ಚಾಮರಾಜನಗರ: ಚಾಮರಾಜನಗರ ಜಿಲ್ಲಾದ್ಯಂತ ಶುಕ್ರವಾರ ತಡರಾತ್ರಿ ಸಿಡಿಲು ಸಮೇತ ಸುರಿದ ಭಾರೀ ಮಳೆಯಾಗಿದೆ. ಚಾಮರಾಜನಗರ ನಗರಸಭೆ ವ್ಯಾಪ್ತಿಯ 15ನೇ ವಾರ್ಡಿನ ಹಲವು ಮನೆಗಳಿಗೆ ಮಳೆ ನೀರು ನುಗ್ಗಿ ರಾತ್ರಿಯಿಡೀ ಜನರು ಪರದಾಡುವಂತಾಗಿತ್ತು. ಧಾರಾಕಾರ ಮಳೆಯ ನಡುವೆ ರಾತ್ರೋ ರಾತ್ರಿ ಕ್ಚಿಪ್ರ ಕಾರ್ಯಾಚರಣೆಗೆ ಇಳಿದ ನಗರಸಭೆ ಅಧಿಕಾರಿ ಮಂಜು ನೇತೃತ್ವದಲ್ಲಿನ ಸಿಬ್ಬಂಧಿಗಳು ಮುಂದಾಗಬಹುದಾಗಿದ್ದ ಅನಾಹುತ ತಪ್ಪಿಸಿದರು. ಜೆಸಿಬಿ ಮೂಲಕ ಮನೆಯೊಳಗೆ ಶೇಖರಣೆಗೊಂಡಿದ್ದ ನೀರನ್ನು ಹೊರಹಾಕಲಾಯಿತು. ಅಲ್ಲದೆ ಚರಂಡಿಗಳನ್ನು ಸ್ವಚ್ಚಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ತ್ವರಿತಗತಿಯ ಕಾರ್ಯಾಚರಣೆ ಕೈಗೊಳ್ಳಲಾಯಿತು. ಹಾಗಾಗಿ ರಾತ್ರಿ ವೇಳೆ ಸುರಿದ ಮಳೆಯಿಂದಾಗಿ ಮುಂದಾಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಯ್ತು. https://ainkannada.com/heavy-rain-three-killed-by-lightning-in-separate-incidents/ ಶಾಟ್೯ ಸರ್ಕೂಟ್ : ಮನೆ ಹಾನಿ. ಇನ್ನೂ ತಡ ರಾತ್ರಿ ಸಿಡಿಲು ಮಳೆಗೆ ಶಾರ್ಟ್ ಸರ್ಕ್ಯೂಟ್ ಪರಿಣಾಮ ಮನೆ ಕುಸಿತಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಗ್ರಾಮದಲ್ಲಿ ನಡೆದಿದೆ. ಶಾಗ್ಯ ಗ್ರಾಮದ ಶಿವಲಿಂಗೇಗೌಡ್ರು ಎಂಬುವವರ ಮನೆ ಕುಸಿದಿದೆ.
Author: AIN Author
ಚಾಮರಾಜನಗರ : ಕಿಡಿಗೇಡಿಗಳ ಗುಂಪೊಂದು ನಾಲ್ಕು ಬೈಕ್ ಗಳು ಮತ್ತು ಒಂದು ಕಾರಿಗೆ ಬೆಂಕಿ ಇಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟನಂಜಪ್ಪ ಎಂಬುವವರ ಜಾಗದಲ್ಲಿ ದುರ್ಘಟನೆ ನಡೆದಿದೆ. ಸಿದ್ದರಾಜು ಎಂಬುವರು ಪುಟ್ನನಂಜಪ್ಪ ಎಂಬುವವರ ಖಾಲಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡು ಮರಗೆಲಸ ನಿರ್ವಹಿಸುತ್ತಿದ್ದರು. ಸಿದ್ದರಾಜುರವರಿಗೆ ಸೇರಿದ ಕಾರು ಹಾಗೂ ಬೈಕ್ಗಳಿಗೆ ಬೆಂಕಿ ಇಟ್ಟಿದ್ದು, ಸಂಪೂರ್ಣ ಸುಟ್ಟುಕರಕಲಾಗಿವೆ. https://ainkannada.com/knife-stabbing-case-brother-in-law-dies-without-treatment/ ರಾತ್ರಿ ಎಲ್ರೂ ಮಲಗಿದ್ದಾಗ ಕಿಡಿಗೇಡಿಗಳು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಿದ್ದರಾಜು ಗುಂಡ್ಲುಪೇಟೆ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೋಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
2025ರ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು, ಅಕ್ಷರಶಃ ಕಳಪೆ ಪ್ರದರ್ಶನ ತೋರುತ್ತಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯವನ್ನು ಗೆದ್ದ ನಂತರ, ಸಿಎಸ್ಕೆ ಇದುವರೆಗೆ ಮತ್ತೆ ಗೆಲುವಿನ ರುಚಿ ನೋಡಿಲ್ಲ. ಕಳೆದ ಶುಕ್ರವಾರ ಚೆನ್ನೈ ತಂಡ ಕೋಲ್ಕತ್ತಾ ಕೈಟ್ ರೈಡರ್ಸ್ ವಿರುದ್ಧ ಸೋಲು ಅನುಭವಿಸಿತ್ತು. ಇದು ಈ ಋತುವಿನಲ್ಲಿ ಚೆನ್ನೈ ತಂಡದ ಸತತ ಐದನೇ ಸೋಲು. ಸಿಎಸ್ಕೆ ಎರಡು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. https://ainkannada.com/knife-stabbing-case-brother-in-law-dies-without-treatment/ ಏತನ್ಮಧ್ಯೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ಮತ್ತು ಖಾಯಂ ನಾಯಕ ರುತುರಾಜ್ ಗಾಯಕ್ವಾಡ್ ಅವರು ತಂಡದ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಎಂಎಸ್ ಧೋನಿ ಅವರನ್ನು ಇನ್ಸ್ಟಾಗ್ರಾಮ್ನಲ್ಲಿ ಅನ್ಫಾಲೋ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ರುತುರಾಜ್ ಗಾಯಕ್ವಾಡ್ ಅವರು ಇನ್ಸ್ಟಾಗ್ರಾಮ್ನಲ್ಲಿ ಎಂಎಸ್ ಧೋನಿಯನ್ನು ಅನ್ಫಾಲೋ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಆದಾಗ್ಯೂ, ಗಾಯಕ್ವಾಡ್ ಇನ್ಸ್ಟಾಗ್ರಾಮ್ ಧೋನಿಯನ್ನು ಎಂದಿಗೂ ಫಾಲೋ ಮಾಡಿಲ್ಲ ಎಂದು ಕೆಲವರು…
ಕಲಬುರಗಿ:- ಕಲಬುರಗಿಯಲ್ಲಿ ನಿನ್ನೆ ತಾನೇ ಬಾಮೈದನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಬಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೌದು, ಹೆಂಡತಿಯನ್ನು ಮನೆಗೆ ಬಾ ಎಂದು ಕರೆದಿದ್ದಕ್ಕೆ ಬಾಮೈದನಿಂದ ಚಾಕು ಇರಿತಕ್ಕೊಳಗಾಗಿದ್ದ ಪತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. https://ainkannada.com/ipl-2025-tickets-for-bengaluru-delhi-match-sold-in-black-market-accused-caught-by-ccb/ ಆನಂದ್ ಕೊಲೆಯಾದ ವ್ಯಕ್ತಿ. ಆತ ಕಳೆದ ಎರಡು ವರ್ಷದ ಹಿಂದೆ ಗಾಜಿಪುರದ ಸ್ನೇಹಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆಯಾದ ಬಳಿಕ ಗಂಡ ಹೆಂಡತಿಯ ಮಧ್ಯೆ ಜಗಳವಾಗಿ ಪತ್ನಿ ತವರು ಮನೆ ಸೇರಿದ್ದಳು. ಆನಂದ್ ತನ್ನ ಅಣ್ಣನ ಮದುವೆ ಹಿನ್ನಲೆಯಲ್ಲಿ ಮನೆಗೆ ಬರುವಂತೆ ಸ್ನೇಹಾಳನ್ನು ಕರೆದಿದ್ದ. ಇದೇ ವಿಚಾರಕ್ಕೆ ಸ್ನೇಹಾಳ ಸಹೋದರ ಟೋನಿ ಮತ್ತು ಆತನ ಸ್ನೇಹಿತರು ಸೇರಿ ಆನಂದ್ಗೆ ಚಾಕುವಿನಿಂದ ಇರಿದಿದ್ದರು. ಬಳಿಕ ಆತನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಟ್ರಾಮ್ ಕೇರ್ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು:- ಐಪಿಎಲ್ ಮ್ಯಾಚ್ ಗಳ ಟಿಕೆಟ್ ಸಿಕ್ರೆ ಅವ್ರೆ ಪುಣ್ಯವಂತರು ಅನ್ನೊ ಹಾಗಾಗಿದೆ. ಯಾಕಂದ್ರೆ ಎಷ್ಟೇ ಕಷ್ಟ ಪಟ್ರೂ ಟಿಕೆಟ್ ಗಳು ಸಿಕ್ತಿಲ್ಲ. ಅಂತದ್ರಲ್ಲಿ ಆರ್ ಸಿಬಿ ಹಾಗೂ ದೆಹಲಿ ಐಪಿಎಲ್ ಮ್ಯಾಚ್ ನ ಟಿಕೆಟ್ ಗಳನ್ನ ದುಪ್ಪಟ್ಟು ಬೆಲೆಗೆ ಬ್ಲಾಕ್ ನಲ್ಲಿ ಮಾರಾಟ ಮಾಡುತ್ತಿದ್ದ 8 ಆರೋಪಿಗಳನ್ನ ಸಿಸಿಬಿ ಪೊಲೀಸ್ರು ಬಂಧಿಸಿದ್ದಾರೆ. https://ainkannada.com/if-you-continue-you-guarantee-action-against-you-jayamritunjaya-sri-lingayata-panchamasaali-trust-warned/ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ, ಕಬ್ಬನ್ ಪಾರ್ಕ್ ಒಳಗೆ ಟಿಕೆಟ್ ಮಾರಾಟ ಮಾಡ್ತಿದ್ದಾಗ ಸಿಸಿಬಿ ಡಿಸಿಪಿ1 ಅಕಾಯ್ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳ ಬಂಧನ ಮಾಡಲಾಗಿದೆ. ಇನ್ನೂ ಟಿಕೆಟ್ ಮಾರಾಡ ಮಾಡ್ತಿದ್ದವರನ್ನ ಹಿಡಿಯಲು ಸಿಸಿಬಿ ಪೊಲೀಸ್ರು ಆರ್ ಸಿವಿ ಫ್ಯಾನ್ಸ್ ಸೋಗಿನಲ್ಲಿ ಕಾಳ ಸಂತೆಯಲ್ಲಿ ಟಿಕೆಟ್ ಮಾರೋರನ್ನ ಹೆಡೆಮುರಿಕಟ್ಟೊದ್ದಾರೆ. ಮಪ್ತಿಯಲ್ಲಿ ಟಿಕೆಟ್ ಖರೀದಿಸುವ ನೆಪದಲ್ಲಿ ಕಾರ್ಯಾಚರಣೆ ನಡೆಸಿರೊ ಸಿಸಿಬಿ ಪೊಲೀಸ ಎಕ್ಸ್ ಕ್ಲೂಸಿವ್ ವಿಡಿಯೋ AIN ಕನ್ನಡ ಗೆ ಲಭ್ಯವಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಒಪ್ಪಿಸಿದ್ದು, ಈ ಬಗ್ಗೆ ಕಬ್ಬನ್…
ಬೆಂಗಳೂರು’:- ಬಿಜೆಪಿಯಿಂದ ಉಚ್ಚಾಟಿತರಾಗಿರುವ ಬಸನಗೌಡ ಗೌಡ ಯತ್ನಾಳ್ ಪರ ಪಂಚಮಸಾಲಿ ಶ್ರೀಗಳು ನಿಂತಿರುವುದು ವ್ಯಾಪಾಕ ಆಕ್ರೋಶಕ್ಕೆ ಕಾರಣವಾಗಿದೆ. https://ainkannada.com/muslim-waqf-protests-that-turn-into-violence-stones-on-trains/ ಸ್ವಾಮೀಜಿಯವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ಮಾತನಾಡಿದರೆ ಅವರ ವಿರುದ್ಧ ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ ನೀಡಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ನ ಸದಸ್ಯರು, ಯಾವುದೇ ರಾಜಕೀಯ ಪಕ್ಷದ ಪರವಾಗಿ, ವ್ಯಕ್ತಿ ಪರವಾಗಿ ಮಾತನಾಡದಂತೆ ಜಯಮೃತ್ಯುಂಜಯ ಸ್ವಾಮೀಜಿ ಅವರಿಗೆ ಮನವಿ ಮಾಡಿದ್ದೇವೆ. ಒಂದು ವೇಳೆ ಮಾತನಾಡಿದರೆ, ಪೀಠದಿಂದ ಸ್ವಾಮೀಜಿ ಉಚ್ಛಾಟನೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಅಂತ ಹೇಳಿದ್ದೆವು ಎಂದು ತಿಳಿಸಿದರು.. ಮುಂದಿನ ವಾರದಲ್ಲಿ ಮತ್ತೆ ಸಭೆ ನಡೆಸುತ್ತೇವೆ. ಅಷ್ಟರಲ್ಲಿ ಸ್ವಾಮೀಜಿಯವರ ವರ್ತನೆ ಬದಲಾವಣೆಯಾಗದಿದ್ದರೆ ಕ್ರಮ ಕೈಗೊಳ್ಳುತ್ತೇವೆ. ಟ್ರಸ್ಟ್ನ ನಿಯಮಗಳ ವಿರುದ್ಧ ನಡೆದುಕೊಂಡರೆ ಅವರನ್ನು ಪೀಠದಿಂದ ಕೆಳಗೆ ಇಳಿಸುವ ಅಧಿಕಾರ ಟ್ರಸ್ಟ್ಗೆ ಇದೆ ಎಂದು ಹೇಳಿದರು.
ಕೋಲ್ಕತಾ:- ಕೇಂದ್ರ ಸರ್ಕಾರದ ವಕ್ಫ್ ಕಾಯ್ದೆ ಮಸೂದೆ ವಿರೋಧಿಸಿ ಇಲ್ಲಿ ಮುಸ್ಲಿ ಮುಖಂಡರಿಂದ ಪ್ರತಿಭಟನೆ ಜರುಗಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನಿಮ್ತಿತಾ ನಿಲ್ದಾಣದಲ್ಲಿ ನಿಂತಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆ ಎರಡು ರೈಲನ್ನು ಜಖಂಗೊಳಿಸಿದ್ದಾರೆ. https://ainkannada.com/22-deaths-of-heavy-rains-announcement-of-compensation/ ಹಿಂಸಾಚಾರವನ್ನು ನಿಯಂತ್ರಿಸಲು ಗಡಿ ಭದ್ರತಾ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆದಿತ್ತು. ಸಂಜೆ ಬಳಿಕ ನಡೆದ ಪ್ರತಿಭಟನೆ ಹಿಂಸಚಾರಕ್ಕೆ ತಿರುಗಿದೆ. ಘಟನೆಯ ಹಿನ್ನೆಲೆಯಲ್ಲಿ ಕನಿಷ್ಠ ಎರಡು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ದಾಳಿಯಲ್ಲಿ ಕೆಲವು ಪ್ರಯಾಣಿಕರು ಮತ್ತು ಏಳರಿಂದ ಹತ್ತು ಪೊಲೀಸರು ಗಾಯಗೊಂಡಿದ್ದಾರೆ. ಅಲ್ಪಸಂಖ್ಯಾತರ ಪ್ರಾಬಲ್ಯ ಇರುವ ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿತಾ ಮತ್ತು ಸುಟಿಯಲ್ಲಿ ಉದ್ವಿಗ್ನತೆ ಉಂಟಾಗಿತ್ತು. ನಿಮ್ತಿತಾ ರೈಲು ನಿಲ್ದಾಣದಲ್ಲಿ, ಪ್ರತಿಭಟನಾಕಾರರು ಗಂಟೆಗಟ್ಟಲೆ ರೈಲ್ವೆ ಹಳಿಗಳನ್ನು ತಡೆದು ರೈಲ್ವೇ ಆಸ್ತಿಗಳನ್ನು ಧ್ವಂಸಗೊಳಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ರೈಲ್ವೆ ಪೊಲೀಸ್ ಪಡೆ ಸಿಬ್ಬಂದಿ ಲಾಠಿ ಪ್ರಹಾರ ನಡೆಸಬೇಕಾಯಿತು.
ಉತ್ತರ ಪ್ರದೇಶ:- ಸಿಡಿಲು ಸಹಿತ ಭಾರೀ ಆಲಿಕಲ್ಲು ಮಳೆಗೆ 15 ಜಿಲ್ಲೆಗಳಲ್ಲಿ 22 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ಜರುಗಿದೆ. https://ainkannada.com/here-are-the-people-the-gold-ring-should-not-be-worn-on-this-finger/ ಫತೇಪುರ್, ಅಜಂಗಢ ಜಿಲ್ಲೆಗಳಲ್ಲಿ ತಲಾ ಮೂವರು, ಫಿರೋಜಾಬಾದ್, ಕಾನ್ಪುರ್ ದೇಹತ್ ಮತ್ತು ಸೀತಾಪುರ್ ಜಿಲ್ಲೆಗಳಲ್ಲಿ ತಲಾ ಇಬ್ಬರು, ಗಾಜಿಪುರ, ಗೊಂಡಾ, ಅಮೇಥಿ, ಸಂತ ಕಬೀರ್ ನಗರ ಮತ್ತು ಸಿದ್ಧಾರ್ಥ್ ನಗರ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಅಗತ್ಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಮೃತರ ಕುಟುಂಬಸ್ಥರಿಗೆ 4 ಲಕ್ಷ ಪರಿಹಾರ ಮೊತ್ತವನ್ನು ತಕ್ಷಣ ವಿತರಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಬಹುತೇಕ ಜನರು ಚಿನ್ನವನ್ನು ಧರಿಸಲು ಇಷ್ಟಪಡುತ್ತಾರೆ.. ಇದು ಸೌಂದರ್ಯ, ಆರ್ಥಿಕ ಸ್ಥಿತಿಯ ಸೂಚಕ, ಉಳಿತಾಯ ಆಧಾರಿತ ಹೂಡಿಕೆಗೂ ಉಪಯುಕ್ತವಾಗಿದೆ. ಕೆಲವರಿಗೆ ಇದು ಆಧ್ಯಾತ್ಮಿಕ ವಿಷಯವಾಗಿಯೂ ಕಂಡುಬರುತ್ತದೆ. ಜ್ಯೋತಿಷ್ಯ ಪ್ರಯೋಜನಗಳನ್ನು ಪಡೆಯಲು ಚಿನ್ನದ ಉಂಗುರವನ್ನು ಧರಿಸಲು ಬಯಸುವ ಅನೇಕ ಜನರಿದ್ದಾರೆ. ಆದರೂ, ಚಿನ್ನದ ಉಂಗುರವನ್ನು ಯಾವ ಬೆರಳಿಗೆ ಧರಿಸಬೇಕು ಎನ್ನುವುದು ಕೆಲವು ಜನರಿಗೆ ಗೊತ್ತಿಲ್ಲ.. https://ainkannada.com/rain-news-heavy-rains-in-karnataka-till-17th-meteorological-department/ ಹಿಂದೂ ಧರ್ಮದಲ್ಲಿ ಚಿನ್ನವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗಿದೆ. ಚಿನ್ನವನ್ನು ಶುಭ ಸಂದರ್ಭಗಳು, ಹಬ್ಬಗಳು ಮತ್ತು ಮದುವೆಗಳಿಗೆ ಬಳಸಲಾಗುತ್ತದೆ. ಚಿನ್ನವನ್ನು ಲಕ್ಷ್ಮಿ ದೇವಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಚಿನ್ನವು ಮನೆಗೆ ಹೆಚ್ಚಿನ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ. ಚಿನ್ನ ಧರಿಸುವುದರಿಂದ ಸೂರ್ಯನ ಶಕ್ತಿ ಹೆಚ್ಚಾಗುತ್ತದೆ. ಇದು ಜೀವನದಲ್ಲಿ ಶುಭ ಯೋಗವನ್ನು ಸೃಷ್ಟಿಸಲು ಪ್ರಾರಂಭಿಸುತ್ತದೆ ಎಂಬ ನಂಬಿಕೆ ಇದೆ. ಚಿನ್ನ ಧರಿಸುವುದರಿಂದ ವ್ಯಕ್ತಿಯ ಜೀವನದಲ್ಲಿ ಧೈರ್ಯ ಮತ್ತು ದೃಢಸಂಕಲ್ಪ ಹೆಚ್ಚಾಗುತ್ತದೆ. ಆದ್ದರಿಂದ, ಜ್ಯೋತಿಷಿಗಳು ಜಾತಕದಲ್ಲಿ ಸೂರ್ಯನು ದುರ್ಬಲನಾಗಿರುವವರು ಚಿನ್ನವನ್ನು ಧರಿಸಲು ಸಲಹೆ ನೀಡುತ್ತಾರೆ. ಚಿನ್ನ ಧರಿಸುವುದರಿಂದ ದೇಹ…
ಬೆಂಗಳೂರು:- ಏ.17ರವರೆಗೂ ಕರ್ನಾಟಕದ ಹಲವೆಡೆ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/dhoni-captain-andrew-continued-csk-defeat-chennai-team-dust-in-homes/ ಅದರಂತೆ ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನೂ ನಿನ್ನೆ ಬೆಂಗಳೂರಿನ ಹೆಬ್ಬಾಳ, ರಾಜಾಜಿನಗರ, ಮತ್ತಿಕೆರೆ, ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್, ಮಲ್ಲೇಶ್ವರಂ ಹಲವೆಡೆ ವರುಣನ ಆರ್ಭಟಿಸುತ್ತಿದ್ದು, ಯಶವಂತಪುರ ಸೇರಿದಂತೆ ಕೆಲವು ಕಡೆ ತುಂತುರು ಮಳೆಯಾಗುತ್ತಿದೆ. ಇನ್ನೂ ಕೆಲವು ಕಡೆ ಮೋಡ ಕವಿದ ವಾತಾವರಣವಿದೆ.