ಉತ್ತರಪ್ರದೇಶ: ಬಾಟಲ್ನಲ್ಲಿ ಪೆಟ್ರೋಲ್ ಹಾಕಲು ನಿರಾಕರಿಸಿದ್ದಕ್ಕೆ ಪೆಟ್ರೋಲ್ ಪಂಪ್ ಮ್ಯಾನೇಜರ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಉತ್ತರ ಪ್ರದೇಶದ ಸಿಕಂದರಾಬಾದ್ ನಲ್ಲಿ ಈ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು, ಬೈಕ್ಗೆ ಪೆಟ್ರೋಲ್ ತುಂಬಿಸಿದ ನಂತರ ಪ್ಲಾಸ್ಟಿಕ್ ಬಾಟಲಿಗೆ ಪೆಟ್ರೋಲ್ ಹಾಕುವಂತೆ ಹೇಳಿದ್ದಾರೆ. ಆದರೆ ಇದಕ್ಕೆ ಸಿಬ್ಬಂದಿ ನಿರಾಕರಿಸಿದ್ದಾರೆ. ಇದೇ ವಿಚಾರವಾಗಿ ಮ್ಯಾನೇಜರ್ ರಾಜು ಶರ್ಮಾ ಜೊತೆಗೆ ವಾಗ್ವಾದ ನಡೆದಿದ್ದು, ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. https://ainkannada.com/26-11-accused-tahawwur-rana-nia-brings-back-to-india-delhi-on-full-high-alert/ ಇನ್ನೂ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶರ್ಮಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ದುಷ್ಕರ್ಮಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎನ್ನಲಾಗಿದೆ.
Author: AIN Author
ಮನುಷ್ಯನಿಗೆ ಅವಶ್ಯಕವಾದ ಪಂಚಭೂತಗಳಲ್ಲಿ ನೀರು ಸಹ ಒಂದು. ಜಗತ್ತು ಮುಕ್ಕಾಲು ಪಾಲು ನೀರಿನಿಂದಲೇ ನಿರ್ಮಿತವಾಗಿದೆ. ಅದೇ ರೀತಿ ಮನುಷ್ಯನ ದೇಹ ಕೂಡ. ಮನುಷ್ಯನ ದೇಹದ ಅಂಗಗಳು ಕೆಲಸ ಮಾಡಲು ನೀರಿನ ಅವಶ್ಯಕತೆ ಇದ್ದೇ ಇದೆ. ನಿರ್ಜಲೀಕರಣ ಸಮಸ್ಯೆ ಉಂಟಾಗಬಾರದು ಎಂದು ಆಗಾಗ ನೀರು ಕುಡಿಯುತ್ತಿರಬೇಕು. https://ainkannada.com/do-you-sleep-on-the-floor-do-you-know-how-good-it-is-for-your-health/ ಸಾಮಾನ್ಯವಾಗಿ ನಮ್ಮನ್ನು ಸೇರಿ ನೀವು ಎಲ್ಲಾದರೂ ಹೊರಗಡೆ ಹೋದಾಗ ಅಂಗಡಿಗಳಲ್ಲಿ ಬಾಟಲ್ ಖರೀದಿಸಿ ನೀರು ಕುಡಿಯುತ್ತೇವೆ. ಆದ್ರೆ ಇದು ನಮ್ಮ ಆರೋಗ್ಯಕ್ಕೆ ಎಷ್ಟು ಸೇಫ್.. ಇದನ್ನು ತಿಳಿದಿದ್ದೀರಾ? ಎಸ್, ಆಹಾರ ಸುರಕ್ಷತೆ ಇಲಾಖೆ ನಡೆಸಿದ ನೀರಿನ ಬಾಟಲಿಗಳ ಗುಣಮಟ್ಟ ಪರೀಕ್ಷೆಯಲ್ಲಿ 183 ಬ್ರ್ಯಾಂಡ್ಗಳು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶಾಕಿಂಗ್ ಮಾಹಿತಿ ನೀಡಿದ್ದಾರೆ. ಆದ್ದರಿಂದ ಹೊರಗಡೆ ಹೋದಲ್ಲಿ ಬಂದಲ್ಲಿ ನೀರು ಖರೀದಿಸಿ ಕುಡಿಯುವವರು ಎಚ್ಚರ ವಹಿಸುವುದು ಅಗತ್ಯ. TDS ಎಂದರೆ ಒಟ್ಟು ಕರಗಿದ ಘನವಸ್ತುಗಳು, ಮತ್ತು ನೀರಿನಲ್ಲಿ ಕರಗಿದ ವಸ್ತುಗಳ ಒಟ್ಟು…
ಹಾವೇರಿ : ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಅಹೋರಾತ್ರಿ ಪ್ರತಿಭಟನೆ ನಡೆಸಲಾಯ್ತು. ಸಂಸದ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲ ನಗರದ ಮೈಲಾರ ಮಹಾದೇವಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆದಿದ್ದು, ಬೆಲೆ ಏರಿಕೆಯ ಪೋಸ್ಟ್ ಕಾರ್ಡ್ ಗಳ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ.ಸಿ ಪಾಟೀಲ್ , ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಸೇರಿದಂತೆ ನೂರಾರು ಕಾರ್ಯಕರ್ತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದೇ ವೇಳೇ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ, ಕ್ಯಾಬಿನೆಟ್ ನಲ್ಲಿ ಜಾತಿ ಗಣತಿ ವರದಿ ಮಂಡನೆ ವಿಚಾರವಾಗಿ ಮಾತನಾಡಿ, ಜಾತಿಗಣತಿ ವರದಿ ವಿಚಾರವಾಗಿ ಪ್ರತಿಕ್ರಿಯಿಸಿ, ಏನ್ ನಿರ್ಧಾರ ಮಾಡ್ತೀರಾ ಮಾಡಿ,ಎಲ್ಲಾ ಬಹಿರಂಗವಾಗಿ ಬರಲಿ. ವರದಿ ಕೊಟ್ಟು ಒಂದು ವರ್ಷ ಆಯ್ತು. ಯಾಕೆ ಮುಖ್ಯಮಂತ್ರಿ ಮುಚ್ಚಿಟ್ಟುಕೊಂಡಿದ್ದಾರೆ ನನಗೆ ಅರ್ಥ ಆಗ್ತಿಲ್ಲ. ನಾಳೆ ಅವರು ಮಂಡನೆ ಮಾಡಲಿ..ಆ ಬಳಿಕ ಪ್ರತಿಕ್ರಿಯೆ ನೀಡುವೆ ಎಂದರು. https://ainkannada.com/the-court-of-bosarajs-son-in-the-irrigation-department-the-court-of-sahukars-son-in-the-pw-department-contractors-who-rebelled-against-the-government/ ಕರ್ನಾಟಕ ಸರಕಾರದಿಂದ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಾಲಿನಿಂದ…
ಕೆಲವರು ಎಷ್ಟೇ ದಪ್ಪನೆಯ ಹಾಸಿಗೆ ಇದ್ದರೂ ನೆಲದ ಮೇಲೆ ಮಲಗುವುದಕ್ಕೆ ಇಷ್ಟಪಡುತ್ತಾರೆ. ಮಧ್ಯಾಹ್ನವಾಗಲಿ, ರಾತ್ರಿಯಾಗಲಿ ಚೊಕ್ಕದಾದ ನೆಲದ ಮೇಲೆ ಹಾಯಾಗಿ ಮಲಗುವವರನ್ನು ನಾವು ನೋಡಿರುತ್ತೇವೆ. ಅದರಲ್ಲಿಯೂ ಈ ಬೇಸಿಗೆಯಲ್ಲಿ ಇಂತಹ ಅಭ್ಯಾಸಗಳನ್ನು ರೂಢಿಸಿಕೊಂಡಿರುವವರು ಪ್ರತಿಯೊಬ್ಬರ ಮನೆಯಲ್ಲಿಯೂ ಇರಬಹುದು. ಕೆಲವರಿಗಂತೂ ಹಾಸಿಗೆಯ ಮೇಲೆ ಮಲಗಿದರೆ ಮೈ- ಕೈ ನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಅವರು ನೆಲದ ಮೇಲೆ ಸುಖವಾಗಿ ನಿದ್ರೆ ಮಾಡಲು ಬಯಸುತ್ತಾರೆ. https://ainkannada.com/karnataka-no-1-in-corruption-take-action-against-rayareddy/ ನಿದ್ದೆ ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ. ದೇಹದ ಆರೋಗ್ಯ ಕಾಪಾಡಿಕೊಳ್ಳಲು, ಮಾನಸಿಕ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಲು ನಿದ್ದೆ ಅಗತ್ಯವಾಗಿದೆ. ಇಡೀ ದಿನ ಎಷ್ಟೇ ಕೆಲಸ ಮಾಡಿದ್ದರೂ ರಾತ್ರಿ ಕಣ್ತುಂಬ ನಿದ್ದೆ ಮಾಡಿದರೆ ಮರುದಿನ ಮತ್ತೆ ಹೊಸ ಚೈತನ್ಯ, ಹೊಸ ಉತ್ಸಾಹ ದೇಹದಲ್ಲಿ ಕಾಣಬಹುದು. ಹೀಗಾಗಿ ಪ್ರತೀ ಆರೋಗ್ಯವಂತ ವ್ಯಕ್ತಿಗೆ ಕನಿಷ್ಠ 8 ರಿಂದ 9 ಗಂಟೆಗಳ ನಿದ್ದೆ ಅಗತ್ಯವಾಗಿದೆ. ಕೆಲವೊಮ್ಮೆ ಹೇಗೆ ಮಲಗಿದರೂ ನಿದ್ದೆ ಬರುವುದಿಲ್ಲ. ಕೆಲವರಿಗೆ ಎಸಿ ಇಲ್ಲದೆ ನಿದ್ದೆ ಬರದಿದ್ದರೆ, ಇನ್ನೂ ಕೆಲವರಿಗೆ ಮೆತ್ತನೆಯ ಹಾಸಿಗೆ ಇಲ್ಲದೆ ನಿದ್ದೆ…
ಬೆಂಗಳೂರು:-ಗುತ್ತಿಗೆದಾರರ ಸಂಘದಿಂದ ಸಚಿವ ಸತೀಶ್ ಜಾರಕಿಹೊಳಿ, ಬೋಸರಾಜು ಮೇಲೆ ಆರೋಪ ಮಾಡಿರುವ ವಿಚಾರವಾಗಿ ಸಚಿವ ಕೃಷ್ಣ ಬೈರೇಗೌಡ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/rcb-vs-dc-high-voltage-match-today-bengaluru-screaming-at-home/ ಈ ಸಂಬಂಧ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮೇಲೆ ಗುತ್ತಿಗೆದಾರರು ಮಾಡಿರುವ ಕಮಿಷನ್ ಆರೋಪಕ್ಕೆ ಸೂಕ್ತ ದಾಖಲಾತಿ ಕೊಟ್ಟರೆ ತನಿಖೆ ಮಾಡಿಸುವುದಾಗಿ ಹೇಳಿದ್ದಾರೆ. ಗುತ್ತಿಗೆದಾರರು ಏನಾದರೂ ಆರೋಪ ಮಾಡಿದರೆ, ಅದಕ್ಕೆ ಸೂಕ್ತ ದಾಖಲಾತಿ ಕೊಟ್ಟರೆ ತನಿಖೆ ಮಾಡಿಸುತ್ತೇವೆ. ಗುತ್ತಿಗೆದಾರರ ದೂರು ಪರಿಶೀಲನೆ ಮಾಡುತ್ತೇವೆ. ಮಧ್ಯವರ್ತಿಗಳು ಯಾರು ಎಂದು ಅವರು ಮಾಹಿತಿ ಕೊಡಲಿ. ಯಾರ ಕುಟುಂಬದ ಹಸ್ತಕ್ಷೇಪ ಎಂದು ದಾಖಲಾತಿ ಕೊಡಲಿ. ಅವರು ಕೊಟ್ಟರೆ ದೂರು ಪರಿಶೀಲನೆ ಮಾಡುತ್ತೇವೆ. ಸಚಿವರು ಯಾರು? ಕುಟುಂಬದವರು ಯಾರು? ಎಂದು ನಿರ್ದಿಷ್ಟವಾಗಿ ಹೇಳಿದರೆ ತನಿಖೆ ಮಾಡಿಸುತ್ತೇವೆ ಎಂದು ತಿಳಿಸಿದರು. ಯಾರ ಹಸ್ತಕ್ಷೇಪ ಎಂದು ಹೇಳಿದರೆ ತನಿಖೆ ಮಾಡಿಸಬಹುದು. ಬಿಜೆಪಿ ಮೇಲೆ 40% ಕಮಿಷನ್ ಆರೋಪದ ನ್ಯಾಯಾಂಗ ತನಿಖೆ ಆಗುತ್ತಿದೆ. ಕೋವಿಡ್ನಲ್ಲಿ ಅಕ್ರಮ ಆಗಿರುವ ಬಗ್ಗೆ ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ. ಇದರ ತನಿಖೆಯೂ ನಡೆಯುತ್ತಿದೆ. ಅದೇ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿ ಏ.12 ಮತ್ತು 13ರಂದು ಶನಿವಾರ ಮತ್ತು ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ತಿಳಿಸಿದರು. ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಇವರು ಅಕ್ಷರ ಜಾತ್ರೆಗೆ ಸಿದ್ದತೆಗಳು ಈಗಾಗಲೇ ಪೂರ್ಣಗೊಂಡಿದ್ದು, ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ದಗೊಳ್ಳುತ್ತಿದೆ. ಈ ಬಾರಿ ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿವಂಗತ ಜಿ.ಗೋಪಿನಾಥ್ ಅವರ ಹೆಸರನ್ನು ಮತ್ತು ಮಹಾದ್ವಾರಕ್ಕೆ ಮುತ್ಸ್ದದಿ ರಾಜಕಾರಣಿ ದಿವಂಗತ ಸಿ.ಡಿ,ಸತ್ಯನಾರಾಯಣಗೌಡರ ಹೆಸರನ್ನು ಇಡಲಾಗಿದೆ. ಹಿರಿಯ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ಕಲಾವಿದ ಟಿ.ಕೆಂಪಣ್ಣ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ ಎಂದು ವಿವರಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಮಧುರೆ ಹೋಬಳಿಯ ಸ್ಥಳೀಯ ಆಡಳಿತ, ಮುಖಂಡರು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ ಎಂದ ಅವರು, ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಸಮ್ಮೇಳನವನ್ನು…
ಲಕ್ನೋ: ಇದೇ ಏ.11ರಂದು ಪ್ರಧಾನಿ ನರೇಂದ್ರ ಮೋದಿ ವಾರಣಾಸಿಗೆ ಭೇಟಿ ನೀಡಲಿದ್ದು, ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರದ ವಾರಣಾಸಿಗೆ ಭೇಟಿ ನೀಡಲಿದ್ದು, 3,884.18 ಕೋಟಿ ರೂ. ಮೌಲ್ಯದ 44 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ವಾರಣಾಸಿಯ ಬಿಜೆಪಿ ಅಧ್ಯಕ್ಷ ದಿಲೀಪ್ ಪಟೇಲ್ ತಿಳಿಸಿದ್ದಾರೆ. https://ainkannada.com/mumbai-attacker-is-not-ours-pakistan-clarifies-terrorist-came-to-india/ ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು 130 ಕುಡಿಯುವ ನೀರಿನ ಯೋಜನೆಗಳು, 100 ಹೊಸ ಅಂಗನವಾಡಿ ಕೇಂದ್ರಗಳು, 356 ಗ್ರಂಥಾಲಯಗಳು, 4 ಗ್ರಾಮೀಣ ರಸ್ತೆಗಳು ಮತ್ತು 2 ಕಾಲೇಜುಗಳನ್ನು ಉದ್ಘಾಟಿಸಲಿದ್ದಾರೆ. ನಗರದ ವಿದ್ಯುತ್ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ 15 ಹೊಸ ಸಬ್ಸ್ಟೇಷನ್ಗಳ ನಿರ್ಮಾಣ, ಹೊಸ ಟ್ರಾನ್ಸ್ಫಾರ್ಮರ್, 1,500 ಕಿಮೀ ಹೊಸ ವಿದ್ಯುತ್ ಮಾರ್ಗಗಳ ಸ್ಥಾಪನೆ ಸೇರಿದಂತೆ, 2,250 ಕೋಟಿ ರೂ. ವೆಚ್ಚದ 25 ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೂರು ಹೊಸ ಮೇಲ್ಸೇತುವೆಗಳು, ವಿವಿಧ ರಸ್ತೆ ಅಗಲೀಕರಣ ಕ್ರಮಗಳು, ಶಾಲಾ ನವೀಕರಣ ಕಾರ್ಯಗಳು ಹಾಗೂ ಶಿವಪುರ ಮತ್ತು…
ಬೆಂಗಳೂರು:- ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಖಾಮುಖಿಯಾಗುತ್ತಿದೆ. https://ainkannada.com/good-news-for-apple-lovers-iphone-16-sees-record-price-drop-on-flipkart/ 18ನೇ ಆವೃತ್ತಿಯಲ್ಲಿ ಇಲ್ಲಿಯವರೆಗೆ ಸೋಲನ್ನೇ ಕಾಣದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎದುರಿಸಲಿದೆ. ತವರ ಅಂಗಳದಲ್ಲಿನ ಆರ್ಸಿಬಿಯ ರೋಚಕ ಪಂದ್ಯವನ್ನು ವೀಕ್ಷಿಸಲು ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ. ಅಂದ್ಹಾಗೆ ಇಂದು ನಡೆಯುವ ಕದನ ಕೇವಲ ಆರ್ಸಿಬಿ ಹಾಗೂ ಡೆಲ್ಲಿ ಕಾಳಗ ಮಾತ್ರವಲ್ಲ. ಆರ್ಸಿಬಿ ವರ್ಸಸ್ ಮಾಜಿ ಆರ್ಸಿಬಿಯನ್ಸ್ ನಡುವಿನ ಮಹಾ ಕಾಳಗ. ಕೆ.ಎಲ್.ರಾಹುಲ್, ಫಾಫ್ ಡುಪ್ಲೆಸಿ, ವೇಗಿ ಮಿಚೆಲ್ ಸ್ಟಾರ್ಕ್, ಕರುಣ್ ನಾಯರ್ ಇವರೆಲ್ಲರೂ ಆರ್ಸಿಬಿಯ ಮಾಜಿ ಪ್ಲೇಯರ್ಗಳೇ. ಡೆಲ್ಲಿ ತಂಡದ ಬಲವಾಗಿರೋ ಇವ್ರಿಗೆ ಚಿನ್ನಸ್ವಾಮಿ ಮೈದಾನದ ಪಿಚ್ ಹಾಗೂ ಇಲ್ಲಿನ ಪ್ಲೇಯಿಂಗ್ ಕಂಡಿಷನ್ಸ್ ಬಗ್ಗೆ ಚೆನ್ನಾಗಿ ಅರಿವಿದೆ. ಈ ತ್ರಿಮೂರ್ತಿಗಳ ಆಟಕ್ಕೆ ಕಡಿವಾಣ ಹಾಕಲು ಚಕ್ರವ್ಯೂಹ ರಚಿಸಬೇಕಿದೆ.
ಆಪಲ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಫ್ಲಿಪ್ಕಾರ್ಟ್ನಲ್ಲಿ ಐಫೋನ್ 16 ಬೆಲೆ ದಾಖಲೆಯಲ್ಲಿ ಇಳಿಕೆ ಕಂಡಿದೆ. https://ainkannada.com/the-court-of-bosarajs-son-in-the-irrigation-department-the-court-of-sahukars-son-in-the-pw-department-contractors-who-rebelled-against-the-government/ ಆಪಲ್ನ ಇತ್ತೀಚಿನ ಐಫೋನ್ 16 ಇ-ಕಾಮರ್ಸ್ ಪ್ಲಾಟ್ಫಾರ್ಮ್ ಫ್ಲಿಪ್ಕಾರ್ಟ್ನಲ್ಲಿ ದಾಖಲೆಯ ಬೆಲೆ ಕಡಿತವನ್ನು ಪಡೆದುಕೊಂಡಿದೆ. ಅಷ್ಟೇ ಅಲ್ಲ, ಈ ಸಾಧನದ ಮೇಲೆ ಬ್ಯಾಂಕ್ ರಿಯಾಯಿತಿಗಳು ಮತ್ತು ವಿನಿಮಯ ಡೀಲ್ಗಳನ್ನು ಸಹ ನೀಡುತ್ತಿದ್ದು, ಐಫೋನ್ 16 ನ ಬೆಲೆಯನ್ನು 40,000 ರೂ. ಗಿಂತ ಕಡಿಮೆಗೆ ನಿಮ್ಮದಾಗಿಸಬಹುದು. ಈ ಸೀಮಿತ ಅವಧಿಯ ಕೊಡುಗೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಆಪಲ್ ಐಫೋನ್ 16 ಅನ್ನು ರೂ. 79,900 ಆರಂಭಿಕ ಬೆಲೆಗೆ ಬಿಡುಗಡೆ ಮಾಡಲಾಗಿತ್ತು. ಆದಾಗ್ಯೂ, ಫ್ಲಿಪ್ಕಾರ್ಟ್ ಪ್ರಸ್ತುತ ಈ ಫೋನನ್ನು ರೂ. 9,901 ನೇರ ಬೆಲೆ ಕಡಿತದೊಂದಿಗೆ ನೀಡುತ್ತಿದೆ. ಪಟ್ಟಿ ಮಾಡಲಾದ ಬೆಲೆ ರೂ. 69,999 ಆಗಿದೆ. ಇದರ ಮೇಲೆ, ಕ್ರೆಡಿಟ್ ಕಾರ್ಡ್ ಬಳಕೆದಾರರು ಹೆಚ್ಚುವರಿ ರೂ. 5,000 ತ್ವರಿತ ರಿಯಾಯಿತಿಯನ್ನು ಪಡೆಯಬಹುದು. ಇದು ಐಫೋನ್ 16 ಅನ್ನು ಕೇವಲ ರೂ.…
ಚಿತ್ರದುರ್ಗ : ರಾಜ್ಯ ಸರ್ಕಾರದ ವಿರುದ್ಧ ಇದೀಗ ಗುತ್ತಿಗೆದಾರರು ಸಿಡಿದೆದಿದ್ದಾರೆ. ಸಣ್ಣ ನೀರಾವರಿ ಇಲಾಖೆಯಲ್ಲಿ ಸಚಿವ ಬೋಸರಾಜ್ ಅವರ ಮಗ ಹಸ್ತಕ್ಷೇಪ ಮಾಡುತ್ತಿದ್ದರೆ, ಲೋಕೋಪಯೋಗಿ ಸಚಿವರಾದ ಜಾರಕಿಹೊಳಿ ಸಾಹೇಬರ ಮಗನದ್ದೇ ಕಾರು ಬಾರು ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಎಲ್ಲಾ ಇಲಾಖೆಗಳಲ್ಲಿ ಕಾಣದ ಕೈಗಳು ಹಾಗೂ ಸಚಿವರ ಸಂಬಂಧಿಗಳು ಕಂಟ್ರೋಲ್ ಮಾಡುತ್ತಿದ್ದಾರೆ ಎಂದು ಸ್ವತಃ ಗುತ್ತಿಗೆದಾರರೇ ಆರೋಪಿಸಿದ್ದಾರೆ. ಹೌದು, ವಿವಿಧ ಇಲಾಖೆಗಳಲ್ಲಿ ಸಚಿವರ ಸಂಬಂಧಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವರಿಗೆ ರಾಜ್ಯ ಗುತ್ತಿಗೆದಾರರ ಅಧ್ಯಕ್ಷ ಆರ್. ಮಂಜುನಾಥ್ ಪತ್ರ ಬರೆದಿದ್ದಾರೆ. https://ainkannada.com/the-survey-department-laid-the-foundation-for-the-administrative-system-revenue-minister/ ಈ ಕುರಿತು ಗುತ್ತಿಗೆದಾರರ ರಾಜ್ಯ ಅಧ್ಯಕ್ಷ ಆರ್. ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದು, ಇದುವರೆಗೂ ಸಣ್ಣ ಪುಟ್ಟ ಗುತ್ತಿಗೆದಾರರಿಗೆ ಸರಿಯಾದ ಪೇಮೆಂಟ್ ಆಗುತ್ತಿಲ್ಲ. ನಮ್ಮ ಸಣ್ಣ ಗುತ್ತಿಗೆದಾರರಿಗೆ ತುಂಭಾ ಸಮಸ್ಯೆ ಆಗಿದೆ. ಕಳೆದ ಮೂರು ವರ್ಷಗಳಿಂದಲೂ ಈ ತೊಂದರೆ ಇದೆ. ಸಿಎಂ ಮತ್ತು ಡಿಸಿಎಂ ಹಾಗೂ ಮಂತ್ರಿಗಳಿಗೆ ಪತ್ರ…