ಮೈಸೂರು: ಚಾಮರಾಜನಗರದಲ್ಲಿ ಮೈಸೂರು ರಾಜಮನೆತನದ ಆಸ್ತಿ ವಿಚಾರವಾಗಿ ರಾಜಮಾತೆ ಪ್ರಮೋದಾದೇವಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದು, ಜಿಲ್ಲಾಧಿಕಾರಿಗಳ ಕಚೇರಿಗೆ ದೌಡಾಯಿಸಿದ್ದಾರೆ ಇತ್ತೀಚಿಗಷ್ಟೇ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು, ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ರಾಜಮನೆತನಕ್ಕೆ ಸೇರಿದ ಆಸ್ತಿ ಇದೆ. ಅದನ್ನು ರಕ್ಷಣೆ ಮಾಡಬೇಕು ಎಂದು ಅವರು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಪತ್ರ ಬರೆದಿದ್ದರು. ಇದರಿಂದ ಇದೀಗ ಗ್ರಾಮವೊಂದರ ಜನರಿಗೆ ಆತಂಕ ಶುರುವಾಗಿದೆ. ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ ಗ್ರಾಮಸ್ಥರಿಗೆ ಆತಂಕ ಶುರು ಆಗಿದೆ. ಮೂಲಗಳ ಪ್ರಕಾರ ಸಿದ್ದಯ್ಯನಪುರದ ಮೂಲ ಹೆಸರೇ ಜಯಚಾಮರಾಜೇಂದ್ರ ಪುರಂ ಆಗಿದ್ದು, ಇದೀಗ ಈ ಊರಿನ ಜನರಿಗೆ ಊರು ಖಾಲಿ ಮಾಡಬೇಕಾದ ಆತಂಕ ಶುರುವಾಗಿದೆ. https://ainkannada.com/woman-who-made-a-living-through-grihalakshmi-yojana-thanks-the-government/ ಸುಮಾರು 4,000ಕ್ಕೂ ಹೆಚ್ಚು ಜನರು ಗ್ರಾಮದಲ್ಲಿ ವಾಸ ಮಾಡುತ್ತಿದ್ದಾರೆ. ಇಂದಿಗೂ ಮಹಾರಾಜರ ಫೋಟೋವನ್ನು ಗ್ರಾಮಸ್ಥರು ಇಂದಿಗೂ ತಮ್ಮ ಮನೆಯ ದೇವರ ಕೋಣೆಯಲ್ಲಿಟ್ಟುಕೊಂಡು ಪೂಜೆ ಮಾಡುತ್ತಿದ್ದಾರೆ. ಪ್ರತಿ ವರ್ಷ ಮಹಾರಾಜರ ಭಾವಚಿತ್ರ ಮೆರವಣಿಗೆ ಮಾಡಿ ಅವರ ಜನ್ಮ ದಿನ…
Author: AIN Author
ಮೈಸೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಹಲವರ ಬಾಳಿಗೆ ಬೆಳಕಾಗಿದೆ. ಇದೀಗ ಮಹಿಳೆಯೊಬ್ಬರು ಗೃಹಲಕ್ಷ್ಮೀ ಯಿಂದ ತಮ್ಮ ಜೀವನ ಕಟ್ಟಿಕೊಟ್ಟ ಬಗ್ಗೆ ಹೇಳಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. https://ainkannada.com/everyone-should-adopt-the-ideal-principles-of-shivsharan-samagar-haralaiah-sri-gurusiddheshwara-mahaswamy/ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲ್ಲೂಕು ಸಮಿತಿ ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ವೇಳೆ ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಮಾತನಾಡಿದ ಇಂದಿರಾನಗರ ಗ್ರಾಮದ ಮಹಿಳೆ. ಗೃಹಲಕ್ಷ್ಮಿ ಯೋಜನೆ ಹಣದಿಂದ ಸಾಕಷ್ಟು ಸಹಾಯವಾಗಿದೆ. ಗೃಹಲಕ್ಷ್ಮಿ ಹಣದಿಂದ ಪೆಟ್ಟಿ ಅಂಗಡಿ ಇಟ್ಟುಕೊಂಡು ಮನೆಯ ವ್ಯವಹಾರ ಮಾಡಿಕೊಂಡಿದ್ದೇನೆ. ಇದರಿಂದ ಬಂದ ಲಾಭದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಾಕಷ್ಟು ಸಹಾಯವಾಗಿದೆ. ಪೆಟ್ರೋಲ್ ಮತ್ತು ಇಸ್ಪೀಟ್ ಕಾರ್ಡ್ ಮಾರಾಟ ಮಾಡುತ್ತಿದ್ದೇನೆ ಎಂದ ಮಹಿಳೆ ಹೇಳಿದ್ದಾರೆ. ಇದನ್ನು ಕೇಳಿ ಅರೆಕ್ಷಣ ಶಾಸಕ ದರ್ಶನ್ ಧ್ರುವನಾರಾಯಣ್ ಅವರೇ ಶಾಕ್ ಆಗಿದ್ದಾರೆ.
ಬಾಗಲಕೋಟೆ : ಹರಳಯ್ಯ ಮತ್ತು ಕಲ್ಯಾಣಮ್ಮನವರು ತಮ್ಮ ತೊಡೆ ಚರ್ಮದಿಂದ ಬಸವಣ್ಣನವರಿಗೆ ಪಾದ ರಕ್ಷಣೆ ಮಾಡಿಕೊಟ್ಟಿದ್ದು ಇತಿಹಾಸ. ಕಲ್ಬುರ್ಗಿಯ ಜಿಲ್ಲೆಯ ಸೇಡಂ ತಾಲೂಕಿನ ಬಿಜನಳ್ಳಿ ಗ್ರಾಮದಲ್ಲಿ 12ನೇ ಶತಮಾನದಲ್ಲಿ ಶಿವಶರಣ ಹರಳಯ್ಯ ಮತ್ತು ಕಲ್ಯಾಣ್ ಅಮ್ಮನವರು ತಮ್ಮ ತೊಡೆಯಿಂದ ಮಾಡಿದ ಪಾದ ರಕ್ಷಣೆ ಇನ್ನೂ ನೋಡಲು ಸಿಗುತ್ತದೆ. ನಮ್ಮ ಜಿಲ್ಲೆಯಲ್ಲಿ ಸಮಗಾರ ಸಮುದಾಯವು ಹೆಚ್ಚಿನ ಮಟ್ಟದಲ್ಲಿ ಸಂಘಟಿತರಾಗಿ ಮತ್ತು ಪ್ರತಿಯೊಂದು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವುದರ ಜೊತೆಗೆ ಈ ದೇಶದಲ್ಲಿ ಉತ್ತಮ ಸಮಗಾರ ಸಮುದಾಯವಾಗಿ ಹೊರಹೊಮ್ಮಬೇಕು ಎಂದು ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮಿಗಳು ಬ್ರಹ್ಮಾನಂದ ಮಠ ಹೇಳಿದರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ತೇರದಾಳ ರಬಕವಿ ಬನಹಟ್ಟಿ ತಾಲೂಕ ಘಟಕದ ವತಿಯಿಂದ ಶ್ರೀ ಶಿವಶರಣ ಸಮಗಾರ ಹರಳಯ್ಯನವರ ಜಯಂತೋತ್ಸವ ಕಾರ್ಯಕ್ರಮ ನಡೆಯಿತು. https://ainkannada.com/hailstorm-in-many-places-in-raichur-damage-to-paddy-crop/ ಇದೇ ಸಂದರ್ಭದಲ್ಲಿ ಗೀರಮಲ್ವಪ್ಪ ಕಬಾಡಿ ಗೌರವಾಧ್ಯಕ್ಷರು ಹರಳಯ್ಯ ಸಮಾಜ ರಬಕವಿ ಬನಹಟ್ಟಿ ತಾಲೂಕ. ಸಚಿನ ಕೊಡತೆ ಅಧ್ಯಕ್ಷರು ಹರಳಯ್ಯ ಸಮಾಜ…
ರಾಯಚೂರು : ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಹಲವೆಡೆ ಭಾರೀ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು, ಭತ್ತದ ಬೆಳೆ ಹಾನಿಯಾಗಿದೆ. ಕಟಾವಿಗೆ ಬಂದಿದ್ದ ಭತ್ತದ ಬೆಳೆ ಇದೀಗ ಹಾನಿಗೊಳಗಾಗಿದ್ದು ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೆಲವೆಡೆ ಗದ್ದೆಯಲ್ಲಿ ನೀರು ನಿಂತು ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಆಲಿಕಲ್ಲು ಮಳೆಗೆ ಗೌಡನಬಾವಿ, ಸಾಗರ ಕ್ಯಾಂಪ್, ಬೆಳ್ಳಿಗನೂರು ಗ್ರಾಮದಲ್ಲಿ ಬೆಳೆ ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಅಂತ ರೈತರು ಅಳಲು ತೋಡಿಕೊಂಡಿದ್ದಾರೆ. ಒಣಗಿರುವ ಭತ್ತದ ಕಾಳು ನೆಲಕ್ಕೆ ಬಿದ್ದು ಮೊಳಕೆ ಒಡೆಯುವ ಆತಂಕ ಎದುರಾಗಿದೆ. https://ainkannada.com/farewell-program-for-bhima-pedama-rath-yatra-in-chitradurga-city/ ಇನ್ನೂ ರಾಜ್ಯದ ಹಲವೆಡೆ ಇಂದಿನಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿ ಪ್ರತಿ ಗಂಟೆಗೆ 40-50 ಕಿಮಿ ವೇಗದಲ್ಲಿ ಬೀಸಲಿದೆ. ಬೆಂಗಳೂರಿನಲ್ಲಿ ಇಂದು (ಏ.12), ನಾಳೆ ಹಗುರ ಮಳೆಯಾಗಲಿದೆ. ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು…
ಚಿತ್ರದುರ್ಗ : ಚಿತ್ರದುರ್ಗ ನಗರದಲ್ಲಿ ಭೀಮ ಹೆಜ್ಜೆ ರಥಯಾತ್ರೆಗೆ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಡಾ ಬಿ.ಆರ್ ಅಂಬೇಡ್ಕರ್ ಅವರು ಕರ್ನಾಟಕಕ್ಕೆ ಬಂದು 100 ವರ್ಷ ಪೂರೈಸಿದ ಹಿನ್ನೆಲೆ ಭೀಮ ಹೆಜ್ಜೆ ರಥಯಾತ್ರೆಗೆ ಚಾಲನೆ ನೀಡಿದ್ದ, ಬೆಂಗಳೂರಿನಿಂದ ಭೀಮ ಹೆಜ್ಜೆ ರಥಯಾತ್ರೆ ಆಗಮಿಸಿ ಶುಕ್ರವಾರವೆ ಚಿತ್ರದುರ್ಗದಲ್ಲಿ ತಂಗಿತ್ತು. ಇಂದು ನಗರದ ಮದಕರಿ ವೃತ್ತದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮದಕರಿ ನಾಯಕರ ಪ್ರಥಿಮೆಗೆ ಮಾಲಾರ್ಪಣೆ ಮಾಡಲಾಯಿತು. ಇನ್ನೂ ಎಂ ಎಲ್ ಸಿ ಕೆ.ಎಸ್ ನವೀನ್ ಅವರು ಆಗಮಿಸಿ ಮದಕರಿ ನಾಯಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅಂಬೇಡ್ಕರ್ ಪ್ರಥಿಮೆಗೆ ಮಾಲಾರ್ಪಣೆ ಮಾಡಿದರು. https://ainkannada.com/woman-attacked-with-insults-and-verbal-abuse-for-throwing-gravel-on-the-road/ ಇದೇ ವೇಳೆ ಅಂಬೇಡ್ಕರ್ ಅವರ ಪರ ಘೋಷಣೆಗಳನ್ನ ಕೂಗಿ ಕೇಂದ್ರ ಬಿಜೆಪಿ ಪಕ್ಷದ ಪರ ಘೋಷಣೆಗಳನ್ನ ಕೂಗಿದರು. ಈ ರಥಯಾತ್ರೆ ಭರಮಸಾಗರ ಮುಖಾಂತರವಾಗಿ ದಾವಣಗೆರೆ ತಲುಪಲಿದ್ದು ನಂತರ ದಾವಣಗೆರೆ ಮುಖಾಂತರವಾಗಿ ಬೆಳಗಾವಿ ತಲುಪಲಿದೆ. ಇನ್ನೂ ಈ ಸಂದರ್ಭದಲ್ಲಿ ಮಾಜಿ ಸಂಸದ ಮುನಿಸ್ವಾಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಏ…
ರಾಮನಗರ : ರಸ್ತೆ ಮೇಲೆ ಜಲ್ಲಿಕಲ್ಲು ಹಾಕಿದ್ದಕ್ಕೆ ಮಹಿಳೆಯ ಮೇಲೆ ದರ್ಪ ತೋರಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ರಾಮನಗರದ ವಿಜಯನಗರದಲ್ಲಿ ಘಟನೆ ನಡೆದಿದ್ದು, ಮಹದೇವಮ್ಮ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಕಿರಣ್ ಸಾಗರ್ ಎಂಬಾತನ ವಿರುದ್ಧ ದರ್ಪ ತೋರಿದ್ದು, ಸಿಸಿ ಕ್ಯಾಮರಾದಲ್ಲಿ ಹಲ್ಲೆಯ ದೃಶ್ಯ ಸೆರೆಯಾಗಿದೆ. ಮಹದೇವಮ್ಮ ಅವರು ಮನೆಯ ಮೇಲ್ಭಾಗದ ಕಟ್ಟಡಕ್ಕೆ ಮೋಲ್ಡ್ ಹಾಕಲು ಜಲ್ಲಿ ತರಿಸಿದ್ದರು. ಹೀಗಾಗಿ ಮನೆಯ ಮುಂದೆ ರಸ್ತೆಯ ಮೇಲೆ ಜಲ್ಲಿ ಸುರಿಸಿದ್ದರು. https://ainkannada.com/accident-on-national-highway-near-solur-bus-driver-in-critical-condition/ ಇದರಿಂದಾಗಿ ರಸ್ತೆಯಲ್ಲಿ ಸಂಚಾರಿಸಲು ಅಡ್ಡವಾಗುತ್ತದೆ ಎಂದು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದು, ಆನಂತರ ಮನೆಯ ಮೇಲೆ ಇಟ್ಟಿಗೆ ಎಸೆದಿದ್ದಾನೆ. ಈ ಸಂಬಂಧ ರಾಮನಗರದ ಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಿರಣ್ ಸಾಗರ್, ಹೇಮಾವತಿ, ಪ್ರಿಯಾಂಕಾ ಎಂಬುವವರ ವಿರುದ್ಧ ಬಿಎನ್ ಎಸ್ 115(2), 3(5), 351(2), 352,74 ರ ಅಡಿ ಎಫ್ಐಆರ್ ದಾಖಲಿಸಲಾಗಿದೆ.
ರಾಮನಗರ: ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನವು ಪಂಕ್ಚರ್ ಆಗಿ ನಿಂತಿತ್ತು. ಈ ವೇಳೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಕ್ಯಾಂಟರ್ಗೆ ಡಿಕ್ಕಿಯಾಗಿದೆ. ಬಸ್ ಕ್ಯಾಂಟರ್ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ. https://ainkannada.com/yadgir-sp-prithvi-shankars-shock-to-betting-houses/ ಬಸ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸೋಲೂರು ಪೊಲೀಸರ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.
ವಿಜಯಪುರ : ವಿಜಯಪುರ ನಗರ ಶಾಸಕ ಯತ್ನಾಳ್ ಹತ್ಯೆಗೆ ಸ್ಕೆಚ್ ಹಾಕಲಾಗಿದೆ ಎನ್ನುವ ಆಡಿಯೋ ವೊಂದು ಭಾರೀ ವೈರಲ್ ಆಗಿತ್ತು. ಇದೀಗ ಆಡಿಯೋ ಬೆನ್ನಲ್ಲೆ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. ವಿಜಯಪುರದ ಮತ್ತೊಬ್ಬ ಯುವಕ ವಿಡಿಯೋ ಹರಿಬಿಟ್ಟಿದ್ದಾನೆ. ನಿನ್ನೆಯಷ್ಟೆ ಯತ್ನಾಳ್ ಹತ್ಯೆಗೆ ಸಂಚಿನ ಆಡಿಯೋ ವೈರಲ್ ಆಗಿ ಸಂಚಲನ ಮೂಡಿಸಿತ್ತು. ಇದೀಗ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. ಯತ್ನಾಳ್ ವಿರುದ್ಧ ಹೋರಾಟಕ್ಕೆ ಸೇರಿ, ಗುಸ್ತಾಕಿ ನಬಿ ಕಾ ಏಕ್ ಹೀ ಸಜಾ ಸರ್ ತನ್ ಸೆ ಜುದಾ ಎಂದು ವಿಜಯಪುರ ನಗರದ ಸೊಹೇಲ್ ಜರ್ತಾರ್ ಎಂಬಾತ ವಿಡಿಯೋ ಹರಿಬಿಟ್ಟಿದ್ದಾನೆ. https://ainkannada.com/conspiracy-to-murder-yatnal-audio-of-anonymous-youth-goes-viral/ ಬಿಜಾಪುರ ಫೌಂಡೇಶನ್ ಹೆಸರಿನ ಇನ್ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ನಮ್ಮ ಪ್ರವಾದಿಯನ್ನ ಟೀಕಿಸಿದನ್ನ ನಾವು ಸಹಿಸಿಕೊಳ್ಳಬಾರದು. ಎಲ್ಲ ಮುಸ್ಲಿಂರು ಒಗ್ಗಟ್ಟಾಗಬೇಕು. ಧರ್ಮಕ್ಕಾಗಿ ಎಲ್ಲರೂ ಒಂದಾಗಬೇಕು. ನಮ್ಮ ಹೋರಾಟ ಯತ್ನಾಳ್ ಎನ್ನುವ ಹುಳದ ವಿರುದ್ಧ. ಪ್ರವಾದಿಗಾಗಿ ನಮ್ಮ ಪ್ರಾಣ ಬಲಿಗಾಗಿ ಸಿದ್ಧವಿದೆ. ವಿಡಿಯೋ ಕೊನೆಗೆ ಪ್ರವಾದಿ ವಿರುದ್ಧ ಮಾತನಾಡುವವನಿಗೆ…
ತುಮಕೂರು : ರಾತ್ರೋ ರಾತ್ರಿ ಬರೊಬ್ಬರಿ 80 ಅಡಿಕೆ ಸಸಿಗಳನ್ನು ಹಾಳು ಮಾಡಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಾಗಲವಾಡಿ ಬಳಿಯ ಶಿವರಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ. 80 ಅಡಿಕೆ ಸಸಿಗಳನ್ನ ಕಳೆದುಕೊಂಡು ರೈತ ತಿರುಮಲ್ಲಯ್ಯ ಕಣ್ಣೀರು ಹಾಕುತ್ತಿದ್ದು, ಕೈ ಮುಗಿದು ನಮ್ಮನ್ನ ಕಾಪಾಡಿ ಎಂದು ಬೇಡಿಕೊಂಡಿದ್ದಾರೆ. ಒಂದೇ ರಾತ್ರಿಯಲ್ಲಿ ರೈತ ತಿರುಮಲಯ್ಯ ಅವರಿಗೆ ಸೇರಿದ 80 ಅಡಿಕೆ ಸಸಿಗಳನ್ನು ಕಡಿದು ಹಾಕಿದ್ದಾರೆ. ಈ ಹಿಂದೆಯೂ ಮೆಡಿಸಿನ್ ಸೌತೆಕಾಯಿ ಬೆಳೆಯನ್ನು ನಾಶಾ ಮಾಡಿದ್ದರು. ದೂರು ನೀಡಿದ್ದರೂ ಚೇಳೂರು ಪೊಲೀಸ್ ಠಾಣೆಯವರು ಯಾರನ್ನೂ ಬಂಧಿಸಿರಲಿಲ್ಲ. ಇತ್ತೀಚೆಗಷ್ಟೇ ನಾಲ್ಕು ಲಕ್ಷ ಸಾಲ ಮಾಡಿ ಬೋರ್ ವೆಲ್ ಮಾಸಿದ್ದರು. ಆದರೆ ಇದೀಗ ಅಡಿಕೆ ಸಸಿ ನಾಶ ಆಗಿರೋದನ್ನ ನೋಡಿ ತಿರುಮಲಯ್ಯ ಕಂಗಾಲಾಗಿದ್ದಾರೆ. https://ainkannada.com/yadgir-sp-prithvi-shankars-shock-to-betting-houses/
ಯಾದಗಿರಿ: ಇಂದಿನ ಹೈಟೆಕ್ ಯುಗದಲ್ಲಿ ಬಹುತೇಕ ಅಕ್ರಮ ದಂಧೆಗಳು ಆನ್ಲೈನ್ನಲ್ಲೇ ನಡೆಯೋದು ಹೆಚ್ಚು. ಇತ್ತೀಚೆಗೆ ಕೆಲವು ಕಾನೂನು ಬಾಹಿರವಾದ ಬೆಟ್ಟಿಂಗ್ ಆ್ಯಪ್ಗಳು ಹೆಚ್ಚು ಬಳಕೆಯಾಗುತ್ತಿವೆ. ಅದರಲ್ಲೂ ಕ್ರಿಕೆಟ್ ಬೆಟ್ಟಿಂಗ್ ಮತ್ತು ಆನ್ ಲೈನ್ ಆ್ಯಪ್ಗಳ ಹಾವಳಿ ಜೋರಾಗಿದೆ. ಈ ಹಿನ್ನೆಲೆ ಯಾದಗಿರಿ ಪೊಲೀಸರು ಕಾರ್ಯಾಚರಣೆ ನಡೆಸಿ ಆನ್ ಲೈನ್ ಆ್ಯಪ್ ಕಾರ್ಯಾಚರಣೆ ಮಾಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ಬೆಟ್ಟಿಂಗ್ ವಿರುದ್ಧ ಸಮರ ಸಾರಿರುವ ಯಾದಗಿರಿ ಜಿಲ್ಲಾ ಪೊಲೀಸರು ಇಲ್ಲಿಯವರೆಗೂ 9 ಪ್ರಕರಣಗಳನ್ನು ದಾಖಲಿಸಿಕೊಂಡು 15 ಆರೋಪಿಗಳನ್ನು ವಶಕ್ಕೆ ಪಡೆದು 41.30 ಲಕ್ಷ ರೂ. ನಗದು ಜಪ್ತಿ ಮಾಡಿಕೊಂಡಿದ್ದಾರೆ. ಕಳೆದೊಂದು ವಾರದಿಂದ ಎಸ್ಪಿ ಪೃಥ್ವಿಕ್ ಶಂಕರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆಗೆ ಇಳಿದಿರುವ ಪೊಲೀಸರು ಜಿಲ್ಲೆಯ ಶಹಾಪುರ, ಸುರಪುರ ತಾಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆ ಜೋರಾಗಿ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿ ಇತರರಿಗೆ ಎಚ್ಚರಿಕೆ ಅಸ್ತ್ರ ಪ್ರಯೋಗಿಸಿದ್ದಾರೆ. ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಗೆ ಸಂಬಂಧಿಸಿದಂತೆ 41 ಲಕ್ಷ ಹಣ…