ಲಕ್ನೋ ಸೂಪರ್ ಜೈಂಟ್ಸ್ 18ನೇ ಆವೃತ್ತಿಯ ಐಪಿಎಲ್ನ ಪ್ಲೇ ಆಫ್ರೇಸ್ನಿಂದಲೇ ಹೊರಬಿದ್ದಿದೆ. ಅಭಿಷೇಕ್ ಶರ್ಮಾ ಸ್ಫೋಟಕ ಅರ್ಧಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವು 6 ವಿಕೆಟ್ಗಳ ಅಮೋಘ ಜಯ ಸಾಧಿಸಿದೆ. ಈ ಮೂಲಕ ಏಕನಾ ಕ್ರೀಡಾಂಗಣದಲ್ಲಿ 200+ ರನ್ ಚೇಸಿಂಗ್ ಮಾಡಿ ಐತಿಹಾಸಿಕ ಗೆಲುವು ದಾಖಲಿಸಿದೆ. https://ainkannada.com/disruption-and-delay-in-the-sale-of-this-pile-of-property-the-future-of-tuesday-is-20-may-2025/ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆರಂಭಿಕ ಆಟಗಾರರ ಉತ್ತಮ ಪ್ರದರ್ಶನದ ನೆರವಿನಿಂದ 20 ಓವರ್ಗಳ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತ್ತು. 206 ರನ್ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಸನ್ರೈಸರ್ಸ್ ಹೈದರಾಬಾದ್ 18.2 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 2೦6 ರನ್ ಗಳಿಸಿ ಗೆಲುವು ಸಾಧಿಸಿತು. ಸನ್ ರೈಸರ್ಸ್ ಪರ ಅಭಿಷೇಕ್ ಶರ್ಮಾ 20 ಎಸೆತಗಳಲ್ಲಿ 6 ಸಿಕ್ಸರ್, 4 ಬೌಂಡರಿ ನೆರವಿಂದ 59 ರನ್, ಇಶನ್ ಕಿಶನ್ 28 ಎಸೆತಗಳಲ್ಲಿ 35 ರನ್, ಹೆನ್ರಿಕ್ ಕ್ಲಾಸೆನ್ 28 ಎಸೆತಗಳಲ್ಲಿ 47…
Author: AIN Author
ಸೂರ್ಯೋದಯ – 5:46 ಬೆ. ಸೂರ್ಯಾಸ್ತ – 6:39ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ಸಪ್ತಮಿ ನಕ್ಷತ್ರ – ಧನಿಷ್ಥೆ ಯೋಗ – ಐಂದ್ರ ಕರಣ – ಬವ 5:51 ಮಳೆ ನಕ್ಷತ್ರ :ಕೃತಿಕ ರಾಹು ಕಾಲ – 03:00 ದಿಂದ 04:30 ವರೆಗೆ ಯಮಗಂಡ -09:00 ದಿಂದ 10:30 ವರೆಗೆ ಗುಳಿಕ ಕಾಲ – 10:30 ದಿಂದ 12:00 ವರೆಗೆ ಬ್ರಹ್ಮ ಮುಹೂರ್ತ – 4:10 ಬೆ. ದಿಂದ 4:58 ಬೆ.ವರೆಗೆ ಅಮೃತ ಕಾಲ – 9:15ಬೆ. ದಿಂದ 10:52 ಬೆ. ವರೆಗೆ ಅಭಿಜಿತ್ ಮುಹುರ್ತ – 11:47ಬೆ. ದಿಂದ 12:38 ಮ.ವರೆಗೆ ಮೇಷ ರಾಶಿ: ಜೂಜಾಟದಲ್ಲಿ ಧನ ಲಾಭ,ಇಂದು ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ, ವ್ಯಾಪಾರದಲ್ಲಿ ಉತ್ತಮ ಲಾಭ ಗಳಿಸುವಿರಿ, ನಿಮ್ಮ ಪ್ರಿಯತಮೆ ಜೊತೆ ವಾದಗಳಿಗೆ ಕಾರಣರಾಗುವಿರಿ, ವಿವದಾತ್ಮಕ…
ಕಿಡ್ನಿ ಸ್ಟೋನ್ ಅಥವಾ ಮೂತ್ರಪಿಂಡದಲ್ಲಿ ಕಲ್ಲಿನ ಸಮಸ್ಯೆ ಹೊಂದಿರುವ ಜನರ ಸಂಖ್ಯೆ ದೊಡ್ಡದಿದೆ. ಇದಕ್ಕೆ ನೀರಿನ ಕೊರತೆಯಿಂದಾಗುವ ನಿರ್ಜಲೀಕರಣ ಪ್ರಮುಖ ಕಾರಣ ಎಂದು ಹೇಳಲಾಗುತ್ತದೆ. ದೇಹಕ್ಕೆ ಸೂಕ್ತ ಪ್ರಮಾಣದಲ್ಲಿ ದ್ರವ ರೂಪದ ಆಹಾರ ಸಿಗದಿದ್ದಾಗ ವ್ಯಕ್ತಿಯು ನಿರ್ಜಲೀಕರಣಕ್ಕೊಳಗಾಗುತ್ತಾನೆ. ಆಗ ದೇಹದ ನಿಯಮಿತ ಚಟುವಟಿಕೆಗಳನ್ನು ನಿರ್ವಹಿಸಲು ಅಗತ್ಯ ಪ್ರಮಾಣದ ದ್ರವ ಸಿಗುವುದಿಲ್ಲ. ಈ ದ್ರವದ ಕೊರತೆಯಿಂದಾಗಿ ಮೂತ್ರಪಿಂಡದಲ್ಲಿ ಹಲವು ಸಮಸ್ಯೆಗಳಿಗೆ ಕಾರಣವಾಗಬಹುದು. ಮೂತ್ರಪಿಂಡಕ್ಕೆ ರಕ್ತದ ಹರಿವು ಕಡಿಮೆಯಾಗುವುದು, ಮೂತ್ರಪಿಂಡದ ಕಲ್ಲಿನ ಅಪಾಯ, ಮೂತ್ರಪಿಂಡದ ಗಾಯ ಸೇರಿದಂತೆ ಬೇರೆ ಬೇರೆ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಯೂರಿಕ್ ಆಸಿಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ದೇಹದಲ್ಲಿ ಪ್ಯೂರಿನ್ ಎಂಬ ವಸ್ತುವು ವಿಭಜನೆಯಾದಾಗ ಇದು ರೂಪುಗೊಳ್ಳುತ್ತದೆ. ಈ ವಸ್ತುವು ರಕ್ತದ ಜೊತೆಗೆ ಮೂತ್ರಪಿಂಡಗಳನ್ನು ತಲುಪುತ್ತದೆ. ಇದು ಸಾಮಾನ್ಯವಾಗಿ ಮೂತ್ರದ ಮೂಲಕ ಹೊರಹಾಕಲ್ಪಡುತ್ತದೆ. ಆದರೆ ಅದು ದೇಹದಿಂದ ಸಂಪೂರ್ಣವಾಗಿ ಹೊರಹಾಕಲ್ಪಡದಿದ್ದರೆ, ಕಿಡ್ನಿ ಸ್ಟೋನ್ ಸಮಸ್ಯೆಗೆ ಕಾರಣವಾಗಬಹುದು. ಯೂರಿಕ್ ಆಮ್ಲದ ಮಟ್ಟ ಹೆಚ್ಚಾದಾಗ ದೇಹದ ಕೀಲುಗಳಲ್ಲಿ ನೋವು…
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸುರಿದ ಭಾರೀ ಮಳೆಯಿಂದ ಸಿಟಿ ಮಂದಿ ಅಕ್ಷರಶಃ ನಲುಗಿ ಹೋಗಿದ್ದು, ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಒಂದೆಡೆ ಮಹಾಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿ ಹೋದ್ರೆ, ಈ ನಡುವೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಾಧನಾ ಸಮಾವೇಶದ ಸಿದ್ಧತೆಯಲ್ಲಿದ್ದಾರೆ. ಈ ಬಗ್ಗೆ ಪರಿಷತ್ ಶಾಸಕ ಟಿಎ ಶರವಣ ಅವರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. https://ainkannada.com/are-you-worried-that-you-are-too-fat-then-boil-this-leaf-in-water-results-in-a-week/ ಈ ಸಂಬಂಧ ಮಾತನಾಡಿದ ಟಿಎ ಶರವಣ ಅವರು, ಮಹಾಮಳೆಯಿಂದ ರಾಜಧಾನಿ ಬೆಂಗಳೂರು ತತ್ತರಿಸಿ, ಗ್ರೇಟರ್ ಬೆಂಗಳೂರು ಕಲ್ಪನೆಯೇ ಕೊಚ್ಚಿ ಹೋಗುವಂತಹ ಸ್ಥಿತಿಯ ನಡುವೆ ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಡಿ ಕೆ ಶಿವಕುಮಾರ್ ನೀರೋ ದೊರೆಯಂತೆ ಸಾಧನಾ ಸಮಾವೇಶದ ಸಿದ್ಧತೆಯಲ್ಲಿ ಇರುವುದು ಮಾನವೀಯತೆಯ ಲಕ್ಷಣ ಎಂದು ವಿಧಾನಪರಿಷತ್ ಹಿರಿಯ ಸದಸ್ಯ ಮತ್ತು ಜೆಡಿಎಸ್ ಹಿರಿಯ ನಾಯಕ ಟಿ. ಎ.ಶರವಣ ಟೀಕಿಸಿದ್ದಾರೆ. ಬೆಂಗಳೂರಲ್ಲಿ ಮಹಾಮಳೆಗೆ ಅಮಾಯಕರ ಪ್ರಾಣಗಳೇ ಕೊಚ್ಚಿ ಹೋಗಿದ್ದು, ಅವುಗಳಿಗೆ ಬೆಲೆಯೇ ಇಲ್ಲದೆ…
ಅಧಿಕ ಆಹಾರ ಸೇವಿಸಿದ ನಂತರವೂ ತೂಕ ಹೆಚ್ಚಾಗುತ್ತಿಲ್ವಾ? ದೇಹಕ್ಕೆ ಶಕ್ತಿ ದೊರೆಯುತ್ತಿಲ್ವಾ? ಹಾಗಾದ್ರೆ ನೀವು ನಿಮ್ಮ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕು. ನಿಮ್ಮ ದೇಹಕ್ಕೆ ಮಾಂಸವನ್ನು ಸೇರಿಸಲು, ನಿಮ್ಮ ದೇಹಕ್ಕೆ ಪ್ರೋಟೀನ್ ನಿಂದ ಸಮೃದ್ಧವಾಗಿರುವ ಆಹಾರದ ಅಗತ್ಯವಿದೆ. https://ainkannada.com/ipl-kannadigas-kl-rahul-confirmed-for-t20-team/ ತೂಕ ಹೆಚ್ಚಾಗುವುದು ಇಂದು ಹಲವಾರು ಜನರನ್ನು ಕಾಡುತ್ತಿರುವ ಒಂದು ಸಮಸ್ಯೆಯಾಗಿದೆ. ಬೊಜ್ಜು ಸಮಸ್ಯೆ ಎಲ್ಲರಿಗೂ ಕಾಡುತ್ತಿದೆ. ಇದರಿಂದಾಗಿ ಜನರು ಮುಜುಗರವನ್ನು ಎದುರಿಸಬೇಕಾಗುತ್ತದೆ. ನೀವು ಸಹ ಬೊಜ್ಜು ಸಮಸ್ಯೆಯಿಂದ ತೊಂದರೆಗೊಳಗಾಗಿದ್ದರೆ ಚಿಂತಿಸಬೇಕಾಗಿಲ್ಲ. ನೀವು ಪುದೀನ ಚಹಾವನ್ನು ಸೇವಿಸಬಹುದು. ಇದು ಅನೇಕ ರೀತಿಯ ಸಮಸ್ಯೆಗಳಿಂದ ನಿಮ್ಮನ್ನು ಮುಕ್ತಗೊಳಿಸಲು ಕೆಲಸ ಮಾಡುವ ಅಂಶಗಳನ್ನು ಒಳಗೊಂಡಿದೆ. ಹೆಚ್ಚುತ್ತಿರುವ ತೂಕವನ್ನು ಪುದೀನಾ ಸಹಾಯದಿಂದ ನೀವು ಹೇಗೆ ನಿಯಂತ್ರಿಸಬಹುದು ಮತ್ತು ಪುದೀನ ಚಹಾದ ಪ್ರಯೋಜನಗಳೇನು ಎಂದು ಇಲ್ಲಿ ತಿಳಿಯೋಣ. ತೂಕ ಕಡಿಮೆಯಾಗುತ್ತದೆ – ಅರಿಶಿನ-ಪುದೀನ ಚಹಾ ಕುಡಿಯುವುದರಿಂದ ತೂಕ ಕಡಿಮೆಯಾಗುತ್ತದೆ. ಅರಿಶಿನ ಮತ್ತು ಪುದೀನ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲವಾಗಿಡಲು ಸಹ ಸಹಾಯ…
ಟಿ20 ಮಾದರಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ರಾಹುಲ್ ಮತ್ತೊಮ್ಮೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಳ್ಳುವ ಸಮಯ ಸನಿಹವಾಗಿದೆ. https://ainkannada.com/bidadi-divyang-girls-death-case-sp-reveals-explosive-information/ ಕೆಎಲ್ ರಾಹುಲ್ ಐಪಿಎಲ್ 2025 ರಲ್ಲಿ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೀಗಾಗಿ ಅವರನ್ನು ಬಾಂಗ್ಲಾದೇಶ ಪ್ರವಾಸಕ್ಕೆ ತಂಡದಲ್ಲಿ ಆಯ್ಕೆ ಮಾಡಬಹುದು. ವಾಸ್ತವವಾಗಿ, ಟೀಂ ಇಂಡಿಯಾ ಆಗಸ್ಟ್ನಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಏಕದಿನ ಮತ್ತು ಟಿ20 ಸರಣಿಗಳು ನಡೆಯಲಿವೆ. ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ರಾಹುಲ್ ತಂಡಕ್ಕೆ ಆಯ್ಕೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಆಯ್ಕೆ ಮಂಡಳಿ ಕೂಡ ರಾಹುಲ್ ಮೇಲೆ ಒಲವು ತೋರಿಸಿದೆ ಎಂದು ವರದಿಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಟಿ20 ಕ್ರಿಕೆಟ್ನಲ್ಲಿ ರಾಹುಲ್ ತಮ್ಮ ಸ್ಟ್ರೈಕ್ ರೇಟ್ನಿಂದಾಗಿ ಟೀಕೆಗಳನ್ನು ಎದುರಿಸಿದ್ದರು. ಆದರೆ ಐಪಿಎಲ್ 2025 ರಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡುತ್ತಿರುವ ರಾಹುಲ್ ಅವರ ಸ್ಟ್ರೈಕ್ ರೇಟ್ ಗಣನೀಯವಾಗಿ ಏರಿಕೆ ಕಂಡಿದೆ. ಪ್ರಸ್ತುತ ಐಪಿಎಲ್ನಲ್ಲಿ ಅವರು ಇಲ್ಲಿಯವರೆಗೆ 11 ಪಂದ್ಯಗಳನ್ನು ಆಡಿದ್ದು 61.62…
ರಾಮನಗರ:- ಬಿಡದಿ ದಿವ್ಯಾಂಗ ಬಾಲಕಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/did-we-say-we-would-give-grihalakshmi-money-every-month-dkshi-spoke-the-opposite/ ಈ ಸಂಬಂಧ ನಗರದಲ್ಲಿ ಲ ಮಾತನಾಡಿದ ಅವರು, ಬಾಲಕಿ ಸಾವಿನ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗಿದೆ. ಹೆಡ್ ಇಂಜೂರಿಯಿಂದ ಮೃತಪಟ್ಟಿರುವುದಾಗಿ ವರದಿಯಲ್ಲಿ ಉಲ್ಲೇಖವಾಗದೆ. ಎಫ್ಎಸ್ಎಲ್, ಮರಣೋತ್ತರ ಪರೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ರೈಲ್ವೆ ಇಲಾಖೆಯ ಸಿಸಿ ಕ್ಯಾಮರಾದ ವಿಡಿಯೋ ಪಡೆದುಕೊಂಡಿದ್ದೇವೆ. ಎರಡು ಸಿಸಿ ಕ್ಯಾಮರಾದಲ್ಲಿ ಬಾಲಕಿಯ ಚಲನವಲನ ಕಂಡು ಬಂದಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡಿದಾಗ ರೈಲ್ವೆ ಅಪಘಾತ ಎಂಬುದು ಕಂಡುಬಂದಿದೆ. 6 ಗಂಟೆ 7 ನಿಮಿಷದಿಂದ 6 ಗಂಟೆ 8 ನಿಮಿಷದ ಮಧ್ಯೆ ಘಟನೆ ನಡೆದಿದೆ ಎಂದು ಮಾಹಿತಿ ನೀಡಿದರು. ರೈಲ್ವೆ ಇಲಾಖೆಯ ಸಿಸಿ ಕ್ಯಾಮರಾದ ಕಂಪ್ಲೀಟ್ ಬ್ಯಾಕಪ್ ಸಹ ಪಡೆದಿದ್ದೇವೆ. ರೈಲಿನಲ್ಲೂ ಪರಿಶೀಲನೆ ಮಾಡಿ ಸ್ಯಾಂಪಲ್ಸ್ ಸಂಗ್ರಹಿಸಿದ್ದೇವೆ, FSLಗೆ ಕಳಿಸುತ್ತೇವೆ. ವರದಿ ಬರುವ ಮುನ್ನ ಸೋಶಿಯಲ್ ಮೀಡಿಯಾಗಳಲ್ಲಿ ತಪ್ಪು ಮಾಹಿತಿ ಹರಡಿದ್ರು. ಇದೆಲ್ಲವೂ ಸುಳ್ಳು, ಇನ್ನಷ್ಟು ಅನುಮಾನಗಳ…
ವಿಜಯನಗರ:- 2023ರ ವಿಧಾನಸಭಾ ಚುನಾವಣೆ ಮುನ್ನ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಹೆಸರೇಳಿ ಅಧಿಕಾರಕ್ಕೆ ಬಂದಿತ್ತು. ಆ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದು. ಆದರೆ ಕಳೆದ ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ದುಡ್ಡು ಬಂದಿಲ್ಲ. ಇದಕ್ಕೆ ಮಹಿಳೆಯರು ವ್ಯಾಪಕ ಆಕ್ರೋಶ ಹೊರ ಹಾಕಿದ್ದಾರೆ. https://ainkannada.com/rain-havoc-bangalore-is-embarrassing-itself-internationally-city-ravi/ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಡಿಕೆಶಿ, ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು.. ನಾವು ದುಡ್ಡು ಕೊಡ್ತಾ ಇರಬೇಕು. ಈಗ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆನೇ ಹಣ ಬಂದುಬಿಡುತ್ತಾ? 2, 3, 5 ವರ್ಷ ಆಗುತ್ತೆ ಅಲ್ವಾ.. ಅದೇ ರೀತಿ ಇದೂ ಕೂಡ ಬಂದಾಗ ಬರುತ್ತೆ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರ ಗೃಹಲಕ್ಷ್ಮಿ ಯೋಜನೆ ಬಗೆಗಿನ ಹೇಳಿಕೆಯ ಬಗ್ಗೆ ಜೆಡಿಎಸ್ ಕಿಡಿಕಾರಿದೆ. ಯೋಜನೆ ಆರಂಭದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಪ್ರತಿ ತಿಂಗಳು ಹಣ ಖಾತೆಗೆ ಜಮೆಯಾಗುತ್ತದೆ ಎಂದು ಹೇಳಿರುವ ವಿಡಿಯೋ ಹಂಚಿಕೊಂಡು…
ಬೆಂಗಳೂರು:- ನಗರದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು, ಇದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ತಲೆತಗ್ಗಿಸುವ ವಿಚಾರ ಎಂದಿದ್ದಾರೆ. https://ainkannada.com/do-your-eyes-water-while-cutting-onions-if-so-follow-these-tricks/ ರಾಜ್ಯ-ದೇಶದ ಬೊಕ್ಕಸಕ್ಕೆ ಬೆಂಗಳೂರಿಗರಿಂದ ದೊಡ್ಡ ಪ್ರಮಾಣದ ಹಣ ಬರುತ್ತದೆ. ಆದರೆ, ಬೆಂಗಳೂರಿಗರ ಬದುಕನ್ನ ನಾವು ಮುಳುಗಿಸುತ್ತಿದ್ದೇವೆ. ಕೆಂಪೇಗೌಡರ ಕಾಲ ಹಾಗೂ ಮದ್ಯದಲ್ಲಿ ಪ್ಲ್ಯಾನಡ್ ಬೆಂಗಳೂರು ಇತ್ತು. ಈಗ ಅನ್ ಪ್ಲ್ಯಾನಡ್ ಬೆಂಗಳೂರಾಗಿದೆ ಎಂದು ಕಿಡಿಕಾರಿದ್ದಾರೆ. ಕಂದಾಯ ನಿವೇಶನ, ಲೂಟಿ ಹೊಡೆಯಲು ರಾಜಕಾಲುವೆ, ಕೆರೆಗಳನ್ನೇ ನುಂಗಿರೋದು, ರಾಜಕಾಲುವೆ ಒತ್ತುವರಿ ಕೂಡ ದಂಧೆಯಾಗಿದೆ. ಇದೇನಾ ಬ್ರಾಂಡ್ ಬೆಂಗಳೂರು? ಪ್ರತಿವರ್ಷ ಸಾವಿರಾರು ಕೋಟಿ ರೂ. ಹಣ ಹಾಕ್ತೀವಿ, ಈ ಹಣ ಎಲ್ಲಿ ಹೋಗ್ತಿದೆ? ಎಂದು ಪ್ರಶ್ನಿಸಿದ್ದಾರೆ.
ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯ ಅಡುಗೆ ಮನೆಯಲ್ಲಿ ಈರುಳ್ಳಿ ಇದ್ದೇ ಇರುತ್ತೆ. ಈರುಳ್ಳಿ ಇಲ್ಲದೆ ಯಾವುದೇ ಅಡುಗೆ ಪೂರ್ಣಗೊಳ್ಳುವುದಿಲ್ಲ. ಬಹಳಷ್ಟು ಜನರು ಈ ತರಕಾರಿಯನ್ನು ಹಸಿಯಾಗಿ ತಿನ್ನುತ್ತಾರೆ. ಇತರರು ಇದನ್ನು ಸಲಾಡ್ಗಳಲ್ಲಿ ಬೆರೆಸಿ ಸೇವಿಸಲು ಇಷ್ಟಪಡುತ್ತಾರೆ. ಈರುಳ್ಳಿ ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ ಅಂತ ಈಗಾಗಲೇ ನಿಮಗೆ ತಿಳಿದಿದೆ. https://ainkannada.com/heavy-rains-in-karnataka-next-week-yellow-alert-issued-for-bengaluru/ ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಲು ಈರುಳ್ಳಿಯ ಒಳಗಿರುವ ಕಿಣ್ವಗಳೇ ಕಾರಣ. ಈರುಳ್ಳಿಯನ್ನು ಕತ್ತರಿಸಿದಾಗ, ಅದರೊಳಗೆ ಇರುವ ಈ ಅನಿಲಗಳಲ್ಲಿ ಒಂದು ಹೊರಬರುತ್ತದೆ. ಇದರಿಂದ ಇದನ್ನು ಸೈ ಪ್ರೊಪನೆಥಿಯಲ್ ಆಕ್ಸೈಡ್ ಎಂದು ಕರೆಯಲಾಗುತ್ತದೆ. ಇದು ಮೂಗಿನ ಮೂಲಕ ಕಣ್ಣುಗಳ ಪೊರೆಯನ್ನು ಕೆರಳಿಸುತ್ತದೆ ಮತ್ತು ಕಣ್ಣುಗಳಿಂದ ಕಣ್ಣೀರು ಬರುತ್ತದೆ. ಈರುಳ್ಳಿ ಸಿಪ್ಪೆ ತೆಗೆದ ನಂತರ ಅದನ್ನು ಮಧ್ಯದಿಂದ ಎರಡು ತುಂಡುಗಳಾಗಿ ಕತ್ತರಿಸಿ. ನಂತರ ಅದನ್ನು ನೀರಿನಲ್ಲಿ ಹಾಕಿ ಸ್ವಲ್ಪ ಹೊತ್ತು ಇಡಿ. ನೀವು ಕನಿಷ್ಟ 15 ರಿಂದ 20 ನಿಮಿಷಗಳ ಕಾಲ ನೀರಿನಲ್ಲಿ ಬಿಡಿ. ನೀವು ಈ ನೀರಿಗೆ ಬಿಳಿ ವಿನೆಗರ್ ಅನ್ನು…