ಬೆಂಗಳೂರು:- ಸರ್ಕಾರಿ ಇಮೇಲ್ ಐಡಿ ಬಳಸಿ, ನಕಲಿ ಕೊರ್ಟ್ ಆದೇಶ ಕಳುಹಿಸಿ ಬ್ಯಾಂಕ್ಗೆ 1 ಕೋಟಿ ರೂ. ವಂಚನೆ ಎಸಗಿದ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. https://ainkannada.com/40-commission-during-bjp-tenure-cabinet-meeting-decides-to-form-sit-to-investigate/ ಬಂಧಿತರನ್ನು ಸಾಗರ್ ಲಕೂರಾ, ನೀರಜ್ ಸಿಂಗ್, ಅಭಿಮನ್ಯು ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬ್ಯಾಂಕ್ನಲ್ಲಿ ಫ್ರೀಜ್ ಆಗಿರುವ ಖಾತೆ ರಿಲೀಸ್ ಮಾಡುವ ರೀತಿಯಲ್ಲಿ ನಕಲಿ ಕೋರ್ಟ್ ಆದೇಶ ತಯಾರು ಮಾಡಿದ್ದರು. ಬಳಿಕ ಬ್ಯಾಂಕ್ಗೆ ಕಳುಹಿಸಿಸಿ ಹಣ ರಿಲೀಸ್ ಮಾಡುವಂತೆ ಹೇಳುತ್ತಿದ್ದರು. ಬ್ಯಾಂಕ್ನ ಸಿಬ್ಬಂದಿ ಪರಿಶೀಲನೆ ನಡೆಸಲು ಕರೆ ಮಾಡಿದಾಗಲೂ ಇವರು ಸುಳ್ಳು ಮಾಹಿತಿ ನೀಡುತ್ತಿದ್ದರು. ಇದೇ ರೀತಿ ಒಟ್ಟು 18 ನಕಲಿ ಕೋರ್ಟ್ ಆದೇಶಗಳನ್ನು ಆರೋಪಿಗಳು ಬ್ಯಾಂಕ್ಗೆ ನೀಡಿದ್ದಾರೆ. ನಕಲಿ ಆದೇಶಗಳ ಮೂಲಕ 1.23 ಕೋಟಿ ರೂ. ವಂಚಿಸಿದ್ದಾರೆ. ತನಿಖೆ ವೇಳೆ ಪೊಲೀಸರು 62 ಲಕ್ಷ ರೂ. ಹಣವನ್ನು ಆರೋಪಿಗಳ ಬ್ಯಾಂಕ್ ಖಾತೆಯಲ್ಲಿ ಫ್ರೀಜ್ ಮಾಡಿದ್ದಾರೆ
Author: AIN Author
ಬೆಂಗಳೂರು, ಏಪ್ರಿಲ್ 11: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ದಾಸ್ ಅವರ ನೇತೃತ್ವದ ವಿಚಾರಣಾ ಆಯೋಗದ ವರದಿಯನ್ನು ಆಧರಿಸಿ ಹೆಚ್ಚಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಎರಡು ತಿಂಗಳೊಳಗಾಗಿ ತನ್ನ ವರದಿಯನ್ನು ನೀಡಲು ಸೂಚಿಸುವುದಾಗಿ ಕಾನೂನು ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು ತಿಳಿಸಿದರು. https://ainkannada.com/prahlad-joshi-congress-is-shedding-crocodile-tears-for-the-dalit-vote-bank-joshi-attacks/ ಅವರು ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್.ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಟಿ ನಡೆಸಿ ಸಚಿವ ಸಂಪುಟ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ತನ್ನ ವರದಿಯನ್ನು ಸಲ್ಲಿಸಿದ್ದು, ಸಚಿವ ಸಂಪುಟದಲ್ಲಿ ಈ ಬಗ್ಗೆ…
ಬೆಂಗಳೂರು:- ದಲಿತರ ವೋಟ್ ಬ್ಯಾಂಕ್ಗಾಗಿ ಕಾಂಗ್ರೆಸ್ ಮೊಸಳೆ ಕಣ್ಣೀರಿಡುತ್ತಿದೆ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. https://ainkannada.com/thunderstorms-in-many-districts-of-karnataka-meteorological-department/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹೆಜ್ಜೆ ಹೆಜ್ಜೆಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಅವಮಾನಿಸುತ್ತಲೇ ಬಂದಿದೆ. ಅಂಬೇಡ್ಕರ್ ಗೆದ್ದಂತಹ ಹಿಂದೂ ಪ್ರಾಬಲ್ಯದ ಕ್ಷೇತ್ರಗಳನ್ನೇ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಂತಹ ದುರುಳ ನೀತಿ ತೋರಿದವರು ಕಾಂಗ್ರೆಸ್ಸಿಗರು. ಅವರು ಈಗ ದಲಿತರ ವೋಟ್ ಬ್ಯಾಂಕ್ಗಾಗಿ ಮೊಸಳೆ ಕಣ್ಣೀರಿಡುತ್ತಿದ್ದಾರೆ ಎಂದರು. ಅಂಬೇಡ್ಕರ್ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಲೆಂದೇ ಕಾಂಗ್ರೆಸ್ ಅಂದು ಅಂಬೇಡ್ಕರ್ ಗೆದ್ದಂತಹ ಜೈಸೂರು, ಕುಲ್ಲಾ, ಹರೀದ್ಪುರ ಪ್ರದೇಶಗಳನ್ನು ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿತು ಎಂದು ಗಂಭೀರ ಆರೋಪ ಮಾಡಿದ್ದಾರೆ. ದೇಶಕ್ಕೆ ಒಂದು ಸಂವಿಧಾನದ ಸುಭದ್ರ ಚೌಕಟ್ಟು ನಿರ್ಮಿಸಿಕೊಟ್ಟಂತಹ ಮಹಾನ್ ನಾಯಕ ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಪಕ್ಷ ಸ್ವತಂತ್ರ ಪೂರ್ವದಿಂದಲೂ ಮಹಾ ಅವಮಾನಗಳನ್ನೇ ಮಾಡುತ್ತಾ ಬಂದಿದೆ. ಗಾಂಧಿ, ನೆಹರು ಕಾಲದಿಂದ ಇಲ್ಲಿವರೆಗೂ ಇದು ಮುಂದುವರಿದೇ ಇದೆ. ಪ್ರಸ್ತುತ ಭೀಮ ಹೆಜ್ಜೆ ಶತಮಾನ ಸಂಭ್ರಮ ಆಚರಿಸದ ರಾಜ್ಯ ಕಾಂಗ್ರೆಸ್ ಸರ್ಕಾರದ…
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/this-is-the-new-wave-of-cyber-fraudsters-a-must-read-story-for-mobile-users/ ಚಿತ್ರದುರ್ಗ, ಧಾರವಾಡ, ಗದಗದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತೆ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು,…
ಇತ್ತೀಚಿನ ವರ್ಷಗಳಲ್ಲಿ ಯಾವುದನ್ನಾದರೂ ಬಿಡಬಹುದು ಆದರೆ ಮೊಬೈಲ್ ಫೋನ್ ಗಳನ್ನು ಬಿಡಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಒಂದು ರೀತಿಯಲ್ಲಿ, ನಮ್ಮ ಜೀವನವನ್ನು ಸುಲಭ, ವೇಗ ಮತ್ತು ಅನುಕೂಲಕರವಾಗಿಸಿದೆ. ಸ್ನೇಹಿತರೊಂದಿಗೆ ಸಂಪರ್ಕದಲ್ಲಿರಲು, ಪ್ರಪಂಚದ ಮಾಹಿತಿ ಪಡೆಯಲು ಅಥವಾ ಯಾವುದೇ ಕೆಲಸವನ್ನು ತಕ್ಷಣ ಪೂರ್ಣಗೊಳಿಸಲು, ದೈನಂದಿನ ಅಗತ್ಯಗಳನ್ನು ಪೂರೈಸಲು ಅತ್ಯಂತ ಸಹಕಾರಿಯಾಗಿದೆ. ಇದರ ಮೂಲಕ ಇಂಟರ್ನೆಟ್ ಜೊತೆಗೆ ಅನೇಕ ಅಪ್ಲಿಕೇಶನ್ ಗಳನ್ನು ಬಳಸಿಕೊಂಡು ನಮಗೆ ಅಗತ್ಯವಿರುವ ಮಾಹಿತಿಯನ್ನು ನಾವು ಎಲ್ಲಿಯಾದರೂ, ಯಾವಾಗ ಬೇಕಾದರೂ ಪಡೆದುಕೊಳ್ಳಬಹುದಾಗಿದೆ, ಪೊಲೀಸರು ಹೇಳುವ ಪ್ರಕಾರ ಡಾಟಾ ಕಳ್ಳತನವಾದ ಎಷ್ಟೋ ದಿನಗಳ ನಂತರ ಅದು ನಿಮ್ಮ ಅರಿವಿಗೆ ಬರುತ್ತದೆ. ಆದ್ರೆ ಹೇಗೆ, ಎಲ್ಲಿ ಆಯ್ತು ಅನ್ನೋದು ನಿಮಗೆ ಗೊತ್ತಿರೋದಿಲ್ಲ. ಬಹುತೇಕ ಇಂತಹ ಸ್ಥಳಗಳಲ್ಲಿ ಡಾಟಾ ಕಳುವಾಗುವ ಸಾಧ್ಯತೆ ಹೆಚ್ಚು ಎಂದು ಸಾರ್ವಜನಿಕರಲ್ಲಿ ಸೈಬರ್ ಜಾಗೃತಿ ಮೂಡಿಸಲು ಪೊಲೀಸರು ಮುಂದಾಗಿದ್ದಾರೆ. https://ainkannada.com/apmc-secretary-falls-into-lokas-trap-while-accepting-bribe/ ಸಾಕಷ್ಟು ಜನರ ಮೊಬೈಲ್ ಬ್ಯಾಟರಿ ಖಾಲಿ ಆಗುತ್ತದೆ ಎಂದು ಸಾರ್ವಜನಿಕ ಸ್ಥಳಗಳಲ್ಲಿ ಫ್ರೀ ಚಾರ್ಜ್ ಹಾಕಿಕೊಂಡು ಬ್ಯಾಟರಿ…
ವಾಸ್ತು ಶಾಸ್ತ್ರದ ಪ್ರಕಾರ, ಜನರ ಮನೆಗಳಲ್ಲಿ ಇರಿಸಲಾದ ವಸ್ತುಗಳು ಅವರ ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತವೆ. ಮನೆಯಲ್ಲಿನ ವಸ್ತುಗಳ ದಿಕ್ಕು, ಅವುಗಳನ್ನು ಇಡುವ ವಿಧಾನ ಮತ್ತು ಬಣ್ಣವು ವ್ಯಕ್ತಿಯ ಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ವಸ್ತುಗಳ ಬಣ್ಣವು ಜನರ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ. ಮನೆಯನ್ನು ತಾಜಾವಾಗಿಡಲು ಮತ್ತು ಆರೋಗ್ಯಕರ ಜೀವನವನ್ನು ನಡೆಸಲು, ವಾಸ್ತು ಬಣ್ಣಗಳ ಸರಿಯಾದ ಸಮತೋಲನವನ್ನು ಹೊಂದಿರುವುದು ಮುಖ್ಯ. ಮಲಗುವ ಕೋಣೆ, ಅಡುಗೆಮನೆ ಮತ್ತು ಬಾಲ್ಕನಿ ಸೇರಿದಂತೆ ಸ್ನಾನಗೃಹದಲ್ಲಿ ವಾಸ್ತು ನಿಯಮಗಳನ್ನು ಅನುಸರಿಸುವುದು ಬಹಳ ಮುಖ್ಯ. ಸ್ನಾನಗೃಹದಲ್ಲಿ ಸರಿಯಾದ ಬಣ್ಣದ ವಸ್ತುಗಳನ್ನು ಇಡದಿರುವುದು ಮನೆಯಲ್ಲಿ ನಕಾರಾತ್ಮಕತೆಯನ್ನು ಹರಡಬಹುದು ಮತ್ತು ಜನರು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. https://ainkannada.com/argument-between-shreyas-iyer-and-khaleel-ahmed-do-you-know-why/ ಮನೆಯಲ್ಲಿ ಸಕರಾತ್ಮಕ ಶಕ್ತಿ ಹೆಚ್ಚಾಗಲು ಮನೆಯಲ್ಲಿ ಇರುವ ವಸ್ತುಗಳು ಕಾರಣವಾಗುತ್ತವೆ ಎಂದು ವಾಸ್ತ್ರು ಶಾಸ್ತ್ರದಲ್ಲಿ ಹೇಳಲಾಗಿದೆ. ವಿಶೇಷವಾಗಿ ಕೆಲ ಬಣ್ಣ ಮನೆಯಲ್ಲಿ ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಸ್ನಾನದ ಮನೆ ಕೂಡ ವಾಸ್ತು ಶಾಸ್ತ್ರಕ್ಕೆ ಹೊರತಾಗಿಲ್ಲ. ಸ್ನಾನದಮನೆಯಲ್ಲಿ ನೀಲಿ…
ರಾಮನಗರ : ಲಂಚ ಪಡೆಯುತ್ತಿರುವಾಗಲೇ ಎಪಿಎಂಸಿ ಕಾರ್ಯದರ್ಶಿ ಹಾಗೂ ಸೆಕ್ಯುರಿಟಿ ಗಾರ್ಡ್ ಲೋಕಯುಕ್ತ ಬಲೆಗೆ ಬಿದಿದ್ದಾರೆ. ಚನ್ನಪಟ್ಟಣ ಎಪಿಎಂಸಿ ಕಾರ್ಯದರ್ಶಿ ಶಶಿಕಲಾ ಹಾಗೂ ಸೆಕ್ಯುರಿಟಿ ಗಾರ್ಡ್ ಕೃಷ್ಣಮೂರ್ತಿ ಲಂಚ ಪಡೆಯುತ್ತಿರುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ. https://ainkannada.com/allegations-of-irregularities-at-mandyas-nirmiti-kendra-complaint-filed-with-lokayukta/ ಡಿವೈಎಸ್ ಪಿ ಶಿವಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ರೆಹಮತ್ ಅಲಿ ಎಂಬುವವರಿಗೆ ಮಾರುಕಟ್ಟೆಯಲ್ಲಿ ಮಾವಿನ ಮಂಡಿಗೆ ಲೈನನ್ಸ್ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದರು. 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾರ್ಯದರ್ಶಿ, 15 ಸಾವಿರ ಲಂಚ ಪಡೆಯುವಾಗ ಲೋಕ ಬಲೆಗೆ ಬಿದಿದ್ದಾರೆ.
ತುಮಕೂರು : ಇಂಟರ್ ನ್ಯಾಷನಲ್ ಏರ್ ಪೋರ್ಟ್ ವಿಚಾರವಾಗಿ ಎಂಬಿ ಪಾಟೀಲ್ ಅವರ ಹೇಳಿಕೆಗೆ ತಿರುಗೇಟು ನೀಡಿದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ತಿರುಗೇಟು ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಎಂಬಿ ಪಾಟೀಲ್ ಮಾತ್ರ ಸಚಿವರಲ್ಲಾ, ಇನ್ನೂ ಹಲವು ಸಚಿವರಿದ್ದಾರೆ, ಶಾಸಕರಿದ್ದಾರೆ. ಆತ್ಮೀಯರಾದ ಎಂಬಿ ಪಾಟೀಲ್ ರಿಗೆ ಮನವಿ ಮಾಡುತ್ತೇನೆ. ಒಮ್ಮೆ ಶಿರಾದಲ್ಲಿ ಬಂದು ಇಳಿದು ನೋಡಿ. ಯಾವ ಹೂಡಿಕೆದಾರರು ಒಪ್ಪುತ್ತಾರೆ ಇಲ್ಲಾ ನೋಡೋಣ. ತುಮಕೂರಿನಲ್ಲಿ ಏರ್ಪೋರ್ಟ್ ಆದರೆ ತುಮಕೂರು ಚಿತ್ರದುರ್ಗಕ್ಕೆ ಮಾತ್ರ ಅನುಕೂಲವಾಗಲಿದೆ. ಹೂಡಿಕೆದಾರರು ಬರೋದಿಲ್ಲ ಅಂದ್ರೆ ಏನು ಅರ್ಥ, 2033 ಕ್ಕೆ ಏನಾಗುತ್ತೆ..?, ಅಲ್ಲಿವರೆಗೆ ಶಿರಾ, ವಸಂತ ನರಸಾಪುರದಲ್ಲಿರುವ ಲ್ಯಾಂಡ್ ಖಾಲಿ ಇರಲು ಸಾಧ್ಯವೇ..? ಎಂದು ಪ್ರಶ್ನಿಸಿದ್ದಾರೆ. https://ainkannada.com/2nd-airport-in-bidadi-home-minister-says-he-doesnt-know-whose-pressure-this-is/ ಬೆಂಗಳೂರಿಗೆ ತುಮಕೂರಿಗೆ ವ್ಯತ್ಯಾಸ ಇಲ್ಲಾ, ಹಾಗೇಯೇ ತುಮಕೂರು ಸಿರಾಕ್ಕೂ ವ್ಯತ್ಯಾಸವಿಲ್ಲ. ಶಿರಾ ಸೂಕ್ತವಾದ ಜಾಗವಾಗಲಿದೆ. ಅಭಿವೃದ್ದಿಯಿಂದ ವಂಚಿತವಾಗಿರುವ ಉತ್ತರ ಕರ್ನಾಟಕ ಭಾಗವನ್ನ ಕಳಕಳಿಯಿಂದ ಮಾತನಾಡುತ್ತಿದ್ದೇನೆ. ನಾನು ಸಚಿವನಾಗಿದ್ದಾಗ ಫುಡ್ ಪಾರ್ಕ್ಗಳನ್ನ ಮಾಡಿದೆ. ಇನ್ವೆಸ್ಟರ್ ಬಂದು ಪುಡ್…
ಮಂಡ್ಯ: ಮಂಡ್ಯದ ನಿರ್ಮಿತಿ ಕೇಂದ್ರದಲ್ಲಿ ಪದೇ ಪದೇ ಗಂಭೀರ ಆರೋಪಗಳು ಕೇಳಿ ಬರ್ತಿವೆ. ನಿರ್ಮಿತಿ ಕೇಂದ್ರದ ಅಧಿಕಾರಿಗಳು ನಕಲಿ ಬಿಲ್ ಸೃಷ್ಟಿ ಮಾಡಿರುವುದರ ಜೊತೆಗೆ ನಕಲಿ ಕಾಮಗಾರಿಗೆ ಕೋಟಿ ಮುಗಂಡ ಹಣ ಬಿಡುಗಡೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಮಂಡ್ಯ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ನರೇಶ್ ಅವರ ಅವಧಿಯಲ್ಲಿ ಈ ಅಕ್ರಮಗಳು ಜರುಗಿವೆ ಎಂದು ಆರ್ಟಿಐ ಕಾರ್ಯಕರ್ತ ಮಧು ಮಾಡಿದ್ದಾರೆ. ಮದ್ದೂರಿನ ಹರಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡ ಕಾಮಗಾರಿಯನ್ನು ಆರಂಭಿಸದೇ ಹಣ ಬಿಡುಗಡೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣಗಳ ಸಂಬಂಧ ಆರ್ಟಿಐ ಕಾರ್ಯಕರ್ತ ಲೋಕಾಯುಕ್ತಕ್ಕೆ ದಾಖಲೆ ಸಮೇತ ದೂರು ನೀಡಿದ್ದಾರೆ. https://ainkannada.com/green-signal-given-for-vande-bharat-train-stop-at-haveri/ ಈ ಹಿಂದೆ ಇಬ್ಬರು ಸಿಬ್ಬಂದಿ ನಕಲಿ ಅಂಕಪಟ್ಟಿ ನೀಡಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇಷ್ಟೇ ಅಲ್ಲ ಇಲ್ಲಿ ಅಧಿಕಾರಿಗಳು ನಿರ್ಮಿತಿ ಕೇಂದ್ರದ ಸುನೀಲ್ ಎಂಬ ಸಿಬ್ಬಂದಿ ಹೆಸರಿನಲ್ಲಿ 1,09,610 ರೂ. ಬಿಲ್ ಸೃಷ್ಠಿ ಮಾಡಿರುವ ವಿಚಾರವೂ ಬೆಳಕಿಗೆ ಬಂದಿದೆ.
ಬೆಳಗಾವಿ : ಕೇಂದ್ರ ಸರ್ಕಾರದಿಂದ ತೈಲ ಬೆಲೆ, ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಬೆಳಗಾವಿಯ ಯುವ ಕಾಂಗ್ರೆಸ್ ಜಿಲ್ಲಾ ಘಟಕ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಯೂತ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಯಿಂದ ಚನ್ನಮ್ಮ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಸಿಲಿಂಡರ್ ಬೆಲೆ ಏರಿಕೆ ವಾಪಾಸ್ ಪಡೆಯುವಂತೆ ಆಗ್ರಹಿಸಿದರು. https://ainkannada.com/belgaum-municipal-corporation-closes-its-doors-in-protest/ ತಲೆ ಮೇಲೆ ಸಿಲಿಂಡರ್ ಹೊತ್ತು ಪ್ರತಿಭಟನೆಯಲ್ಲಿ ಭಾಗಿಯಾದ ಮಹಿಳೆಯರು, ಮೋದಿ ಹಠಾವೋ ದೇಶ ಬಚಾವೋ, ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.