ಬೆಳಗಾವಿ : ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾಗಿದ್ದು, ಪೊಲೀಸರ ಭಯವಿಲ್ಲದೇ ರಾಜಾರೋಷವಾಗಿ ಲಾಂಗು ಮಚ್ಚು ಪ್ರದರ್ಶನ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮ ಮತ್ತು ಗುರ್ಲಾಪುರ ಗ್ರಾಮದಲ್ಲಿ ಕ್ಷುಲಕ್ಕ ಕಾರಣಕ್ಕೆ ಕೆಲ ಯುವಕರು ಪುಂಡಾಟ ಪ್ರದರ್ಶಿಸಿದ್ದಾರೆ. ಹಳ್ಳೂರ ಗ್ರಾಮದ ಯುವಕರ ಮೇಲೆ ಅಟ್ಯಾಕ್ ಮಾಡಲು ಗ್ಯಾಂಗ್ ವೊಂದು ಬಂದಿತ್ತು. ಮಚ್ಚು ಲಾಂಗು ಪ್ರದರ್ಶನ ಮಾಡುತ್ತಿದ್ದನ್ನ ಕಂಡು ಗ್ರಾಮಸ್ಥರು ಯುವಕರ ಗ್ಯಾಂಗ್ ತಡೆದಿದ್ದಾರೆ. ಈ ವೇಳೆ ಗ್ರಾಮಸ್ಥರ ಮೇಲೆ ಅಟ್ಯಾಕ್ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಗ್ರಾಮಸ್ಥರೆಲ್ಲಾ ಒಗ್ಗೂಡಿ ಜೀವ ಪಣಕ್ಕಿಟ್ಟು ಇಬ್ಬರನ್ನ ಹಿಡಿದು ಅವರನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದ್ದಾರೆ. https://ainkannada.com/depression-over-wifes-death-husband-kills-children-and-hangs-himself/ ಇನ್ನೂ ಗಲಾಟೆ ಬಳಿಕ ಗ್ರಾಮದಲ್ಲಿ ಪೊಲೀಸರ ರೌಂಡ್ಸ್ ನಡೆಸಿದ್ದು, ದಾದಾಗಿರಿ ಮಾಡಿದ ಯುವಕರ ವಿರುದ್ಧ ಕ್ರಮಕೈಗೊಳ್ಳುವಂತೆ ಹಳ್ಳೂರ ಗ್ರಾಮಸ್ಥರ ಒತ್ತಾಯಿಸಿದ್ದಾರೆ.
Author: AIN Author
ದಾವಣಗೆರೆ: ಪತ್ನಿ ಸಾವಿನಿಂದ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ಪತಿಯು ಆತ್ಮಹತ್ಯೆಗೆ ಶರಣಾಗಿದ್ದಾನೆ. ದಾವಣೆಗೆರೆಯ ಎಸ್ಪಿ ನಗರದಲ್ಲಿ ಈ ದುರಂತ ಸಂಭವಿಸಿದೆ. 35 ವರ್ಷದ ಉದಯ್ ಎಂಬಾ ತನ್ನ 4 ವರ್ಷದ ಮಗಳಾದ ಸಿಂಧು ಶ್ರೀ, 3 ವರ್ಷದ ಶ್ರೀಜಯ್ ಮಕ್ಕಳನ್ನು ಕತ್ತು ಹಿಸುಕಿಕೊಂದು ನಂತರ ತಾನು ನೇಣಿಗೆ ಶರಣಾಗಿದ್ದಾನೆ. https://ainkannada.com/ksrtc-bus-bolero-head-on-collision-four-dead/ ಅನಾರೋಗ್ಯದಿಂದಾಗಿ ಕಳೆದ 3 ತಿಂಗಳ ಹಿಂದೆ ಉದಯ್ ಪತ್ನಿ ಸಾವನ್ನಪ್ಪಿದ್ದರು. ಪತ್ನಿಯ ಸಾವಿನ ಬಳಿಕ ಉದಯ್ ಸಂಪೂರ್ಣ ಖಿನ್ನತೆಗೆ ಒಳಗಾಗಿದ್ದರು. ಇದರಿಂದಾಗಿ ಉದಯ್ ಈ ದುಡುಕು ನಿರ್ಧಾರಕ್ಕೆ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಬೆಂಗಳೂರು:- ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್ಸಿಬಿ ಹಾಗೂ ದೆಹಲಿ ನಡುವಿನ ಪಂದ್ಯದ ಟಿಕೆಟ್ಗಳನ್ನ ದುಪ್ಪಟ್ಟು ಬೆಲೆಗೆ ಬ್ಲಾಕ್ನಲ್ಲಿ ಮಾರಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. https://ainkannada.com/this-is-my-ground-will-kl-rahul-counter-rcb-by-putting-a-circle/ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತಮುತ್ತ, ಕಬ್ಬನ್ ಪಾರ್ಕ್ ಒಳಗೆ ಟಿಕೆಟ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಡಿಸಿಪಿ ಅಕಾಯ್ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಮಫ್ತಿಯಲ್ಲಿ ಟಿಕೆಟ್ ಖರೀದಿಸುವ ನೆಪದಲ್ಲಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಒಪ್ಪಿಸಿದರು. ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರನ್ನು ವಿಚಾರಣೆ ಮಾಡಲಾಗುತ್ತಿದೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ IPL ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿಯಾಗಿ ಗೆದ್ದು ಬೀಗಿದೆ. ಈ ಗೆಲುವಿಗೆ ಕನ್ನಡಿಗನ ಕೊಡುಗೆ ಹೆಚ್ಚಿತ್ತು. https://ainkannada.com/ksrtc-bus-bolero-head-on-collision-four-dead/ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು. ಆರ್ ಸಿಬಿ ನೀಡಿದ 164 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಡೆಲ್ಲಿ ತಂಡ ಕನ್ನಡಿಗ ಕೆಎಲ್ ರಾಹುಲ್ (ಅಜೇಯ 93) ಭರ್ಜರಿ ಬ್ಯಾಟಿಂಗ್ ನೆರವಿನಿಂದ ಗೆದ್ದು ಬೀಗಿತು. ಡೆಲ್ಲಿ ಕೇವಲ 17.5 ಓವರ್ ನಲ್ಲಿ 4 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿ 6 ವಿಕೆಟ್ ಅಂತರದಲ್ಲಿ ಜಯ ದಾಖಲಿಸಿತು. ಪಂದ್ಯದಲ್ಲಿ ಭರ್ಜರಿ ಆರಂಭದ ಹೊರತಾಗಿಯೂ ಆರ್ ಸಿಬಿ ಬೃಹತ್ ಮೊತ್ತ ಪೇರಿಸಲು ವಿಫಲವಾಯಿತು. ಅಂತೆಯೇ ಆರ್ ಸಿಬಿ ನೀಡಿದ ಸವಾಲಿನ ಗುರಿಯನ್ನು ಮುಟ್ಟಲು ಡೆಲ್ಲಿ ಕೂಡ ಆರಂಭದಲ್ಲಿ ಪರದಾಡಿತು. ಕೇವಲ 58 ರನ್…
ಯಾದಗಿರಿ:- KSRTC ಬಸ್- ಬೊಲೆರೋ ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ. https://ainkannada.com/bellary-18-year-old-youth-dies-after-being-struck-by-lightning/ ಚಾಲಕ ಶರಣಪ್ಪ (30), ಸುನೀತಾ (19), ಸೋಮವ್ವ (50) ಮತ್ತು ತಂಗಮ್ಮ ಮೃತರು. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಬೊಲೆರೋ ವಾಹನದಲ್ಲಿ ಕುಟುಂಬಸ್ಥರು ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬೊಲೆರೋ ವಾಹನದಲ್ಲಿ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳ್ಳಾರಿ:- ಉತ್ತರ ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಸಾಕಷ್ಟು ಅನಾಹುತಗಳು ಸಂಭವಿಸಿದೆ. ಅದರಂತೆ ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಜರುಗಿದೆ. https://ainkannada.com/will-the-caste-census-report-get-salvation-today-the-high-command-is-in-high-spirits-the-cabinet-meeting-is-in-high-spirits/ ಮೃತ ಯುವಕನನ್ನು ಪಾಂಡುನಾಯ್ಕ್ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, ಮಳೆ ಬರುತ್ತಿದ್ದ ಸಮಯದಲ್ಲಿ ಪಾಂಡುನಾಯ್ಕ್ ಮನೆ ಬಳಿ ನಿಂತಿದ್ದ. ಈ ವೇಳೆ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಿಡಿಲಿನ ತೀವ್ರತೆಗೆ ಮನೆಯ ಗೋಡೆಗಳಿಗೆ ಹಾನಿಯಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ಆಗಾಗ ಭಾರಿ ಚರ್ಚೆಗೆ ಗ್ರಾಸವಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯ ವರದಿಗೆ ಕೊನೆಗೂ ಮೋಕ್ಷ ಸಿಗುವ ಲಕ್ಷಣ ಕಾಣುತ್ತಿದೆ. https://ainkannada.com/pink-eye-cases-increase-in-bengaluru-what-are-the-symptoms-here-are-the-complete-details/ ಗುಜರಾತ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಜಾರಿಗೆ ತರುವ ಸಂಬಂಧ ಹೈಕಮಾಂಡ್ ನಾಯಕರಿಂದ ಒಪ್ಪಿಗೆ ಪಡೆದಿದ್ದು, ಇಂದು ನಡೆಯುವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೆಚ್ ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು ಕಳೆದ 2015 ರ ಏಪ್ರಿಲ್ 11ರಿಂದ ಮೇ. 30ರವರೆಗೆ ರಾಜ್ಯದಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲಾಗಿತ್ತು. ಬಳಿಕ ಕೆ.ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷರಾಗಿ ಸಲ್ಲಿಸಿದ್ದ ದತ್ತಾಂಶ ಅಧ್ಯಯನ ವರದಿಯೈನ್ನು ಸಂಪುಟದಲ್ಲಿಅಂಗೀಕರಿಸಲು ತಯಾರಿ ನಡೆದಿದೆ. ಆ ಮೂಲಕ ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಿ ಗಣಕೀಕರಣಗೊಳಿಸಲಾಗಿದೆ. ಕ್ಯಾಬಿನೆಟ್ ಸಭೆಯ ಕಾರ್ಯಸೂಚಿ…
ಬೆಂಗಳೂರು:- ಮುಸ್ಲಿಂ ಯುವತಿ ತನ್ನ ಗೆಳೆಯನ ಜೊತೆ ಬೈಕ್ ಮೇಲೆ ಕುಳಿತಿದ್ದಕ್ಕೆ ಪುಂಡರ ಗ್ಯಾಂಗ್ವೊಂದು ಕಿರಿಕ್ ಮಾಡಿ, ಯುವಕನ ಮೇಲೂ ಹಲ್ಲೆ ನಡೆಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. https://ainkannada.com/pink-eye-cases-increase-in-bengaluru-what-are-the-symptoms-here-are-the-complete-details/ ಇದೇ ಘಟನೆಗೆ ಸಂಬಂಧಿಸಿದಂತೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಿಂದೂ ಯುವಕ ಮುಸ್ಲಿಂ ಯುವತಿ ಮೇಲೆ ನೈತಿಕ ಪೊಲೀಸ್ ಗಿರಿ ಮೆರೆದ ಐವರು ಪುಂಡರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ತನ್ನ ಸ್ನೇಹಿತನ ಜೊತೆ ಬುರ್ಖಾ ಧರಿಸಿ ಬೈಕ್ ನಲ್ಲಿ ಯುವತಿ ಕೂತಿದ್ದಳು. ಈ ವೇಳೆ ಬಂದ ಐವರು ಮುಸ್ಲಿಂ ಯುವಕರ ಗುಂಪು, ಬುರ್ಖಾ ಧರಿಸಿ ಹಿಂದೂ ಯುವಕನ ಜೊತೆ ಬೈಕ್ ನಲ್ಲಿ ಯಾಕ್ ಕೂತಿದ್ಯಾ.!? ನಿನಗೆ ಮಾನ ಮರ್ಯಾದೆ ಇಲ್ವಾ..? ನಿಮ್ಮ ಮನೆಯವರ ಮೊಬೈಲ್ ನಂಬರ್ ಕೊಡು ಎಂದು ಕ್ಯಾತೆ ತೆಗೆದಿದೆ. ಈ ವೇಳೆ ನನ್ನ ಕ್ಲಾಸ್ ಮೇಟ್ ಜೊತೆ ನಾನ್ ಮಾತಾಡ್ತಿದ್ದೀನಿ. ನಮ್ಮ ಮನೆಯವರ ನಂಬರ್ ನಿಮಗ್ಯಾಕೆ ಕೊಡಬೇಕು ಎಂದು ಮುಸ್ಲಿಂ ಯುವತಿ ಹೇಳಿದ್ದಾಳೆ.…
ಬೆಂಗಳೂರು:- ಸಿಲಿಕಾನ್ ಸಿಟಿ ಮಂದಿಗೆ ಪಿಂಕ್ ಐ ಸಮಸ್ಯೆ ಶುರುವಾಗಿದೆ. ಇದಕ್ಕೆ ಮಕ್ಕಳೇ ಹೆಚ್ಚು ಗುರಿಯಾಗುತ್ತಿರುವ ಕಾರಣ ಪೋಷಕರಲ್ಲಿ ಆತಂಕ ಶುರುವಾಗಿದೆ. https://ainkannada.com/congress-counters-bjps-public-anger-to-protest-against-the-centres-price-hike-on-april-17/ ಕಣ್ಣಿನ ಸೋಂಕನ್ನು ಪಿಂಕ್ ಐ ಅಥವಾ ವೈದ್ಯಕೀಯ ಭಾಷೆಯಲ್ಲಿ ಕಾಂಜಂಕ್ಟಿವಿಟಿಸ್ ಎಂದು ಕರೆಯುತ್ತಾರೆ. ಇದು ಮಳೆಗಾಲದಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಈ ಪ್ರಕರಣಗಳಲ್ಲಿ ಕಣ್ಣಿನ ಬಿಳಿ ಭಾಗದಲ್ಲಿ ಸೋಂಕು ಸಂಭವಿಸುತ್ತದೆ. ಕಣ್ಣಿನ ಸೋಂಕಿನ ಹೆಚ್ಚಿನ ಪ್ರಕರಣಗಳು ಶೀತ ಕೆಮ್ಮಿನಂತಹ ವೈರಸ್ ನಿಂದ ಉಂಟಾಗುತ್ತದೆ. ಮಳೆಗಾಲದಲ್ಲಿ ಶಿಲೀಂಧ್ರಗಳ ಸೋಂಕಿನೊಂದಿಗೆ ವಾಯು ಮಾಲಿನ್ಯ, ಪರಿಸರದಲ್ಲಿನ ತೇವಾಂಶಯುಕ್ತ ವಾತಾರಣದಿಂದ ಕೂಡಾ ಈ ಸೋಂಕು ಹರಡುತ್ತದೆ. ಇದರಿಂದಾಗಿ ಹೆಚ್ಚಿನ ಜನರು ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಲು ಪ್ರಾರಂಭಿಸುತ್ತಾರೆ. ಕಣ್ರೆಪ್ಪೆ ಹಾಗೂ ಕಣ್ಣುಗುಡ್ಡೆಯನ್ನು ಸುತ್ತುವರೆದಿರುವ ಪಾರದರ್ಶಕ ಪೊರೆಯಾದ ಕಾಂಜಂಕ್ಟಿವಾ ಊದಿಕೊಂಡು ಸೋಂಕಿನಿಂದ ಕಣ್ಣುಗಳು ಕೆಂಪಾಗುತ್ತಿವೆ. ಸೋಂಕಿತ ರಕ್ತನಾಳಗಳು ಊದಿಕೊಳ್ಳುತ್ತವೆ. ಇದರಿಂದಾಗಿ ಕಣ್ಣಿನ ಒಳಭಾಗದ ಬಿಳಿಭಾಗವು ಗುಲಾಬಿ ಅಥವಾ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಇದು ಕೂಡಾ ವೈರಲ್ ಸೋಂಕಾಗಿದ್ದು, ಒಬ್ಬರಿಂದ ಮತ್ತೊಬ್ಬರಿಗೆ ಬೇಗ ಹರಡುತ್ತದೆ. ಇದೀಗ ಸೋಂಕು…
ಬೆಂಗಳೂರು: “ಬಿಜೆಪಿಯ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. https://ainkannada.com/rain-alert-rainfall-in-these-districts-of-karnataka-today/ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿಯ ಇಬ್ಬಗೆ ನೀತಿಯ ವಿರುದ್ಧ ಸರಣಿ ವಾಗ್ದಾಳಿ ನಡೆಸಿದರು. “ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹೋರಾಟದ ಸ್ವರೂಪವನ್ನು ಶೀಘ್ರ ತಿಳಿಸಲಾಗುತ್ತದೆ. ಅವರ ಜನಾಕ್ರೋಶ ಯಾತ್ರೆಯ ವಿರುದ್ಧ ನಾವು ಏನಾದರೂ ಮಾಡಬೇಕಲ್ಲವೇ?” ಎಂದು ಹೇಳಿದರು. ಆರ್.ಅಶೋಕ್ ಹಾಗೂ ವಿಜಯೇಂದ್ರ ಅವರಿಗೆ ಕೇವಲ ರಾಜ್ಯ ಸರ್ಕಾರ ಏರಿಸಿದ ಹಾಲಿನ ದರ ಮಾತ್ರ ಕಣ್ಣಿಗೆ ಕಾಣುತ್ತಿದೆಯೇ? ಬಿಜೆಪಿ ರಾಜ್ಯದಲ್ಲಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಕೇಂದ್ರ ಬಿಜೆಪಿ ಸರ್ಕಾರದ…