ಬೆಂಗಳೂರು:- ವಿಶ್ವವಿಖ್ಯಾತ ಐತಿಹಾಸಿಕ ಕರಗ ಶಕ್ತ್ಯ ಉತ್ಸವ ಹಾಗೂ ಧರ್ಮರಾಯ ಸ್ವಾಮಿ ಮಹಾರಥೋತ್ಸವಕ್ಕೆ ಶನಿವಾರ ತಡರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. https://ainkannada.com/ipl-2025-today-rcb-vs-rr-big-fight-bangalore-jersey-when-is-the-start-of-the-match/ ಐತಿಹಾಸಿಕ ಬೆಂಗಳೂರು ಕರಗ ಶಕ್ತೋತ್ಸವ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಡುವ ಮೂಲಕ ಚಾಲನೆ ದೊರೆಯಿತು. ಅರ್ಚಕ ವಿ. ಜ್ಞಾನೇಂದ್ರ ಅವರು 15ನೇ ಬಾರಿಗೆ ಕರಗವನ್ನು ಹೊತ್ತಿದ್ದಾರೆ. ಚೈತ್ರಮಾಸದ ಚೈತ್ರ ಪೌರ್ಣಿಮೆಯ ಚಂದ್ರನ ಬೆಳಕಿನಲ್ಲಿ ಕರಗ ಉತ್ಸವ ನಡೆಯಿತು. ಕರಗದ ಅಕ್ಕ-ಪಕ್ಕದಲ್ಲಿ ವೀರಕುಮಾರರು ಖತ್ತಿ ಹಿಡಿದು ಸಾಗಿದರು. ಉತ್ಸವ ಸಾಗುವ ದಾರಿ ಉದ್ದಕ್ಕೂ ಭಕ್ತರು ಗೋವಿಂದ, ಗೋವಿಂದ ಎಂದು ಭಗವಂತನ ನಾಮಸ್ಮರಣೆ ಮಾಡುತ್ತಾ ಭಕ್ತರು ಕರಗಕ್ಕೆ ಮಲ್ಲಿಗೆ ಹೂವು ಅರ್ಪಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರಗ ದರ್ಶನ ಪಡೆದರು. ತಿಗಳರಪೇಟೆಯ ಧರ್ಮರಾಯಸ್ವಾಮಿ ದೇಗುಲದಿಂದ ಆರಂಭವಾಗುವ ಕರಗ, ದೇವಸ್ಥಾನದ ಹೊರಭಾಗದಲ್ಲಿರುವ ಗಣಪತಿ, ಮುತ್ಯಾಲಮ್ಮ ದೇವಿಗೆ ಪೂಜೆ ಸಲ್ಲಿಸಿ, ಬಳಿಕ ಹಲಸೂರುಪೇಟೆಯ ಆಂಜನೇಯಸ್ವಾಮಿ, ಶ್ರೀರಾಮ ದೇವಾಲಯಕ್ಕೆ ತೆರಳುತ್ತದೆ. ಇಲ್ಲಿಂದ, ಪ್ರಸನ್ನ ಗಂಗಾಧರೇಶ್ವರಸ್ವಾಮಿ ದೇವಸ್ಥಾನ ತೆರಳಿ, ನಂತರ, ನಗರ್ತಪೇಟೆಯ ವೇಣುಗೋಪಾಲ ಕೃಷ್ಣಸ್ವಾಮಿ…
Author: AIN Author
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2025ರ 28ನೇ ಪಂದ್ಯ ಇಂದು ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. https://ainkannada.com/why-is-the-marriage-delayed-no-matter-how-hard-these-zodiac-signs-try-sundays-horoscope-13-april-2025/ ತವರಿನ ಹೊರಗೆ ಆಡಿದ ಮೂರು ಪಂದ್ಯಗಳನ್ನು ಗೆದ್ದಿರುವ ರಜತ್ ಪಡೆ ತವರಿನಲ್ಲಿ ನಡೆದಿರುವ ಎರಡು ಪಂದ್ಯಗಳಲ್ಲಿ ಸೋತಿದೆ. ಕಳೆದ ಪಂದ್ಯದಲ್ಲಿ ಆರ್ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಮ್ಮ ತವರು ಮೈದಾನ ಎಂ ಚಿನ್ನಸ್ವಾಮಿಯಲ್ಲಿ ಸೋಲು ಅನುಭವಿಸಿತ್ತು. ಹೀಗಾಗಿ ಸೋಲಿನ ಆಘಾತದಲ್ಲಿರುವ ಆರ್ಸಿಬಿ ಇದೀಗ ರಾಜಸ್ಥಾನ್ ರಾಯಲ್ಸ್ ತಂಡವನ್ನು ಅವರ ತವರು ಮೈದಾನದಲ್ಲಿ ಎದುರಿಸಲು ಸಜ್ಜಾಗಿದೆ. ಈ ಪಂದ್ಯವನ್ನು ಆರ್ಸಿಬಿ, ರಾಜಸ್ಥಾನ್ ತಂಡದ ತವರು ಮೈದಾನದಲ್ಲಿ ಆಡುತ್ತಿರುವ ಕಾರಣ, ಗೆಲುವಿನ ಫೇವರೇಟ್ ಎನಿಸಿಕೊಂಡಿದೆ. ಈಗಾಗಲೇ ಐದು ಪಂದ್ಯಗಳನ್ನು ಆಡಿರುವ ಬೆಂಗಳೂರು ಪಡೆ 3ರಲ್ಲಿ ಗೆದ್ದು ಎರಡರಲ್ಲಿ ಸೋಲು ಕಂಡಿದೆ. ಅದರಲ್ಲೂ ಬುಧವಾರ ನಡೆದಿದ್ದ ತವರು ಮೈದಾನದಲ್ಲಿ ಡೆಲ್ಲಿ ವಿರುದ್ಧ ಸೋಲನ್ನು ಕಂಡಿರುವ ಆರ್ಸಿಬಿ ಇದೀಗ ರಾಜಸ್ಥಾನ ಮಣಿಸಿ ಮೂರನೇ ಸ್ಥಾನಕ್ಕೆರಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಬಲಿಷ್ಠ…
ಸೂರ್ಯೋದಯ – 6:05 ಬೆ ಸೂರ್ಯಾಸ್ತ – 6:28 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ಪಾಡ್ಯ ನಕ್ಷತ್ರ – ಚಿತ್ತೆ ಯೋಗ – ಹರ್ಷಣ ಕರಣ – ಬಾಲವ ರಾಹು ಕಾಲ – 04:30 ದಿಂದ 06:00 ವರೆಗೆ ಯಮಗಂಡ – 12:00 ದಿಂದ 01:30 ವರೆಗೆ ಗುಳಿಕ ಕಾಲ – 03:00 ದಿಂದ 04:30 ವರೆಗೆ ಬ್ರಹ್ಮ ಮುಹೂರ್ತ – 4:29 ಬೆ. ದಿಂದ 5:17 ಬೆ.ವರೆಗೆ ಅಮೃತ ಕಾಲ – 2:08 ಮ.ದಿಂದ 3:57 ಮ. ವರೆಗೆ ಅಭಿಜಿತ್ ಮುಹುರ್ತ – 11:52 ಬೆ. ದಿಂದ 12:41 ಮ. ವರೆಗೆ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ: ಸಂತಾನ…
ಬೆಂಗಳೂರು:-ರಾಜ್ಯ ಸರ್ಕಾರ ನಡೆಸಿರುವ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015 ವರದಿಯ ಮತ್ತಷ್ಟು ಅಂಶಗಳು ಬಯಲಿಗೆ ಬಂದಿವೆ. ಅದರಂತೆ, ಪ್ರವರ್ಗ 1ಎ, 1ಬಿ, 2ಎ, 2ಬಿ, 3ಎ, 3ಬಿ ಗಳಲ್ಲಿ ಎಷ್ಟೆಷ್ಟು ಜನಸಂಖ್ಯೆಯಿದೆ ಎಂಬುದರ ವರದಿ ಸಿಕ್ಕಿದೆ. ಅದರಂತೆ, ಸಾಮಾನ್ಯ ವರ್ಗದ ಜನಸಂಖ್ಯೆ ಎಷ್ಟಿದೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಸಂಖ್ಯೆ ಎಷ್ಟಿದೆ ಎಂಬ ಅಂಕಿ-ಅಂಶಗಳೂ ಲಭ್ಯವಾಗಿವೆ. https://ainkannada.com/karaga-shaktutsava-to-start-at-1230-midnight-transport-minister-ramalinga-reddy/ ಎಸ್, ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಜಾತಿಗಣತಿ ಅಂಕಿಅಂಶ ಬಹಿರಂಗವಾಗಿದ್ದು, ಕರ್ನಾಟಕದಲ್ಲಿ ಯಾವ ಜಾತಿ ಜನಸಂಖ್ಯೆ ಎಷ್ಟಿದೆ? ಜಾತಿಗಣತಿ ವರದಿಯಲ್ಲಿ ನೀಡಿರುವ ಕೆಲವು ಮಹತ್ವದ ಶಿಫಾರಸುಗಳ ಬಗ್ಗೆ ಮಾಹಿತಿ ದೊರೆತಿದೆ. ಜಾತಿಗಣತಿ ವರದಿಯಲ್ಲಿ ಏನಿದೆ ಎಂಬ ಬಗ್ಗೆ ಜನರಲ್ಲಿ ಈಗ ಕುತೂಹಲ ಹೆಚ್ಚಾಗಿದೆ. ವರದಿಯ ಅಂಕಿಅಂಶಗಳು ಲಭ್ಯವಾಗಿದ್ದು, ರಾಜ್ಯದಲ್ಲಿ ಜಾತಿವಾರು ಜನಸಂಖ್ಯೆ ಪ್ರಮಾಣದ ಬಗ್ಗೆ ವಿವರ ಇಲ್ಲಿದೆ. ಪ್ರವರ್ಗ 1ಎನಲ್ಲಿ ಯಾವ ಜಾತಿ? ಗಂಗಾಮತ, ಗೊಲ್ಲ, ಉಪ್ಪಾರ, ಮೊಗವೀರ, ಕೋಲಿ, ಇತರೆ ಪ್ರವರ್ಗ 1ಬಿನಲ್ಲಿ…
ಬೆಂಗಳೂರು:- ನಗರದ ಕರಗ ಉತ್ಸವಕ್ಕೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ಆರೋಪ ಕೇಳಿಬಂತು. ಈ ಹಿನ್ನೆಲೆಯಲ್ಲಿ ಕರಗ ನಡೆಯುತ್ತದೆಯೋ ಅಥವಾ ಇಲ್ಲವೋ ಎಂಬ ಅನುಮಾನ ವ್ಯಕ್ತವಾಗಿತ್ತು. ಈ ಸಂಬಂಧ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಧರ್ಮರಾಯ ದೇವಸ್ಥಾನಕ್ಕೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. https://ainkannada.com/turmeric-benefits-how-much-do-you-know-about-the-benefits-of-turmeric/ ಈ ಬಗ್ಗೆ ಮಾತನಾಡಿದ ಅವರು, ಕರಗ ಶಕ್ತೋತ್ಸವಕ್ಕೆ ಮಧ್ಯರಾತ್ರಿ 12:30ಕ್ಕೆ ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬರ್ತಾರೆ. ಕರಗ ಶಕ್ತೋತ್ಸವಕ್ಕೆ ಮಧ್ಯರಾತ್ರಿ 12:30ಕ್ಕೆ ಚಾಲನೆ ಸಿಗಲಿದೆ. ರಾಜ್ಯದ ಮುಖ್ಯಮಂತ್ರಿಗಳು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬರ್ತಾರೆ. ನಾನೇ ಬಂದು ಎಲ್ಲ ವ್ಯವಸ್ಥೆ ನೋಡಿದ್ದೀನಿ. ಬಹಳ ಚೆನ್ನಾಗಿ ಮಾಡಿದ್ದಾರೆ. ಎಲ್ಲರೂ ಕೂಡ ಕರಗದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ. ಕರಗ ಅಂದ್ರೆ ಬಹಳ ಫೇಮಸ್. ಪುಟ್ಟ ನಗರವಾದಾಗಿನಿಂದಲೂ ಕರಗ ನಡೀತಾ ಬರ್ತಾ ಇದೆ. ಲಕ್ಷಾಂತರ ಜನರು ಕರಗ ನೋಡಲು ಬರ್ತಾರೆ. ಶಾಸಕರು, ಪೊಲೀಸ್, ಬಿಬಿಎಂಪಿ ಎಲ್ಲಾ ಅಧಿಕಾರಿ ವರ್ಗದವರು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. ಹಣ…
ಭಾರತವು ಪ್ರಪಂಚದಲ್ಲಿ ಅರಿಶಿನದ ಅತಿದೊಡ್ಡ ಉತ್ಪಾದಕ ಮತ್ತು ರಫ್ತುದಾರ. ಭಾರತವು ಅತ್ಯುನ್ನತ ಗುಣಮಟ್ಟದ ಅರಿಶಿನವನ್ನು ಉತ್ಪಾದಿಸುತ್ತದೆ, ಇದು ಪ್ರಪಂಚದ ಉಳಿದ ಭಾಗಗಳಿಗೆ ಹೋಲಿಸಿದರೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. https://ainkannada.com/sit-should-investigate-the-60-commission-allegation-against-the-congress-government-bommai/ ಪ್ರಪಂಚದಾದ್ಯಂತ ಅರಿಶಿನದ ಒಟ್ಟು ಉತ್ಪಾದನೆಯಲ್ಲಿ ಭಾರತದ ಪಾಲು 80% ಆಗಿದೆ. ಅರಿಶಿನವನ್ನು ಔಷಧೀಯ ಮಸಾಲೆ ಎಂದೂ ಕರೆಯುತ್ತಾರೆ, ಇದು ಹೆಚ್ಚಿನ ಪ್ರಮಾಣದ ಕರ್ಕ್ಯುಮಿನ್ ಅನ್ನು ಹೊಂದಿರುತ್ತದೆ ಮತ್ತು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಮಾಂತ್ರಿಕ ಹಳದಿ ಮಸಾಲೆ ಅಂತಾನೆ ಕರೆಯಲ್ಪಡುವ ಅರಿಶಿನ ನಮ್ಮಲ್ಲಿ ತುಂಬಾನೇ ಜನಪ್ರಿಯವಾದ ಮಸಾಲೆ ಪದಾರ್ಥವಾಗಿದೆ. ಇದು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಅರಿಶಿನವು ಕರ್ಕುಮಾ ಲಾಂಗಾ ಸಸ್ಯದ ಮೂಲದಿಂದ ಉತ್ಪತ್ತಿಯಾಗುವ ವ್ಯಾಪಕವಾಗಿ ಬಳಸಲಾಗುವ ಮಸಾಲೆಯಾಗಿದೆ. ಇದನ್ನು ಚೀನಿ ಮತ್ತು ಆಯುರ್ವೇದ ಔಷಧದಲ್ಲಿ ಗಿಡಮೂಲಿಕೆಗಳ ಚಿಕಿತ್ಸೆಯಾಗಿ ಸಾವಿರಾರು ವರ್ಷಗಳಿಂದ ಬಳಸಲಾಗುತ್ತಿದೆ. ಅರಿಶಿನವಿಲ್ಲದೆ ಯಾವುದೇ ಧಾರ್ಮಿಕ ಆಚರಣೆ ಪೂರ್ಣಗೊಳ್ಳುವುದಿಲ್ಲ. ಅರಿಶಿನ ಗುರು ಗ್ರಹಕ್ಕೆ ಸಂಬಂಧಿಸಿದೆ. ಅರಿಶಿನವು ಅಡುಗೆಮನೆಯಲ್ಲಿ ನಮ್ಮ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ, ಆದರೆ ಇದು ಧಾರ್ಮಿಕ ಕಾರ್ಯಗಳನ್ನು ಸಹ…
ಬೆಂಗಳೂರು:- ರಾಜ್ಯ ಸರ್ಕಾರದ 40% ಕಮಿಷನ್ ಆರೋಪದ ತನಿಖೆಗೆ ಎಸ್ಐಟಿ ರಚಿಸಲು ತೀರ್ಮಾನಿಸಿರುವ ಕುರಿತು ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/hubballi-janakrosha-yatra-for-their-survival-soumya-reddy-sparks-against-bjp/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, 40% ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಈಗಾಗಲೇ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೆ ಗೊತ್ತಾಗಬೇಕು. ಈ ಸರ್ಕಾರ ಕದ್ದು ಮುಚ್ಚಿ ಯಾಕೆ ಮಾಡುತ್ತಾರೆ. ಕಳೆದ ಎರಡು ವರ್ಷದಲ್ಲಿ ಈ ಸರ್ಕಾರದ ವಿರುದ್ಧ 60% ಆರೋಪ ಕೇಳಿ ಬಂದಿದೆ. ಅದನ್ನೂ ಸೇರಿಸಿ ಎಸ್ಐಟಿ ತನಿಖೆಗೆ ಕೊಡಲಿ ಎಂದು ಹೇಳಿದರು. ರಾಜ್ಯ ಸರ್ಕಾರದಲ್ಲಿ 60% ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪಿಡಬ್ಲೂಡಿ, ಅಬಕಾರಿ, ಎಲೆಕ್ಟ್ರಿಕ್ ಕಂಟ್ರಾಕ್ಟರ್ ಅಸೋಸಿಯೇಷನ್ನವರು ಬಹಿರಂಗ ಆರೋಪ ಮಾಡಿದ್ದಾರೆ. ತಮ್ಮ ಸರ್ಕಾರದಲ್ಲಿ ನಡೆದಿರುವ ಆರೋಪದ ಸಮೇತ ತನಿಖೆ ಮಾಡಬೇಕು. ರಾಜಕಿಯ ದ್ವೇಷದಿಂದ ನಮ್ಮ ಮೇಲೆ ಸುಳ್ಳು ಪ್ರಚಾರ ಮಾಡಿರುವುದಕ್ಕೆ ಎಲ್ಲಿ ದಾಖಲೆ ಸಿಗುತ್ತದೆ. ಕಮಿಷನ್ ಕೇಳಿದರೆ ಲೋಕಾಯುಕ್ತಕ್ಕೆ ಕಂಪ್ಲೆAಟ್ ಕೊಡಿ ಎಂದು…
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕೆಲ ನಾಯಕರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆಯೇ ಹೊರತು ಜನರ ಮೇಲಿನ ಕಾಳಜಿಯಿಂದಾಗಿ ಅಲ್ಲ. ಜಾತಿ, ಧರ್ಮದ ಹೆಸರಿನಲ್ಲಿ ಈಗಾಗಲೇ ಜನರಿಗೆ ಮಂಕು ಬೂದಿಯನ್ನು ಬಿಜೆಪಿ ನಾಯಕರು ಎರಚಿದ್ದಾರೆ. ಈಗ ಜನಾಕ್ರೋಶ ಯಾತ್ರೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು. https://ainkannada.com/ipl-2025-lucknow-secures-thrilling-win-against-gujarat/ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾತ್ರೋ ರಾತ್ರಿ ಅಡುಗೆ ಅನಿಲ ದರ ಹೆಚ್ಚಿಸಿದೆ. ಉಜ್ವಲಾ ಯೋಜನೆಯ ಅಡುಗೆ ಅನಿಲ ದರವನ್ನೂ ಏರಿಕೆ ಮಾಡಿದ್ದು, ಪೆಟ್ರೋಲ್, ಡಿಸೇಲ್ ದರವನ್ನು ಹೆಚ್ಚಳ ಮಾಡುವ ಮೂಲಕ ಜನರ ಮೇಲೆ ಹೊರೆ ಹಾಕಿದೆ ಎಂದು ದೂರಿದರು. ಕೇಂದ್ರ ಸರ್ಕಾರಕ್ಕೆ ಜನರ ಮೇಲೆ ಹಾಗೂ ಮಹಿಳೆಯ ಮೇಲೆ ಕಾಳಜಿ ಇಲ್ಲ. ಈ ನಿಟ್ಟಿನಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಇಡೀ ದೇಶದಾದ್ಯಂತ ಮಹಿಳಾಕ್ರೋಶ ಪ್ರತಿಭಟನೆ ಮಾಡಲಾಗುತ್ತಿದೆ.…
ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಗುಜರಾತ್ ಗೆ ಲಕ್ನೋ ಶಾಕ್ ಕೊಟ್ಟಿದ್ದು, GT ವಿರುದ್ಧ ಲಕ್ನೋ ಜಯ ಸಾಧಿಸಿದೆ. ಐಡೆನ್ ಮಾರ್ಕ್ರಾಮ್ ಮತ್ತು ನಿಕೋಲಸ್ ಪೂರನ್ ಅವರ ಅರ್ಧಶತಕಗಳ ಸಹಾಯದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಗುಜರಾತ್ ಟೈಟನ್ಸ್ ತಂಡವನ್ನು ಆರು ವಿಕೆಟ್ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಪರ ಸಾಯಿ ಸುದರ್ಶನ್ ಮತ್ತು ಶುಭಮನ್ ಗಿಲ್ ಅರ್ಧಶತಕ ಸಿಡಿಸಿ ತಂಡವನ್ನು 20 ಓವರ್ಗಳಲ್ಲಿ 180 ರನ್ಗಳಿಗೆ ಕೊಂಡೊಯ್ದರು. ಇದಕ್ಕೆ ಉತ್ತರವಾಗಿ ಲಕ್ನೋ ತಂಡ 19.3 ಓವರ್ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 186 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿತು. https://ainkannada.com/shocking-matter-for-gold-lovers-gold-price-rises-suddenly/ ಪಂದ್ಯದಲ್ಲಿ ಗುಜರಾತ್ ತಂಡ ಲಕ್ನೋ ತಂಡಕ್ಕೆ 181 ರನ್ಗಳ ಗುರಿಯನ್ನು ನೀಡಿತ್ತು. ಈ ಮೊತ್ತವನ್ನ ಲಖನೌ ಸೂಪರ್ ಜೈಂಟ್ಸ್ 19.3 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ತಲುಪಿತು. ನಿಕೋಲಸ್ ಪೂರನ್ ಹಾಗೂ ಐಡೆನ್…
ನವದೆಹಲಿ:- ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ ಮತ್ತೆ ಏರಿಕೆ ಕಂಡಿದೆ. ಭಾರತದಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಜಿಗಿದಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರ ಒಂದೇ ದಿನ ಚಿನ್ನದ ಬೆಲೆ 6,250 ರೂ. ಏರಿಕೆಯಾಗಿದೆ 96,450 ರೂ.ಗಳ ಸಾರ್ವಕಾಲಿಕ ಗಡಿ ದಾಟಿದ್ದು, ಈ ಮೂಲಕ 1 ಲಕ್ಷ ರೂ.ನತ್ತ ದಾಪುಗಾಲು ಹಾಕಿದೆ. https://ainkannada.com/ipl-2025-tomorrow-rcb-vs-rr-big-fight-rajasthan-manisut-bangalore/ ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಬಿಕ್ಕಟ್ಟೇ ಚಿನ್ನದ ಬೆಲೆ ಏರಿಕೆಗೆ ಕಾರಣ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ. ಅಖಿಲ ಭಾರತ ಸರಾಫಾ ಅಸೋಸಿಯೇಷನ್ ಪ್ರಕಾರ, ಶುಕ್ರವಾರ ದೆಹಲಿಯಲ್ಲಿ ಚಿನ್ನದ ಬೆಲೆ 6,250 ರೂ.ಗಳಷ್ಟು ಜಿಗಿತ ಕಂಡಿದೆ. ಸ್ಥಳೀಯ ಆಭರಣ ವ್ಯಾಪಾರಿಗಳಿಂದಲೂ ಬೇಡಿಕೆ ಹೆಚ್ಚಿದ ಪರಿಣಾಮ 10 ಗ್ರಾಂ ಚಿನ್ನದ ಬೆಲೆ 96,450 ರೂ.ಗಳಿಗೆ ಏರಿಕೆ ಕಂಡು ದಾಖಲೆಯ ಗರಿಷ್ಠ ಮಟ್ಟ ತಲುಪಿದೆ. ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಬಿಕ್ಕಟ್ಟೇ ಚಿನ್ನದ ಬೆಲೆ ಏರಿಕೆಗೆ ಕಾರಣ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ