ಚಿತ್ರದುರ್ಗ : ರಾಜ್ಯ ಸರ್ಕಾರದ ವಿರುದ್ಧ ಇದೀಗ ಗುತ್ತಿಗೆದಾರರು ಸಿಡಿದೆದಿದ್ದಾರೆ. ಸಣ್ಣ ನೀರಾವರಿ ಇಲಾಖೆಯಲ್ಲಿ ಸಚಿವ ಬೋಸರಾಜ್ ಅವರ ಮಗ ಹಸ್ತಕ್ಷೇಪ ಮಾಡುತ್ತಿದ್ದರೆ, ಲೋಕೋಪಯೋಗಿ ಸಚಿವರಾದ ಜಾರಕಿಹೊಳಿ ಸಾಹೇಬರ ಮಗನದ್ದೇ ಕಾರು ಬಾರು ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಎಲ್ಲಾ ಇಲಾಖೆಗಳಲ್ಲಿ ಕಾಣದ ಕೈಗಳು ಹಾಗೂ ಸಚಿವರ ಸಂಬಂಧಿಗಳು ಕಂಟ್ರೋಲ್ ಮಾಡುತ್ತಿದ್ದಾರೆ ಎಂದು ಸ್ವತಃ ಗುತ್ತಿಗೆದಾರರೇ ಆರೋಪಿಸಿದ್ದಾರೆ. ಹೌದು, ವಿವಿಧ ಇಲಾಖೆಗಳಲ್ಲಿ ಸಚಿವರ ಸಂಬಂಧಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವರಿಗೆ ರಾಜ್ಯ ಗುತ್ತಿಗೆದಾರರ ಅಧ್ಯಕ್ಷ ಆರ್. ಮಂಜುನಾಥ್ ಪತ್ರ ಬರೆದಿದ್ದಾರೆ. https://ainkannada.com/the-survey-department-laid-the-foundation-for-the-administrative-system-revenue-minister/ ಈ ಕುರಿತು ಗುತ್ತಿಗೆದಾರರ ರಾಜ್ಯ ಅಧ್ಯಕ್ಷ ಆರ್. ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದು, ಇದುವರೆಗೂ ಸಣ್ಣ ಪುಟ್ಟ ಗುತ್ತಿಗೆದಾರರಿಗೆ ಸರಿಯಾದ ಪೇಮೆಂಟ್ ಆಗುತ್ತಿಲ್ಲ. ನಮ್ಮ ಸಣ್ಣ ಗುತ್ತಿಗೆದಾರರಿಗೆ ತುಂಭಾ ಸಮಸ್ಯೆ ಆಗಿದೆ. ಕಳೆದ ಮೂರು ವರ್ಷಗಳಿಂದಲೂ ಈ ತೊಂದರೆ ಇದೆ. ಸಿಎಂ ಮತ್ತು ಡಿಸಿಎಂ ಹಾಗೂ ಮಂತ್ರಿಗಳಿಗೆ ಪತ್ರ…
Author: AIN Author
ಬೆಂಗಳೂರು:- ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಸಿಡಿದೆದ್ದಿದೆ. ಜೇಷ್ಠತೆ ಆದರದ ಮೇಲೆ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿರುವ ಗುತ್ತಿಗೆದಾರರು, ಸರ್ಕಾರಕ್ಕೆ ಪತ್ರ ಬರೆದು ಹಲವು ಆರೋಪಗಳನ್ನು ಮಾಡಿದ್ದಾರೆ. https://ainkannada.com/26-11-accused-tahawwur-rana-nia-brings-back-to-india-delhi-on-full-high-alert/ ಹಣ ಬಿಡುಗಡೆಗೆ ಕಾಣದ ಕೈಗಳು, ಮಧ್ಯವರ್ತಿಗಳ ಕಾಟ ಹೆಚ್ಚಾಗಿದೆ ಎಂದು ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಬಾಂಬ್ ಸಿಡಿಸಿದೆ. ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಧ್ಯವರ್ತಿಗಳ ಕಾಟ ಕೊಡುತ್ತಿದ್ದಾರೆ. ಜೇಷ್ಠತೆ ಪಾಲಿಸದೇ ಸ್ಪೆಷಲ್ ಎಲ್ಓಸಿ ಸೃಷ್ಟಿ ಮಾಡಿ ಹಣ ಬಿಡುಗಡೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಂಘ ಲೋಕೋಪಯೋಗಿ ಇಲಾಖೆ, ನಾಲ್ಕು ನೀರಾವರಿ ನಿಗಮ ಮತ್ತು ಸಣ್ಣ ನೀರಾವರಿ ಇಲಾಖೆಯಲ್ಲಿ ಕಾಣದ ಕೈಗಳ ಬಗ್ಗೆ ಚರ್ಚೆ ಮಾಡಿ ಸಣ್ಣ ಗುತ್ತಿಗೆದಾರರಿಗೆ ನ್ಯಾಯ ಒದಗಿಸುವಂತೆ ಪತ್ರ ಬರೆದಿದೆ
ಬಳ್ಳಾರಿ: ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ರಾತ್ರಿ ಕೊಲೆ ಮಾಡಿದ್ದ ರೌಡಿಶೀಟರ್, ಮುಂಜಾನೆ ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದ್ದು, ಗುಂಡೇಟು ತಿಂದಿದ್ದಾನೆ. ಗುಂಡೇಟು ತಿಂದ ಆರೋಪಿಯನ್ನು ಹುಚ್ಚಕಾಳಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಹೊನ್ನೂರಸ್ವಾಮಿ (30) ಎಂಬುವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ, ತಲೆ ಮರೆಸಿಕೊಂಡಿದ್ದ. ಇದೇ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿ, ಕೊಲೆಗೆ ಬಳಸಿದ್ದ ಚಾಕು ವಶಕ್ಕೆ ಪಡೆಯುವ ವೇಳೆ, ಆತ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತ್ಮ ರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಗಾಯಗೊಂಡ ಪೊಲೀಸ್ ಸಿಬ್ಬಂದಿಗೆ ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. https://ainkannada.com/deliver-government-schemes-to-eligible-beneficiaries-mla-kottur-manjunath/ ಘಟನಾ ಸ್ಥಳಕ್ಕೆ ವಿಜಯನಗರ ಎಸ್ಪಿ ಡಾ. ಶ್ರೀಹರಿಬಾಬು ಬಿಎಲ್, ಎಎಸ್ಪಿ ಸಲೀಂಪಾಷಾ ಹಾಗೂ ಡಿವೈಎಸ್ಪಿ ಡಾ.ಮಂಜುನಾಥ್ ತಳವಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕೋಲಾರ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಅವುಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. https://ainkannada.com/construction-of-an-international-airport-near-shira-home-ministers-response-was-this/ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ನೂತನ ಅಧ್ಯಕ್ಷ ವಿ.ಎಂ ಮುನಿಯಪ್ಪ, ಮತ್ತು ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ ವರ್ಷ ಜಾರಿಗೊಳಿಸಿದ ಐದು ಯೋಜನೆಗಳು ನಿರಂತರವಾಗಿ ಮುಂದುವರಿದಿವೆ. ರಾಜ್ಯಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಮಿತಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿ ರಚಿಸುವ ಮೂಲಕ ಯೋಜನೆ ಕ್ರಮಬದ್ಧವಾಗಿ ಜಾರಿಗೊಳ್ಳಲು ಸರ್ಕಾರ ಯತ್ನಿಸಿದೆ. ಯಾವುದೇ ಕಾರಣಕ್ಕೂ ಅರ್ಹರು ಯೋಜನೆಯಿಂದ ವಂಚಿತರಾಗಬಾರದು ಎನ್ನುವ ಧೈಯಕ್ಕೆ ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳು ಸಮಿತಿ ಸದಸ್ಯರು ಸಾರ್ವಜನಿಕರಿಗೆ ನ್ಯಾಯ ದೊರಕಿಸುವಲ್ಲಿ ಪ್ರಮಾಣಿಕ ಕೆಲಸ ಮಾಡಬೇಕು ಎಂದರು.
ಇಸ್ಲಾಮಾಬಾದ್:- ಮುಂಬೈ ದಾಳಿಕೋರ ರಾಣಾ ತನ್ನ ಪ್ರಜೆಯಲ್ಲ ಎಂದು ಹೇಳುವ ಮೂಲಕ ದಿಢೀರ್ ಪಾಕ್ ಸ್ಪಷ್ಟನೆ ಕೊಟ್ಟಿದೆ. https://ainkannada.com/construction-of-an-international-airport-near-shira-home-ministers-response-was-this/ ಮುಂಬೈ ದಾಳಿಯ ಉಗ್ರ ತಹವ್ವೂರ್ ರಾಣಾ ತನ್ನ ಪ್ರಜೆಯಲ್ಲ, ಆತ ಕೆನಡಾದ ಪ್ರಜೆ ಎಂದು ಪಾಕಿಸ್ತಾನಹೇಳಿದೆ. ಅಮೆರಿಕದಿಂದ ರಾಣಾನನ್ನು ಭಾರತ ಕರೆ ತರುತ್ತಿದ್ದಂತೆ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ. ಆತ ತನ್ನ ಹೆಸರನ್ನು ಹೇಳಬಹುದು ಎಂಬ ಭಯದಿಂದ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡದ ಪಾಕ್ ಈಗ ದಿಢೀರ್ ಸ್ಪಷ್ಟೀಕರಣ ನೀಡಿದೆ. ಈ ಸಂಬಂಧ ವಾರದ ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ವಿದೇಶಾಂಗ ಇಲಾಖೆ, ರಾಣಾ ಎರಡು ದಶಕಗಳಿಗೂ ಹೆಚ್ಚು ಕಾಲ ತನ್ನ ಪೌರತ್ವವನ್ನು ನವೀಕರಿಸದ ಕಾರಣ ಆತ ಪಾಕಿಸ್ತಾನಿ ಪ್ರಜೆಯಲ್ಲ ಎಂದು ಹೇಳಿದೆ. ಕಳೆದ ಎರಡು ದಶಕಗಳಿಂದ ತಹವ್ವೂರ್ ರಾಣಾ ತನ್ನ ಪಾಕಿಸ್ತಾನಿ ದಾಖಲೆಗಳನ್ನು ನವೀಕರಿಸಿಲ್ಲ. ಇದರಿಂದ ಆತ ಕೆನಡಾ ಪ್ರಜೆ ಎನ್ನುವುದು ಸ್ಪಷ್ಟವಾಗಿದೆ ಎಂದು ತಿಳಿಸಿದೆ. ಕೊನೆಗೂ ಭಾರತಕ್ಕೆ ಬಂದ ಮುಂಬೈ ದಾಳಿ ಉಗ್ರ ರಾಣಾ:- ಇನ್ನೂ ಮುಂಬೈ ಭಯೋತ್ಪಾದಕ…
ತುಮಕೂರು : ತುಮಕೂರು ರೈಲ್ವೇ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲು ಪ್ರಸ್ತಾಪ ಬಂದಿದೆ. ಈ ಬಗ್ಗೆ ಸಿಎಂ ಜೊತೆಗೆ ಮಾತನಾಡಿ, ಒಪ್ಪಿಗೆ ಪಡೆದು ಆದೇಶ ಹೊರಡಿಸುತ್ತಾರೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು. ತುಮಕೂರಿನಲ್ಲಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಚಿವ ಜಿ.ಪರಮೇಶ್ವರ್ ಅವರು, ಶಿವಕುಮಾರ ಸ್ವಾಮೀಜಿಗಳ ಜನ್ಮದಿನಾಚರಣೆಗೆ ಬರಲು ಆಗಿರಲಿಲ್ಲ. ಇವತ್ತು ಸ್ವಾಮೀಜಿಗೆ ಗೌರವ ಸಮರ್ಪಣೆ ಮಾಡಲು ಬಂದಿದ್ದೇನೆ. ಸಿದ್ದಲಿಂಗಸ್ವಾಮೀಜಿಗೆ ನಮನ ಸಲ್ಲಿಸಿದ್ದೇನೆ. ನಮ್ಮ ಕುಟುಂಬಕ್ಕೂ ಮಠಕ್ಕೂ ಅವಿನಾಭವ ಸಂಬಂಧವಿದೆ. ನಮ್ಮ ತಂದೆ ಹಾಗೂ ಹಿರಿಯ ಸ್ವಾಮೀಜಿ ಜೊತೆಗೆ ಇದ್ದಂತಹ ಸಂಬಂಧ ಯಾವಾಗಲೂ ಇರುತ್ತದೆ. ನಾವು ಈ ಸಂಬಂಧವನ್ನು ನಾವು ಮುನ್ನಡೆಸಿಕೊಂಡು ಹೋಗುತ್ತೇವೆ ಎಂದರು. ತುಮಕೂರು ರೈಲ್ವೇ ನಿಲ್ದಾಣ ಸ್ವಾಮೀಜಿ ಅವರ ಹೆಸರಿನಲ್ಲಿ ಶಾಶ್ವತವಾಗಿ ಇರುತ್ತದೆ ಎಂದರು. https://ainkannada.com/saigold-palace-vinay-guruji-actor-kiccha-sudeep-inaugurate-7th-store/ ಭದ್ರಮೇಲ್ದಂಡೆ ಯೋಜನೆಗೆ ಕೇಂದ್ರಕ್ಕೆ ಒತ್ತಾಯ ಮಾಡಿದ್ವು. ರಾಷ್ಟ್ರೀಯ ಯೋಜನೆ ಅಂತ ಘೋಷಣೆ ಮಾಡಲಾಗಿತ್ತು. ಎರಡು ವರ್ಷದ ಹಿಂದೆ 5300 ಕೋಟಿ ರೂಪಾಯಿಯನ್ನ ಅನುದಾನ ಕೊಡ್ತೀವಿ…
ಬೆಂಗಳೂರು:- ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಎಂಬ ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/saigold-palaces-7th-store-inaugurated-in-the-presence-of-vinay-guruji-accompanied-by-actor-kiccha-sudeep/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರಾಯರೆಡ್ಡಿ ಹೇಳಿಕೆ ನಾನು ಕೇಳಿದ್ದೇನೆ. ಮಾಧ್ಯಮಗಳಲ್ಲೂ ನಾನು ನೋಡಿದ್ದೇನೆ. ಜನರಲ್ ಆಗಿ ಅವರು ಅಸೆಸ್ ಮಾಡಿರಬಹುದು. ನೇರವಾಗಿ ಎಲ್ಲಿಯೂ ಹೇಳಿಲ್ಲ. ಅದಕ್ಕೆ ಹೆಚ್ಚು ಒತ್ತು ಕೊಡಬೇಕಿಲ್ಲ. ಸರ್ಕಾರದ ಬಗ್ಗೆ ಪರ್ಟಿಕ್ಯುಲರ್ ಎಲ್ಲಿಯೂ ಹೇಳಿಲ್ಲ ಎಂದರು. ಕಾಮಗಾರಿಗಳಲ್ಲಿ ಗುಣಮಟ್ಟ ಇಲ್ಲ ಎಂಬ ವಿಚಾರವಾಗಿ ಮಾತನಾಡಿ, ಕಳಪೆ ಆಗಿದೆ ಅಂತ ಹೇಳ್ತಾರೆ. ಕೆಕೆಆರ್ ಡಿಬಿಯಲ್ಲಿ ಅವರು ಸದಸ್ಯರಿದ್ದಾರೆ. ಅವರು ಅಲ್ಲಿಯೇ ಕೇಳಬಹುದು. ಕ್ರಮಕೈಗೊಳ್ಳುವ ವಿಚಾರ ಬರಲ್ಲ. ಅವರು ನೇರವಾಗಿ ಹೇಳಿದ್ದಾರಾ? ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳಿದ್ದಾರಾ? ಎಂದು ಪ್ರಶ್ನಿಸಿದರು. ಗುತ್ತಿಗೆದಾರರ ಆರೋಪ ವಿಚಾರವಾಗಿ ಮಾತನಾಡಿ, ಸ್ಪೆಷಲ್ ಎನ್ ಒಸಿ ಕೊಡಲು ಅವಕಾಶವಿದೆ. ನಮ್ಮ ಇಲಾಖೆಗೆ ೨೦% ಅವಕಾಶವಿದೆ. ಒಳ್ಳೆಯದಿದ್ದರೆ ಅವರು ಹೇಳಲಿ. ಅದನ್ನ ನಾವು ಸರಿಪಡಿಸಿಕೊಳ್ಳಬಹುದು.ಅವರು ಶಿಫಾರಸು ಮಾಡ್ತಾರೆ.ಇಂತವರಿಗೆ ಕೊಡಿ ಅಂತ ಕೇಳ್ತಾರೆ.…
ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಚಿನ್ನದ ಮಳಿಗೆಗಳಲ್ಲಿ ಒಂದಾದ ಶ್ರೀ ಸಾಯಿಗೋಲ್ಡ್ ಪ್ಯಾಲೇಸ್ ಇದೀಗ ಬೆಂಗಳೂರಿನಲ್ಲಿ ತನ್ನ ಏಳನೇ ಶಾಖೆಯನ್ನು ಆರಂಭಿಸಿದೆ. ಗುರುವಾರದಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ಹೊಸ ಮಳಿಗೆಯ ಉದ್ಘಾಟನೆ ಅದ್ದೂರಿಯಿಂದ ನೆರವೇರಿದೆ. ಶ್ರೀ ವಿನಯ್ ಗುರೂಜಿ ಅವರ ದಿವ್ಯ ಸಾನಿಧ್ಯದಲ್ಲಿ, ಅಭಿನಯ ಚಕ್ರವರ್ತಿ, ಕನ್ನಡದ ಮಾಣಿಕ್ಯ ಸುದೀಪ್ ಅವರು ನೂತನ ಮಲ್ಲೇಶ್ವರಂನಲ್ಲಿನ ನೂತನ ಮಳಿಗೆಯನ್ನು ಉದ್ಘಾಟಿಸಿ, ಶುಭಕೋರಿದರು. ಕಾರ್ಯಕ್ರಮದಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ , ಮಾಜಿ ಉಪಮುಖ್ಯಮಂತ್ರಿ, ಶಾಸಕ ಸಿ.ಎನ್. ಅಶ್ವಥ್ ನಾರಾಯಣ್ , ನಟ ಅಶ್ವಿನಿ ಪುನೀತ್ ರಾಜ್ಕುಮಾರ್ , ಎಡಿಜಿಪಿ ವಿ.ರಾಜ್ ಕುಮಾರ್, ಆರ್. ಪಿ ರವಿಶಂಕರ್ , ಸತ್ಯನಾರಾಯಣ, ಹಿರಿಯ ನಟಿ ಪ್ರೇಮ, ಗಾಯಕ ಚಂದನ್ ಶೆಟ್ಟಿ , ಬಿಗ್ ಬಾಸ್ ಖ್ಯಾತಿಯ ನಟಿ ಅನುಷಾ ರೈ, ನಟಿ ಐಶ್ವರ್ಯ ಸಿಂಧೋಗಿ, ನಟ ಶಿಶಿರ್ ಶಾಸ್ತ್ರಿ ಸೇರಿದಂತೆ ಗಣ್ಯರು ಈ ಕಾರ್ಯಕರ್ಮದಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಮಾತನಾಡಿದ…
ಇತ್ತೀಚಿನ ದಿನಗಳಲ್ಲಿ ಮಧುಮೇಹ ಬಹುತೇಕ ಜನರಲ್ಲಿ ಕಾಣಿಸಿಕೊಳ್ಳುತ್ತಿರುವ ಸಾಮಾನ್ಯ ಕಾಯಿಲೆ ಎಂಬಂತಾಗಿದೆ. ದೇಹದ ಮೆದೋಜೀರಕ ಗ್ರಂಥಿಯಲ್ಲಿ ಇನ್ಸುಲಿನ್ ಕೊರತೆ ಉಂಟಾಗಿ ಕಡಿಮೆ ಪ್ರಮಾಣದ ಇನ್ಸುಲಿನ್ ಉತ್ಪತ್ತಿಯಾಗುವುದರಿಂದ ರಕ್ತದಲ್ಲಿ ಗ್ಲೂಕೋಸ್ ಪ್ರಮಾಣ ಹೆಚ್ಚಾಗಿ ಉಂಟಾಗುವುದೇ ಈ ಮಧುಮೇಹ. https://ainkannada.com/aim-for-a-podi-free-village-cm-instructs-to-complete-survey/ ಇಂತಹ ಮಧುಮೇಹದಿಂದ ಬಳಲುತ್ತಿರುವವರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಊಟ, ಉಪಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಮಧುಮೇಹ ಅಥವಾ ಸಕ್ಕರೆಕಾಯಿಲೆಯಿಂದ ಬಳಲುತ್ತಿರುವವರು ತಮ್ಮ ದೈನಂದಿನ ಆಹಾರ ಪದ್ಧತಿಯ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು. ಕೆಲವೊಂದು ಆಹಾರಗಳನ್ನು ಕಡಿಮೆ ತಿನ್ನಬೇಕು ಅಂದ್ರೆ ಮಿತ ಪ್ರಮಾಣದಲ್ಲಿ ಸೇವನೆ ಮಾಡಬೇಕು, ಇನ್ನು ಕೆಲವು ಆಹಾರ ಪದಾರ್ಥಗಳು, ಆರೋಗ್ಯಕ್ಕೆ ಆರೋಗ್ಯಕಾರಿಯಾಗಿದ್ದರೂ ಕೂಡ, ಮಧುಮೇಹ ಇರುವವರು ಮಾತ್ರ ಇಂತಹ ಆಹಾರಗಳನ್ನು ಸಂಪೂರ್ಣವಾಗಿ ಬಿಟ್ಟು ಬಿಡಬೇಕಾಗಿ ಬರುತ್ತದೆ ಇವೆಲ್ಲಾದರ ಜೊತೆಗೆ ವೈದ್ಯರು ನೀಡುವ ಔಷಧಿಗಳನ್ನು ಸರಿಯಾಗಿ ತೆಗೆದುಕೊಂಡು ನಿಯಮಿತ ವಾದ ಆಹಾರ ಪದ್ಧತಿಯನ್ನು ರೂಢಿ ಮಾಡಿಕೊಳ್ಳುವುದರಿಂದ ಈ ಕಾಯಿಲೆಯನ್ನು ತಕ್ಕಮಟ್ಟಿಗೆ ಆದರೂ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ನೆರವಾಗುತ್ತದೆ. ಈ…
ಬೆಂಗಳೂರು:- ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ರಾಷ್ಟ್ರೀಯ ಭೂಮಾಪನ ದಿನಾಚರಣೆ ಸಮಾರಂಭ ಜರುಗಿದೆ. https://ainkannada.com/good-news-from-the-state-government-for-revenue-property-owners-in-bengaluru/ ಇದೇ ವೇಳೆ ಇಲಾಖೆಯ 2 ವರ್ಷದ ಸಾಧನೆ ಕೈಪಿಡಿಯನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಹಾಗೆಯೇ ಭೂಮಾಪನ ಇಲಾಖೆ ಸುತ್ತೋಲೆಯ ಸಂಪುಟ ಬಿಡುಗಡೆ ಮಾಡಿದರು. ಭೂ ಮಾಪಕರಿಗೆ ಆಧುನಿಕ ಸರ್ವೆ ಉಪಕರಣ ರೋವರ್ಗಳ ವಿತರಣೆ ಮಾಡಲಾಗಿದ್ದು, ಸ್ವಮಿತ್ವ ಯೋಜನೆಯಡಿ ಗ್ರಾಮೀಣ ಜನವಸತಿ ಪ್ರದೇಶದ ನಕ್ಷೆ ಬಿಡುಗಡೆ ಮಾಡಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಕಂದಾಯ ಸಚಿವ ಕೃಷ್ಣಬೈರೇಗೌಡ ಈ ವೇಳೆ ಮಾತನಾಡಿ, 7 ವರ್ಷಗಳಿಂದ ಭೂ ಮಾಪನ ದಿನಾಚರಣೆ ಆಚರಿಸಿರಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದೊಡ್ಡ ಕಾರ್ಯಕ್ರಮವಾಗಿದೆ. ರೈತರ ಕೆಲಸ ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿದ್ದಾರೆ. 1802ರಲ್ಲಿ ಸರ್ವೇ ನಡೆದಿದೆ. ವೈಜ್ಞಾನಿಕವಾಗಿ ಸರ್ವೇ ಮಾಡಬೇಕು ಎಂದು ಹೇಳಿ ಕನ್ಯಾಕುಮಾರಿಯಿಂದ ಬೆಂಗಳೂರಿನವರೆಗೂ ಸರ್ವೇ ಮಾಡಲಾಗಿತ್ತು. ಅದೇ ರೀತಿ ಅಕ್ಕಪಕ್ಕದ ದೇಶಗಳಿಗೂ ಇದೇ ದಿನ ಸರ್ವೇ ದಿನ ಆಚರಣೆ ಮಾಡುತ್ತಾ ಬಂದಿದ್ದೇವೆ. ದಕ್ಷಿಣ ಏಷ್ಯದ ವೈಜ್ಞಾನಿಕ ಸರ್ವೇ ಆರಂಭವಾಗಿದ್ದೇ…