ರೋಶ ಭುಗಿಲೆದ್ದಿದೆ. ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಚೆನ್ನಮ್ಮ ಸರ್ಕಲ್ ಬಳಿ ಆಕ್ರೋಶ ಹೊರ ಹಾಕಿದ್ದಾರೆ. ಹುಬ್ಬಳ್ಳಿ ಧಾರವಾಡ ರಾಜ್ಯ ಹೆದ್ದಾರಿ ತಡೆದು ಕಿಡಿಕಾರಿದ್ದಾರೆ. ಬೆಳಿಗ್ಗೆಯೇ ಬಾಲಕಿ ಕೊಲೆ ಆಗಿದೆ. ಸಂಜೆ ಆದರೂ ಶವ ಹಸ್ತಾಂತರ ಮಾಡಿಲ್ಲ. ಪ್ರಕರಣ ಕುರಿತು ಏನು ಆಯಿತು ಅಂತಾ ಮಾಹಿತಿ ಕೊಟ್ಟಿಲ್ಲ ಎಂದು ಪಾಲಕರು ಆಕ್ರೋಶ ಹೊರಹಾಕಿದ್ದಾರೆ.
ರಾಯಚೂರು:- ನಮ್ಮ ಮೇಲೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮಾಡಿರುವ ಆರೋಪಗಳೆಲ್ಲಾ ಸುಳ್ಳು ಎಂದು ರವಿ ಬೋಸರಾಜು ಹೇಳಿದ್ದಾರೆ. https://ainkannada.com/do-you-use-more-mustard-in-cooking-so-you-should-know-its-benefit/ ನಗರದಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರ ಬಿಲ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರ ಪುತ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಹಾಗೂ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗುತ್ತಿಲ್ಲ ಎಂಬ ಎರಡೂ ಆರೋಪಗಳು ನಿರಾಧಾರ ಎಂದರು. ನಮ್ಮ ಮನೆಗೆ ಬಂದು ನೂರಾರು ಜನ ಅಹವಾಲುಗಳನ್ನು ಕೊಡುತ್ತಿರುತ್ತಾರೆ. ಸಚಿವರು ಸಿಗುತ್ತಿಲ್ಲ, ನೀವು ಸಹಾಯ ಮಾಡಬೇಕು ಎಂದು ಅರ್ಜಿ ಕೊಡುತ್ತಾರೆ. ಆ ಅರ್ಜಿಗಳನ್ನು ಯಾವ ಕಚೇರಿಗೆ ಕಳುಹಿಸಬೇಕು? ಆ ಕಚೇರಿಗಳಿಗೆ ಕಳುಹಿಸುತ್ತೇವೆ. ಇದನ್ನು ಹಸ್ತಕ್ಷೇಪ ಎನ್ನುವುದಾದರೆ ಹೌದು, ಹಸ್ತಕ್ಷೇಪ ಮಾಡುತ್ತಿದ್ದೇನೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ ನನ್ನ ಮೇಲೆ ಮಾಡಿರುವ ಆರೋಪಗಳು ಸುಳ್ಳು, ಹಸ್ತಕ್ಷೇಪ ಅಂದರೆ ಏನು? ಎಂದು ಪ್ರಶ್ನಿಸಿದರು. 1,800 ಕೋಟಿ ರೂ. ಇರುವ ಖಾತೆಯಲ್ಲಿ 14 ಸಾವಿರ ಕೋಟಿ ರೂ. ಮಾಡಿರುವ ಬಿಜೆಪಿ ಸರ್ಕಾರದಲ್ಲಿ ಅನುದಾನವಿಲ್ಲದೆ ಹೋದಾಗ ಪರದಾಡುತ್ತಿರುವ ಗುತ್ತಿಗೆದಾರರು ಮನೆಗೆ ಬರುವ ಪರಿಸ್ಥಿತಿ…