Author: AIN Author

ಜೈಪೂರ್​ನ ಸವಾಯಿ ಮಾನ್ಸಿಂಗ್​ ಮೈದಾನದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ನಾಳೆ ತನ್ನ 6ನೇ ಪಂದ್ಯ ಆಡಲು ಸಜ್ಜಾಗಿದೆ. https://ainkannada.com/rain-news-rain-likely-in-these-districts-of-karnataka-in-the-next-3-hours/ ಈಗಾಗಲೇ ಐದು ಪಂದ್ಯಗಳನ್ನು ಆಡಿರುವ ಬೆಂಗಳೂರು ಪಡೆ 3ರಲ್ಲಿ ಗೆದ್ದು ಎರಡರಲ್ಲಿ ಸೋಲು ಕಂಡಿದೆ. ಅದರಲ್ಲೂ ಬುಧವಾರ ನಡೆದಿದ್ದ ತವರು ಮೈದಾನದಲ್ಲಿ ಡೆಲ್ಲಿ ವಿರುದ್ಧ ಸೋಲನ್ನು ಕಂಡಿರುವ ಆರ್​ಸಿಬಿ ಇದೀಗ ರಾಜಸ್ಥಾನ ಮಣಿಸಿ ಮೂರನೇ ಸ್ಥಾನಕ್ಕೆರಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಬಲಿಷ್ಠ ತಂಡದೊಂದಿಗೆ ಮೈದಾನಕ್ಕಿಳಿಯಲು ಸಜ್ಜಾಗಿದೆ. ನಾಳೆಯ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಹೌದು, ಸತತ ಎರಡು ಪಂದ್ಯಗಳಲ್ಲಿ ಫ್ಲಾಪ್​ ಆಗಿರುವ ಸ್ಟಾರ್​ ಆಟಗಾರನನ್ನು ಈ ಪಂದ್ಯದಿಂದ ಹೊರಗಿಡುವ ಸಾಧ್ಯತೆ ದಟ್ಟವಾಗಿದೆ. ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿರುವ ಲಿವಿಂಗ್​ಸ್ಟೋನ್​ ಮುಂಬೈ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಶೂನ್ಯಕ್ಕೆ ಪೆವಿಲಿಯನ್​ ಸೇರಿ ನಿರಾಸೆ ಮೂಡಿಸಿದ್ದರು. ಬುಧವಾರ ತವರು ಮೈದಾನದಲ್ಲಿ ನಡೆದಿದ್ದ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದಲ್ಲಾದರೂ ತಂಡಕ್ಕೆ ಆಸರೆ ಆಗುತ್ತಾರೆ ಎಂದುಕೊಂಡಿದ್ದ ಫ್ಯಾನ್ಸ್​ಗಳಿಗೆ ಮತ್ತೆ ನಿರಾಸೆ ಮೂಡಿಸಿದ್ದರು.…

Read More

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/if-he-doesnt-want-my-friendship-let-him-say-it-directly-a-rift-in-vinay-rajats-friendship/ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಕೋಲಾರ, ಮೈಸೂರು, ರಾಮನಗರ, ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೇ, ಮುಂದಿನ ಮೂರು ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಕೊಪ್ಪಳದ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಹಾಗೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ದಕ್ಷಿಣ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,…

Read More

ಬೆಂಗಳೂರು:- ಇತ್ತೀಚೆಗಷ್ಟೆ ಮಚ್ಚು ಹಿಡಿದು ರೀಲ್ಸ್ ಮಾಡಿದ ಬೆನ್ನಲ್ಲೇ ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಅಲ್ಲದೇ ಇದೇ ಘಟನೆಗೆ ಸಂಬಂಧಿಸಿದಂತೆ ರಜತ್ ಹಾಗೂ ವಿನಯ್ ಜೈಲಿಗೂ ಕೂಡ ಹೋಗಿ ಬಂದಿದ್ದರು. ಇದಾದ ಬಳಿಕ ಕುಚಿಕು ಗೆಳೆಯರಂತಿದ್ದ ಇವರ ಸ್ನೇಹಕ್ಕೆ ಬಿರುಕು ಮೂಡಿದ್ಯಾ?ಎಂಬ ಪ್ರಶ್ನೆ ಮೂಡಿದೆ. https://ainkannada.com/i-am-not-the-son-who-fears-such-leaders-hd-kumaraswamys-taunt-to-congress/ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಗೌಡ ಮಚ್ಚು ಹಿಡಿದು ರೀಲ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ರು. ಪೋಸ್ಟ್ ಗಮನಿಸಿದ್ದ ಬಸವೇಶ್ವರ ನಗರ ಠಾಣೆ ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಬಂಧನ ಕೂಡ ಮಾಡಿದ್ರು. ನಂತರ ಪರಪ್ಪನ ಅಗ್ರಹಾರ ಜೈಲಿಗೂ ಕಳುಹಿಸಲಾಗಿತ್ತು. ಆ ನಂತರ ವಿನಯ್ ವಿಡಿಯೋ ಮಾಡಿ ರೀಲ್ಸ್ ಮಾಡಿದ್ದು ತಪ್ಪು, ಇನ್ಮುಂದೆ ಜೀವನದಲ್ಲಿ ಯಾವತ್ತೂ ರೀಲ್ಸ್ ಮಾಡಲ್ಲ ಅಂತಾ ಹೇಳಿಕೆ ಕೂಡ ಕೊಟ್ಟಿದ್ರು. ಆದ್ರೆ ಇಲ್ಲಿವರೆಗೂ ರಜತ್ ಮಾತ್ರ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಈ ಬಗ್ಗೆ ಸಂದರ್ಶನ ಒಂದರಲ್ಲಿ ಮಾತನಾಡಿದ ರಜತ್, ಅಕ್ಷಯ್ ಸ್ಟುಡಿಯೋದಲ್ಲಿ ಖಾಸಗಿ…

Read More

ಬೆಂಗಳೂರು:- ಕಾಂಗ್ರೆಸ್ ಪುಢಾರಿಗಳು ನನ್ನನ್ನು ಹೆದರಿಸಿ, ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. https://ainkannada.com/bjp-leaders-should-change-the-board-saying-their-fight-is-against-the-central-government-dcm-d-k-shivakumar-sarcastically/ ಫ್ರೀಡಂ ಪಾರ್ಕಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸಚಿವರು ಮಾತನಾಡಿದರು. ನನ್ನ ಬಳಿ ಟನ್ ಗಟ್ಟಲೆ ದಾಖಲೆಗಳು ಇವೆ ಎಂಬುದು ನಿಜ. ಆದರೆ ಕೆಲವರು ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ದನಿಯನ್ನು ಅಡಗಿಸುವ ಕೆಲಸ ಯಾರಿಂದಲೂ ಸಾಧ್ಯವಿಲ್ಲ. ಹೆದರುವ ವ್ಯಕ್ತಿಯೂ ನಾನಲ್ಲ ಎಂದರು. ಕಾಂಗ್ರೆಸ್ ಪಕ್ಷದ ಪುಢಾರಿಗಳು ನನ್ನನ್ನು ಹೆದರಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಗೊತ್ತಿರಲಿ, ನಾನು ಹೆದರುವ ವ್ಯಕ್ತಿ ಅಲ್ಲ. ನನ್ನ ವಿರುದ್ಧ ಪ್ರತಿಭಟನೆ ಮಾಡಿ ಲಾರಿಯಲ್ಲಿ ದಾಖಲೆಗಳನ್ನು ತಂದು ಕೊಡುತ್ತಾರಂತೆ. ತಂದು ಕೊಡಲಿ, ನಾನೂ ನೋಡುತ್ತೇನೆ. ಯಾವ ಮಟ್ಟದಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಕಾಂಗ್ರೆಸ್ ಪುಡಾರಿಗಳು ಎನ್ನುವುದು ನನಗೆ ಗೊತ್ತಿದೆ. ನನ್ನಲ್ಲಿರುವ…

Read More

ಬೆಂಗಳೂರು:”ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ ‘ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ’ ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ ಮನವಿ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು. https://ainkannada.com/we-are-not-from-a-state-of-filth-to-rub-ghee-under-our-noses-bk-hariprasad/ ಏ.17ರಂದು ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಡೆಸಲಿರುವ ಹೋರಾಟದ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಪೂರ್ವಸಿದ್ಧತಾ ಸಭೆ ನಡೆಸಿ, ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಎಲ್ಲಾ ವಸ್ತುಗಳ ಬೆಲೆ ಏನಿತ್ತು, ಈಗ ಏನಾಗಿದೆ ಎಂದು ನೋಡಬೇಕು. ಈ ಬೆಲೆ ಏರಿಕೆ ಬಿಸಿ ತಡೆಯಲು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡಲು ಅನೇಕ ನಾಯಕರು ಇಂದು…

Read More

ಬೆಂಗಳೂರು:- ಮೂಗಿಗೆ ತುಪ್ಪ ಸವರುವುದಕ್ಕೆ ನಾವು ಗಂಜಲ ರಾಜ್ಯದವರಲ್ಲ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ. https://ainkannada.com/do-you-understand-the-importance-of-this-green-leafy-vegetable-found-in-your-backyard-if-so-check-out-this-news-first/ ಈ ಸಂಬಂಧ ಮಾತನಾಡಿದ ಅವರು, ಏನು ಮಾಡೋದು ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಪಂಚಾಂಗ ನೋಡ್ತಾರೆ. ಕೆಲವರು ಗಿಳಿಶಾಸ್ತ್ರ ಕೇಳ್ತಾರೆ. ನಾವು ಸಂವಿಧಾನ ನೋಡುತ್ತೇವೆ. ಸಂವಿಧಾನದಲ್ಲಿ ಎಲ್ಲದಕ್ಕೂ ಅವಕಾಶ ಇದೆ ಎಂದರು. ಮೂಗಿಗೆ ತುಪ್ಪ ಸವರುವುದಕ್ಕೆ ನಾವು ಗಂಜಲ ರಾಜ್ಯದವರು ಅಲ್ಲ. ನಾವು ನಂದಿನ ಹಾಲಿನ ರಾಜ್ಯದವರು. ಏಪ್ರಿಲ್ 17ಕ್ಕೆ ಜಾತಿಗಣತಿ ಬಗ್ಗೆ ತೀರ್ಮಾನ ಆಗುತ್ತದೆ ಎಂದು ಸ್ಪಷ್ಟನೆ ನೀಡಿದರು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಏರಿಕೆ ಆಗಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೇ ಇದೆ. ದತ್ತಾಂಶ ಇಲ್ಲ ಎಂದು ಹೇಳಿ ಆಗ ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟಿತ್ತು. ಜಡ್ಜ್ಮೆಂಟ್ ಕೊಟ್ಟಿಲ್ಲ. 50% ಮೀಸಲಾತಿ ದಾಟುವಂತಿಲ್ಲ ಅನ್ನೋದು ಡೈರೆಕ್ಷನ್ ಅಷ್ಟೇ ಎಂದು ಹೇಳಿದರು. ಈಗ ನಮ್ಮ ಬಳಿ ಜಾತಿಗಣತಿ ಡೇಟಾ ಇದೆ. ಅದರ ಪ್ರಕಾರ ಮೀಸಲಾತಿ ಹೆಚ್ಚಿಸಬಹುದು. ರಾಹುಲ್ ಗಾಂಧಿ ಅವರು 75% ಮೀಸಲಾತಿ ಕೊಡುತ್ತೇವೆ ಎಂದು…

Read More

ನಾವು ಬೆಳಗ್ಗೆ ಎದ್ದಾಗ ಏನು ತಿನ್ನುತ್ತೇವೆ ಮತ್ತು ಕುಡಿಯುತ್ತೇವೆ ಎಂಬುದರ ಮೇಲೆ ನಮ್ಮ ಆರೋಗ್ಯವು ಅವಲಂಬಿತವಾಗಿರುತ್ತದೆ. ಹಾಗಾಗಿ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಹೆಚ್ಚಿನ ಪದಾರ್ಥಗಳನ್ನು ಆಹಾರದಲ್ಲಿ ಸೇರಿಸಲು ಪ್ರಯತ್ನಿಸಿ. ಕರಿಬೇವಿನ ಎಲೆಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. https://ainkannada.com/ipl-2025-gt-vs-lsg-gujarat-set-a-target-of-181-runs-for-lucknow/ ಕರಿಬೇವಿನ ಎಲೆಗಳನ್ನು ಪಾಕ ಪದ್ಧತಿಯಲ್ಲಿ ಅದರಲ್ಲೂ ಭಾರತದಲ್ಲಿ ಯಥೇಚ್ಛವಾಗಿ ಬಳಸುತ್ತೇವೆ. ಕರಿಬೇವು ಇಲ್ಲದೇ ಒಗ್ಗರಣೆ ಪೂರ್ಣವಾಗುವುದಿಲ್ಲ. ದಾಲ್ ಕರಿ, ಚಟ್ನಿ, ರಸಂ ಮಸಾಲ ಮಜ್ಜಿಗೆಯಂತಹ ಅಡುಗೆಗೆ ಎರಡು ಕರಿಬೇವಿನ ಎಲೆಗಳನ್ನು ಉದರಿಸಲೇ ಬೇಕು. ಎಣ್ಣೆಗೆ ಬಿದ್ದೊಡನೆ ಪಟ ಪಟ ಶಬ್ದ ಮಾಡುವ ಕರಿಬೇವನ್ನು ಹಾಗೇ ಹಸಿ ಹೊಟ್ಟೆಗೆ ಸೇವಿಸಿದರೇ ಸಿಗುವ ಉಪಯೋಗ ನಿಮಗೆ ಗೊತ್ತಾ . ಅಡುಗೆ ಮನೆಯ ಕೆಲವು ಆಹಾರ ಪದಾರ್ಥಗಳು ನಮಗೆ ಅದ್ಭುತವಾಗಿ ಕೆಲಸ ಮಾಡುತ್ತವೆ ಎನ್ನುವುದಕ್ಕೆ ಕರಿಬೇವಿನ ಸೊಪ್ಪು ಒಂದು ಉದಾಹರಣೆ. ಕರಿಬೇವಿನ ಎಲೆಗಳನ್ನು ನಾವು ಪ್ರತಿದಿನ ಅಡುಗೆಗೆ ಬಳಕೆ ಮಾಡುತ್ತೇವೆ ಮತ್ತು ಇದಕ್ಕೆ ಸಂಬಂಧಪಟ್ಟ ಆರೋಗ್ಯ ಲಾಭಗಳನ್ನು ನಮಗೆ ಗೊತ್ತಿಲ್ಲದೆ ಪಡೆದು ಕೊಳ್ಳು ತ್ತಿದ್ದೇವೆ.…

Read More

ಬೆಳಗಾವಿ : ಗದ್ದೆಯಲ್ಲಿ ಕೆಲಸ ಮಾಡ್ತಿದ್ದ ರೈತ ಮಹಿಳೆ ಮೇಲೆ ಹಲ್ಲೆ ಮಾಡಿ ಚಿನ್ನ ಕಸಿದುಕೊಂಡು ಪರಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ‌ ಧಾಮಣೆ ಗ್ರಾಮದ ಬಳಿ ನಡೆದಿದೆ. ಗದ್ದೆಯಲ್ಲಿ ಒಂಟಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಕಟ್ಟಿಗೆಯಿಂದ ಹೊಡೆದು ಕಿವಿಯೋಲೆ ಕದ್ದು ಪರಾರಿಯಾಗಿದ್ದಾರೆ. ಇಬ್ಬರು ಮಹಿಳೆಯರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.  ವಿಮಲಾಬಾಯಿ ಬಾಳೆಕುಂದ್ರಿ (60) ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. https://ainkannada.com/mla-balachandra-jarkiholi-who-made-water-reach-yadavada-stream/ ಇನ್ನೂ ಹಲ್ಲೆಯಿಂದಾಗಿ ಗಾಯಗೊಂಡ ವಿಮಲಾಬಾಯಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.    

Read More

ಯಾದವಾಡ : ಯಾದವಾಡ ಗ್ರಾಮದಲ್ಲಿಂದು ಘಟ್ಟಗಿ ಬಸವೇಶ್ವರ ಜಾತ್ರೆಯು ಆರಂಭಗೊಂಡಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ಯಾದವಾಡ ಬ್ಯಾರೇಜ್ ಗೆ ನೀರು ಹರಿದು ಬಂದಿದ್ದರಿಂದ ಗ್ರಾಮಸ್ಥರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ನಮ್ಮ ಯಾದವಾಡ ಹಳ್ಳಕ್ಕೆ ಕಾಲುವೆ ಮೂಲಕ ಕುಡಿಯುವ ನೀರಿನ ಸಂಬಂಧ ನೀರನ್ನು ಹರಿಸಿದ್ದಾರೆ. ಇದರಿಂದ ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಅನುಕೂಲವಾಗಲಿದೆ. ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ. ಇದುವರೆಗೂ ನೀರು ಬರದಿದ್ದ ಹಳ್ಳಕ್ಕೆ ಇಂದು ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಹಿನ್ನೆಲೆಯಲ್ಲಿ ನೀರಾವರಿ ಅಧಿಕಾರಿಗಳು ಆಗಮಿಸಿ ನಮ್ಮ ಹಳ್ಳಕ್ಕೆ ನೀರು ತಲುಪುವಂತೆ ಮಾಡಲು ವಿತರಣಾ ಕಾಲುವೆಗಳ ಗೇಟುಗಳನ್ನು ಬಂದ್ ಮಾಡಿ ಅನುಕೂಲ ಮಾಡಿಕೊಟ್ಟಿದ್ದಾರೆ. ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ನಮ್ಮಯಾದವಾಡ ಮತ್ತು ಸುತ್ತ ಮುತ್ತಲಿನ ಗ್ರಾಮಸ್ಥರ ಪರವಾಗಿ ಅಭಿನಂದನೆಗಳನ್ನು…

Read More

ಬೆಂಗಳೂರು ಗ್ರಾಮಾಂತರ : ಏಕಾಏಕಿ ಎಲೆಕ್ಟ್ರಿಕ್ ಬೈಕ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ವಾಸವಿ ಕಲ್ಯಾಣ ಮಂಟಪದ ಸಮೀಪ ನಡೆದಿದೆ. ಅಂಗಡಿ ಮುಂಭಾಗ ಬೈಕ್ ನಿಲ್ಲಿಸಿದ್ದಾಗ ಅವಘಡ ಸಂಭವಿಸಿದೆ. ದೊಡ್ಡಬಳ್ಳಾಪುರದ ಚಂದ್ರಶೇಖರ್ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ವಾಹನ ಹೊತ್ತುರಿದಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ಜಪಾನ್ ಮೂಲದ ಎಲೆಕ್ಟ್ರಿಕ್ ಬೈಕ್ ಖರೀದಿಸಿದ್ದರು. ಇತ್ತೀಚೆಗಷ್ಟೇ ನೂತನ ಬ್ಯಾಟರಿಯನ್ನು ಚಂದ್ರಶೇಖರ್ ಹಾಕಿಸಿದ್ದರು. ಅಂಗಡಿ ಮುಂದೆ ತಂದು ನಿಲ್ಲಿಸಿದ ನಂತರ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ. https://ainkannada.com/pramoda-devis-letter-regarding-the-property-of-the-royal-family-anxiety-among-siddanpur-villagers/ ಮುಖ್ಯ ರಸ್ತೆಯಲ್ಲಿ ದಟ್ಟವಾಗಿ ಆವರಿಸಿದ್ದರಿಂದ ಸ್ಥಳೀಯರು ಆತಂಕ ಕೀಡಾಗಿದ್ದರು . ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More