ಬೆಂಗಳೂರು:- ಭಾರೀ ಅಗ್ನಿ ಅವಘಡದಿಂದ ಬೆಂಗಳೂರಲ್ಲಿ 40ಕ್ಕೂ ಹೆಚ್ಚು ಶೆಡ್ಗಳು ಬೆಂಕಿಗೆ ಆಹುತಿ ಆಗಿರುವ ಘಟನೆ ವೀರನಪಾಳ್ಯದಲ್ಲಿ ಜರುಗಿದೆ. ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಕೂಲಿ ಕಾರ್ಮಿಕರು ವಾಸವಿದ್ದ 40ಕ್ಕೂ ಹೆಚ್ಚು ಶೆಡ್ಗಳು ಬೆಂಕಿಗೆ ಆಹುತಿಯಾಗಿದೆ. https://ainkannada.com/heavy-rains-in-bangalore-today-alert-declaration-to-these-districts-of-karnataka/ ಇಲ್ಲಿನ ವೀರನಪಾಳ್ಯ ಮುಖ್ಯ ರಸ್ತೆಯ ಖಾಸಗಿ ಶಾಲೆ ಪಕ್ಕದಲ್ಲಿ ಕೂಲಿ ಕಾರ್ಮಿಕರು ಸುಮಾರು 50 ಶೆಡ್ ನಿರ್ಮಿಸಿಕೊಂಡಿದ್ದರು. ಮೊದಲಿಗೆ ಒಂದು ಶೆಡ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಬೇರೆ ಶೆಡ್ಗಳಿಗೂ ಬೆಂಕಿ ತಗುಲಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಜನ ಹೊರಗೆ ಓಡಿ ಹೋಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Author: AIN Author
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಆಗುತ್ತಿದ್ದು, ಇಂದು ಕೂಡ ಧಾರಕಾರ ಮಳೆ ಆಗುವ ಸಾಧ್ಯತೆ ಇದೆ. https://ainkannada.com/siddaramaiah-drives-to-historic-bangalore-meltdown/ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ. ಎಚ್ಎಎಲ್ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 34.8 ಡಿಗ್ರಿ ಸೆಲ್ಸಿಯಸ್…
ಬೆಂಗಳೂರು:- ಚೈತ್ರಮಾಸದ ಶುದ್ಧ ಪೂರ್ಣಿಮೆಯಂದು ನಡೆಯುವ ಐತಿಹಾಸಿಕ ಬೆಂಗಳೂರು ಕರಗ ಸಂಭ್ರಮ, ಸಡಗರದಿಂದ ನೆರವೇರಿದೆ. ಅದ್ಧೂರಿ ಕರಗ ಮಹೋತ್ಸವಕ್ಕೆ ಲಕ್ಷಾಂತರ ಭಕ್ತಗಣ ಸಾಕ್ಷಿಯಾಯ್ತು. https://ainkannada.com/bjp-has-no-morality-to-question-our-government-chief-minister-siddaramaiah/ ಬರೋಬ್ಬರಿ 800 ವರ್ಷಗಳ ಇತಿಹಾಸ ಹೊಂದಿರುವ ಕರಗ ನೋಡುಗರ ಕಣ್ಮನ ಸೆಳೆದಿದೆ. ಆದಿಶಕ್ತಿ ಸ್ವರೂಪಿಣಿ ದ್ರೌಪದಮ್ಮ-ಧರ್ಮರಾಯಸ್ವಾಮಿ ಕರಗ ಶಕ್ತ್ಯೋತ್ಸವ. ಚೈತ್ರ ಹುಣ್ಣಿಮೆಯ ಬೆಳಕು. ಮಲ್ಲಿಗೆ ಹೂವಿನ ಕಂಪು. ಬಣ್ಣ ಬಣ್ಣದ ಹೂವುಗಳಿಂದ ಧರ್ಮರಾಯಸ್ವಾಮಿ ರಥ ಝಗಮಗಿಸಿದೆ. ರಥದ ಮೇಲೆ ಕಲಶ. ಉತ್ಸವಕರ್ತರು ಹಾಗೂ ವೀರಕುಮಾರರು, ಪೂಜಾರಿಗಳೊಂದಿಗೆ ಮೆರವಣಿಗೆ ಸಾಗಿದೆ. ಛತ್ರಿ, ಚಾಮರ, ಧ್ವಜದ ಜತೆಗೆ ನಾದಸ್ವರ ಗಮನ ಸೆಳೆದಿದೆ. ಪರಂಪರೆಯ ಹೆಗ್ಗುರುತು ಸಾರುವ ಬೆಂಗಳೂರು ಕರಗ ಶಕ್ತೋತ್ಸವ ಶನಿವಾರ ಮಧ್ಯರಾತ್ರಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಧ್ಯರಾತ್ರಿ ಸುಮಾರು 12.30 ರಿಂದ 1ರ ಸುಮಾರಿಗೆ ಹೊರಟ ಕರಗ ಮೆರವಣಿಗೆಯ ದರ್ಶನ ಪಡೆದು ಲಕ್ಷಾಂತರ ಭಕ್ತರು ಪುನೀತರಾದರು. ಅರ್ಚಕರಾದ ಎ.ಜ್ಞಾನೇಂದ್ರ ಅವರು 15ನೇ ಬಾರಿಗೆ ಕರಗ ಹೊತ್ತು ಹೆಜ್ಜೆ ಹಾಕಿದರು. ಮೆರವಣಿಗೆಯುದ್ದಕ್ಕೂ ವೀರಕುಮಾರರು ಸಾಗಿದರು. ಉತ್ಸವದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಧರ್ಮರಾಯಸ್ವಾಮಿ…
ಬೆಳಗಾವಿ, ಏಪ್ರಿಲ್ 12: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://ainkannada.com/rcb-vs-rr-todays-bangalore-team-playing-11-is-like-this/ ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ನ ಕಚ್ಚಾ ತೈಲದ ಬೆಲೆಯ ಮೇಲೆ ದರ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರೆಲ್ ಕಚ್ಚಾ ತೈಲಕ್ಕೆ 120 ಡಾಲರ್ ಇದ್ದು, ಈಗ 65 ಡಾಲರ್ ಗೆ ಇಳಿದಿದೆ. ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂ. ಇದ್ದು, 800 ರೂ. ಕ್ಕೂ ಮೀರಿದೆ.ಆದರೂ ಪೆಟ್ರೋಲ್ ಡೀಸೆಲ್…
ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಇಂದು RCB ಹಾಗೂ RR ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಆರ್ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಸಾಧ್ಯತೆಯಿದೆ. ಏಕೆಂದರೆ ಕಳೆದ 5 ಪಂದ್ಯಗಳಲ್ಲಿ ಆರ್ಸಿಬಿ ಪರ ಕಣಕ್ಕಿಳಿದಿರುವ ಲಿಯಾಮ್ ಲಿವಿಂಗ್ಸ್ಟೋನ್ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. https://ainkannada.com/vijayapura-lavy-sangameshwara-goddess-in-bidarakundi/ ಈವರೆಗೆ ಐದು ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಲಿಯಾಮ್ ಲಿವಿಂಗ್ಸ್ಟೋನ್ ಕೇವಲ 83 ರನ್ ಮಾತ್ರ ಕಲೆಹಾಕಿದ್ದಾರೆ. ಹಾಗೆಯೇ 8 ಓವರ್ಗಳನ್ನು ಎಸೆದಿರುವ ಅವರು ಪಡೆದಿರುವುದು ಕೇವಲ 2 ವಿಕೆಟ್ ಮಾತ್ರ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಿಂದ ಲಿಯಾಮ್ ಲಿವಿಂಗ್ಸ್ಟೋನ್ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈ ಬಿಡುವ ಸಾಧ್ಯತೆಯಿದೆ. ಲಿಯಾಮ್ ಲಿವಿಂಗ್ಸ್ಟೋನ್ ಅವರನ್ನು ಕೈ ಬಿಟ್ಟರೆ ರೊಮೆರಿಯೊ ಶೆಫರ್ಡ್ ಅಥವಾ ಜೇಕಬ್ ಬೆಥೆಲ್ ಅವರನ್ನು ಕಣಕ್ಕಿಳಿಸಬಹುದು. ಹೇಗಿರಲಿದೆ RCB ಪ್ಲೇಯಿಂಗ್ 11? ಈ ಪಂದ್ಯದಲ್ಲೂ ಆರ್ಸಿಬಿ ತಂಡದ ಆರಂಭಿಕರಾಗಿ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಮುಂದುವರೆಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿಯಲಿದ್ದು, ನಾಲ್ಕನೇ…
ವಿಜಯಪುರ:- ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ಅದ್ದೂರಿಯಾಗಿ ಸಂಗಮೇಶ್ವರ ದೇವರ ರಥೋತ್ಸವ ನಡೆಯಿತು. https://ainkannada.com/heavy-rainfall-in-karnataka-this-week/ ಹಿಂದು ಮುಸ್ಲಿಂ ಎಂಬ ಬೇಧ ಭಾವವಿಲ್ಲದೇ ರಥೋತ್ಸವ ಎಳೆದರು. ಇನ್ನೂ ಮುಸ್ಲಿಂ ಸಮುದಾಯದ ವರೇ ಈ ತೇರಿಗೆ ಎಣ್ಣೆ ಹಚ್ಚುವುದು ತಲಾ ತಲಾಂತರದಿಂದ ನಡೆದುಕೊಂಡು ಬಂದ ಸಂಪ್ರದಾಯ ಈ ಬಾರಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. 21 ಪೂಟ್ ಉದ್ದದ ಎರಡು ರುದ್ರಾಕ್ಷಿ ಹಾರವನ್ನು ಮಾಡಿಸಿ ತೇರಿಗೆ ಹಾಕಿದ್ದು ವಿಶೇಷವಾಗಿತ್ತು.
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/siddaramaiah-driving-to-historic-bangalore-mercury-devotees-filled-with-meltdown/ ಇಂದಿನಿಂದ 18ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬೆಳಗಾವಿ, ರಾಯಚೂರು, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಏಪ್ರಿಲ್ 14 ರಿಂದ 16ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಇನ್ನೂ ಈಗಾಗಲೇ 25 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಿದ್ದು, 3 ಜಿಲ್ಲೆಗಳಲ್ಲಿ ಸಾಮಾನ್ಯ, ಒಂದು ಜಿಲ್ಲೆಯಲ್ಲಿ ಅತಿ ಕಡಿಮೆ ಮತ್ತು ಒಂದು ಜಿಲ್ಲೆಯಲ್ಲಿ ಇನ್ನೂ ಮಳೆಯಾಗಿಲ್ಲ. ವಾಡಿಕೆ ಪ್ರಕಾರ…
ಬೆಂಗಳೂರು:- ವಿಶ್ವವಿಖ್ಯಾತ ಐತಿಹಾಸಿಕ ಕರಗ ಶಕ್ತ್ಯ ಉತ್ಸವ ಹಾಗೂ ಧರ್ಮರಾಯ ಸ್ವಾಮಿ ಮಹಾರಥೋತ್ಸವಕ್ಕೆ ಶನಿವಾರ ತಡರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. https://ainkannada.com/ipl-2025-today-rcb-vs-rr-big-fight-bangalore-jersey-when-is-the-start-of-the-match/ ಐತಿಹಾಸಿಕ ಬೆಂಗಳೂರು ಕರಗ ಶಕ್ತೋತ್ಸವ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಡುವ ಮೂಲಕ ಚಾಲನೆ ದೊರೆಯಿತು. ಅರ್ಚಕ ವಿ. ಜ್ಞಾನೇಂದ್ರ ಅವರು 15ನೇ ಬಾರಿಗೆ ಕರಗವನ್ನು ಹೊತ್ತಿದ್ದಾರೆ. ಚೈತ್ರಮಾಸದ ಚೈತ್ರ ಪೌರ್ಣಿಮೆಯ ಚಂದ್ರನ ಬೆಳಕಿನಲ್ಲಿ ಕರಗ ಉತ್ಸವ ನಡೆಯಿತು. ಕರಗದ ಅಕ್ಕ-ಪಕ್ಕದಲ್ಲಿ ವೀರಕುಮಾರರು ಖತ್ತಿ ಹಿಡಿದು ಸಾಗಿದರು. ಉತ್ಸವ ಸಾಗುವ ದಾರಿ ಉದ್ದಕ್ಕೂ ಭಕ್ತರು ಗೋವಿಂದ, ಗೋವಿಂದ ಎಂದು ಭಗವಂತನ ನಾಮಸ್ಮರಣೆ ಮಾಡುತ್ತಾ ಭಕ್ತರು ಕರಗಕ್ಕೆ ಮಲ್ಲಿಗೆ ಹೂವು ಅರ್ಪಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರಗ ದರ್ಶನ ಪಡೆದರು. ತಿಗಳರಪೇಟೆಯ ಧರ್ಮರಾಯಸ್ವಾಮಿ ದೇಗುಲದಿಂದ ಆರಂಭವಾಗುವ ಕರಗ, ದೇವಸ್ಥಾನದ ಹೊರಭಾಗದಲ್ಲಿರುವ ಗಣಪತಿ, ಮುತ್ಯಾಲಮ್ಮ ದೇವಿಗೆ ಪೂಜೆ ಸಲ್ಲಿಸಿ, ಬಳಿಕ ಹಲಸೂರುಪೇಟೆಯ ಆಂಜನೇಯಸ್ವಾಮಿ, ಶ್ರೀರಾಮ ದೇವಾಲಯಕ್ಕೆ ತೆರಳುತ್ತದೆ. ಇಲ್ಲಿಂದ, ಪ್ರಸನ್ನ ಗಂಗಾಧರೇಶ್ವರಸ್ವಾಮಿ ದೇವಸ್ಥಾನ ತೆರಳಿ, ನಂತರ, ನಗರ್ತಪೇಟೆಯ ವೇಣುಗೋಪಾಲ ಕೃಷ್ಣಸ್ವಾಮಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2025ರ 28ನೇ ಪಂದ್ಯ ಇಂದು ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. https://ainkannada.com/why-is-the-marriage-delayed-no-matter-how-hard-these-zodiac-signs-try-sundays-horoscope-13-april-2025/ ತವರಿನ ಹೊರಗೆ ಆಡಿದ ಮೂರು ಪಂದ್ಯಗಳನ್ನು ಗೆದ್ದಿರುವ ರಜತ್ ಪಡೆ ತವರಿನಲ್ಲಿ ನಡೆದಿರುವ ಎರಡು ಪಂದ್ಯಗಳಲ್ಲಿ ಸೋತಿದೆ. ಕಳೆದ ಪಂದ್ಯದಲ್ಲಿ ಆರ್ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಮ್ಮ ತವರು ಮೈದಾನ ಎಂ ಚಿನ್ನಸ್ವಾಮಿಯಲ್ಲಿ ಸೋಲು ಅನುಭವಿಸಿತ್ತು. ಹೀಗಾಗಿ ಸೋಲಿನ ಆಘಾತದಲ್ಲಿರುವ ಆರ್ಸಿಬಿ ಇದೀಗ ರಾಜಸ್ಥಾನ್ ರಾಯಲ್ಸ್ ತಂಡವನ್ನು ಅವರ ತವರು ಮೈದಾನದಲ್ಲಿ ಎದುರಿಸಲು ಸಜ್ಜಾಗಿದೆ. ಈ ಪಂದ್ಯವನ್ನು ಆರ್ಸಿಬಿ, ರಾಜಸ್ಥಾನ್ ತಂಡದ ತವರು ಮೈದಾನದಲ್ಲಿ ಆಡುತ್ತಿರುವ ಕಾರಣ, ಗೆಲುವಿನ ಫೇವರೇಟ್ ಎನಿಸಿಕೊಂಡಿದೆ. ಈಗಾಗಲೇ ಐದು ಪಂದ್ಯಗಳನ್ನು ಆಡಿರುವ ಬೆಂಗಳೂರು ಪಡೆ 3ರಲ್ಲಿ ಗೆದ್ದು ಎರಡರಲ್ಲಿ ಸೋಲು ಕಂಡಿದೆ. ಅದರಲ್ಲೂ ಬುಧವಾರ ನಡೆದಿದ್ದ ತವರು ಮೈದಾನದಲ್ಲಿ ಡೆಲ್ಲಿ ವಿರುದ್ಧ ಸೋಲನ್ನು ಕಂಡಿರುವ ಆರ್ಸಿಬಿ ಇದೀಗ ರಾಜಸ್ಥಾನ ಮಣಿಸಿ ಮೂರನೇ ಸ್ಥಾನಕ್ಕೆರಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಬಲಿಷ್ಠ…
ಸೂರ್ಯೋದಯ – 6:05 ಬೆ ಸೂರ್ಯಾಸ್ತ – 6:28 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ಪಾಡ್ಯ ನಕ್ಷತ್ರ – ಚಿತ್ತೆ ಯೋಗ – ಹರ್ಷಣ ಕರಣ – ಬಾಲವ ರಾಹು ಕಾಲ – 04:30 ದಿಂದ 06:00 ವರೆಗೆ ಯಮಗಂಡ – 12:00 ದಿಂದ 01:30 ವರೆಗೆ ಗುಳಿಕ ಕಾಲ – 03:00 ದಿಂದ 04:30 ವರೆಗೆ ಬ್ರಹ್ಮ ಮುಹೂರ್ತ – 4:29 ಬೆ. ದಿಂದ 5:17 ಬೆ.ವರೆಗೆ ಅಮೃತ ಕಾಲ – 2:08 ಮ.ದಿಂದ 3:57 ಮ. ವರೆಗೆ ಅಭಿಜಿತ್ ಮುಹುರ್ತ – 11:52 ಬೆ. ದಿಂದ 12:41 ಮ. ವರೆಗೆ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ: ಸಂತಾನ…