Author: AIN Author

ಕುಂದಗೋಳ:- ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಅಯೋಗಿಸಿದ ಭಗವಾನ್ ಮಹಾವೀರ ಜಯಂತಿಯ ನಿಮಿತ್ಯವಾಗಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡಿದವರಿಗೆ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ತಾಲೂಕಿನ ಗುಡೇನಕಟ್ಟಿ ಗ್ರಾಮದ ಶ್ರೀ ಬಸವರಾಜ ಯೋಗಪ್ಪನವರ ಹಾಗೂ ಎಲ್ಲಪ್ಪ ಹೊಸೂರ ರೋಹನ್ ಪಾಟೀಲ್ ಅವರಿಗೆ ಶಾಲಾ ಹೊಂದಿಸಿ ಸನ್ಮಾನಿಸಿದ್ದರು. https://ainkannada.com/unsuccessful-treatment-newlywed-woman-dies-after-swallowing-pesticide-pills-and-being-hospitalized/ ತಹಸಿಲ್ದಾರ್ ಪರವಾಗಿ ತಾಲೂಕ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿ ಜಗದೀಶ ಕಮ್ಮಾರ್ ಸನ್ಮಾನಿಸಿದರು ಈ ಸಂದರ್ಭದಲ್ಲಿ ಎಸ್ ಕೆ ಸೌದಾಗಾರ್ ಹನುಮಂತಗೌಡ ಪಾಟೀಲ್ ಮಂಜುನಾಥ ಕರೋಶಿ ರಾಜು ಕುಶಿರಿ ವಿಶಿ ತೋಟ ದ ಜಗದೀಶ್ ಆವಾರಿ ಚೆನ್ನಪ್ಪ ಗೌಡ ಪಾಟೀಲ್ ಕಾರ್ತಿಕ್ ಯೋಗಪ್ಪನವರ ಮನೋಜ್ ಕುಮಾರ ಮಲ್ಲೇಗವಾಡ ಮಂಜುನಾಥ ಹಿರೇಮಠ ವಿಷಿ ಕುಲಕರ್ಣಿ ಯೋಗಪ್ಪ ಯೋಗಪ್ಪನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Read More

ಬೆಳಗಾವಿ:- ಬೈಲಹೊಂಗಲ‌ ತಾಲೂಕಿನ ಇಂಚಲ ಗ್ರಾಮದಲ್ಲಿ ಕೀಟನಾಶಕ ಮಾತ್ರೆಗಳನ್ನು ನುಂಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಒಬ್ಬರು ಜೀವ ಕಳೆದುಕೊಂಡಿರುವ ಘಟನೆ ಜರುಗಿದೆ. https://ainkannada.com/rain-disaster-tree-falls-on-anjaneya-temple/ 22 ವರ್ಷದ ಲಕ್ಷ್ಮಿ ಮಂಜುನಾಥ ಹೂಗಾರ ಮೃತ ಮಹಿಳೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಲಕ್ಷ್ಮಿ ಕೀಟನಾಶಕ ಮಾತ್ರೆಗಳನ್ನು ನುಂಗಿದ್ದಾಳೆ. ಇದರಿಂದ ಅಸ್ವಸ್ಥರಾಗಿದ್ದ ಅವರನ್ನು ಕುಟುಂಬಸ್ಥರು ಮೊದಲು ಬೈಲಹೊಂಗಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಹೆಚ್ಚಿನ ಚಿಕಿತ್ಸೆ ಬೇಕಿದ್ದರಿಂದ ಲಕ್ಷ್ಮಿಯನ್ನು ಅಲ್ಲಿಂದ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಕಳೆದ ಡಿಸೆಂಬರ್ 7 ರಂದು ಲಕ್ಷ್ಮಿ, ಮಂಜುನಾಥ ಹೂಗಾರ ಎನ್ನುವರನ್ನು ಮದುವೆಯಾಗಿ ಹೊಸ ಬಾಳಿಗೆ ಕಾಲಿಟ್ಟಿದ್ದರು. ಮದುವೆಯಾಗಿ ಕೇವಲ ಐದು ತಿಂಗಳುಗಳು ಆಗಿದ್ದವು. ಇದರ ನಡುವೆ ಕ್ರಿಮಿನಾಶಕದ ಮಾತ್ರೆ ಸೇವನೆ ಮಾಡಿ ಲಕ್ಷ್ಮಿ ಜೀವ ಕಳೆದುಕೊಂಡಿದ್ದಾರೆ.

Read More

ಧಾರವಾಡ:- ಕರ್ನಾಟಕದಲ್ಲಿ ಇತ್ತೀಚೆಗೆ ಧಾರಕಾರ ಮಳೆ ಸುರಿದಿದ್ದು, ಹಲವೆಡೆ ಸಾಕಷ್ಟು ಅನಾಹುತ ಸಂಭವಿಸಿದೆ. ಅದರಂತೆ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಆಂಜನೇಯನ ದೇವಸ್ಥಾನದ ಮೇಲೆ ಮರ ಬಿದ್ದ ಘಟನೆ ನಡೆದಿದೆ. https://ainkannada.com/gadag-cattle-fair-as-part-of-tontadarya-fair/ ಇಲ್ಲಿನ ಹೊಯ್ಸಳನಗರದಲ್ಲಿ ಈ ಘಟನೆ ನಡೆದಿದ್ದು, ಹನುಮಜಯಂತಿ ಮುನ್ನಾ ದಿನವೇ ಆಂಜನೇಯನ ದೇವಸ್ಥಾನದ ಮೇಲೆ ಮರ ಬಿದ್ದಿದೆ. ಆಂಜನೇಯನ ದೇವಸ್ಥಾನದ ಪಕ್ಕದಲ್ಲೇ ನಿಲ್ಲಿಸಿದ ಆಟೊ ಕೂಡ ಜಖಂ ಆಗಿದೆ. ಮಳೆ, ಗಾಳಿಗೆ ಬುಡ ಸಮೇತ ಮರ ಉರುಳಿ ಬಿದ್ದಿದೆ. ನಾಳೆ ಈ ದೇವಸ್ಥಾನದಲ್ಲಿ ಹನುಮಜಯಂತಿ ಕಾರ್ಯಕ್ರಮ ನಡೆಯಬೇಕಿತ್ತು. ಹನುಮಜಯಂತಿ ಮುನ್ನಾ ದಿನವೇ ಈ ಅವಘಡ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರ ಬಿದ್ದಿದ್ದರಿಂದ ದೇವಸ್ಥಾನದ ಹಿಂಭಾಗ ಮಾತ್ರ ಸ್ವಲ್ಪ ಡ್ಯಾಮೇಜ್ ಆಗಿದೆ ಎನ್ನಸಲಾಗಿದೆ.

Read More

ಗದಗ:- ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ಜಾತ್ರಾ ಮಹೋತ್ಸವದ ಅಂಗವಾಗಿ ಜಾನುವಾರುಗಳ ಮೇಳ ನಡೆಯಿತು. ಗದಗ ಜಿಲ್ಲೆಯ ವಿವಿಧ ಭಾಗಗಳ ರೈತರು ತಮ್ಮ ಜಾನುವಾರುಗಳನ್ನ ಮೇಳದಲ್ಲಿ ಪ್ರದರ್ಶನ ಮಾಡಿದ್ರು. https://ainkannada.com/three-arrested-for-defrauding-a-bank-by-issuing-a-fake-court-order/ ಜವಾರಿ ಹಸು, ಜರ್ಸಿ, ಎಚ್ ಎಫ್ ತಳಿ ಹಸು, ಮುರ್ರಾ ಎಮ್ಮೆ, ಧಾರವಾಡಿ, ಫಂಡರಾಪುರಿ ಎಮ್ಮೆ ಸೇರಿದಂತೆ ವಿವಿಧ ತಳಿಯ ಜಾನುವಾರುಗಳು ಮೇಳದಲ್ಲಿ ಪಾಲ್ಗೊಂಡಿದ್ದವು. ಉಳುಮೆಗೆ ಯೋಗ್ಯವಾದ ಹಸುಗಳು ಹಾಲು ಕರೆಯುವ ಹಸುಗಳ ಬಗ್ಗೆ ಮೇಳದಲ್ಲಿ ಮಾಹಿತಿ ನೀಡಲಾಯಿತು. ನೂರಾರು ರೈತರು ಜಾನುವಾರು ಮೇಳದಲ್ಲಿ ಪಾಲ್ಗೊಂಡು ಜಾನುವಾರುಗಳ ಬಗ್ಗೆ ಮಾಹಿತಿಯನ್ನ ಪಡೆದುಕೊಂಡರು. ಬಿಸಿಎ ಪದವೀಧರ ರೈತ ನಿತಿನ್ ಒಳ್ಳೋಳ್ಳೆ ಕೆಲಸದ ಅವಕಾಶ ಬಿಟ್ಟು ಹೈನುಗಾರಿಕೆಯಲ್ಲಿ ತಮ್ಮನ್ನ ತೊಡಗಿಸಿಕೊಂಡಿದ್ದು ಪ್ರೀತಿಯಿಂದ ಹೈನುಗಾರಿಕೆ ಮಾಡಿ ಲಾಭ ಪಡೆಯಬಹುದು ಎಂದರು.

Read More

ಬೆಂಗಳೂರು:- ಸರ್ಕಾರಿ ಇಮೇಲ್​​ ಐಡಿ ಬಳಸಿ, ನಕಲಿ ಕೊರ್ಟ್ ಆದೇಶ ಕಳುಹಿಸಿ ಬ್ಯಾಂಕ್​ಗೆ 1 ಕೋಟಿ ರೂ. ವಂಚನೆ ಎಸಗಿದ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. https://ainkannada.com/40-commission-during-bjp-tenure-cabinet-meeting-decides-to-form-sit-to-investigate/ ಬಂಧಿತರನ್ನು ಸಾಗರ್ ಲಕೂರಾ, ನೀರಜ್ ಸಿಂಗ್, ಅಭಿಮನ್ಯು ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬ್ಯಾಂಕ್​ನಲ್ಲಿ ಫ್ರೀಜ್ ಆಗಿರುವ ಖಾತೆ ರಿಲೀಸ್ ಮಾಡುವ ರೀತಿಯಲ್ಲಿ ನಕಲಿ ಕೋರ್ಟ್ ಆದೇಶ​ ತಯಾರು ಮಾಡಿದ್ದರು. ಬಳಿಕ ಬ್ಯಾಂಕ್​ಗೆ ಕಳುಹಿಸಿಸಿ ಹಣ ರಿಲೀಸ್ ಮಾಡುವಂತೆ ಹೇಳುತ್ತಿದ್ದರು. ಬ್ಯಾಂಕ್​ನ ಸಿಬ್ಬಂದಿ ಪರಿಶೀಲನೆ ನಡೆಸಲು ಕರೆ ಮಾಡಿದಾಗಲೂ ಇವರು ಸುಳ್ಳು ಮಾಹಿತಿ ನೀಡುತ್ತಿದ್ದರು. ಇದೇ ರೀತಿ ಒಟ್ಟು 18 ನಕಲಿ ಕೋರ್ಟ್ ಆದೇಶಗಳನ್ನು ಆರೋಪಿಗಳು ಬ್ಯಾಂಕ್​ಗೆ ನೀಡಿದ್ದಾರೆ. ನಕಲಿ ಆದೇಶಗಳ ಮೂಲಕ 1.23 ಕೋಟಿ ರೂ. ವಂಚಿಸಿದ್ದಾರೆ. ತನಿಖೆ ವೇಳೆ ಪೊಲೀಸರು 62 ಲಕ್ಷ ರೂ. ಹಣವನ್ನು ಆರೋಪಿಗಳ ಬ್ಯಾಂಕ್ ಖಾತೆಯಲ್ಲಿ ಫ್ರೀಜ್ ಮಾಡಿದ್ದಾರೆ

Read More

ಬೆಂಗಳೂರು, ಏಪ್ರಿಲ್ 11: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ ನೇತೃತ್ವದ ವಿಚಾರಣಾ ಆಯೋಗದ ವರದಿಯನ್ನು ಆಧರಿಸಿ ಹೆಚ್ಚಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಎರಡು ತಿಂಗಳೊಳಗಾಗಿ ತನ್ನ ವರದಿಯನ್ನು ನೀಡಲು ಸೂಚಿಸುವುದಾಗಿ ಕಾನೂನು ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು ತಿಳಿಸಿದರು. https://ainkannada.com/prahlad-joshi-congress-is-shedding-crocodile-tears-for-the-dalit-vote-bank-joshi-attacks/ ಅವರು ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್.ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಟಿ ನಡೆಸಿ ಸಚಿವ ಸಂಪುಟ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ತನ್ನ ವರದಿಯನ್ನು ಸಲ್ಲಿಸಿದ್ದು, ಸಚಿವ ಸಂಪುಟದಲ್ಲಿ ಈ ಬಗ್ಗೆ…

Read More

ಬೆಂಗಳೂರು:- ದಲಿತರ ವೋಟ್‌ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮೊಸಳೆ ಕಣ್ಣೀರಿಡುತ್ತಿದೆ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. https://ainkannada.com/thunderstorms-in-many-districts-of-karnataka-meteorological-department/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಹೆಜ್ಜೆ ಹೆಜ್ಜೆಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರನ್ನು ಅವಮಾನಿಸುತ್ತಲೇ ಬಂದಿದೆ. ಅಂಬೇಡ್ಕರ್‌ ಗೆದ್ದಂತಹ ಹಿಂದೂ ಪ್ರಾಬಲ್ಯದ ಕ್ಷೇತ್ರಗಳನ್ನೇ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಂತಹ ದುರುಳ ನೀತಿ ತೋರಿದವರು ಕಾಂಗ್ರೆಸ್ಸಿಗರು. ಅವರು ಈಗ ದಲಿತರ ವೋಟ್‌ ಬ್ಯಾಂಕ್‌ಗಾಗಿ ಮೊಸಳೆ ಕಣ್ಣೀರಿಡುತ್ತಿದ್ದಾರೆ ಎಂದರು. ಅಂಬೇಡ್ಕರ್‌ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಲೆಂದೇ ಕಾಂಗ್ರೆಸ್‌ ಅಂದು ಅಂಬೇಡ್ಕರ್‌ ಗೆದ್ದಂತಹ ಜೈಸೂರು, ಕುಲ್ಲಾ, ಹರೀದ್ಪುರ ಪ್ರದೇಶಗಳನ್ನು ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿತು ಎಂದು ಗಂಭೀರ ಆರೋಪ ಮಾಡಿದ್ದಾರೆ. ದೇಶಕ್ಕೆ ಒಂದು ಸಂವಿಧಾನದ ಸುಭದ್ರ ಚೌಕಟ್ಟು ನಿರ್ಮಿಸಿಕೊಟ್ಟಂತಹ ಮಹಾನ್‌ ನಾಯಕ ಅಂಬೇಡ್ಕರ್‌ ಅವರಿಗೆ ಕಾಂಗ್ರೆಸ್‌ ಪಕ್ಷ ಸ್ವತಂತ್ರ ಪೂರ್ವದಿಂದಲೂ ಮಹಾ ಅವಮಾನಗಳನ್ನೇ ಮಾಡುತ್ತಾ ಬಂದಿದೆ. ಗಾಂಧಿ, ನೆಹರು ಕಾಲದಿಂದ ಇಲ್ಲಿವರೆಗೂ ಇದು ಮುಂದುವರಿದೇ ಇದೆ. ಪ್ರಸ್ತುತ ಭೀಮ ಹೆಜ್ಜೆ ಶತಮಾನ ಸಂಭ್ರಮ ಆಚರಿಸದ ರಾಜ್ಯ ಕಾಂಗ್ರೆಸ್‌ ಸರ್ಕಾರದ…

Read More

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/this-is-the-new-wave-of-cyber-fraudsters-a-must-read-story-for-mobile-users/ ಚಿತ್ರದುರ್ಗ, ಧಾರವಾಡ, ಗದಗದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತೆ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು,…

Read More

ಇತ್ತೀಚಿನ ವರ್ಷಗಳಲ್ಲಿ ಯಾವುದನ್ನಾದರೂ ಬಿಡಬಹುದು ಆದರೆ ಮೊಬೈಲ್ ಫೋನ್ ಗಳನ್ನು ಬಿಡಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಒಂದು ರೀತಿಯಲ್ಲಿ, ನಮ್ಮ ಜೀವನವನ್ನು ಸುಲಭ, ವೇಗ ಮತ್ತು ಅನುಕೂಲಕರವಾಗಿಸಿದೆ. ಸ್ನೇಹಿತರೊಂದಿಗೆ ಸಂಪರ್ಕದಲ್ಲಿರಲು, ಪ್ರಪಂಚದ ಮಾಹಿತಿ ಪಡೆಯಲು ಅಥವಾ ಯಾವುದೇ ಕೆಲಸವನ್ನು ತಕ್ಷಣ ಪೂರ್ಣಗೊಳಿಸಲು, ದೈನಂದಿನ ಅಗತ್ಯಗಳನ್ನು ಪೂರೈಸಲು ಅತ್ಯಂತ ಸಹಕಾರಿಯಾಗಿದೆ. ಇದರ ಮೂಲಕ ಇಂಟರ್ನೆಟ್ ಜೊತೆಗೆ ಅನೇಕ ಅಪ್ಲಿಕೇಶನ್ ಗಳನ್ನು ಬಳಸಿಕೊಂಡು ನಮಗೆ ಅಗತ್ಯವಿರುವ ಮಾಹಿತಿಯನ್ನು ನಾವು ಎಲ್ಲಿಯಾದರೂ, ಯಾವಾಗ ಬೇಕಾದರೂ ಪಡೆದುಕೊಳ್ಳಬಹುದಾಗಿದೆ, ಪೊಲೀಸರು ಹೇಳುವ ಪ್ರಕಾರ ಡಾಟಾ ಕಳ್ಳತನವಾದ ಎಷ್ಟೋ ದಿನಗಳ ನಂತರ ಅದು ನಿಮ್ಮ ಅರಿವಿಗೆ ಬರುತ್ತದೆ. ಆದ್ರೆ ಹೇಗೆ, ಎಲ್ಲಿ ಆಯ್ತು ಅನ್ನೋದು ನಿಮಗೆ ಗೊತ್ತಿರೋದಿಲ್ಲ. ಬಹುತೇಕ ಇಂತಹ ಸ್ಥಳಗಳಲ್ಲಿ ಡಾಟಾ ಕಳುವಾಗುವ ಸಾಧ್ಯತೆ ಹೆಚ್ಚು ಎಂದು ಸಾರ್ವಜನಿಕರಲ್ಲಿ ಸೈಬರ್​ ಜಾಗೃತಿ ಮೂಡಿಸಲು ಪೊಲೀಸರು ಮುಂದಾಗಿದ್ದಾರೆ. https://ainkannada.com/apmc-secretary-falls-into-lokas-trap-while-accepting-bribe/ ಸಾಕಷ್ಟು ಜನರ ಮೊಬೈಲ್ ಬ್ಯಾಟರಿ ಖಾಲಿ ಆಗುತ್ತದೆ ಎಂದು ಸಾರ್ವಜನಿಕ ಸ್ಥಳಗಳಲ್ಲಿ ಫ್ರೀ ಚಾರ್ಜ್​ ಹಾಕಿಕೊಂಡು ಬ್ಯಾಟರಿ…

Read More

ವಾಸ್ತು ಶಾಸ್ತ್ರದ ಪ್ರಕಾರ, ಜನರ ಮನೆಗಳಲ್ಲಿ ಇರಿಸಲಾದ ವಸ್ತುಗಳು ಅವರ ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತವೆ. ಮನೆಯಲ್ಲಿನ ವಸ್ತುಗಳ ದಿಕ್ಕು, ಅವುಗಳನ್ನು ಇಡುವ ವಿಧಾನ ಮತ್ತು ಬಣ್ಣವು ವ್ಯಕ್ತಿಯ ಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ವಸ್ತುಗಳ ಬಣ್ಣವು ಜನರ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ. ಮನೆಯನ್ನು ತಾಜಾವಾಗಿಡಲು ಮತ್ತು ಆರೋಗ್ಯಕರ ಜೀವನವನ್ನು ನಡೆಸಲು, ವಾಸ್ತು ಬಣ್ಣಗಳ ಸರಿಯಾದ ಸಮತೋಲನವನ್ನು ಹೊಂದಿರುವುದು ಮುಖ್ಯ. ಮಲಗುವ ಕೋಣೆ, ಅಡುಗೆಮನೆ ಮತ್ತು ಬಾಲ್ಕನಿ ಸೇರಿದಂತೆ ಸ್ನಾನಗೃಹದಲ್ಲಿ ವಾಸ್ತು ನಿಯಮಗಳನ್ನು ಅನುಸರಿಸುವುದು ಬಹಳ ಮುಖ್ಯ. ಸ್ನಾನಗೃಹದಲ್ಲಿ ಸರಿಯಾದ ಬಣ್ಣದ ವಸ್ತುಗಳನ್ನು ಇಡದಿರುವುದು ಮನೆಯಲ್ಲಿ ನಕಾರಾತ್ಮಕತೆಯನ್ನು ಹರಡಬಹುದು ಮತ್ತು ಜನರು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. https://ainkannada.com/argument-between-shreyas-iyer-and-khaleel-ahmed-do-you-know-why/ ಮನೆಯಲ್ಲಿ ಸಕರಾತ್ಮಕ ಶಕ್ತಿ ಹೆಚ್ಚಾಗಲು ಮನೆಯಲ್ಲಿ ಇರುವ ವಸ್ತುಗಳು ಕಾರಣವಾಗುತ್ತವೆ ಎಂದು ವಾಸ್ತ್ರು ಶಾಸ್ತ್ರದಲ್ಲಿ ಹೇಳಲಾಗಿದೆ. ವಿಶೇಷವಾಗಿ ಕೆಲ ಬಣ್ಣ ಮನೆಯಲ್ಲಿ ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಸ್ನಾನದ ಮನೆ ಕೂಡ ವಾಸ್ತು ಶಾಸ್ತ್ರಕ್ಕೆ ಹೊರತಾಗಿಲ್ಲ. ಸ್ನಾನದಮನೆಯಲ್ಲಿ ನೀಲಿ…

Read More