ಬೆಂಗಳೂರು : ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರು ಚಿಕ್ಕಣ್ಣ ಅವರನ್ನು ಭೇಟಿಯಾಗಿರೋದು ಇದೀಗ ಚರ್ಚಗೆ ಗ್ರಾಸವಾಗಿದೆ. ಹೌದು, ನಟ ಚಿಕ್ಕಣ್ಣರನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣಲ್ಲಿ ಸಾಕ್ಷಿಯಾಗಿ ಪರಿಗಣಿಸಿದೆ. ಇದೀಗ ಜಾಮೀನಿನ ಮೇಲೆ ಹೊರಗಿರುವ ದರ್ಶನ್ ಅವರು ಅದೇ ಪ್ರಕರಣದ ಸಾಕ್ಷಿಯಾಗಿರುವ ಚಿಕ್ಕಣ್ಣ ಅವರನ್ನು ಭೇಟಿಯಾಗಿರೋದು ಸಾಕ್ಷಿನಾಶದ ಪ್ರಯತ್ನವಾಗಬಹುದು ಎನ್ನಲಾಗುತ್ತಿದೆ. ಬುಧವಾರ ತೀವ್ರ ಬೆನ್ನು ನೋವಿನ ಕಾರಣ ನೀಡಿ ದರ್ಶನ್ ಕೋರ್ಟ್ ವಿಚಾರಣೆ ಗೈರಾಗಿದ್ದರು. ಇದರಿಂದಾಗಿ ಅಸಮಾಧಾನಗೊಂಡಿದ್ದ ಕೋರ್ಟ್ ದರ್ಶನ್ ಪರ ವಕೀಲರಿಗೆ ಗೈರಾಗಿದ್ದರ ಕುರಿತು ಕ್ಲಾಸ್ ತೆಗೆದುಕೊಂಡಿತ್ತು. ಆದರೆ ಅದೇ ದಿನ ಸಂಜೆ ದರ್ಶನ ಬಂಟ ಧನ್ವೀರ್ ಅಭಿನಯದ ವಾಮನ ಚಿತ್ರ ವೀಕ್ಷಣೆ ಮಾಡಿದ್ದಾರೆ ದರ್ಶನ್. https://ainkannada.com/actor-darshan-faces-inevitable-hardship-even-after-getting-bail-investigation-into-royal-hospitality-case-is-speedy/ ನಿನ್ನೆ ಸಂಜೆ ನಡೆದ ವಾಮನ ಪ್ರೀಮಿಯರ್ ಶೋ ನಲ್ಲಿ ನಟ ದರ್ಶನ್ ಚಿತ್ರ ವೀಕ್ಷಣೆ ಮಾಡಿದ್ದರು. ಈ ವೇಳೆ ನಟ ಚಿಕ್ಕಣ್ಣ ಸಹ ಆಗಮಿಸಿದ್ದು, ಇಬ್ಬರು ಮುಖಾಮುಖಿಯಾಗಿ ಭೇಟಿಯಾಗಿದ್ದಾರೆ. ಹೀಗಾಗಿ ಪ್ರಕರಣದ ಅರೋಪಿಯಾಗಿರುವ ದರ್ಶನ್, ಪ್ರಕರಣದ ಸಾಕ್ಷಿ…
Author: AIN Author
ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆ ಪಂಜಾಬ್ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಗೆ ಭಾರೀ ದಂಡ ವಿಧಿಸಲಾಗಿದೆ. https://ainkannada.com/https-ainkannada-com-young-man-dies-after-being-found-dead-parents-outcry-reaches-its-peak/ ಏ.8 ರಂದು ಪಂಜಾಬ್ನ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆ ಬಿಸಿಸಿಐ ಪಂದ್ಯದ ಶೇ.25 ರಷ್ಟು ಶುಲ್ಕ ಪಾವತಿಸುವಂತೆ ದಂಡ ಹಾಗೂ ಒಂದು ಡಿಮೆರಿಟ್ ಪಾಯಿಂಟ್ ನೀಡಿದ್ದು, ಈ ಸೀಸನ್ನಲ್ಲಿ ದಂಡಕ್ಕೆ ಒಳಗಾದ ಆರನೇ ಆಟಗಾರರಾಗಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿದ ಕುರಿತು ಬಿಸಿಸಿಐ ನಿರ್ದಿಷ್ಟ ಕಾರಣ ತಿಳಿಸಿಲ್ಲವಾದರೂ, ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2ರ ಅಡಿಯಲ್ಲಿ ಲೆವೆಲ್ 1 ಅಪರಾಧವನ್ನು ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ ಹಾಗೂ ಮ್ಯಾಚ್ ರೆಫರಿಯ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ ಎಂದು ತಿಳಿಸಿದೆ.
ಚಾಮರಾಜನಗರ : ಚಾಮರಾಜನಗರ ತಾಲೂಕಿನ ಮಾದಾಪುರ ಸಮೀಪದ ಬುಧವಾರ ಅಪಘಾತದಲ್ಲಿ ಬೆಂಗಳೂರು ಮೂಲದ ಸುಬ್ರಹ್ಮಣ್ಯ ಎಂಬುವರು ಮೃತಪಟ್ಟಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೈಕ್ನಲ್ಲಿ ಬರುವಾಗ నిಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡು ಮೃತಟ್ಟರು. ಅಪಘಾತದಲ್ಲಿ ಧೃತಿ ಹಾಗೂ ಧಾತ್ರಿ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತದೇಹವನ್ನು ಸಿಮ್ಸ್ನಲ್ಲಿ ಇರಿಸಲಾಗಿದ್ದು, ಚಾಮರಾಜನಗರ ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://ainkannada.com/young-man-dies-after-being-found-dead-parents-outcry-reaches-its-peak/ ಗ್ಯಾಸ್ ಟ್ಯಾಂಕರ್ ಸ್ಫೋಟ ಇನ್ನೊಂದೆಡೆ ಚಿತ್ರದುರ್ಗದ ಜಿಆರ್ ಹಳ್ಳಿ ಗ್ರಾಮದಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆಯಿಲ್ ತುಂಬಿ ಕೊಂಡು ಹೋಗುತ್ತಿದ್ದ ಲಾರಿ ಗ್ಯಾಸ್ ಬಂಕ್ ಬಳಿ ಘಟನೆ ನಡೆದಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ದಿನಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಆರೋಗ್ಯಕರವಾಗಿರಲು ನಮ್ಮ ಆಹಾರದಲ್ಲಿ ಹಣ್ಣುಗಳು ಅತ್ಯಗತ್ಯ. ಹಾಗಾಗಿ ಎಲ್ಲರೂ ಒಂದೊಂದು ಬಗೆಯ ಹಣ್ಣುಗಳನ್ನು ತಿನ್ನಬಹುದು. ಆದರೆ ಕೆಲವು ಕಾಯಿಲೆಗಳಲ್ಲಿ, ಜನರು ವೈದ್ಯರ ಸಲಹೆಯೊಂದಿಗೆ ಮತ್ತು ಕಡಿಮೆ ಪ್ರಮಾಣದಲ್ಲಿ ಹಣ್ಣುಗಳನ್ನು ತಿನ್ನಬೇಕು. ಅಂತಹ ಒಂದು ಹಣ್ಣು ಪಿಯರ್ ಹಣ್ಣು. ಅಂದಹಾಗೆ, ಈ ಹಣ್ಣು ಎಲ್ಲರಿಗೂ ಉತ್ತಮವಾಗಿದೆ. ನಾವು ಕೆಲವು ಬಗೆಯ ಹಣ್ಣುಗಳನ್ನು ಮಾತ್ರ ತಿನ್ನುತ್ತೇವೆ. ಕೆಲವು ಹಣ್ಣುಗಳು ರುಚಿ ನೋಡಿಯೂ ಇರುವುದಿಲ್ಲ. ಅಂತಹ ಹಣ್ಣುಗಳಲ್ಲಿ ಪಿಯರ್ ಹಣ್ಣು ಕೂಡ ಒಂದು. ಖಂಡಿತವಾಗಿಯೂ ಒಳ್ಳೆಯ ಹಣ್ಣು. ಪಿಯರ್ ಹಸಿರು ಅಥವಾ ಹಳದಿ ಬಣ್ಣದಲ್ಲಿರುತ್ತವೆ. ಅವುಗಳ ಬೆಲೆಯೂ ಸ್ವಲ್ಪ ಹೆಚ್ಚಾಗಿದೆ. ಆದರೆ ಪಿಯರ್ ತಿನ್ನುವುದರಿಂದಾಗುವ ಪ್ರಯೋಜನಗಳು ಅದ್ಭುತ ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಪಿಯರ್ ಹಣ್ಣಿನಲ್ಲಿ ಆರೋಗ್ಯಕ್ಕೆ ಒಳ್ಳೆಯದಾದ ಹಲವು ಪೋಷಕಾಂಶಗಳಿವೆ. ಪಿಯರ್ ತಿನ್ನುವುದರಿಂದ ನಮಗೆ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳೋಣ https://ainkannada.com/marriage-will-be-arranged-very-soon-for-divers-of-this-zodiac-sign-horoscope-for-thursday-10-april-2025/ ಪಿಯರ್ ಹಣ್ಣಿನಲ್ಲಿ ಪೊಟ್ಯಾಸಿಯಮ್ ಅಧಿಕವಾಗಿರುತ್ತದೆ. ಇದರಲ್ಲಿ ನಾರಿನಂಶವೂ ಅಧಿಕವಾಗಿದೆ. ಇವು ಕೊಲೆಸ್ಟ್ರಾಲ್ ಅನ್ನು ಸಹ ಕಡಿಮೆ ಮಾಡುತ್ತದೆ. ಇದರಿಂದ ಹೃದಯವನ್ನು ಆರೋಗ್ಯವಾಗಿಡಬಹುದು. ಪಿಯರ್…
ಹುಬ್ಬಳ್ಳಿ: ಈಗಲು ಹೋಗಿ ಯುವಕ ಸಾವು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಉಣಕಲ್ ನಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ನಿವಾಸಿ ಸಿದ್ಧಾರ್ಥ ಕನಕಣ್ಣವರ( 18) ಮೃತ ಯುವಕ ನಾಗಿದ್ದಾನೆ.. https://ainkannada.com/hot-summer-krishna-the-lifeblood-has-dried-up-farmers-are-worried/ ಹುಬ್ಬಳ್ಳಿಯ ಬೆಂಗೇರಿಯಲ್ಲಿ ವಾಸವಿದ್ದ ಸಿದ್ಧಾರ್ಥ ಕನಕಣ್ಣವರ ಹೊಟೇಲ್ ನಲ್ಲಿ ಕೆಲಸ ಮಾಡುತಿದ್ದನು. ಗುರುವಾರ ಬೆಳಗ್ಗೆ ಉಣಕಲ್ ಕೆರೆಗೆ ಈಜಲು ಹೋಗಿದ್ದ ವೇಳೆ ಈ ಅವಘಡ ನಡೆದಿದೆ. ಪೊಲೀಸರು ಮೃತ ಯುವಕನ ಶವ ಹೊರ ತೆಗೆದಿದ್ದು, ಮೃತ ಯುವಕನ ತಾಯಿ, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಗಲಕೋಟೆ : ಉತ್ತರ ಕರ್ನಾಟಕ ಭಾಗದ ಜೀವನಾಡಿ ಕೃಷ್ಣಾ ನದಿ ನೀರು ಖಾಲಿಯಾಗುತ್ತಿದ್ದು, ಜಮಖಂಡಿಯ ನದಿ ಪಾತ್ರದ ಜನರಿಗೆ ನೀರಿನ ಹಾಹಾಕಾರ ಶುರುವಾಗುವ ಆತಂಕ ಶುರುವಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬಳಿ ಇರುವ ಕೃಷ್ಣನದಿ ನೀರು ಸುತ್ತಮುತ್ತಲ ಮುತ್ತೂರು ಮೈಗೂರು, ಅಥಣಿ ತಾಲೂಕಿನ ಜುಂಜುರ್ವಾಡ, ಕಂಕನವಾಡಿ, ಹಾಗೂ ತುಬಚಿ ಗ್ರಾಮದ ಜನರಿಗೆ ಮೂಲಾಧಾರವಾಗಿದ್ದು, ಇದೀಗ ನೀರು ಖಾಲಿಯಾಗುತ್ತಿರುವುದರಿಂದ ಜಾನುವಾರುಗಳಿಗೆ ನೀರಿಲ್ಲದಂತಾಗಿದೆ. https://ainkannada.com/lorry-owners-association-goes-on-strike-demanding-fulfillment-of-various-demands/ ಬಹುತೇಕ ಹಿಪ್ಪರಗಿ ಜಲಾಶಯಗಳು ಖಾಲಿಯಾಗುತ್ತಿವೆ. ಹೀಗಾಗಿ ಜಮಖಂಡಿ ತಾಲೂಕಿನ ಕೃಷ್ಣ ನದಿಗೆ ನೀರು ಹರಿಸುವಂತೆ ರೈತರು ಒತ್ತಾಯ ಮಾಡುತ್ತಿದ್ದಾರೆ. ಹಿಪ್ಪರಗಿ ಜಲಾಶಯದಿಂದ ದಿನಕ್ಕೆ ಒಂದು ಟಿಎಂಸಿ ನೀರು ಬಿಡುತ್ತೇನೆ ಅಂತ ಭರವಸೆ ನೀಡಿದ್ದ ಅಧಿಕಾರಿಗಳು ಇದೀಗ ನಿರ್ಲಕ್ಷ್ಯ ತೋರುತ್ತಿದ್ದಾರೆ. ಜನ ಜಾನುಬಾರುಗಳಿಗೆ ಕುಡಿಯಲು ನೀರು ಹರಿಸುವಂತೆ ರೈತರ ಒತ್ತಾಯಿಸಿದ್ದಾರೆ.
ಹುಬ್ಬಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಸಂಘ ಮುಷ್ಕರಕ್ಕೆ ಮುಂದಾಗಿದೆ. ಏಫ್ರಿಲ್ 14ರಿಂದ ಲಾರಿ ಮಾಲೀಕರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದ್ದು, ಹುಬ್ಬಳ್ಳಿಯಲ್ಲಿ ಲಾರಿ ಮಾಲೀಕರಿಂದ ಮಾಹಿತಿ ನೀಡಿದ್ದಾರೆ. ಕಳೆದ ಆರು ತಿಂಗಳಲ್ಲಿ ಐದು ಬಾರಿ ಡೀಸೆಲ್ ಬೆಲೆ ಏರಿಕೆ ಮಾಡಿರುವ ಸರ್ಕಾರದ ನಿರ್ಧಾರ ಖಂಡನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಏ.14ರ ರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಎಂದು ಲಾರಿ ಮಾಲೀಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪಹೇಳಿದ್ದಾರೆ. https://ainkannada.com/dont-go-to-kanakapur-nelamangala-airpot-near-shira-cong-mlas-letter-to-cm/ ಇದೇ ವೇಳೆ ರಾಜ್ಯ ಸರ್ಕಾರ ಅಕ್ಷರಶಃ ಲೂಟಿಗೆ ಇಳಿದಿದೆ. ರಾಜ್ಯ ಹೆದ್ದಾರಿಗಳಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹಿಸುತ್ತಿದೆ. ಝಳಕಿ, ಅತ್ತಿಬೆಲೆ ಆರ್ಟಿಒ ಚೆಕ್ ಪೋಸ್ಟ್ಗಳು ಕೋಟ್ಯಂತರ ಹಣವನ್ನು ಸರ್ಕಾರದ ಪರವಾಗಿ ಅಧಿಕಾರಿಗಳು ಲೂಟಿ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಲಾರಿಗಳ ಸಂಚಾರದಿಂದ ಶೇ 35ರಷ್ಟು ತೆರಿಗೆ ಸಂಗ್ರಹವಾಗುತ್ತಿದೆ. ಲಾರಿ ಮಾಲೀಕರ ಮತ್ತು ಚಾಲಕರ ಹಿತ ಕಾಪಾಡಲು ಮುಂದೆ ಬರುತ್ತಿಲ್ಲ. ರಾಜ್ಯ ರಸ್ತೆಗಳಿಗೆ ಬಣ್ಣ ಬಳಿದು ಟೋಲ್…
ಸೂರ್ಯೋದಯ – 6:07 ಬೆ ಸೂರ್ಯಾಸ್ತ – 6:27 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವಸಂತ ಋತು, ಚೈತ್ರ ಮಾಸ, ತಿಥಿ – ತ್ರಯೋದಶಿ ನಕ್ಷತ್ರ – ಪುಬ್ಬೆ ಯೋಗ – ವೃದ್ಢಿ ಕರಣ – ಕೌಲವ ರಾಹು ಕಾಲ – 01:30 ದಿಂದ 03:00 ವರೆಗೆ ಯಮಗಂಡ – 06:00 ದಿಂದ 07:30 ವರೆಗೆ ಗುಳಿಕ ಕಾಲ – 09:00 ದಿಂದ 10:30 ವರೆಗೆ ಬ್ರಹ್ಮ ಮುಹೂರ್ತ – 4:31ಬೆ. ದಿಂದ 5:19 ಬೆ ವರೆಗೆ ಅಮೃತ ಕಾಲ – 5:20ಬೆ. ದಿಂದ 7:06 ಬೆ. ವರೆಗೆ ಅಭಿಜಿತ್ ಮುಹುರ್ತ – 11:52 ಬೆ.ದಿಂದ 12:42 ಮ.ವರೆಗೆ ಮೇಷ ರಾಶಿ: ವಿವಾಹ ಕಾರ್ಯ ನಿರೀಕ್ಷೆಯಲ್ಲಿರುವವರಿಗೆ ಶುಭ, ಪ್ರೇಮಿಗಳ ಬಾಂಧವ್ಯ ವೃದ್ಧಿ, ಕುಟುಂಬದಲ್ಲಿ ಜಗಳ ಸಂಭವ, ವ್ಯಾಪಾರದ ಆರ್ಥಿಕ ಮುಗ್ಗಟ್ಟು, ಮಕ್ಕಳಿಂದ ಮನಸ್ತಾಪ, ರಾಜಕೀಯ ರಂಗದ ಜನಪ್ರತಿನಿಧಿಗಳಿಗೆ ಅಧಿಕಾರ ಕಳೆದುಕೊಳ್ಳುವ…
ಬೆಂಗಳೂರು:- ನಗರದ ಅತಿ ದೊಡ್ಡ ಚಿನ್ನದ ಮಳಿಗೆ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ನ 7ನೇ ಚಿನ್ನದ ಮಳಿಗೆಯನ್ನು ಸಿಲಿಕಾನ್ ಸಿಟಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ನಾಳೆ ಅಂದ್ರೆ ಏಪ್ರಿಲ್ 10ರ ಗುರುವಾರ ಉದ್ಘಾಟನೆಗೊಳ್ಳಲಿದೆ. https://ainkannada.com/dont-go-to-kanakapur-nelamangala-airpot-near-shira-cong-mlas-letter-to-cm/ ಈ ಬಗ್ಗೆ ಪರಿಷತ್ ಶಾಸಕ ಹಾಗೂ ಸಾಯಿ ಗೋಲ್ಡ್ ಪ್ಯಾಲೇಸ್ ಎಂಡಿ TA ಶರವಣ ಮಾತನಾಡಿ, ಶ್ರೀಸಾಯಿ ಗೋಲ್ಡ್ ಪ್ಯಾಲೇಸ್ನ 7ನೇ ಮಳಿಗೆ ಮಲ್ಲೇಶ್ವರದಲ್ಲಿ ಏಪ್ರಿಲ್ 10ರ ಗುರುವಾರ ಪ್ರಾರಂಭಗೊಳ್ಳಲಿದೆ. ಶ್ರೀ ವಿನಯ್ ಗುರೂಜಿ ಸಾನ್ನಿಧ್ಯ ಇರಲಿದ್ದು, ನಟ ಸುದೀಪ್ ಅವರು ಸ್ಟೋರ್ ಅನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಡೈಮಂಡ್ ವಿಭಾಗವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಡಿಸಿಎಂ, ಶಾಸಕ ಸಿ.ಎನ್.ಅಶ್ವತ್ಥನಾರಾಯಣ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್, ಎಡಿಜಿಪಿ ವಿರಾಜ್ ಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಆರ್.ಪಿ.ರವಿಶಂಕರ್, ಸತ್ಯನಾರಾಯಣ, ನಟಿ ಪ್ರೇಮಾ, ಗಾಯಕ ಚಂದನ್ ಶೆಟ್ಟಿ, ಅನುಷಾ ರೈ, ಐಶ್ವರ್ಯಾ ಸಿಂಧೋಗಿ,…
ಬೆಂಗಳೂರು :- ಬಿಜೆಪಿ ಜನಾಕ್ರೋಶ ಯಾತ್ರೆ ವಿಚಾರವಾಗಿ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/police-constable-robbed-at-home-gold-jewellery-stolen-then-fled/ ಈ ಸಂಬಂಧ ಮಾತನಾಡಿದ ಅವರು, ಅವರೇನೋ ಆರಂಭ ಶೂರತ್ವ ಮಾಡಿದರು. ನಿನ್ನೆಯಿಂದ ಧ್ವನಿ ಕಡಿಮೆ ಆದಂಗಿದೆ. ಅವರದ್ದೇ ಸರ್ಕಾರ ಬೆಲೆ ಏರಿಕೆ ಮಾಡಿದೆ. ನ್ಯಾಚುರಲ್ ಪಾರ್ಟಿಯಾಗಿ ಯಾವ ರೀತಿ ವರ್ತನೆ ಮಾಡಬೇಕಿತ್ತು. ಪ್ರತಿಭಟನೆ ಮಾಡಲು ಬಿಜೆಪಿ ಅವರಿಗೆ ನೈತಿಕತೆ ಇಲ್ಲ. ಟ್ರಂಪ್ ಹೊಡೆದ ಅಷ್ಟು ಸುಲಭವಾಗಿಲ್ಲ. ಪ್ರತಿಭಟನೆ ಬಿಟ್ಟು ವಾಪಸ್ ಬನ್ನಿ. ಟಮೊಟೋ, ಬೆಳ್ಳುಳ್ಳಿ ದರ ಒಂದು ಎರಡು ರೂಪಾಯಿ ಆಗಿದೆ. ಕೃಷಿಗೆ ಆದ್ಯತೆ ಕೊಡಬೇಕು ಅದಕ್ಕೆ ಕಾರ್ಗೋ ಎಕ್ಸಪರ್ಟ್ ಮುಖ್ಯ ಎಂದರು. ತಾವು ಸಚಿವ ಸ್ಥಾನ ಆಕಾಂಕ್ಷಿಯ ಎಂಬ ವಿಚಾರವಾಗಿ ಮಾತನಾಡಿ, ನಾನು ಒಂದೇ ಪಾರ್ಟಿ, ಒಂದೇ ಕ್ಷೇತ್ರ. ೧೦ ಬಾರಿ ಚುನಾವಣೆ ಎದುರಿಸಿದ್ದೇನೆ. ನಾನು ಪಕ್ಷಕ್ಕೆ ವಿಧೇಯನಾಗಿ ಇದ್ದೇನೆ. ನನ್ನೇನು ಸುಮ್ಮನೆ ಕೂರಿಸಿಲ್ಲ ದೆಹಲಿ ಪ್ರತಿನಿಧಿ ಮಾಡಿದ್ದಾರೆ. ಬದಲಾದ ರಾಜಕೀಯ ಪರಿಸ್ಥಿತಿ ಏನು ಬೇಕಾದ್ರೂ ಆಗಬಹುದು. ಸರ್ಕಾರಕ್ಕೆ ಎರಡು…