Author: AIN Author

ಬೆಂಗಳೂರು:- ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ರಾಷ್ಟ್ರೀಯ ಭೂಮಾಪನ ದಿನಾಚರಣೆ ಸಮಾರಂಭ ಜರುಗಿದೆ. https://ainkannada.com/good-news-from-the-state-government-for-revenue-property-owners-in-bengaluru/ ಇದೇ ವೇಳೆ ಇಲಾಖೆಯ 2 ವರ್ಷದ ಸಾಧನೆ ಕೈಪಿಡಿಯನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಹಾಗೆಯೇ ಭೂಮಾಪನ ಇಲಾಖೆ ಸುತ್ತೋಲೆಯ ಸಂಪುಟ ಬಿಡುಗಡೆ ಮಾಡಿದರು. ಭೂ ಮಾಪಕರಿಗೆ ಆಧುನಿಕ ಸರ್ವೆ ಉಪಕರಣ ರೋವರ್​ಗಳ ವಿತರಣೆ ಮಾಡಲಾಗಿದ್ದು, ಸ್ವಮಿತ್ವ ಯೋಜನೆಯಡಿ ಗ್ರಾಮೀಣ ಜನವಸತಿ ಪ್ರದೇಶದ ನಕ್ಷೆ ಬಿಡುಗಡೆ ಮಾಡಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಕಂದಾಯ ಸಚಿವ ಕೃಷ್ಣಬೈರೇಗೌಡ ಈ ವೇಳೆ ಮಾತನಾಡಿ, 7 ವರ್ಷಗಳಿಂದ ಭೂ ಮಾಪನ ದಿನಾಚರಣೆ ಆಚರಿಸಿರಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದೊಡ್ಡ ಕಾರ್ಯಕ್ರಮವಾಗಿದೆ. ರೈತರ‌ ಕೆಲಸ ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿದ್ದಾರೆ. 1802ರಲ್ಲಿ ಸರ್ವೇ ನಡೆದಿದೆ. ವೈಜ್ಞಾನಿಕವಾಗಿ ಸರ್ವೇ ಮಾಡಬೇಕು ಎಂದು ಹೇಳಿ ಕನ್ಯಾಕುಮಾರಿಯಿಂದ ಬೆಂಗಳೂರಿನವರೆಗೂ ಸರ್ವೇ ಮಾಡಲಾಗಿತ್ತು. ಅದೇ ರೀತಿ ಅಕ್ಕಪಕ್ಕದ ದೇಶಗಳಿಗೂ ಇದೇ ದಿನ ಸರ್ವೇ ದಿನ ಆಚರಣೆ ಮಾಡುತ್ತಾ ಬಂದಿದ್ದೇವೆ. ದಕ್ಷಿಣ ಏಷ್ಯದ ವೈಜ್ಞಾನಿಕ ಸರ್ವೇ ಆರಂಭವಾಗಿದ್ದೇ…

Read More

ಬೆಂಗಳೂರು:- ಬೆಂಗಳೂರಿನ ರೆವಿನ್ಯೂ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್​ ಕೊಟ್ಟಿದೆ. ಇಷ್ಟು ದಿನ ಬಿಡಿಎಗೆ ಇದ್ದ ಭೂ ಪರಿವರ್ತನೆ ಅಧಿಕಾರವನ್ನು ಇದೀಗ ಬಿಬಿಎಂಪಿಗೆ ಹಸ್ತಾಂತರಿಸಲಾಗಿದೆ. ಇನ್ಮುಂದೆ ರೆವಿನ್ಯೂ ಸ್ವತ್ತುಗಳಿಗೂ ನಕ್ಷೆ ಮಂಜೂರಾತಿ ಭಾಗ್ಯ ದೊರೆಯಲಿದೆ. https://ainkannada.com/the-great-border-is-calling-shivaji-university-is-trying-to-attract-students-from-the-border-area-by-offering-them-offers/ ಬಿಬಿಎಂಪಿ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ ಆದಾಯ ಹರಿದು ಬರುವ ನಿರೀಕ್ಷೆಯಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಮೊದಲು ಬಿಡಿಎಗೆ ಇದ್ದ ರೆವಿನ್ಯೂ ಸ್ವತ್ತುಗಳ ಭೂ ಪರಿವರ್ತನೆ ಅಧಿಕಾರವನ್ನು ಇನ್ಮುಂದೆ ಬಿಬಿಎಂಪಿ ನಗರ ಯೊಜನೆ ವಿಭಾಗಕ್ಕೆ ಅಧಿಕಾರ ನೀಡಲಾಗಿದೆ. ಎಡಿಟಿಪಿಗಳಿಗೆ ಭೂ ಪರಿವರ್ತನೆ ಪವರ್​​ ನೀಡಲಾಗಿದ್ದು, ಕನ್ವರ್ಷನ್ ಮಾಡಿ, ಸುಧಾರಣಾ ಶುಲ್ಕ ಪಾವತಿಸಿಕೊಂಡು ಪ್ಲ್ಯಾನ್ ಕೊಡಲು ಅವಕಾಶ ನೀಡಲಾಗಿದೆ. ಇನ್ನು ಏಕ ನಿವೇಶನ ವಿನ್ಯಾಸ ನಕ್ಷೆ ಮಂಜೂರಾತಿ ಅಧಿಕಾರದಲ್ಲಿ ಮಾರ್ಪಾಡು ಮಾಡಲಾಗಿದೆ. ಬಿ ಖಾತಾಗಳಿಗೆ ಕಟ್ಟಡ ಮಂಜೂರಾತಿ ನಕ್ಷೆ ಸಿಗುತ್ತಿರಲಿಲ್ಲ. ಆದರೆ ಸರ್ಕಾರದ ಈ ನಿರ್ಧಾರ ರೆವಿನ್ಯೂ ಜಾಗದ ಮಾಲೀಕರ ಸಂಕಷ್ಟ ದೂರ ಮಾಡಿದೆ.

Read More

ಬೆಳಗಾವಿ : ಬೆಳಗಾವಿ‌ ವಿಚಾರವಾಗಿ ನಿರಂತರವಾಗಿ ಖ್ಯಾತೆ ತೆಗೆಯುವ ಮಹಾರಾಷ್ಟ್ರ ಇದೀಗ ಮತ್ತೆ ಸುದ್ದಿಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಇರುವ ಶಿವಾಜಿ ವಿಶ್ವವಿದ್ಯಾಲಯವು ಗಡಿ ಭಾಗದ ಮರಾಠಿ ಭಾಷಿಕ ವಿದ್ಯಾರ್ಥಿಗಳಿಗೆ ಬಂಫರ್‌ ಆಫರ್‌ ಕೊಡುವ ಮೂಲಕ ತನ್ನತ್ತ ಸೆಳೆಯುವ ಯತ್ನ ನಡೆಸಿದೆ.   ಹೌದು, ಗಡಿ ಸಮಸ್ಯೆ ಇರೋ ಬೆಳಗಾವಿ ಸೇರಿ 165 ಗ್ರಾಮಗಳ ವಿದ್ಯಾರ್ಥಿಗಳಿಗೆ  ಆಫರ್‌ ನೀಡಿದ್ದು, ಶೇ 75ರಷ್ಟು ಶುಲ್ಕು ವಿನಾಯಿತಿ, ಉಚಿತ ಹಾಸ್ಟೆಲ್ ಸೌಲಭ್ಯ ನೀಡಲು ಮುಂದಾಗಿದೆ. ಮರಾಠಿ ಭಾಷಿಕ ವಿದ್ಯಾರ್ಥಿಗಳಿಗಾಗಿ ಬೆಳಗಾವಿಯ ಮೂರು ಕಡೆಗಳಲ್ಲಿ ಕಾರ್ಯಾಗಾರ ಆಯೋಜಿಸಿದೆ. ಏಪ್ರಿಲ್ 22ರಂದು ನಡೆಯಲಿರೋ ಏಕಕಾಲದಲ್ಲಿ ಕಾರ್ಯಾಗಾರ ನಡೆಯಲಿದ್ದು, ನಿಪ್ಪಾಣಿ, ಬೆಳಗಾವಿ ಹಾಗೂ ಖಾನಾಪುರದಲ್ಲಿ ಕಾರ್ಯಾಗಾರ ಮಾಡಿ ಕೋರ್ಸ್, ಸೌಲಭ್ಯ ಬಗ್ಗೆ ಮಾಹಿತಿ ನೀಡಲು ಮುಂದಾಗಿದೆ. ಶಿವಾಜಿ ವಿಶ್ವವಿದ್ಯಾನಿಲಯದಲ್ಲಿ ಮುಂದಿನ ತಿಂಗಳು ವಿವಿಧ ಕೋರ್ಸ್ ಗಳ ಪ್ರವೇಶಾತಿ ಆರಂಭವಾಗಿದ್ದು, ಗಡಿ ಭಾಗದ ವಿದ್ಯಾರ್ಥಿಗಳನ್ನು ಸೆಳೆಯಲು ಮುಂದಾಗಿದೆ. ಹೀಗಾಗಿ ನಾನು ಮರಾಠಿ ಭಾಷಿಕ ಎಂದು ಪ್ರಮಾಣ ಪತ್ರ ಕೊಡುವ ಅಭ್ಯರ್ಥಿಗಳಿಗೆ ರಿಯಾಯಿತಿ…

Read More

ಜಿಟಿ ವಿರುದ್ಧ ಸೋಲಿನ ಬೆನ್ನಲ್ಲೇ ರಾಜಸ್ಥಾನ ತಂಡದ ನಾಯಕನಿಗೆ ಬಿಗ್ ಶಾಕ್ ಎದುರಾಗಿದ್ದು, ಸಂಜು ಸ್ಯಾಮ್ಸನ್‌ಗೆ ಭಾರೀ ದಂಡ ವಿಧಿಸಲಾಗಿದೆ. https://ainkannada.com/will-the-caste-census-report-get-a-green-signal-tomorrow/ ಗುಜರಾತ್‌ ಟೈಟಾನ್ಸ್‌ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ಹೀನಾಯ ಸೋಲು ಕಂಡಿತು. ಈ ಬೆನ್ನಲ್ಲೇ ಆರ್‌ಆರ್‌ ತಂಡದ ನಾಯಕ ಸಂಜು ಸ್ಯಾಮ್ಸನ್‌ ಅವರಿಗೆ 24 ಲಕ್ಷ ರೂ. ದಂಡ ವಿಧಿಸಿದೆ. ಪಂದ್ಯದಲ್ಲಿ ನಿಧಾನಗತಿಯ ಓವರ್‌ ರೇಟ್‌ ಕಾಯ್ದುಕೊಂಡಿದ್ದಕ್ಕಾಗಿ ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಪ್ರಸಕ್ತ ಆವೃತ್ತಿಯಲ್ಲಿ ಸ್ಲೋ ಓವರ್‌ ರೇಟ್‌ಗಾಗಿ ಆರ್‌ಆರ್‌ಗೆ 2ನೇ ಬಾರಿ ದಂಡ ವಿಧಿಸಲಾಗಿದೆ. ಇನ್ನೊಂದು ಪಂದ್ಯದಲ್ಲಿ ಈ ಘಟನೆ ಮರುಕಳಿಸಿದ್ರೆ, ಸಂಜು ಸ್ಯಾಮ್ಸನ್‌ ಒಂದು ಪಂದ್ಯದಿಂದ ಬ್ಯಾನ್‌ ಆಗಲಿದ್ದಾರೆ ಎಂದು ತಿಳಿದುಬಂದಿದೆ

Read More

ಗದಗ :  ಗದಗ ಜಿಲ್ಲೆಯಲ್ಲಿ ಕಾಮುಕನ ಪೈಶಾಚಿಕ ಕೃತ್ಯವೊಂದು ಬಯಲಾಗಿದೆ. ತಂದೆ ವಿರುದ್ಧವೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 16 ವರ್ಷದ ಬಾಲಕಿ ಮೇಲೆ 55 ವರ್ಷದ ತಂದೆಯಿಂದ ಅತ್ಯಾಚಾರ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಸಂತ್ರಸ್ತ ಬಾಲಕಿಯ ತಾಯಿ, ತನ್ನ ಪತಿ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾಳೆ. ಸದ್ಯ ಆರೋಪಿ ತಂದೆ ಮೇಲೆ‌ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿದ್ದು, ಇದೀಘ ಅಪ್ರಾಪ್ತ ಬಾಲಕಿ ಗರ್ಭಿಣಿ ಆಗಿದ್ದಾಳೆ ಎಂದು ದೂರಲಾಗಿದೆ. ಅಪ್ರಾಪ್ತ ಬಾಲಕಿಗೆ ಗದಗ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಿಸಿರುವ ‌ಮುಳಗುಂದ ಠಾಣಾ ಪೊಲೀಸರು, ಆರೋಪಿ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೇಸಿಗೆಯಲ್ಲಿ ಫ್ಯಾನ್ ಇಲ್ಲದೇ ಮಲಗಲು ಸಾಧ್ಯವಿಲ್ಲ, ಬೆವರು ಇಳಿಯುವುದರಲ್ಲಿ ಕಿರಿಕಿರಿ ಉಂಟಾಗುವುದು ಸಹಜ. ಆದರೆ ಫ್ಯಾನ್ ಆನ್ ಮಾಡಿದರೆ ನಿದ್ರೆ ಮಾಡುವಾಗ ತಂಪಾದ ಗಾಳಿ ಬರುತ್ತದೆ. ಇದು ಆರಾಮದಾಯಕವಾಗಿ ನಿದ್ರೆ ಮಾಡಲು ಕಾರಣವಾಗುತ್ತದೆ. ರಾತ್ರಿ ಹೊತ್ತು ವಾತಾವರಣ ತುಂಬಾ ಬಿಸಿಯಾಗಿದ್ದರೆ ನಿದ್ರಿಸುವುದು ಕಷ್ಟ. ಹೆಚ್ಚು ಬೆವರಲು ಆರಂಭವಾಗುತ್ತದೆ. ಇದರಿಂದ ನಿಮ್ಮ ದೇಹಕ್ಕೆ ಅಗತ್ಯವಿರುವ ಪ್ರಮುಖ ಖನಿಜಗಳ ನಷ್ಟಕ್ಕೆ ಕಾರಣವಾಗಬಹುದು. https://ainkannada.com/a-muslim-woman-was-scolded-by-a-thug-for-sitting-on-a-bike-with-her-boyfriend/ ಬೇಸಿಗೆಯಲ್ಲಿ, ಹಲವು ಬಾರಿ ಮನೆಯಲ್ಲಿರುವ ಫ್ಯಾನ್ ಬಹುತೇಕ ದಿನವಿಡೀ ಚಾಲನೆಯಲ್ಲಿರುತ್ತದೆ. ಈ ಪರಿಸ್ಥಿತಿಯಲ್ಲಿ, ಫ್ಯಾನ್ ಅನ್ನು ಎಷ್ಟು ಸಮಯ ಚಾಲನೆಯಲ್ಲಿ ಇಡಬೇಕು ಎಂಬ ಪ್ರಶ್ನೆ ಅನೇಕ ಜನರ ಮನಸ್ಸಿನಲ್ಲಿ ಉದ್ಭವಿಸುತ್ತದೆ. ಏಕೆಂದರೆ, ಅನೇಕ ಜನರು ನಿರಂತರವಾಗಿ ಗಂಟೆಗಟ್ಟಲೆ ಓಡಿದರೆ, ಫ್ಯಾನ್ ಅತಿಯಾಗಿ ಬಿಸಿಯಾಗಿ ಫ್ಯಾನ್ ಕಾಯಿಲ್ ಸುಟ್ಟುಹೋಗುತ್ತದೆ ಅಥವಾ ಬೇರೆ ಏನಾದರೂ ಸಮಸ್ಯೆ ಉಂಟಾಗುತ್ತದೆ ಎಂದು ಭಯಪಡುತ್ತಾರೆ. ಆದ್ದರಿಂದ ಈ ವಿಷಯವನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು, ಫ್ಯಾನ್‌ನ ಕಾರ್ಯವಿಧಾನ, ಅದು ಬಿಸಿಯಾಗುವ ಕಾರಣ ಮತ್ತು ದೀರ್ಘಕಾಲೀನ ಬಳಕೆಯ ಪರಿಣಾಮಗಳ ಬಗ್ಗೆ ತಿಳಿದುಕೊಳ್ಳುವುದು…

Read More

ಬೆಂಗಳೂರು :- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ವರ್ತನೆ ದಿನದಿಂದ ದಿನಕ್ಕೆ ಮಿತಿಮೀರಿದೆ. ಇದೀಗ ಮುಸ್ಲಿಂ ಯುವತಿ ತನ್ನ ಗೆಳೆಯನ ಜೊತೆ ಬೈಕ್‌ ಮೇಲೆ ಕುಳಿತಿದ್ದಕ್ಕೆ ಪುಂಡರ ಗ್ಯಾಂಗ್‌ವೊಂದು ಕಿರಿಕ್‌ ಮಾಡಿ, ಯುವಕನ ಮೇಲೂ ಹಲ್ಲೆ ನಡೆಸಿದ್ದಾರೆ. https://ainkannada.com/kiadb-to-stop-land-acquisition-farmers-lay-siege-to-minister-muniyappas-house-farmers-consume-poison/ ಕಾಲೇಜು ಯುವತಿ ಬೈಕ್‌ ಮೇಲೆ ತನ್ನ ಗೆಳೆಯನ ಬಳಿ ಕುಳಿತಿದ್ದಳು. ಈ ವೇಳೆ ಅಲ್ಲಿಗೆ ಬಂದ ಪುಂಡರ ಗ್ಯಾಂಗ್‌ ಕಿರಿಕ್‌ ಮಾಡಿದೆ. ಕಾಲೇಜಿಗೆ ಹೋಗೋದು ಬಿಟ್ಟು ಇಲ್ಲಿ ಕೂತಿದ್ಯಾ..? ನಿಮ್ಮ ಅಪ್ಪ ಅಮ್ಮನ ನಂಬರ್ ಕೊಡು.. ಮುಸ್ಲಿಂ ಆಗಿ ಈ ರೀತಿ ಮಾಡ್ತಿದ್ಯಾ..? ಇದೇನಾ ನಿಮ್ಮ ಮನೆಯಲ್ಲಿ ಹೇಳಿಕೊಟ್ಟಿದ್ದು ಅಂತ ಪುಂಡರು ಕಿರಿಕ್‌ ಮಾಡಿದ್ದಾರೆ. ಅಲ್ಲದೇ ಆ ಯುತಿಯ ಗೆಳೆಯನಿಗೂ ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ

Read More

ಬೆಂಗಳೂರು: ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. https://ainkannada.com/namma-metro-shock-for-metro-customers-using-mobility-cards-no-use-even-after-putting-money-in-the-card/ ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳಲ್ಲಿ ಪ್ರಕಟಗೊಂಡ 8 ಗಣಿ ಕಂಪೆನಿಗಳ ಕುರಿತಾಗಿ ಪ್ರಕಟಗೊಂಡ ಸುದ್ದಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಪತ್ರಿಕಾ ಹೇಳಿಕೆ ವಿವರ ಹೀಗಿದೆ. 2015 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್‌-1957 ಕಾಯ್ದೆಯಲ್ಲಿ ನವೀಕರಣವು 20 ವರ್ಷಗಳ ಅವಧಿಗೆ ಅನ್ವಯವಾಗುತ್ತಿತ್ತು. ಅದರ ಪ್ರಕಾರ ಸರ್ಕಾರವು “ಗಣಿ ಗುತ್ತಿಗೆಯ ನವೀಕರಣಕ್ಕೆ ಫಾರೆಸ್ಟ್‌ ಕ್ಲಿಯರೆನ್ಸ್‌ನ್ನು ಪಡೆದುಕೊಳ್ಳುವ ಸಲುವಾಗಿ ಮಾತ್ರ ಷರತ್ತುಬದ್ಧ ತಾತ್ವಿಕ ಅನುಮೋದನೆ ನೀಡಲಾಗಿದೆ.” ದಿನಾಂಕ: 12.01.2015 ರಂದು ಕೇಂದ್ರ ಸರ್ಕಾರವು ಎಂಎಂಡಿಆರ್‌ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿಯನ್ನು ತಂದ ಕಾರಣ ವಿವಿಧ ಹಂತದ ಪರಿಶೀಲನೆಗಳನ್ನು ನಡೆಸಿ, ದಿನಾಂಕ: 09.02.2015 ರಂದು ಗಣಿ ಗುತ್ತಿಗೆ ನವೀಕರಣಕ್ಕಾಗಿ ನೀಡಿದ್ದ…

Read More

ಬೆಂಗಳೂರು:- ಬೆಂಗಳೂರು ನಮ್ಮ ಮೆಟ್ರೋ ರೈಲಿನಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ವೇಳೆಯಲ್ಲಿಯೇ ಮೊಬಿಲಿಟಿ ಕಾರ್ಡ್‌ ಬಳಸುವ ಮೆಟ್ರೋ ಬಳಕೆದಾರರಿಗೆ ಬಿಗ್ ಶಾಕ್‌ ಎದುರಾಗಿದೆ. ಎನ್‌ಸಿಎಂಸಿ ಕಾರ್ಡ್‌ ಹೊಂದಿರುವ ಪ್ರಯಾಣಿಕರು ತಮ್ಮ ಕಾರ್ಡ್‌ಗಳನ್ನು ರೀಚಾರ್ಜ್ ಮಾಡಲು ಮತ್ತು ಮೆಟ್ರೋ ಪ್ರಯಾಣಗಳಿಗೆ ಅವುಗಳನ್ನು ಬಳಸಲು ಸಾಧ್ಯವಾಗುತ್ತಿಲ್ಲ. https://ainkannada.com/murder-accused-darshan-with-witness-chikkanna-effort-to-destroy-witness/ ಹೀಗಾಗಿ ಬೆಂಗಳೂರು ಮೆಟ್ರೋ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಅಸ್ತಿತ್ವದಲ್ಲಿರುವ ಬಳಕೆದಾರರು ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಸ್ಥಗಿತ ಮಾಡಲಾಗಿದೆ. ತಾಂತ್ರಿಕ ಸಮಸ್ಯೆ ಎದುರಾಗಿದ್ದರಿಂದ ಹಳೆಯ ಮೊಬಿಲಿಟಿ ಕಾರ್ಡ್‌ಗಳಿಗೂ ಕೂಡ ರೀಚಾರ್ಜ್ ಸಮಸ್ಯೆ ಆಗುತ್ತಿದೆ. ಇದರಿಂದ ಸಾವಿರಾರು ಪ್ರಯಾಣಿಕರಿಗೆ ರಿಚಾರ್ಜ್‌ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾರ್ಡ್‌ನಲ್ಲಿ ದುಡ್ಡು ಇದ್ದರೂ ಪ್ರಯಾಣ ಮಾಡಲು ಸಾಧ್ಯವಾಗುತ್ತಿಲ್ಲ. ಮೊಬಿಲಿಟಿ ಕಾರ್ಡ್‌ನಲ್ಲಿ ಸಮಸ್ಯೆ ಆಗುತ್ತಿದ್ದಂತೆ ಏಪ್ರಿಲ್‌ 15 ರವರೆಗೂ NCMC ಕಾರ್ಡ್‌ ವಿತರಣೆ ಮಾಡದೇ ಇರಲು ಬಿಎಂಆರ್‌ಸಿಎಲ್‌ ನಿರ್ಧಾರ ತೆಗೆದುಕೊಂಡಿದೆ. ಸಮಸ್ಯೆಗೆ ಕಾರಣ:- NCMC ಪೂರೈಸುವ RBL ಬ್ಯಾಂಕ್ ತನ್ನ ಮಾರಾಟಗಾರರನ್ನು ಬದಲಾಯಿಸಿದ ನಂತರ ಬ್ಯಾಕೆಂಡ್…

Read More

ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೇಲ್ ಮೇಲೆ ಹೊರ ಬಂದಿರುವ ನಟ ದರ್ಶನ್ ಅವರು ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯೂಸಿ ಆಗಿದ್ದಾರೆ. https://ainkannada.com/darshan-chikkanna-meet-will-this-meeting-be-a-thorn-in-the-side-of-both-of-them/ ಅದರಂತೆ ಬೆನ್ನು ನೋವಿನ ಕಾರಣ ನೀಡಿ ಕೋರ್ಟ್‌ ವಿಚಾರಣೆಗೆ ಗೈರಾಗಿದ್ದ ದರ್ಶನ್‌ ಅವರು ಗೆಳೆಯ ಧನ್ವೀರ್‌ ಅಭಿನಯದ ವಾಮನ ಸಿನಿಮಾವನ್ನು ವೀಕ್ಷಿಸಿದ್ದಾರೆ. ಬುಧವಾರ ರಾತ್ರಿ ಜಿಟಿ ಮಾಲ್‌ನಲ್ಲಿ ವಾಮನ ಚಿತ್ರದ ವಿಶೇಷ ಶೋ ಆಯೋಜಿಸಲಾಗಿತ್ತು. ಇದೇ ವೇಳೆ ಚಿಕ್ಕಣ್ಣ ಕೂಡ ಆಗಮಿಸಿದ್ದರು. ಇದು ದರ್ಶನ್ ಗೆ ಕಂಟಕ ಆಗುವ ಸಾಧ್ಯತೆ ಇದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಚಿಕ್ಕಣ್ಣ ಮೇಲೆ ನಟ ದರ್ಶನ್‌ ಸಿನಿಮಾ ವೀಕ್ಷಣೆ ಮಾಡಿದ್ದು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಅಷ್ಟೇ ಅಲ್ಲದೇ ಚಿಕ್ಕಣ್ಣ ಮೇಲೆ ದರ್ಶನ್‌ ಪ್ರಭಾವ ಬೀರುತ್ತಿದ್ದಾರಾ ಎಂಬ ಪ್ರಶ್ನೆಯೂ ಎದ್ದಿದೆ. ಬೆನ್ನು ನೋವನ್ನು ಲೆಕ್ಕಿಸದೇ ಆಪ್ತನ ಸಿನಿಮಾವನ್ನು ದರ್ಶನ್‌ ಸುಮಾರು ಮೂರು ಗಂಟೆಗಳ ಕಾಲ ಕುಳಿತು ವೀಕ್ಷಿಸಿದ್ದಾರೆ. ಸಿನಿಮಾ ಮಾಡುವ ಸಂದರ್ಭದಲ್ಲಿ ಚಿಕ್ಕಣ್ಣ ಸಹ ಜೊತೆಯಲ್ಲೇ…

Read More